ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶ್ರೀ ಶಂಕರ ವಾಹಿನಿಯವರು ನಾಟ್ಯರತ್ನ ಜ್ಯೂನಿಯರ್ ಭರತನಾಟ್ಯ ರಿಯಾಲಿಟಿ ಶೋಗಾಗಿ ದೇಶದ್ಯಾಂತ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ಅಂತಿಮ 20ರ ಹಂತಕ್ಕೆ ನಿಯತಿ ಎಚ್. ಕೆ. ಆಯ್ಕೆಯಾಗಿದ್ದಾರೆ. ಈಕೆ ಹೂವಯ್ಯ ಖಾರ್ವಿ ಮತ್ತು ಅಮೃತಾ ಬಾನಾವಳಿಕರ್ ಅವರ ಪುತ್ರಿಯಾಗಿದ್ದು, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ವಿದ್ಯಾರ್ಥಿಯಾಗಿ ವಿದುಷಿ ಪ್ರವಿತಾ ಅಶೋಕ ಅವರ ಶಿಷ್ಯೆಯಾಗಿ ತರಬೇತಿ ಪಡೆಯುತ್ತಿದ್ದಾರೆ. ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 7ನೇ ತರಗತಿಯಲ್ಲಿ ಒದುತ್ತಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ, ಮೇ5: ತಾಲೂಕಿನ ಕುಂದಬಾರಂದಾಡಿಯಲ್ಲಿನ ಬಾರ್ ಸಮೀಪ ಇರುವ ಆವರಣವಿಲ್ಲದ ಬಾವಿಗೆ ವ್ಯಕ್ತಿಯೋರ್ವ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು, ಮೃತರನ್ನು ಹಕ್ಲಾಡಿ ಮೇಲ್ಬೆಟ್ಟು ನಿವಾಸಿ ಕುಷ್ಠ ಪೂಜಾರಿ (48) ಎಂದು ಗುರುತಿಸಲಾಗಿದೆ. ಕುಡಿದು ಬಿದ್ದಿರಬಹುದೇ? ಕುಂದಬಾರಂದಾಡಿಯ ಬಾರ್ ಗೆ ತೆರಳಿದ್ದ ಕುಷ್ಠ ಪೂಜಾರಿ ಅಲ್ಲಿಯೇ ಸಮೀಪದಲ್ಲಿದ್ದ ಅಂಗಡಿಗೆ ಬಂದಿದ್ದರೆನ್ನಲಾಗಿದೆ.ಬಳಿಕ ಅಂಗಡಿಯ ಬಳಿಯೇ ಇದ್ದ ಆವರಣವಿಲ್ಲದ ಬಾವಿಗೆ ಸಮೀಪ ತೆರಳಿದ್ದ ಅವರು ಕಾಲು ಜಾರಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸಮೀಪದ ಮನೆಯವರಿಗೆ ಸೇರಿದ ಬಾವಿಯಲ್ಲಿ ನೀರಿಲ್ಲದೇ ಇದ್ದುದರಿಂದ ಯಾರೊಬ್ಬರೂ ಅದರತ್ತ ತೆರಳಿರಲಿಲ್ಲ. ಮಳೆಗಾಲ ಆರಂಭಗೊಂಡದ್ದರಿಂದ ಮಳೆ ನೀರಿನೊಂದಿಗೆ ಮಣ್ಣು ಬಾವಿಗೆ ಬೀಳುತ್ತದೆಂಬ ಕಾರಣಕ್ಕೆ ದಂಡೆ ಕಟ್ಟಲು ತೆರಳಿದ್ದ ಮನೆಯ ಹೆಂಗಸೊಬ್ಬರು ಬಾವಿ ಇಣುಕಿ ನೋಡಿದಾಗ ವ್ಯಕ್ತಿಯೋರ್ವರು ಬಿದ್ದಿರುವುದು ಪತ್ತೆಯಾಗಿತ್ತು. ಮೃತ ದೇಹವನ್ನು ಮೇಲಕ್ಕೆತ್ತಲಾಗಿದ್ದು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಕೊಂಡೊಯ್ಯಲಾಗಿದೆ. ಮೃತದೇಹದಿಂದ ವಾಸನೆ ಬರುತ್ತಿರುವುದರಿಂದ ಒಂದು ದಿನದ ಹಿಂದೆಯೇ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ವಿಚಾರಣೆ ನಡೆಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/. ಪ್ರಕರಣದ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ನಾಗೂರಿನ ಬಸ್ ನಿಲ್ದಾಣ ಬಳಿ ಮಧ್ಯಾಹ್ನ ನಡೆದ ಅಪಘಾತದಲ್ಲಿ ಬಸ್ಸು, ಮಾರುತಿ ಕಾರು, ಇನೋವಾ ಹಾಗೂ ಟೆಂಪೋ ಟ್ರಾವೆಲ್ಲ್ರ್ ಒಂದಕ್ಕೊಂದು ಡಿಕ್ಕಿಯಾಗಿ ಜಖಂಗೊಂಡ ಘಟನೆ ವರದಿಯಾಗಿದ್ದು, ವಾಹನದಲ್ಲಿದ್ದ ಪ್ರಯಾಣಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಂದೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಾಗೂರಿನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದಾಗ ಹಿಂಬದಿಯಿದ್ದ ಮಾರುತಿ ಕಾರು ಬಸ್ಸಿನ ಹಿಂಬಾಗಕ್ಕೆ ಡಿಕ್ಕಿ ಹೊಡೆದಿತ್ತು. ಕಾರಿನ ಹಿಂಭಾಗದಲ್ಲೇ ಇದ್ದ ಇನೋವಾ ಕಾರು ಮಾರುತಿ ಕಾರಿಗೆ ಡಿಕ್ಕಿ ಹೊಡೆದರೇ, ಟ್ರಾವೆಲ್ಲ್ರ್ ವಾಹನ ಇನೋವಾ ಗುದ್ದಿ ಜಖಂಗೊಂಡಿದ್ದವು. ವಾಹನದಲ್ಲಿದ್ದ ಚಾಲಕ ಪ್ರಯಾಣಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಸಹಾಯಕ್ಕೆ ಬಂದವನಿಗೆ ಹಲ್ಲೆಗೆ ಮುಂದಾದ ಇನೋವಾ ಚಾಲಕ: ಘಟನಾ ಸ್ಥಳದಲ್ಲಿದ್ದ ಸ್ಥಳೀಯರೋರ್ವರು ಸಹಾಯ ಮಾಡಲು ಬಂದಾಗ ಇನೋವಾ ಕಾರಿನ ಚಾಲಕ ಹಲ್ಲೆಗೆ ಮಾಡಲು ಮುಂದಾದ ಘಟನೆ ನಡೆಯಿತು. ಕೆಲಕಾಲ ಉದ್ವೀಗ್ನ ವಾತಾವರಣ ಉಂಟಾಗಿ ವಾಹನಗಳ ಸಂಚಾರ ವ್ಯತ್ಯಯವಾಯಿತು. ಬೈಂದೂರು ಪೊಲೀಸ್ ಸಿಬ್ಬಂಧಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ದಕ್ಷಿಣ ಭಾರತದ ಖ್ಯಾತ ಪಂಚಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಕುಟುಂಬಿಕರು ಹಾಗೂ ಮಹರ್ಷಿ ಆನಂದ ಗುರೂಜಿ ಕೊಲ್ಲೂರಿಗೆ ಭೇಟಿ ನೀಡಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪತ್ನಿ, ಪುತ್ರ ಹಾಗೂ ಸೊಸೆ ಕ್ಷೇತ್ರದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮರಳಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಟಿ. ಆರ್. ಉಮ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ವರದಿ. ಮೂಡುಬಿದಿರೆ: ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಅತ್ಯುತ್ತಮ ಉದ್ಯೋಗದ ಅವಕಾಶಗಳನ್ನು ತೆರೆದಿಟ್ಟು, ಬದುಕು ಭದ್ರಪಡಿಸಿಕೊಳ್ಳುವ ಮಹತ್ತರ ಘಟ್ಟಕ್ಕೆ ಸುಲಭ ಮುನ್ನುಡಿ ಬರೆದಿದ್ದ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ ಯಶಸ್ವಿಯಾಗಿ ಒಂಬತ್ತನೇ ವರ್ಷವೂ ಆಯೋಜನೆಗೊಂಡಿದ್ದು, ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ಜುಲೈ 2 ಹಾಗೂ 3ರಂದು ನಡೆಯಲಿದೆ. ಉದ್ಯೋಗ ಮೇಳದಲ್ಲಿ ಪ್ರತಿವರ್ಷದಂತೆ ನೂರಾರು ಕಂಪೆನಿಗಳು ಭಾಗವಹಿಸಲಿದ್ದು, ಸಾವಿರಾರು ಉದ್ಯೋಗಾವಕಾಶಗಳು ತೆರೆದುಕೊಳ್ಳಲಿವೆ. ಕಳೆದ ಎಂಟು ವರ್ಷದ ಹಿಂದೆ ಗ್ರಾಮೀಣ ಪ್ರದೇಶದ ಯುವಜನತೆಗೆ ಸೂಕ್ತ ಉದ್ಯೋಗವಕಾಶವನ್ನು ಒದಗಿಸುವ ಉದ್ದೇಶದೊಂದಿಗೆ ಆರಂಭಗೊಂಡ ಆಳ್ವಾಸ್ ಪ್ರಗತಿ, ಇಂದು ಉದ್ಯೋಗಾಕಾಂಕ್ಷಿಗಳಿಗೆ ಪರಿಪಕ್ವ ವೇದಿಕೆಯನ್ನು ನಿರ್ಮಿಸಿರುವುದಲ್ಲದೇ, ಕಂಪನಿಗಳಿಗೂ ಸೂಕ್ತ ಅಭ್ಯರ್ಥಿಗಳನ್ನು ಒದಗಿಸುವಲ್ಲಿ ಯಶಕಂಡಿದೆ. ಎಂಟು ವರ್ಷದ ಹಿಂದೆ, 38 ಕಂಪನಿಗಳೊಂದಿಗೆ ಆರಂಭವಾಗಿರುವ ಆಳ್ವಾಸ್ ಪ್ರಗತಿಯಲ್ಲಿ ಕಳೆದ ವರ್ಷ 272 ಕಂಪನಿಗಳು ಭಾಗವಹಿಸಿದ್ದವು. 18,000 ಸಾವಿರ ಉದ್ಯೋಗಾಕಾಂಕ್ಷಿಗಳಲ್ಲಿ 5,525 ಜನರಿಗೆ ಉದ್ಯೋಗ ದೊರಕಿದೆ. 