Author: ನ್ಯೂಸ್ ಬ್ಯೂರೋ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಇವರ ಆಶ್ರಯದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ ಇತ್ತೀಚೆಗೆ ಎಲ್.ಜೆ.ಫೆರ್ನಾಂಡಿಸ್‌ರವರ ನಿವಾಸದಲ್ಲಿ ನಡೆಯಿತು. ಉದ್ಯಮಿ ಪ್ರಶಾಂತ್ ತೋಳಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೊಸ ವರ್ಷ ಆಚರಣೆಯ ಮಹತ್ವದ ಕುರಿತು ಮಾತನಾಡಿದರು. ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಅಧ್ಯಕ್ಷ ದಿನಕರ ಪಟೇಲ್ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಎಲ್.ಜೆ. ಫೆರ್ನಾಂಡಿಸ್, ಜೊತೆ ಕಾರ್ಯದರ್ಶಿ ಸಿ.ಹೆಚ್.ಗಣೇಶ್ ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪುರ: ಗಳಿಸಿದಷ್ಟು ಬೇಕು ಎಂಬ ದುರಾಸೆಯಿಂದ ಸಮಾಜದಲ್ಲಿ ಮಾನವೀಯತೆ ಮರೆತ ಭ್ರಷ್ಟರು ಹುಟ್ಟಿಕೊಳ್ಳುತ್ತಿದ್ದಾರೆ. ಭ್ರಷ್ಟರನ್ನು ಜನರು ಪೋಷಿಸುತ್ತಿದ್ದರೇ ಕಾರ್ಯಾಂಗ ಮತ್ತು ಶಾಸಕಾಂಗದ ಅದರ ಲಾಭ ಪಡೆಯುತ್ತಿದೆ. ಬದುಕಿನಲ್ಲಿ ತೃಪ್ತಿ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಭ್ರಷ್ಟಾಚಾರದಂತಹ ಪಿಡುಗನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆ ಹೇಳಿದರು. ಅವರು ಹಕ್ಲಾಡಿ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪೌಢಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಮಾತನಾಡಿದರು.  ನಮ್ಮಿಂದ ಚುನಾಯಿಸಲ್ಪಟ್ಟ ವ್ಯಕ್ತಿಗಳು ತಾವು ಜನಸೇವಕರು ಎಂಬುದನ್ನೇ ಮರೆತು ನಮ್ಮನ್ನು ಕೇಳಲು ನಿವ್ಯಾರ್ರಿ ಎಂದು ಪ್ರಶ್ನಿಸುತ್ತಾರೆ. ಓಟು ಕೇಳಲು ಮನೆ ಬಾಗಿಲಿಗೆ ಬರುವ ಮಂದಿ ಗೆದ್ದ ಬಳಿಕ ಜನರನ್ನೇ ಮರೆತು ಆರಾಮಾಗಿ ಬದುಕುತ್ತಿದ್ದಾರೆ. ತಿನ್ನಲು ಅನ್ನ ನೀಡುವ ರೈತ ಆತ್ಮಹತ್ಯೆ ಮಾಡಿಕೊಂಡಾಗ ಅವನ ಕುಟುಂಬವನ್ನು ಸಮಾಧಾನಪಡಿಸಲಿಲ್ಲ. ಅವರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಜನನಾಯಕರಿಗೆ ಅನ್ನಿಸಲೇ ಇಲ್ಲ. ಆದರೆ ಅದೇ ಸರಕಾರದ ದುಡ್ಡಿನಲ್ಲಿ ಕೋಟಿ ಕೋಟಿ ಖರ್ಚುಮಾಡಿ ಮನೆ ಕಟ್ಟಿಕೊಳ್ಳಲು, ವಿಧಾನಸೌಧದ ಕಟ್ಟಡದ…

