Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕಾಂಗ್ರೆಸ್ ಪಕ್ಷದ ಮುಂದಾಳು, ಗೋಳಿಹೊಳೆ ಗ್ರಾಪಂ ಮಾಜಿ ಅದ್ಯಕ್ಷ ಮಂಜಯ್ಯ ಪೂಜಾರಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ಜಿಪಂ ಬಿಜೆಪಿ ಅಭ್ಯರ್ಥಿ ಶಂಕರ ಪೂಜಾರಿ, ರಾಜ್ಯ ಬಿಜೆಪಿ ರೈತಮೋರ್ಚಾದ ಉಪಾಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಕಾಲ್ತೋಡು ತಾಪಂ ಅಭ್ಯರ್ಥಿ ಬಿ.ಎಸ್. ಸುರೇಶ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Read More

ಬೈಂದೂರು:  ಕರ್ನಾಟಕ ಫ್ರೌಡ ಶಿಕ್ಷಣಾ ಪರೀಕ್ಷಾ ಮಂಡಳಿ 2015-16ರ ಅವಧಿಗೆ ನಡೆಸಿದ ಹಿಂದುಸ್ಥಾನಿ ಸಂಗೀತದ ಜ್ಯೂನಿಯರ್ ವಿಭಾಗದಲ್ಲಿ ಉಪ್ಪುಂದದ ಅಕ್ಷತಾ ದೇವಾಡಿಗ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಬೈಂದೂರು ಪದವಿ ಪೂರ್ವ ಕಾಲೇಜಿನಲ್ಲಿ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಈಕೆ ಉಪ್ಪುಂದದ ವಿಜಯಾ ಓಂಗಣೇಶ್ ಕಾಮತ್ ಅವರ ಶಿಷ್ಯೆ. ಹಾಗೂ ಸ್ಯಾಕ್ಸೋಫೊನ್ ವಾದಕ ಮಂಜುನಾಥ ದೇವಾಡಿಗ ಹಾಗೂ ವಿನೋದ ದೇವಾಡಿಗರ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಕುಂದಾಪುರ: ಜಿಲ್ಲಾ ಪಂಚಾಯಿತ್ ಕ್ಷೇತ್ರವಾದ ವಂಡ್ಸೆ ಕುಂದಾಪುರ ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವೂ ಹೌದು. ಧಾರ್ಮಿಕ, ರಾಜಕೀಯ ಹಾಗೂ ತಾಲೂಕು ಹೋರಾಟ ಮುಂತಾದ ಕಾರಣದಿಂದಾಗಿ ಆಗಾಗ ಸುದ್ದಿ ಮಾಡುತ್ತಲೇ ಬಂದಿರುವ ಕ್ಷೇತ್ರವಿದು. ಮಾರಣಕಟ್ಟೆ ದೇವಸ್ಥಾನಕ್ಕೆ ತೆರಳುವ ಭಕ್ತರು ಚಕ್ರ ನದಿಯಲ್ಲಿ ಮಿಂದು ಬಟ್ಟೆ ಒಣಗಿಸಿ ಶುದ್ದ ಬಟ್ಟೆ ತೊಟ್ಟು ಹೋಗುತ್ತಿದ್ದ ಪ್ರದೇಶಕ್ಕೆ ಹಿಂದೆ ವಣಸೆ ಎಂಬ ಹೆಸರಿತ್ತು. ಕಾಲಕ್ರಮೇಣ ಆಡುಭಾಷೆಯಲ್ಲಿ ವಂಡ್ಸೆ ಎಂಬ ಹೆಸರು ಶಾಶ್ವತವಾಯಿತು ಎಂಬುದು ಊರಿನ ಹೆಸರಿನ ಹಿಂದಿನ ಕಥೆ. ಕಳೆದ ಭಾರಿಯ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಮಹಿಳೆಯರ ಪರ ಬಂದಿದ್ದ ಮೀಸಲಾತಿ, ಈ ಭಾರಿ ಸಾಮಾನ್ಯ ಮೀಸಲು ಬಂದಿದ್ದರಿಂದ ಕ್ಷೇತ್ರದಲ್ಲಿ ಪುರುಷ ಮತ್ತು ಮಹಿಳೆಯರಿಬ್ಬರಿಗೂ ಸ್ಪರ್ಧಿಸುವ ಸಮಾನ ಅವಕಾಶ ಮಾಡಿಕೊಟ್ಟಿದೆ. ಆದರೆ ಮೂರು ಪಕ್ಷಗಳಿಂದ ಪುರುಷ ಅಭ್ಯರ್ಥಿಗಳೇ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಹಾಲಿ ಜಿಪಂ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ ಕಣದಲ್ಲಿದ್ದರೇ, ಕಾಂಗ್ರೆಸ್ ಹಾಲಿ ತಾಪಂ ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ…

