Author: ನ್ಯೂಸ್ ಬ್ಯೂರೋ

ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಫೆ.09ರಿಂದ ಫೆ.13ರ ವರೆಗೆ ನಡೆಯುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಮತ್ತು ಚತುಃ ಪವಿತ್ರ ನಾಗಮಂಡಲೊತ್ಸವದ ಪೂರ್ವಭಾವಿಯಾಗಿ ಶುಕ್ರವಾರ ದೇವಳದ ಪ್ರಧಾನ ಅರ್ಚಕ ಬಿ. ಕೃಷ್ಣಮೂರ್ತಿ ನಾವಡರ ನೆತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಉಗ್ರಾಣ ಮುಹೂರ್ತ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಹಾಗೂ ಸದಸ್ಯರು, ಮಾಚ ಪೂಜಾರಿ ಬೆಳ್ಗಲ್‌ಕಟ್ಟೆ, ನಾಗೇಂದ್ರ ಪೂಜಾರಿ ಕರಾವಳಿ ಶಿರೂರು, ತಿಮ್ಮಪ್ಪ ಪೂಜಾರಿ ಕಾಡಿಗುಂಡಿ ಬೈಂದೂರು, ರಾಮ ಮಡಿವಾಳ, ಸ್ತ್ರೀಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಫೆ.09ರಿಂದ ಈ ಕ್ಷೇತ್ರಕ್ಕೆ ಹೊರೆ ಕಾಣಿಕೆ ಕೊಡುವವರು ಕೊಡಬಹುದು ಎಂದು ದೇವಳದ ಸಮಿತಿ ತಿಳಿಸಿದೆ.

