Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರೀಡರ್ಸ್ ಆಂಡ್ ರೈಟರ್ಸ್ ಕ್ಲಬ್ ಮತ್ತು ಡಾ.ಹೆಚ್.ಶಾಂತಾರಾಂ ಕನ್ನಡ ಸಾಹಿತ್ಯ ವೇದಿಕೆಯ ಜಂಟಿ ಆಶ್ರಯದಲ್ಲಿ ಒಂದು ದಿನದ ವಿಚಾರಸಂಕಿರಣ ಬೆರ್ಟೋಲ್ಟ್ ಬ್ರೆಕ್ಟ್ ಬಗ್ಗೆ ತಿಳಿದುಕೊಳ್ಳೋಣ ಕುರಿತು ಒಂದು ದಿನದ ವಿಚಾರಸಂಕಿರಣ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್ ಮಾತನಾಡಿ ಜರ್ಮನಿ ದೇಶದ ತ್ಂತ್ರಜ್ನರ ಕಾರ್ಯವೈಖರಿಯನ್ನು ಸಮಯಪ್ರಜ್ನೆಯನ್ನು ಹೊಗಳಿ ಕಾರ‍್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ದಿಕ್ಚೂಚಿ ಭಾಷಣ ಮಾಡಿ ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನ ಡಾ.ಟಿ.ಕೆ.ರವೀಂದ್ರನ್ ಮಾತನಾಡಿ ಬಂಡವಾಳಶಾಹಿಯ ಒಡಲಲ್ಲೆ ಅಂತರ್ಗತವಾಗಿರುವ ಜರ್ಮನಿಯಂತಹ ದೇಶದಲ್ಲಿನ ಆಗಿನ ಸನ್ನಿವೇಶವನ್ನು ಕುರಿತಂತೆ ಅಲ್ಲಿನ ಲೇಖಕ ಬ್ರೆಕ್ಟ್‌ನ ಬರಹಗಳು ಮುಖಾಮುಖಿಯಾಗಿವೆ. ಅವನ ಬದುಕು ಬರಹ ಮತ್ತು ಅದ್ಭುತ ನಾಟಕಗಳು ಸಂವೇದನಾಶೀಲವಾಗಿ ವಸ್ತುನಿಷ್ಠವಾಗಿ ಹುಟ್ಟಿಕೊಂಡಿದ್ದು ಇದೇ ಯುರೋಪಿಯನ್ ಸಮಾಜವಾದ, ಬಂಡವಾಳಶಾಹಿ ದೇಶಗಳಲ್ಲಿ. ಆಗಿನ ಯುರೋಪಿಯನ್ ದೇಶಗಳ ಒಡಲಲ್ಲಿ ಮಾಹಾಯುದ್ಧಗಳು, ಅರಾಜಕತೆ, ಸರ್ವಾಧಿಕಾರ, ನಾಜಿ ಸಿದ್ಧಾಂತ, ಬಾಂಬಿನ ಸದ್ದುಗಳ ಪ್ರಭಾವ ಎಷ್ಟಿತ್ತೆಂದರೆ ಅವನ ನಾಟಕಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಶನ್ (ರಿ.) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಬ್ಯಾರೀಸ್ ಪ್ರೌಢಶಾಲೆ ಮತ್ತು ಪಿ.ಯು.ಕಾಲೇಜು ಕೋಡಿ ಇವರ ಜಂಟಿ ಆಶ್ರಯದಲ್ಲಿ ಕಾನೂನು ಸಾಕ್ಷರತಾ ರಥದ ಮೂಲಕ ಕಾನೂನು ಮಾಹಿತಿ ಕಾರ್ಯಕ್ರಮ ಬ್ಯಾರೀಸ್ ಪ್ರೌಢಶಾಲೆ ಮತ್ತು ಪಿ.ಯು.ಕಾಲೇಜು ಕೋಡಿಯಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ, ರಾಜಶೇಖರ ವಿ ಪಾಟೀಲ ಕುಂದಾಪುರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂದಾಪುರ ಬಾರ್ ಅಸೋಸಿಯೇಶನ್ ಇದರ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕುಂದಾಪುರ ಬಾರ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಎಚ್. ರವಿಶ್ಚಂದ್ರ ಶೆಟ್ಟಿ, ಸಹಾಯಕ ಸರಕಾರಿ ಅಭಿಯೋಜಕರಾದ ಸಂದೇಶ ಭಂಡಾರಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಹಾಜಿ ಮಾಸ್ತರ್ ಮೊಹಮ್ಮದ್, ಬ್ಯಾರೀಸ್ ಪಿ.