Read More

ಬೈಂದೂರು: ಜೆ.ಸಿ.ಐ ಶಿರೂರು ಹಾಗೂ ಸಾರ್ವಜನಿಕರ ಪ್ರಾಯೋಜಿಕತ್ವದ ಸಹಯೋಗದೊಂದಿಗೆ ಶಿರೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅದ್ದೂರಿಯ ಸಾಂಸ್ಕ್ರತಿಕ ವೈಭವ ಫೆಬ್ರವರಿ 6ರಂದು ಸಂಜೆ ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಸುಮಾರು 400ಕ್ಕೂ ಅದಿಕ ವಿದ್ಯಾರ್ಥಿಗಳಿಂದ ಅದ್ದೂರಿಯ ಸಾಂಸ್ಕ್ರತಿಕ ಸಂಜೆ ಕಾರ್ಯಕ್ರಮದ ಯೋಜನೆಯ ತಯಾರಿ ಭರದಿಂದ ನಡೆಯುತ್ತಿದೆ.ಸುಮಾರು 12 ಸಾವಿರಕ್ಕೂ ಅದಿಕ ಪ್ರೇಕ್ಷಕರು ಭಾಗವಹಿಸುವ ನಿರೀಕ್ಷೆಯಿದೆ.ಅಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮೋಹನ ಆಳ್ವಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ 3 ಗಂಟೆ 30 ನಿಮಿಷಗಳ ಕಾಲ ದೇಶ-ವಿದೇಶಗಳ ವಿವಿಧ ಪ್ರಕಾರದ ಶಾಸ್ತ್ರೀಯ, ಜಾನಪದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದಲ್ಲಿ ಕೇರಳದ ಮೋಹಿನಿಯಾಟ್ಯಂ, ಬಡಗುತಿಟ್ಟು ಯಕ್ಷ ಪ್ರಯೋಗ ರಾಸಲೀಲೆ, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಮಲ್ಲಕಂಬ ರೋಪ್ ಕಸರತ್ತು, ಭರತನಾಟ್ಯ,ನವದುರ್ಗೆಯರು,ಮಣಿಪುರಿ ಸ್ಟಿಕ್ ಡ್ಯಾನ್ಸ್, ದೋಲ್ ಚಲಂ ಜಾನಪದ ನೃತ್ಯ, ಗುಜರಾತಿನ ಗಾಂಡಿಯ-ಗಾರ್ಬ, ಆಂದ್ರದ ಜನಪದ ಬಂಜಾರ ನೃತ್ಯ, ಪಶ್ಚಿಮ ಬಂಗಾಳದ ಸಿಂಹ ನೃತ್ಯ, ತೆಂಕು ತಿಟ್ಟು ಯಕ್ಷಗಾನ ಕಥಕ್ ನವರಂಗ್, ಮಹಾರಾಷ್ಟ್ರದ…