Read More

ಗಂಗೊಳ್ಳಿ: ಗಡಿಯ ತುದಿಯಲ್ಲಿ ನಿಂತು ದೇಶವನ್ನು ಹೊರಗಿನ ಶತ್ರುಗಳಿಂದ ರಕ್ಷಿಸುವ ಸೈನಿಕರಂತೆಯೇ ದೇಶದ ಆಂತರಿಕ ಸಂಘರ್ಷಗಳಲ್ಲಿ ನಮ್ಮೊಂದಿಗೆ ನಿಲ್ಲುವ ಸೈನಿಕನೇ ’ಪೊಲೀಸ್;. ಅವರ ಕರ್ತವ್ಯಕ್ಕೆ ಸಮಯದ ಪರಿಧಿ ಇಲ್ಲ. ಅವರು ಹಕ್ಕೊತ್ತಾಯಕ್ಕೆ ಹೋರಾಟ ಮಾಡುವಂತಿಲ್ಲ. ಜಾತಿ ಮತಗಳ ಸಂಘರ್ಷವಾಗಲಿ, ರಾಜ್ಯಗಳ ನಡುವಿನ ಗಡಿ ಕದನವಾಗಲಿ ಅವರು ತಕ್ಷಣ ಹಾಜರು. ಉದ್ರಿಕ್ತರು ಬೀಸುವ ಕಲ್ಲುಗಳಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವುದರ ಜೊತೆಗೆ ತನ್ನನ್ನು ನಂಬಿದವರನ್ನು ಕಾಪಾಡುವುದು ಅವರ ಹೊಣೆ. ಇಂತಹ ಅನೇಕ ಕಠಿಣ ಸನ್ನಿವೇಶಗಳಲ್ಲಿ ಸದಾ ಜನರೊಂದಿಗೆ ಇದ್ದು ಜನರನ್ನು ರಕ್ಷಿಸುವ ಕಾನೂನನ್ನು ಕಾಪಾಡುವ ಮಹತ್ತರವಾದ ಜವಾಬ್ದಾರಿ ಪೊಲೀಸರ ಮೇಲಿದೆ. ನಮ್ಮೂರಿನ ಪೊಲೀಸ್ ನಮ್ಮ ಸೈನಿಕರಿದ್ದಂತೆ. ಪೊಲೀಸರ ಮೇಲಿನ ಗೌರವಕ್ಕೆ ತಲೆಬಾಗಿ ನಮ್ಮೂರಿನ ಸೈನಿಕರಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಹುತಾತ್ಮರ ದಿನಾಚರಣೆ ಅಂಗವಾಗಿ ಗಂಗೊಳ್ಳಿಯ ಕ್ರಾಂತಿವೀರರ ಅಭಿಮಾನಿ ಬಳಗದ ಸದಸ್ಯರು ಇತ್ತೀಚಿಗೆ ನಮ್ಮೊಳಗಿನ ಸೈನಿಕರು ಎಂಬ ವಿಶಿಷ್ಟ ಕಾರ್ಯಕ್ರಮದ ಮೂಲಕ ಗಂಗೊಳ್ಳಿ, ಬೈಂದೂರು ಹಾಗೂ ಕೊಲ್ಲೂರು ಪೊಲೀಸ್ ಠಾಣೆಗಳಿಗೆ ತೆರಳಿ ಆಯಾ ಠಾಣೆಯ ಎಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಓವರ್ಟೆಕ್ ಮಾಡುತ್ತಿದ್ದ ಬೈಕ್ ಸವಾರ ಆಯತಪ್ಪಿ ರಸ್ತೆಗೆ ಬಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಹರಿದು ಮೃತಪಟ್ಟ ಧಾರುಣ ಘಟನೆ ವರದಿಯಾಗಿದೆ. ಮೃತರನ್ನು ಕೋಡಿ ಸಮೀಪದ ಅರಳುಗುಡ್ಡೆ ನಿವಾಸಿ ಉತ್ಮೇಶ್ ಪೂಜಾರಿ (36) ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಹಕ್ಲಾಡಿ ಸಮೀಪದ ಹೊಳ್ಮಗೆ ತೆರಳುತ್ತಿದ್ದ ಸಂದರ್ಭ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಬೈಕೊಂದನ್ನು ಓವರ್ಟೆಕ್ ಮಾಡುತ್ತಿದ್ದ ಸಂದರ್ಭ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಮೀನು ಲಾರಿಯೊಂದು ಉತ್ಮೇಶ್ ಅವರ ತಲೆಯ ಮೇಲೆ ಹರಿದಿದೆ. ಹೆಲ್ಮೆಟ್ ಧರಿಸಿದ್ದರೂ ಲಾರಿ ಹರಿದ ರಭಸಕ್ಕೆ ಹೆಲ್ಮೆಟ್ ಛದ್ರಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಉತ್ಮೇಶ್ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ ಕುಂದಾಪುರ: ಅಸ್ಸಾಂನ ಗುವಾಹಟಿಯಲ್ಲಿ ಜರುಗುತ್ತಿರುವ 12ನೇ ಸೌತ್ ಏಷ್ಯನ್ ಗೇಮ್ಸ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಕುಂದಾಪುರ ತಾಲೂಕಿನ ಚಿತ್ತೂರು/ವಂಡ್ಸೆಯ ಯುವಕ ಗುರುರಾಜ್, 56ಕೆ.ಜಿ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ನಾಡಿಗೆ ಕೀರ್ತಿ ತಂದಿದ್ದಾನೆ. ಬಡತನದ ನಡುವೆಯೂ ಶ್ರದ್ಧೆ ಹಾಗೂ ಸತತ ಪರಿಶ್ರಮದಿಂದ ಏನನ್ನೂ ಸಾಧಿಸಬಹುದು ಎಂಬುದನ್ನು  ಡ್ರೈವರ್ ಮಗ ತೋರಿಸಿಕೊಟ್ಟಿದ್ದಾನೆ!  ಬಾಲ್ಯದಿಂದಲೇ ಕ್ರೀಡೆಯಲ್ಲಿ ಅದಮ್ಯ ಆಸಕ್ತಿ. ಬಿಡದೇ ಸಾಧಿಸುವ ಛಲ. ಬಡತನದ ನಡುವೆಯೂ ಮಗನ ಆಸಕ್ತಿಗೆ ನೀರೆರೆದು ಪೋಷಿಸಿದ ಪೋಷಕರು, ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಗುರುಗಳು. ಇವೆಲ್ಲದರ ಸಮ್ಮೀಳಿತದ ಫಲವೇ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಗುರುರಾಜ್ ಎಂಬ ಕುಂದಾಪುರದ ಯುವಕನ ರಾಷ್ಟ್ರ ಮಟ್ಟದ ಸಾಧನೆ. (ಕುಂದಾಪ್ರ ಡಾಟ್ ಕಾಂ ವರದಿ) ಚಿತ್ತೂರು ಗ್ರಾಮದ ಜಡ್ಡು ಮಹಾಬಲ ಪೂಜಾರಿ ಹಾಗು ಪದ್ದು ದಂಪತಿಗಳ ಆರು ಮಕ್ಕಳಲ್ಲಿ ಐದನೇಯವರಾದ ಗುರುರಾಜಗೆ ಓದಿನಷ್ಟೇ ಕ್ರೀಡೆಯಲ್ಲಿಯೂ ಆಸಕ್ತಿ. ತಂದೆ ತಾಯಿಯೂ ಅಷ್ಟೇ. ಮಗನ ಮನದ ಇಂಗಿತ ಅರಿತು ಅವರ ಸಾಧನೆಗೆ ಶಕ್ತಿ ಮೀರಿ ನೆರವಾಗುತ್ತಿದ್ದರು. ಕೊಲ್ಲೂರು…

Read More

ಬೈಂದೂರು: ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಬೈಂದೂರು ಹಾಗೂ ಜೆಸಿಐ ಶಿರೂರು ಸಹಯೋಗದೊಂದಿಗೆ ಶಿರೂರು ಕಾಲೇಜು ಮೈದಾನದಲ್ಲಿ  ಜರುಗಿದ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಮೈದಾನದ ತುಂಬಾ ಕಿಕ್ಕಿರಿದು ತುಂಬಿದ್ದ ಜನ ಸಾಕ್ಷಿಯಾದರು. ಸಾಂಸ್ಕೃತಿಕ ವೈಭವದ ಫೋಟೋ ಆಲ್ಬಂ ಇಲ್ಲಿದೆ.

Read More

ಬೆಸುಗೆ.. ಬೆಸುಗೆ.. ಜೀವನವೆಲ್ಲ ಸುಂದರ.. ಬೆಸುಗೆ.., ನಾ ನಿನ್ನ ಮರೆಯಲಾರೆ, ಪ್ರಿಯತಮಾ ಕರುಣೆಯ ತೋರೆಯ.., ತೆರೆದಿದೆ ಮನೆ ಓ ಬಾ ಅತಿಥಿ.. ಎನೇನೋ ಆಸೆ ನೀ ತಂದ ಭಾಷೆ.. ಮೊದಲಾದ ಚಲನಚಿತ್ರ ಗೀತೆಗಳನ್ನು ಹಾಡಿ ಕನ್ನಡ ಪ್ರೇಕ್ಷಕರ ಮನದಲ್ಲಿ ಪಡಿಯಚ್ಚು ಮೂಡಿಸಿ ಸಂಗೀತ ಗಾಯನ ಲೋಕದಲ್ಲಿ ಅಗ್ರಮಾನ್ಯ ಸ್ಥಾನವನ್ನು ಅಲಂಕರಿಸಿರುವ ದಕ್ಷಿಣ ಭಾರತದ ಹೆಸರಾಂತ ಚಲನಚಿತ್ರ ಹಿನ್ನಲೆ ಗಾಯಕಿ ವಾಣಿಜಯರಾಂ ಫೆ. ೨೧ರಂದು ಕುಂದಾಪುರಕ್ಕೆ ಆಗಮಿಸಲಿದ್ದಾರೆ. ಕೋಟದ ಮನಸ್ಮಿತ ಫೌಂಡೇಶನ್‌ನ ಆಶ್ರಯದಲ್ಲಿ ಸಹನಾ ಗ್ರೂಫ್ ಕೋಟೇಶ್ವರ ಇವರ ಸಹಭಾಗಿತ್ವದಲ್ಲಿ ಕುಂದಾಪುರ ಸಮೀಪದ ಕೋಟೇಶ್ವರದ ಸಹನಾ ಎಸ್ಟೇಟ್‌ನಲ್ಲಿ ಗಾಯಕ ಡಾ. ಸತೀಶ ಪೂಜಾರಿಯವರ ಪರಿಕಲ್ಪನೆ ಹಾಗೂ ನೇತೃತ್ವದಲ್ಲಿ ಕರ್ನಾಟಕದ ಹೆಸರಾಂತ ಗಾಯಕರ ಸಮ್ಮಿಲನದಲ್ಲಿ ಸಂಗೀತ ರಸಸಂಜೆ ’ವಾಣಿಯ ಸ್ವರ ಝೇಂಕಾರ’ ಕಾರ್ಯಕ್ರಮವು ಮಾನಸಿಕ ಅಸ್ವಸ್ಥರ ಸಹಾಯಾರ್ಥವಾಗಿ ಫೆ. 21ರಂದು ಸಂಜೆ 6:30ರಿಂದ ಜರುಗಲಿದೆ. ಈ ರಸಸಂಜೆಯ ’ವಾಣಿಯ ಸ್ವರ ಝೇಂಕಾರ’ದಲ್ಲಿ ಖ್ಯಾತ ಚಲನಚಿತ್ರ ಹಿನ್ನಲೆ ಗಾಯಕಿ ವಾಣಿಜಯರಾಂ ಅವರು ಭಾಗವಹಿಸಿ ತಮ್ಮ ಗಾನ…

