ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗೋರಕ್ಷಕನೆಂಬ ಮುಖವಾಡ ಧರಿಸಿ ಕೊಲೆ, ಸುಲಿಗೆ ಹಾಗೂ ನೈತಿಕ ಪೋಲಿಸ್ಗಿರಿ ಮೂಲಕ ಮತೀಯ ಭಾನೆಗಳನ್ನು ಕೆರಳಿಸಿ ಸಮಾಜದ ಸ್ವಾಸ್ಥ್ಯ ಹಾಗೂ ಸಾಮರಸ್ಯ ಹಾಳುಮಾಡುವ ಸಂಘಟನೆಗಳನ್ನು ಮಟ್ಟಹಾಕಬೇಕು ಎಂದು ಶಾಸಕ. ಕೆ. ಗೋಪಾಲ ಪೂಜಾರಿ ಸರಕಾರವನ್ನು ಆಗ್ರಹಿಸಿದರು. ಕೆಂಜೂರು ಪ್ರವೀಣ್ ಪೂಜಾರಿ ಹತ್ಯೆ ಖಂಡಿಸಿ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಜಂಟಿಯಾಗಿ ಶುಕ್ರವಾರ ಹಮ್ಮಿಕೊಂಡ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿ ಸಂಘಟನೆ ಹೆಸರಿನಲ್ಲಿ ಕಾಲೇಜಿನ ಯುವಕರನ್ನು ಪ್ರಚೋದಿಸಿ ದಾರಿತಪ್ಪಿಸುತ್ತಿದ್ದಾರೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಎಚ್ಚರವಹಿಸಬೇಕು. ಕೇಸರಿಶಾಲು ಮತ್ತು ಕೆಂಪುನಾಮ ಹಾಕಿಕೊಂಡು ಕೊಲೆ, ಸುಲಿಗೆ, ಗೂಂಡಾಗಿರಿ ಮುಂತಾದ ಹೀನಾಯ ಕೃತ್ಯ ಎಸಗುವವರ ವಿರುದ್ದ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದರು. ದೇಶದ ಸ್ವಾತಂತ್ರ್ಯ ತಂದುಕೊಟ್ಟ ಹಾಗೂ ಇತಿಹಾಸ ಹೊಂದಿರುವ ಪಕ್ಷದ ಬಗ್ಗೆ ಬಿಜೆಪಿ ಹಾಗೂ ಸಂಘಪರಿವಾರದವರಿಗೆ ಮಾತನಾಡುವ ನೈತಿಕತೆಯಿಲ್ಲ. ದೇಶಕ್ಕಾಗಿ ಯಾವುದೇ ಬಲಿದಾನ ನೀಡದ ಬಿಜೆಪಿಯವರು ಪ್ರವೀಣ್ ಪೂಜಾರಿಯಂತಹ ಅಮಾಯಕರನ್ನು ಬಲಿಪಶುಗಳನ್ನಾಗಿಸಿ ಹಾಗೂ ದೇಶದ ಜನರ ಮುಂದೆ ಸುಳ್ಳು-ಪೊಳ್ಳು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ, ಗ್ರಾ.ಪಂ. ಹಕ್ಲಾಡಿ, ಎಸ್.ಡಿ.ಎಂ.ಸಿ ಸ.ಕಿ.ಪ್ರಾ. ಶಾಲೆ ಯಳೂರು – ತೊಪ್ಲು ಇವುಗಳ ಆಶ್ರಯದಲ್ಲಿ ಸರಕಾರಿ, ಕಿರಿಯ ಪ್ರಾಥಮಿಕ ಶಾಲೆ ಯಳೂರು – ತೊಪ್ಲು ಇಲ್ಲಿ ಪೈಪ್ ಕಂಪೋಸ್ಟ್ ಘಟಕಕ್ಕೆ ರೋಟರಿ ಅಧ್ಯಕ್ಷ ಉದಯ ಕುಮಾರ ಶೆಟ್ಟಿ ಚಾಲನೆ ನೀಡಿದರು. ರೋಟರಿ ಕಾರ್ಯದರ್ಶಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಸಾಲ್ಗದ್ದೆ ಶಶಿಧರ್ ಶೆಟ್ಟಿ ಪೈಪ್ ಕಂಪೋಸ್ಟನ ಉದ್ದೇಶ, ತಯಾರಿ, ಬಳಕೆ ಮತ್ತು ವಿಲೇವಾರಿ ಹಾಗೂ ಅದರ ಪರಿಣಾಮವನ್ನು ಪರಿಸರದ ಜನರಿಗೆ ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ ಪಂ. ಸದಸ್ಯರಾದ ಸತೀಶ ಶೆಟ್ಟಿ, ಶ್ರೀಮತಿ ಗುಲಾಬಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸಿಂಗಾರಿ, ಉಪಾಧ್ಯಕ್ಷೆ ಶ್ರೀಮತಿ ಸಾಕು, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ವಿದ್ಯಾಭಿಮಾನಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಸ್ತಿಪಟು ಆದರ್ಶ ಕುಮಾರ್ ಶೆಟ್ಟಿ ಮಾತನಾಡಿ, ಕುಸ್ತಿಯನ್ನು ಬಹಳ ಶೃದ್ಧೆ, ಭಕ್ತಿ ಮತ್ತು ಶಿಸ್ತಿನಿಂದ ಕಲಿಯಬೇಕು. ಹಾಗೆ ಪ್ರಯತ್ನಪೂರ್ವಕವಾಗಿ ಯಶಸ್ವಿ ಕುಸ್ತಿಪಟುವಾಗಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿಶ್ವಸ್ಥರಾದ ಪ್ರಕಾಶ್ ಟಿ ಸೋನ್ಸ್, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಆರ್.ಬಿ.ನಾಯ್ಕ್, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕರಾದ ಶ್ರೀಧರ ಶೆಟ್ಟಿ, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ದೈಹಿಕ ನಿರ್ದೇಶಕರ ಸಂಘದ ಅದ್ಯಕ್ಷರಾದ ವಸಂತ ಶೆಟ್ಟಿ, ಗೌರವಾಧ್ಯಕ್ಷರಾದ ಶರತ್ ರಾವ್, ಬಸ್ರೂರಿನ ಶ್ರಿ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಯಪ್ರಕಾಶ ಶೆಟ್ಟಿ, ಭಂಡಾರ್ಕಾರ್ಸ್ ಪದವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿನೆವಾದಲ್ಲಿ ಕೈಗೊಂಡ ನಿರ್ಣಯಗಳು. ರೆಡ್ಕ್ರಾಸ್ ಸಂಸ್ಥೆ ಬೆಳೆದು ಬಂದ ದಾರಿ ಮತ್ತು ಅದು ಅಂತರಾಷ್ಟ್ರೀಯ ಸಂಸ್ಥೆಯಾಗಿ ಗುರುತಿಸಿಕೊಂಡ ಬಗ್ಗೆ ಹಾಗೂ ಇದೇ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ಕುಂದಾಪುರದ ಹಿರಿಯ ನ್ಯಾಯವಾದಿ ಗಿಳಿಯಾರು ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು. ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ಆಶ್ರಯದಲ್ಲಿ ಜಿನೆವಾ ಕನ್ವೆನ್ಶನ್ ಡೇ ದಿನ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ರೆಡ್ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ ಶೆಟ್ಟಿ, ರೆಡ್ಕ್ರಾಸ್ ಸೊಸೈಟಿಯ ಸಂಯೋಜಕ ಮುತ್ತಯ್ಯ ಶೆಟ್ಟಿ, ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ, ಉಪನ್ಯಾಸಕ ಪ್ರವೀಣ್ ಮೊಗವೀರ ಮತ್ತು ಜ್ಯೋತಿ ಮೊಗವೀರ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ಸಂಯೋಜಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಸ್ವಾಗತಿಸಿದರು. ಸಹ ಸಂಯೋಜಕ ಶಿವರಾಜ್ ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿ ದೀಕ್ಷಿತ್ ಅತಿಥಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ಗೃಹಸಚಿವ ಡಾ| ಜಿ. ಪರಮೇಶ್ವರ್ ಅವರು ಪತ್ನಿ ಕನ್ನಿಕಾ ಸಮೇತರಾಗಿ ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಅಡಿಗ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ತಾ.ಪಂ. ಮಾಜಿ ಸದಸ್ಯ ರಮೇಶ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣದ ಮೂಲ ಉದ್ದೇಶ ಶಿಕ್ಷಣ ಪಡೆಯುವುದು ಮಾತ್ರವಲ್ಲ. ಶಿಕ್ಷಣ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಸಮಾಜಮುಖಿ ಕೆಲಸ ಮಾಡಿಕೊಂಡು ಬಂದಾಗ ಮಾತ್ರ ಕಲಿತ ವಿಷಯಕ್ಕೆ ಗೌರವಕೊಟ್ಟಾಂತಾಗುತ್ತದೆ ಎಂದು ಪ್ರಥಮ ದರ್ಜೆ ಗುತ್ತಿಗೆದಾರ ಜೆ.ಪಿ.ಶೆಟ್ಟಿ ಕಾಳಾವರ ಹೇಳಿದರು. ಬುಧವಾರ ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ತರಗತಿ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಸಭೆಯ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿ ಬ್ರಹ್ಮಾವರ ಬಿ.ಡಿ. ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಎಂ. ಹೆಗಡೆ ಮಾತನಾಡಿ ವಿದ್ಯಾರ್ಥಿಗಳು ತಮ್ಮೊಳಗೆ ಇರುವ ಸಾಮರ್ಥ್ಯವನ್ನು ಮೊದಲು ತಿಳಿದುಕೊಳ್ಳಬೇಕು. ಆಗ ಜೀವನದಲ್ಲಿ ಧೈರ್ಯವಾಗಿ ಮುಂದೆ ಬರಲು ಸಾಧ್ಯ. ಇತನ್ನಿತರ ಸಮಾಜಮುಖಿ ವಿಷಯಗಳ ಬಗ್ಗೆ ಹವ್ಯಾಸ ಬೆಳಸಿಕೊಂಡಾಗ ವಿದ್ಯಾರ್ಥಿ ಜೀವನದಲ್ಲಿ ಯಶ್ವಸಿಯಾಗಲು ಸಾಧ್ಯ ಎಂದು ನೂತನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಚಿತ್ತೂರು ವಲಯ ಹಾಗೂ ಗ್ರಾಮ ಪಂಚಾಯತ್ ಚಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಸ್ವಚ್ಛತಾ ಅಂದೋಲನ ಇತ್ತೀಚೆಗೆ ಜರಗಿತು. ಡಾ|ಅತುಲ್ ಕುಮಾರ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿತ್ತೂರು ಪಂಚಾಯತ್ ಅಧ್ಯಕ್ಷರಾದ ಸಂತೋಷ ಮಡಿವಾಳ, ಚಿತ್ತೂರು ವಲಯಾಧ್ಯಕ್ಷರಾದ ದಿವಾಕರ ಆಚಾರ್ಯ, ವಲಯ ಮೇಲ್ವಿಚಾರಕಿ ಪ್ರೇಮಾ, ಗ್ರಾ.ಪಂ.ಸದಸ್ಯರು, ಸೇವಾ ಪ್ರತಿನಿದಿಗಳಾದ ಮಮತಾ, ರೇವತಿ, ಪ್ರೇಮಾ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವನಾಗಿ ಹುಟ್ಟಿ ದೈತ್ವಕ್ಕೇರಿದ ಶ್ರೀ ಕೃಷ್ಣ ಗುರು-ಹಿರಿಯರಲ್ಲಿ ಭಕ್ತಿ, ಬ್ರಾತ್ವತ್ವ, ಸ್ನೇಹ, ನಂಬಿಕೆ, ಸಂಬಂಧಗಳ ಮಹತ್ವ ಪ್ರಪಂಚಕ್ಕೆ ಅರುಹಿದ ಸರ್ವಕಾಲಿಕ ಶ್ರೇಷ್ಠ ವ್ಯಕ್ತಿ ಶ್ರೀ ಕೃಷ್ಣ ಪರಮಾತ್ಮ ಎಂದು ಕುಂದಾಪುರ ತಾಲೂಕ್ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಸುಧಾಕರ ಮೊಗವೀರ ಹೇಳಿದರು. ಕುಂದಾಪುರ ತಾಲೂಕು ಪಂಚಾಯತ್ ಮತ್ತು ಕುಂದಾಪುರ ತಾಲೂಕು ಆಡಳಿತ ಆಶ್ರಯದಲ್ಲಿ ಕುಂದಾಪುರ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಿದ್ದರು. ಶ್ರೀ ಕೃಷ್ಣ ಜನ್ಮಾಷ್ಟಮಿ ರಾಷ್ಟ್ರೀಯ ಹಬ್ಬವಾಗಿ ಆಚರಣೆ ಮಾಡುವ ಮೂಲಕ ಶ್ರೀ ಕೃಷ್ಣ ಸಂದೇಶ ಜನಸಾಮಾನ್ಯರಲ್ಲೂ ತುಂಬಲು