ಯು.ಕಾಲೇಜಿನ ಪ್ರಾಂಶುಪಾಲರಾದ ಡಾ|| ಸಮೀರ್, ಬ್ಯಾರೀಸ್ ಶಿಕ್ಷಕ ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ಸಿದ್ದಪ್ಪ, ಬ್ಯಾರೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉದ್ಯಮ ಶೀಲತೆ ಎನ್ನುವುದು ಒಂದು ನಿರಂತರ ಪ್ರಕ್ರಿಯೆ. ಇಲ್ಲಿ ಒಬ್ಬ ಉದ್ಯಮಿಯು ಪ್ರಾಯೋಗಿಕ ಚಿಂತನೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಕೆಲವು ಉದ್ಯಮಿಗಳ ಯಶಸ್ಸಿನ ಗುಟ್ಟನ್ನು ಅರಿವುದರ ಜೊತೆಗೆ ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕ ಎಂದು ಸೈಂಟ್ ಮೇರಿಸ್ ಕಾಲೇಜು, ಶಿರ್ವ ಇದರ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಗಣೇಶ್ ಭಟ್ ಎಸ್. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು. ಇವರು ಕಾಲೇಜಿನ ಸಂಶೋಧನಾ ಮತ್ತು ಉದ್ಯಮಶೀಲತಾಭಿವೃದ್ದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಘಟಕದ ಸಂಯೋಜಕಿ ಅನ್ವಿತಾ, ವಾಣಿಜ್ಯ ವಿಭಾಗದ ಮೂಖ್ಯಸ್ಥರಾದ ರಾಜೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಯನ ಸ್ವಾಗತಿಸಿದರು. ವಿದ್ಯಾರ್ಥಿನಿ ಶೈಲಜಾ ಉದ್ಘಾಟಕರನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಸರಸ್ವತಿ ವಂದಿಸಿದರು. ವಿದ್ಯಾರ್ಥಿನಿ ಶ್ರೀವಿಭಾ ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪ್ರಥಮ ಪುಣ್ಯ ತಿಥಿ ಆರಾಧನಾ ಮಹೋತ್ಸವ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗಿತು. ಮಹೋತ್ಸವದ ಅಂಗವಾಗಿ ಶ್ರೀದೇವರ ಸನ್ನಿಧಿಯಲ್ಲಿ ಶ್ಲೋಕ ಪಠಣ, ವಿಶೇಷ ಪೂಜೆ, ಪುನಸ್ಕಾರಗಳು ನಡೆದವು. ಶ್ರೀಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ ಹಾಗೂ ದೇವಳದ ಆಡಳಿತ ಮಂಡಳಿಯ ಡಾ.