2015-16ರ ಶೈಕ್ಷಣಿಕ ವರ್ಷದಲ್ಲಿ 106 ಕಂಪನಿಗಳು ಈಗಾಗಲೇ 1042 ವಿದ್ಯಾರ್ಥಿಗಳನ್ನು ಕ್ಯಾಂಪಸ್ ಸೆಲೆಕ್ಷನ್ ಮೂಲಕ ಆಯ್ಕೆ ಮಾಡಿವೆ. ಕುಂದಾಪ್ರ ಡಾಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಂಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, ಹಂಗಾರಕಟ್ಟೆ ಮೂಲದ ವ್ಯಕ್ತಿಯೋರ್ವರು ಮೃತರಾಗಿದ್ದಾರೆ. ಸಾಸ್ತಾನ ಕಡೆಯಿಂದ ಸಾಲಿಗ್ರಾಮದ ಕಡೆಗೆ ಸೈಕಲ್ನಲ್ಲಿ ಸಾಗುತ್ತಿದ್ದ ಕೃಷ್ಣ (45) ಅವರಿಗೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ, ಸೈಕಲ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಪದ್ಮನಾಭ ಹಾಗೂ ಕೃಷ್ಣ ಎಂಬುವವರೊಂದಿಗೆ ಹಂಗಾರಕಟ್ಟೆಯಿಂದ ಪಾರಂಪಳ್ಳಿಗೆ ಮೀನು ಹಿಡಿಯುವ ಉದ್ದೇಶಕ್ಕೆ ಶನಿವಾರ ಮುಂಜಾನೆ ೬ರ ಸುಮಾರಿಗೆ ಸೈಕಲಿನಲ್ಲಿ ಹೋಗುತ್ತಿದ್ದಾಗ, ವಿಶ್ವಕರ್ಮ ಸಭಾಭವನದ ಎದುರುಗಡೆ ಏಕಮುಖ ಸಂಚಾರದ ರಾಪ್ಟ್ರೀಯ ಹೆದ್ದಾರಿ ೬೬ ರ ಪಶ್ಚಿಮ ಬದಿಯ ರಸ್ತೆಯಲ್ಲಿ ಉಡುಪಿ ಕಡೆಯಿಂದ ಅತೀ ವೇಗದಿಂದ ಬಂದ ಶೆರ್ವಲೆ ಬೀಟ್ ಕಾರು, ರಸ್ತೆಯ ಎಡಭಾಗದಲ್ಲಿ ದ್ವಿಚಕ್ರ ವಾಹನ ಸವಾರರು ಸಂಚರಿಸುವ ಬಂದು ಕೃಷ್ಣ ಎನ್ನುವವರ ಸೈಕಲ್ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೃಷ್ಣ ಅವರು ಸೈಕಲ್ ಸಮೇತ ಡಾಂಬರು ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸೈಕಲ್ಗೆ ಢಿಕ್ಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದುಬೈನ ಭಾರತೀಯ ವಿದ್ಯಾಸಂಸ್ಥೆ ಏಷಿಯನ್ ಕಾಲೇಜಿನಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ತಾಲೂಕಿನ ನಾಯ್ಕನಕಟ್ಟೆ ಮೂಲದ ಸ್ವಾತಿ ಪೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ದುಬೈನಲ್ಲಿ ದ್ವಿತೀಯ ಪಿಯುಸಿ ಕಲಿತವರಲ್ಲಿ ಟಾಪರ್ ಆಗಿದ್ದಾರೆ. ಇದರೊಂದಿಗೆ ಬಯೋಲಜಿಯಲ್ಲಿ ಶೇ.100 ಅಂಕಗಳಿಸಿದ್ದು, ಚಿನ್ನದ ಪದಕನ್ನೂ ಪಡೆದಿದ್ದಾರೆ. ಕೆರ್ಗಾಲು ಗ್ರಾಮದ ಬೈಲ್ಕೆರೆಯ ಗಣೇಶ್ ಪೈ ಹಾಗೂ ಜ್ಯೋತಿ ಜಿ. ಪೈ ಪುತ್ರಿಯಾದ ಸ್ವಾತಿ ಕರ್ನಾಟಕದಲ್ಲಿ ಸಿಇಟಿ ವೈದ್ಯಕೀಯ ಪರೀಕ್ಷೆಯ 1463ನೇ ರ್ಯಾಂಕ್ ಪಡೆದಿದ್ದಾರೆ. ಸ್ವಾತಿ ಅವರ ತಂದೆ ಕಳೆದ 15 