ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಹಾಸನದಲ್ಲಿ ನಡೆದ ರಾಜ್ಯ ಮಟ್ಟದ ಆಹ್ವಾನಿತ ಪುರುಷರ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೂಡುಬಿದಿರೆ ಆಳ್ವಾಸ್ ತಂಡ ಪ್ರಶಸ್ತಿ ಗೆದ್ದುಕೊಂಡಿದೆ. ಹಾಸನ ಫ್ರೆಂಡ್ಸ್ ಹಾಗೂ ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಶನ್ ಸಹಯೋಗದೊಂದಿಗೆ ನಡೆದ ಟೂರ್ನಿಯ ಅಂತಿಮ ಪಂದ್ಯದಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್ ಕ್ಲಬ್ ತಂಡವನ್ನು ನೇರ ಸೆಟ್ಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿತು. ಸೂಪರ್ ಲೀಗ್ನ ಉಳಿದ ಪಂದ್ಯಗಳಲ್ಲಿ ಆಳ್ವಾಸ್ ಆತಿಥೇಯ ಹಾಸನ ಫ್ರೆಂಡ್ಸ್ ಹಾಗೂ ಕೋಲಾರ ತಂಡಗಳನ್ನು ಸೋಲಿಸಿತು. ಆಳ್ವಾಸ್ನ ಕಿರಣ್ ಕುಮಾರ್ ಟೂರ್ನಿಯ ಉತ್ತಮ ಆಟಗಾರ ಪ್ರಶಸ್ತಿ ಪಡೆದುಕೊಂಡರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಗದಗದ ಎಸ್ಕೆಎಸ್ವಿಎಂಸಿಇಟಿ ಕಾಲೇಜಿನಲ್ಲಿ ಜರುಗಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ( ಬೆಂಗಳೂರು ಹೊರತುಪಡಿಸಿ) ಖೋ ಖೋ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ತಂಡ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಇಲ್ಲಿನ ಕಲೈಕಾರ್ ಮಠ ಶ್ರೀ ನಗರ ಮಹಾಕಾಳಿ ಅಮ್ಮನವರ ಮತ್ತು ಶ್ರೀ ಕಲ್ಲುಕುಟ್ಟಿಗ ದೇವಸ್ಥಾನದ ಶ್ರೀದೇವರ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂದರ್ಭದಲ್ಲಿ ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಮೋಹನ ಸಾರಂಗ್ ಅವರನ್ನು ದೇವಸ್ಥಾನದ ಶ್ರೀ ವರಮಹಾಲಕ್ಷ್ಮೀ ಮಹಿಳಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಸರಸ್ವತಿ ಕಲೈಕಾರ್ ಅವರು ವಸಂತಿ ಮೋಹನ ಸಾರಂಗ್ ಅವರನ್ನು ಸನ್ಮಾನಿಸಿ ಗೌರವಿಸಿದರು. ದೇವಸ್ಥಾನದ ಆಡಳಿತ ಧರ್ಮದರ್ಶಿ ಜಿ.ಭಾಸ್ಕರ ಕಲೈಕಾರ್, ಅಧ್ಯಕ್ಷ ಕೆ.ಸುಭಾಶ್ ಖಾರ್ವಿ, ಶ್ರೀ ವರಮಹಾಲಕ್ಷ್ಮೀ ಮಹಿಳಾ ಸಮಿತಿ ಅಧ್ಯಕ್ಷೆ ಯಶೋಧ ಕೃಷ್ಣ ಖಾರ್ವಿ, ಸುಮಲತಾ ಮಂಜುನಾಥ ಖಾರ್ವಿ, ಲಲಿತಾ ಮಂಜುನಾಥ ಖಾರ್ವಿ, ಮೀನಾ ಜನಾರ್ದನ ಕಲೈಕಾರ್, ಸಕು ಉದಯ ಜಿ., ಅನನ್ಯ ಖಾರ್ವಿ, ಪ್ರೇಮಾ ಜಿ.ಖಾರ್ವಿ, ರತ್ನಿ ಭಾಸ್ಕರ ಖಾರ್ವಿ, ಲಲಿತಾ ಖಾರ್ವಿ, ಸಾವಿತ್ರಿ ಜನಾರ್ದನ ಖಾರ್ವಿ, ಶೋಭಾ ಕಲೈಕಾರ್, ಜಿ.ನಾಗೇಶ ಕಲೈಕಾರ್, ಕಾಂತು ಮಂಜುನಾಥ ಖಾರ್ವಿ, ಮಡಿಕಲ್ ಜನಾರ್ದನ ಖಾರ್ವಿ, ಮೋಹನ ಸಾರಂಗ್,…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೂಲಿ ಕೆಲಸಕ್ಕಾಗಿ ಹಾವೇರಿಯಿಂದ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮಕ್ಕೆ ಬಂದು ನೆಲೆಸಿದ ಯಲ್ಲಪ್ಪಾ ಬಿ. ಅಗಡಿ ಮತ್ತು ಈರಮ್ಮ ದಂಪತಿಯ ಏಕೈಕ ಪುತ್ರ ಹರೀಶ್(2) ಕಣ್ಣಿನ ಕ್ಯಾನ್ಸರ್ಗೆ ತುತ್ತಾಗಿದ್ದಾನೆ. ತೀರಾ ಕಷ್ಟದಲ್ಲಿ ಜೀವನ ನಡೆಸುತ್ತಿರುವ ಈ ಬಡ ಕುಟುಂಬಕ್ಕೆ ಮಗುವಿನ ಕಾಯಿಲೆಯ ಚಿಕಿತ್ಸೆಗೆ ಅಗತ್ಯವಿರುವ ಹಣವನ್ನು ಭರಿಸುವುದೇ ದೊಡ್ಡ ಚಿಂತೆಯಾಗಿದ್ದು, ದಾನಿಗಳು ಹಾಗೂ ಸಾರ್ವಜನಿಕರ ಮಾನವೀಯ ನೆರವಿಗಾಗಿ ದಂಪತಿ ಮನವಿ ಮಾಡಿಕೊಂಡಿದ್ದಾರೆ. ಸೇನಾಪುರ ರೈಲ್ವೇ ನಿಲ್ದಾಣದ ಸಮೀಪ ಜೋಪಡಿಯಲ್ಲಿ ಹಾವೇರಿಯ ಹಲವು ಕೂಲಿಕಾರ್ಮಿಕ ಮಂದಿ ಜೊತೆ ವಾಸವಾಗಿರುವ ಯಲ್ಲಪ್ಪಾ ಬಿ. ಅಗಡಿ ದಂಪತಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿ ಸಂಸಾರ ಸಾಗಿಸುತ್ತಾರೆ. ಇದೀಗ ಅವರ ಪುತ್ರ ಹರೀಶ್ ಎಡಗಣ್ಣಿಗೆ ಕ್ಯಾನ್ಸರ್ ಬಾಧಿಸಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ಚಿಕಿತ್ಸೆಗೆ ಲಕ್ಷಾಂತರ ರೂ. ಅಗತ್ಯವಾಗಿದ್ದು, ಬಡ ಕುಟುಂಬ ಕಂಗಾಲಾಗಿದೆ. ಆದ್ದರಿಂದ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ದಾನಿಗಳು ಹಾಗೂ ಸಾರ್ವಜನಿಕರು ಉದಾರ ಮನಸ್ಸಿನಿಂದ ಧನಸಹಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ ವೆಲ್ತ್ ಗೇಮ್ಸ್ ನ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕುಂದಾಪುರದ ಗುರುರಾಜ್ ಬೆಳ್ಳಿ ಪದಕ ಪಡೆದು ಭಾರತದ ಪದಕಗಳ ಭೇಟೆ ಆರಂಭ ದೊರಕಿಸಿದ್ದಾರೆ . 56ಕೆ.ಜಿ ವಿಭಾಗದಲ್ಲಿ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಗುರುರಾಜ್ ಬೆಳ್ಳಿ ಪದಕ ಪಡೆದು ಈ ಸಾಧನೆ ಮಾಡಿದ್ದಾರೆ. ಚಿತ್ತೂರು ಗ್ರಾಮದ ಜಡ್ಡು ಮಹಾಬಲ ಪೂಜಾರಿ ಹಾಗು ಪದ್ದು ದಂಪತಿಗಳ ಆರು ಮಕ್ಕಳಲ್ಲಿ ಐದನೇಯವರಾದ ಗುರುರಾಜಗೆ ಓದಿನಷ್ಟೇ ಕ್ರೀಡೆಯಲ್ಲಿಯೂ ಆಸಕ್ತಿ. ತಂದೆ ತಾಯಿಯೂ ಅಷ್ಟೇ. ಮಗನ ಮನದ ಇಂಗಿತ ಅರಿತು ಅವರ ಸಾಧನೆಗೆ ಶಕ್ತಿ ಮೀರಿ ನೆರವಾಗುತ್ತಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಕಲಿಯುತ್ತಿದ್ದ ಸಂದರ್ಭದಲ್ಲಿ ರ್ವೆಸ್ಲಿಂಗ್ ನಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದ ಗುರುರಾಜ್ಗೆ ಸುಕೇಶ್ ಶೆಟ್ಟಿ ಅವರು ತರಬೇತಿ ನೀಡಿದ್ದರು. ಮುಂದೆ ಪದವಿ ವ್ಯಾಸಂಗಕ್ಕಾಗಿ ಉಜಿರೆಯ ಎಸ್.ಡಿ.ಎಂ ಕಾಲೇಜು ಸೇರಿದ ಬಳಿಕ ಗುರುರಾಜ್ ಬದುಕಿಗೊಂದು ತಿರುವು ದೊರೆತಿತ್ತು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ದೇವಸ್ಥಾನಗಳ ಜೀರ್ಣೋದ್ಧಾರವಾದ ನಂತರ ದೇವಳದಲ್ಲಿ ಮುಖ್ಯವಾಗಿ ನಡೆಯಬೇಕಾದ ಪೂಜೆ, ಪುನಸ್ಕಾರ, ಯಜ್ಞ ಯಾಗಾದಿಗಳು, ಉತ್ಸವಗಳು ಭಜನೆ ಹಾಗೂ ಅನ್ನಸಂತರ್ಪಣೆ ಮುಂತಾದ ಕಾರ್ಯಗಳನ್ನು ಕ್ರಮಬದ್ಧವಾಗಿ ಮುಂದುವರಿಸಿಕೊಂಡು ಹೋಗಬೇಕು. ದೇವಳಗಳು ಧಾರ್ಮಿಕ ಶೃದ್ಧಾಕೇಂದ್ರವಾಗಿರಬೇಕೆ ಹೊರತು ವ್ಯವಹಾರ ಕೇಂದ್ರವಾಗಬಾರದು ಎಂದು ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ರಾಮಚಂದ್ರ ಬಿ. ಶಿರೂರಕರ್ ಹೇಳಿದರು. ಶಿರೂರು ಕೋಟೆಮನೆ ಶ್ರೀ ದುರ್ಗಾಂಬಿಕಾ ದೇವಿಯ ಸಾನಿಧ್ಯದಲ್ಲಿ ನಡೆದ 28ನೇ ಪುನರ್ಪ್ರತಿಷ್ಠಾ ವರ್ಧಂತ್ಯೋತ್ಸವದ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಭಕ್ತರು ತಮ್ಮ ವರ್ಷದ ದುಡಿಮೆಯಲ್ಲಿ ಒಂದು ದಿನದ ಗಳಿಕೆಯನ್ನು ದೇವಳದ ಧಾರ್ಮಿಕ ಕಾರ್ಯಗಳಿಗೆ ಮೀಸಲಿಟ್ಟರೆ ಸನ್ನಿಧಿಯಲ್ಲಿ ಇನ್ನೂ ಹೆಚ್ಚಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು ಎಂದರು. ಕೋಟೆಮನೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಅಧ್ಯಕ್ಷ ಕೆ.ಎನ್. ಆಚಾರ್ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಗೋಪಾಲ ಭೂಸೇನಹಳ್ಳಿ. ನಿವೃತ್ತ ಯೋಧ ರುಕ್ಮಾನಂದ ಮತ್ತವರ ಪತ್ನಿ ಶಿಕ್ಷಕಿ ಲತಾ, ಹಿರಿಯ ಪುರೋಹಿತ ಶ್ಯಾಮ ಅವಭೃತ್ ಅಳ್ವೆಗದ್ದೆ ಹಾಗೂ ಸಮಾಜದ ಹಿರಿಯರಿಗೆ ಸನ್ಮಾನಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕೂಡು ಕುಟುಂಬದಿಂದ ಒಂಟಿ ಕುಟುಂಬ ಆಯ್ತು. ಕೃಷಿಯಿಂದ ಸ್ವಾಪ್ಟ್ ವೇರ್ ಬಂತು. ಹೀಗೆ ಕುಟುಂಬದಿಂದ ಬೇರೆ ಬೇರೆ ಕಾರಣದಿಂದ ಹೊರ ಬಂದು ವಿಶ್ವದಾದ್ಯಂತ ಹಂಚಿಹೋದ ಕುಟುಂಬ ಸದಸ್ಯರಲ್ಲಿ ಸಂಬಂಧಗಳೇ ಶಿಥಿಲಗೊಳ್ಳುತ್ತಿರುವ ಆಧುನಿಕ ಯುಗ ಇದು. ಹೀಗಿರುವಾಗ ದೂರ ದೂರ ಹಂಚಿಹೋದ ಸುಮಾರು 200 ವರ್ಷದ ಹಿಂದಿನ ತಮ್ಮ ಪೂರ್ವಜರ ಸಂತತಿಯನ್ನು ಅರಸಿ ಸುಮಾರು ಎಂಟು ತಲೆಮಾರಿನ ಸಹೋದರ ಸಹೋದರಿಯರ ಮಕ್ಕಳು ಮೊಮ್ಮಕ್ಕಳು ಮರಿಮಕ್ಕಳು ಒಂದಾಗಿ ತಮ್ಮ ಕಟುಂಬೋತ್ಸವವನ್ನು ಆಚರಿಕೊಂಡ ಅಪರೂಪದ ಆದರ್ಶ ಕಾರ್ಯಕ್ರಮ ಒಂದು ಇತ್ತೀಚೆಗೆ ಉಪ್ಪುಂದದ ಪ್ರಭು ಮನೆತನದಲ್ಲಿ ಜರುಗಿತು. ಯಾವುದೇ ಧಾರ್ಮಿಕ ಹಿನ್ನೆಲೆ ಇರದೇ ಕುಟುಂಬದ ಹಿರಿಯ ಸದಸ್ಯರ ಮನೆ ಅಂಗಳದಲ್ಲೇ ಆಯೋಜನೆ ಗೊಂಡ ಒಂದು ದಿನದ ಈ ಸಮ್ಮೇಳನವನ್ನು ಇಂದಿನ ತಲೆಮಾರಿನ ಹಿರಿಯರಾದ ಉಪ್ಪುಂದದ ಶ್ರೀಧರ ಪ್ರಭುರವರು ಉದ್ಗಾಟಿಸಿದರು. ಅವರು ಮಾತನಾಡಿ ‘ಗೋವಾದಿಂದ ವಲಸೆ ಬಂದು ಹಲವು ಕಡೆ ನೆಲೆನಿಂತ ನಮ್ಮ ಕುಟುಂಬದ ಪೂರ್ವಜರ ಸಂಪೂರ್ಣ ಇತಿಹಾಸ ಇನ್ನೂ ಸಿಗದಿದ್ದರೂ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಇವರ ಆಶ್ರಯದಲ್ಲಿ 505 ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್, ಹಿಂಜಾವೇ ಜಿಲ್ಲಾ ಸಹಸಂಚಾಲಕ ವಾಸುದೇವ ದೇವಾಡಿಗ, ರಾಘವೇಂದ್ರ ಗಾಣಿಗ, ರತ್ನಾಕರ ಗಾಣಿಗ, ಎನ್.ನರೇಶ ಕಿಣಿ, ಯಶವಂತ ಖಾರ್ವಿ, ಹಿಂಜಾವೇ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಸೇರಿದಂತೆ ನೂರಾರು ಮಂದಿ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ತೌಹೀದ್ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಜರಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಸಾಹಿತಿ ಕೋ.ಶಿವಾನಂದ ಕಾರಂತ್, ಮನುಷ್ಯನಿಗೆ ಕಣ್ಣುಗಳು ಅತ್ಯವಶ್ಯಕವಾಗಿದ್ದು, ಕಣ್ಣುಗಳ ಆರೈಕೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಕಾಲ ಕಾಲಕ್ಕೆ ಕಣ್ಣುಗಳ ತಪಾಸಣೆ ನಡೆಸಿಕೊಂಡು ಬೇಕಾದ ಅಗತ್ಯ ಚಿಕಿತ್ಸೆಗಳನ್ನು ಪಡೆದುಕೊಳ್ಳಬೇಕು. ಕಣ್ಣಿನ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತಾಳಿದರೆ ಜೀವನ ಅಂಧಕಾರದಲ್ಲಿ ಕಳೆಯಬೇಕಾಗುತ್ತದೆ ಎಂದು ಹೇಳಿದರು. ಗಂಗೊಳ್ಳಿ ಸೋಷಿಯಲ್ ವೆಲ್ಫೇರ್ ಫೆಡರೇಶನ್ನ ಅಧ್ಯಕ್ಷ ಅಯೂಬ್ ಬೆದ್ರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್ನ ಅಧ್ಯಕ್ಷ ಮಡಿ ನಾಗರಾಜ ಖಾರ್ವಿ, ಉಡುಪಿ ಪ್ರಸಾದ್ ನೇತ್ರಾಲಯದ ತಜ್ಞವೈದ್ಯ ಡಾ.ರೋಹಿತ್, ತೌಹೀದ್ ಎಜ್ಯುಕೇಶನಲ್ ಟ್ರಸ್ಟ್ನ ಉಪಾಧ್ಯಕ್ಷ ಎಂ.ಇನಾಯತುಲ್ಲಾ, ಜಾಮಿಯಾ ಫಾತಿಮಾತುಝೋಹರಾ ಇಸ್ಲಾಹುಲ್ ಬನಾತ್ನ ಆಡಳಿತಾಧಿಕಾರಿ ಮಹಮ್ಮದ್ ಮತೀನ್ ಸಿದ್ಧಿಕಿ, ತೌಹೀದ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಖ್ತರ್ ಅಹಮ್ಮದ್ ಖಾನ್ ಮತ್ತಿತರರು ಉಪಸ್ಥಿತರಿದ್ದರು. ಕೇಶವ ಖಾರ್ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಗು ತನ್ನ ಸುತ್ತಲಿನ ಜನರರೊಂದಿಗೆ ಮುಕ್ತವಾಗಿ ಬೆರೆಯಲು ಭಾಷೆ ಅನಿವಾರ್ಯ. ವೈಜ್ಞಾನಿಕ ಚಿಂತನೆಯನ್ನು ಮೈಗೂಡಿಸಿಕೊಳ್ಳಲು ಮಾತೃಭಾಷೆ ದಾರಿದೀಪವಾಗುತ್ತದೆ. ಯಾವುದೇ ಭಾಷೆಯನ್ನು ಕಲಿಯಬೇಕಾದರೂ ಮಾತೃಭಾಷೆಯಲ್ಲಿ ಗಟ್ಟಿತನ ಅಗತ್ಯ. ಆದ್ದರಿಂದ ತಾಯಿಭಾಷೆಯ ಮೇಲೆ ಹಿಡಿತ ಸಾಧಿಸದೇ ಇನ್ನೊಂದು ಭಾಷೆಯನ್ನು ಕಲಿತರೂ ಅದು ನಿಷ್ಪ್ರಯೋಜಕ. ಆದ್ದರಿಂದ ಮಾತೃಭಾಷೆಯ ಮೇಲೆ ಹಿಡಿತ ಸಾಧಿಸಲು ಮಕ್ಕಳಿಗೆ ಎಳವೆಯಲ್ಲೇ ಅನೇಕ ಸೃಜನಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಈ ದಿಸೆಯಲ್ಲಿ ಬಿದ್ಕಲ್ಕಟ್ಟೆ ಶಾಲೆಯಲ್ಲಿ ಹಮ್ಮಿಕೊಂಡಿರುವ ಚಾರಣ ಮಾಸಪತ್ರಿಕೆಯ ಅನಾವರಣ ಕಾರ್ಯಕ್ರಮ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಒಂದು ಅತ್ಯುತ್ತಮ ಸೃಜನಶೀಲ ಚಟುವಟಿಕೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಪ್ರಧಾನ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಕುಂದಾಪುರ ವಲಯದ ಬಿದ್ಕಲ್ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸತೀಶ ಅಡಿಗ ಮತ್ಯಾಡಿ ಇವರು ತಮ್ಮ ಮಗ ವಿಕಾಸನ ಹುಟ್ಟುಹಬ್ಬದ ಪ್ರಯುಕ್ತ ಪ್ರಾಯೋಜಿಸಿದ ಮಕ್ಕಳ ಸಾಹಿತ್ಯದೊಲವಿನ ವೇದಿಕೆಯಾದ ಚಾರಣ ಮಾಸ ಪತ್ರಿಕೆ ಹಾಗೂ ವಿಜ್ಞಾನ…
