ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಪ್ರದಾಯಿಕ ಶಿಕ್ಷಣದಲ್ಲಿ ಶಿಕ್ಷಕರ ಬೋಧನಾ ನಿರ್ವಹಣೆ ಸರಳ ಸ್ವರೂಪದ್ದಾಗಿರುತ್ತದೆ. ಅವರಿಗೆ ಸಿದ್ಧ ಪಠ್ಯ ಮತ್ತು ಸ್ವೀಕೃತ ಕಲಿಕಾ-ಬೋಧನಾ ವಿಧಾನದ ನೆರವು ಇರುತ್ತದೆ. ಆದರೆ ಬುಡಕಟ್ಟು ಮಕ್ಕಳಿಗೆ ಅವರ ಬದುಕಿನ ವಿಧಾನಗಳನ್ನೇ ಆಕರವಾಗಿ ಬಳಸಬೇಕಾಗಿರುವುದರಿಂದ ಅವರ ಶಿಕ್ಷಕರಿಗೆ ಅದು ದೊಡ್ಡ ಸವಾಲಾಗಿ ಪರಿಣಮಿಸುತ್ತದೆ. ಅದಕ್ಕೆ ವಿಶೇಷ ಸಾಮರ್ಥ್ಯ ಅಗತ್ಯ. ಆ ಸಾಮರ್ಥ್ಯ ಪ್ರಸಕ್ತ ತರಬೇತಿಯಲ್ಲಿ ಅವರು ಸಂಪಾದಿಸಲಿ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಆಶಿಸಿದರು. ಇಂಡಿಯ ಫೌಂಡೇಶನ್ ಫಾರ್ ಆರ್ಟ್ಸ್ ಟೈಟನ್ ಕಂಪನಿಯ ಪ್ರಾಯೋಜಕತ್ವದಲ್ಲಿ ಕನ್ಯಾನದ ನಮ್ಮಭೂಮಿಯಲ್ಲಿ ನಡೆಸುತ್ತಿರುವ ನಾಲ್ಕು ದಿನಗಳ ’ಪಠ್ಯಕ್ರಮದಲ್ಲಿ ಸ್ಥಳೀಯ ಸಂವೇದನೆಗಳ ಸಮನ್ವಯ’ ಕುರಿತಾದ ’ಕಲಿ-ಕಲಿಸು’ ತರಬೇತಿ ಶಿಬಿರವನ್ನು ಅವರು ಉದ್ಘಾಟಿಸಿದ ಬಳಿಕ ಮಾತನಾಡಿದರು. ಆರಂಭಿಕ ನುಡಿಗಳನ್ನಾಡಿದ ಶಿಬಿರದ ನಿರ್ದೇಶಕ, ಫೌಂಡೇಶನ್ನ ಕಲಾ ಶಿಕ್ಷಣ ವಿಭಾಗದ ಕಾರ್ಯಕ್ರಮ ನಿರ್ವಾಹಕ ಟಿ. ಎನ್. ಕೃಷ್ಣಮೂರ್ತಿ ’ಕಲಿ-ಕಲಿಸು’ ತರಬೇತಿಯ ವಿನ್ಯಾಸವನ್ನು ವಿವರಿಸಿದರು. ಮೈಸೂರು ಜಿಲ್ಲೆಯ ಬುಡಕಟ್ಟು ವಿದ್ಯಾರ್ಥಿಗಳು ಕಲಿಯುತ್ತಿರುವ ಶಾಲೆಗಳಲ್ಲಿ ದುಡಿಯುತ್ತಿರುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತೀರ್ವ ಪೈಪೋಟಿಯಿರುವ ಇಂದಿನ ಆಧುನಿಕ ಯುಗದಲ್ಲಿ ಉದ್ಯೋಗವನ್ನು ಗಿಟ್ಟಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ. ಇಂತಹ ಪೈಪೋಟಿಯ ಕಾಲದಲ್ಲಿಯೂ ಸಹ ನಾವು ಯಶಸ್ವಿಯಾಗಿ ಉದ್ಯೋಗ ಪಡೆದುಕೊಳ್ಳಲು ಅವಶ್ಯವಾಗಿ ರೂಪಿಸಿಕೊಳ್ಳಬೇಕಾದ ವ್ಯಕ್ತಿತ್ವ, ಸಂದರ್ಶನಕ್ಕೆ ಹಾಜರಾಗುವ ಕ್ರಮ, ವಿಷಯ ಮಂಡನೆಯ ರೀತಿ, ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವ ಬಗೆಯ ಕುರಿತು ಮಂಗಳೂರಿನ ಶ್ರೀನಿವಾಸ ಇನ್ಸ್ಟ್ಯೂಟ್ನ ಪ್ರಾಧ್ಯಾಪಕ ಪ್ರೊ. ಸುಬ್ರಹ್ಮಣ್ಯ ಸಂದರ್ಶನದ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ಡಾ. ಉಮೇಶ್ ಮಯ್ಯ ಸಂಯೋಜಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎ ಮೇಳಿ ಉಪಸ್ಥಿತರಿದ್ದರು. ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಕೆ.ಅಂಕಿತಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗ್ರಾಮ ಪಂಚಾಯತುಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೇಂದ್ರಿಕೃತ ಸ್ಥಾನವಾಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಜನರ ಕೆಲಸಗಳನ್ನು ಸೂಕ್ತ ಸಮಯದಲ್ಲಿ ಮಾಡಿಕೊಟ್ಟಾಗ ಜನರಿಗೆ ಪಂಚಾಯತ್ ಮೇಲೆ ನಂಬಿಕೆ, ವಿಶ್ವಾಸ ಮೂಡಲು ಸಾಧ್ಯವಾಗುತ್ತದೆ. ಗ್ರಾಮ ಪಂಚಾಯತ್ ಸದಸ್ಯರು ಪಕ್ಷಬೇಧ ಮರೆತು ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿ ಗ್ರಾಮ ಪಂಚಾಯತ್ನ ನೂತನ ಕಾರ್ಯಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಪಂಚಾಯತ್ನಲ್ಲಿ ಮುಂದಿನ ಐದು ವರ್ಷದ ಯೋಜನೆ ರೂಪಿಸಬೇಕು. ಅಭಿವೃದ್ಧಿ ನೀಲಿನಕ್ಷೆಯನ್ನು ತಯಾರಿಸಿ ಜನಪ್ರತಿನಿಧಿಗಳ ಮೂಲಕ ಯೋಜನೆ ಕಾರ್ಯರೂಪಕ್ಕೆ ಬರಲು ಶ್ರಮಿಸಬೇಕು. ಅನುದಾನ ಹಂಚಿಕೊಳ್ಳುವ ಪದ್ಧತಿಯನ್ನು ತೆಗೆದುಹಾಕಿ, ಗ್ರಾಮದ ಅಭಿವೃದ್ಧಿಗೆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಬೇಕು ಎಂದರು. ಜನಸಂಖ್ಯೆ ಕಡಿಮೆ ಇರುವ ಕಾರಣಕ್ಕೆ ಗಂಗೊಳ್ಳಿ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ಸರಕಾರ ಸಮ್ಮತಿ ಸೂಚಿಸಿಲ್ಲ. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯನ್ನು ೫೪ ಲಕ್ಷ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಭರತ ಖಂಡದ ಉದ್ದಗಲಕ್ಕೂ ಸಂಚರಿಸಿ ಧಾರ್ಮಿಕ ಮತ್ತು ಸಾಂಸ್ಕ್ರತಿಕ ತಳಹದಿಯಲ್ಲಿ ಸಮನ್ವಯತೆ, ಏಕತೆಯನ್ನು ಸಾಧಿಸುವಲ್ಲಿ ಶ್ರೀಶಂಕರ ಭಗವತ್ಪಾದರ ಕೊಡುಗೆ ಅಪಾರ. ಶಂಕರಾಚಾರ್ಯರ ಜನ್ಮ ದಿನವನ್ನು ಶ್ರದ್ಧೆ, ಭಕ್ತಿಯಿಂದ ಆಚರಿಸುವುದು ಅವರನ್ನು ಅವತಾರಿ ಪುರುಷರೆಂದು ದಿನನಿತ್ಯ ಅವರ ಸಾಧನೆಗಳನ್ನು ನೆನಪಿಸುವುದು ನಮ್ಮೆಲ್ಲರ ಕೃತಜ್ಞತೆಯ ದ್ಯೋತಕವಾಗಿದೆ ಎಂದು ಕರ್ನಾಟಕ ರಾಜ್ಯ ಶಂಕರ ತತ್ತ್ವ ಪ್ರಸಾರ ಅಭಿಯಾನಂನ ಸಂಚಾಲಕ ಡಾ. ಶಿಕಾರಿಪುರ ಕೃಷ್ಣಮೂರ್ತಿಯವರು ನುಡಿದರು. ಉಪ್ಪುಂದ ಶಂಕರ ಕಲಾ ಮಂದಿರದಲ್ಲಿ ನಡೆದ ಶ್ರೀಶಂಕರ ಅಷ್ಟೋತ್ತರ ಶತನಾಮಾವಳಿ ಜಪಯಜ್ಞ ಸಮರ್ಪಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಪೂರ್ವ ಪರಂಪರೆ ಮತ್ತು ಸಂಸ್ಕಾರ ವಿಶೇಷತೆಗಳ ಪರಿಚಯ ಮತ್ತು ಅನುಷ್ಠಾನಗಳಿಗಾಗಿ ತಳಮಟ್ಟದಲ್ಲಿ ಧರ್ಮಾಭಿಮಾನಿಗಳು ಸಂಘಟಿತರಾಗಿ ಕ್ರಿಯಾಶೀಲರಾಗುವುದು ಅವಶ್ಯ. ವೇದ ಸಾಹಿತ್ಯ, ದರ್ಶನ ಸಾಹಿತ್ಯ ಮತ್ತು ಆಚಾರ ಸಂಹಿತೆಗಳ ಪ್ರಸ್ತುತತೆ ಕುರಿತು ಚಿಂತನ-ಮಂಥನದಿಂದ ಪ್ರಜ್ಞಾವಂತ ಸಮಾಜದ ನಿರ್ಮಾಣ ಸಾಧ್ಯ ಎಂದರು. ಉಪ್ಪುಂದ ಚಂದ್ರಶೇಖರ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಉಪ್ಪುಂದದ ಸ್ವಗೃಹದಲ್ಲಿ ಹದಿಮೂರು ಶಾಖಂ ಋಕ್ ಸಂಹಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಬಸವಣ್ಣನವರು ಜಾತ್ಯಾತೀತ ಸಮಾಜ ನಿರ್ಮಾಣ ಮಾಡಲು ಹೊರಟ ಮಹಾನ್ ದಾರ್ಶನಿಕ. ಸಾಮಾಜಿಕ ನ್ಯಾಯ, ವ್ಯಕ್ತಿ ಸ್ವಾತಂತ್ರ್ಯ, ಮಾನವ ಹಕ್ಕುಗಳು, ಸಮಾನತೆ ಮತ್ತು ವಿಶ್ವ ಬಂಧುತ್ವದ ವಿಚಾರಗಳನ್ನು