ಕುಂದಾಪುರ: ಹೆಮ್ಮಾಡಿಯ ವಿವಿವಿ ಮಂಡಳಿಗೆ ಸೇರಿದ ಜಾಗವನ್ನು ಪರಭಾರೆ ಮಾಡಿ ಖಾಸಗಿವರಿಗೆ ಶಾಲೆ ನಡೆಸಲು ಅವಕಾಶ ಮಾಡಿಕೊಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು, ಆರೋಪ ಮಾಡುವವರು ದಾಖಲೆ ಸಮೇತ ಸಾಬೀತು ಪಡಿಸಲಿ. ಅದನ್ನು ಬಿಟ್ಟು ಸಾಮಾಜಿಕ ತಾಣಗಳನ್ನು ಬಳಸಿಕೊಂಡು ನನ್ನ ತೇಜೋವಧೆ ಮಾಡುತ್ತಿರುವುದಲ್ಲದೇ, ಹತ್ತಾರು ವರ್ಷಗಳ ಇತಿಹಾಸವಿರುವ ಶಾಲೆಯ ಹೆಸರು ಕೆಡಿಸಲು ಮುಂದಾಗಿರುವುದರಲ್ಲಿ ಅರ್ಥವಿಲ್ಲ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಹೇಳಿದ್ದಾರೆ. ಕಳೆದ ಮೂರು ದಿನಗಳಿಂದ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ವಿವಿವಿ ಮಂಡಳಿಯ ಸೇರಿದ ಹೆಸ್ಕೂಲು, ಕಾಲೇಜು ಹಾಗೂ ಜಾಗ ಮಂಡಳಿಯ ಹೆಸರಿನಲ್ಲಿಯೇ ಇದ್ದು, ಇದರಲ್ಲಿ ಎಲ್ಲಿಯೂ ಅಕ್ರಮ ನಡೆದಿಲ್ಲ. ಹೈಸ್ಕೂಲು, ಕಾಲೇಜಿನ ಜೊತೆಗೆ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ವಿವಿವಿ ಮಂಡಳಿಯು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭಿಸಿರುವುದನ್ನು ಸಹಿಸದ ಮಂದಿ ತನ್ನ ತೇಜೋವಧೆ ಮಾಡಲು ನಿಂತಿರುವುದು ವಿಷಾದನೀಯ ಎಂದರು. ಹೆಮ್ಮಾಡಿಯ ಹೈಸ್ಕೂಲಿನಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನು ಸ್ವಂತ ಮಗನೇ ದಾರುಣವಾಗಿ ಕೊಂದು ಮಲಗಿಸಿದ ಘಟನೆ ತಾಲೂಕಿನ ಬಳ್ಕೂರಿನಲ್ಲಿ ನಡೆದಿದೆ. ಇಲ್ಲಿನ ಹಳೆಮನೆಹಿತ್ಲು ನಿವಾಸಿ ಸಾಧು ಪೂಜಾರ್ತಿ(68) ಕೊಲೆಯಾದ ವೃದ್ಧ ಮಹಿಳೆ. ಆಕೆಯ ಮಗ ರಾಮ ಪೂಜಾರಿ(41) ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆಗೈದ ಅಸಾಮಿ. ವಿಪರೀತ ಕುಡಿತದ ಚಟ ಹೊಂದಿದ್ದ ರಾಮ ಪೂಜಾರಿ ಪ್ರತಿನಿತ್ಯ ಕುಡಿದು ಬಂದು ಮನೆಯವರಲ್ಲಿ ಜಗಳ ತೆಗೆಯುತ್ತಿದ್ದ. ಸಾಧು ಪೂಜಾರ್ತಿ ಅವರ ಪತಿ ಅಣ್ಣಯ್ಯ ಪೂಜಾರಿ ಈ ಹಿಂದೆಯೇ ತೀರಿಕೊಂಡಿದ್ದರು. ಮಗ ರಾಮ ಪೂಜಾರಿಯ ತೊಂದರೆ ತಾಳಲಾದರೆ ಇನ್ನೊರ್ವ ಮಗ ಮದುವೆಯ ಬಳಿ ಬೇರೆಯೇ ವಾಸಿಸುತ್ತಿದ್ದರೇ, ಮಗಳು ಮದುವೆಯಾಗಿ ಬೇರೆಡೆ ಇದ್ದರು. ಮದುವೆಯಾಗಿ ಎರಡು ಮಕ್ಕಳನ್ನು ಹೊಂದಿರುವ ರಾಮ ಪೂಜಾರಿ ಪತ್ನಿ ಹಾಗೂ ಮಕ್ಕಳನ್ನು ತೊರೆದು ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ. ಶುಕ್ರವಾರ ರಾತ್ರಿ ಮನೆಗೆ ಬಂದವನು ಎಂದಿನಂತೆ ತಾಯಿಯ ಬಳಿ ಜಗಳ ಶುರುವಿಟ್ಟುಕೊಂಡಿದ್ದು ಅದು ತಾರರಕ್ಕೇರಿ ಮನೆಯಲ್ಲಿದ್ದ ಕತ್ತಿಯಿಂದ ಆಕೆಯ ಕುತ್ತಿಗೆಯ ಭಾಗಕ್ಕ ಕಡೆದು…
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮೋದಿ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿ ಮೂರನೇ ವರ್ಷಕ್ಕೆ ಪದಾರ್ಪಣೆ ಮಾಡಿರುವ ಸಂದರ್ಭದಲ್ಲಿ ಕೇಂದ್ರ ಸರಕಾರ ವಿವಿಧ ಹಂತದಲ್ಲಿ ಸಂಭ್ರಮವನ್ನು ಆಚರಿಸುತ್ತಿದ್ದರೇ, ಕುಂದಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಅಭಿಮಾನಿಯೊಬ್ಬರು ತನ್ನ ಆಟೋ ರಿಕ್ಷಾದಲ್ಲಿ ಮೂರು ದಿನಗಳ ಕಾಲ 5 ಕಿಲೋಮೀಟರ್ ವರೆಗೆ 1 ರೂಪಾಯಿ ಪ್ರಯಾಣ ದರ ನಿಗದಿ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾನೆ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ ವಿನಾಯಕ ಟಾಕೀಸ್ ಬಳಿಯ ಆಟೋ ನಿಲ್ದಾಣದಲ್ಲಿರುವ ರಿಕ್ಷಾ ಹಿಂಬದಿ ಬ್ಯಾನರ್ ಅಳವಡಿಸಿಕೊಂಡ ಅಂಕದಕಟ್ಟೆಯ ಸುರೇಶ್ ಪ್ರಭು, ಮೋದಿ ಸರಕಾರದ ಸಾಧನೆಯಿಂದ ಪ್ರೇರಿತಗೊಂಡು ಸರಕಾರಕ್ಕೆ ಎರಡು ವರ್ಷ ಪೂರೈಸಿದಾಗಲೂ ತಮ್ಮ ಆಟೋ ಹಿಂದೆ 1ರೂಪಾಯಿ ಪ್ರಯಾಣ ದರದ ಮಾಹಿತಿ ನೀಡಿ ಓಡುಸುತ್ತಿದ್ದರು. ಮೂರು ದಿನದ ಕೊನೆಯಲ್ಲಿ 150ಕ್ಕೂ ಹೆಚ್ಚು ಪ್ರಯಾಣಿಕರು 1 ರೂಪಾಯಿಯಲ್ಲಿ ಪ್ರಯಾಣಿಸಿ ಖುಷಿಪಟ್ಟರೇ, ಇಂತಹ ಅವಕಾಶ ಕಲ್ಪಿಸಿಕೊಟ್ಟ ಸುರೇಶ್ ಪ್ರಭು ತಮ್ಮ ಕೆಲಸದಿಂದ ತೃಪ್ತರಾಗಿದ್ದಾರೆ. /ಕುಂದಾಪ್ರ ಡಾಟ್ ಕಾಂ…
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಪ್ರಾಥಮಿಕ-ಪ್ರೌಢ ಶಿಕ್ಷಣವೆಲ್ಲ ನಡೆದದ್ದು ಕನ್ನಡ ಮಾಧ್ಯಮದಲ್ಲಿ. ಪಿಯುಸಿ ತನಕವೂ ಓದಿದ್ದು ಸರಕಾರಿ ಶಾಲೆಯಲ್ಲಿ. ಆದರೇನಂತೆ ಸಾಧಿಸುವವರಿಗೆ ಶಾಲೆ, ಮಾಧ್ಯಮ ಯಾವುದು ಮುಖ್ಯವಾಗುವುದಿಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ವಿ. ಪೂರ್ಣಚಂದ್ರ. ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 580 ಅಂಕಗಳಿಸಿರುವುದಲ್ಲದೇ ನಾಲ್ಕು ವಿಷಯಗಳಲ್ಲಿ 100ಕ್ಕೆ 100 ಅಂಕಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸೊಸೈಟಿಯ ನೌಕರಾಗಿರುವ ಕೋಣಿಯ ಜಿ.ವಿ. ಕಾರಂತ್ ಹಾಗೂ ಕಂಬದಕೋಣೆ ಸ.ಪ.