Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವೈಜ್ಞಾನಿಕ ಮನೋಭಾವನೆ, ಹೊಸ ಚಿಂತನೆಗಳನ್ನು ಮಕ್ಕಳ ಮನಸ್ಸಿಗೆ ನಾಟುವಂತೆ ಶಿಕ್ಷಕರು ಪ್ರೇರಣೆ ನೀಡಬೇಕು. ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಕ್ರೀಯಾಶೀಲ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಉಡುಪಿ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಶತಮಾನೋತ್ಸವ ಸಂಭ್ರಮ ಆಚರಿಸುತ್ತಿರುವ ಶಾಸಕರ ಮಾದರಿ ಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣದ ಜತೆಯಲ್ಲಿ ಸಾಂಸ್ಕೃತಿಕ, ಭೌತಿಕ ಹಾಗೂ ಸಂಸ್ಕಾರಯುತ ಪರಿಸರ ನಿರ್ಮಾಣ ಮಾಡಿದಾಗ ಆ ಶಾಲೆಯು ಸರ್ವತೋಮುಖ ಅಭಿವೃದ್ದಿಯೊಂದಿಗೆ ಉತ್ತಮ ಫಲಿತಾಂಶ ನೀಡಲು ಸಾಧ್ಯವಾಗುತ್ತದೆ ಎಂದರು. ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡುತ್ತಿದ್ದು, ಶಾಲೆಗಳು ಇದರ ಪೂರ್ಣಪ್ರಮಾಣದ ಪ್ರಯೋಜನ ಪಡೆಯಬೇಕು ಎಂದ ಪೂಜಾರಿ, ಪೋಷಕರು ಕಾಲಕಾಲಕ್ಕೆ ತಮ್ಮ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಗಮನಿಸುವುದು ತುಂಬಾ ಅವಶ್ಯಕ. ಇದರಿಂದ ಮಕ್ಕಳು ತಪ್ಪುದಾರಿಯಲ್ಲಿ ಸಾಗದಂತೆ ತಡೆಯಲು ಸಹಕಾರಿಯಾಗುತ್ತದೆ ಎಂದರು. ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ ಶ್ಯಾನುಭಾಗ್ ಅಧ್ಯಕ್ಷತೆವಹಿಸಿದ್ದರು. ಉಪಾಧ್ಯಕ್ಷೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಯುಕೆಜಿ ಮಕ್ಕಳ ಪದವಿ ಪ್ರಧಾನ ಸಮಾರಂಭದಲ್ಲಿ ಕುಂದಾಪುರ ನ್ಯಾಶನಲ್ ಇನ್ಶೂರೆನ್ಸ್ ಕಂಪೆನಿಯ ಶಾಖಾಧಿಕಾರಿ ಪ್ರತಿಭಾ ಶೆಟ್ಟಿ ಮಕ್ಕಳಿಗೆ ಪ್ರಮಾಣಪತ್ರ ನೀಡಿದರು. ಬಾಂಡ್ಯ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್. ಶೆಟ್ಟಿ, ಪ್ರಾಂಶುಪಾಲ ಭಾಸ್ಕರ ಬಾಲಚಂದ್ರುಡು, ಮುಖ್ಯ ಶಿಕ್ಷಕಿ ವಿಶಾಲ ಶೆಟ್ಟಿ, ಪ್ರಥಮ್ ಹಾಗೂ ರೀತು ಶೆಟ್ಟಿ, ಅನಿಸಿಕಾ ಶೆಟ್ಟಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ದೇವರು ಹುಟ್ಟಿದ ನಡೆದಾಡಿದ ವಿಶ್ವದ ಏಕೈಕ ದೇಶ ಭಾರತ. ಇಂತಹ ಶ್ರೇಷ್ಠವಾದ ಪವಿತ್ರವಾದ ನಮ್ಮ ದೇಶ ಗಂಡಾಂತರಕ್ಕೆ ಸಿಲುಕಿದೆ. ದೇಶದಲ್ಲಿ ಹಿಂದುಗಳ ಸಂಖ್ಯೆ ವಿಪರೀತ ಕಡಿಮೆಯಾಗುತ್ತಿದ್ದು, ಹಿಂದು ಸಮಾಜ ನಾಶದ ಕಡೆ ಹೋಗುತ್ತಿದೆ. ಹೀಗಾಗಿ ದೇಶ ಧರ್ಮ ಉಳಿಸುವ ಮಹತ್ಕಾರ್ಯದಲ್ಲಿ ಎಲ್ಲರೂ ತೊಡಗಿಕೊಳ್ಳಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಇವರ ಆಶ್ರಯದಲ್ಲಿ ಜರಗಿದ ೫೦೫ ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ೧೩ ಲಕ್ಷ ಲಿಖಿತ ಶ್ರೀ ರಾಮನಾಮ ತಾರಕ ಜಪಯಜ್ಞದ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು. ಹಿಂದುಗಳಿಗೆ ಪವಿತ್ರವಾದ ಭಗವದೀತೆಯ ಒಂದೊಂದು ಶ್ಲೋಕಗಳು ಇತಿಹಾಸ. ಮಹಾಭಾರತ, ರಾಮಾಯಣ ಹಾಗೂ ಭಗವದ್ಗೀತೆಗಳು ನಮ್ಮ ಜೀವನದ ದರ್ಶನ. ನಮ್ಮಲ್ಲಿ ನಮ್ಮ ಮತದ, ಸಂಸ್ಕೃತಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್-ಕಾಲೇಜು ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಕೂಟ ದಿವಂಗತ ಶ್ರೀಮತಿ ವಿಶಾಲಾಕ್ಷಿ ಬಿ. ಹೆಗ್ಡೆ ಸ್ಮಾರಕ ಬಿ.ಎಮ್.ಎಸ್. ಟ್ರೋಫಿ 2016ರಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಪ್ರಥಮ ಸ್ಥಾನವನ್ನು ಪಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡೆದುಕೊಂಡರೆ, ಶ್ರೀ ಶಾರದಾ ಕಾಲೇಜು ಬಸ್ರೂರು ತೃತೀಯ ಸ್ಥಾನ ಹಾಗೂ ಅತಿಥಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಚತುರ್ಥ ಸ್ಥಾನ ಪಡೆಯಿತು. ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ವಿಜೇತ ತಂಡಗಳಿಗೆ ಪ್ರಶಸ್ತಿಯನ್ನು ವಿತರಿಸಿದರು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ, ಕಾಲೇಜು ಆಡಳಿತ ಮಂಡಳಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಮಲ್ಯಾಡಿ ಶ್ರೀ ಮಹಾದೇವಿ ನಂದಿಕೇಶ್ವರ ಸಹಪರಿವಾರ ದೈವಸ್ಥಾನದಲ್ಲಿ ಭಾನುವಾರ ರಾತ್ರಿ ದೈವಸ್ಥಾನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಪ್ರಭಾವಳಿ ಕದ್ದೊಯ್ದ ಘಟನೆ ವರದಿಯಾಗಿದೆ. ಕಾಣಿಕೆ ಡಬ್ಬ ದೈವಸ್ಥಾನದಿಂದ ಹೊರತಂದು ಒಡೆಯುವ ಪ್ರಯತ್ನದಲ್ಲಿ ವಿಫಲರಾದ ಕಳ್ಳರು, ದೇವಸ್ಥಾನದ ಹೊರ ಬಯಲಿಲ್ಲಿ ಬಿಟ್ಟು ಪರಾರಿಯಾಗಿದ್ದು, ಕಳವಾದ ಸೊತ್ತಿನ ಒಟ್ಟು ಮೌಲ್ಯ ೧ ಲಕ್ಷ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕುಂದಾಪುರ ಡಿಎಸ್ಪಿ ಎಂ.