ವರ್ಷಗಳಿಂದ ದುಬೈನ ನೆಸ್ಲೆ ಕಂಪೆನಿಯ ಉದ್ಯೋಗಿಯಾಗಿದ್ದು, ಕುಟುಂಬವೂ ಅವರೊಂದಿಗೆ ವಾಸವಾಗಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯ ಸೇವಾ, ಸಾಂಸ್ಕೃತಿಕ ವೇದಿಕೆ ’ಸಾಧನಾ’ ಆಶ್ರಯದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ, ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಂಧತ್ವ ನಿವಾರಣಾ ವಿಭಾಗದ ನೆರವಿನೊಂದಿಗೆ ಅಲ್ಲಿನ ಸಾಧನಾ ಸಮುದಾಯ ಭವನದಲ್ಲಿ ರವಿವಾರ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ನಡೆಯಿತು. ಪ್ರಸಾದ್ ನೇತ್ರಾಲಯದ ನೇತ್ರ ತಜ್ಞ ಡಾ. ಜೋಯಲ್ ಶಿಬಿರವನ್ನು ಉದ್ಘಾಟಿಸಿದರು. ಸಾಧನಾ ಅಧ್ಯಕ್ಷ ಗುರುದಾಸ್ ವಿ. ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ ೮೮ ಜನರು ಕಣ್ಣು ತಪಾಸಣೆ ಮಾಡಿಸಿಕೊಂಡರು. ಅವರಲ್ಲಿ ೧೮ ಜನರನ್ನು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಮಾಡಲಾಯಿತು. ಸಾಧನಾ ಸದಸ್ಯ ಜತೀಂದ್ರ ಮರವಂತೆ ಸ್ವಾಗತಿಸಿ, ವಂದಿಸಿದರು. ಸಾಧನಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಚಂದ್ರಲೇಖಾ ರಾಕೇಶ್ | ಕುಂದಾಪ್ರ ಡಾಟ್ ಕಾಂ ಲೇಖನ ಪ್ರತಿ ವರ್ಷದಂತೆ ಪರಿಸರ ಕಾಳಜಿ ಬಗೆಗಿನ ಉದ್ದುದ್ದ ವಾಕ್ಯಗಳು. ಗಿಡ ನೆಡುವ ಸಡಗರ. ಪರಿಸರ ಸಂರಕ್ಷಣೆಯ ಅಣಿಮುತ್ತುಗಳು. ಎಲ್ಲಡೆ ಹಸಿರಿನಿಂದ ಕಂಗೊಳಿಸುವ ಬಣ್ಣ… ಮರು ವರ್ಷದ ಪರಿಸರ ದಿನಾಚರಣೆಯ ಹೊತ್ತಿಗೆ ನಗರವನ್ನು ಹಸಿರು ಕಾನನ ಮಾಡಿಬಿಡುತ್ತೇವೆಂಬ ಧಾವಂತ. ಹಾಗೆ ದಿನಗಳೆದಂತೆ ಆಡಿದ ಮಾತು, ಪರಿಸರದ ಬಗೆಗಿನ ಕಾಳಜಿಯನ್ನೇ ನೆನಪಿಸದ ಜಾಣ ಮರೆವು. ಇದು ನಾವು ಆಚರಿಸುತ್ತಿರುವ ಪರಿಸರ ದಿನಾಚರಣೆ! ಪರಿಸರ, ಪಕೃತಿ ನಮಗೆ ಯಾವುದನ್ನು ನೀಡಲ್ಲ ಹೇಳಿ. ಎಲ್ಲವನ್ನೂ ನೀಡುತ್ತದೆ. ಅಗಣಿತವಾದ ಅಮೂಲ್ಯ ಕೊಡುಗೆಗಳನ್ನು ನೀಡಿದೆ. ಪ್ರತಿಯೊಂದು ಜೀವ ಸಂಕುಲಕ್ಕೂ ಪ್ರಕೃತಿ ಅಗತ್ಯ, ಅನಿವಾರ್ಯ. ಆದರೆ ನಾವಿಂದು ಪರಿಸರಕ್ಕಾಗಿ, ಏನನ್ನು ಕೊಡುತ್ತಿದೇವೆ ಎಂಬುದನ್ನು ಪ್ರತಿಯೊಬ್ಬರೂ ತನಗೆ ತಾನೇ ಹಾಕಿಕೊಳ್ಳಬೇಕಾದ ಪ್ರಶ್ನೆ. ಉತ್ತರ ಮಾತ್ರ ನಗಣ್ಯ. ಕೊನೆ ಪಕ್ಷ ಇರುವ ಪರಿಸರವನ್ನು ರಕ್ಷಿಸಿಕೊಳ್ಳುವ ಬಗ್ಗೆ ಕಿಂಚಿತ್ತೂ ಯೋಚಿಸಲೂ ಆಗದಷ್ಟು ನಿಷ್ಕಾಳಜಿ. ಹಸಿರನ್ನು ಉಳಿಸಲು ಇದೆಯೆ ನಮಗೆ ಇಚ್ಚಾ ಶಕ್ತಿ? ದಿನದಿಂದ ದಿನಕ್ಕೆ ಮಾಲಿನ್ಯ…
ಕುಂದಾಪ್ರ ಡಾಟ್ ಕಾಂ ವರದಿ. ಗುಣಮಟ್ಟದ ಶಿಕ್ಷಣ ಕನಸು ಹೊತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಳೆದೆರಡು ದಶಕಗಳಿಂದ ಉತ್ಕೃಷ್ಟ ಹಾಗೂ ಶಿಸ್ತುಬದ್ಧ ಶಿಕ್ಷಣವನ್ನು ಕಲ್ಪಿಸಿ ಸಾರ್ಥಕತೆ ಕಂಡುಕೊಂಡ ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಶಾಲೆಯು ಜಿಲ್ಲೆಯ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಮುಖವೆನಿಸಿಕೊಂಡಿದೆ. ಸಮುದ್ರ ತೀರದ ನಯನಮನೋಹರ ಪ್ರಾಕೃತಿಕ ಮಡಿಲಿನಲ್ಲಿರುವ ಸಂಸ್ಥೆಯು ಉತ್ಕೃಷ್ಠ ಶೈಕ್ಷಣಿಕ ಸೇವೆಯಿಂದ ಜನಪ್ರಿಯತೆಯನ್ನು ಗಳಿಸಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡುವ ಮಹತ್ಕಾರ್ಯದಲ್ಲಿ ಸಾರ್ಥಕ್ಯ ಕಂಡಿದೆ. ಶುಭದಾ ಎಜ್ಯುಕೇಶನ್ ಟ್ರಸ್ಟ್ ರಿ. ಆಡಳಿತಕ್ಕೊಳಪಟ್ಟ ಶುಭದಾ ಆಂಗ್ಲ ಶಾಲೆಯು ನಾವುಂದ ಮತ್ತು ಕಿರಿಮಂಜೇಶ್ವರ ಗ್ರಾಮಗಳ ಗಡಿಭಾಗವಾದ ಮಸ್ಕಿ ಎಂಬಲ್ಲಿ 1996ರಲ್ಲಿ ಸ್ಥಾಪಿಸಲ್ಪಟ್ಟಿದೆ. ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಪರಿಸರದಲ್ಲಿ ತನ್ನ ಉತ್ಕೃಷ್ಠ ಶಿಕ್ಷಣ ಸೇವೆಯಿಂದ ಜನಪ್ರಿಯತೆಯನ್ನು ಗಳಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಬೆಳಕಾಗಿದೆ. ಸುಸಜ್ಜಿತ ಹಾಗೂ ಅತ್ಯಾಧುನಿಕ ವ್ಯವಸ್ಥೆ ಹೊಂದಿರುವ ಔಪಚಾರಿಕ ಶಿಕ್ಷಣದೊಂದಿಗೆ ಮಕ್ಕಳ ಕ್ರಿಯಾಶೀಲ ಮತ್ತು ಸೃಜನಶೀಲ ಪ್ರವೃತ್ತಿಯನ್ನು ಪೋಷಿಸುವ ನಿಟ್ಟಿನಲ್ಲಿ ಕಲೆ, ಕ್ರೀಡೆ, ಸಂಸ್ಕೃತಿ ಮುಂತಾದ ಹತ್ತು-ಹಲವು ರಚನಾತ್ಮಕ ಚಟುವಟಿಕೆಗಳಿಗೆ…
