ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಕಲಾವಿದ ಹನಮಂತ ಪೂಜಾರ್ ಅವರ ನಿರ್ದೇಶನದಲ್ಲಿ ತಯಾರಾಗುತ್ತಿರುವ ಹೊಸ ಚಿತ್ರ ‘ಆಯ್ಕೆ’ಗೆ ನಟ, ನಟಿಯರು ಬೇಕಾಗಿದ್ದು, ಬೈಂದೂರಿನ ಲಾವಣ್ಯ ರಂಗಮನೆಯಲ್ಲಿ ಕಲಾವಿದರ ಆಡಿಷನ್ ನಡೆಯಲಿದೆ. ಜೂನ್ ೧೪ ಮತ್ತು ೧೫ರ ಸಂಜೆ ೪ಗಂಟೆಯಿಂದ ಇತ್ತಿಚಿನ ಭಾವಚಿತ್ರದೊಂದಿಗೆ ಆಸಕ್ತ ಕಲಾವಿದರು ಸಂದರ್ಶಿಸುವಂತೆ ಕೋರಲಾಗಿದೆ. ಮಾಹಿತಿಗೆ 9686661618 ಸಂಪರ್ಕಿಸಬಹುದು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಯಡ್ತರೆ ಶಾಖೆಯಲ್ಲಿ ಗ್ರಾಮೀಣ ಭಾಗದ ಗ್ರಾಹಕರ ಅನುಕೂಲಕ್ಕಾಗಿ ವಿಶೇಷ ತಂತ್ರಜ್ಷಾನ ಅಳವಡಿಸಿದ ಇ-ಟಚ್ನ್ನು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎನ್. ಕೆ. ಚಾರಿ ಸೋಮವಾರ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಅವರು, ನಮ್ಮ ಬ್ಯಾಂಕಿನ ಗ್ರಾಹಕರಲ್ಲದೇ ಉಳಿದ ಬ್ಯಾಂಕುಗಳ ಗ್ರಾಹಕರೂ ಇದರ ಪ್ರಯೋಜನ ಪಡೆಯಬಹುದಾಗಿದೆ. ಉಡುಪಿಯಿಂದ ಭಟ್ಕಳದ ವರೆಗಿನ ಸುಮಾರು ೯೦ ಕಿ.ಮಿ ವ್ಯಾಪ್ತಿಯಲ್ಲಿ ಈ ವ್ಯವಸ್ಥೆಯಿಲ್ಲ. ಇದರಿಂದ ಸುಲಭ ವಿಧಾನದಿಂದ ಬ್ಯಾಂಕಿನ ವ್ಯವಹಾರ ಮಾಡಬಹುದಾಗಿದೆ. ಬದಲಾವಣೆಗೆ ತಕ್ಕಂತೆ ಗ್ರಾಹಕರನ್ನು ಸ್ಪಂದಿಸಲು ಇದು ಸಹಕಾರಿಯಾಗಿದ್ದು, ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಎಲ್ಲರೂ ಇದರ ಉಪಯೋಗ ಪಡೆಯುವಂತಾಗಬೇಕು ಎಂದರು. ಬ್ಯಾಂಕುಗಳನ್ನು ವೀಲಿನಗೊಳಿಸುವ ಕೇಂದ್ರ ಸರಕಾರದ ಯೋಜನೆ ಕುರಿತು ಸುದ್ಧಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಾರಿ, ಇದೊಂದು ಉತ್ತಮ ವ್ಯವಸ್ಥೆಯಾಗಿದ್ದು, ಗ್ರಾಹಕ ಹಾಗೂ ಸರಕಾರದ ವೆಚ್ಚ ಕಡಿತಗೊಳಿಸಬಹುದು. ಒಬ್ಬರ ಖಾತೆ ಹಲವಾರು ಬ್ಯಾಂಕುಗಳಲ್ಲಿರುತ್ತದೆ. ಇದರ ಏಕೀಕರಣದಿಂದ ನಿರ್ವಹಣೆಗಾಗಿ ತಗಲುವ ಖರ್ಚು ಹಾಗೂ ಅನಗತ್ಯವಾಗಿ ವ್ಯಯಿಸುವ…