Read More

ಬೈಂದೂರು: ಮಗಳು ನಾಪತ್ತೆಯಾಗಿದ್ದರಿಂದ ಮನನೊಂದು ಮನನೊಂದ ಆಕೆಯ ತಾಯಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಜೂರು ಗ್ರಾಮದ ಬವಳಾಡಿ ಎಂಬಲ್ಲಿ ನಡೆದಿದೆ. ಬವಳಾಡಿಯ ನಿವಾಸಿ ಪಾರ್ವತಿ (46) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಘಟನೆಯ ವಿವರ: ಬವಳಾಡಿಯ ಮೃತ ಪಾರ್ವತಿ ಅವರ ಮಗಳ ವಿದ್ಯಾಶ್ರಿ (22) ಕಳೆದ ಎರಡು ವರ್ಷದ ಹಿಂದೆ ಅಲ್ಬಾಡಿ ಗ್ರಾಮದ ಆರ್ಡಿಯ ಯುವಕನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಆಕೆ ಈ ವಿವಾಹಕ್ಕೆ ಮುನ್ನವೇ, ಮುರ್ಡೇಶ್ವರದ ನಾಡವರಕೇರಿ ನಿವಾಸಿ ರವಿ ಮಂಜು ಶೆಟ್ಟಿ (24) ಎಂಬುವವನು ಪರಸ್ಪರ ಪ್ರೀತಿಸುತ್ತಿದ್ದರು. ಜ.26ರಂದು ತನ್ನ ತವರು ಮನೆಯಿಂದ ಆರ್ಡಿಯಲ್ಲಿರುವ ಗಂಡನ ಮನೆಗೆ ಹೋಗಿಬರುತ್ತೇನೆ ಎಂದು ಹೊರಟ ಆಕೆ ಅಲ್ಲಿಗೂ ತೆರಳದೆ, ಮನೆಗೂ ಹಿಂತಿರುಗದೇ ನಾಪತ್ತೆಯಾಗಿದ್ದಳು. ಪತ್ನಿ ಕಾಣೆಯಾದ ಬಗ್ಗೆ ಆಕೆಯ ಪತಿ ಸಂತೋಷ ಶೆಟ್ಟಿ ಬೈಂದೂರು ಠಾಣೆಯಲ್ಲಿ ದೂರು ನೀಡಿದ್ದರು. (ಕುಂದಾಪ್ರ ಡಾಟ್ ಕಾಂ ಸುದ್ದಿ) ತನ್ನ ಮಗಳು ಅನ್ಯ ಯುವಕನೊಬ್ಬನೊಂದಿಗೆ ನಾಪತ್ತೆಯಾದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ಬಗ್ಗೆ ತಿಳಿದ ಆಕೆಯ ತಾಯಿ…

Read More

ಕುಂದಾಪ್ರ ಡಾಟ್ ಕಾಂ ಕುಂದಾಪುರ: ಪ್ರತಿಷ್ಠಿತ ಸಿದ್ಧಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಾಡಿ ತಾರಾನಾಥ ಶೆಟ್ಟಿ ಕಣದಲ್ಲಿದ್ದಾರೆ. ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡಿರುವ ತಾರನಾಥ ಶೆಟ್ಟಿ ಅವರು ನಾಲ್ಕು ದಶಕಗಳ ರಾಜಕಾರಣದಲ್ಲಿ ತೊಡಗಿಸಿಕೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ನಿರಂತರವಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ತಾರ, ತಾರಣ್ಣ ಎಂದೇ ಸಿದ್ಧಾಪುರ ಭಾಗದಲ್ಲಿ ಚಿರಪರಿಚಿತರಾಗಿದ್ದಾರೆ. ಪಂಚಾಯತ್‌ರಾಜ ವ್ಯವಸ್ಥೆಯ ಬಗ್ಗೆ ಸಾಕಷ್ಟು ಅನುಭವವಿರುವ ಹಾಲಾಡಿ ತಾರಾನಾಥ  ಶೆಟ್ಟಿ ಅವರು ಹಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಒಂದು ಅವಧಿಗೆ ಸಿದ್ಧಾಪುರ ಜಿಪಂ ಸದಸ್ಯರಾಗಿ, ಹಾಲಾಡಿ ಮರ್ಲಚಿಕ್ಕು ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ, ಹಾಲಾಡಿ ಯಕ್ಷಗಾನ ಮೇಳದ ಸಂಚಾಲಕಾಗಿ ಎಲ್ಲಾ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡವರು. ಬಿದ್ಕಲ್‌ಕಟ್ಟೆ ಮಂಡಲ ಪಂಚಾಯತ್ ಸದಸ್ಯರಾಗಿ, ಕೆಎಂಎಫ್ ಮಣಿಪಾಲದ ನಿರ್ದೇಶಕರಾಗಿ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ವಿಧಾರ್ಥಿ ಸಂಘದ ಉಪಾಧ್ಯಕ್ಷರಾಗಿ, ಹಾಲಾಡಿ ಯುವಕ ಮಂಡಲದ ಅಧ್ಯಕ್ಷರಾಗಿ, ಹೊಸಂಗಡಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಎಲ್ಲಾ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡವರು.

