ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಘಗಳ ಶ್ರೇಯಸ್ಸಿಗೆ ಒಗ್ಗಟ್ಟು ಅಗತ್ಯ. ಈ ನಿಟ್ಟಿನಲ್ಲಿ ಸಂಘಟಿತ ಹೋರಾಟದ ಮೂಲಕ ಯಶಸ್ಸು ಸಾಧ್ಯ ಎಂದು ಕೋಟ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟ ಸಿ.ಎ. ಬ್ಯಾಂಕ್ನ ಬಿ.ಸಿ.ಹೊಳ್ಳ ಸಭಾಭವನ ಇಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಮಂಗಳೂರು ಇದರ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿ ಸಾದರಪಡಿಸುವ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಕುಲದ ಸೌಂದರ್ಯ ಹೆಚ್ಚಿಸಲು ಟೈಲರ್ಸಗಳ ಪಾತ್ರ ಬಹುಮುಖ್ಯವಾದದ್ದು. ಅಂತಹ ಟೈಲರ್ಸ್ಗಳ ಬೇಡಿಕೆಗಳನ್ನು ಸರಕಾರದ ಜನಪ್ರತಿನಿಧಿಗಳು ಆಲಿಸಬೇಕಾಗಿದೆ, ವೃತ್ತಿ ಕಾಯಕದ ನಡುವೆ ಗೌರವಿಸುವ ಗುರುತಿಸುವ, ಸಹಾಯಹಸ್ತ ಚಾಚುವ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು. ಸಭೆಯ ಅಧ್ಯಕ್ಷತೆಯನ್ನು ಕೆ.ಎಸ್.ಟಿ.ಎ ಕೋಟ ಮತ್ತು ಸಾಲಿಗ್ರಾಮ ವಲಯ ಸಮಿತಿ ಅಧ್ಯಕ್ಷ ಕೃಷ್ಣ ದೇವಾಡಿಗ ವಹಿಸಿದ್ದರು. ಟೈಲರ್ ವೃತ್ತಿ ಕಾಯಕದ ಕುಟುಂಬದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ನೀಡಲಾಯಿತು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಪ್ರತಿ ಹಂತದಲ್ಲಿ ಮೂರು ಬಹುಮಾನಗಳನ್ನು ನೀಡಲಾಗುತ್ತಿದೆ. ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಬೆಳೆ ಸ್ಪರ್ಧೇಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಸ್ಫರ್ಧಿಗಳಿಂದ ಪಡೆಯಲಾಗುತ್ತಿದ್ದು, ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್ನಡಿ ಆರ್.ಎಸ್.ಕೆ ಅಥವಾ ಸಿಟಿಝನ್ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ ಬಳಸಿಕೊಂಡು ಆನ್ಲೈನ್ ಮೂಲಕ ಆಗಸ್ಟ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ಕನಿಷ್ಠ 1 ಎಕರೆ ಪ್ರದೇಶದಲ್ಲಿ ಬೆಳೆ ಬೆಳೆದಿರುವ ಹಾಗೂ ರೆವಿನ್ಯೂ ದಾಖಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಹೆಣ್ಣು ಮಕ್ಕಳ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಪುಷ್ಠಿ ನೀಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ಉಡುಪಿ ನಗರದ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ವತಿಯಿಂದ, ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಿರುವ ಹಿನ್ನೆಲೆ, ಆಯೋಜಿಸಲಾದ ಶಕ್ತಿ ಯೋಜನೆಯ ಸಂಭ್ರಮ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಯಶಸ್ವಿಯಾಗಿ ಜಾರಿಗೊಳಿಸಿದೆ. 