Read More

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ತಮ್ಮ ಕಛೇರಿಯಲ್ಲಿ 62ನೇ ಗಣರಾಜ್ಯೋತ್ಸವ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯರಾಧ ಕೆ. ರಮೇಶ ಗಾಣಿಗ ಎಸ್. ರಾಜು ಪೂಜಾರಿ, ಯಡ್ತರೆ ಗ್ರಾಪಂ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಉಪಾಧ್ಯಕ್ಷೆ ಕಲಾವತಿ ನಾಗರಾಜ ಗಾಣಿಗಸ್ಜಿಪಂ ಮಾಜಿ ಸದಸ್ಯ ಮದನ್ ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ಗೋಕುಲ್ ಶೆಟ್ಟಿ, ಹಿರಿಯ ಮುಖಂಡ ವಾಸುದೇವ ಯಡಿಯಾಳ್, ಬ್ಲಾಕ್ ಕಾರ್ಯದರ್ಶಿ ನಾಗರಾಜ ಗಾಣಿಗ, ಯುಥ್ ಕಾಂಗ್ರೆಸ್ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಬೈಂದೂರು ಪಂಚಾಯತ್ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕೆ. ವಿ. ಸತೀಶ್, ಯಡ್ತರೆ, ಪಡುವರಿ, ಬೈಂದೂರು ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು,

Read More

ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದ ಬಳಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಶ್ರಯದಲ್ಲಿ ರೋಹಿತ್ ಸಾವಿಗೆ ಕಾರಣರಾದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ಬಂಡಾರು ದತ್ತಾತ್ರೇಯ ಅವರನ್ನು ಕೇಂದ್ರ ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚಿಂತಕ ಜಯನ್ ಮಲ್ಪೆ ಮಾತನಾಡಿ, ಹೈದರಾಬಾದ್ ವಿವಿ ಸಂಶೋಧನಾ ವಿದ್ಯಾರ್ಥಿ ರೋಹಿತ್ ಮೇಮುಲ ಆತ್ಮಹತ್ಯೆ ದೇಶದಲ್ಲಿ ದಲಿತರ ಸ್ಥಿತಿ ಯಾವಮಟ್ಟದಲ್ಲಿದೆ ಎನ್ನುವುದಕ್ಕೆ ಸಾಕ್ಷಿ. ಧಮನ ನೀತಿಯಿಂದ ದಲಿತರ ದ್ವನಿ ಅಡಗಿಸುವ ಕೆಲಸ ಆಗುತ್ತಿದೆ ಎಂದರು. ದೇಶದ ಎಲ್ಲಾ ವಿವಿಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕೇಂದ್ರ ಸಚಿವರ ವಿರುದ್ಧ ದೌರ್ಜನ್ಯ ಕಾಯಿದೆ ಅಡಿ ಪ್ರಕರಣ ದಾಖಲಿಸಬೇಕು. ಘಟನೆಗೆ ಕಾರಣರಾದ ವ್ಯಕ್ತಿಗಳ ಮೇಲೆ ಇದೂವರೆಗೆ ಕ್ರಮ ತೆಗೆದು ಕೊಳ್ಳದಿರುವುದು ನಾಚಿಕೆಗೇಡಿನ ಸಂಗತಿ ಎಂದರು. ಪತ್ರಕರ್ತರಾದ ಶಶಿಧರ ಹೆಮ್ಮಾಡಿ, ಜಾನ್ ಡಿಸೋಜಾ ಘಟನೆ ಖಂಡಿಸಿ ಮಾತನಾಡಿದರು. ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಾದ ವಾಸುದೇವ ಮದೂರು, ರಾಜ…

