ತಾಲೂಕಿನಲ್ಲಿ ಒಟ್ಟು 356 ಮತಗಟ್ಟೆ. ಸೂಕ್ಷ್ಮ 56, ಅತೀಸೂಕ್ಷ್ಮ 13 ನಕ್ಸಲ್ ಪೀಡಿತ ಪ್ರದೇಶ 27 ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜ್ಯದ ಎರಡನೇ ಹಂತದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಕುಂದಾಪುರ ತಾಲೂಕು ಸಿದ್ಧಗೊಂಡಿದ್ದು. ಶಾಂತಿಯುತ ಚುನಾವಣೆ ನಡೆಸುವ ಸಲುವಾಗಿ ಸಕಲ ಏರ್ಪಾಡುಗಳನ್ನು ಮಾಡಲಾಗಿದೆ. ತಾಲೂಕಿನಲ್ಲಿ 13 ಅತಿಸೂಕ್ಷ್ಮ, 56 ಸೂಕ್ಷ್ಮ ಹಾಗೂ 27 ನಕ್ಸ್ಲ್ ಪೀಡಿತ ಮತಗಟೆ ಹಾಗೂ, 260 ಸಾಮಾನ್ಯ ಮತಗಟ್ಟೆಗಳೆಂದು ವಿಭಾಗಿಸಲಾಗಿದೆ. ಅತಿಸೂಕ್ಷ್ಮ ಮತಗಟ್ಟೆಗಳ ಪೈಕಿ ಶಿರೂರು ಜಿ.ಪಂ. ಕ್ಷೇತ್ರದ 4, ತ್ರಾಸಿ ಜಿಪಂ1, ವಂಡ್ಸೆ ಜಿಪಂ 1, ಕಾವ್ರಾಡಿ ಜಿಪಂ 2 , ಕೋಟೇಶ್ವರ ಜಿಪಂನಲ್ಲಿ 3, ಸಿದ್ದಾಪುರ ಜಿಪಂ ಕ್ಷೇತ್ರದಲ್ಲಿ 2 ಹೀಗೆ ಒಟ್ಟು 13 ಅತಿಸೂಕ್ಷ್ಮ ಮತಗಟ್ಟೆಗಳ ಗುರುತಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ವರದಿ. ಮತದಾನ ಕಾರ್ಯಕ್ಕೆ ತಾಲೂಕಿನಲ್ಲಿ 393 ಪ್ರಿಸೈಡಿಂಗ್ ಆಫೀಸರ್, 392 ಅಸಿಸ್ಟೆಂಟ್ ಪ್ರಿಸೈಡಿಂಗ್ ಆಫೀಸರ್, 1176 ಪೋಲಿಂಗ್ ಆಫೀಸರ್ ಹಾಗೂ 392 ಗ್ರೂಫ್ ಡಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವರದಿ: ಕುಂದಾಪುರ: ತಾಲೂಕಿನ ಎಲ್ಲಾ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಮಹಿಳಾ ಮತದಾರರದ್ದೇ ಪ್ರಾಬಲ್ಯ. ಈ ಭಾರಿ ಬಹುಪಾಲು ಕ್ಷೇತ್ರಗಳಲ್ಲಿ ಮೀಸಲಾತಿಯೂ ಮಹಿಳೆಯರೇ ಪರವೇ ಬಂದಿರುವುದರಿಂದ ಹೆಚ್ಚು ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹಾಗಾಗಿ ಈ ಭಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಮಹಿಳೆಯರೇ ಮತಗಳು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ ತಾಲೂಕಿನ ಒಟ್ಟು 10 ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಹಾಗೂ 37 ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಒಟ್ಟು 3,05,471 ಮತದಾರರಿದ್ದು ಆಪೈಕಿ 1,46,949 ಪುರುಷರಿದ್ದರೇ, 1,58,506 ಮಹಿಳಾ ಮತದಾರರಿದ್ದಾರೆ. ತಾಲೂಕಿನಲ್ಲಿ 16 ತೃತೀಯ ಲಿಂಗಿಗಳಿರುವುದು ಮತದಾರರಿರುವುದು ವಿಶೇಷ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಡಹೆಂಡಿರ ನಡವೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೇರಿ ಹೆಂಡತಿಗೆ ಹೊಟ್ಟೆಗೆ ಚೂರಿ ಇರಿದ ಘಟನೆ ತಾಲೂಕಿನ ತ್ರಾಸಿಯಲ್ಲಿ ನಡೆದಿದೆ. ತಾಸ್ರಿ ನಿವಾಸಿ ರೇಷ್ಮಾ ಪೂಜಾರಿ(31) ಇರಿತಕ್ಕೊಳಗಾದ ಮಹಿಳೆ. ಚಂದ್ರ ಪೂಜಾರಿ ಚಾಕುವಿನಿಂದ ಇರಿದ ಪತಿರಾಯ. ಹೊಳ್ಮಗೆ ನಿವಾಸಿಯಾದ ಚಂದ್ರ ಪೂಜಾರಿ ಪೂನ:ದ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲವು ದಿನಗಳ ಹಿಂದಷ್ಟೇ ಊರಿಗೆ ಬಂದಿದ್ದ ಅವರು ತ್ರಾಸಿಯ ತನ್ನ ಪತ್ನಿಯ ಮನೆಗೆ ತಂಗಿದ್ದರು. ಮನೆಯಲ್ಲಿ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಕೋಪಗೊಂಡ ಚಂದ್ರ ಪೂಜಾರಿ ಏಕಾಏಕಿ ಅಲ್ಲಿಯೇ ಇದ್ದ ಚೂರಿಯಿಂದ ಪತ್ನಿಯ ಹೊಟ್ಟೆ ಹಾಗೂ ಕೈಗೆ ತಿವಿದಿದ್ದಾರೆ. ಪತ್ನಿ ರೇಷ್ಮಾ ಅಲ್ಲಿಯೇ ಕೂಗಿಕೊಳ್ಳುತ್ತಾ ನೆಲಕ್ಕುರುಳಿದಾಗ ಚಂದ್ರ ಪೂಜಾರಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರ ನೆರವಿನಿಂದಾಗಿ ಪೊಲೀಸರು ಅತನನ್ನು ಬಂಧಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ ಗಾಯಾಳುವನ್ನು ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಉಡುಪಿ ಜಿಲ್ಲೆಯ ನೈಸರ್ಗಿಕ ಸೊಬಗಿನ ತವರೂರಾದ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ಹೆಗ್ಗಳಿಕೆ ಇಲ್ಲಿನದ್ದು. ಬಿಂದುಋಷಿ ಎಂಬ ಮುನಿಯು ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ಊರಿನ ಹಿಂದಿನ ಐತಿಹ್ಯ. ಪಶ್ಚಿಮದ ಅರಬ್ಬಿ ಸಮುದ್ರ, ಪೂರ್ವದ ಪಶ್ಚಿಮ ಘಟ್ಟಗಳ ಸಾಲು ಬೈಂದೂರಿನ ನೈಸರ್ಗಿಕ ಸೌಂದರ್ಯವನ್ನು ಇಮ್ಮುಡಿಗೊಳಿಸಿದ್ದರೇ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಬೈಂದೂರು ಶ್ರೀ ಸೇನೇಶ್ವರ ಸೇರಿದಂತೆ ಹತ್ತಾರು ದೇವಾಲಯಗಳು, ಜಾಮೀಯಾ ಮಸೀದಿ, ಹೋಲಿ ಕ್ರಾಸ್ ಚಚ್ ಇವೇ ಮುಂತಾದವುಗಳು ಬೈಂದೂರಿನ ಧಾರ್ಮಿಕ ಶಕ್ತಿಕೇಂದ್ರಗಳಾಗಿ ಭಕ್ತರನ್ನು ಕರುಣಿಸಿವೆ. ಬೈಂದೂರು ನಗರವನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳು; ಮೂಕಾಂಬಿಕಾ ರೋಡ್…
ಕುಂದಾಪ್ರ ಡಾಟ್ ಕಾಂ ವಿಶೇಷ ಲೇಖನ ಕುಂದಾಪುರ: ಉಡುಪಿ ಜಿಲ್ಲೆಯ ಹೊಸ ಜಿಲ್ಲಾ ಪಂಚಾಯಿತಿ ಬೀಜಾಡಿ ಮುಂದಿದೆ ಬೆಟ್ಟದಷ್ಟು ಸವಾಲು. ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರವಾಗಿದ್ದು, ಆಯ್ಕೆಯಾಗುವ ಮಹಿಳೆ ಮುಂದೆ ಸಮಸ್ಯೆಗಳ ಸರಮಾಲೆಯೇ ಇದೆ. ಬೀಜಾಡಿಯಲ್ಲಿ ಹಿಂದೆ ಗೇರು ಮರದ ಹೊಲವಿದ್ದು, ಸಾಕಷ್ಟು ಗೇರು ಬೀಜವಿದ್ದ ಕಾರಣ ಬೀಜದ ಹಾಡಿ ಎಂಬ ಹೆಸರಿತ್ತು. ಬರುಬರುತ್ತಾ ಬೀಜದ ಹಾಡಿ ಹೋಗಿ ಬೀಜಾಡಿ ಎಂಬ ಹೆಸರು ಶಾಶ್ವತ ಆಯಿತು. ಹಿಂದೆ ಗೋಪಾಡಿ-ಬೀಜಾಡಿ ಸೇರಿ ಒಂದೆ ಗ್ರಾಮ ಪಂಚಾಯತಿ ಆಗಿದ್ದು, ಅಧಿಕಾರ ವಿಕೇಂದ್ರಿಕರಣದ ಹಿನ್ನೆಲೆಯಲ್ಲಿ ಗೋಪಾಡಿ ಮತ್ತು ಬೀಜಾಡಿ ಸ್ವತಂತ್ರ ಗ್ರಾಮಗಳಾಗಿ ಪುನರ್ ವಿಂಗಡನೆಯಾಯಿತು. ಗೋಪಾಡಿ ಗ್ರಾಪಂ.ಗೆ ಹಿಂದೆ ಇದ್ದ ಕಟ್ಟಡ, ಸಭಾಭವನ ಸಿಕ್ಕಿದ್ದು, ಬೀಜಾಡಿ ಗ್ರಾಪಂಗೆ ಕಟ್ಟಡವೇ ಇಲ್ಲದೆ ತಾತ್ಕಾಲಿಕ ವ್ಯವಸ್ಥೆ ಅಡಿ ಕೆಲಸ ನಿರ್ವಹಿಸುತ್ತಿದೆ. ಬೀಜಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಈ ಭಾರಿ ಮಹಿಳಾ ಮೀಸಲಾತಿ ಬಂದಿರುವುದರಿಂದ ಕಾಂಗ್ರೆಸ್ ಬಿಜೆಪಿ ನಡುವೆ ಸ್ವಜಾತಿ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆಯಿದೆ. ಕಾಂಗ್ರೆಸ್ನಿಂದ ಜ್ಯೋತಿ ಎ.ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ವಿಶೇಷ ಲೇಖನ ಕುಂದಾಪುರ: ಅರಬ್ಬೀ ಸಮುದ್ರದ ಅಬ್ಬರ, ಗೋಡೆ ಕಟ್ಟಿದಂತೆ ನಿಂತ ಪಶ್ಚಿಮಘಟ್ಟ. ಇದರ ನಡುವೆ ಮಂದಗಾಮಿನಿಯಾಗಿ ಹರಿವ ಸೌಪರ್ಣಿಕಾ ನದಿ ತ್ರಾಸಿ ಜಿಲ್ಲಾ ಪಂಚಾಯಿತಿ ವೈಶಿಷ್ಠ್ಯ. ತ್ರಾಸಿ ಜಿಲ್ಲಾ ಪಂಚಾಯಿತಿ ನಾಗರಿಕರು