Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಧರ್ಮ ಪಾಲನೆ, ಸತ್ಯದ ಹಾದಿ ಹಾಗೂ ಉತ್ತಮ ನಡೆ ನುಡಿಯ ಮೂಲಕ ನಮ್ಮೊಳಗಿನ ದೇವರನ್ನು ಶುದ್ಧವಾಗಿರಿಸಿಕೊಂಡರೆ ಬದುಕಿನಲ್ಲಿ ನೆಮ್ಮದಿಯನ್ನು ಕಾಣಲು ಸಾಧ್ಯ. ನೆಮ್ಮದಿದ್ದರೆ ಆತ್ಮವಿಶ್ವಾಸ ಬೆಳೆಯುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಉಪ್ಪುಂದ ರಾಣಿಬಲೆ ಮೀನುಗಾರ ಒಕ್ಕೂಟದಿಂದ ಕೊಡಮಾಡಿದ ನೂತನ ಬೆಳ್ಳಿರಥವನ್ನು ಸಮರ್ಪಿಸಿದ ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶಿರ್ವಚನವಿತ್ತರು. ತಂದೆ ತಾಯಿ ನಮ್ಮನ್ನು ಸಲಹಿದ ರೀತಿಯಲ್ಲಿಯೇ ಪ್ರಕೃತಿಯೂ ನಮ್ಮನ್ನು ಸಲಹುತ್ತದೆ. ನಮ್ಮ ಇತಿಮಿತಿಯ ಎಲ್ಲೆ ಮೀರಿ ವರ್ತಿಸಿದರೆ ಪ್ರಕೃತಿ ವಿಕೋಪದಂತಹ ಅವಘಡಗಳು ಸಂಭವಿಸುತ್ತವೆ. ನಮ್ಮ ಪರಿಧಿಯಲ್ಲಿ ಶ್ರದ್ಧೆ, ಸತ್ಯ, ಧರ್ಮದಿಂದ ನಡೆದಾಗ ಎಲ್ಲವೂ ನಮಗೆ ಪೂರಕವಾಗಿರುತ್ತದೆ ಎಂದರು. ಯೋಚನೆ ಮಾಡಿ ದಾನ ಮಾಡಿದರೆ ಅದರಿಂದ ದೊರೆಯಬೇಕಾದ ಪುಣ್ಯಫಲ ದೊರೆಯದು. ಶ್ರಿಮಂತರು ಕಟ್ಟಿದ ದೇವಸ್ಥಾನಗಳು ಹೆಚ್ಚು ಕಾಲ ಉಳಿಯದು. ಫಲಾಪೇಕ್ಷೆ ಇಲ್ಲದ ದಾನ, ಭಕ್ತರು ಕಟ್ಟಿದ ದೇವಸ್ಥಾನ ಎಂದಿಗೂ…

Read More

ಕುಂದಾಪ್ರ ಡಾಟ್ ಕಾಂ ಲೇಖನ. ಆಕಸ್ಮಿಕಗಳು ನಡೆಯುವುದೇ ಹಾಗೆ. ಆಕಸ್ಮಿಕವಾಗಿ! ಬಹುನಿರೀಕ್ಷಿತ ‘ಕತ್ತಲೆಕೋಣೆ’ ಕನ್ನಡ ಸಿನೆಮಾದ ಶೂಟಿಂಗ್ ವೇಳೆ ಸಂಭವಿಸಿದ ಆಕಸ್ಮಿಕ ಘಟನೆಗಳು ಇಡಿ ಚಿತ್ರತಂಡವನ್ನು ಆಶ್ಚರ್ಯಕ್ಕೆ ನೂಕಿರುವುದಲ್ಲದೇ ಒಂದಿಷ್ಟು ಭಯ ಹಾಗೂ ಆತಂಕವನ್ನುಂಟುಮಾಡಿದೆ. ಒಂದು ಹಂತದಲ್ಲಿ ಅಂದುಕೊಂಡಂತೆ ನಡೆಯುತ್ತಿದ್ದ ಚಿತ್ರೀಕರಣದ ನಡುವೆಯೇ ಹಲವು ಘಟನೆಗಳು ಕೈಮೀರಿ ಘಟಿಸಿವೆ. ಶೂಟಿಂಗ್ ವೇಳೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಹೊರತಾಗಿಯೂ ನಡೆದ ಇಂತಹ ಘಟನೆಗಳು ಒಂದು ತೆರನಾದ ಭಯವನ್ನು ಸೃಷ್ಠಿಸಿಬಿಟ್ಟಿವೆ. ಘಟನೆ 1 ಅದು ಕುಂದಾಪುರದ ತಾಲೂಕಿನ ಒಂದು ಕಾಡುದಾರಿ. ಸೀನ್ ಒಂದರಲ್ಲಿ ಮರದ ಮೇಲಿರಿ ನಟಿಸುತ್ತಿದ್ದ ಕಲಾವಿದ. ಇನ್ನೇನು ಆತ ಕೆಳಕ್ಕಿಳಿಬೇಕು ಎಂಬಷ್ಟರಲ್ಲಿ ಹಠಾತ್ತನೆ ಮರದ ಕೊಂಬೆಯೇ ತುಂಡಾಯಿತು. ನೋಡನೋಡುತ್ತಿದ್ದಂತೆಯೇ ಕೊಂಬೆಯೊಂದಿಗೆ ೮ ಅಡಿ ಎತ್ತರದಿಂದ ಆತ ನೆಲಕ್ಕುರುಳಿದ. ಅಷ್ಟು ಮೇಲಿಂದ ಬಿದ್ದರೂ ಅದೃಷ್ಟವಶಾತ್ ಆತ ಅಪಾಯದಿಂದ ಪಾರಾಗಿದ್ದ! ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಂಡಿದ್ದರೂ ಇಂತಹದ್ದೊಂದು ಅವಘಡ ಸಂಭವಿಸಿಬಿಟ್ಟಿತ್ತು. ಎಲ್ಲವನ್ನೂ ಪರೀಕ್ಷಿಸಿದ ಬಳಿಕವಷ್ಟೇ ಮರವೇರಿದ್ದರೂ ಕೊಂಬೆ ಮುರಿದ್ದದ್ದು ಹೇಗೆ ಎಂಬುದು ಮಾತ್ರ ಚಿತ್ರತಂಡವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೂರಿಪ್ಪತ್ತೈದು ವರ್ಷದ ಹಿಂದೆ ಸ್ವಾಮೀ ವಿವೇಕಾನಂದರ ಸಿಂಹ ನುಡಿಯ ಮೂಲಕ ವಿದೇಶಿಯರು ಭಾರತ ನೋಡುವ ದೃಷ್ಟಿ ಬದಲಾಯಿತು. ಇದೇ ವಿವೇಕವಾಣಿಯ ಪ್ರೇರಣೆಯಿಂದ ಇಂದು ಭಾರತಕ್ಕೆ ಧಮ್ಕಿ ಹಾಕುವ ದೇಶಗಳಿಗೆ ತಿರುಗೇಟು ನೀಡುವಷ್ಟು ಸಾಮರ್ಥ್ಯ ದೇಶಹೊಂದಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯಪಟ್ಟರು. ಮತ್ತೊಮ್ಮೆ ದಿಗ್ವಿಜಯ ವಿವೇಕಾನಂದರ ಭಾರತದಲ್ಲಿ ಕಾರ‍್ಯಾಚರಣೆ ವಿಚಾರ ಗೋಷ್ಠಿಯಲ್ಲಿ ಮಾತನಾಡಿ, ಮತ್ತೊಮ್ಮೆ ವಿವೇಕವಾಣಿಯಿಂದ ಯುವ ಸಮಾಜ ಜಾಗೃತವಾಗಿದೆ. ಇದರ ಹಿನ್ನೆಲೆಯಲ್ಲಿ ಈ ಬದುಕು ದೇಶಕ್ಕಾಗಿ ಎಂಬ ವಿವೇಕಾನಂದ ಜೀವನ ಮೌಲ್ಯವಿದೆ ಎಂದು ಹೇಳಿದರು. ಸ್ವಾತಂತ್ರ ಪೂರ್ವದ ಕ್ರಾಂತಿಕ್ರಾರಿಗಳ ಪಟ್ಟಿಯಲ್ಲಿ ವಿವೇಕಾನಂದ ಮೊದಲ ಸ್ಥಾನದಲ್ಲಿದ್ದು ಅವರಲ್ಲಿ ಒಬ್ಬ ಕ್ರಾಂತಿಕಾರಿ ಹುಟ್ಟಿಕೊಂಡಿದ್ದ. ದೇಶದ ದಾಸ್ಯ ಮುಕ್ತಿಗೆ ವಿವೇಕಾನಂದ ದೇಶ ಸುತ್ತಿ ಮಾಡಿದ ಭಾಷಣ ಜಾಗೃತಿ ಮೂಡಿಸಿ, ಸಮಾಜದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದರು ಎಂದು ಹೇಳಿದರು. ವಿವೇಕಾನಂದರನ್ನು ಶ್ರೇಷ್ಟ ಬುದ್ದಿವಂತ ಎಂದು ವಿಶ್ವವೇ ಒಪ್ಪಿಕೊಳ್ಳುವಂತೆ ಅವರ ಚಿಕಾಗೋ ಬಾಷಣ ಮಾಡಿದರೆ, ಸದಾ ದೇಶದ ಬಗ್ಗೆ ಚಿಂತಿಸುತ್ತಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜನ್ಮ ಶತಾಬ್ದಿ, ಸಿಲ್ವರ್ ಜೂಬಲಿ, ಗೋಲ್ಡನ್ ಜೂಬಲಿ ಆಚರಣೆ ನಡೆಯೋದು ಸಹಜ. ಆದರೆ ಒಬ್ಬ ವ್ಯಕ್ತಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ೧೨೫ನೇ ವರ್ಷ ಆಚರಣೆ ಮಾಡಲಾಗುತ್ತದೆ! ಇದಕ್ಕೆ ಕಾರಣ ಚಿಕಾಗೋ ಭಾಷಣ. ವಿವೇಕಾನಂದರು ಓದಿದ್ದು ಮಾತ್ರ ಅಲ್ಲ ಅಮೂಲಾಗ್ರ ಅಧ್ಯಯನದ ಮೂಲಕ ಭಾರತವನ್ನು ಅರಿತುಕೊಂಡರು. ಒಮ್ಮೆ ವಿವಾಕಾನಂದ ಹುಟ್ಟಿರದಿದ್ದರೆ ಎಂಬ ಕಲ್ಪನೆಯೇ ಭಯ ಹುಟ್ಟಿಸುತ್ತದೆ. ಭಾರತೀಯ ಸಂಸ್ಕೃತಿ, ಧರ್ಮ ಜೀವಂತವಾಗಿದೆ ಎಂದರೆ ಅದಕ್ಕೆ ಕಾರಣ ಸ್ವಾಮಿ ವಿವೇಕಾನಂದರು ಎಂದು ಮಂಗಳೂರು ಶ್ರೀ ರಾಮಕೃಷ್ಣ ಮಠ ಧರ್ಮವೃತಾನಂದ ಸ್ವಾಮೀಜಿ ಹೇಳಿದರು. ಕುಂದಾಪುರ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಯುವ ಬ್ರಿಗೇಡ್ ಕುಂದಾಪುರ ಹಮ್ಮಿಕೊಂಡ ಸ್ವಾಮಿ ವಿವೇಕಾನಂದ ಸಿಡಿಲ ಭಾಷಣಕ್ಕೆ ೧೨೫ ’ಮತ್ತೊಮೆ ದಿಗ್ವಿಜಯ’ ಕಾರ‍್ಯಕ್ರಮ ಉದ್ಘಾಟಿಸಿ ಮಾಡತಾಡುತ್ತಿದ್ದರು. ನಮ್ಮ ಧರ್ಮವೇ ಶ್ರೇಷ್ಠ ಎಂದು ವಿಶ್ವಕ್ಕೆ ತೋರಿಸುವ ಹಿನ್ನೆಲೆಯಲ್ಲಿ ನಡೆದ ಚಿಕಾಗೋ ಸರ್ಮಧರ್ಮ ಸಮ್ಮೇಳನದಲ್ಲಿ ವಿವೇಕಾನಂದರ ಭಾಗವಹಿಸದಿದ್ದರೆ ಏನಾಗುತ್ತಿತ್ತು ಎನೋದನ್ನ ಉಹಿಸುವುದು ಕಷ್ಟ. ಕೇವಲ ಎರಡೂವರೆ ನಿಮಿಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಗೂರು ಕುಸುಮ ಫೌಂಡೇಶನ್ ಇವರ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಕುಸುಮಾಂಜಲಿ-2017’ ಡಿ.24 ಭಾನುವಾರ ನಾಗೂರಿನಲ್ಲಿ ಸಂಜೆ ಗಂಟೆ 4ಕ್ಕೆ ನಡೆಯಲಿದೆ. ವಿಶೇಷ ಅಥಿತಿಯಾಗಿ ಕಟೀಲು ಎಸ್‌ಡಿಪಿಟಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಂಪಾಲ ಪ್ರೊ. ಎಮ್. ಬಾಲಕೃಷ್ಣ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ‘ಕುಸುಮಾಂಜಲಿ 2017’ ರ ಪೂರ್ವಭಾವಿಯಾಗಿ ನಡೆದ ಸಂಗೀತ ಸ್ಪರ್ಧೆ ಗಾನಕುಸುಮ ಕಾರ್ಯಕ್ರಮದಲ್ಲಿ ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿಗಳ ಸಂಗೀತ ಕಾರ್ಯಕ್ರಮ ಸಂಜೆ ಗಂಟೆ ೫ರಿಂದ ಆರಂಭವಾಲಿದ್ದು, ನಂತರ ಗಾನಕುಸುಮ ಪ್ರಶಸ್ತಿಯನ್ನು ನೀಡಲಾಗುವುದು. ಈ ಸಂದರ್ಭ ಕುಸುಮಾಂಜಲಿ 2017ರ ಚಾನಲ್ ಪಾರ್ಟನರ್ ಮುಂಬೈನ ಶುಭಸಾಗರ್ ಗ್ರೂಫ್ ಆಪ್ ಹೋಟೆಲ್ಸ್‌ನ ಆಡಳಿತ ನಿರ್ದೇಶಕ ಲಕ್ಷ್ಮಣ ಪೂಜಾರಿ ಕುಸುಮ ಫೌಂಡೇಶನ್ ಸಂಸ್ಥೆಯ ಒಂದು ಘಟಕವಾದ ‘ಬ್ಲೋಸಮ್ ಸ್ಕೂಲ್ ಆಪ್ ಮ್ಯೂಸಿಕ್ & ಡಾನ್ಸ್’ ಸ್ಕೂಲ್ ಉದ್ಘಾಟಿಸಲಿದ್ದಾರೆ. ಕುಸುಮಾಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ನಳಿನ್ ಕುಮಾರ್ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಬಹುಮತದೊಂದಿಗೆ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬೈಂದೂರಿನಲ್ಲಿ ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಕುಂದಾಪುರದಲ್ಲಿ ನಡೆದ ವಿಜಯೋತ್ಸವದಲ್ಲಿ ಕುಂದಾಪುರ ಬಿಜೆಪಿ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಭಾಸ್ಕರ ಬಿಲ್ಲವ, ಮಹಿಳಾ ಮೋರ್ಚಾ ಅಧ್ಯಕ್ಷೆ ಜಾನಕಿ ಬಿಲ್ಲವ, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಪುರಸಭಾ ಉಪಾಧ್ಯಕ್ಷ ರಾಜೇಶ್ ಕಾವೇರಿ, ಸದಸ್ಯ ವಿಜಯ ಪೂಜಾರಿ, ರವಿರಾಜ ಖಾರ್ವಿ, ಮೀನುಗಾರರ ಪ್ರಕೋಷ್ಠದ ಸದಾನಂದ ಬಳ್ಕೂರು, ಯುವ ಮೊರ್ಚಾ ಅಧ್ಯಕ್ಷ ಸತೀಶ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಬೈಂದೂರಿನಲ್ಲಿ ನಡೆದ ವಿಜಯೋತ್ಸವದಲ್ಲಿ ಜಿ.ಪಂ. ಸದಸ್ಯರಾದ ಸುರೇಶ್ ಬಟವಾಡಿ, ಕೆ. ಬಾಬು ಶೆಟ್ಟಿ, ಪಕ್ಷದ ಪ್ರಮುಖರಾದ ಸದಾಶಿವ ಡಿ.ಪಡುವರಿ, ಜಯಾನಂದ ಹೋಬಳಿದಾರ್, ಶಂಕರ ದೇವಾಡಿಗ ಬಂಕೇಶ್ವರ, ಗೋಪಾಲ ಗಾಣಿಗ ಬಂಕೇಶ್ವರ, ಸಸಿಹಿತ್ಲು ವೆಂಕಟ ಪೂಜಾರಿ, ದೀಪಕ್ ಕುಮಾರ್ ಶೆಟ್ಟಿ, ಕೃಷ್ಣಯ್ಯ ಮಯ್ಯಾಡಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಕುಂದಾಪುರದ ಕೊಂಕಣಿ ಖಾರ್ವಿ ಸಮಾಜ ಭಾಂದವರು ಇಲ್ಲಿನ ಶ್ರೀ ಮಹಾಕಾಳಿ ದೇವಸ್ಥಾನ ಹಾಗೂ ವಿದ್ಯಾರಂಗ ಮಿತ್ರಮಂಡಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕೊಂಕಣ ಖಾರ್ವಿ ಸಮಾಜದ ಯುವಕನಾದ ಪರೇಶ್ ಮೇಸ್ತನ ಸಾವು ಅನುಮಾನ ಮುಡಿಸುತ್ತಿರುವುದಲ್ಲದೇ ಆತನ ಮರಣೋತ್ತರ ಪರೀಕ್ಷೆ ಸರಿಯಾಗಿ ನಡೆದಿರುವ ಬಗ್ಗೆ ಸಂಶಯವಿದೆ. ಈ ಬಗ್ಗೆ ಮರುಪರಿಶೀಲಿಸಿ ಆತನ ಒದಗಿಸಿಕೊಡಬೇಕೆಂದ ಅವರು ಆಗ್ರಹಿಸಿದರು. ಕುಂದಾಪುರ ಶ್ರೀ ಮಹಾಕಾಳಿ ದೇವಸ್ಥಾನದಿಂದ ಮೌನ ಮೆರವಣಿಗೆ ಹೊರಟು ಶಾಸ್ತ್ರಿ ವೃತ್ತದಿಂದ ಕುಂದಾಪುರ ಮಿನಿವಿಧಾನಸೌಧಕ್ಕೆ ತೆರಳಿ ತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಕೊಂಕಣ ಖಾರ್ವಿ ಸಮಾಜದ ಪ್ರಮುಖರು ಮೌನ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ ಬೈಂದೂರು ಆಶ್ರಯದಲ್ಲಿ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ನಾಡೋಜ ಏಣಗಿ ಬಾಳಪ್ಪ ಸಂಸ್ಮರಣೆಯ ರಂಗ ಸುರಭಿ 2017 ರಾಜ್ಯ ಮಟ್ಟದ ನಾಟಕೋತ್ಸವವು ಡಿಸೆಂಬರ್ 23ರಿಂದ ಡಿಸೆಂಬರ್ 31ರ ವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ಬೈಂದೂರಿನ ಶ್ರೀ ಶಾರದಾ ವೇದಿಕೆ ಜರುಗಿದೆ ಎಂದು ಸುರಭಿ ರಿ. ಬೈಂದೂರು ಇದರ ನಿರ್ದೇಶಕ ಸುಧಾಕರ ಪಿ. ಬೈಂದೂರು ತಿಳಿಸಿದರು. ಬೈಂದೂರಿನಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಾಟಕೋತ್ಸವದ ವಿವರ ನೀಡಿದರು. ಡಿಸೆಂಬರ್23 ಶನಿವಾರ ಭೂಮಿಕಾ ಹಾರಾಡಿ ಪ್ರಸ್ತುತಿಯ ನಾಟಕ ’ಮದುವೆ ಹೆಣ್ಣು’ ರಚನೆ ಡಾ. ಎಚ್. ಎಸ್ ಶಿವಪ್ರಕಾಶ್, ನಿರ್ದೇಶನ: ರೋಹಿತ್ ಎಸ್. ಬೈಕಾಡಿ, ಡಿಸೆಂಬರ್24 ಭಾನುವಾರ ಚಿತ್ತಾರ ಬೆಂಗಳೂರು ಪ್ರಸ್ತುತಿಯ ನಾಟಕ ’ಸಂಜೆ ಹಾಡು’ ರಚನೆ ಹಾಗೂ ನಿರ್ದೇಶನ ರಾಜೇಂದ್ರ ಕಾತಂತ್ ಬೆಂಗಳೂರು, ಡಿಸೆಂಬರ್25 ಸೋಮವಾರ ರಂಗಸೌರಭ ಬೆಂಗಳೂರು ಪ್ರಸ್ತುತಿಯ ನಾಟಕ ’ಮಾವಿನಗುಡಿ ಕಾಲೋನಿ’…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಶಾಲೆಗಳ ಉಳಿಸುವ ಜವಾಬ್ದಾರಿ ಸರ್ಕಾರಕ್ಕೆ ಸೀಮಿತವಲ್ಲ. ಸಾಹಿತ್ಯ ಪರಿಷತ್ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ಉಳಿಸುವ ಸಾಹಸಕ್ಕೆ ಮುಂದಾಗದಿದ್ದರೆ, ಶಾಲೆ ಕಾಲಕ್ರಮೇಣ ಮುಚ್ಚಿಹೋಗಲಿದೆ. ಸರ್ಕಾರ ಎರಡು ಮಕ್ಕಳಿದ್ದರೂ ಶಾಲೆ ಮುಚ್ಚುವುದಿಲ್ಲ ಎನ್ನುತ್ತಿದ್ದರೂ ಮಕ್ಕಳೇ ಬಾರದಿದ್ದರೆ ಶಾಲೆ ನಡೆಯುವದಾದರೂ ಹೇಗೆ? ಇತರ ಭಾಷೆ ಜತೆ ಕನ್ನಡ ಉಳಿಸುವ ಪ್ರಯತ್ನ ಆಗಬೇಕಿದೆ ಎಂದು ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎ.ಜಿ.ಕೊಡ್ಗಿ ಹೇಳಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಹಕ್ಲಾಡಿ ಎಸ್ಸೆಸ್ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸ್ಮಾರಕ ಪ್ರೌಢ ಶಾಲೆಯಲ್ಲಿ ನಡೆದ ೧೬ನೇ ತಾಲೂಕ್ ಕನ್ನಡ ಸಾಹಿತ್ಯ ಸಮ್ಮೇಳನ ಭೂಮಿಗೀತಾ ಸಮಾರೋಪದಲ್ಲಿ ಮಾತನಾಡಿ, ಕನ್ನಡ ಉಳಿವಿಗಾಗಿ ಏಕೀಕರಣಕ್ಕೆ ಹೋರಾಟ ಮಾಡಬೇಕಿದ್ದರೂ ಬಂದ್, ಆಸ್ತಿಪಾಸ್ತಿಗೆ ಹಾನಿ ಮಾಡದ ಹೋರಾಟದಿಂದ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು. ಇಂದು ಭಾರತೀಯ ಸಂಸ್ಕೃತಿ ಮರೆಯಾಗಿ ಪಾಶ್ಚಿಮಾತ್ಯ ಸಂಸ್ಕೃತಿಗೆ ನಾವು ಒಲಸೆ ಹೋಗುತ್ತಿದ್ದೇವೆ. ಅಂಗ್ಲಾ ವ್ಯಾಮೋಹ ಕನ್ನಡ ಕಡೆಗಣಿಸಲಾಗುತ್ತಿದೆ. ಕನ್ನಡಕ್ಕೆ ಮೊದಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪುನರ್ ರಚನೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶೆಟ್ಟಿಗಾರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ-ಬಸವರಾಜ ಶೆಟ್ಟಿಗಾರ್, ಶ್ರೀಧರ ನಾಯ್ಕ್, ಕೋಶಾಧಿಕಾರಿ- ರಾಜೇಶ ಪ್ರಭು ಹಾಗೂ ರಂಜನ್ ಉಡುಪ, ಕಾರ್ಯದರ್ಶಿ- ಗಣೇಶ ಶೆಟ್ಟಿ, ಜೊತೆ ಕಾರ್ಯದರ್ಶಿ- ನಿತೇಶ್ ಮೊಗವೀರ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ- ನರೇಶ್, ಉಪಾಧ್ಯಕ್ಷ- ಪುರುಷೋತ್ತಮ ಕಾಮತ್, ಕ್ರೀಡಾ ಸಮಿತಿ ಅಧ್ಯಕ್ಷ- ಧೀಕ್ಷಾ ಆಚಾರ್ಯ, ಉಪಾಧ್ಯಕ್ಷ- ಸುಬ್ರಹ್ಮಣ್ಯ ದೇವಾಡಿಗ, ಸಾಮಾಜಿಕ ಜಾಲತಾಣದ ಪ್ರಚಾರ ಸಮಿತಿ- ಶರತ್ ಮೆಂಡನ್, ಪ್ರಮೋದ ಶೆಟ್ಟಿಗಾರ್ ಆಯ್ಕೆಯಾದರು.

Read More