ಕುಂದಾಪುರದವರು ಗೇರುಬೀಜ ತೋಟ ವಹಿಸಿಕೊಂಡು ವಿರಾಟ್ ಕೊಹ್ಲಿ ಆಟ ನೋಡಬಾರದಂತೆ! ಯಾಕೆ? ಓದಿ ಮೊನ್ನೆ ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ನೋಡ್ತಿರುವಾಗ ತೋಟ ಕಾಯುವ ಹುಡುಗರು ಬಂದು, ಅಣ್ಣ ತೋಟಕ್ಕೆ ಕಳ್ಳರು ನುಗ್ಗಿದ್ದಾರೆ ಗೇರು ಬೀಜ ಕೊಯ್ತಿದಾರೆ ಅಂದ್ರು. ನನಗೆ ಅವರು ಹೇಳಿದನ್ನು ಕೇಳುವಷ್ಟು ತಾಳ್ವೆ ಇರಲಿಲ್ಲ. ನಾನು ವಿರಾಟ್ ಕೊಯ್ಲಿ ಆಟ ನೋಡುತ್ತಾ ಅದರಲ್ಲಿ ಮುಳುಗಿ ಹೋಗಿದ್ದೆ… ಕುಂದಾಪ್ರ ಡಾಟ್ ಕಾಂ ಕೊಯ್ಲಿ ಕೊಯ್ಲಿ ಕೊಯ್ಲಿ ಎಂದು ಕೂಗಾಡುತ್ತಾ ಇದ್ದೆ ತೋಟ ಕಾಯುವ ಮಕ್ಕಳು ಸುಮ್ಮನಾದರು. ಬೆಳಿಗ್ಗೆ ನೋಡುವಾಗ ಕಳ್ಳರು ಪೂರ್ತಿ ಗೇರು ಬೀಜ ಕೊಯ್ದುಕೊಂಡು ಹೋಗಿದ್ದಾರೆ!!
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸಕ್ತ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆಯಾಗಿದ್ದು ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಂ. ಮಂಜುನಾಥ ಶೆಟ್ಟಿ ಹಾಗೂ ಉಡುಪಿ ನಿಸ್ತಂತು ನಿರೀಕ್ಷಕ ಎಸ್.ಸಿ. ಮೋಹನ್ ಅವರಿಗೆ ಈ ಭಾರಿಯ ಪದಕ ಲಭಿಸಿದೆ. ಸೇವಾ ಬದ್ಧತೆ ಹಾಗೂ ಅರ್ಹತೆಯನ್ನು ಆಧರಿಸಿ ಜಿಲ್ಲೆಯಿಂದ ಈರ್ವರ ಹೆಸರು ಶಿಪಾರಸ್ಸು ಮಾಡಲಾಗಿದ್ದು, ಏ.2ರಂದು ನಡೆಯಲಿರುವ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಪದಕ ಸ್ವೀಕರಿಸಲಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸುಬ್ರಹ್ಮಣ್ಯ ಠಾಣೆಯ ಎಸೈ ಆಗಿ ನೇಮಕಗೊಂಡ ಮಂಜುನಾಥ ಶೆಟ್ಟಿ ಅವರು, ಉಪ್ಪಿನಂಗಡಿ, ಬೆಳ್ತಂಗಡಿ, ಬೆಂಗಳೂರು, ಉಡುಪಿ ಮಂಗಳೂರುನಲ್ಲಿ ಸೇವೆ ಸಲ್ಲಿಸಿ, ವೃತ್ತನಿರೀಕ್ಷಕರಾಗಿ ಭಡ್ತಿ ಪಡೆದು ಮುಂದೆ ಡಿವೈಎಸ್ಪಿ ಆಗಿ ಭಡ್ತಿ ಪಡೆದಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು, ಮಾ.30: ದಕ್ಷಿಣ ಭಾರತದ ಪ್ರಸಿದ್ದ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಬುಧವಾರ ಸಡಗರ ಸಂಭ್ರಮದಿಂದ ಜರುಗಿತು. ಕ್ಷೇತ್ರದ ಅಧಿದೇವತೆಯಾದ ಶ್ರೀ ಮೂಕಾಂಬಿಕೆಯ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮಾ.23ರಂದು ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ಊರಿನ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷವಾದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಮಾ.30ರ ಬೆಳಿಗ್ಗೆ ದೇವಳದ ತಂತ್ರಿ ನಿತ್ಯಾನಂದ ಅಡಿಗ ನೇತೃತ್ವದಲ್ಲಿ ಮುಹೂರ್ತ ಮಂಗಳಾರತಿ, ಪಂಚಾಮೃತ ಅಭಿಷೇಕ, ಕ್ಷಿಪ್ರಬಲಿ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಮಧ್ಯಾಹ್ನ ದೇವಳದ ಭೋಜನಾಲದಲ್ಲಿ ವಿವಿಧ ಭಾಗಗಳಿಂದ ಕ್ಷೇತ್ರಕ್ಕೆ ಆಗಮಿಸಿದ ಸಹಸ್ರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ದೇವರಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಮಹಿಳೆಯರು ಏಲಂನಲ್ಲಿ ಭಾಗವಹಿಸಿ ಪ್ರಸಾದ ರೂಪದಲ್ಲಿ ಖರೀದಿಸಿದರು. ಸಂಜೆ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು. ಉಡುಪಿ ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್…
ದೇವಳದ ಪುನರ್ಪ್ರತಿಷ್ಠೆ ಹಾಗೂ ಬ್ರಹ್ಮಕಶೋತ್ಸವ ಕುಂದಾಪ್ರ ಡಾಟ್ ಕಾಂ ಸುದ್ದಿ. ಹೇರಂಜಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಶಿಲಾದೇಗುಲ ಸಮರ್ಪಣೆ, ಪುನರ್ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿಗಳು ಮಾರ್ಚ್ 30ರಿಂದ ಏಪ್ರಿಲ್ 1ರ ವರೆಗೆ ಮೂಎಉ ದಿನಗಳ ಕಾಲ ದಿವ್ಯ ಸನ್ನಿಧಿಯಲ್ಲಿ ಜರುಗಲಿದೆ. ಕಾರಣಿಕ ಕ್ಷೇತ್ರ: ಹೇರಂಜಾಲು ದುರ್ಗಾಪರಮೇಶ್ವರಿ ಸನ್ನಿಧಿಯು ನಂಬಿದವರಿಗೆ ಇಂಬು ಕೊಡುವ ಕಾರಣಿಕ ಕ್ಷೇತ್ರ. ಒಂದು ಸಾವಿರ ವರ್ಷಕ್ಕೂ ಸುದೀರ್ಘ ಐತಿಹ್ಯ ಹೊಂದಿರುವ ಶ್ರೀ ದುರ್ಗಾಪರಮೇಶ್ವರಿಯ ಸನ್ನಿಧಿಯು ಅನಾದಿ ಕಾಲದಿಂದಲೂ ಭಕ್ತರ ಇಷ್ಟಾರ್ಷಗಳನ್ನು ನೆರವೇರಿಸುವ ಶೃದ್ಧಾಕೇಂದ್ರವಾಗಿ ಉಳಿದಿದೆ. ಕ್ಷೇತ್ರವನ್ನು ದುರ್ಗಾದೇವಿ ಎಂದು ದಾಖಲೆಗಳಲ್ಲಿ ನಮೂದಿಸಿದ್ದರೂ ಸ್ಥಳೀಯರು ದುರ್ಗಾಪರಮೇಶ್ವರಿ ಎಂದೇ ದೇವಿಯನ್ನು ಪೂಜಿಸುತ್ತಾ ಬಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿಯೇ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿ ಇದೆ. ಎರಡು ಕಡೆಗಳಲ್ಲಿ ನಾಗದೇವರ ಸಾನಿಧ್ಯ, ದೇವಳದ ಆಗ್ನೇಯದಲ್ಲಿ ರಾಮಮಂದಿರ, ಪಶ್ಚಿಮದಲ್ಲಿ ಕೆರೆ, ಪೂರ್ವದಲ್ಲಿ ಅಶ್ವಥ ಕಟ್ಟೆ ಇದ್ದು ಭಕ್ತರನ್ನು ಹರಸಿವೆ. ದೇವಳದ ಆನುವಂಶೀಯ ಮೊಕ್ತೇಸರ ಹಾಗೂ ಪ್ರಧಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಕ್ಕೊಳಪಟ್ಟ ಮೂಡಬಿದ್ರೆಯ ಮಹಾವೀರ ಕಾಲೇಜು ಸಿಬ್ಬಂದಿ ಸಂಘ ಆಯೋಜಿಸಿದ ಅಂತರ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಟದಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಸಿಬ್ಬಂದಿಗಳ ತಂಡ ಜಯ ಗಳಿಸಿದೆ. ಅಂತಿಮ ಪಂದ್ಯದಲ್ಲಿ ಎದುರಾಳಿ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು ಸಿಬ್ಬಂದಿಗಳ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಭಂಡಾರ್ಕಾರ್ಸ್ ಕಾಲೇಜಿನ ಉಪನ್ಯಾಸಕ ಶರಣ್ ಅವರು ಉತ್ತಮ ಬ್ಯಾಟ್ಸಮನ್ ಮತ್ತು ಅನಂತ ಪೈ ಉತ್ತಮ ಬೌಲರ್ ಪ್ರಶಸ್ತಿಯನ್ನು ಪಡೆದುಕೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಮ್ಮ ದೇಶದ ಸಾವಿರಾರು ವರ್ಷಗಳ ಹಿಂದಿನ ಸಂಸ್ಕೃತಿಗಳನ್ನು ಉಳಿಸಿ ಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿ. ಇಂದಿನ ಕಾಲದಲ್ಲಿ ಮನೆಯಲ್ಲಿ, ಶಾಲೆಯಲ್ಲಿ, ಸಮಾಜದಲ್ಲಿ ಸಿಗದ ಸಂಸ್ಕಾರ ಸಂಸ್ಕೃತಿಯನ್ನು ಯುವಕ ಮಂಡಲಗಳ ಸ್ನೇಹಿತರು ಜವಾಬ್ದಾರಿಯಿಂದ ನೀಡಿದಲ್ಲಿ ನಮ್ಮ ಪುರಾತನ ಸಂಸ್ಕ್ರತಿಯನ್ನು ಉಳಿಸಲು ಸಾಧ್ಯ ಎಂದು ಉಡುಪಿಯ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಮಲ್ಪೆ ಹೇಳಿದರು. ಅವರು ಇತ್ತೀಚಿಗೆ ಸ್ನೇಹ ಯುತ್ ಕ್ಲಬ್ ಹೊಸಪೇಟೆ ತ್ರಾಸಿ ಇವರ ಆಶ್ರಯದಲ್ಲಿ ಜರಗಿದ ಸ್ನೇಹೋತ್ಸವ-2016 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಪಂ ಸದಸ್ಯೆ ಶೋಭಾ ಜಿ. ಪುತ್ರನ್, ಜಿಪಂ ಮಾಜಿ ಸದಸ್ಯ ಅನಂತ ಮೊವಾಡಿ, ತ್ರಾಸಿ ಗ್ರಾಪಂ ಸದಸ್ಯ ರವೀಂದ್ರ ಖಾರ್ವಿ, ಹೊಸಪೇಟೆ ಹೋಳಿ ಉತ್ಸವ ಸಮಿತಿ ಅಧ್ಯಕ್ಷ ಚೌಕಿ ಜಗನ್ನಾಥ ಖಾರ್ವಿ ಸ್ನೇಹ ಸಂಘದ ಸ್ಥಾಪಕಾಧ್ಯಕ್ಷ ಗೋಪಾಲ ಖಾರ್ವಿ, ಹೊಸಪೇಟೆ ಮಹಿಳಾ ಹೋಳಿ ಉತ್ಸವ ಸಮಿತಿ ಅಧ್ಯಕ್ಷೆ ಪಾರ್ವತಿ ಬಿ. ಖಾರ್ವಿ, ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿ ನಾಗರಾಜ ಖಾರ್ವಿ, ಯುತ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬ್ಯಾಂಕ್ನಲ್ಲಿ ಉದ್ಯೋಗ ಪಡೆಯಲು ತೀವ್ರ ಪೈಪೋಟಿಯಿರುವಂತಹ ಪ್ರಸ್ತುತ ದಿನಗಳಲ್ಲೂ ಸಹ, ಸರಿಯಾದ ಪೂರ್ವ ಸಿದ್ಧತೆಗಳೊಡನೆ ನಾವು ಐಬಿಪಿಎಸ್ ಪರೀಕ್ಷೆಯನ್ನು ಬರೆದದ್ದೇ ಆದಲ್ಲಿ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಸಾಧ್ಯ ಎಂದು ಮಂಗಳೂರಿನ ಬೆಸೆಂಟ್ ಮ್ಯಾನೇಜ್ಮೆಂಟ್ ಕಾಲೇಜಿನ ಕಾಯರ್ಕಟ್ಟೆಯ ಡಾ. ನಾರಾಯಣ ಹೇಳಿದರು. ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಯೋಗದಲ್ಲಿ ನಡೆದ ಬ್ಯಾಂಕ್ ಪರೀಕ್ಷೆ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು. ಪ್ರಾಧ್ಯಾಪಕ ರವೀಶ್ ಮಾತನಾಡಿ ಸರಳ ರೀತಿಯಲ್ಲಿ ಸುಲಭ ಮಾರ್ಗದಲ್ಲಿ ವಿದ್ಯಾರ್ಥಿಗಳು ಗಣಿತ ಮತ್ತಿತರ ರೀಸನಿಂಗ್ ರೀತಿಯ ಪ್ರಶ್ನೆಗಳಿಗೆ ಉತ್ತರಿಸುವುದನ್ನು ಕಲಿತದ್ದೇ ಆದಲ್ಲಿ ಸಮಯದ ಉಳಿತಾಯದೊಡನೆ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಸಾಧ್ಯ ಎಂದರು. ಕಾರ್ಯಾಗಾರವನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಉಮೇಶ್ ಮಯ್ಯ ಸಂಯೋಜಿಸಿದರು. ಪ್ರಾಂಶುಪಾಲ ಪ್ರೊ.ಬಿ.ಎ ಮೇಳಿ ಉಪಸ್ಥಿತರಿದ್ದರು. ಕುಮಾರಿ ಪೂರ್ಣಿಮಾ ಎನ್.ಆರ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ಹೆದ್ದಾರಿಗೆ ಸೇರುವ ಎಲ್ಲ ಗ್ರಾಮ ರಸ್ತೆಗಳಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದು, ಬೀದಿದೀಪ ಇಲ್ಲದ ರಸ್ತೆಗಳಿಗೆ ಅದನ್ನು ಅಳವಡಿಸುವುದರೊಂದಿಗೆ ಹಿಂದೆ ಅಳವಡಿಸಿರುವ ದೀಪಗಳು ಬೆಳಗುವಂತೆ ಮಾಡವುದು, ಚರಂಡಿಗಳ ಮಳೆಗಾಲ ಪೂರ್ವ ಹೂಳೆತ್ತುವುದು, ಹರಿಶ್ಚಂದ್ರ ಮಾರ್ಗದ ಕೇಂದ್ರೀಕೃತ ಸೋಲಾರ್ ದೀಪ ಲೋಪ ಸರಿಪಡಿಸುವುದು, ಸ್ಮಶಾನ ಅಭಿವೃದ್ಧಿಗೆ ಕ್ರಮ, ವಾರ್ಡ್ಸಭೆಗಳನ್ನು ಮತದಾನ ಕೇಂದ್ರದಲ್ಲೇ ನಡೆಸುವುದು, ರಸ್ತೆಗಳಿಲ್ಲದ ಜನವಸತಿ ಪ್ರದೇಶಗಳಿಗೆ ರಸ್ತೆ ನಿರ್ಮಿಸುವುದಕ್ಕೆ ನೀಡಿದ ಆದ್ಯತೆಯನ್ನು ಇದ್ದವುಗಳನ್ನು ಸುಸ್ಥಿತಿಯಲ್ಲಿಡುವುದಕ್ಕೂ ಆದ್ಯತೆ ನೀಡುವುದು. ಇದು ಮರವಂತೆ ಗ್ರಾಮ ಪಂಚಾಯಿತಿಯ ಸುವರ್ಣ ಸಭಾಭವನದ ಅಟಲ್ ಬಿಹಾರಿ ವಾಜಪೇಯಿ ವೇದಿಕೆಯಲ್ಲಿ ಎರಡನೆ ಸುತ್ತಿನ ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯಿತಿಯ ಲೋಪ ಮತ್ತು ಮಾಡಬೇಕಾದ ಕೆಲಸಗಳ ಕುರಿತು ಗ್ರಾಮಸ್ಥರು ಅಹವಾಲುಗಳನ್ನಿಟ್ಟು ಎಚ್ಚರಿಸಿದ ಪರಿ. ಗ್ರಾಮಸ್ಥರಾದ ಎಸ್. ಜನಾರ್ದನ ಮಂಡಿಸಿ, ಎಂ. ವಿನಾಯಕ ರಾವ್ ಅನುಮೋದಿಸಿದ ಹತ್ತು ನಿರ್ಣಯಗಳನ್ನು ಸಭೆ ಸರ್ವಾನುಮತದಿಂದ ಸ್ವೀಕರಿಸಿತು. ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷೆ ಅನಿತಾ ಆರ್. ಕೆ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ಕಾಲ್ತೋಡು ಗ್ರಾಮದ ಉಂತುನ ಹೊಳೆಯ ಈರಣ್ಣನ ಮಕ್ಕಿಯಲ್ಲಿ 13ನೇ ಶತಮಾನದ ಕನ್ನಡ ಶಾಸನವೊಂದು ಪತ್ತೆಯಾಗಿದೆ. ಶಿವಸ್ತುತಿಯೊಂದಿಗೆ ಪ್ರಾರಂಭವಾಗಿರುವ ಶಾಸನದಲ್ಲಿ ಶಕ ವರ್ಷ 1219 ರ ಉಲ್ಲೇಖವಿದ್ದು, ಅದು ಕ್ರಿ.ಶ. 1293ಕ್ಕೆ ಸರಿಹೊಂದುತ್ತದೆ. ಈ ಬಗ್ಗೆ ಸಂಶೋಧಕ ಎಂ.ಎಸ್.ಆರ್.ಎಸ್. ಕಾಲೇಜಿನ ಸಹ ಪ್ರಾಧ್ಯಾಪಕ ಪ್ರೊ. ಟಿ. ಮುರುಗೇಶಿ ಕುಂದಾಪ್ರ ಡಾಟ್ ಕಾಂ ಗೆ ತಿಳಿಸಿದ್ದಾರೆ. ಪತ್ತೆಯಾಗಿರುವ ಶಾಸನದಲ್ಲಿ ಶ್ರೀ ಮತ್ಪ್ರಾಪ ಚಕ್ರವರ್ತಿ ದೇವರ್ಸ ಎಂಬ ಹೆಸರನ್ನು ಗುರುತಿಸಲಾಗಿದೆ. ಆದರೆ ಶಾಸನದ ವಿವರಗಳಿಂದ ಈ ದೇವರ್ಸ ಯಾರು ಎಂದು ಸ್ಪಷ್ಟವಾಗುವುದಿಲ್ಲ. ಶಾಸನೋಕ್ತ ಕಾಲದಲ್ಲಿ ನಾಗದೇವರ್ಸ ಎಂಬ ಆಳುಪ ದೊರೆ ತುಳುನಾಡಿನಲ್ಲಿ ಆಳ್ವಿಕೆ ನಡೆಸುತ್ತಿದ್ದ ಮಾಹಿತಿ ಇತರೆ ದಾಖಲೆಗಳಲ್ಲಿ ದೊರೆಯುತ್ತದೆ. ಆದ್ದರಿಂದ ಶಾಸನೋಕ್ತ ದೇವರ್ಸ ಆಳುಪ ದೊರೆ ನಾಗದೇವರ್ಸನೆಂದು ಭಾವಿಸಬಹುದಾಗಿದೆ. ಈತನ ಆಳ್ವಿಕೆಯ ಕಾಲದಲ್ಲಿ ಹೇರಳಿಯ ಅಂದರೆ ಈಗಿನ ಹೇರಂಜಾಲುವಿನ ಹೆಬ್ಬಾರಿಯರ ಮಠಕ್ಕೆ ಕೊಟ್ಟ ಭೂಮಿ ದಾನವನ್ನು ಶಾಸನದಲ್ಲಿ ದಾಖಲಿಸಲಾಗಿದೆ. ಶಾಸನದ ಕೊನೆಯಲ್ಲಿ ಶಾಪಾಶಯವಿರುವ ಬಗ್ಗೆ ತಿಳಿಸಲಾಗಿದೆ.…
ಬಹುನಿರೀಕ್ಷೆಯ ಕುಂದಗನ್ನಡದ ಚಿತ್ರ ಬಿಲಿಂಡರ್ ಗೆ ಕನ್ನಡದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಹಾಡಿರುವ ಹಾಡಿ ಕೇಳಿ… ರವಿ ಬಸ್ರೂರು ಅವರ ಕುಂದಗನ್ನಡದ ಪ್ರೀತಿಗೆ ಸಾಥ್ ನೀಡಿರುವ ಪುನಿತ್ ಅವರೂ ಕುಂದಗನ್ನಡದಲ್ಲಿಯೇ ಹಾಡಿದ್ದಾರೆ. ನೋಡಿ…
