ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಾಮಾನ್ಯ ಜನರಿಗೆ ಕಾನೂನು ಅರಿವು ಮೂಡಿಸುವುದು ಮತ್ತು ಕಾನೂನು ಮಾಹಿತಿ ನೀಡುವ ಉದ್ದೇಶದಿಂದ ಕಾನೂನು ಸಾಕ್ಷರತೆ ಮತ್ತು ಲೋಕ ಅದಾಲತ್ ಕಾರ್ಯಕ್ರಮ ರೂಪಿಸಲಾಗಿದೆ. ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕು ದೊರೆಯಬೇಕಿದೆ. ನಮಗೆ ದೊರೆಬೇಕಾಗಿರುವ ಹಕ್ಕುಗಳನ್ನು ಪಾಲಿಸಿಕೊಳ್ಳುವುದರ ಜೊತೆಗೆ ನಮ್ಮ ಕರ್ತವ್ಯವನ್ನು ನಿಭಾಯಿಸಬೇಕು. ಸಾಮಾನ್ಯ ಜನರಿಗೆ ಕಾನೂನಿನ ನೆರವು ಸಿಗಬೇಕೆಂಬ ದೃಷ್ಟಿಯಿಂದ ತಾಲೂಕು ಕಾನೂನು ಸೇವಾ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲರೂ ಮುಕ್ತವಾಗಿ ತಮ್ಮ ಸಮಸ್ಯೆಗಳನ್ನು ಈ ವೇದಿಕೆ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ಕುಂದಾಪುರದ ೨ನೇ ಹೆಚ್ಚುವರಿ ಸಿವಿಲ್ ಮತ್ತು ಪ್ರಥಮ ದರ್ಜೆ ನ್ಯಾಯಿಕಾ ದಂಡಾಧಿಕಾರಿ ಝೈಬುನ್ನಿಸಾ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ, ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯತ್ ಕುಂದಾಪುರ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ…
Author: ನ್ಯೂಸ್ ಬ್ಯೂರೋ
ಕುಂದಾಪುರ: ಕೋಣಿಯ ಮಾತಾ ಮಾಂಟೆಸ್ಸೋರಿ ಶಾಲೆಯಲ್ಲಿ ಚಿಣ್ಣರಿಗಾಗಿ ಬಯಲಿನಾಟ ಕಾರ್ಯಕ್ರಮ ಜರುಗಿತು. ಪ್ರಥ್ವಿ ಪೂಜಾರಿ ಹಾಗೂ ಶಕ್ತಿ ಶೆಟ್ಟಿ ದೀಪ ಬೆಳಗುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಮಕ್ಕಳಿಗೆ ಹಾಗೂ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಪ್ರಾಂಶುಪಾಲೆ ಭಾರತಿ ಪ್ರಕಾಶ್ ಶೆಟ್ಟಿ, ಶಿಕ್ಷಕಿಯರಾದ ಗೀತಾ ಶೆಟ್ಟಿ, ಸುಮಿತ್ರ ಹಾಗೂ ಪೋಷಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಮುಖ ಕಾರ್ಮಿಕ ಕಾಯಿದೆಗಳಿಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರಕಾರ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಮುಂದಾಗಿದೆ. ಗುತ್ತಿಗೆ ಕಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ರಾಷ್ಟ್ರವ್ಯಾಪೀ ಕನಿಷ್ಠ ವೇತನ ನಿಗದಿ ಮಾಡಬೇಕು. ಅಸಂಘಟಿತ ಕಾರ್ಮಿಕರ ಸಮಾಜಿಕ ಭದ್ರತಾ ನಿಧಿ ಸ್ಥಾಪನೆಮಾಡಬೇಕು. ಕಲ್ಯಾಣ ಯೋಜನೆಗಳ ಜಾರಿಗಾಗಿ ಹಣ ಮೀಸಲಿಡಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪಸಿಂಹ ಹೇಳಿದರು. ಇಲ್ಲಿನ ಕಾರ್ಮಿಕ ಭವನದಲ್ಲಿ ಸಿಐಟಿಯು ಕಾರ್ಮಿಕ ಸಂಘದ ಕುಂದಾಪುರ ತಾಲೂಕು 3ನೇ ಸಮ್ಮೇಳನ ಸಮಾರಂಭ ಉದ್ಘಾಟಿಸಿ ಪ್ರತಾಪಸಿಂಹ ಮಾತನಾಡುತ್ತಿದ್ದರು. ಕೇಂದ್ರ ಸರಕಾರ ದೇಶದ ಅಭಿವೃದ್ಧಿ ಬಗ್ಗೆ ಅಬ್ಬರದ ಪ್ರಚಾರ ಮಾಡುತ್ತದೆ. ಅಭಿವೃದ್ಧಿ ಪ್ರಗತಿ ಹೇಗೆ ಅನುಷ್ಟಾನಗೊಳಿಸಲಾಗುತ್ತದೆ ಎಂಬುದರ ಅರಿವು ಮಾಡಿಕೊಳ್ಳಬೇಕು. ಅಭಿವೃದ್ಧಿ ವ್ಯಾಪ್ತಿಯಲ್ಲಿ ಕಾರ್ಮಿಕರು, ಕೂಲಿಕಾರರು ಬರುವುದಿಲ್ಲ. ದುಡಿಯಲು ಕೂಲಿ ಕಾರ್ಮಿಕರು ಆದರೆ ಅಭಿವೃದ್ಧಿಯ ಪಾಲಕ್ಕೆ ನಾವು ಅರ್ಹರಲ್ಲ ಎಂಬ ಭಾವನೆ ಮೂಡುತ್ತಿದೆ. ಅಭಿವೃದ್ಧಿ ಎಂದರೆ ವೈಭವದ ಜೀವನ ಅಲ್ಲ. ಕನಿಷ್ಠ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ.ಎ.18: ಸದ್ಯದಲ್ಲೇ ಹಸೆಮಣೆ ಏರಬೇಕಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಿಕ್ಕು ಯಾನೆ ಸುಶೀಲ ಮಡಿವಾಳ್ತಿ ಎಂಬುವವರ ಪುತ್ರ ಮಂಜುನಾಥ ನಾಡ (26) ನೇಣಿಗೆ ಶರಣಾದ ಯುವಕ. ಬೆಂಗಳೂರಿನಲ್ಲಿ ಬೇಕರಿ ವ್ಯವಹಾರ ನಡೆಸುತ್ತಿದ್ದ ಮಂಜುನಾಥನಿಗೆ ಕೆಲವು ತಿಂಗಳುಗಳ ಹಿಂದಷ್ಟೇ ಕೆದೂರಿನ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಮೇ.2ರಂದು ಮದುವೆ ನಡೆಯುವುದಿತ್ತು. ಆ ಕಾರಣದಿಂದಾಗಿ ಊರಿನಲ್ಲಿಯೇ ಇದ್ದ ಮಂಜುನಾಥ ಸೋಮವಾರ ಏಕಾಏಕಿ ನಾಪತ್ತೆಯಾಗಿದ್ದರಿಂದ ಹುಡುಕಾಟ ನಡೆಸಿದಾಗ ಮನೆಯ ಸಮೀಪದ ಹಾಡಿಯೊಂದರಲ್ಲಿ ನೇಣು ಬಿಗಿದುಕೊಂಡಿರುವುದು ತಿಳಿದುಬಂದಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಮದುವೆ ತಯಾರಿಯಲ್ಲಿದ್ದ ಯುವಕ ಏಕಾಏಕಿ ಆತ್ಮಹತ್ಯೆ ನಿರ್ಣಯ ಕೈಗೊಂಡಿರುವುದು ಅವರ ಬಂಧುಗಳು ಹಾಗೂ ಸ್ನೇಹಿತರನ್ನು ಆತಂಕಕ್ಕೆ ನೂಕಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. / ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪ್ರ ಡಾಟ್ ಕಾಂ ನೋಟ್. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎ.25ರಂದು ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣದ ಕುರಿತು ಒಂದು ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ತಿಳಿಸಿದ್ದಾರೆ. ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಲಾಂಚನ, ಅಮಂತ್ರಣ ಪತ್ರಿಕೆ ಹಾಗೂ ಸರಕಾರದ ಸೌಲಭ್ಯಗಳ ಮಾಹಿತಿಗಳ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾಹಿತಿ ನೀಡಿದರು. ವಿಕಲಚೇತನರ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವುದು, ಅವರಲ್ಲಿರುವ ಸುಪ್ತ ಪ್ರತಿಭೆ ಮತ್ತು ಕೌಶಲವನ್ನು ಗುರುತಿಸಿ ಪ್ರೋತ್ಸಾಹಿಸಲು ಸರಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವುದು ಹಾಗೂ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬುವುದು ಕಾರ್ಯಕ್ರಮ ಆಯೋಜನೆಯ ಉದ್ದೇಶ. ವಿಕಲಚೇತನರ ಪ್ರತಿಭಾ ಪ್ರದರ್ಶನ ಮತ್ತು ಅವರು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಯಕ್ರಮವನ್ನು ಯುವ ಉದ್ಯಮಿ ಕಾರ್ತಿಕೇಯ ಮಧ್ಯಸ್ಥ ಉದ್ಘಾಟಿಸಲಿದ್ದಾರೆ. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾದಿಕಾರಿಗಳಾದ ಹೆಚ್ ಶಾಂತಾರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ. ದಿಕ್ಸೂಚಿ ಭಾಷಣವನ್ನು ಪಾಂಡುರಂಗ ಶಾನುಭೋಗ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ 11ನೆ ಉಳ್ಳೂರು ಗ್ರಾಮದ ಉಪ್ರಳ್ಳಿಯ ಜನಾರ್ದನ ದೇವಸ್ಥಾನವು ಸುಮಾರು 1300ವರ್ಷಗಳ ಹಿಂದಿನದೆಂದು ನಂಬಲಾಗುತ್ತಿದೆ. ಇದು ಮುಜರಾಯಿ ಇಲಾಖೆಯ ತಸದೀಕು ಪಡೆಯುತ್ತಿದೆ. ಪಾಣಿಪೀಠದ ಮೇಲೆ ನಿಂತ ಭಂಗಿಯಲ್ಲಿ ಪ್ರತಿಷ್ಠಾಪಿತವಾಗಿರುವ ಸಾಲಿಗ್ರಾಮ ಶಿಲೆಯ ಜನಾರ್ದನ ದೇವರ ವಿಗ್ರಹವು 3 ಅಡಿ ಎತ್ತರವಾಗಿದ್ದು, ತುಂಬ ಸುಂದರವಾಗಿದೆ. ಗರ್ಭಗುಡಿ, ಗೋಪುರ, ತೀರ್ಥಮಂಟಪ, ಹೆಬ್ಬಾಗಿಲು, ಸುತ್ತ ಪೌಳಿ, ಬಲಿಕಲ್ಲುಗಳನ್ನು ಹೊಂದಿರುವ ಈ ದೇವಾಲಯ ಒಂದು ಕಾಲದಲ್ಲಿ ಊರಿನ ಪ್ರಮುಖ ದೇವಾಲಯವಾಗಿತ್ತು. ಜೀರ್ಣಗೊಂಡ ದೇವಾಲಯವನ್ನು ಶಿಲಾಮಯವಾಗಿ ಮರುನಿರ್ಮಿಸುವ ಕಾರ್ಯ ಇದೀಗ ಪೂರ್ಣಗೊಂಡ ಹಿನ್ನೆಲೆಯಲ್ಲಿ ಎ. 19ರಿಂದ 21ರ ವರೆಗೆ ನಡೆಯುವ ಸಮಾರಂಭದಲ್ಲಿ ಅದನ್ನು ದೇವರಿಗೆ ಸಮರ್ಪಿಸಲಾಗುವುದು. 19ರಂದು ಪ್ರತಿಷ್ಠಾಪೂರ್ವ ವಿಧಿಗಳು ನಡೆದು, ೨೦ರಂದು ದೇವರ ಪುನರ್ಪ್ರತಿಷ್ಠೆ, ಶಿಖರ ಕಲಶ ಪ್ರತಿಷ್ಠೆ, ಬ್ರಹ್ಮಕಲಶ ಸ್ಥಾಪನೆ ನಡೆಯುವುದು. 