ಪೂ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಜಯಲಕ್ಷ್ಮೀ ಕಾರಂತ್ ಅವರ ದ್ವಿತೀಯ ಪುತ್ರ ಪೂರ್ಣಚಂದ್ರ. ಪ್ರಥಮ ಪುತ್ರ ಮೇಘ ಸಮೀರ ಮೈಸೂರು ನಟನಾದಲ್ಲಿ ರಂಗಕರ್ಮಿಯಾಗಿ ದುಡಿಯುತ್ತಿದ್ದಾರೆ. ಪೂರ್ಣಚಂದ್ರ ಈ ಭಾರಿ ಪಿಯುಸಿಯಲ್ಲಿ 600ರಲ್ಲಿ 580 ಅಂಕ ಪಡಿದ್ದಿದ್ದರೇ; ರಸಾಯನಶಾಸ್ತ್ರ, ಗಣಿತ, ಕಂಪ್ಯೂಟರ್ ಸೈನ್ಸ್ ಹಾಗೂ ಸಂಸ್ಕೃತದಲ್ಲಿ ಪೂರ್ಣ ಅಂಕ ಪಡೆದಿದ್ದಾರೆ. ಸರಕಾರಿ ಶಾಲೆಯಲ್ಲಿ ಕಲಿತು, ಯಾವುದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಕಲ್ಪನಾ ಭಾಸ್ಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಹಶೀಲ್ದಾರರಾದ ಗಾಯತ್ರಿ ನಾಯಕ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ವೈಲೆಟ್ ಬೆರೆಟ್ಟೋ ಅವರಿಂದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸಾಗರ್ ಕ್ರೆಡಿಟ್ ಕೋ-ಅಪರೇಟೀವ್ ಸೊಸೈಟಿಯ ನಿರ್ದೇಶಕರಾಗಿ, ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರಾಗಿ, ಕೋಟೇಶ್ವರ ಶಾಂತಿಧಾಮ ಪೂರ್ವ ಗುರುಕುಲ ಪ್ರಾಥಮಿಕ ಶಾಲೆ ಆಡಳಿತ ಮಂಡಳಿ ಸದಸ್ಯರಾಗಿ, ರಾಷ್ಟ್ರ ಸೇವಿಕಾ ಸಮಿತಿಯ ಕುಂದಾಪುರ ತಾಲೂಕು ಕಾರ್ಯ ವಾಹಿಕಾರಾಗಿ, ಬಸ್ರೂರು ನಿವೇದಿತ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿಯಾಗಿ, ಬಸ್ರೂರು ಶಾರದಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ, ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಕುಂದಾಪುರದ ಕಾರ್ಯದರ್ಶಿಯಾಗಿ, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ಟ್ರಸ್ಟಿಯಾಗಿ, ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ನ ನಿಯೋಜಿತ ಅಧ್ಯಕ್ಷರಾಗಿ, ರೋಟರಿ 3182 ಇದರ ವಲಯ ವುಮೇನ್ ಮೆಂಬರ್ಶಿಪ್…
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ನರ್ಸರಿಯಿಂದ ಆರಂಭಗೊಂಡು ಪದವಿ ಶಿಕ್ಷಣದ ವರಗೆ ಶೈಕ್ಷಣಿಕ ಸಂಸ್ಥೆಯನ್ನು ಹುಟ್ಟುಹಾಕಿ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕುಂದಾಪುರ ಎಜುಕೇಶನ್ ಸೊಸೈಟಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅತ್ಯುನ್ನತ ಶಿಕ್ಷಣವನ್ನು ಪಡೆಯುವ ಕನಸನ್ನು ಯಶಸ್ವಿಯಾಗಿ ಸಾಕಾರಗೊಳಿಸಿದೆ. ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪದವಿ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವ ನೈಜ ಕಳಕಳಿಯೊಂದಿಗೆ ರೂಪ ತಳೆದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕಡಿಮೆ ಅವಧಿಯಲ್ಲಿಯೇ ಶಿಕ್ಷಣ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿದೆ. 1,000 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು ಆರಂಭದ ದಿನಗಳಲ್ಲಿ ಭೌತಿಕ ಕೊರತೆಯ ನಡುವೆಯೂ ಉತ್ಕೃಷ್ಟ ಸಾಧನೆ ಮಾಡುತ್ತಿದ್ದುದು ಸಂಸ್ಥೆಯ ಬೆಳವಣಿಗೆಯ ವೇಗವನ್ನು ಉಲ್ಲೇಕಿಸುವಂತಿದೆ. ಈ ವರ್ಷದಿಂದ ವಾರಾಹಿ ನದಿಯ ಮಗ್ಗಲಿನ ಪ್ರಾಕೃತಿಕ ಸೊಬಗಿನ ನಡುವೆ, ನಗರದ ಗದ್ದಲದಿಂದ ಸಾಕಷ್ಟು ಅಂತರವಿರುವಲ್ಲಿ ನೂತನ ಕಟ್ಟಡ ತಲೆಯೆತ್ತಿ ನಿಂತಿದೆ. ಶಿಕ್ಷಣಕ್ಕೆ ಪೂರಕವಾದ ಭೌತಿಕ ವಾತಾವರಣ ನಿರ್ಮಾಣಗೊಂಡಿದೆ. ಮಾಲ್ಯ ಶಿಕ್ಷಣದ ಸಾಕಾರ…
ಪಾದಾಚಾರಿ ಕೋಟ ಜೋಗಿ ಸಮಾಜದ ಅಧ್ಯಕ್ಷ ನಾರಾಯಣ ಬಳೆಗಾರ್ ಗಂಭೀರ ನ್ಯಾಯವಾದಿ ಬನ್ನಾಡಿ ಸೋಮಶೇಖರ ಹೆಗ್ಡೆ ಅವರ ಸಮಯಪ್ರಜ್ಞೆಯಿಂದ ಗಾಯಾಳುಗಳು ಶೀಘ್ರ ಆಸ್ಪತ್ರೆಗೆ ದಾಖಲು ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಮೂರುಕೈ ರಾಷ್ಟ್ರೀಯ ಹೆದ್ದಾರಿಯ ಬಳಿ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿದ ಪರಿಣಾಮ, ರಸ್ತೆಯ ಬದಿಯಲ್ಲಿ ಸಾಗುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದಿದ್ದು, ವಾಹನದಲ್ಲಿದ್ದ ಚಾಲಕ ಮತ್ತು ನಿರ್ವಾಹಕ ಸೇರಿ ಮೂವರೂ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆಯ ವೇಳೆಗೆ ವರದಿಯಾಗಿದೆ. ಕೋಟ ಮೂರುಕೈ ಯಿಂದ ಗೋಳಿಯಂಗಡಿ ತೆರಳಲು ಯುಟರ್ನ್ ಇರುವ ಮಾರ್ಗ ಹಾಗೂ ವಿವೇಕ ಪದವಿಪೂರ್ವ ಕಾಲೇಜು ಇರುವಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋಟ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರು. ಸಂಜೆ ವೇಳೆಗೆ ಉಡುಪಿ ಕಡೆಯಿಂದ ವೇಗವಾಗಿ ಬಂದ 407 ಗೂಡ್ಸ್ ವಾಹನವು ಕೋಟ ಮೂರು ಕೈ ಬಳಿಯ ಬ್ಯಾರಿಕೇಡ್ ಗಮನಿಸದೆ, ಹಠಾತ್ ಬ್ರೇಕ್ ಹಾಕುವ ಪ್ರಯತ್ನ ನಡೆಸಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ಗೆ ಢಿಕ್ಕಿ ಹೊಡೆದು ವಾಹನ ಪಲ್ಟಿಯಾಗಿತ್ತು. ಇದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನಾಡ ಗ್ರಾಮದ ಚುಂಗಿಗುಡ್ಡೆ ಪ್ರಕಾಶ ಹೆಬ್ಬಾರ್ ಅವರನ್ನು ಮಂಡ್ಯದ ಡಾ. ಜೀ.ಶಂ.