ಸಹಕಾರಿಯಾಗಲಿದೆ ಎಂದ ಅವರು, ಶ್ರೀ ಕೃಷ್ಣನ ವ್ಯಕ್ತಿತ್ವ ಮೂಲಕ ಉತ್ತಮ ನಾಯಕತ್ವ ಗುಣ ಬೆಳಸಿಕೊಳ್ಳಲು ಪೂರಕವಾಗಲಿದೆ. ಶ್ರೀ ಕೃಷ್ಣಾವತಾರದ ಮೂಲಕ ದುಷ್ಟರ ನಿಗ್ರಹಿಸಿ, ಶಿಷ್ಟರ ಪಾಲಿಸಿ, ಶಾಂತಿ ಸೌಹಾರ್ದತೆ ಸ್ಥಾಪಿಸಿದ್ದು, ಕೃಷ್ಣನ ಆದರ್ಶಗಳ ಪಾಲನೆ ಮೂಲಕ ಕೃಷ್ಣ ತತ್ವ ನಮ್ಮ ಬದುಕಲ್ಲಿ ಅಳವಿಡಿಸಿಕೊಂಡರೆ ಎಲ್ಲರೂ ಉನ್ನತ ಮಟ್ಟಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ನ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳು ಕೃಷ್ಣಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಿದರು. ಪುಟಾಣಿ ಮಕ್ಕಳು ಮುದ್ದು ರಾಧೆ, ಮುದ್ದು ಕೃಷ್ಣನ ವೇಷ ತೊಟ್ಟು, ಮೊಸರು ಕುಡಿಕೆ, ಕೊಳಲು ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂಭ್ರಮಿಸಿದರು. ಈ ಪ್ರಯುಕ್ತವಾಗಿ ಮುದ್ಧು ರಾಧೆ ಮುದ್ಧು ಕೃಷ್ಣರಿಗೆ ಬಹುಮಾನವನ್ನು ನೀಡುವುದರ ಜೊತೆಗೆ ಸಿಹಿತಿನಿಸುಗಳನ್ನು ಹಂಚುವುದರ ಮೂಲಕ ಕೃಷ್ಣಜನ್ಮಾಷ್ಟಮಿಯ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನುಪಮ ಎಸ್.ಶೆಟ್ಟಿ, ಮುಖ್ಯ ಶಿಕ್ಷಕಿ ವಿಶಾಲಾ ಶೆಟ್ಟಿ ಹಾಗೂ ಸಹ ಶಿಕ್ಷಕಿಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಪ್ಪಳ: ಕೊಪ್ಪಳ ಜಿಲ್ಲಾ ನಾಗರೀಕರ ಸಾಂಸ್ಕೃತಿಕ ವೇದಿಕೆ, ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಮತ್ತು ಸಂಘ ಸಂಸ್ಥೆಗಳು ಆಯೋಜಿಸುತ್ತಿರುವ ಕೊಪ್ಪಳ ಜಿಲ್ಲಾ ಉತ್ಸವದ ದಶಮಾನೋತ್ಸವದಲ್ಲಿ ಉಡುಪಿಯ ಸಮಾಜ ಸೇವಕ ಉಡುಪಿ ವಿಶ್ವನಾಥ ಪೈ, ಹಿರಿಯ ಕವಿಗಳಾದ ಅಂಶುಮಾಲಿ, ಡಾ.ವಸಂತ ಕುಮಾರ್, ಶೇಖರ ಅಜೆಕಾರು ಸಹಿತ ಹನ್ನೆರಡು ಮಂದಿಗೆ ದಶಮಾನೋತ್ಸವ ಮತ್ತು ಡಾ. ಸಿದ್ದಯ್ಯ ಪುರಾಣಿಕ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಜಿಲ್ಲೆಗಳ ನಡುವೆ ಸೌಹಾರ್ದ ಬೆಳಸಲು ದಶಮಾನೋತ್ಸವಕ್ಕೆ ಕರಾವಳಿಯ ಉಡುಪಿ, ದ.ಕ, ಕಾಸರಗೋಡು ಮತ್ತು ಮುಂಬಯಿಯ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಶಮಾನೋತ್ಸವ ಗೌರವ: ವಿಶ್ವನಾಥ ಶೆಣೈ ಸಮಾಜ ಸೇವಕರು-ಉಡುಪಿ, ವಿ.ಕೆ.ಸುವರ್ಣ -ರಂಗ ಕಲಾವಿದರು ಮುಂಬಯಿ, ಶೇಖರ ಅಜೆಕಾರು, ಪತ್ರಕರ್ತರು-ಉಡುಪಿ, ಚಿತ್ತೂರು ಪ್ರಭಾಕರ ಆಚಾರ್ಯ- ಅಧ್ಯಕ್ಷರು ಕಾರ್ಯ ನಿರತ ಪತ್ರಕರ್ತರ ಸಂಘ ಬ್ರಹ್ಮಾವರ, ಎಸ್.ಆರ್. ಬಂಡಿಮಾರ್- ಸಂಪಾದಕರು-ಟೈಮ್ಸ್ ಆಫ್ ಕುಡ್ಲ ತುಳುವಾರ ಪತ್ರಿಕೆ, ವಸಂತಕುಮಾರ್ ಬೆಳ್ತಂಗಡಿ- ವ್ಯವಸ್ಥಾಪಕ ಸಂಪಾದಕರು ಜನಬಿಂಬ ವಾರಪತ್ರಿಕೆ…