Read More

ಕುಂದಾಪುರ: ಶಾಂತಿ, ಸಹಬಾಳ್ವೆ, ಸಮಾನತೆ, ಐಖ್ಯತೆ ಮೂಲಕ ದೇಶದ ಅಭಿವೃದ್ಧಿ ಆಗಬೇಕಿದೆ. ಭಾರತ ಸಾಂಸ್ಕೃತಿ, ಸಂಸ್ಕಾರಯುತವಾಗಿದ್ದು, ಸೌಹಾರ್ದತೆ ತಳಹದಿಯಲ್ಲಿ ದೇಶದ ಅಭಿವೃದ್ಧಿ ರಥದ ಚಕ್ರ ಹೊರಳಬೇಕು ಎಂದು ಕುಂದಾಪುರ ಉಪ ವಿಭಾಗಾಧಿಕಾರಿ ಅಶ್ವಥಿ ಎಸ್. ಹೇಳಿದರು. ಕುಂದಾಪುರ ತಾಲೂಕ್ ಆಡಳಿತ ಆಶ್ರಯದಲ್ಲಿ ಗಾಂಧಿ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ದ್ವಜಾಹೋರಣ ನೆವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡುತ್ತಿದ್ದರು. ಭಾರತ ಪ್ರಪಂಚದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ದೇಶಕ್ಕೆ ಡಾ.ಅಂಬೇಡ್ಕರ್ ಕೊಟ್ಟ ಸಂವಿಧಾನ ವಿಶ್ವಮಾನ್ಯ. ಅಂಬೇಡ್ಕರ್ ಸಾರಿದ ಸಮಾನತೆ, ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ದೇಶ ಕಟ್ಟುವ ಕೆಲಸ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ ಭಾರತೀಯರ ಭಾವನಾತ್ಮಕವಾಗಿ ಒಂದಾಗಿರಲಿಲ್ಲ ಎಂದ ಅವರು, ಗಣರಾಜ್ಯೋತ್ಸವ ಭಾರತೀಯರನ್ನು ಭಾವನಾತ್ಮಕವಾಗಿ ಬೆಸೆದಿದೆ. ಸಮಾನತೆ, ಸೌಹಾರ್ದತೆ, ಸಹಬಾಳ್ವೆ ಮೂಲಕ ಐಖ್ಯತೆ ಸಾರಬೇಕು ಎಂದು ಹೇಳಿದರು. ಕುಂದಾಪುರ ಪುರಸಭೆ ಅಧ್ಯಕ್ಷೆ ಕಲಾವತಿ ಯು.ಎಸ್., ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಾಕೋಬ್ ಡಿಸೋಜಾ, ಪುರಸಭೆ ಸದಸ್ಯರಾದ ಗುಣರತ್ನಾ, ದೇವಕಿ ಸಣ್ಣಯ್ಯ, ಪುಷ್ಪಾ…

Read More

ಕುಂದಾಪುರ: ಇಲ್ಲಿಗೆ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಮುಳ್ಳಿಕಟ್ಟೆ ಜಂಕ್ಷನ್ ಬಳಿ ಖಾಸಗಿ ಬಸ್ ಹಾಗೂ ಓಮ್ನಿ ನಡುವೆ ನಡೆದ ಅಪಫಾತದಲ್ಲಿ ಓಮ್ನಿ ಪ್ರಯಾಣಿಕರೋರ್ವರು ಮೃತಪಟ್ಟು, ಉಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಇಂದು ಸಂಜೆ ವರದಿಯಾಗಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಘಟನೆ ವರದಿ: ತ್ರಾಸಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದು ಕುಂದಾಪುರ ಕಡೆಯಿಂದ ಮರವಂತೆ ಕಡೆಗೆ ಸಾಗುತ್ತಿದ್ದ ಓಮ್ನಿ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓಮ್ನಿಯಲ್ಲಿದ್ದ ಮರವಂತೆ ನಿವಾಸಿ ಮಮಿತ್ ಪೂಜಾರಿ (23) ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಓಮ್ನಿಯಲ್ಲಿದ್ದ ಮರವಂತೆ ನಿವಾಸಿಗಳಾದ ಗಣೇಶ ಮೊಗವೀರ, ಕೇಶವ ಮೊಗವೀರ, ದಿನೇಶ ಪೂಜಾರಿ ಹಾಗೂ ಮಹೇಶ್ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಒಮ್ನಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಗಂಗೊಳ್ಳಿ ಪಿಎಸ್‌ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಗಾಯಾಳುಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೆಂಗಳೂರು: ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸಿ ಕನ್ನಡಿಗರ ಫೇವರೀಟ್ ಕಾರ್ಯಕ್ರಮವೆಂದೆನಿಸಿಕೊಂಡಿರುವ ಮಜಾ ಟಾಕೀಸ್‌ನಲ್ಲಿ ಕುಂದಾಪುರದ ಮೂರು ಮುತ್ತು ಖ್ಯಾತಿಯ ರೂಪಕಲಾ ತಂಡ ಕಲಾವಿದರು ಭಾಗವಹಿಸಿದ್ದಾರೆ. ತಂಡದ ಸತೀಶ್ ಪೈ, ಸಂತೋಷ್ ಪೈ ಹಾಗೂ ಅಶೋಕ್ ಶಾನುಭೋಗ್ ಶೋನಲ್ಲಿ ಸೃಜನ್ ಜೊತೆ ತರಲೆ ಮಾಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಶನಿವಾರ ಹಾಗೂ ಭಾನುವಾರ ಪ್ರಸಾರವಾಗುತ್ತಿರುವ ಸೃಜನ್ ಲೋಕೇಶ್ ಸಾರಥ್ಯದ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಟಿವಿ ನೋಡುವ ಮಂದಿ ಮಿಸ್ ಮಾಡಿಕೊಳ್ಳುವುದಿಲ್ಲ. ಆರಂಭಗೊಂಡ ಮೊದಲ ಕಂತಿನಿಂದ ಇಲ್ಲಿಯ ತನಕ ಅತಿ ಹೆಚ್ಚು ಪ್ರೇಕ್ಷಕರನ್ನು ಹಿಡಿದಿಟ್ಟು ವಾಹಿನಿಯ ಟಿ.ಆರ್.ಪಿ ಹೆಚ್ಚಿಸಿದ್ದ ಹೆಗ್ಗಳಿಕೆ ಈ ಕಾರ್ಯಕ್ರಮಕ್ಕಿದೆ. ಅರಳು ಹುರಿದಂತೆ ಮಾತನಾಡುವ ಸೃಜನ್ ಲೋಕೇಶ್ ಹಾಗೂ ಅವರ ತಂಡದ ಕಾಮಿಡಿ ಪ್ರೇಕ್ಷಕನಿಗೆ ಇನ್ನಿಲ್ಲದ ಮನೋರಂಜನೆ ನೀಡುತ್ತಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಬಹಳಷ್ಟು ಸಿನೆಮಾ ನಟರು ಭಾಗವಹಿಸಿ ಇದು ತನಗೆ ಸಿಕ್ಕ ಸದಾವಕಾಶ ಎಂದು ಉದ್ಗರಿಸಿದನ್ನು ನೀವು ನೋಡಿರುತ್ತಿರಿ ಬಿಡಿ. ಈ ಪ್ರಸಿದ್ಧ ಶೋನಲ್ಲಿ…