ಬಹಳ ಗಂಭೀರವಾಗಿ ಪ್ರತಿಪಾದಿಸಿದ ಬಸವಣ್ಣನವರ ವಿಚಾರಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು. ಅವರು ಸೋಮವಾರ ಮೇಲ್ಗಂಗೊಳ್ಳಿಯ ಶ್ರೀ ಬಸವೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿದ ಶ್ರೀ ಬಸವೇಶ್ವರ ದೇವಸ್ಥಾನದ ಶ್ರೀ ಬಸವೇಶ್ವರ ಬಾಲಕರ ಭಜನಾ ತಂಡದ ದಶಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಜನರಲ್ಲಿ ಆರ್ಥಿಕ ಸಮಾನತೆ ಬಂದಾಗ ಸಾಮಾಜಿಕ ಪರಿವರ್ತನೆ ಬರುತ್ತದೆ. ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶ ಬಹಳಷ್ಟು ಪ್ರಗತಿ ಕಂಡಿದ್ದು, ಜನಸಂಖ್ಯಾ ಸ್ಪೋಟದ ಪರಿಣಾಮ ಅಭಿವೃದ್ಧಿ ಕುಂಠಿತಗೊಂಡಿದೆ. ಹೀಗಾಗಿ ಜನಸಾಮಾನ್ಯರು ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಜನಪ್ರತಿನಿಧಿಗಳು ಅಭಿವೃದ್ಧಿಗೆ ಸಹಕಾರ ನೀಡಬೇಕು. ಸಂಘ ಸಂಸ್ಥೆಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ ಎಂದರು. ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಈ ಪರಿಸರದಲ್ಲಿ ಅನಾಥರಾಗಿ ಅಲೆದಾಡುತ್ತಿದ್ದ ಐವರನ್ನು ಪಾಸ್ಟರ್ ಸುನಿಲ್ ಡಿಸೋಜ ನೇತೃತ್ವದ ಶಂಕರಪುರದ ವಿಶ್ವಾಸದ ಮನೆ ಕಾರ್ಯಕರ್ತರು ಬುಧವಾರ ನಡೆಸಿದ ಮಾನವೀಯ ಕಾರ್ಯಾಚರಣೆಯಲ್ಲಿ ವಿಶ್ವಾಸದ ಮನೆಗೆ ಸೇರಿಸಲಾಯಿತು. ಇಬ್ಬರು ವೃದ್ಧೆಯರು ಬೈಂದೂರು ಬಸ್ಸ್ಟ್ಯಾಂಡ್ ಬಳಿ, ೪೦-೪೫ ವಯೋಮಾನದ ಒಬ್ಬ ಗಂಡಸು ಬೈಪಾಸ್ ಹತ್ತಿರ, ಒಬ್ಬ ವೃದ್ಧ ಶಿರೂರು ಗ್ರೀನ್ವ್ಯಾಲಿ ಶಾಲೆಯ ಸನಿಹ, ಒಬ್ಬ ಯುವಕ ಶಿರೂರು ಪೇಟೆಯಲ್ಲಿ ಅಲೆದಾಡುತ್ತಿದ್ದರು. ಕಾರ್ಯಾಚರಣೆಯಲ್ಲಿ ವಿಶ್ವಾಸದ ಮನೆಯ ಮುಖ್ಯಸ್ಥ ಪಾಸ್ಟರ್ ಸುನಿಲ್ ಡಿಸೋಜ ಜತೆ ಎಲಿಜಬೆತ್ ಡಿಸೋಜ, ಪ್ರದೀಪ ಮಾಬೆನ್, ಸಿಬ್ಬಂದಿಗಳಾದ ನವೀನ್, ಆಲ್ವಿನ್, ಪ್ರೇಮಾ ಲೋಬೊ, ಪ್ರಫುಲ್ಲಾ ಲೋಬೊ ಇದ್ದರು. ಗಂಗೊಳ್ಳಿಯ ಸಾಮಾಜಿಕ ಕಾರ್ಯಕರ್ತ ’ಗಂಗೊಳ್ಳಿ 24×7’ ಸೇವೆಯ ಇಬ್ರಾಹಿಂ ಗಂಗೊಳ್ಳಿ ತಮ್ಮ ಅಂಬ್ಯುಲನ್ಸ್ ಸಹಿತ ಕೈಜೋಡಿಸಿದರು.
ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಇನ್ನೆಂದೂ ಅ ಮನೆಯಂಗಳದಲ್ಲಿ ಮಕ್ಕಳ ಕಲರವ ಕೇಳಿಸಲಾರದು. ಆ ಮಕ್ಕಳೇ ಕಟ್ಟಿದ ಜೋಕಾಲಿ ಜೀಕಲಾರದು, ಅಲ್ಲಲ್ಲಿ ಅನಾಥವಾಗಿ ಬಿದ್ದಿರುವ ಆಟಿಕೆಗಳು ಸದ್ದು ಮಾಡಲಾರವು. ಸದಾ ಕಾಲ ಮಕ್ಕಳನ್ನು ಕರೆಯುತ್ತಿದ್ದ ತಂದೆಯ ಸ್ವರವೂ ಕೇಳಲಾರದು. ಹಕ್ಕಿಗಳು ಚಿಲಿಪಿಲಿ ಗುಟ್ಟಲಾರವು, ಅಬ್ಬಾ ವಿಧಿಯೇ ನೀನಿಷ್ಟು ಕಠೋರಿಯೇ? ಹಾಗಂತ ಅಲ್ಲಿ ನೆರೆದ ಪ್ರತಿಯೋರ್ವರ ಗಂಟಲಿನಲ್ಲಿ ಸದ್ದಿಲ್ಲದೆ ನಿಟ್ಟುಸಿರೊಂದು ಹೊರಹೊಮ್ಮಿತ್ತು. ಕಣ್ಣಂಚಿನಲ್ಲಿ ಇನ್ನಿಲ್ಲದ ದು:ಖವೊಂದು ಮಡುಗಟ್ಟಿ ನಿಂತಿತ್ತು. ಅಯ್ಯೋ.. ದೇವರೇ ನನ್ನನ್ಯಾಕೆ ಉಳಿಸಿಹೋದೆ ಅದೆಂಥಾ ಪಾಪಕ್ಕೆ ನನಗೇ ಈ ಶಿಕ್ಷೆ ನನ್ನನ್ನೂ ಸಹಾ ಕರೆದು ಕೊ. ಅಂತಾ ಆ ಹೆತ್ತೊಡಲು ಮರುಗುತ್ತಿದ್ದರೇ, ಓಹ್ ಬದುಕೇ ನಿನ್ಯಾಕೆ ಆ ಕುಟುಂಬದ ಪಾಲಿಗೆ ಇಷ್ಟೊಂದು ನಿಷ್ಕರುಣಿಯಾಗಿ ಹೋದೆ. ಎನ್ನುವ ಪ್ರಶ್ನೆ ಅಲ್ಲಿ ಮತ್ತೇ ಮತ್ತೇ ಮಗ್ಗಲು ಬದಲಿಸುತ್ತಿತ್ತು. ಆ ಮನೆಯ ಸಮೀಪದ ತೋಟದ ಕೆರೆಯೊಂದರ ದಂಡೆಯ ಮೇಲೆ ಇಬ್ಬರು ಪುಟ್ಟ ಗಂಡು ಮಕ್ಕಳ ಸಹಿತ ತಂದೆಯೋರ್ವನ ಶವಗಳು ಉದ್ದಕ್ಕೂ ಮೈಚೆಲ್ಲಿದ್ದುದು ಈ ಎಲ್ಲಾ ಸನ್ನಿವೇಶಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಸಿಲ ಬೇಗೆಯಿಂದ ಧಗದಗಿಸುತ್ತಿದ್ದ ಕುಂದಾಪುರ ತಾಲೂಕಿನ ಹಲವೆಡೆ ಇಂದು ಸಂಜೆಯ ವೇಳೆಗೆ ಮಳೆಯ ಸಿಂಚನವಾಗಿದೆ. ಕುಂದಾಪುರ ನಗರ ಹಾಗೂ ತಾಲೂಕಿನ ಸಿದ್ಧಾಪುರ, ನೇರಳಕಟ್ಟೆ, ಕೋಟೇಶ್ವರ, ಕೊಲ್ಲೂರು ಭಾಗಗಳಲ್ಲಿ ಲಘ ಮಳೆಯಾಗಿದೆ. ಇನ್ನು