ಜ್ಞಾನದ ದೀಪ ಹಚ್ಚಿ ಬದುಕಿನ ದಾರಿ ತೋರುವ ಜವಾಬ್ದಾರಿ ಗುರುವಿನದ್ದು ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿ ವಿದ್ಯಾರ್ಥಿಗಳ ಬದುಕಿನಲ್ಲಿ ಜ್ಞಾನದ ದೀಪ ಹಚ್ಚಿ ಬದುಕಿನ ದಾರಿ ತೋರುವ ಜವಾಬ್ದಾರಿ ಗುರುವಿನ ಮೇಲಿದೆ. ಗುರುವು ತೋರಿದ ದಾರಿಯಲ್ಲಿ ಮುನ್ನಡೆದರೇ ಯಶಸ್ಸು ಕಾದಿದೆ. ಅಧಿಕ ಅಂಕ ಗಳಿಕೆಯ ಹೊರತಾಗಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕ್ರಿಯಾಶೀಲತೆಯನ್ನು ಶಿಕ್ಷಣದಲ್ಲಿ ಮೂಲಕ ಹೊರಹಾಕಬೇಕು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ರಾಜಶೇಖರ ವೆಂಕಣಗೌಡ ಪಾಟೀಲ ಹೇಳಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಕುಂದಾಪುರದಂತಹ ತಾಲೂಕು ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಎಲ್ಲರಿಗೂ ಸಮಾನವಾದ ಶಿಕ್ಷಣ ದೊರೆಯುವಂತಾಗಬೇಕು ಎಂಬ ಆಶಯದೊಂದಿಗೆ ಮುನ್ನಡೆಯುತ್ತಿರುವುದು ಶ್ಲಾಘನೀಯ. ಅಂತಹ ಮನಸ್ಥಿತಿಯನ್ನು ಕೆಲವರಿಂದ ಮಾತ್ರ ನಿರೀಕ್ಷಿಸಲು ಸಾಧ್ಯವಿದೆ ಎಂದರು. ಕುಂದಪ್ರಭ ಪತ್ರಿಕೆಯ ಸಂಪಾದಕ ಯು.ಎಸ್. ಶೆಣೈ, ಕೆನರಾ ಬ್ಯಾಂಕ್ ಚೀಫ್ ಮ್ಯಾನೇಜರ್ ವಿಷ್ಣುದಾಸ ಭಟ್, ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಸದಸ್ಯ ಅನಿಲ್ ಚಾತ್ರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೇಸಿಗೆ ಶಿಬಿರಗಳು ಮಕ್ಕಳ ಕೌಶಲ್ಯ ಅಭಿವೃದ್ದಿ ಹಾಗೂ ಸೃಜನಶೀಲತೆಯ ಅನ್ವೇಷಣೆಗೆ ದಾರಿ ಮಾಡಿಕೊಡುತ್ತದೆ ಎಂದು ಕೆ.ಎಸ್. ಮೆಡಿಕಲ್ ಕಾಲೇಜಿನ ಪ್ರೊ. ಡಾ. ರಶ್ಮಿ ಹೇಳಿದರು. ಕೋಟೇಶ್ವರ ಕೆನರಾ ಕಿಡ್ಸ್ ಆಶ್ರಯದಲ್ಲಿ ನಡೆದ ಬೇಸಿಗೆ ಶಿಬಿರ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಾ. ಜಗದೀಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನರೇಂದ್ರ ಕುಮಾರ್ ಕೋಟ, ಸವಿತಾ ಐತಾಳ್ ಹಾಗೂ ಕೆನರಾ ಕಿಡ್ಸ್ ಸಂಚಾಲಕಿ ವಿನಂತಿ ಎಸ್. ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವವನ್ನು ವಿಕಸಿಸಿ, ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸುತ್ತದೆ. ಇಲ್ಲಿ ಕಲಿಯುವ ಅನೇಕ ಸಂಗತಿಗಳು ವಿದ್ಯಾರ್ಥಿ ಜೀವನದಲ್ಲಿ ಬಹಳ ಉಪಯುಕ್ತವಾಗುತ್ತದೆ ಎಂದು ಕುಂದಾಪುರ ಚಿನ್ಮಯ್ ಆಸ್ಪತ್ರೆಯ ಡಾ. ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರ, ತ್ರಿವರ್ಣ ಆರ್ಟ್ ಕ್ಲಾಸ್ ಕುಂದಾಪುರ ಹಾಗೂ ಕೋಣಿಯ ಮಾತಾ ಮಾಂಟೆಸ್ಸೊರಿ ಶಾಲೆಯ ಆಶ್ರಯದಲ್ಲಿ ಕುಂದಾಪುರದ ರೋಟರಿ ನರ್ಸರಿ ಸ್ಕೂಲ್ನಲ್ಲಿ ನಡೆದ ೧೦ ದಿನಗಳ ಆರ್ಟ್ ಫೆಸ್ಟ್-2016 ಬೇಸಿಗೆ ರಜಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸೂಪರ್ ಗ್ರೇಡ್ ಇಲೆಕ್ಟ್ರಿಕಲ್ ಗುತ್ತಿಗೆದಾರರಾದ ಕೆ.ಆರ್.ನಾಯ್ಕ್, ರೋಟರಿ ಕಾರ್ಯದರ್ಶಿ ಸಂತೋಷ್ ಕೋಣಿ ಉಪಸ್ಥಿತರಿದ್ದರು. ಶಿಬಿರ ನಿರ್ದೇಶಕ ಹರೀಶ್ ಸಾಗಾ ಸ್ವಾಗತಿಸಿದರು. ಮಾತಾ ಮಾಂಟೆಸ್ಸೊರಿ ಶಾಲೆಯ ಪ್ರಾಂಶುಪಾಲೆ ಭಾರತಿ ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವೈಷ್ಣವಿ ಭಟ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕ್ಯಾಂಪಸ್ನಲ್ಲಿ ನಿತೀಶ್ ಪಿ ಬೈಂದೂರು ಇವರ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನವನ್ನು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಕೆ.ಭೈರಪ್ಪ ಅವರು ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ತುಳು ಚಿತ್ರನಟ ದೇವಿದಾಸ್ ಕಾಪಿಕಾಡ್, ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಾರುಕೂರು ಉದಯ, ಛಾಯಾಗ್ರಾಹಕ ನಿತೀಶ್ ಪಿ ಬೈಂದೂರು ಉಪಸ್ಥಿತರಿದ್ದರು. ಛಾಯಾಚಿತ್ರ ಪ್ರದರ್ಶನವು ದಿನಾಂಕ ೨೨ರವರೆಗೂ ನಡೆಯಲಿರುವುದು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಗನ್ನಡದ ಬಹುನಿರೀಕ್ಷೆಯ ಚಿತ್ರ ’ಬಿಲಿಂಡರ್’ ತೆರೆಗೆ ಅಪ್ಪಳಿಸಲು ಸಿದ್ದಗೊಂಡಿದೆ. ಎಪ್ರಿಲ್ 22ರಿಂದ ಕುಂದಾಪುರ ವಿನಾಯಕ ಚಿತ್ರಮಂದಿರ ಹಾಗೂ ಉಡುಪಿಯ ಕಲ್ಪನಾ ಚಿತ್ರಮಂದಿರಗಳಲ್ಲಿ ಬಿಲಿಂಡರ್ ತೆರೆ ಕಾಣಲಿದೆ. ಖ್ಯಾತ ಸಂಗೀತ ನಿರ್ದೇಶಕ, ಕುಂದಾಪುರ ಕನ್ನಡದ ಚಿತ್ರ ನಿರ್ದೇಶಕ ರವಿ ಬಸ್ರೂರ್ ಅವರು ಈ ಭಾರಿ ಸ್ವತಃ ಹೀರೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಶ್ರೀಜಾ ಶೆಟ್ಟಿ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ರಘು ಪಾಂಡೇಶ್ವರ್ ಸೇರಿದಂತೆ ಬಹುಪಾಲು ಕುಂದಾಪುರ ತಾಲೂಕಿನ ಪ್ರತಿಭೆಗಳೇ ನಟಿಸಿದ್ದಾರೆ. ಚಿತ್ರವನ್ನು ಸ್ವತಃ ರವಿ ಬಸ್ರೂರ್ ನಿರ್ದೇಶಿಸಿದ್ದರೇ, ಸಚಿನ್ ಬಸ್ರೂರ್ ಮೊದಲ ಭಾರಿಗೆ ಕ್ಯಾಮರ್ ಹಿಡಿದ್ದಾರೆ. ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ಕುಮಾರ್ ಹಾಗೂ ರೋರಿಂಗ್ ಸ್ಟಾರ್ ಶ್ರೀಮುರುಳಿ ಬಿಲಿಂಡರ್ ಚಿತ್ರದ ಎರಡು ಹಾಡುಗಳಿಗೆ ಧ್ವನಿಯಾಗಿರುವುದು ಸಾಮಾಜಿಕ ತಾಣಗಳನ್ನು ವೈರಲ್ ಆಗಿ ಚಿತ್ರದ ಬಗ್ಗೆ ಭಾರಿ ನೀರಿಕ್ಷೆ ಹುಟ್ಟಿಸಿತ್ತು. ಟ್ರೇಲರ್ ಹಾಗೂ ಹಾಡುಗಳು ಸೋಗಸಾಗಿ ಮುಡಿಬಂದಿದ್ದು ಚಿತ್ರಕಥೆ ಹೇಗಿರಲಿದೆ ಎಂಬುದನ್ನು ತೆರೆಯ ಮುಂದೆ ಕುಳಿತೇ ನೋಡಬೇಕಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬೈಂದೂರು ಪಡುವರಿಯ ಭರವಸೆಯ ಹವ್ಯಾಸಿ ಯುವ ಛಾಯಾಗ್ರಾಹಕ ನಿತೀಶ್ ಪಿ. ಬೈಂದೂರು ಅವರ ಛಾಯಾಚಿತ್ರ ಪ್ರದರ್ಶನ ಎ.21, 22 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಆಡಿಟೋರಿಯಂನಲ್ಲಿ ಜರುಗಲಿದೆ. ಮಂಗಳೂರು ವಿವಿ ಕುಲಾಧಿಪತಿ ಟಿ.ಡಿ.ಕೆಂಪರಾಜು ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಎರಡು ದಿನಗಳ ಕಾಲ ನಿತೀಶ್ ಅವರ ಛಾಯಾಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಅವರ ಕ್ಲಿಕ್ಕಿಸಿದ ಈವರೆಗೆನ ಅತ್ಯುತ್ತಮ ಛಾಯಾಚಿತ್ರಗಳು ಪ್ರದರ್ಶನ ಕಾಣಲಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ನಿತೀಶ್ ಅವರದ್ದು ಬಹುಮುಖ ಪ್ರತಿಭೆಯ ವ್ಯಕ್ತಿತ್ವ. ಆಳ್ವಾಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿರುವಾಲೇ ‘ದಿ ಹಿಂದೂ’, ‘ಕರ್ನಾಟಕ ಪೋಟೋ ನ್ಯೂಸ್’ ಮುಂತಾದ ಪ್ರತಿಷ್ಠಿತ ಪತ್ರಿಕಾ ಸಂಸ್ಥೆಗಳಲ್ಲಿ ಟ್ರೇನಿ ಛಾಯಾಗ್ರಾಹಕರಾಗಿ ದುಡಿದ ಹೆಗ್ಗಳಿಕೆ ಅವರದ್ದು. ವಿವಿಧ ಪತ್ರಿಕೆಗಳಲ್ಲಿ ನಿರಂತರವಾಗಿ ನಿತೀಶ್ ಅವರ ಛಾಯಾಚಿತ್ರಗಳು ಆಗಾಗ್ಗೇ ಪ್ರಕಟಗೊಳ್ಳುವುದು ಅವರ ಪ್ರತಿಭೆಗೆ ಹಿಡಿದ ಕೈಗನ್ನಡಿ. ಈವರೆಗೆ ನಿತೀಶ್ ಅವರು ಛಾಯಾಚಿತ್ರ ಸ್ವರ್ಧೆಯಲ್ಲಿ ರಾಷ್ಟ್ರ, ರಾಜ್ಯ ಸ್ಭೆರಿದಂತೆ ವಿವಿಧ ಪ್ರಶಸ್ತಿಗಳನ್ನು…
ಕುಂದಾಪ್ರ ಡಾಟ್ ಕಾಂ ವಿಡಿಯೋ ನೋಡಿ ► ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ► ಬಿಸಿಲ ಬೇಗೆಯಲ್ಲಿ ರಸ್ತೆ ಮಧ್ಯೆ ಸಿಲುಕಿ ಬಸವಳಿದ ಜನ. ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಟ್ಟ ಪೊಲೀಸರು – http://kundapraa.com/?p=13403 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು ಮತ್ತು ಜೆಸಿಐ ಕುಂದಾಪುರ ಇವರ ಸಹಭಾಗಿತ್ವದೊಂದಿಗೆ ಕಾಲೇಜಿನ ಎಸ್.ಪಿ.ತೋಳಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಶಟ್ಲ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ 15 ದಿವಸಗಳ ಬೇಸಿಗೆ ತರಬೇತಿ ಶಿಬಿರ ಆರಂಭಗೊಂಡಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಜೆಸಿಐ ಕುಂದಾಪುರದ ಅಧ್ಯಕ್ಷ ಜೆಸಿ ವಿಷ್ಣು.ಕೆ.ಬಿ. ಅವರು ಶಿಬಿರದ ಪ್ರಯೋಜನವನ್ನು ಪಡೆದು ಉತ್ತಮ ಆಟಗಾರರಾಗುವಂತೆ ಶುಭ ಹಾರೈಸಿದರು. ಜ್ಯೂನೀಯರ್ ರಾಷ್ಟ್ರಮಟ್ಟದ ಆಟಗಾರ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ವಿಮಲೇಶ್ ಶೇಟ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ, ಟಿ.ವಿ., ಮೊಬೈಲ್ ಮತ್ತು ಅಂತರ್ಜಾಲಗಳಿಂದ ವಿಮುಖರಾಗಿ ರಜೆಯಲ್ಲಿ ಇಂತಹ ಶಿಬಿರಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಿದರೆ ರಜೆಯ ಸದುಪಯೋಗವಾಗುತ್ತದೆ ಎಂದು ಶುಭ ಹಾರೈಸಿದರು. ಜ್ಯೂನಿಯರ್ ಜೇಸಿಯ ಅಧ್ಯಕ್ಷೆ ದೀಕ್ಷಿತಾ ಗೋಡೆ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ನಿರ್ದೇಶಕರಾದ ಶಂಕರನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಬಿರಾರ್ಥಿ ವಿಘ್ನೇಶ್ ಕೆ.ಎಸ್. ಅವರು ಕಾರ್ಯಕ್ರಮ ನಿರೂಪಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಕರು ಕೆಟ್ಟ ಕೆಲಸಗಳಲ್ಲಿ ಸಮಯ ವ್ಯರ್ಥ ಮಾಡದೇ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು,ದೇವಸ್ಥಾನದ ಚಟುವಟಿಕೆಯಲ್ಲಿ ಭಾಗಿಗಳಾಗುವುದು ಒಳ್ಳೆಯ ವಿಚಾರ. ಇಂದಿನ ಕಾಲದಲ್ಲಿ ಬೌತಿಕತೆಯಿಂದ ಜೀವನ ಸಾರ್ಥಕವಾಗುತ್ತದೆ ಎನ್ನುವ ಭ್ರಮೆ ಇದೆ. ಈ ಕೆಟ್ಟ ಭಾವನೆಯಿಂದ ಹೊರಬಂದು ದೈವಿಕ ಶಕ್ತಿಯಲ್ಲಿ ತಮ್ಮನ್ನು ಸಮರ್ಪಿಸಿಕೊಳ್ಳಬೇಕು.ಇಂತಹ ವಿಚಾರಗಳಿಂದ ಶಾಂತಿಯನ್ನು ಪಡೆಯಬಹುದು.ಧಾರ್ಮಿಕ ವಿಚಾರಧಾರೆಗಳು ಸಾವಿನ ನಂತರವೂ ನಮ್ಮನ್ನು ಜೀವಂತವಾಗಿ ಉಳಿಸುತ್ತವೆ ಎಂದು ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ರಥಬೀದಿ ಫ್ರೆಂಡ್ಸ್ ಅವರ ದಶಮಾನೋತ್ಸವದ ಪ್ರಯುಕ್ತ ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವರ ಮನ್ಮಹಾ ರಥೋತ್ಸವದ ಅಂಗವಾಗಿ ನೂತನವಾಗಿ ನಿರ್ಮಿಸಿದ ಸ್ವಾಗತ ಗೋಪುರವನ್ನು ಲೋಕಾರ್ಪಣೆಗೊಳಿಸಿ ಆಶೀರ್ವಚಿಸಿದರು. ಭಾರತೀಯ ಚಿಂತನೆಗಳು ಶಾಂತಿಯನ್ನು ಸಾರುತ್ತವೆ. ನಾವು ನಮ್ಮ ಸಂಸ್ಕೃತಿ, ಆಚರಣೆಯಲ್ಲಿ ಪಾಲಿಸುವ ಎಲ್ಲಾ ಶ್ಲೋಕಗಳ ಕೊನೆಯಲ್ಲಿ ಶಾಂಶಿ.. ಶಾಂತಿ.. ಶಾಂತಿ ಎಂದು ಹೇಳುತ್ತೇವೆ.ಆದರೆ ಈಗ ಶಾಂತಿಗಿಂತ ಸುಖವೇ ಮುಖ್ಯ ಎನ್ನುವ ಮನಸ್ಥಿತಿ ನಮ್ಮನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗುಜ್ಜಾಡಿ ಮನೆತನದವರು ಹಿಂದಿನಿಂದಲೂ ಆರಾಧಿಸಿಕೊಂಡು ಬಂದಿರುವ ಶ್ರೀ ಹೊನ್ನಮ್ಮ ದೇವಿಯ ಅನುಗ್ರಹ ಹಾಗೂ ಗುರುಗಳ ಆಶೀರ್ವಾದದಿಂದ ಕುಟುಂಬವು ಇನ್ನಷ್ಟು ಅಭಿವೃದ್ಧಿ ಹೊಂದುವಂತಾಗಲಿ. ಮುಂದೆ ನಿರಂತರವಾಗಿ ಶ್ರೀದೇವರ ಹಾಗೂ ಗುರುವರ್ಯರ ಸೇವೆ ಮಾಡುವ ಭಾಗ್ಯ ಭಗವಂತನು ಕರುಣಿಸಲಿ. ಶ್ರೀದೇವರು ಜೀವನದಲ್ಲಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಹೇಳಿದರು. ಅವರು ಗುಜ್ಜಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಳದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುಡಿಯಲ್ಲಿ ಶ್ರೀ ಹೊನ್ನಮ್ಮ ದೇವಿಯ ಪ್ರತಿಷ್ಠೆ ನೆರವೇರಿಸಿ ದೇವಳದ ಹೊರ ಆವರಣದ ಪೂರ್ವ ಪ್ರವೇಶದ್ವಾರ ಮತ್ತು ಸಗ್ರಿ ಸುರೇಂದ್ರ ಸಾಂತಪ್ಪ ನಾಯಕ್ ಸ್ಮರಣ ಯಾತ್ರಿ ನಿವಾಸವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ದೇವಳಕ್ಕೆ ಆಗಮಿಸಿದ ಶ್ರೀಗಳನ್ನು ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಗುಜ್ಜಾಡಿ ಸೇವಾ ಟ್ರಸ್ಟ್ನ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ ನಾಯಕ್ ಮತ್ತು ದೇವಳದ ವಿಶ್ವಸ್ಥ ಜಿ.ರೋಹಿದಾಸ ನಾಯಕ್ ಸ್ವಾಗತಿಸಿದರು. ವೇದಮೂರ್ತಿ ಸಚ್ಚಿದಾನಂದ ಶರ್ಮಾ ನೇತೃತ್ವದಲ್ಲಿ ಪ್ರತಿಷ್ಠೆಯ ಧಾರ್ಮಿಕ…