ಕಾಶೀನಾಥ ಪೈ ಅವರು ಶ್ರೀಗಳ ಗುಣಗಾನ ಮಾಡಿದರು. ಊರಿನ ವೈದಿಕರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಜಿಎಸ್‌ಬಿ ಸಮಾಜ ಬಾಂಧವರು ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಮ್ಮ ಕುಟುಂಬಕ್ಕಿಂತ ಸಮಾಜದ ಹಿತವನ್ನೇ ಅನುಗಾಲವೂ ಬಯಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಜಿಲ್ಲೆಯ ಜನತೆಯ ಆಗು-ಹೋಗುಗಳಿಗೆ ಸ್ಪಂದಿಸುತ್ತಾ ಅವರಿಗೆ ಸರಿಯಾದ ರೀತಿ ಮಾರ್ಗದರ್ಶನ ನೀಡುತ್ತಾ ಕೇವಲ ಅಲ್ಪಕಾಲ ಬಾಳಿದ ಸಂಜೀವರಾಯರು ಒರ್ವ ವ್ಯಕ್ತಿಯಾಗಿರದೇ ತಮ್ಮ ವ್ಯಕ್ತಿತ್ವದ ಮೂಲಕ ಒಂದು ಅದ್ಭುತ ಶಕ್ತಿಯಾಗಿದ್ದರು ಎಂದು ೯೧ರ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದರು. ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆದ, ಖಂಬದಕೋಣೆ ಪರಿಸರದ ಅಭಿವೃದ್ಧಿಯ ಹರಿಕಾರ, ಬಹುಮುಖೀ ಸಾಧಕ ಖಂಬದಕೋಣೆ ದಿ. ಆರ್. ಕೆ. ಸಂಜೀವ ರಾವ್ ಜನ್ಮಶತಾಬ್ದಿ ಆಚರಣೆ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು. ಸಾಂಸ್ಕೃತಿಕ ಸಂಪನ್ನ ಕೌಟುಂಬಿಕ ಹಿನ್ನೆಲೆಯ ಸಂಜೀವ ರಾವ್ ಇವರು ತಮ್ಮ ಹುಟ್ಟೂರು ಖಂಬದಕೋಣೆಯನ್ನು ಕೇಂದ್ರವಾಗಿರಿಸಿಕೊಂಡು ಗ್ರಾಮೀಣ ಪ್ರದೇಶದ ಅಭಿವೃದ್ಧಿಯತ್ತ ಅವರು ದೃಢ ಹೆಜ್ಜೆಗಳನ್ನಿರಿಸಿದ್ದರು. ಶಿಕ್ಷಣ, ಸಂಪರ್ಕ ಸೌಲಭ್ಯ ಸೃಷ್ಟಿಸುವಲ್ಲಿ ಅವರದು ಗಣನೀಯ ಸಾಧನೆ. ಭೂದಾನದ ಮೂಲಕ ಔದಾರ್ಯ ಮೆರೆದಿದ್ದರಲ್ಲದೇ ಸಂಗೀತ, ಸಾಹಿತ್ಯ, ನಾಟಕ, ಯಕ್ಷಗಾನ ಕ್ಷೇತ್ರಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮುಂದಿನ ದಿನಗಳಲ್ಲಿ ನಗದು ವ್ಯವಹಾರ ಬಹುತೇಕ ಕೊನೆಗೊಳ್ಳುವ ಸಾಧ್ಯತೆಗಳಿದ್ದು ಎಲ್ಲರೂ ನಗದು ರಹಿತ ವ್ಯವಹಾರ ನಡೆಸಲು ಮಾನಸಿಕವಾಗಿ ಸಿದ್ಧರಾಗಬೇಕಿದೆ. ಎಲ್ಲಾ ಬ್ಯಾಂಕುಗಳಲ್ಲಿ ನಗದು ರಹಿತ ವ್ಯವಹಾರವನ್ನು ಉತ್ತೇಜಿಸಲು ಅನೇಕ ಆಪ್ ಸಿದ್ಧಪಡಿಸಿದ್ದು, ಇಂತಹ ಆಪ್‌ಗಳ ಬಗ್ಗೆ ಮಾಹಿತಿ ಪಡೆದುಕೊಂಡು ಇದರ ತಮ್ಮ ದೈನಂದಿನ ವ್ಯವಹಾರಗಳನ್ನು ನಡೆಸಬಹುದಾಗಿದೆ ಎಂದು ಕೆನರಾ ಬ್ಯಾಂಕಿನ ಉಡುಪಿ ರೀಜಿನಲ್ ಕಛೇರಿಯ ಅಧಿಕಾರಿ ಮನಿಷ್ ಹೇಳಿದರು. ಅವರು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ವತಿಯಿಂದ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನಗದು ರಹಿತ ವ್ಯವಹಾರದ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗದು ರಹಿತ ವ್ಯವಹಾರದ ಬಗ್ಗೆ ಅನೇಕರಿಗೆ ಗೊಂದಲ ಸಂದೇಹಗಳಿವೆ. ನಗದು ರಹಿತ ವ್ಯವಹಾರ ಸುರಕ್ಷಿತವಾಗಿದ್ದು, ಮಾಹಿತಿ ಕೊರತೆಯಿಂದ ಜನರು ನಗದು ರಹಿತ ವ್ಯವಹಾರದ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿಲ್ಲ. ಭ್ರಷ್ಟಾಚಾರ ರಹಿತ ಸಮಾಜ ನಿರ್ಮಿಸಲು ನಗದು ರಹಿತ ವ್ಯವಹಾರ ಸಹಕಾರಿಯಾಗಲಿದೆ ಎಂದು ಹೇಳಿದ ಅವರು, ರಿಸರ್ವ್ ಬ್ಯಾಂಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಒಬತ್ತು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೋರ್ವಳು ವಿಷ ಸೇವಿಸಿ, ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಆಜ್ರಿ ಹನೆಬಚ್ಚಲು ನಿವಾಸಿ ಜ್ಯೋತಿ ಪೂಜಾರಿ(೨೬) ಮೃತ ದುರ್ದೈವಿ. ನಾಲ್ಕು ವರ್ಷಗಳಿಂದ ಪ್ರೀತಿಸಿದ ಉಮೇಶ್ ಎಂಬ ಯುವಕನೊಂದಿಗೆ ಮನೆಯವರ ಒಪ್ಪಿಸಿ ಒಂಬತ್ತು ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು. ಬಳ್ಕೂರು ಉಗ್ರಣಿಬೆಟ್ಟವಿನವಳಾದ ಜ್ಯೋತಿ, ಆಜ್ರಿಯ ಗಂಡನ ಮನೆಯಲ್ಲಿ ಅತ್ತೆ, ಮಾವ, ನಾದಿನಿ ಮತ್ತು ಇಬ್ಬರು ಮೈದುನರೊಂದಿಗೆ ನೆಲೆಸಿದ್ದರು. ಪತಿ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತನೊರ್ವ ನೇಣಿಗೆ ಶರಣಾದ ಘಟನೆ ಎಲ್ಲೂರಿನಲ್ಲಿ ವರದಿಯಾಗಿದೆ. ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಎಲ್ಲೂರಿನ ನಿವಾಸಿ ರಾಮಕೃಷ್ಣ ಶೆಟ್ಟಿ (೨೮) ಮೃತಪಟ್ಟ ಯುವಕ. ಖಾಸಗಿ ಬಸ್ಸಿನಲ್ಲಿ ಕ್ಲೀನರ್ ಅಗಿ ಕೆಲಸ ಮಾಡಿಕೊಂಡಿದ್ದ ರಾಮಕೃಷ್ಣ, ಇತ್ತೀಚಿಗೆ ಮನಸಿಕ ಖಿನ್ನತೆಗೆ ವಿಪರೀತ ಮದ್ಯವ್ಯಸನಿಯಾಗಿದ್ದ ಎನ್ನಲಾಗಿದೆ. ಶನಿವಾರ ಕೆಲಸಕ್ಕೆ ತೆರಳದೇ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ. ರಾತ್ರಿ ಕಾಣದಾದಾಗ ಮನೆಯವರು ಹುಡುಕುದಾಗ ಪಕ್ಕದ ಗೇರುಹಾಡಿಯಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಒದ್ದಾಡುತ್ತಿದ್ದ. ಅದನ್ನು ನೋಡಿದವರು ಆತನನ್ನು ಮರದಿಂದ ಇಳಿಸಿದಾಗ ಸ್ವಲ್ಪ ಉಸಿರಾಟವಿರುವುದನ್ನು ಗಮನಿಸಿ ತಕ್ಷಣ ಬೈಂದೂರು ಅಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಕೃಷಿ ಬದುಕಿನ ಜೀವನಾಡಿ ಎಂಬ ಉಕ್ತಿಯನ್ನು ಪಾಲಿಸುತ್ತಾ, ಕೃಷಿ ಕಾಯಕದಲ್ಲಿ ಅವಿರತವಾಗಿ ತೊಡಗಿಕೊಳ್ಳುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನ ನೇರ ನಡೆ ನುಡಿ, ಸೀದಾ ಸಾದ ವ್ಯಕ್ತಿತ್ವ ಹಾಗೂ ಕಾರ್ಯದ ಮೂಲಕ ಜನಮೆಚ್ಚಿದ ನಾಯಕನಾಗಿ ಗುರುತಿಸಿಕೊಂಡವರು ವೆಂಕಟ ಪೂಜಾರಿ ಸಸಿಹಿತ್ಲು. ಬೈಂದೂರಿನ ಸಾಮಾಜಿಕ, ರಾಜಕೀಯ, ಧಾರ್ಮಿಕ, ಕಂಬಳ ಹಾಗೂ ಕ್ರೀಡಾ ರಂಗದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ವೆಂಕಟ ಪೂಜಾರಿ ಅವರು ಕಳವಾಡಿಯ ಸಸಿಹಿತ್ಲು ಎಂಬ ದೊಡ್ಡ ಕುಟುಂಬದವರು. ಆಧುನಿಕತೆಯ ವಿಭಕ್ತ ಕುಟುಂಬ ಭರಾಟೆಯ ನಡುವೆಯೂ ಇಂದಿಗೂ ಅವಿಭಕ್ತ ಕುಟುಂಬದಲ್ಲಿದ್ದು ಉದ್ಯಮದ ನಡುವೆಯೂ ಕೃಷಿಕಾರ್ಯವನ್ನು ಇಂದಿಗೂ ಪ್ರೀತಿಯಿಂದಲೇ ಮುಂದುವರಿಸಿಕೊಂಡು ಬರುತ್ತಿದ್ದಾರೆ ಎಂಬುದು ಅವರ ಕೃಷಿಯ ಬಗೆಗಿನ ಅವರ ಪ್ರೀತಿ ಹಾಗೂ ಅವರ ಯಜಮಾನಿಕೆಯ ಬಗೆಗೆ ಅವರ ಕುಟುಂಬಿಕರಿಗಿರುವ ಪ್ರೀತಿ ಎರಡನ್ನೂ ಸೂಚಿಸುತ್ತದೆ. ಆ ಸಂಮೃದ್ಧತೆಯನ್ನು ಅವರ ಮನೆಯ ಮುಂದಿನ ಭತ್ತದ ತಿರಿಯೇ ಸೂಚಿಸುತ್ತದೆ. ಕುಂದಾಪ್ರ ಡಾಟ್ ಕಾಂ ವರದಿ. ಸಾಮಾಜಿಕ – ಸಹಕಾರಿ ರಂಗ: ಯವಕರಾಗಿರವಾಗಲೇ ಸಾಮಾಜಿಕ ರಂಗದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶ್ರೀ ಚಿಕ್ಕಮ್ಮ ದೇವಿ ದೇವಸ್ಥಾನ ಚಿಕ್ಕಮ್ಮನಸಾಲು ರಸ್ತೆ ಕುಂದಾಪುರ ಇಲ್ಲಿನ ದೇವಸ್ಥಾನದ ವಠಾರ ಹಾಗೂ ಸುತ್ತ ಮುತ್ತಲಿನ ಪರಿಸರದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಭಾಸ್ಕರ ಎಸ್ ಪುತ್ರನ್, ದೇವಳದ ಆಡಳಿತ ಮಂಡಳಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು, ಭಾಗವಹಿಸಿದ್ದರು.

Read More