Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಕಾನೂನು 18ನೇ ಶತಮಾನದಲ್ಲಿದ್ದರೇ, ಮನುಷ್ಯನ ಮನಸ್ಥಿತಿ 19ನೇ ಶತಮಾನದಲ್ಲಿದೆ. ಆದರೆ ಆತನ ಆಕಾಂಕ್ಷೆಗಳು 21ನೇ ಶತಮಾನದಲ್ಲಿದೆ. ಈ ಮೂರರ ತಿಕ್ಕಾಟದ ನಡುವೆ ಸಮಾಜವಿದೆ. ಬದಲಾದ ಸಮಾಜಕ್ಕೆ ತಕ್ಕಂತೆ ಸೈಬರ್ ಕ್ರೈಮ್ ಕಾನೂನು ಕೂಡ ಪ್ರಬಲವಾಗಿ ರೂಪುಗೊಂಡಿಲ್ಲ. ಸುಪ್ರಿಂ ಕೋರ್ಟ್ ಪಾರ್ಲಿಮೆಂಟ್‌ಗೆ ಕಾನೂನು ರಚಿಸಲು ನಿರ್ದೇಶನ ನೀಡಿದೆಯಾದರೂ, ಅಲ್ಲಿಯ ತನಕ ಅಸಹಾಯಕರಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ಚಿಕ್ಕಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಹೇಳಿದರು. ಅವರು ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ಆಶ್ರಯದಲ್ಲಿ, ಕುಂದಾಪುರ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಜರುಗಿದ ಕಾರ್ಟೂನು ಹಬ್ಬದಲ್ಲಿ ಸೈಬರ್ ಖಬರ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇಂದಿನ ಏಳು ನಿಮಿಷದಲ್ಲಿ ಆಗುತ್ತಿದ್ದ ಡಾಟಾ ವರ್ಗಾವಣೆ ನೂರು ವರ್ಷದ ಹಿಂದೆ ವರ್ಗಾವಣೆ ಆಗಲು ೩೫ ವರ್ಷ ಬೇಕಾಗುತ್ತಿತ್ತು. ಅಷ್ಟು ವೇಗದಲ್ಲಿ ಜಗತ್ತು ಸಾಗುತ್ತಿದೆ. ಒಂದು ಗಂಟೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಸ್ತು, ನಿಷ್ಠೆ, ಪ್ರಾಮಾಣೆಕತೆಯ ಹಾದಿಯಲ್ಲಿ ಸಾಗಿದಾಗ ಮಹತ್ತರವಾದ ಸಾಧನೆಯನ್ನು ಮಾಡಲು ಸಾಧ್ಯ ಎಂಬುವುದಕ್ಕೆ ವಿದ್ಯಾರಂಗ ಮಿತ್ರ ಮಂಡಳಿಯು ಸಾಕ್ಷಿಯಾಗಿದ್ದು, ಸಮಾಜದಲ್ಲಿ ಪರಿವರ್ತನೆ ತರುವ ಹಾಗೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಕಾಣುವ ಆಶಯದ ಹೆಜ್ಜೆಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವುದು ಪ್ರಶಂಸನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಕುಂದಾಪುರ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ಕುಂದಾಪುರದ ವಿದ್ಯಾರಂಗ ಮಿತ್ರ ಮಂಡಳಿ (ರಿ.) ಸುವರ್ಣ ಮಹೋತ್ಸವ ಸಮಿತಿಯ ಪದಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮುಖ್ಯ ಅತಿಥಿ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ ಮಾತನಾಡಿ ಸಮಾಜದ ಒಟ್ಟಾರೆ ಬೆಳವಣಿಗೆಗೆ ಪ್ರತಿಯೊಬ್ಬರ ಕೊಡುಗೆ ಅವಶ್ಯಕ. ಸಮಾಜದ ಬೆಳಕಾಗಿ ಉತ್ತಮ ಕಾರ್ಯ ಮಾಡುತ್ತಿರುವ ಸಂಸ್ಥೆಗೆ ಸರಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಕುಂದಾಪುರ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರ ಕುರಿತು ಅವಹೇಳನ ಮಾಡಿ, ಅಶ್ಲೀಲ ಫೋಟೊಗಳನ್ನು ವಾಟ್ಸ್ಯಾಪ್ ಗ್ರೂಪಿನಲ್ಲಿ ರವಾನೆ ಮಾಡಿದ್ದಾರೆಂದು ಆರೋಪಿಸಿ ಕುಂದಾಪುರದ ಮೂವರು ಬಿಜೆಪಿ ಮುಖಂಡರ ವಿರುದ್ದ ಉಡುಪಿ ಸೆನ್ ಅಪರಾಧ ಪೋಲಿಸ್ ಠಾಣೆಯಲ್ಲಿ ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಗುರುವಾರ ಪ್ರಕರಣ ದಾಖಲಾಗಿದೆ. ಕುಂದಾಪುರ ಬಿಜೆಪಿಯ ಮೂವರು ಮುಖಂಡರುಗಳಾದ ರಾಜೇಶ್ ಕಾವೇರಿ, ಬಿ. ಕಿಶೋರ್ ಕುಮಾರ್ ಮತ್ತು ರಾಜು ಪೂಜಾರಿ ಎಂಬುವವರ ವಿರುದ್ದ ದೂರು ದಾಖಲಿಸಿದ್ದು, ಮೂವರು ಮುಖಂಡರು ನವೆಂಬರ್ ೧೩ ರ ಬಳಿಕ ಬಿ.ಜೆ.ಪಿ. ಕುಂದಾಪುರ ಎನ್ನುವ ಅನಧಿಕೃತ ವಾಟ್ಸ್‌ಪ್ ಗ್ರೂಪ್‌ನಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಾಂದ್ಲಾಜೆ ಅವರ ಬಗ್ಗೆ ಅವಹೇಳನಕರವಾಗಿ ವಾಟ್ಸ್‌ಅಪ್ ನಲ್ಲಿ ಬರಹಗಳನ್ನು ಪೋಸ್ಟ್ ಮಾಡಿದ್ದು, ಅಲ್ಲದೇ ಅವರಿಬ್ಬರ ಫೋಟೋಗಳನ್ನು ಎಡಿಟ್ ಮಾಡಿ ಅಶ್ಲೀಲವಾಗಿ ವಾಟ್ಸ್‌ಅಪ್ ಮೂಲಕ ಕಳುಹಿಸಿ, ಮಾನ ಹಾನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಟಿ.ವಿ, ಮೊಬೈಲ್ ಮುಂತಾದ ಆಧುನಿಕ ಸಾಧನಗಳಿಂದಾಗಿ ಮಕ್ಕಳು ಆಟಕ್ಕೆ ಕುತ್ತು ಬಂದಿದೆ. ಆಟ ಆಡುವವರೇ ಇಲ್ಲದಂತಾಗಿದೆ. ಬಹಳಷ್ಟು ಮಕ್ಕಳಲ್ಲಿ ಏಕಾಗ್ರೆತೆ ಕೊರತೆ, ನಿರಾಸಕ್ತಿ ಕಂಡು ಬರುತ್ತಿದೆ ಎಂದು ಖ್ಯಾತ ಮನೋಶಾಸ್ತ್ರಜ್ಞ ಡಾ. ಪಿ. ವಿ ಭಂಡಾರಿ ಆಂತಕ ವ್ಯಕ್ತಪಡಿಸಿದರು. ಅವರು ಕುಂದಾಪುರದ ಕಲಾಮಂದಿರದಲ್ಲಿ ನಡೆದ ಕಾರ್ಟೂನು ಹಬ್ಬ ಮೊದಲ ದಿನ ಉದಯೋನ್ಮುಖ ವ್ಯಂಗ್ಯಚಿತ್ರಕಾರರಿಗಾಗಿ ಆಯೋಜಿಸಲಾಗಿದ್ದ ಕಾರ್ಟೂನು ಸ್ವರ್ಧೆ ಹಾಗೂ ಮಾಯಾ ಕಾಮತ್ ಸ್ಮರಣಾರ್ಥ ಆಯೋಜಿಸಲಾಗಿದ್ದ ಕಾರ್ಟೂನು ಸ್ವರ್ಧೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವ್ಯಂಗ್ಯಚಿತ್ರಕಾರ ರವಿರಾಜ್ ಹಾಲಂಬಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ. ರಶ್ಮಿ ಕುಂದಾಪುರ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ವಿಜಯ ಕರ್ನಾಟಕ ಪತ್ರಿಕೆಯ ಕಿರಿಯ ಸಹ ಸಂಪಾದಕಿ ಮೇರಿ ಜೋಸೆಫ್, ಹಟ್ಟಿಯಂಗಡಿ ಸಿದ್ದಿವಿನಾಯಕ ರೆಸಿಡೆನ್ಸಿಯಲ್ ಶಾಲೆಯ ಪ್ರಾಂಶುಪಾಲರಾದ ಶರಣ್‌ಕುಮಾರ್, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಚೈತ್ರಾ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರ್ಟೂನಿಷ್ಠರಿಗೆ ವಿಶೇಷ ದೃಷ್ಠಿಕೋನವಿದೆ. ನಮಗೆ ಗೊತ್ತಿರುವುದು, ಗೊತ್ತಿಲ್ಲದ್ದು, ಒಳಿತು ಕೆಡುಕುಗಳನ್ನು ರೇಖೆಗಳ ಮೂಲಕ ತೋರಿಸುವ ಚಾಕಚಕ್ಯತೆ ಅವರಲ್ಲಿದೆ. ಸಮಾಜದ ಓರೆ ಕೋರೆಗಳನ್ನು ಚಿತ್ರಿಸಿ ದೇಶಕಟ್ಟುವ ಕೆಲಸದ ಅವರುಗಳ ಶ್ರಮ ವಿಶೇಷವಾದ್ದು ಎಂದು ತರಂಗ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕಿ ಡಾ. ಸಂಧ್ಯಾ ಎಸ್. ಪೈ ಹೇಳಿದರು. ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ನೇತೃತ್ವದಲ್ಲಿ ಕುಂದಾಪುರ ಕಲಾಮಂದಿರಲ್ಲಿ ಆಯೋಜಿಸಲಾಗಿದ್ದ ಕಾರ್ಟೂನು ಹಬ್ಬ 2017 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪತ್ರಕರ್ತರ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ಮಾತನಾಡಿ ಕರಾವಳಿಯ ಮಣ್ಣಿಗೆ ಕಲೆಯ ಸೆಳೆತವಿದೆ. ಅದಕ್ಕೆ ತಕ್ಕಂತೆ ಪ್ರೋತ್ಸಾಹ ದೊರೆತರೆ ಅವರಲ್ಲಿನ ಪ್ರತಿಭೆ ಅನಾವರಣಗೊಳ್ಳುತ್ತದೆ. ಪೋರ್ಬ್ಸ್ ಪತ್ರಿಕೆಯಲ್ಲಿ ಕುಂದಾಪುರದ ಸತೀಶ್ ಆಚಾರ‍್ಯ ಅವರ ಹೆಸರು ಪ್ರಟಕವಾಗಿರುವುದೇ ಅವರ ಸಾಧನೆಯ ಮಟ್ಟವನ್ನು ತಿಳಿಸುತ್ತದೆ. ತಾನು ಬೆಳೆಯುವುದರೊಂದಿಗೆ ಇತರರನ್ನು ಬೆಳೆಸುವ ಅವರ ಗುಣ ಅವರನ್ನು ಈ ಮಟ್ಟಕ್ಕೆ ತಂದಿದೆ ಎಂದರು. ಕುಂದಾಪ್ರ ಕನ್ನಡದ ಹಾಸ್ಯ ಕಲಾವಿದ, ಶಿಕ್ಷಕ ಮನು ಹಂದಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಖಾಸಗಿ ಆಸ್ಪತ್ರೆಗೆ ಹಾಜರಾಗದ ವೈದ್ಯರು, ಬಾಗಿಲು ತೆರೆಯದ ಆಸ್ಪತ್ರೆ ಔಷಧಾಲಯ. ಸರ್ಕಾರಿ ಆಸ್ಪತ್ರೆಗೆ ಮುಗಿಬಿದ್ದ ರೋಗಿಗಳು. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಪರದಾಡಿದ ರೋಗಿಗಳು. ವೈದ್ಯರ ರಜೆ ಬೋರ್ಡ್, ವೈದ್ಯರ ಕೊಠಡಿಯಲ್ಲಿ ಖಾಲಿ ಕುರ್ಚಿ! ಇದು ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿ ಗುರುವಾರ ಕಂಡು ಬಂದ ದೃಶ್ಯ. ಖಾಸಗಿ ಆಸ್ಪತ್ರೆ ನಿಯಂತ್ರಣ ಮಸೂದೆ ವಿರೋಧಿಸಿ ಖಾಸಗಿ ವೈದ್ಯರು ಸೇವೆ ಸ್ಥಗಿತಗೊಳಿಸಿ ಹೂಡಿದ್ದ ಮುಷ್ಕರದಿಂದಾಗಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಅನಿವಾರ್ಯ ಕಾರಣಗಳಿಂದ ಗೈರು ಹಿನ್ನೆಲೆಯಲ್ಲಿ ಆರೋಗ್ಯ ಸೇವೆಯ ಬಗ್ಗೆ ಕುಂದಾಪ್ರ ಡಾಟ್ ಕಾಂ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಕಂಡುಬಂದ ಸಾಮಾನ್ಯ ದೃಶ್ಯ. ಖಾಸಗಿ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ ಸರಕಾರಿ ಅಸ್ಪತ್ರೆ ವೈದ್ಯರು ಹಾಜರಾತಿ ಕಡ್ಡಾಯ ಎಂಬ ಆದೇಶ ಮಾಡಿದ್ದರೂ ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ವೈದ್ಯರ ಅನುಪಸ್ಥಿತಿಯಲ್ಲಿ ರೋಗಿಗಳು ಪರದಾಡುವ ಸ್ಥಿತಿ ಕಂಡು ಬಂತು. ಕುಂದಾಪುರ ಸರ್ಕಾರಿ ಆಸ್ಪತ್ರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸಾಗರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಹಾಗೂ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ರಾಜ್ಯ ಮಟ್ಟದ ’ಉತ್ತಮ ಸಹಕಾರಿ’ ಪ್ರಶಸ್ತಿ ಲಭಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ 64ನೇ ಸಹಕಾರಿ ಸಪ್ತಾಹದ ಅಂಗವಾಗಿ ಸಹಕಾರಿ ಕ್ಷೇತ್ರದ ವಿವಿಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಸಹಕಾರಿಗಳನ್ನು ಗುರುತಿಸಿ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪತ್ತಿನ ಸಹಕಾರ ಬ್ಯಾಂಕುಗಳ ವಿಭಾಗದಲ್ಲಿ ರಾಜು ಪೂಜಾರಿ ಅವರನ್ನು ಉತ್ತಮ ಸಹಕಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕಳೆದ 23 ವರ್ಷಗಳಿಂದ ಸಹಕಾರಿ ಕ್ಷೇತ್ರದ ವಿವಿಧ ಸಂಸ್ಥೆಗಳಲ್ಲಿ ಅವರು ಸಲ್ಲಿಸಿರುವ ಸೇವೆಯನ್ನು ಪ್ರಶಸ್ತಿಯ ಆಯ್ಕೆ ಸಮಿತಿ ಪರಿಗಣಿಸಿದೆ. ನ 17ರಂದು ಬಾಗಲಕೋಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ’೬೪ನೇಯ ಸಹಕಾರಿ ಸಪ್ತಾಹ’ ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರಿ ಸಚಿವ ರಮೇಶ್ ಜಾರಕಿಹೊಳೆ ಪ್ರಶಸ್ತಿ ಪ್ರದಾನ ಮಾಡಲಿದ್ದು ಸಚಿವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನ.19ರ ಭಾನುವಾರ ಬೆಳಿಗ್ಗೆ 10ಗಂಟೆಗೆ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಆರ್.ಆರ್. ಕಾಂಪ್ಲೆಕ್ಸ್‌ನಲ್ಲಿ ಶ್ರೀ ಸಾಯಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ರಿ. ಹಾಗೂ ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘ ನಿ. ಈ ಎರಡು ಸಂಸ್ಥೆಗಳು ಶುಭಾರಂಭಗೊಳ್ಳಲಿದ್ದು ಸಾರ್ವಜನಿಕರು ಸಂಸ್ಥೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಡಳಿತ ಟ್ರಸ್ಟ್ರೀ ಎನ್. ಪಂಜು ಬಿಲ್ಲವ ಹಾಗೂ ಸಹಕಾರಿ ಸಂಘದ ಅಧ್ಯಕ್ಷೆ ನಿರ್ಮಲ ಶಂಕರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಸಾಯಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ರಿ. ಮೂಲಕ ಗ್ರಾಮೀಣ ಪ್ರದೇಶದಲ್ಲಿ ಮಹಿಳಾ ಸ್ವಸಹಾಯ ಸಂಘವನ್ನು ರಚಿಸಿ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹಿಸುವುದು, ಸ್ವ ಉದ್ಯೋಗ ಮಾಹಿತಿ ನೀಡುವುದು, ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವುದು, ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವುದು, ರಕ್ತದಾನಕ್ಕೆ ಪ್ರೋತ್ಸಾಹಿಸುವುದು, ಅಶಕ್ತ-ಅನಾಥರ ಸೇವೆಗೆ ಬದ್ಧವಾಗಿರುವುದು, ಕನ್ನಡ ನಾಡು ನುಡಿ ಭಾಷೆ ರಕ್ಷಣೆಗೆ ಹೋರಾಡುವುದು ಮುಂತಾದ ಉದ್ದೇಶದೊಂದಿಗೆ ಸಂಸ್ಥೆಯನ್ನು ಆರಂಭಿಸಲಾಗುತ್ತಿದೆ. ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘದ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಎದುರಿಸುವ ಮತ್ತು ಉತ್ತಮ ಅಂಕಗಳನ್ನು ಪಡೆಯುವ ಕೌಶಲ್ಯ ಹೆಚ್ಚಿಸುವ ಅಂಶಗಳು ಅನಿವಾರ್ಯವಾಗಿದೆ. ಒತ್ತಡವನ್ನು ನಿಭಾಯಿಸುವಿಕೆ ಮತ್ತು ಉತ್ತಮವಾಗಿ ಪ್ರಶ್ನೆಪತ್ರಿಕೆಯಲ್ಲಿ ಉತ್ತರವನ್ನು ಬರೆಯಬಲ್ಲ ಸಾಮರ್ಥವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಹೊಂದಿದಾಗ ಮಾತ್ರ ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಗುರುಕುಲ ಪಬ್ಲಿಕ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಮಕ್ಕಳಿಗೆ ವಿಶೇಷವಾದ ಎರಡು ದಿವಸಗಳ ಪರೀಕ್ಷೇಯ ವಿವಿಧ ಆಯಾಮಗಳು ಎನ್ನುವ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಒಂದಾದ ಆರ್.ಸಿ.ಚೈಲ್ಡ್ ಡೆವೆಲಪ್‌ಮೆಂಟ್ ಎಜೆನ್ಸಿಯ ತಂಡದ ಸಹಾಯದಿಂದ ಮಕ್ಕಳಿಗೆ ವಿಭಿನ್ನ ಬಗೆಯ ಪರೀಕ್ಷೇಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಾಹಿತಿಗಳನ್ನು ನೀಡಲಾಯಿತು. ಕ್ಲಿಷ್ಟಕರ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನಗಳ ವಿಭಿನ್ನ ಬಗೆಯ ಪರಿಕಲ್ಪನೆಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಬೇಕಾದ ಪದ್ಧತಿಗಳ ಬಗ್ಗೆ ಕ್ರೀಯಾ ಚಟುವಟಿಕೆಗಳ ಮೂಲಕ ತಿಳಿಸಲಾಯಿತು. ಸ್ಮರಣಾ ಕೌಶಲ್ಯ, ಬರವಣಿಗೆಯ ಸಾಮರ್ಥ್ಯ ಮತ್ತು ಧೀರ್ಘವಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಹದ ಅತೀ ಮುಖ್ಯ ಅಂಗವಾಗಿರುವ ಕಣ್ಣುಗಳ ಆರೋಗ್ಯದ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ನೇತ್ರ ತಪಾಸಣಾ ಶಿಬಿರಗಳು ಸಹಕಾರಿಯಾಗಿದೆ. ದೇಶದಲ್ಲಿ ಲಕ್ಷಾಂತರ ಜನರು ಕಣ್ಣಗಳಿಲ್ಲದೇ ಬದುಕು ಸಾಗಿಸುತ್ತಿದ್ದಾರೆ. ಈ ನೆಲೆಯಲ್ಲಿ ಅಂಧತ್ವ ನಿವಾರಣಾ ಅಭಿಯಾನಕ್ಕೆ ಸ್ವಯಂಪ್ರೇರಿತ ನೇತ್ರದಾನಿಗಳು ಕೈಜೋಡಿಸಬೇಕು ಎಂದು ಕೋಟ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರೂಪಶ್ರೀ ಹೇಳಿದರು. ದೊಂಬೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ ಮತ್ತು ಚಾರಿಟೀಸ್ ಕೋಟ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಅಂಧತ್ವ ನಿವಾರಣಾ ವಿಭಾಗ, ಉಡುಪಿ ವಿಜಯ್ ಬ್ಯಾಂಕ್ ರಿಟಾಯರ್ಡ್ ಆಫೀಸರ‍್ಸ್ ವೆಲ್‌ಫೇರ್ ಸೋಷಿಯಲ್ ಸೆಂಟರ್, ಮಾರಿಕಾಂಬಾ ಯೂತ್ ಕ್ಲಬ್ ಹವ್ಯಾಸಿ ಕಲಾತಂಡ ಕಳವಾಡಿ-ಬೈಂದೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ವಯಸ್ಸಾದಂತೆ ಕಣ್ಣಿನ ಮಸೂರ…

Read More