▪ ಜಿ. ಸುರೇಶ್ ಪೇತ್ರಿ | ಕುಂದಾಪ್ರ ಡಾಟ್ ಕಾಂ ಸಂದರ್ಶನ ಬಡಗುತಿಟ್ಟು ಯಕ್ಷರಂಗ ಕಂಡ ಅಪ್ರತಿಮ ಕಲಾವಿದರಲ್ಲಿ ತೀರ್ಥಹಳ್ಳಿ ಗೋಪಾಲ ಆಚಾರ್ಯರು ಒಬ್ಬರು. ಯಕ್ಷಗಾನ ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಿದ ಮಹಾನ್ ಕಲಾವಿದ. ಇಳಿವಯಸಿನಲ್ಲಿಯೂ ದಣಿವು ಅರಿಯದ ಚಿರಯುವಕ. ರಂಗಕ್ಕೆ ಅಡಿ ಇಡುತ್ತಲೆ ಮಿಂಚಿನ ಸಂಚಾರ. 60 ರ ಅಭಿಮನ್ಯುನಾಗಿ ವೇಷಕಟ್ಟಿದರೂ 20 ರ ಅಭಿಮನ್ಯುನಾಗಿ ಅಭಿಮಾನಿ ವರ್ಗದವರಿಗೆ ಸಿಡಿಲಮರಿಯಾಗಿ ಕಾಣಿಸಿಕೊಳ್ಳುವ ಯಕ್ಷರಂಗದ ಅಗ್ರಣಿ. ಮಲೆನಾಡಿನ ತೀರ್ಥಹಳ್ಳಿಯ ಕುರುವಳ್ಳಿಯಲ್ಲಿ ವಾಸುದೇವ ಆಚಾರ್ಯ ಹಾಗೂ ಸುಲೋಚನಾ ದಂಪತಿಗಳ 5 ಮಕ್ಕಳಲ್ಲಿ ಎರಡನೆಯವರು. ತನ್ನ ಮೂಲ ಕಸುಬಾದ ಬಡಗಿ ವೃತ್ತಿಯನ್ನು ಬಿಟ್ಟು ಬಡಗುತಿಟ್ಟಿನ ಯಕ್ಷಗಾನವನ್ನು ಆರಿಸಿಕೊಂಡರು. ಊರು ತೀರ್ಥಹಳ್ಳಿಯಾದರೂ ಯಕ್ಷರಂಗದ ಹಾದಿಯನ್ನು ಆಯ್ಕೆ ಮಾಡಿಕೊಂಡದು ಯಕ್ಷಕಾಶಿ ಎನಿಸಿಕೊಂಡ ಕುಂದಾಪುರವನು. ಬೈಂದೂರಿನ ಸಮೀಪದ ನಾಯಕನಕಟ್ಟೆಯಲ್ಲಿ ವಾಸವಾಗಿರುವ ತೀರ್ಥಹಳ್ಳಿ ಯವರು ಓದಿದ್ದು 3ನೇ ತರಗತಿ ಆದರೂ ಅವರ ವಾಗ್ಭಂಢಾರ ಅಪಾರ. ಯಕ್ಷರಂಗದ ಒಂದೊಂದೇ ಮೆಟ್ಟಿಲೇರಿ ಅದ್ಭುತ ನೃತ್ಯ,ಲಯಬದ್ಧ ಹೆಜ್ಜೆಗಾರಿಕೆ ಸಭ್ಯ ಹಾಗೂ ಸುಸ್ಪಷ್ಟ ಮಾತುಗಾರಿಕೆ ಹೀಗೆ ಅಳೆಯಹೊರಟರೆ ಅವರೊಬ್ಬ ಯಕ್ಷರಂಗದ ಧ್ರುವತಾರೆ. ಕುಂದಾಪ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಮಾಜದಲ್ಲಿ ಬ್ರಾಹ್ಮಣರನ್ನು ಹೀಗೆಳೆಯುವವರಿಗೆ ಸಂಘಟನೆ ಮೂಲಕ ಉತ್ತರ ನೀಡಬೇಕಿದ್ದು, ಸಂಘಟನೆ ಸಶಕ್ತವಾಗಿದ್ದರೆ ಮಾತ್ರ ಸಾಧ್ಯ. ಬ್ರಾಹ್ಮಣರು ಜಾಗೃತರಾಗಿ ಸಂಘಟನೆ ಮಹತ್ವ ಅರ್ಥಮಾಡಿಕೊಳ್ಳಬೇಕು ಎಂದು ಉಡುಪಿ ಬ್ರಾಹ್ಮಣ ಪರಿಷತ್ ಉಪಾಧ್ಯಕ್ಷ ಮಂಜುನಾಥ ಉಪಾಧ್ಯಾಯ ಹೇಳಿದ್ದಾರೆ. ಕುಂದಾಪುರ ತಾಲೂಕ್ ದ್ರಾವಿಡ ಬ್ರಾಹ್ಮಣ ಪರಿಷತ್, ಮಹಿಳಾ ವೇದಿಕೆ ಮತ್ತು ಕುಂದಾಪುರ ವಲಯ ಆಶ್ರಯದಲ್ಲಿ ಹಂಗಳೂರು ಶ್ರೀ ಅನಂತಪದ್ಮನಾಭ ಸಭಾಂಗಣದಲ್ಲಿ ನಡೆದ ತಾಲೂಕ್ ವಿಪ್ರ ಮಹಿಳಾ ಸಮಾವೇಶ ಸಮಾರೋಪದಲ್ಲಿ ಮಾತನಾಡಿದರು. ಬ್ರಾಹ್ಮಣತ್ವ ಹಿಂದೂ ಸಂಸ್ಕೃತಿ ಪ್ರತೀಕವಾಗಿದ್ದು, ಬ್ರಾಹ್ಮಣ್ಯ ಅಳಿದರೆ ಹಿಂದೂ ಸಂಸ್ಕೃತಿಯೂ ಅಳಿಯುತ್ತದೆ. ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಕಾರ್ಕಳ, ಕುಂದಾಪುರ ಮತ್ತು ಉಡುಪಿ ತಾಲೂಕಿನ ಬ್ರಾಹ್ಮಣ ಮಕ್ಕಳ ಸಮಾವೇಶ ನಡೆಸಿ, ಸಾಂಸ್ಕಾರ ಉಳಿಸುವ ಸಂಸ್ಕೃತಿ ಕಲಿಸಲಾಗುತ್ತದೆ. ಹಾಗೆ ಜಿಲ್ಲೆಯಲ್ಲಿ ಮೂರು ತಾಲೂಕ್ ಸೇರಿಸಿಕೊಂಡು ಬ್ರಹತ್ ವಿಪ್ರ ಸಮಾವೇಶ ನಡೆಸಲಾಗುತ್ತದೆ ಎಂದು ಹೇಳಿದರು. ಕುಂದಾಪುರ ತಾಲೂಕ್ ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಗಣೇಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಬ್ರಾಹ್ಮಣ ಪರಿಷತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಧರ್ಮ ಪ್ರಾಂತ್ಯದ ಬಿಶಪ್ ವಂ| ಡಾ|ಜೆರಾಲ್ಡ್ ಐಸಾಕ್ ಲೋಬೊ ಇವರು ಅಧಿಕೃತವಾಗಿ ಕುಂದಾಪುರ ಹೋಲಿ ರೋಜರಿ ಚರ್ಚ್ಗೆ ಭೇಟಿ ನೀಡಿದರು. ಪ್ರಾರ್ಥನ ವಿಧಿ ನೆರವೇರಿಸಿ ಮಾತನಾಡಿದ ಅವರು, ದೇವರು ನಮ್ಮನ್ನು ಸೃಷ್ಟಿಸಿದ್ದು ಇಲ್ಲಿ ನೀತಿವಂತರಾಗಿ ಬಾಳುವಂತೆ. ಪ್ರಾಪಂಚಿಕವಾದ ಹಣ ಆಸ್ತಿ, ಚಿನ್ನಾಭರಣಗಳನ್ನು ಕೂಡಿಟ್ಟರೆ ಸಾಲದು, ಸತ್ಯ ನೀತಿಯಿಂದ ಜೀವಿಸುತ್ತಾ, ದಯಾಪರ ಕೆಲಸಗಳನ್ನು ಮಾಡುತ್ತ ಪುಣ್ಯವನ್ನು ಸಂಪಾದಿಸಿಕೊಳ್ಳಬೇಕಿದೆ. ಅದುವೇ ನಿಮ್ಮನ್ನು ಸ್ವರ್ಗರಾಜ್ಯಕ್ಕೆ ಕೊಂಡಯುವುದು ಎಂದು ಅವರು ಸಂದೇಶ ನೀಡಿದರು ಪ್ರಧಾನ ಧರ್ಮಗುರು ವಂ|ಅನಿಲ್ ಡಿಸೋಜಾ ಬಿಶಪರಿಗೆ ಬೆಳಗಿಸದ ಮುಂಬತ್ತಿ ಹಾಗೂ ಶಿಲುಬೆಯನ್ನು ನೀಡಿ ಗೌರವಿಸಿದರು. ಬಳಿಕ ಹಲವಾರು ಪ್ರಾರ್ಥನ ವಿಧಿಗಳನ್ನು ನೆಡಸಲಾಯಿತು. ಕೊನೆಗೆ ಬಿಶಪರು ಧರ್ಮಕೇಂದ್ರದ ಸಮಾಧಿಗೆ ಭೇಟಿ ಮಾಡಿ ಅಲ್ಲಿ ಸಮಾಧಿ ಮಾಡಿದವರಿಗೆ ಮುಕ್ತಿ ದೊರಕಲು ಪವಿತ್ರ ಜಲವನ್ನು ಪ್ರೋಕ್ಷಿಸಿ, ವಿಶೇಷವಾದ ಪ್ರಾರ್ಥನೆಯನ್ನು ಸಲ್ಲಿಸಿ ಅಶಿರ್ವದಿಸಿದರು. ಈ ಸಂದರ್ಭದಲ್ಲಿ ಸಹಾಯಕ ಧರ್ಮಗುರು ವಂ| ಜೆರಾಲ್ಡ್ ಸಂದೀಪ್ ಡಿಸೋಜಾ, ಪ್ರಾಂಶುಪಾಲ ಧರ್ಮಗುರು ವಂ| ಪ್ರವೀಣ್ ಅಮ್ರತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಬಿಜೂರು ರಾ.ಹೆ-66ರ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ ಸಂಭವಿಸಿದ ಸರಣಿ ಅಪಘಾತದಲ್ಲಿ ಖಾಸಗಿ ಬಸ್ಸು, ಮಾರುತಿ ಸುಜುಕಿ, ಟಾಟಾ ಇಂಡಿಕಾ ಕಾರು ಹಾಗೂ ಬೊಲೆರೋ ವಾಹನ ಒಂದಕ್ಕೊಂದು ಢಿಕ್ಕಿ ಹೊಡೆದಿರುವುದಲ್ಲದೇ ಮೂರು ವಾಹನಗಳು ಜಖಂಗೊಂಡ ಘಟನೆ ನಡೆದಿದೆ. ಬಸ್ ಹಾಗೂ ಎಲ್ಲಾ ವಾಹನದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಂದೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಬಿಜೂರಿನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದಾಗ ಬಸ್ಸಿನ ಹಿಂದೆಯೇ ಇದ್ದ ಬಳ್ಳಾಪುರದಿಂದ ಬರುತ್ತಿದ್ದ ಮಾರುತಿ ಸುಜುಕಿ ಕಾರಿನ ಚಾಲಕ ಒಮ್ಮೆಲೇ ಬ್ರೇಕ್ ಹಾಕಿ ನಿಲ್ಲಿಸಿದ್ದಾನೆ. ಇದರ ಹಿಂದೆಯೇ ಇದ್ದ ಟಾಟಾ ಇಂಡಿಕಾ ಮುಂದಿನ ಕಾರಿಗೆ ಡಿಕ್ಕಿ ಹೊಡೆಯಿತು ಪರಿಣಾಮ ಮಾರುತಿ ಸುಜುಕಿ ಕಾರು ಕೂಡಾ ನಿಂತಿದ್ದ ಬಸ್ಸಿಗೆ ಡಿಕ್ಕಿಹೊಡೆದಿತ್ತು., ಇದೇ ವೇಳೆ ಇಂಡಿಯಾ ಕಾರಿನ ಹಿಂದಿದ್ದ ಬುಲೇರೋ ವಾಹನವೂ ಡಿಕ್ಕಿ ಹೊಡೆದು ಮೂರು ವಾಹನಗಳು ಜಖಂಗೊಂಡಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ಸು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ೩ ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಆಸ್ಕರ್ ಫೆರ್ನಾಂಡಿಸ್, ಜೈರಾಮ್ ರಮೇಶ್ ಹಾಗೂ ಕೆಸಿ ರಾಮಮೂರ್ತಿ ಗೆಲುವು ಸಾಧಿಸಿದ್ದರೇ ಬಿಜೆಪಿಯ ನಿರ್ಮಲಾ ಸೀತಾರಾಮನ್ ಗೆಲುವು ಸಾಧಿಸಿದ್ದಾರೆ. ಆಸ್ಕರ್ ಗೆಲುವು, ಕರಾವಳಿ ನಾಯಕರುಗಳಿಂದ ಅಭಿನಂದನೆ: ಕಾಂಗ್ರೆಸ್ ಪಕ್ಷದ ಹಿರಿಯ ರಾಜಕೀಯ ಮುತ್ಸದ್ಧಿ ಆಸ್ಕರ್ ಫೆರ್ನಾಂಡಿಸ್ ಸತತ ನಾಲ್ಕನೇ ಭಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿರುವುದಕ್ಕೆ ಕರಾವಳಿಯ ಕಾಂಗ್ರೆಸ್ ಪಕ್ಷದ ನಾಯಕರು ಅಭಿನಂದಿಸಿದ್ದಾರೆ. ಸಚಿವ ವಿನಯಕುಮಾರ್ ಸೊರಕೆ, ರಮಾನಾಥ ರೈ, ಬೈಂದೂರು ಶಾಸಕ ಗೋಪಾಲ ಪೂಜಾರಿ, ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಮಾಜಿ ಜಿ.ಪಂ ಅಧ್ಯಕ್ಷ ರಾಜು ಪೂಜಾರಿ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಶಿರೂರು ಗ್ರಾಪಂ ವ್ಯಾಪ್ತಿಯ ಮುಸ್ಲಿಂ ಕೇರಿಯ ಮನೆಯೊಂದರಲ್ಲಿ ಹಾಡುಗಲೇ ಕಳ್ಳತನಗೈದ ಘಟನೆ ಬೆಳಕಿಗೆ ಬಂದಿದೆ. ಮುಸ್ಲಿಂ ಕೇರಿಯ ಮುಲ್ಲಾ ದಸ್ತಗಿರಿ ಕುಟುಂಬದವರಿಗೆ ಸೇರಿದ ಮನೆಯಾಗಿದ್ದು, ಯಜಮಾನ ಸೇರಿದಂತೆ ಕುಟುಂಬದ ಸದಸ್ಯರು ವಿದೇಶದಲ್ಲಿ ನೆಲೆಸಿದ್ದಾರೆ. ಇಲ್ಲಿ ಬೇರೊಬ್ಬರು ಮನೆಯನ್ನು ನೋಡಿಕೊಳ್ಳುತ್ತಿದ್ದು, ಅವರು ಬೀಗ ಹಾಕಿ ತೆರಳಿದ್ದಾಗ ಕಳ್ಳತನ ನಡೆದಿದೆ. ಮನೆಯಲ್ಲಿದ್ದ ಎರಡು ಬೀರುವಿನ ಬಾಗಿಲು ಮುರಿದು ಚಿನ್ನ ಇಲ್ಲವೇ ಹಣಕ್ಕಾಗಿ ತಡಕಾಡಿರಬಹುದು ಎಂದು ಶಂಕಿಸಲಾಗಿದೆ. ಕೋಣೆಯ ತುಂಬಿಲ್ಲಾ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕಳವಾದ ವಸ್ತು ಹಾಗೂ ಮೌಲ್ಯದ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಆನಗಳ್ಳಿಯ ಪ್ರಕಾಶ್ ಕೆ.ಆನಗಳ್ಳಿ ಅವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮಾರ್ಕೆಟಿಂಗ್ ಮತ್ತು ಕಾಂಟ್ರ್ಯಾಕ್ಟಿಂಗ್ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸಾಧನೆಗೆ ಅಂತಾರಾಷ್ಟ್ರೀಯ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಆಂಡ್ ಎಕನಾಮಿಕ್ ರಿಫಾರ್ಮ್ಸ್ ಸಂಸ್ಥೆ ಕೊಡಮಾಡುವ ಎಂ.