Author: ನ್ಯೂಸ್ ಬ್ಯೂರೋ

ಬಹುನಿರೀಕ್ಷೆಯ ಕುಂದಗನ್ನಡದ ಚಿತ್ರ ಬಿಲಿಂಡರ್ ಗೆ ಕನ್ನಡದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಹಾಡಿರುವ ಹಾಡಿ ಕೇಳಿ… ರವಿ ಬಸ್ರೂರು ಅವರ ಕುಂದಗನ್ನಡದ ಪ್ರೀತಿಗೆ ಸಾಥ್ ನೀಡಿರುವ ಪುನಿತ್ ಅವರೂ ಕುಂದಗನ್ನಡದಲ್ಲಿಯೇ ಹಾಡಿದ್ದಾರೆ. ನೋಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಫ್ರೆಂಡ್ಸ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ಮಂಗಳೂರಿನ ಅಲ್ಪೈನ್ ಅಸೋಸಿಯೇಟ್ಸ್ ಸಹಯೋಗದಲ್ಲಿ ಬಾರಿಗೆ ಉಚಿತ ಹಿಜಮಾ ಯುನಾನಿ ಚಿಕಿತ್ಸಾ ಶಿಬಿರ ಸರಕಾರೀ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ್ರ ರಾಜು ದೇವಾಡಿಗ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುಜಾಹಿದ್ ನಖುದಾ, ಗಂಗೊಳ್ಳಿ ಜಾಮಿಯ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಹಮೀದ್, ಮುಬಾರಕ್ ಕ್ರಿಕೆಟ್ ಕ್ಲಬ್‌ನ ಸದಸ್ಯ ನೂರ್ ಅಮಿನ್ ಹಾಗೂ ಅಲ್ಪೈನ್ ಅಸೋಸಿಯೇಟ್ಸ್ ಮಂಗಳೂರಿನ ಸ್ಥಾಪಕ ಝಹೀರ್ ಅಹಮೆದ್ ನಾಖುದ ಉಪಸ್ಥಿತರಿದ್ದರು. ಸುಮಾರು 80 ಪುರುಷರು ಹಾಗೂ 50 ಮಹಿಳೆಯರು ಹಿಜಾಮಾ ಚಿಕಿತ್ಸೆಯ ಸದುಪಯೋಗವನ್ನು ಪಡೆದುಕೊಂಡಿದ್ದಾರೆ. ಶಿಬಿರದಲ್ಲಿ ಮಂಗಳೂರಿನ ಡಾ. ಸಯೇದ್ ಝಾಹಿದ್ ಹುಸ್ಸೈನ್, ಉಡುಪಿಯ ಡಾ. ರುಕ್ಸರ್ ಅಂಜುಮ್ ಅವರಿಂದ ಉಚಿತ ಹಿಜಾಮಾ, ಯುನಾನಿ ಚಿಕಿತ್ಸೆ, ಸಲಹೆಯನ್ನು ನೀಡಲಾಯಿತು. ನವದೆಹೆಲಿಯ ರೆಕ್ಸ್ ರೆಮೆದಿಎಸ್ ಪ್ರೈವೇಟ್ ಲಿಮಿಟೆಡ್, ಉಡುಪಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರದ್ದುಗೊಂಡಿರುವ ಬಿಪಿಎಲ್ ಕಾರ್ಡ್ ಸಮಸ್ಯೆ, ಸರಕಾರಿ ಭೂಮಿ, ಕೆರೆ ಅತಿಕ್ರಮಣ, ತ್ಯಾಜ್ಯ ವಿಲೇವಾರಿ ಸಮಸ್ಯೆ, ಅನಿಯಮಿತ ವಿದ್ಯುತ್ ಕಡಿತ, ಪ್ರಮುಖ ಚರಂಡಿಗಳ ಅತಿಕ್ರಮಣ ತೆರವುಗೊಳಿಸದಿರುವುದು ಮತ್ತು ಹೂಳೆತ್ತದಿರುವುದು, ಗ್ರಾಮ ಪಂಚಾಯತ್ ಕ್ರಿಯಾ ಯೋಜನೆ ಮಾಡದಿರುವುದು ಮೊದಲಾದ ಗಂಭೀರ ಸಮಸ್ಯೆಗಳು ಇತ್ತೀಚಿಗೆ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆದ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ದ್ವಿತೀಯ ಗ್ರಾಮಸಭೆಯಲ್ಲಿ ಪ್ರಸ್ತಾಪಗೊಂಡಿತು. ಸರಕಾರದ ತಪ್ಪು ನಿರ್ಧಾರದಿಂದ ಬಡವರ ನೂರಾರು ಬಿಪಿಎಲ್ ಕಾರ್ಡ್ ರದ್ದುಗೊಂಡಿದ್ದು, ಸರಕಾರ ಈ ವಿಚಾರದಲ್ಲಿ ನಿಯಮಗಳನ್ನು ಸಡಿಲಿಸಿ ಬಡವರಿಗೆ ಬಿಪಿಎಲ್ ಕಾರ್ಡ್ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಗಂಗೊಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸೂಕ್ತ ಸ್ಥಳಾವಕಾಶ ಇಲ್ಲದಿರುವುದರಿಂದ ತ್ಯಾಜ್ಯ ವಿಲೇವಾರಿ ಸಾಧ್ಯವಾಗುತ್ತಿಲ್ಲ. ಕಳೆದ ಅನೇಕ ವರ್ಷಗಳಿಂದ ಈ ಸಮಸ್ಯೆ ಇದ್ದರೂ ಸರಕಾರವಾಗಲಿ, ಜಿಲ್ಲಾಡಳಿತವಾಗಲಿ ಯಾವುದೇ ಸ್ಥಳವನ್ನು ಗುರುತಿಸಿ ನೀಡಿಲ್ಲ ಅಲ್ಲದೆ ತ್ಯಾಜ್ಯ ವಿಲೇವಾರಿಗೆ ಗಂಭೀರ ಸಮಸ್ಯೆ ಇಲ್ಲದ ಗ್ರಾಮಗಳಿಗೆ ಸರಕಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಶೀ ಮಠದ ಶ್ರೀಮದ್ ಯಾದವೇಂದ್ರ ತೃತೀಯ ಸ್ವಾಮೀಜಿಯವರ ಪುಣ್ಯತಿಥಿಯ ದಿನದಂದು ಹೊನ್ನಾವರದ ವೃಂದಾವನದಲ್ಲಿ ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಿಂದ ಸುಮಾರು 25 ಯುವಕರಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ವಿಶೇಷ ಮದ್ಯಾಹ್ನ ಪೂಜೆ ನಡೆಯಿತು. ಈ ಸಮಯದಲ್ಲಿ ಊರ ಪರವೂರ ಸಮಾಜ ಭಾಂದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳೆದ ಐವತ್ತು ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕೆಲವಾರು ಏಳು-ಬೀಳುಗಳನ್ನು ಕಂಡು ಈಗ ಫಿನಿಕ್ಸ್‌ನಂತೆ ಮತ್ತೆ ಗರಿಗೆದರಿ ತನ್ನ ನೈಜತೆಯ ಮೂಲದಲ್ಲಿ ನಿಂತಿದೆ. ಮನುಷ್ಯರ ನಡೆವೆ ಸಂಬಂಧಗಳನ್ನು ಬೆಸೆಯುವ ಏಕೈಕ ಮಾಧ್ಯಮ ರಂಗಭೂಮಿ ಮಾತ್ರ ಎಂದು ಚಿಂತಕ, ವಿಮರ್ಶಕ, ರಂಗನಿರ್ದೇಶಕ ನಾ. ಶ್ರೀನಿವಾಸ್ ಮೈಸೂರು ಹೇಳಿದರು. ಸುರಭಿ ಬೈಂದೂರು, ರಂಗಸ್ಥಳ ಉಪ್ಪುಂದ ಜಂಟಿ ಆಶ್ರಯದಲ್ಲಿ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆದ ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಂಗಭೂಮಿ ಮನುಷ್ಯನಿಗೆ ಸಾಮಾನ್ಯ ತಿಳುವಳಿಕೆ, ತತ್ವ ಹಾಗೂ ಆಡಂಬರವಿಲ್ಲದ ಆತ್ಮವಿಶ್ವಾಸದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದ ವರ್ತನೆಗಳನ್ನು ಕಲಿಸುತ್ತದೆ. ಹಾಂಗಂತ ಇದು ಸೆಲೆಬ್ರಿಟಿಗಳನ್ನು ತಯಾರು ಮಾಡುವ ಕಾರ್ಖಾನೆಯಲ್ಲ. ಮನುಷ್ಯರನ್ನು ತಯಾರು ಮಾಡುವಂತ ಒಂದು ಶೈಕ್ಷಣಿಕ ಕ್ಷೇತ್ರ. ಜನಸಮುದಾಯದ ಮನಸಿನ ಆಳಕ್ಕೆ ಮುಟ್ಟುವಂತೆ ಸೂಕ್ತವಾದ ಸೌಂದರ್ಯ ಪ್ರಜ್ಞೆಯ ಅಭಿರುಚಿಯನ್ನು ಬೆಳೆಸುವ ಹಾಗೂ ಸಮಾಜಕ್ಕೆ ಧನಾತ್ಮಕ ಸಂದೇಶ ನೀಡುವ ಕೇಂದ್ರವಾಗಿದೆ. ಜಗತ್ತಿನಲ್ಲಿ ಎಲ್ಲೆಡೆಯೂ ರಂಗಭೂಮಿ ಇದೆ. ಅದರೆ ಕ್ರೌರ್ಯದ ರಂಗಭೂಮಿಕ್ಕಿಂತ ಆದರ್ಶಗಳನ್ನು ಪ್ರೇರಿಪಿಸುವಂತಹ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರ ವತಿಯಿಂದ ಧರ್ಮಸ್ಥಳದಲ್ಲಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಮೌಲ್ಯಾಧಾರಿತ ಜ್ಞಾನಬಂಧು ಪುಸ್ತಕದ ಶ್ಲೋಕ ಕಂಠ ಪಾಠ ಸ್ಪರ್ಧೆಯಲ್ಲಿ ಕೋಟೇಶ್ವರ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಸುಷ್ಮಾ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಹುಮಾನ ನೀಡಿ ಶುಭ ಹಾರೈಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಂಘ ಸಂಸ್ಥೆಗಳು ಸರಕಾರದ ಹಾಗೂ ಇನ್ನಿತರ ಸಾಮಾಜಿಕ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಜನರಿಗೆ ಬೇಕಾದ ಮಾಹಿತಿ ಮಾರ್ಗದರ್ಶನ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಬೇಕು. ವಿಶೇಷವಾಗಿ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ತಾಪಂ ಸದಸ್ಯ ನಾರಾಯಣ ಕೆ. ಗುಜ್ಜಾಡಿ ಹೇಳಿದರು. ಅವರು ಕೊಡಪಾಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗಿರಿಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಆದರ್ಶ ಆಸ್ಪತ್ರೆಯ ತಜ್ಞ ವೈದ್ಯರುಗಳಾದ ಡಾ.ಬಸವರಾಜ್, ಡಾ.ಪ್ರಸನ್ನ, ಕೊಡಪಾಡಿ ಸವ್ಯಸಾಚಿ ಯುವಕ ಮಂಡಲದ ಉಪಾಧ್ಯಕ್ಷ ವಸಂತ ಪೂಜಾರಿ, ತಾಯಿ ಮಾರಿಕಾಂಬ ಮಹಿಳಾ ಮಂಡಳಿಯ ಅಧ್ಯಕ್ಷೆ ವಿಜಯಾ ಬಿ.ಗಾಣಿಗ, ಹವ್ಯಾಸಿ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ನರಸಿಂಹ ಗಾಣಿಗ ಮೊದಲಾದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಮಾರ್ಚ್ ತಿಂಗಳ ಕಾರ್ಯಕ್ರಮದಲ್ಲಿ ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಹಂಗಾರಕಟ್ಟೆ ಕಲಾ ಕೇಂದ್ರದ ಕಾರ್ಯದರ್ಶಿಯಾದ ರಾಜಶೇಖರ್ ಹೆಬ್ಬಾರ್, ರಾಮದಾಸ್ ಆಚಾರ್ಯ, ಕೋಟೇಶ್ವರ ಅವರನ್ನು ಸನ್ಮಾಸಿದರು. ತಿಂಗಳ ಗೊಂಬೆ ಮನೆ ಅತಿಥಿಯಾಗಿ ಉದ್ಯಮಿ ಪ್ರಶಾಂತ್ ತೋಳಾರ್, ಕುಂದಾಪುರ ಉಪಸ್ಥಿತರಿದ್ದರು. ಅತಿಥಿಗಳಾಗಿ ವೈಕುಂಠ ಹೆಬ್ಬಾರ್, ವಾಮನ್ ಪೈ ಭಾಗವಹಿಸಿದ್ದರು. ಅನಂತರ ಹಂಗಾರಕಟ್ಟೆ ಕಲಾಕೇಂದ್ರದವರಿಂದ ಮೀನಾಕ್ಷಿ ಕಲ್ಯಾಣ ಯಕ್ಷಗಾನ ಬಯಲಾಟ ಪ್ರೇಕ್ಷಕರನ್ನು ರಂಜಿಸಿತು. ನಾಗೇಶ್ ಶ್ಯಾನುಭೋಗ್ ಕಾರ್ಯಕ್ರಮ ನಿರೂಪಿಸಿದ್ದರು. ಉದಯ ಭಂಡಾರ್‌ಕಾರ್ ಹಾಗೂ ಮಂಜುನಾಥ ಮೈಪಾಡಿ ಸಹಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬೆಂಗಳೂರಿನ ಪ್ರಸಿದ್ದ ವೈದ್ಯ ಡಾ.