ಪ ಸಾಹಿತ್ಯ ವೇದಿಕೆಯು ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದೆ. ವೇದಿಕೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಂಬಾಡಿ ದಿನಪತ್ರಿಕೆಯ ಸಹಯೋಗದಲ್ಲಿ ಮೇ 26ರಂದು ಮಂಡ್ಯ ನಗರದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಿರುವ ಕವಿಕಾವ್ಯ ಮೇಳದಲ್ಲಿ ಪ್ರಶಸ್ತಿ ಪ್ರದಾನ ನಡೆಯುವುದು. ಕವಿಗಳೂ, ಸಾಹಿತ್ಯ ಪರಿಚಾರಕರೂ ಆಗಿರುವ ಹೆಬ್ಬಾರ್ ಚುಂಗಿಗುಡ್ಡೆ ಪರಮೇಶ್ವರ ಹೆಬ್ಬಾರ್, ಅಕ್ಕಮ್ಮ ಹೆಬ್ಬಾರ್ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ದುಡಿಯುವವರಿಗೆ ಹತ್ತಾರು ತೊಡಕುಗಳು ಎದುರಾಗುವುದು ಸಹಜ. ಅವುಗಳನ್ನು ಸವಾಲಿನಂತೆ ಸ್ವೀಕರಿಸಿ ಮುನ್ನುಗ್ಗಿದರೆ ಗುರಿ ಸಾಧನೆ ಸಾಧ್ಯವಾಗುತ್ತದೆ. ಕ್ರೀಯಾತ್ಮಕ ಚಟುವಟಿಕೆಗಳಿಂದ ಸಂಘಟನೆಯ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಪರ್ಕಳ ಅರುಣ್ ಭಂಡಾರಿ ಹೇಳಿದರು. ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ನಡೆದ ಸವಿತಾ ಸಮಾಜದ ವಾರ್ಷಿಕ ಮಹಾಸಭೆ, ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಮಾಜದವರು ಈಗ ಎಲ್ಲಾ ಕ್ಷೇತ್ರಗಳಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಾಣುತ್ತಿದ್ದಾರೆ. ನಮಗೆ ಜಾತಿ ಪ್ರಜ್ಞೆ ಇಲ್ಲದಿದ್ದರೆ ಏನೂ ಸಾಧಿಲಾಗದು. ಈ ದಿಸೆಯಲ್ಲಿ ಸಂಘಟನೆಯ ಮೂಲಕ ಒಗ್ಗಟ್ಟಿನಿಂದ ಹೋರಾಟಮಾಡಿ ನಮ್ಮ ಸವಲತ್ತುಗಳನ್ನು ಕೇಳಿ ಪಡೆಯಬೇಕು. ನಮ್ಮ ಮುಂದಿನ ಪೀಳಿಗೆಗೆ ಕುಲಕಸುಬುಗಳ ಅರಿವು ಮೂಡಿಸುವ ಅನಿವಾರ್ಯತೆಯಿದೆ ಎಂದರು. ಬೈಂದೂರು ವಲಯ ಸವಿತಾ ಸಮಾಜದ ಅಧ್ಯಕ್ಷ ಗೋಪಾಲ ಮಲ್ಯ ಅಧ್ಯಕ್ಷತೆವಹಿಸಿದ್ದರು. ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.೮೦ಕ್ಕಿಂತ ಅಧಿಕ ಅಂಕಗಳಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಪರೀಕ್ಷೆ ಬರೆದ ಒಟ್ಟು 304 ವಿದ್ಯಾರ್ಥಿಗಳ ಪೈಕಿ 98 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದರೇ, 167 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ 26 ಮಂದಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 186 ವಿದ್ಯಾರ್ಥಿಗಳ ಪೈಕಿ 174 ಮಂದಿ ತೇರ್ಗಡೆ ಹೊಂದಿದ್ದರೇ, ವಾಣಿಜ್ಯ ವಿಭಾಗದಲ್ಲಿ 118 ವಿದ್ಯಾರ್ಥಿಗಳ ಪೈಕಿ 116 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಾಲೇಜಿನಲ್ಲಿ ವಿಶಿಷ್ಟ ಸಾಧನೆಗೈದಿರುವ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ನವೀನ್ಕುಮಾರ್ ಶೆಟ್ಟಿ ಹಾಗೂ ಕುಂದಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಅಭಿನಂದಿಸಿದ್ದಾರೆ.