Read More

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಜನವರಿ ತಿಂಗಳ ಕಾರ್ಯಕ್ರಮ ಜರುಗಿತು. ತಿಂಗಳ ಗೊಂಬೆ ಮನೆ ಅತಿಥಿಯಾಗಿ ಪತ್ರಕರ್ತ ಯು.ಎಸ್.ಶೆಣೈ ಭಾಗವಹಿಸಿದ್ದು, ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಕಾರ್ಯಕ್ರಮದ ಪ್ರಾಯೋಜಕ ಜನ್ನಿ ವಾಸುದೇವ ಮೇಲಾಡಿ ಪುತ್ರರಾದ ನಾರಾಯಣ ಮೇಲಾಡಿ ಅವರನ್ನು ಸನ್ಮಾಸಿದರು. ಯು. ವಾಮನ್ ಪೈ, ಅಶೋಕ್ ಮೇಲಾಡಿ ಹಾಗೂ ವಲ್ಲಭ ಸೂರಿ ಇದರು. ಕಾರ್ಯಕ್ರಮದ ಕೊನೆಯಲ್ಲಿ ಭವಾನಿ ವಲ್ಲಭ ಮತ್ತು ವಿದ್ಯಾ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಶ್ರೀ ಗೋಪಾಲಕೃಷ್ಣ ಬೊಂಬೆಯಾಟ ಸಂಘ ಕಾಸರಗೋಡು ಇವರಿಂದ ತೆಂಕುತಿಟ್ಟು ಯಕ್ಷಗಾನ ಗೊಂಬೆಯಾಟ ನರಕಾಸುರ ವಧೆ-ಗರುಡ ಗರ್ವಭಂಗ ಜರುಗಿತು.. ಉದಯ ಭಂಡಾರ್‌ಕಾರ್ ರು ಕಾರ್ಯಕ್ರಮ ನಿರೂಪಿಸಿದ್ದರು.