ಬಿ.ಗೋವರ್ಧನ್ ಹೆಗ್ಡೆ (70) ಭಾನುವಾರ ತಮ್ಮ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಕಾರ್ಕಳ ತಾಲ್ಲೂಕಿನ ಬೋಳಮಡಿಮಾರ ಗುತ್ತುವಿನ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪದವಿಯನ್ನು ಪಡೆದುಕೊಂಡ ಬಳಿಕ ೨೦ ವರ್ಷಗಳ ಕಾಲ ಅರಸಿಕೆರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಬಳಿಕ ಬೆಂಗಳೂರಿನ ಇಲ್ಯಾಸ್‌ನಲ್ಲಿ ಸೇವೆ ಸಲ್ಲಿಸಿದ್ದರು. ಹುಯ್ಯಾರು ಪಟೇಲ್ ಹಿರಿಯಣ್ಣ ಶೆಟ್ಟಿ ಹಾಗೂ ಕಾರ್ಕಳದ ಮಾಜಿ ಶಾಸಕ ಬೋಳ ರಘುರಾಮ ಶೆಟ್ಟಿಯವರ ಅಳಿಯನಾಗಿದ್ದ ಅವರು ವಿಧಾನಪರಿಷತ್ ಸದಸ್ಯ ಕೆ.ಪ್ರತಾಪ್‌ಚಂದ್ರ ಶೆಟ್ಟಿಯವರ ಭಾವನವರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರಿ ಶಾಲೆಯ ಕಟ್ಟಡವನ್ನು ಪರವಾನಿಗೆ ಇಲ್ಲದೇ ಖಾಸಗಿ ಕಾರ್ಯಕ್ರಮಗಳಿಗೆ ನೀಡುವುದಿಲ್ಲ ಎಂದಿದ್ದ ಶಾಲೆಯ ಮುಖ್ಯೋಪಧ್ಯಾಯ ಪದ್ಮನಾಭ ಅಡಿಗ ಅವರನ್ನು ಗುರಿಯಾಗಿಸಿಕೊಂಡು ವಾಣಿಶ್ರೀ ಹೆಬ್ಬಾರ್, ಅನುಪ್ ಕುಮಾರ್, ರಾಜೇಶ್ ಆಚಾರ್ಯ ಹಾಗೂ ಗಿರೀಶ್ ಎಂಬುವವರು ಗ್ರಾಪಂ ಸಾಮಾನ್ಯ ಸಭೆಯಲ್ಲಿಯೇ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಆ ಬಳಿಕ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಶಾಲೆ ಬೀಗ ಹಾಕುವುದಲ್ಲದೇ, ಹಲ್ಲೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿ ಕುಂದಾಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಶನಿವಾರ ನಡೆದ ಬೀಜಾಡಿ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಹಾಜರಾಗಿದ್ದ ಬೀಜಾಡಿ ಮೂಡುವಿನ ಸ.ಹಿ.ಪ್ರಾ ಶಾಲೆಯ ಮುಖ್ಯೋಪಧ್ಯಾಯರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿರುವುದನ್ನು ಖಂಡಿಸಿ ದೂರು ದಾಖಲಿಸಿದ್ದಾರೆ. ಘಟನೆಯ ಬಗ್ಗೆ ಮುಖ್ಯೋಪಧ್ಯಾಯ ಪದ್ಮನಾಭ ಅಡಿಗ ಪ್ರತಿಕ್ರಿಯಿಸಿ ಇಲಾಖೆಯ ನಿಯಮದಂತೆ ಡಿಸೆಂಬರ್ ಬಳಿಕ ಯಾವುದೇ ಖಾಸಗಿ ಕಾರ್ಯಕ್ರಮಗಳಿಗೆ ಶಾಲೆಯನ್ನು ಬಿಟ್ಟುಕೊಡುವಂತಿಲ್ಲ. ಕಳೆದ ಭಾರಿ ಬಿಟ್ಟುಕೊಟ್ಟಾಗಲೂ ಮಲಿನಗೊಂಡಿದ್ದ ಶಾಲೆಯ ಪರಿಸರವನ್ನು ಸಂಸ್ಥೆಯವರು ಮಾಡದಿದ್ದದ್ದರಿಂದ ಶಾಲಾ ಮಕ್ಕಳು ಸ್ವಚ್ಚಗೊಳಿಸಿದ್ದರು. ಹಾಗಾಗಿ ಈ…

Read More