ತ್ರಾಸುದಾಯಕ ಕೆಲಸ ಮಾಡುವ ಹಿನ್ನೆಲೆಯಲ್ಲಿ ತ್ರಾಸಿ ಹೆಸರು ಬರಲು ಕಾರಣ. ಮೀನುಗಾರಿಕೆ ವೃತ್ತಿ ಮತ್ತು ಕೃಷಿ ಪ್ರಮುಖ ಉದ್ಯೋಗ. ರಾಷ್ಟ್ರೀಯ ಹೆದ್ದಾರಿ-66 ತ್ರಾಸಿ ಜಿಪಂ. ಸೀಳಿಕೊಂಡು ಸಾಗುತ್ತದೆ. ತ್ರಾಸಿಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಸಿಪಿಐ(ಎಂ) ನಡುವೆ ತ್ರಿಕೋನ ಸ್ಪರ್ಧೆಯಿದೆ. ಎರಡನೇ ಬಾರಿ ಚುನಾವಣೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಿರುವ ಸಾಧು ಬಿಲ್ಲವ, ಪ್ರಥಮ ಬಾರಿ ಬಿಜೆಪಿ ಅಭ್ಯರ್ಥಿ ಶೋಭಾ ಜೆ.ಪುತ್ರನ್, ಸಿಪಿಐ(ಎಂ)ನ ಯಮುನಾ ಎಸ್. ಪೂಜಾರಿ ಸ್ಪರ್ಧಿಸುತ್ತಿದ್ದಾರೆ. ಕುಂದಾಪ್ರ ಡಾಟ್ ಕಾಂ ವಿಶೇಷ ಲೇಖನ ತ್ರಾಸಿ ಜಿಪಂ. ಹಿಂದೆ ಅಭಿವೃದ್ಧಿಯ ಹಿನ್ನೆಡೆ ಕಂಡಿದ್ದರೂ, ಪ್ರಸಕ್ತ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದಿದ್ದರೂ ಸಾಗ ಬೇಕಾದ ದೂರ ಬಹಳವಿದೆ. ಪ್ರಮುಖ ಪ್ರವಾಸಿ ತಾಣಗಳಿದ್ದರೂ, ಪ್ರವಾಸಿಗರ ಸೆಳೆಯುವಲ್ಲಿ ತ್ರಾಸಿ ಜಿಪಂ. ವಿಫಲವಾಗಿದೆ.…
ಕುಂದಾಪ್ರ ಡಾಟ್ ಕಾಂ ಲೇಖನ ಕುಂದಾಪುರ: ವಾರಾಹಿ ಮತ್ತು ಕುಬ್ಜಾ ನದಿ ಕಾವ್ರಾಡಿ ಜಿಪಂ. ಕ್ಷೇತ್ರ ಬಳಸಿ ಹರಿದರೂ ಕುಡಿಯು ನೀರಿಗೂ ತತ್ವಾರ. ಅತೀ ಕೋಮು ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಿಕೊಂಡ ಕಂಡ್ಲೂರಿನಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಿಕೊಳ್ಳುವುದು ಹೊಸ ಜಿಪಂ.ಕ್ಷೇತ್ರ ಕಾವ್ರಾಡಿ ಮುಂದಿರುವ ದೊಡ್ಡ ಸವಾಲು. ಕಾವ್ರಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ,ಬಿಜೆಪಿ ಹಾಗೂ ಸಿಪಿಎಂ ಪಕ್ಷದ ನಡುವೆ ತ್ರಿಕೋನ್ ಸ್ಪರ್ಧೆ ಏರ್ಪಟ್ಟಿದೆ. ಮಹಿಳಾ ಮೀಸಲಾತಿ ಇರುವ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಜ್ಯೋತಿ ಎಂ. ಕಣದಲ್ಲಿದ್ದರೇ, ಬಿಜೆಪಿಯಿಂದ ಸುಶೀಲಾ ಹಾಗೂ ಸಿಪಿಎಂ ಪಕ್ಷದಿಂದ ಪೂರ್ಣಿಮಾ ಕಣದಲ್ಲಿದ್ದಾರೆ. ಸವಾಲಿನ ಕ್ಷೇತ್ರದಲ್ಲಿ ಮಹಿಳಾ ಮಣಿಯರು ಹೇಗೆ ಗೆದ್ದುಬರಲಿದ್ದಾರೆ ಎಂಬುದು ಕುತೂಹಲ. ಕಾವ್ರಾಡಿ ಜಿಪಂ ಕ್ಷೇತ್ರದಲ್ಲಿ ಹೆಂಚು, ಡೆಕೋರೇಶನ್ ಟೈಲ್ಸ್, ಗೇರು ಬೀಜ ಕಾರ್ಖಾನೆಗಳಿದ್ದು, ಕಾವ್ರಾಡಿ ಕೈಗಾರಿಕಾ ಪ್ರದೇಶವೂ ಹೌದು. ಸ್ಥಳೀಯ ಸಾವಿರಾರು ಜನರಿಗೆ ಉದ್ಯೋಗ ನೀಡಿದ ಕೀರ್ತಿ ಕೂಡಾ ಕಾವ್ರಾಡಿಗೆ ಸಲ್ಲುತ್ತದೆ. ಆದರೂ ಕಾವ್ರಾಡಿ ಜಿಪಂ. ಕೋಮು ಸಂಘರ್ಷ ಕಪ್ಪು ಚುಕ್ಕೆಯಂಡಿಸಿಕೊಂಡಿದೆ. ಚಿಕ್ಕಪುಟ್ಟ ಸಂಗತಿಗೂ ಇಲ್ಲಿ ಕೋಮು…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೆಂಗಳೂರು: ಯಕ್ಷಗಾನ ಕಂಡ ಚುರುಕ ನಡೆಯ ಖ್ಯಾತ ಕಲಾವಿದ ಗಣಪತಿ ಭಟ್ ಕಣ್ಣಿಮನೆ (47) ಗುರುವಾರ ಸಾಯಂಕಾಲ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯ ಪೀಡಿತರಾಗಿದ್ದ ಕಣ್ಣಿಮನೆಯವರನ್ನು ಬುಧವಾರ ಸಾಯಂಕಾಲ ಮಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಗುರುವಾರ ಸಾಯಂಕಾಲ ಅಂಗಾಂಗ ವೈಫಲ್ಯಕ್ಕೆ ಒಳಗಾಗಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ. ಉತ್ತರಕನ್ನಡದ ಹೊನ್ನಾವರ ತಾಲೂಕಿನ ಕಣ್ಣಿಮನೆಯವರಾದ ಗಣಪತಿ ಭಟ್ ಪತ್ರಿ, ಪುತ್ರ, ಪುತ್ರಿ ಹಾಗೂ ಅಪಾರ ಯಕ್ಷಾಭಿಮಾನಿಗಳನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ ಬೈಂದೂರು: ಕರಾವಳಿ ಹಾಗೂ ಗುಡ್ಡಗಾಡು ಪ್ರದೇಶವನ್ನು ಒಳಗೊಂಡಿರುವ ಕಂಬದಕೋಣೆ ಜಿಲ್ಲಾ ಪಂಚಾಯತ್ ಕ್ಷೇತ್ರ ಬೈಂದೂರು ವಿಧಾನಸಭಾ ವ್ಯಾಪ್ತಿಯ ಪ್ರಮುಖ ಕ್ಷೇತ್ರಗಳಲ್ಲೊಂದು. ಈ ಸಾಲಿನಲ್ಲಿ ಕ್ಷೇತ್ರ ಪುನರ್ವಿಂಗಡೆಯಾದ್ದರಿಂದ ವಿಭಿನ್ನತೆಯಿಂದ ಗುರುತಿಸಿಕೊಂಡಿದೆ. ಕ್ಷೇತ್ರದಲ್ಲಿ ಮೀನುಗಾರಿಕೆ, ಕೃಷಿ ಪ್ರಮುಖ ಉದ್ಯೋಗವಾಗಿದ್ದು ಇಲ್ಲಿನ ರೈತರಿಗೆ ವ್ಯಾಪಕ ಕೃಷಿಯಾಧಾರಿತ ಸಮಸ್ಯೆಯಾದರೆ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಪ್ಪಿದ್ದಲ್ಲ. ಈ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಿಜೂರು, ಕೆರ್ಗಾಲ್, ಕಂಬದಕೋಣೆ, ಕಿಮಂಜೇಶ್ವರ ಹಾಗೂ ನಾವುಂದ ಗ್ರಾಮಗಳು ಕರಾವಳಿ ಪ್ರದೇಶವನ್ನು ಹೊಂದಿದ್ದರೇ, ಹೇರೂರು ಗ್ರಾಮ ಗುಡ್ಡಗಾಡು ಪ್ರದೇಶವನ್ನು ಒಳಗೊಂಡಿದೆ. ಈ ಬಾರಿ ಇಲ್ಲಿ ಮಹಿಳಾ ಮೀಸಲು ಸ್ಥಾನ ಬಂದಿದ್ದು, ಕಾಂಗ್ರೆಸ್ ಬಿಜೆಪಿಯ ನಡುವೆ ನೇರ ಹಣಾಹಣಿ ನಡೆಯಲಿದೆ, ಜೆಡಿಎಸ್ ಸ್ವರ್ಧಿಯ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಹಾಲಿ ಜಿಪಂ ಸದಸ್ಯೆ ಗೌರಿ ದೇವಾಡಿಗ ಸ್ಪರ್ಧಿಸುತ್ತಿದ್ದರೇ, ಬಿಜೆಪಿಯಿಂದ ಪ್ರಿಯಾದರ್ಶಿನಿ ದೇವಾಡಿಗ ಕಣಕ್ಕೀಳಿದಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಕೆರ್ಗಾಲ್ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷೆ ರೇವತಿ ಪೂಜಾರಿ ಸ್ವಧಾಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ…
‘ಪತ್ರಿಕೆಗೆ ಬರೆಯೋದು ಹೇಗೆ?’ ಎಂಬ ಪುಸ್ತಕದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಕಾರಣವಿಷ್ಟೆ, ತಮ್ಮ ಫೇಸ್ಬುಕ್, ಟ್ವಿಟರ್ ಗೋಡೆಗಳಲ್ಲಿ ಬರೆದುಕೊಳ್ಳುವವರು, ಅದೇ ಬರಹವನ್ನು ಹೇಗೆ ಪತ್ರಿಕೆಯೊಂದಕ್ಕೆ ಬರೆಯಬಹುದು ಎಂಬುದನ್ನು ಈ ಪುಸ್ತಕ ಹೇಳುತ್ತಿದ್ದೆ. ಯುವ ಪತ್ರಕರ್ತ ವಿನಾಯಕ ಕೋಡ್ಸರ, ತಮ್ಮದೇ ಮಿಥಿಲಾ ಪ್ರಕಾಶನದ ಮೂಲಕ ಈ ಪುಸ್ತಕವನ್ನು ಹೊರಗೆ ತರುತ್ತಿದ್ದಾರೆ. “ನಮ್ಮಲ್ಲಿ ಬರೆಯಬೇಕೆಂಬುದು ಬಹಳಷ್ಟು ಜನರ ಬಯಕೆ. ಬರೆಯುತ್ತಾರೆ ಕೂಡ. ಆದರೆ ಯಾವ ಪತ್ರಿಕೆಗೆ ಹೇಗೆ ಬರೆಯಬೇಕು? ಏನು ಬರೆಯಬೇಕು ಎಂದು ಗೊತ್ತಿಲ್ಲರುವುದಿಲ್ಲ. ಇನ್ನು ಕೆಲ ಪುರವಣಿಯಲ್ಲಿ ಕುಳಿತವರಿಗೆ ಲೇಖಕನಿಗೆ ಚ್ಯುತಿಯಾಗದಂತೆ ಹೇಗೆ ಎಡಿಟ್ ಮಾಡಬೇಕು ಎಂಬ ಸ್ಪಷ್ಟತೆಯಿಲ್ಲ. ಅದಕ್ಕಿಂತ ಮುಖ್ಯವಾಗಿ ಪುರವಣಿಗಳು ಗಂಭೀರತೆ ಕಳೆದುಕೊಳ್ಳುತ್ತಿವೆ. ಓರ್ವ ಲೇಖಕನ ಲೇಖನಕ್ಕೆ ಪ್ರತಿಕ್ರಿಯಿಸುವ ಸೌಜನ್ಯತೆಯನ್ನು ಕಳೆದುಕೊಂಡಿದೆ ಎಂಬ ದೂರು ಇದೆ. ಮತ್ತೊಂದು ಮಗ್ಗುಲಿನಲ್ಲಿ ನೋಡಿದರೆ ಉದ್ದನೆಯ ಇಡೀ ಲೇಖನವನ್ನು ಪೂರ್ತಿಯಾಗಿ ನೋಡುವ ವ್ಯವದಾನ ಹಲವರಿಗಿಲ್ಲ ಎಂಬುದು ಬಹುವಾಗಿ ಕಾಡುತ್ತಿತ್ತು. ಅದಕ್ಕೆ ಉತ್ತರವಾಗಿ ಈ ಪುಸ್ತಕ’ ಎಂದು ಕೋಡ್ಸರ ಬರೆದುಕೊಂಡಿದ್ದಾರೆ. ಅಲ್ಲಿಗೆ ಪುಸ್ತಕದ…