Read More

ಕುಂದಾಪುರ: ದೇವಾಡಿಗ ಸಮಾಜ ಸೇವಾ ಸಂಘ (ರಿ.) ಕುಂದಾಪುರ ಇದರ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ, ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಕುಂದಾಪುರದ ಗುರು ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜರಗಿತು ಸಮಾರಂಭವನ್ನು ಮುಂಬೈಯ ಖ್ಯಾತ ಉದ್ಯಮಿ ನಾಗರಾಜ್.ಡಿ.ಪಡುಕೋಣೆ ಉದ್ಘಾಟಿಸಿ ಶುಭ ಹಾರೈಸಿದರು ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಾರಾಯಣ.ಕೆ.ದೇವಾಡಿಗ ವಹಿಸಿದ್ದರು. ವಿದ್ಯಾರ್ಥಿ ವೇತನವನ್ನು ಮುಂಬೈ ಉದ್ಯಮಿ ಸುರೇಶ.ಡಿ.ಪಡುಕೋಣೆ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅರಣ್ಯ ಇಲಾಖಾ ನೌಕರರ ಮಹಾಮಂಡಲ ಬೆಂಗಳೂರು ಇದರ ಅಧ್ಯಕ್ಷರಾದ ಆಲೂರು ರಘುರಾಮ ದೇವಾಡಿಗ,ಶ್ರೀ ಏಕನಾಥೇಶ್ವರೀ ದೇವಾಸ್ಥಾನ ಟ್ರಸ್ಟ್ ಇದರ ಪ್ರಧಾನ ಕಾರ್ಯದರ್ಶಿ ಬಿ,ನರಸಿಂಹ ದೇವಾಡಿಗ ,ಬೆಂಗಳೂರಿನ ಉದ್ಯಮಿ ಮಂಜುನಾಥ ದೇವಾಡಿಗ,ದೇವಾಡಿಗರ ವೆಲ್ ಫೇರ್ ಅಸೋಸಿಯೇಶನ ಮುಂಬೈ ಇದರ ಅಧ್ಯಕ್ಷರಾದ ಸುಬ್ಬ ದೇವಾಡಿಗ,ಉಡುಪಿ ಜಿಲ್ಲಾ ಪಂಚಾಯತ್ ಇದರ ಮಾಜಿ ಉಪಾಧ್ಯಕ್ಷರಾದ ರಾಜು ದೇವಾಡಿಗ ತ್ರಾಸಿ,ಆಳ್ವಾಸ್ ಶಿಕ್ಷಣ ಸಂಸ್ಧೆ ಮೂಡುಬಿದಿರೆ ಇದರ ಪಾಂಶುಪಾಲರಾದ ವಂಸತ ಕುಮಾರ್ ನಿಟ್ಟೆ, ದೇವಾಡಿಗ ಸಂಘ ಮುಂಬೈ ಇದರ ಉಪಾಧ್ಯಕ್ಷರಾದ ರವಿ…

Read More

ಕುಂದಾಪುರ: ಕುಬುಡೋ ಬುಡೋಕಾನ್ ಕರಾಟೆ ಡೋ.ಕರ್ನಾಟಕ ಇವರು ಅಜ್ಜರಕಾಡಿನ ಮಹಾತ್ಮಗಾಂಧಿ ಕ್ರೀಡಾಂಗಣ ಏರ್ಪಡಿಸಿದ 3ನೇ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ 2016 ಬ್ಲಾಕ್ ಬೆಲ್ಟ್ ವಿಭಾಗಲ್ಲಿ ಕು.ದಿವ್ಯಾ.ಎಚ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಕುಮಿಟೆ ವಿಭಾಗದಲ್ಲಿ ದ್ವೀತಿಯ ಸ್ಥಾನ ಹಾಗೂ ವೆಪನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.  ಕೋಟ ಆರಕ್ಷಕ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಶೋಕ.ಎಚ್.ಎಸ್ ಹಾಗೂ ಸುಗುಣಾ ದಂಪತಿಯ ಪುತ್ರಿಯಾಗಿರುತ್ತಾರೆ.ಕಿರಣ್ ಕುಂದಾಪುರ ಅವರಲ್ಲಿ ತರಬೇತಿ ಪಡೆದಿರುತ್ತಾರೆ.