ಬೈಂದೂರು, ಉಪ್ಪುಂದ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿದ್ದರೂ ಈವರೆಗೂ ಮಳೆಯಾಗಿಲ್ಲ. ಕುಂದಾಪ್ರ ಡಾಟ್ ಕಾಂ ಸುದ್ದಿ. ದಿನದಿಂದ ದಿನಕ್ಕೆ ಸೂರ್ಯನ ಶಾಖ ಹೆಚ್ಚುತ್ತಿದ್ದು ಮಳೆಯಿಲ್ಲದೇ ಜನರು ಕಂಗೆಟ್ಟಿದ್ದರು. ಹಲವೆಡೆ ನೀರಿನ ಒರತೆಗಳು ಬತ್ತಿಹೋಗಿ ನೀರಿಗಾಗಿ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಇಂದಿನ ತುಂತುರು ಮಳೆ ಕೊಂಚ ಭೂಮಿಯನ್ನು ತಂಪುಗೊಳಿಸುವುದೇ ಹೊರತು ನೀರಿನ ಒರತೆಯನ್ನು ಹೆಚ್ಚಿಸದು. ಹಾಗಾಗಿ ಒಂದು ದೊಡ್ಡ ಮಳೆಯೇ ಬರಲಿ ಎಂದು ಜನ ಕಾಯುತ್ತಿದ್ದಾರೆ. ಇದರ ನಡುವೆ ವರ್ಷದಲ್ಲಿ ಮೊದಲು ಬಿದ್ದ ಹನಿಮಳೆಯನ್ನು ಜನ ಸ್ವಾಗತಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಟವಾಡಲೆಂದು ಕೆರೆಯ ಸಮೀಪ ತೆರಳಿದ್ದ ಇಬ್ಬರು ಮಕ್ಕಳು ಹಾಗೂ ಅವರನ್ನು ರಕ್ಷಿಸಲೆಂದು ತೆರಳಿದ ತಂದೆಯೂ ಸೇರಿದಂತೆ ಮೂವರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಸಿದ್ಧಾಪುರ ಸಮೀಪದ ಉಳ್ಳೂರು-74ರಲ್ಲಿ ವರದಿಯಾಗಿದೆ. ಐರ್ಬೈಲು ನಿವಾಸಿ ರಾಘವೇಂದ್ರ ಕಿಣಿ (38) ಹಾಗೂ ಅವರ ಮಕ್ಕಳಾದ ಪ್ರಕಾಶ್ (13), ಯೋಗೀಶ್ (12) ಮೃತ ದುರ್ದೈವಿಗಳು. ಕುಂದಾಪ್ರ ಡಾಟ್ ಕಾಂ. ಘಟನೆಯ ವಿವರ ರಾಘವೇಂದ್ರ ಕಿಣಿ ಅವರ ಇಬ್ಬರು ಮಕ್ಕಳು ತಮ್ಮ ಮನೆಯ ಸಮೀಪದಲ್ಲಿರುವ ತೋಟಕ್ಕೆ ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದರು. ಆಟವಾಡುತ್ತಾ ಕೆರೆ ಸಮೀಪ ಬಂದಾಗ ಪ್ರಕಾಶನ ಕಾಲು ಜಾರಿ ಕೆರೆಗೆ ಬಿದ್ದಿದ್ದ. ಆತನ್ನು ರಕ್ಷಿಸಲು ಯೋಗೀಶ್ ಕೂಡ ಕೆರೆಗೆ ಇಳಿದನಾದರೂ ಇಬ್ಬರೂ ಕೆರೆಯಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಆತನ ಸ್ನೇಹಿತರು ಕೂಗಿಕೊಳ್ಳಲಾರಂಭಿದ್ದ. ಕೂಗಾಟ ಕೇಳಿದ ರಾಘವೇಂದ್ರ ಕಿಣಿ ಮನೆಯಿಂದ ಓಡಿಬಂದು ನೋಡಿದ್ದಾರೆ. ಆಳವಿದ್ದ ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಅವರೂ ಕೆರೆಗೆ ಇಳಿದಿದ್ದಾರೆ. ಆದರೆ ಆಳವಿದ್ದ ಕೆರೆಯಲ್ಲಿ ಅವರೂ ಸ್ಥಿಮಿತ ಕಳೆದುಕೊಂಡು ಮೂವರೂ ನೀರಿನಲ್ಲಿ ಮುಳುಗಿ…
ಕುಂದಾಪ್ರ ಡಾಟ್ ಕಾಂ ವರದಿ | ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಬದುಕು ರೂಪಿಸುವ ಮಹತ್ತರ ಘಟ್ಟ. ಈ ಹಂತದಲ್ಲಿ ಸರಿಯಾದ ಮಾರ್ಗದರ್ಶನ ಹಾಗೂ ಶಿಕ್ಷಣ ದೊರೆತರೆ ಪ್ರತಿಯೊಬ್ಬರ ಜೀವನವೂ ಉಜ್ವಲವಾಗುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕ ವಾತಾವರಣ ನಿರ್ಮಿಸಬೇಕೆಂಬ ಉದ್ದೇಶದೊಂದಿಗೆ 2003ರಲ್ಲಿ ಸ್ಥಾಪನೆಗೊಂಡ ಕುಂದಾಪುರ ಆರ್.ಎನ್. ಶೆಟ್ಟಿ. ಪಿಯು ಕಾಲೇಜು ಇಂದು ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳ ಪೈಕಿ ಅಗ್ರಗಣ್ಯ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಉಡುಪಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ವಿದ್ಯಾರ್ಜನೆಗಾಗಿ ಬರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಪಿಯು ಶಿಕ್ಷಣವನ್ನು ಕಾಲೇಜಿನಲ್ಲಿ ನೀಡುತ್ತಾ ಬರಲಾಗಿದೆ. ಈ ಸಂಸ್ಥೆಯಲ್ಲಿ ವಿದ್ಯಾರ್ಜನೆಗೈದು ತೆರಳಿರುವ ಅದೆಷ್ಟೊ ವಿದ್ಯಾರ್ಥಿಗಳು ಇಂದು ಸಮಾಜದಲ್ಲಿ ಉತ್ತಮ ಹುದ್ದೆಗಳನ್ನಲಂಕರಿಸಿ, ಉದ್ಯಮವನ್ನು ನಡೆಸುತ್ತಾ ಮಾದರಿಯಾಗಿ ಜೀವನವನ್ನು ರೂಪಿಸಿಕೊಂಡಿದ್ದಾರೆ. ಸಂಸ್ಥೆಯ ನುರಿತ ಹಾಗೂ ಅನುಭವಿ ಉಪನ್ಯಾಸಕ ವೃಂದವು ತಮ್ಮ ಅನುಭವವನ್ನು ವಿದ್ಯಾರ್ಥಿಗಳಿಗೆ ಧಾರೆಯೆರೆದು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕಾಲೇಜಿನಲ್ಲಿ ದಾಖಲೆಯ ಫಲಿತಾಂಶ ಆರ್ಎನ್ಎಸ್ ಪಿಯು ಕಾಲೇಜು ಆರಂಭದಿಂದ ಇಂದಿನವರೆಗೂ…