21ರಂದು ಬ್ರಹ್ಮ ಕಲಶಾಭಿಷೇಕ, ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯುವುದು. ಅದರ ಪೂರ್ವದಲ್ಲಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಬಿ. ಅಪ್ಪಣ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣ ಓದು ಬರಹಗಳಿಂದ ಗಳಿಸುವ ಜ್ಞಾನಕ್ಕೆ, ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳಿಗೆ ಸೀಮಿತವಾಗಬಾರದು. ಅದು ಸಂಸ್ಕೃತಿಯನ್ನು ಹೊಸ ತಲೆಮಾರಿಗೆ ಹಸ್ತಾಂತರಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಶಿಕ್ಷಣಾರ್ಥಿಗೆ ಜೀವನ ಮೌಲ್ಯವನ್ನು ಕಲಿಸಬೇಕು ಎಂದು ಕೋಟ ಪಡುಕೆರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ ಹೇಳಿದರು. ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಅಂಗವಾಗಿ ನಡೆದ ಶೈಕ್ಷಣಿಕ ಸಭೆಯಲ್ಲಿ ಅವರು ಅಮೃತ ನುಡಿ ಆಡಿದರು. ಪಟ್ಟಣಗಳಲ್ಲಿ, ಆಂಗ್ಲಭಾಷಾ ಮಾಧ್ಯಮದಲ್ಲಿ ಕಲಿತವರು ಮಾತ್ರ ವಿಶೇಷ ಸಾಧನೆ ಮಾಡುತ್ತಾರೆ ಎನ್ನುವುದು ಸತ್ಯವಲ್ಲ. ಹೆಚ್ಚಿನ ಸಾಧಕರು ಹಳ್ಳಿಗಳಿಂದ, ಮಾತೃಭಾಷಾ ಶಾಲೆಗಳಿಂದ ಬಂದಿದ್ದಾರೆ ಎಂದ ಅವರು ಗುಣಮಟ್ಟದ ಶಿಕ್ಷಣ ಸಾಧ್ಯ ಎನ್ನುವುದನ್ನು ಹಲವು ಮಾತೃಭಾಷಾ ಮಾಧ್ಯಮ ಶಾಲೆಗಳು ತೋರಿಸಿಕೊಟ್ಟಿವೆ ಎಂದು ಹೇಳಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ ಸ್ವಾಗತಿಸಿದರು. ಖಂಬದಕೋಣೆಯ ಶಿಕ್ಷಣ ಸಂಯೋಜಕ ವೆಂಕಪ್ಪ ಉಪ್ಪಾರ, ನಾವುಂದ ಸಮೂಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಯಕರಿಗೆಲ್ಲಾ ನಾಯಕತ್ವದ ಗುಣ ಇರಬೇಕೆಂದಿಲ್ಲ. ಆದರೆ ನಾಯಕತ್ವದ ಗುಣ ಹೊಂದಿದವರು ಖಂಡಿತ ನಾಯಕರಾಗುತ್ತಾರೆ. ಸಮಯ ಪ್ರಜ್ಞೆ ಹಾಗೂ ತಾಳ್ಮೆ ನಾಯಕತ್ವದ ಪ್ರಮುಖ ಅಂಶಗಳು. ಯಾವುದೇ ಜಾತಿ ಧರ್ಮವನ್ನಾಧರಿಸಿ ನಾಯಕತ್ವ ಗುಣ ಬೆಳೆಯುವುದಿಲ್ಲ. ಬದಲಾಗಿ ಅದು ನಮ್ಮ ಮನಸ್ಸಿನ ಮೂಲಕ ಬೆಳೆಯುತ್ತದೆ ಎಂದು ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ, ಕುಂದಾಪುರ ಪೊಲೀಸ್ ಉಪ ವಿಭಾಗದ ಉಪ ಅಧೀಕ್ಷಕ ಎಂ. ಮಂಜುನಾಥ ಶೆಟ್ಟಿ ಹೇಳಿದರು. ಅವರು ಕಾಳಾವರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ಕಾಳಾವರ ಇದರ ವತಿಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಯುವ ಮುಂದಾಳುಗಳಿಗಾಗಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ನಾಯಕತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥ ಮೋಹನಚಂದ್ರ ಕಾಳಾವರ್ಕರ್ ಸಂಸ್ಥೆಯ ಧ್ಯೇಯೋದ್ಧೇಶ ಮತ್ತು ನಡೆದು ಬಂದ ದಾರಿಯನ್ನು ಸವಿಸ್ತಾರವಾಗಿ ವಿವರಿಸಿದರು. ಇದೇ ಸಂದರ್ಭದಲ್ಲಿ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಹಾಗೂ ಕಾಳಾವರ ಗ್ರಾಮ…
ಕುಂದಾಪುರ : ಸರಕಾರಗಳು ಜನರ ಪ್ರಗತಿಯನ್ನು ಗುರಿಯಾಗಿರಿಸಿಕೊಂಡು ಯೋಜನೆಗಳನ್ನು ರೂಪಿಸುತ್ತವೆ ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ. ಅವುಗಳ ಅನುಷ್ಠಾನ ಹಂತದಲ್ಲಿ ಜನರು ಕೈಜೋಡಿಸಿದರೆ ಈ ಯೋಜನೆಗಳಿಗೆ ಬಲ ಬರುತ್ತದೆ. ಈ ಮಾತಿಗೆ ಮರವಂತೆಯ ಜನರ ಉಪಕ್ರಮ ಒಂದು ಅತ್ಯುತ್ತಮ ನಿದರ್ಶನ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ನಡೆದ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಅಧ್ಯಕ್ಷತೆ ವಹಿಸಿ, ನೂತನ ಅಮೃತ ಭವನವನ್ನು ಉದ್ಘಾಟಿಸಿ ಮಾತನಾಡಿದರು. ಮರವಂತೆ ಗ್ರಾಮ ಪಂಚಾಯತ್ ತನ್ನ ವಿಶಿಷ್ಟ ಸಾಧನೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ಇದೀಗ ಇಲ್ಲಿನ ಜನರು ಸರಕಾರಿ ಶಾಲೆಗೆ ಶಾಶ್ವತ ಕೊಡುಗೆಗಳನ್ನು ನೀಡುವ ಮೂಲಕ ಶಾಲೆಯ ಅಮೃತ ಮಹೋತ್ಸವವನ್ನು ಅನ್ವರ್ಥಗೊಳಿಸಿದ್ದಾರೆ. ಜನರ ಕೊಡುಗೆಗೆ ಪ್ರತಿಯಾಗಿ ಸರಕಾರವೂ ಸ್ಪಂದಿಸಲಿದೆ ಎಂದು ಅವರು ಹೇಳಿದರು. ಮುಖ್ಯ ಅತಿಥಿ, ಕೆನಡಾದಲ್ಲಿ ಜೈವಿಕ ತಂತ್ರಜ್ಞಾನ ವಿಜ್ಞಾನಿಯಾಗಿರುವ ಶಾಲೆಯ ಹಿಂದಿನ ವಿದ್ಯಾರ್ಥಿ ಡಾ. ಎಂ. ಶ್ರೀನಿವಾಸ ಮಧ್ಯಸ್ಥ ಅಮೃತ ಮಹೋತ್ಸವವನ್ನು ಉದ್ಘಾಟಿಸಿದರು. ತಮ್ಮ ಬಾಲ್ಯದ ಬದುಕು, ಶಾಲೆಯಲ್ಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ರಾಮ ನವಮಿಯ ಪ್ರಯುಕ್ತ ನಡೆದ ಹಗಲೋತ್ಸ, ಬೆಳ್ಳಿ ಪಲ್ಲಕ್ಕಿ ಉತ್ಸವ, ರಾತ್ರಿ ಬೆಳ್ಳಿಯ ಪುಷ್ಪ ರಥ ಉತ್ಸವ ಜರಗಿತು. ನಂತರ ದೇವಳದಲ್ಲಿ ಅಷ್ಟಾವಧಾನ, ವಿಶೇಷ ವಸಂತ ಪೂಜೆ ನಡೆಯಿತು ಹಾಗೂ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರರು, ಸಮಾಜ ಭಾಂದವರು ಉಪಸ್ಥಿತರಿದ್ದರು. ವರದಿ: ರಮೇಶ್ ಭಟ್