2023 ರ ಜೂನ್ 11 ರಂದು ಶಕ್ತಿ ಯೋಜನೆಗೆ ಮೊದಲು ಜಾರಿಗೆ ತರಲಾಗಿದ್ದು, ಅಂದಿನಿಂದ ರಾಜ್ಯದ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಿದೆ. ಈ ಯೋಜನೆ ಜಾರಿಯಾದಾಗಿನಿಂದ ಈವರೆಗೆ 500 ಕೋಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ಸಮೂಹ ವಿದ್ಯಾಸಂಸ್ಥೆಗಳ ಅಡಿಯಲ್ಲಿ ಬರುವ ವಿದ್ಯಾ ಅಕಾಡೆಮಿ ಶಾಲೆಯಲ್ಲಿ ಪೋಷಕರಿಗಾಗಿ ಓರಿಯಂಟೇಷನ್ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಪೋಷಕರಿಗೆ ಮಕ್ಕಳ ಬೆಳೆವಣಿಗೆ, ಭಾವನಾತ್ಮಕ ಚಟುವಟಿಕೆಗಳು ಹಾಗೂ ಶೈಕ್ಷಣಿಕ ಪ್ರಗತಿಯ ಬಗ್ಗೆ ಸ್ಪಷ್ಟ ಅರಿವನ್ನು ನೀಡುವ ಗುರಿಯನ್ನು ಹೊಂದಿತ್ತು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಮಾನಸಿಕ ಆರೋಗ್ಯ ಸಲಹೆಗಾರರಾಗಿ ಸೇವೆ ನೀಡುತ್ತಿರುವ ಗಿರೀಶ್ ಎಂ. ಎನ್. ಅವರು ಭಾಗವಹಿಸಿದ್ದರು. ಅವರು ಮಕ್ಕಳಲ್ಲಿ ಕಂಡುಬರುವ ಆತ್ಮವಿಶ್ವಾಸದ ಕೊರತೆ, ಒತ್ತಡ, ತಂತ್ರಜ್ಞಾನದ ಇತಿಮಿತಿಯ ಬಳಕೆ ಮುಂತಾದ ಸಮಸ್ಯೆಗಳ ಬಗ್ಗೆ ಮನೋವೈಜ್ಞಾನಿಕವಾಗಿ ವಿಶ್ಲೇಷಿಸಿದರು. ಪೋಷಕರು ಮಕ್ಕಳ ಭಾವನೆಗಳನ್ನು ಗುರುತಿಸುವುದು, ಸಹಾನುಭೂತಿಯಿಂದ ವರ್ತಿಸುವುದು ಮತ್ತು ಉತ್ತಮ ಮಾರ್ಗದರ್ಶನ ನೀಡುವುದು ಹೇಗೆ ಎಂಬುದರ ಕುರಿತು ಉದಾಹರಣೆಗಳ ಸಹಿತ ಸಲಹೆಗಳನ್ನು ನೀಡಿದರು. ಐಎಂಜೆ ಇನ್ಸ್ಟಿಟ್ಯೂಷನ್ಸ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗಡೆ ಅವರು ಮಾತನಾಡಿ, ಇಂದಿನ ಪೋಷಕರಿಗೆ ಇಂತಹ ಸಂವಾದಗಳು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು. ಉತ್ತಮ ಶಿಕ್ಷಣ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ಐಎಂಎ ಯ ಮಾಜಿ ಅಧ್ಯಕ್ಷರು, ಕರ್ನಾಟಕ ರಾಜ್ಯ ಐಎಂಎ ಯ ನಿಯೋಜಿತ ರಾಜ್ಯ ಉಪಾಧ್ಯಕ್ಷರೂ ಆಗಿರುವ ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಅವರ ಸಮಾಜಮುಖಿ ವೈದ್ಯಕೀಯ ಸೇವೆ, ಸಮುದಾಯ ಸೇವೆ ಹಾಗೂ ಸಾಮಾಜಿಕ ಸಂಘಟನೆಗಾಗಿ ಈ ಬಾರಿ ರಾಷ್ಟ್ರೀಯ ಸಮುದಾಯ ಸೇವಾ ಪುರಸ್ಕಾರ ಲಭಿಸಿದೆ. ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರ ಘಟಕದ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಡಾ. ಬಿ ಸಿ ರಾಯ್ ಸ್ಮಾರಕ ರಾಷ್ಟ್ರೀಯ ಸಮುದಾಯ ಸೇವಾ ಪುರಸ್ಕಾರವನ್ನು ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಟೌನ್ ಪ್ಲಾನರ್ , ಇಂಡಿಯಾ ದ ಸಬಾಂಗಣದಲ್ಲಿ ಜರುಗಿದ ಸಭೆಯಲ್ಲಿ ನೀಡಿ ಗೌರವಿಸಲಾಯಿತು. ಕೇಂದ್ರ ಸೈನ್ಸ್ ಅಂಡ್ ಟೆಕ್ನಾಲಜಿ ಸಚಿವರೂ, ಸ್ವತಃ ಹಿರಿಯ ಐಎಂಎ ನಾಯಕರೂ, ವೈದ್ಯರೂ, ವೈದ್ಯಕೀಯ ಶಿಕ್ಷಕರೂ ಆಗಿರುವ ಡಾ. ಜಿತೇಂದ್ರ ಸಿಂಗ್, ದೆಹಲಿಯ ಶಾಸಕರೂ, ಖುದ್ದು ದೆಹಲಿಯ ತಜ್ಞ ಖ್ಯಾತ ಹಿರಿಯ ಯೂರಾಲಜಿಸ್ಟ್, ಹಿರಿಯ ಐಎಂಎ ನಾಯಕರೂ ಆಗಿರುವ ಡಾ. ಅನಿಲ್ ಗೋಯಲ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಿಳಿಯಾರು ಕುಶಲ ಹೆಗಡೆ ರೋಟರಿ ಭವನದಲ್ಲಿ 2025 – 26ನೇ ಸಾಲಿನ ಕುಂದಾಪುರದ ರೋಟರಿ ಕ್ಲಬ್ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮ ನೆರವೇರಿತು. ರೊ. ನಾಗರಾಜ್ ಶೆಟ್ಟಿ ಅವರು ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದರು. ಕಾರ್ಯಕ್ರಮಕ್ಕೆ ಪದಪ್ರದಾನ ಅಧಿಕಾರಿಯಾಗಿ ರೋಟರಿ ಜಿಲ್ಲೆ 3182 ಇದರ ವಲಯ 1ರ ಸಹಾಯಕ ಗವರ್ನರ್ ಪಿ.ಎಚ್.ಎಫ್. ರೊ. ಐ ನಾರಾಯಣ್ ಅವರು ನೆರವೇರಿಸಿಕೊಟ್ಟರು. ಮುಖ್ಯ ಅತಿಥಿಗಳಾದಂತಹ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ನಿಜ ಜೀವನದ ಸ್ವಾರಸ್ಯವನ್ನು ರೋಟರಿಯೊಂದಿಗೆ ಕೈ ಜೋಡಿಸಿ ಅತ್ಯುತ್ತಮವಾದಂತಹ ಮಾತುಗಳನ್ನಾಡಿದರು. ನಿರ್ಗಮನ ಅಧ್ಯಕ್ಷರಾದಂತಹ ರೊ.ಲಿಯಾಕತ್ ಅಲಿ ಅವರು ಸ್ವಾಗತ ಭಾಷಣವನ್ನು ಮಾಡಿ ಶುಭ ಹಾರೈಸಿದರು. ನಿರ್ಗಮನ ಕಾರ್ಯದರ್ಶಿಯಾದಂತಹ ಸಚ್ಚಿದಾನಂದ ಅವರು 2024- 25ನೇ ಸಾಲಿನ ವರದಿಯನ್ನು ವಾಚಿಸಿದರು . ವಲಯ ಸೇನಾನಿ ಪಿ. ಎಚ್. ಎಫ್. ರೊ. ಅಬ್ದುಲ್ ಬಶೀರ್ ಅವರು ಶುಭ ಹಾರೈಸಿದರು. ಕ್ಲಬ್ನ ಕಾರ್ಯದರ್ಶಿ ರೊ. ಸರ್ವೋದಯ ಪೂಜಾರಿ ಧನ್ಯವಾದ ಗೈದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ ಪ್ರಸಕ್ತ ಸಾಲಿನಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಜಿಲ್ಲೆಯ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ಅರ್ಹ ಬೀದಿ ನಾಟಕ ತಂಡಗಳು ಮತ್ತು ಜಾನಪದ ಸಂಗೀತ ಕಲಾ ತಂಡಗಳು ಆಗಸ್ಟ್ 01 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಯನ್ನು ಅಥವಾ ಕಚೇರಿಯ ಸೂಚನಾ ಫಲಕವನ್ನು ವೀಕ್ಷಿಸಬಹುದಾಗಿದೆ. ಕಲಾ ತಂಡಗಳ ಆಯ್ಕೆ ಮಾಡಲು ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, 2025 ರ ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಆಯ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಜೀವನದ ಆಧಾರಸ್ತಂಭ ಕಟ್ಟಲು ಮುಖ್ಯವಾಗುವ ಪಿ.ಯು.ಸಿ ಹಂತ ವಿದ್ಯಾರ್ಥಿಗಳೆದರು ಹಲವು ಕ್ಷೇತ್ರಗಳನ್ನು ತೆರೆದಿಡುತ್ತದೆ. ಸಾಂಸ್ಕ್ರತಿಕ ಮತ್ತು ಆಟೋಟಗಳಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದರೂ, ಭವಿಷ್ಯದಲ್ಲಿ ಯಾವುದೇ ಉದ್ಯೋಗಕ್ಕೆ ಹೋದ ಮೇಲೆ ಶಿಕ್ಷಣದ ಹಿನ್ನೆಲೆ ಇದ್ದರೆ ಮಾತ್ರ ಯಶಸ್ಸು ಪಡೆಯಬಹುದು” ಎಂದು ಕಿರುತೆರೆ ನಟಿ, ರಿಯಾಲಿಟಿ ಶೋ ಮಜಾಭಾರತ, ರಾಜಾ ರಾಣಿ ಖ್ಯಾತಿಯ ಪ್ರಿಯಾಂಕಾ ಕಾಮತ್ ಹೇಳಿದರು. ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನವಸಂಕೇತ್- ಫ್ರೆಷರ್ಸ್ ಫಿಯೆಸ್ಟಾ ವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರಾಕ್ತನ ವಿದ್ಯಾರ್ಥಿ ಅಮಿತ್ ನಾಯಕ್ ಅವರು ಆರ್. ಎನ್. ಎಸ್. ಕಾಲೇಜು ತನ್ನನ್ನು ರೂಪಿಸಿದ ಬಗೆಯನ್ನು ಸ್ಮರಿಸಿಕೊಂಡರು. ಇನ್ನೋರ್ವ ಮುಖ್ಯ ಅತಿಥಿ ಗಾಯಕಿ ರಂಜನಾ ರಾಘವೇಂದ್ರ ಪ್ರಭು ಅವರು ಎಳೆ ವಯಸ್ಸಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಪ್ರಭಾವಕ್ಕೆ ಒಳಗಾಗಿ ಸಮಾಜಘಾತುಕ ಕಾರ್ಯಗಳತ್ತ ಸೆಳೆಯಲ್ಪಡಬಾರದೆಂದು ಕರೆ ನೀಡಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಸೀತಾರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಡಿಯಲ್ಲಿ 500 ಕೋಟಿ ಉಚಿತ ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೈಂದೂರಿನಲ್ಲಿಯೂ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು. ಬೈಂದೂರು ತಹಶಿಲ್ದಾರರ ಕಛೇರಿ ಎದುರು ಜರುಗಿದ ಕಾರ್ಯಕ್ರಮದಲ್ಲಿ ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಬಸ್ನ ಚಾಲಕ ಮತ್ತು ನಿರ್ವಾಹಕರನ್ನು ಗೌರವಿಸಲಾಯಿತು. ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮೋಹನ್ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಾರ್ಯದರ್ಶಿ ಜಗದೀಶ ದೇವಾಡಿಗ, ಕಾಂಗ್ರೆಸ್ ಮುಖಂಡರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ನಾಗರಾಜ್ ಗಾಣಿಗ ಬಂಕೇಶ್ವರ, ಸದಾಶಿವ ಪಡುವರಿ, ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೂರ್ಯಕಾಂತಿ ಪಡುವರಿ, ಯುವ ಕಾಂಗ್ರೆಸ್ ಅಧ್ಯಕ್ಷ ಭರತ್ ದೇವಾಡಿಗ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬೀರ್ ಬೈಂದೂರು, ರೈತ ಘಟಕ ವೀರಭದ್ರ ಗಾಣಿಗ, ಗ್ಯಾರಂಟಿ ಸಮಿತಿ ಸದಸ್ಯರು, ವಿವಿಧ ಘಟಕಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ವಿ ರೀಚ್ ಅಕಾಡೆಮಿ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಂಪನಿ ಸೆಕ್ರೆಟರಿ ಮತ್ತು ಚಾಟಡ್ ಅಕೌಂಟೆಂಟ್ ಕೋರ್ಸ್ ಗಳ ಕುರಿತಾದ ಪರಿಚಯ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕಂಪನಿ ಸೆಕ್ರೆಟರಿ ಸಂತೋಷ್ ಪ್ರಭು ಅವರು ಕಂಪನಿ ಸೆಕ್ರೆಟರಿ ಕೋರ್ಸಿನ ಬಗ್ಗೆ ಮಾಹಿತಿಯನ್ನು ನೀಡುತ್ತಾ ಕಂಪನಿ ಸೆಕ್ರೆಟರಿ ಕೋರ್ಸ್ ಮಾಡುವುದರ ಮೂಲಕ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ. ಇದು ಖಚಿತ ಉದ್ಯೋಗ ವನ್ನು ನೀಡುವುದು ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿನ ಬದಲಾವಣೆಗಳಿಗೆ ಒಗ್ಗಿಕೊಳ್ಳಲು ನಮ್ಮನ್ನು ಸಜ್ಜುಗೊಳಿಸಿ ಉನ್ನತ ಸ್ಥಾನಮಾನವನ್ನು ಮತ್ತು ಗಳಿಕೆಯನ್ನು ಪಡೆಯುವಂತೆ ಮಾಡುತ್ತದೆ ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಐಸಿಎಸ್ಐ ನ ಮಂಗಳೂರು…
