Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ನೆನಪಿನಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ ಪಂದ್ಯಾಟಕ್ಕೆ ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಚಾಲನೆ ನೀಡಿ ಮಾತಾಡಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕಾಗಿರುವುದು ವರ್ತಮಾನದ ತುರ್ತು. ಕ್ರೀಡೆ ದೈಹಿಕ ಕ್ಷಮೆತೆಗೆ ಮಾತ್ರವಲ್ಲ; ಮಾನಸಿಕ ಸದೃಢತೆಗೆ ಸಹಕಾರಿ ಎಂದರು. ಈ ಸಂದರ್ಭ ಸಂಸ್ಥೆಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಂಜಿತ್ ಟಿ.ಎನ್, ಶೈಕ್ಷಣಿಕ ನಿಕಾಯಕ ತಿಮ್ಮಪ್ಪ ಡಿ.ಎಸ್., ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು, ವಿಲ್ಮಾ ಶೆರಲ್ ಕಾರ್ನೆಲಿಯೊ, ಶ್ರೀಜೇಶ್ ಜಿ. ನಾಯ್ಕ್, ಕ್ರೀಡಾ ಕಾರ್ಯದರ್ಶಿ ನಿಶಾಂತ್ ಡಿಸೋಜ, ಜೊತೆ ಕಾರ್ಯದರ್ಶಿ ಕೀರ್ತೇಶ್ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿ ವಿಕಾಸ್ ಹಾಗೂ ಕ್ರೀಡಾ ಸಂಘದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿರೀಕ್ಷಾ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಇಲ್ಲಿ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಸಿ ಎಸ್ ಆರ್ ನಿಧಿಯಿಂದ ಶಾಲಾ ಸಭಾಂಗಣದ ಇಂಟರ್ಲಾಕ್ ಅಳವಡಿಕೆಗೆ ಭೂಮಿ ಪೂಜೆ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಸ್ಮಾರ್ಟ್ ಕ್ಲಾಸ್ ಇಂಟರ್ ಆಕ್ಟಿವ್ ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಗುರುರಾಜ್ ಗಂಟಿಹೊಳೆ ಮಾನ್ಯ ಶಾಸಕರು ಬೈಂದೂರು ಇವರು ಶಾಲಾ ಅಭಿವೃದ್ಧಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳು ಊರ ವಿದ್ಯಾಭಿಮಾನಿಗಳು ತೊಡಗಿಸಿಕೊಂಡರೆ ಮಾತ್ರ ಉತ್ತಮ ಶಾಲಾ ಪರಿಸರ ಮತ್ತು ಶಾಲಾ ಶೈಕ್ಷಣಿಕ ವ್ಯವಸ್ಥೆ ನಿರ್ಮಾಣವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶಾಂತೇರಿ ಕಾಮಾಕ್ಷಿ ಎಂಟರ್ಪ್ರೈಸಸ್ ವತಿಯಿಂದ ಶಾಲಾ ಸುರಕ್ಷತಾ ದೃಷ್ಟಿಯಿಂದ ಬೆಂಕಿ ಶಮನ ಚೆಂಡು ಇದರ ಪ್ರಾತ್ಯಕ್ಷಿತೆ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಸಿಎಸ್ಆರ್ ಅನುದಾನ ತರಲು ಸಹಕರಿಸಿದ ಚರಣ್ ಬೈಂದೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಾಲಾಡಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಹುಡುಗ ಹುಡುಗಿಯರ ತಂಡವು ಭಾಗವಹಿಸಿ ತಾಲೂಕು ಮಟ್ಟದಲ್ಲಿ ರನ್ನರ್ ಅಪ್ ಆಗಿ ನಾಲ್ಕು ಹುಡುಗರು ಮತ್ತು ನಾಲ್ಕು ಹುಡುಗಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಕ್ರೀಡಾ ಸಂಚಾಲಕಿಯಾದ ಪೂರ್ಣಿಮಾ ಪಿ. ನಾಯಕ್ ಮತ್ತು ಎಲ್ಲಾ ಉಪನ್ಯಾಸಕರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆಯ ವಿಶ್ವವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳ ಕಾರ್ಯವೈಖರಿ ಹಾಗೂ ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೈಗಾರಿಕಾ ಘಟಕಕ್ಕೆ ಭೇಟಿಯನ್ನು ಆಯೋಜಿಸಲಾಗಿತ್ತು. ಶಾಲಾ ಕಾಲೇಜಿನ ಶಿಕ್ಷಕರು ಮತ್ತು ಉಪನ್ಯಾಸಕರ ನೇತೃತ್ವದಲ್ಲಿ ವಿದ್ಯಾರ್ಥಿಗಳು “ನವದುರ್ಗ ಆಹಾರ ಉತ್ಪನ್ನಗಳ ಖಾಸಗಿ ನಿಯಮಿತ ಸಂಸ್ಥೆ “ಪಡುಬಿದ್ರಿ, ಇಲ್ಲಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕೆಯಲ್ಲಿ ನಡೆಯುವ ವಿವಿಧ ಹಂತಗಳ ಉತ್ಪಾದನಾ ಪ್ರಕ್ರಿಯೆ, ಯಂತ್ರೋಪಕರಣಗಳ ಬಳಕೆ, ಕಾರ್ಮಿಕರ ಕಾರ್ಯವಿಧಾನ, ಸುರಕ್ಷತಾ ಕ್ರಮಗಳು ಹಾಗೂ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಯ ಕುರಿತು ಅಧಿಕಾರಿಗಳು ವಿವರಿಸಿದರು. ವಿದ್ಯಾರ್ಥಿಗಳು ವಿವಿಧ ಯಂತ್ರೋಪಕರಣಗಳ ಕಾರ್ಯನಿರ್ವಹಣೆಯನ್ನು ವೀಕ್ಷಿಸಿ, ತಮ್ಮಲ್ಲಿದ್ದ ಸಂದೇಹಗಳನ್ನು ಕೇಳಿ ಪರಿಹರಿಸಿಕೊಂಡರು. ಈ ಭೇಟಿಯು ವಿದ್ಯಾರ್ಥಿಗಳಿಗೆ ಪಠ್ಯ ಜ್ಞಾನದ ಜೊತೆಗೆ ಪ್ರಾಯೋಗಿಕ ಅನುಭವವನ್ನು ನೀಡಿತು. ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ವಿಶ್ವವಿನಾಯಕ ವಿದ್ಯಾ ಸಂಸ್ಥೆಗಳ ಆಡಳಿತ ನಿರ್ದೇಶಕ ಹರೀಶ್ ಮರವಂತೆ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಓಣಂ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಲಾಯಿತು. “ಸಂಸ್ಕೃತಿ ಮತ್ತು ಸಂಪ್ರದಾಯಗಳ ಸಂಗಮ” ಎಂಬ ಆಶಯದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮವು ಕೇರಳದ ಸುಸಂಸ್ಕೃತ ಪರಂಪರೆ ಹಾಗೂ ಭಾರತೀಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಕಣ್ಣಿಗೆ ಕಟ್ಟುವಂತೆ ಅನಾವರಣಗೊಳಿಸಿತು. ಹೂವುಗಳಿಂದ ಸುಂದರವಾಗಿ ಅಲಂಕರಿಸಲಾಗಿದ್ದ ಹೂವಿನ ರಂಗೋಲಿ ಮುಂದೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, “ಹಬ್ಬಗಳು ಕೇವಲ ಸಂಭ್ರಮದ ಕ್ಷಣಗಳಷ್ಟೇ ಅಲ್ಲ; ಅವು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿಸುವ ಸೇತುವೆಗಳು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಇಂತಹ ಆಚರಣೆಗಳು ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸುತ್ತವೆ” ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳ ಸಾಂಸ್ಕೃತಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೆಂಚಿನ ಕಾರ್ಖಾನೆ ಕಾರ್ಮಿಕರೊಬ್ಬರು ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಗುಲ್ವಾಡಿ ಶಾಲೆಯ ಬಳಿ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ. ಮೃತಪಟ್ಟವರು. ಕೋಣಿ ಗ್ರಾಮದ ನಿವಾಸಿ ಉಮೇಶ ಪೂಜಾರಿ (58) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಗುಲ್ವಾಡಿ ಶಾಲೆಯ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಆರೋಪ ಮಾಡಿ ಗುಜರಿ ವ್ಯಾಪಾರಿಯೊಬ್ಬರಲ್ಲಿ ಹಣಕ್ಕೆ ಬೇಡಿಕೆ ಇಟ್ಟು ಬೆದರಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಂಡ್ಮಿ ನಿವಾಸಿ ಗುಜರಿ ವ್ಯಾಪಾರಿ ಜಿ. ಮೊಹಮ್ಮದ್ ದೂರುದಾರರು. ಅವರಿಗೆ ಸಚಿನ್ ಕರೆ ಮಾಡಿ, ಎರಡು ಚೀಲ ಅಕ್ಕಿಯನ್ನು ನಿಮ್ಮ ಮನೆ ಅಂಗಳದಲ್ಲಿ ಇರಿಸಿರುವುದಾಗಿ ತಿಳಿಸಿದ್ದ. ಬಳಿಕ ಮೊಹಮ್ಮದ್ ಅವರು ಮನೆಗೆ ಆಗಮಿಸಿದಾಗ ಸಚಿನ್ ರಿಕ್ಷಾದಲ್ಲಿ ಹಾಗೂ ನಾಗೇಂದ್ರ ಪುತ್ರನ್ ಮತ್ತು ಪ್ರದೀಪ್ ಬೈಕ್‌ನಲ್ಲಿ ಅಲ್ಲಿಗೆ ಬಂದಿದ್ದರು. ಈ ಸಂದರ್ಭ ನಾಗೇಂದ್ರ ಪುತ್ರನ್ ತಾನು ಸಾಮಾಜಿಕ ಕಾರ್ಯಕರ್ತನೆಂದು ಪರಿಚಯಿಸಿಕೊಂಡು ಮನೆಯ ಅಂಗಳದಲ್ಲಿದ್ದ ಅಕ್ಕಿ ಚೀಲಗಳ ದೃಶ್ಯವನ್ನು ಚಿತ್ರೀಕರಿಸಿರುವುದಾಗಿ ಹೇಳಿದ್ದಾನೆ. ಸರಕಾರಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಕುರಿತು ದೂರು ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಪ್ರಕರಣದಿಂದ ತಪ್ಪಿಸಿಕೊಳ್ಳಬೇಕಾದರೆ 2 ಲಕ್ಷರೂ. ನೀಡುವಂತೆ ಬೇಡಿಕೆ ಇಟ್ಟಿದ್ದು, ಹಣ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದಾಗ ಅವಾಚ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ್ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ-ಕೋಟೇಶ್ವರದ ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ (IQAC) ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ “Introduction to Epigraphy” (ಶಾಸನಶಾಸ್ತ್ರ ಪರಿಚಯ) ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರವು ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುಷಾ ವಸ್ತುಸಂಗ್ರಹಾಲಯದ ಸಂಶೋಧಕರಾದ ಶ್ರುತೇಶ್ ಆಚಾರ್ಯ ಅವರು ಮಾತನಾಡಿ, ಶಾಸನಗಳನ್ನು ಓದುವ ವಿಧಾನ, ಅವುಗಳ ಐತಿಹಾಸಿಕ ಹಿನ್ನೆಲೆ ಹಾಗೂ ಸಂರಕ್ಷಣೆಯ ಅನಿವಾರ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಶಾಸನಗಳನ್ನು ಕೇವಲ ಕಲ್ಲಿನ ಮೇಲೆ ಕೆತ್ತಿದ ಅಕ್ಷರಗಳಾಗಿ ನೋಡದೆ, ಅವುಗಳಲ್ಲಿ ಅಡಕವಾಗಿರುವ ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಂಶಗಳನ್ನು ವಿಶ್ಲೇಷಿಸುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಸವಿವರವಾದ ಮಾರ್ಗದರ್ಶನ ನೀಡಲಾಯಿತು. ಶಾಸನಗಳ ಅಧ್ಯಯನವು ಇತಿಹಾಸ ಸಂಶೋಧನೆಗೆ ಹೇಗೆ ಭದ್ರವಾದ ಬುನಾದಿಯಾಗುತ್ತದೆ ಎಂಬುದನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕ್ಲಬ್ ಆರಂಭವಾದ ಪ್ರಥಮ ವರ್ಷದಲ್ಲಿಯೇ ರೋಟರಿ ಕ್ಲಬ್ ಕೋಟ ಬ್ರಿಗೇಡ್‌ಗೆ ಹೊಸ ಕ್ಲಬ್‌ಗಳ ವಿಭಾಗದಲ್ಲಿ ಔಟ್ ಸ್ಟ್ಯಾಂಡಿಂಗ್ ನ್ಯೂ ಕ್ಲಬ್ ಜಿಲ್ಲಾ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ಹಾಸನದಲ್ಲಿ ನಡೆದ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಚಾರ್ಟರ್ ಅಧ್ಯಕ್ಷ ಪ್ರಥ್ವಿನ್ ಸಿ ಮೆಂಡನ್ ಹಾಗೂ ಈ ವರ್ಷದ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅವರಿಗೆ ನಿಕಟ ಪೂರ್ವ ಜಿಲ್ಲಾ ಗವರ್ನರ್ ಪಾಲಾಕ್ಷ ಕೆ. ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭ ಜಿಲ್ಲಾ ಅವಾರ್ಡ್ ಕಮಿಟಿ ಸಭಾಪತಿ, ಪಿಡಿಜಿ ಸಿಎ ದೇವಾನಂದ್, ಜಿಲ್ಲಾ ಅವಾರ್ಡ್ ಕಮಿಟಿ ಉಪ ಸಭಾಪತಿ ಜೈಕಿಶನ್ ಶೆಟ್ಟಿ, ಪಿಡಿಜಿ ರಾಜಾರಾಮ್ ಭಟ್, ಕ್ಲಬ್ ಅಡ್ವೈಸರ್ ಚಂದ್ರಶೇಖರ್ ಮೆಂಡನ್, ಜೋನಲ್ ಲೆಫ್ಟಿನೆಂಟ್ ದಯಾನಂದ್ ಆಚಾರ್, ಮಾಜಿ ಅಧ್ಯಕ್ಷರಾದ ಸುರೇಶ್ ಆಚಾರ್, ವೆಂಕಟೇಶ್ ಆಚಾರ್, ಪ್ರಕಾಶ್ ಹಂದಟ್ಟು, ಕಾರ್ಯದರ್ಶಿ ಶಿವರಾಜ್ ಹಾಗೂ ಸದಸ್ಯರಾದ ರಾಘವೇಂದ್ರ ಆಚಾರ್, ಭಾಸ್ಕರ್ ಪೂಜಾರಿ ಮುಂತಾದವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ತಾಯಿ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸಿ, ರಕ್ಷಿಸುವಂತೆ ಭೂಮಿತಾಯಿಯೂ ಸಮಸ್ತ ಜೀವಸಂಕುಲವನ್ನು ಪೋಷಿಸುತ್ತಾಳೆ. ತಾಯಿಯ ಮೇಲಿನ ಪ್ರೀತಿ ಮತ್ತು ಗೌರವವನ್ನು ಪರಿಸರ ಸಂರಕ್ಷಣೆಯೊಂದಿಗೆ ಬೆಸೆಯುವ ಕೇಂದ್ರ ಸರ್ಕಾರದ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನವು ಪ್ರಕೃತಿಯೊಂದಿಗೆ ಮಾನವನ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಸದಾಕತ್ ನುಡಿದರು. ಅವರು ವಿದ್ಯಾಗಿರಿಯ ಪ್ಯಾಲೇಸ್ ಗ್ರೌಂಡ್ಸ್ನಲ್ಲಿ ಮಂಗಳವಾರ ಆಳ್ವಾಸ್ ಪದವಿ ಪೂರ್ವಕಾಲೇಜಿನ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ‘ಏಕ್ ಪೇಡ್ ಮಾ ಕೆ ನಾಮ್ 3.0’ ವೃಕ್ಷಾರೋಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಿಡ ನೆಡುವುದು ಕೇವಲ ಪರಿಸರ ಕಾರ್ಯಕ್ರಮವಲ್ಲ, ಪ್ರಕೃತಿಯ ಸಂರಕ್ಷಣೆಯನ್ನು ಪ್ರತಿಯೊಬ್ಬರ ಜವಾಬ್ದಾರಿಯನ್ನಾಗಿ ರೂಪಿಸುವ ಜನಾಂದೋಲನದ ಭಾಗವಾಗಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2024ರ ವಿಶ್ವ ಪರಿಸರ ದಿನದಂದು ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನಕ್ಕೆ ಚಾಲನೆ ನೀಡಿ, ಪ್ರತಿಯೊಬ್ಬರೂ ತಮ್ಮ ತಾಯಿಯ ಗೌರವಾರ್ಥವಾಗಿ ಒಂದು ಗಿಡ…

Read More