Read More

ಕುಂದಾಪುರ: ತಾಲೂಕು ವಾದ್ಯ ಕಲಾವಿದರ ಸಂಘ (ರಿ.) ಕೋಟೇಶ್ವರ ಇವರ 3ನೇ ವರ್ಷದ ತ್ಯಾಗರಾಜರ ಆರಾಧನಾ ಕಾರ್ಯಕ್ರಮ ಪ್ರತ್ಯೇಕ ವಾದ್ಯ ಸಂಗೀತ ಸೇವೆ ನೀಡುವುದರ ಮೂಲಕವೇ ಜರಗಿತು. ಪಂಚಗಂಗಾವಳಿಯ ರೈತ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಇದರ ಅಧ್ಯಕ್ಷ ರಾಜು ದೇವಾಡಿಗ ತ್ರಾಸಿ ಉದ್ಘಾಟಿಸಿದರು. ಸಭಾ ಕಾರ್ಯಕ್ರದ ಅಧ್ಯಕ್ಷತೆಯನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಧಾನದ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಧಾನದ ಆಡಳಿತ ಮೋಕ್ತೆಸರ ಪ್ರಭಾಕರ ಶೆಟ್ಟೆ, ಸಪ್ತಸ್ವರ ವಿವಿದೋದ್ಧೇಶ ಸಹಕಾರಿ ಸಂಘ ತಲ್ಲೂರು ಇದರ ಅಧ್ಯಕ್ಷ ಎಂ.ಸಂಜೀವ ದೇವಾಡಿಗ ತಲ್ಲೂರು, ಸಂಗೀತ ಭಾರತಿ ಟ್ರಸ್ಟ್ ಕುಂದಾಪುರದ ಕಾರ್ಯದರ್ಶಿ ನಾರಾಯಣ ದೇವಾಡಿಗ, ಗಂಗಾ ಪ್ರೋಡೆಕ್ಟ್ ಉದ್ಯಮಿಯಾದ ಚಂದ್ರ ಶೇಖರ ದೇವಾಡಿಗ, ಸುಪ್ರೀಮ್ ಮೋಟಾರ್ಸ್ ಕುಂದಾಪುರದ ರಮೇಶ ದೇವಾಡಿಗ ಕೋಟೇಶ್ವರ ಮತ್ತು ಸಂಘದ ಅಧ್ಯಕ್ಷ ಭಾಸ್ಕರ ದೇವಾಡಿಗ ಕೋಟೇಶ್ವರ ಮೊದಲಾದವರು ಉಪಸ್ಧಿತರಿದ್ದರು. ಸಂಘದ ಕಾರ್ಯದರ್ಶಿ ರಾಜೇಶ ದೇವಾಡಿಗ ತ್ರಾಸಿ ಲೆಕ್ಕ ಪತ್ರ ಮಂಡಿನೆ ಮಾಡಿದರು. ಸಭೆಯಲ್ಲಿ ವಿವಿದ…

Read More

ಗಂಗೊಳ್ಳಿ: ಸಂಘ ಸಂಸ್ಥೆಗಳು ನಿರಂತರವಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ತನ್ನಿಂದಾಗುವ ಸಹಾಯ ಸಹಕಾರವನ್ನು ನೀಡಬೇಕು. ಸಂಘ ಸಂಸ್ಥೆಗಳ ಸದಸ್ಯರಲ್ಲಿ ಒಗ್ಗಟ್ಟು ಅತೀ ಮುಖ್ಯವಾಗಿದ್ದು ಎಲ್ಲರೂ ಒಂದಾಗಿ ಒಂದೇ ಮನಸ್ಸಿನಿಂದ ತಮ್ಮ ಚಟುವಟಿಕೆಗಳನ್ನು ನಡೆಸಬೇಕು. ಗ್ರಾಮದ ಹಾಗೂ ಪರಿಸರದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಕಳೆದ ೨೨ ವರ್ಷಗಳಿಂದ ನಿರಂತರವಾಗಿ ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ, ಧಾರ್ಮಿಕ ಕ್ಷೇತ್ರದಲ್ಲಿಯೂ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಗಂಗೊಳ್ಳಿಯ ಪಂಚಗಂಗಾವಳಿ ಬಳಗದ ಸಾಧನೆ ಶ್ಲಾಘನೀಯ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಪಂಜುರ್ಲಿ ದೇವಸ್ಥಾನದ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಪಂಚಗಂಗಾವಳಿ ಬಳಗದ ೨೨ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಕಲಾ ಕ್ಷೇತ್ರದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್, ಶಿರೂರಿನ ಉದ್ಯಮಿ ಗೋಪಾಲಕೃಷ್ಣ, ಗಂಗೊಳ್ಳಿ ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರದೀಪ ಡಿ.ಕೆ. ಶುಭ ಹಾರೈಸಿದರು.…

Read More