Read More

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ. ಸ್ನಾತಕೋತ್ತರ ಪದವಿ ವಿಭಾಗದ ನೇತೃತ್ವದಲ್ಲಿ ಮೂಡಲಕಟ್ಟೆ ತಾಂತ್ರಿಕ ಕಾಲೇಜ್ ಮೈದಾನದಲ್ಲಿ ನಡೆದ ಉಡುಪಿ ಹಾಗೂ ಮಂಗಳೂರು ಜಿಲ್ಲೆಯ ಪದವಿ ಕಾಲೇಜ್ ಮಟ್ಟದ ಪುರುಷ ಹಾಗೂ ಮಹಿಳಾ ವಿಭಾಗದ ವಾಲಿಬಾಲ್ ಪಂದ್ಯಾಟದ ನಡೆದಲ್ಲಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಆಳ್ವಾಸ್ ಮೂಡುಬಿದ್ರಿ ಮತ್ತು ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಂಗಳೂರು ಬೆಸೆಂಟ್ ಮಹಿಳಾ ಕಾಲೇಜ್ ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನ ಬಸ್ರೂರು ಶ್ರೀ ಶಾರದಾ ಕಾಲೇಜ್ ಮತ್ತು ಮಹಿಳಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಶಿರ್ವ ಎಂ.ಎಸ್.ಆರ್.ಎಸ್. ಶಿರ್ವ ಕಾಲೇಜ್ ತನ್ನದಾಗಿಸಿಕೊಂಡಿತು. ಸಮಾರೋಪದಲ್ಲಿ ಪ್ರೊ| ರಾಧಾಕೃಷ್ಣ ಶೆಟ್ಟಿ, ಕಾಲೇಜ್ ಅಧ್ಯಕ್ಷ ಸಿದ್ಧಾರ್ಥ ಶೆಟ್ಟಿ ಹಾಗೂ ಪ್ರಾಂಶುಪಾಲೆ ಡಾ|.ಶುಭಾ ಪಿ. ಭಟ್ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರು ಶ್ರೀ ರಮೇಶ್ ಎಂ. ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಉಡುಪಿ ಹಾಗೂ ಮಂಗಳೂರು ಜಿಲ್ಲೆಯ ೨೬ ಪದವಿ ಕಾಲೇಜ್ ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಎಂ.ಬಿ.ಎ. ಮುಖ್ಯಸ್ಥೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ ಘಟನೆ ರಾತ್ರಿ ವೇಳೆ ನಡೆದಿದೆ. ಗಂಗೊಳ್ಳಿಗೆ ಸಮೀಪದ ಕಂಚುಗೋಡು ನಿವಾಸಿ ರಿಕ್ಸನ್ ಡಯಾಸ್(17) ಮೃತ ಯುವಕ. ಘಟನೆಯ ವಿವರ: ಕಂಚಿಗೋಡು ನಿವಾಸಿ ವಾಲ್ಟರ್ ಡಯಾಸ್ ಹಾಗೂ ಜನಿಟಾ ಡಯಾಸ್ ದಂಪತಿಗಳ ಮಗನಾದ ರಿಕ್ಸನ್ ಡಯಾಸ್ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ತಯಾರಿಗಾಗಿ ರಜೆಯಿದ್ದುದರಿಂದ ಮನೆಯಲ್ಲಿಯೇ ಅಭ್ಯಸಿಸುತ್ತಿದ್ದ. ಆರೋಗ್ಯವಂತನಾಗಿದ್ದ ಯುವಕ ರಾತ್ರಿ ವೇಳೆಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಏಕಾಏಕಿ ನರಳಿ ಮೃತಪಡಲು ಕಾರಣ ಮಾತ್ರ ತಿಳಿದುಬಂದಿಲ್ಲ. ತಂದೆ ತಾಯಿ ಅಂಗಡಿಯ ಕೆಲಸಕ್ಕೆ ತೆರಳಿದ್ದರಿಂದ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ರಿಕ್ಸನ್ ಸೋಫಾದ ಮೇಲೆ ನರಳಾಡುತ್ತಿರುವುದನ್ನು ಗಮನಿಸಿ ಕೂಡಲೇ ಹೆಲ್ಪ್ ಲೈನ್ ಮೂಲಕ ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗಮಧ್ಯದಲ್ಲೇ ರಿಕ್ಸನ್ ಪ್ರಾಣಕಳೆದುಕೊಂಡಿದ್ದಾರೆ. ಆತ ನರಳಾಡುತ್ತಿರುವಾಗ ಬಾಯಿಂದ ನೊರೆ ಬರುತ್ತಿತ್ತು ಎನ್ನಲಾಗಿದೆ. (ಕುಂದಾಪ್ರ…

Read More