ವಿಶ್ವೇಶ್ವರಯ್ಯ ಬೆಸ್ಟ್ ಎಂಜಿನಿಯರಿಂಗ್ ನ್ಯಾಷನಲ್ ಆವಾರ್ಡ್ ಲಭಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಪಿ.ಸಾಂಗ್ಲಿಯಾನ ಪ್ರಶಸ್ತಿ ಪ್ರದಾನ ಮಾಡಿದರು. ಸಂಸ್ಥೆಯ ಅಧ್ಯಕ್ಷರಾದ ಡಾ|ಎಚ್.ವಿ ಶಿವಪ್ಪ, ಕಾರ್ಯದರ್ಶಿ ಜಿ.ಎಸ್. ದೇಸಾಯಿ, ವಿಧಾನ ಪರಿಷತ್ ಸದಸ್ಯ ಚೌಡಾ ರೆಡ್ಡಿ, ಚಿತ್ರ ನಿರ್ದೇಶಕ ರಾಧಾಕೃಷ್ಣ, ಮೈಸೂರು ಕನ್ಸ್ಟ್ರಕ್ಷನ್ ಕಂಪನಿಯ ಮ್ಯಾನೇಜರ್ ಪುಟ್ಟ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಹಿಂದಿನ ಕಾಲದಲ್ಲಿ ಹಿರಿಯರು, ಕುಟುಂಬದ ಏಳಿಗೆಗಾಗಿ ಕುಲದೇವರ ದರ್ಶನ ಪಡೆಯಲು ಪಾದಯಾತ್ರೆಯ ಮೂಲಕವೇ ಹೋಗಬೇಕಾದ ರಿವಾಜು ಹಾಗೂ ಅನಿವಾರ್ಯತೆ ಇತ್ತು. ಆದರೆ ಇಂದು ಎಲ್ಲಾ ರೀತಿಯ ಸೌಕರ್ಯಗಳಿದ್ದರೂ ಹಿರಿಯರ ಕಟ್ಟಿಕೊಂಡು ಸಂಪ್ರದಾಯವನ್ನು ಮುಂದುವರಿಸಿಕೊಂಡು ಊರಿನ ಸಂಕಷ್ಟಗಳು ದೂರವಾಗಿಲಿ ಎಂಬ ಸದಾಶಯದೊಂದಿಗೆ ಹಿರಿಯರು ಕಿರಿಯರೆನ್ನದೇ ಹರಿಖಂಡಿಗೆಯ ಕಾಪಾಡಿಯ ಮೂಲಸ್ಥಾನದಿಂದ ಗೋವಾ ಶ್ರೀ ಮಹಾಲಸಾ ನಾರಾಯಣಿ ದೇವಿ ಕ್ಷೇತ್ರಕ್ಕೆ ಪಾದಯಾತ್ರೆ ತೆರಳುತ್ತಿದ್ದಾರೆ ಕಾಪಾಡಿಯ ಜಿಎಸ್ಬಿ ಸಮುದಾಯದ ಶೆಣೈ ಮುತ್ತು ನಾಯಕ್ ಕುಟುಂಬಿಕರು. ಪಾದಯಾತ್ರೆಯ ನಡುವೆ ಕೋಟೇಶ್ವರ ಶ್ರೀ ಪಟ್ಟಾಭಿರಾಮಚಂದ್ರ ದೇವಾಲಯದಲ್ಲಿ ತಂಗಿದ್ದ ಯಾತ್ರಾರ್ಥಿಗಳು ಮಾತಿಗೆ ಸಿಕ್ಕರು. ಉಡುಪಿ ಜಿಲ್ಲೆಯ ಪೂರ್ವ ದಿಕ್ಕಿನಲ್ಲಿ ಪೆರ್ಡೂರು ಸಮೀಪದಲ್ಲಿರುವ ಊರು ಹರಿಖಂಡಿಗೆ. ಅಲ್ಲಿಯೇ ಹತ್ತಿರದಲ್ಲಿ ಎರಡು ಕಿ.ಮೀ ದೂರದಲ್ಲಿ ಇರುವ ಪುಟ್ಟ ಗ್ರಾಮವೇ ಕಾಪಾಡಿ. ಹರಿಖಂಡಿಗೆಯ ಊರಿನ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಹಾಗೂ ಕಾಪಾಡಿಯಲ್ಲಿರುವ ಪುರಾತನ ಬ್ರಹ್ಮ ಸ್ಥಾನಕ್ಕೆ ಸುಮಾರು 500 ವರ್ಷಗಳ ಇತಿಹಾಸವಿದೆ. ಗೋವಾದಲ್ಲಿ ಪೋರ್ಚುಗೀಸರ ಮತಾಂತರ ನೀತಿಯನ್ನು ಸಹಿಸದೇ…