ಮಂಜುನಾಥ ಶೆಟ್ಟಿ, ಕೋಟ ಪಿಎಸೈ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ರಾಮಕ್ಷತ್ರಿಯ ಯುವಕ ಮಂಡಳಿ ರಾಮಕ್ಷತ್ರಿಯ ಸಂಘ ಸುವರ್ಣ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರುಗಿತು. ಕುಂದಾಪುರದಲ್ಲಿ ಪ್ರಥಮ ಬಾರಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಶಿರ್ವಾದದೊಂದಿಗೆ ಶ್ರೀ ರಾಮಚಂದ್ರಾಪುರ ಮಠ ವೈದಿಕ ತಂಡ ಕಲ್ಯಾಣೋತ್ಸವ ನೆರವೇರಿತು. ಕಲ್ಯಾಣೋತ್ಸವ ಬೆಳಿಗ್ಗೆ ಕುಂದಾಪುರ ಶಾಸ್ತ್ರಿವೃತ್ತದಿಂದ ಶ್ರೀ ಸೀತಾರಾಮಚಂದ್ರ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಶ್ರೀ ಸೀತಾರಾಮಚಂದ್ರ ದೇವಸ್ಥಾನಕ್ಕೆ ತರಲಾಯಿತು. ಬೆಳಗ್ಗೆ 10:30ಕ್ಕೆ ಪೂಜಾ ಸಂಕಲ್ಪ ಮತ್ತು ರಾಮ ತಾರಕ ಹೋಮ ಜರುಗಿತು. ಅಪರಾಹ್ನ 12:30ಕ್ಕೆ ವಿಸೇಷ ಪೂಜೆ ಮತ್ತು ಪ್ರಸಾದ ವಿತರಣೆ ನಡೆದು, ಸರಿಯಾಗಿ 5:30ಕ್ಕೆ ಸೀತಾರಾಮಚಂದ್ರ ಕಲ್ಯಾಣೋತ್ಸವ ಆರಂಭವಾಯಿತು. ಈ ಸಂದರ್ಭದಲ್ಲಿ ಆಶೀರ್ವಚನೆ, ಭಜನೆ, ಭರತನಾಟ್ಯ, ಭಕ್ತಿಗೀತೆಗಳ ಕಾರ್ಯಕ್ರಮವೂ ಇತ್ತು. ಶಾಸ್ತ್ರೋಕ್ತವಾಗಿ ನಡೆದ ವಿವಾಹ ಸಂದರ್ಭದಲ್ಲಿ ಗಂಡು ಹೆಣ್ಣಿನ ಕಡೆಯವರು ವಧೂ-ವರರನ್ನು ಶೃಂಗರಿಸಿ ದಾರೆ ಮಂಟಕ್ಕೆ ತರಲಾಯಿತು.…

Read More

ಪ್ರೀತಿಯ ಸುಬ್ರಾಯ, ನಿನ್ನ ಅಮ್ಮ ಮಾಡುವ ಆಶೀರ್ವಾದಗಳು. ನಾನು ಕ್ಷೇಮ, ನೀನು ಕ್ಷೇಮ ಎಂದು ಭಾವಿಸುತ್ತೇನೆ. ನೀನು ಬೆಂಗಳೂರಿಗೆ ಹೋಗಿ ತಿಂಗಳಾದರೂ ಕಾಗದ ಹಾಕಲಿಲ್ಲ. ಅದಕ್ಕಾಗಿ ನಾನೇ ನಿನ್ನ ಯೋಗ ಕ್ಷೇಮ ವಿಚಾರಿಸಲು ಕಾಗದ ಹಾಕುತ್ತಿದ್ದೇನೆ. ಪತ್ರ ತಲುಪಿದ ಕೂಡಲೇ ಕಾಗದ ಬರೆ. ಹಾಗೆ ನಾಡಿದ್ದು ದೇವಸ್ಥಾನದ ಪೂಜೆ ಇದೆ.ಈ ಬಾರಿ ನಮ್ಮದೇ ಪೂಜೆ. ಪೇಟೆಯಲ್ಲಿ ಹಣ್ಣು-ಹೂ ತುಂಬಾ ದುಬಾರಿಯಾಗಿದೆ. ಸ್ವಲ್ಪ ಹಣ ಕಳಿಸು. ದೇವರಿಗೆ ಬಿಟ್ಟ ಹೂಂಜ ನಾಯಿ ಕಚ್ಚಿ ಸತ್ತು ಹೋಯಿತು, ಅದಕ್ಕೆ ಮೂಕಕ್ಕನ ಮನೆಯಿಂದ ಒಂದು ಹೂಂಜ ತಂದು ದೇವರಿಗೆ ಕೊಡಬೇಕು. ಅದಕ್ಕೂ ಸ್ವಲ್ಪ ಹಣ ಕಳುಹಿಸು.ಕೋಟೇಶ್ವರದ ಮಹಾಬಲಣ್ಣ ಒಂದು ಹುಂಡಿ ಹೇಳಿದ್ದಾರೆ. ನಿನಗೆ ಇಷ್ಟ ಇದ್ದರೆ ಫೋಟೋ ಕಳುಹಿಸಿ ಕೊಡುತ್ತೇನೆ. ಮೊನ್ನೆ ಸಿಂಗಾರಿ ದನಕ್ಕೆ ಬಂಗಾರಿ ಕರು ಹುಟ್ಟಿದೆ. ಹಾಲುಡೈರಿಗೆ ದಿನ 2 ಲೀಟರ್ ಹಾಲು ಕೊಡುತ್ತಿದ್ದೇನೆ. ನಿನ್ನೆಯಿಂದ ಡಿಗ್ರಿ ಕಡಿಮೆ ಬಂದ ಕಾರಣ ಹಾಲುಡೈರಿ ಬುಡ್ಡಿ ಹಾಲು ವಾಪಾಸು ಕಳ್ಸಿದ್ದಾಳೆ. ಕುಂದಾಪ್ರ ಡಾಟ್ ಕಾಂ…

Read More

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪ್ರಶಸ್ತಿ ಪ್ರದಾನ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಸ್ಥಾನಗಳಿಗೆ ಚಿನ್ನವನ್ನು ಅರ್ಪಿಸುವುದಕ್ಕಿಂತ ವಿದ್ಯಾಲಯಗಳಿಗೆ ಕೊಡುಗೆ ನೀಡಿದರೇ ಸಾವಿರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ನೆರವು ನೀಡಿದಂತಾಗುತ್ತದೆ ತನ್ಮೂಲಕ ದೇಶದ ಅಭ್ಯುದಯಕ್ಕೆ ವರವಾಗಬಲ್ಲಂತಹ ವ್ಯಕ್ತಿಗಳು ನಿರ್ಮಾಣಗೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆಯಾಗುವರು ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದರು. ಅವರು ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಡಾ. ಎಚ್. ಶಾಂತಾರಾಮ್ ಬಯಲು ರಂಗ ಮಂದಿರದಲ್ಲಿ ಕಾಲೇಜಿನ ಎನ್.ಸಿ.ಸಿ ಆರ್ಮಿ ಮತ್ತು ನೇವಿ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಾದ ಗುರುರಾಜ್ ಮತ್ತು ಸನಾ ಅವರಿಗೆ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಜೀವದ ಹಂಗು ತೊರೆದು ದೇಶಕ್ಕಾಗಿ ಹೋರಾಡಿ ಮಡಿದ ಯೋಧರ ಸೇವೆ ಅನನ್ಯವಾದುದು. ಅವರ ಕಾರ್ಯಕ್ಷಮತೆಗೆ ಪ್ರತಿಯೊಬ್ಬರು ಗೌರವ ಸೂಚಿಸಬೇಕಾದುದು ನಮ್ಮ ಆದ್ಯ ಕರ್ತವ್ಯವು ಆಗಿದೆ. ಭಂಡಾರ್‌ಕಾರ್ಸ್ಕಾಲೇಜಿನ ಹಳೆ ವಿದ್ಯಾರ್ಥಿಗಳು ಮೇಜರ್ ಸಂದೀಪ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಕೂಸಳ್ಳಿ ಫಾಲ್ಸ್‌ಗೆ ಟ್ರಕ್ಕಿಂಗ್‌ಗೆಂದು ತೆರಳಿದ್ದ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಕಾಲೇಜಿನ ಅಂತಿಮ ಬಿಸಿಎ ಪ್ರಸಾದ್ ಅಮೀನ್ (22) ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಉಡುಪಿಯ ಎಂಜಿಎಂ ಕಾಲೇಜಿನ ಸುಮಾರು 110 ಮಂದಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ತಂಡ ಪ್ರತಿವರ್ಷದಂತೆ ಈ ವರ್ಷವೂ ಬೈಂದೂರು ಸಮೀಪದ ತೂದಳ್ಳಿಯಲ್ಲಿರುವ ಕೂಸಳ್ಳಿ ಫಾಲ್ಸ್‌ಗೆ ತೆರಳಿದ್ದರು. ಈ ಸಂದರ್ಭ ಜಲಪಾತದ ಮೊದಲ ಸ್ಥರದಲ್ಲಿ ಈಜುತ್ತಿದ್ದ ವಿದ್ಯಾರ್ಥಿಗಳ ಪೈಕಿ ಪ್ರಸಾದ್ ಇದ್ದಕ್ಕಿದ್ದಂತೆ  ನೀರಿನಲ್ಲಿ ಮುಳುಗಲಾರಂಭಿಸಿದ. ಆತನನ್ನು ರಕ್ಷಿಸಲು ಗೆಳೆಯರು ಹರಸಾಹಸ ಪಟ್ಟರೂ ಕೊನೆಗೂ ಹಿಡಿತ ತಪ್ಪಿ ಪ್ರಸಾದ್ ನೀರಿನಲ್ಲಿ ಬಂಡೆಯ ಅಡಿಯಲ್ಲಿ ಸಿಲುಕಿ ಮೃತಪಟ್ಟನೆನ್ನಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಆತನನ್ನು ರಕ್ಷಿಸಲು ಕೊನೆ ಕ್ಷಣದವರೆಗೂ ಪ್ರಯತ್ನ ನಡೆಸಿದರೂ ಬಂಡೆಯ ನಡುವೆ ಕಂದಕವಿದ್ದುದರಿಂದ ಸಾಧ್ಯವಾಗಲಿಲ್ಲ. ಮುಳಗುತ್ತಿದ್ದ ಇನ್ನೊರ್ವ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ.ದಾಪ್ರ ಡಾಟ್ ಕಾಂ ಸುದ್ದಿ. ಟ್ರಕ್ಕಿಂಗ್‌ಗೆ ಬಂದಿದ್ದ ಇತರ ವಿದ್ಯಾರ್ಥಿಗಳನ್ನು ಉಡುಪಿಗೆ ಮರಳಿ ಕಳುಹಿಸಲಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ ಸಮಾರಂಭವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಎ.16ರ ಶನಿವಾರ ಕಳವಾಡಿಯಲ್ಲಿ ವೈಭವದಿಂದ ಜರುಗಲಿದೆ. ಪ್ರತಿಭಾ ಪುರಸ್ಕಾರ, ನೃತ್ಯ, ಸಂಗೀತ, ನಾಟಕ ಮುಂತಾದ ಮನೋರಂಜನಾ ಕಾರ್ಯಕ್ರಮಗಳು ಜರುಗಲಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಸಭಾ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಲಿದ್ದಾರೆ. ಈ ಸಂದರ್ಭದಲ್ಲಿ ಊರಿನ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಪ್ರತಿಭೆಗಳು ಹಾಗೂ ಸುರಭಿ ಬೈಂದೂರು ತಂಡದಿಂದ ನೃತ್ಯ, ಹೇನಬೇರ್ ರಾಮಚಂದ್ರ ಹಾಗೂ ಯದುರಾಜ್ ಅವರಿಂದ ಸಂಗೀತ ಕಾರ್ಯಕ್ರಮ, ಭೂಮಿಕಾ ಹಾರಾಡಿ ಇವರಿಂದ ಅರಗಿನ ಬೆಟ್ಟ ನಾಟಕ ಜರುಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More