Read More

ಕುಂದಾಪುರ: ಮೂಲ್ಕಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕಾಗಿ ನಿರ್ಮಿಸಿದ ನೂತನ ರಜತ ರಥವನ್ನು ಕೋಟೇಶ್ವರದಿಂದ ಭವ್ಯ ಮೆರವಣಿಗೆಯೊಂದಿಗೆ ಕೊಂಡೊಯ್ಯಲಾಯಿತು. ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಪರವಾಗಿ ಆಡಳಿತ ಮೋಕ್ತೇಸರರಾದ ಶ್ರೀಧರ ಕಾಮತ್ ಮೂಲ್ಕಿಯ ಸಮಾಜ ಭಾಂಧವರನ್ನು ಸ್ವಾಗತಿಸಿಕೊಂಡರು. ದೇವಸ್ಥಾನದ ವತಿಯಿಂದ ದೇವರ ಪ್ರಾರ್ಥನೆ, ರಥಕ್ಕೆ ಆರತಿ ನಡೆಯಿತು. ಜೊತೆ ಮೋಕ್ತೇಸರರಾದ ಶಾಂತಾರಾಮ ಪೈ ಮತ್ತು ವಿಠ್ಠಲದಾಸ ಭಟ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಜತ ರಥವು ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಅವರ ಶ್ರೀ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯಲ್ಲಿ ನಿರ್ಮಾಣಗೊಂಡಿದ್ದು, ಫೆ.10ರಂದು ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರು ಶ್ರೀ ದೇವರಿಗೆ ಸಮರ್ಪಣೆಗೊಳಿಸಲಿದ್ದಾರೆ.

Read More

ಕುಂದಾಪುರ: ಪ್ರತಿಯೊಂದು ವೃತ್ತಿಗೆ ಅದರದ ಆದ ಗೌರವವಿರುತ್ತದೆ. ತಮ್ಮ ವೃತ್ತಿಯಲ್ಲಿ ಶಿಸ್ತು, ಗುಣಮಟ್ಟದ ಸೇವೆ, ಸೇವಾವಧಿಯನ್ನು ಗುರುತಿಸಿ ಅಂತಹ ವೃತ್ತಿ ಸಾಧಕರನ್ನು ಗುರುತಿಸಿ ಗೌರವಿಸಿದಾಗ ಅವರಲ್ಲಿ ಸಾರ್ಥಕ ಭಾವ ಮನೆ ಮಾಡುತ್ತದೆ. ವೃತ್ತಿಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಕೊಳ್ಳಲು ಅವರಿಗೆ ಪ್ರೇರಣೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಹಾಗಾಗಿ ರೋಟರಿಯಲ್ಲಿ ವೃತ್ತಿಪರ ಸೇವೆಗೆ ಆದ್ಯತೆಯನ್ನು ನೀಡಲಾಗಿದೆ ಎಂದು ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ಗಣೇಶ ಶೆಟ್ಟಿ ಮೊಳಹಳ್ಳಿ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಆಶ್ರಯದಲ್ಲಿ ರೋಟರಿಯಲ್ಲಿ ವೃತ್ತಿ ಸೇವೆ ಕುರಿತು ಮಾಹಿತಿ ನೀಡುತ್ತಾ ಮಾತನಾಡಿದರು. ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಅಧ್ಯಕ್ಷ ಕೆ. ದಿನಕರ ಪಟೇಲ್, ಕಾರ್ಯದರ್ಶಿ ಸಿ. ಎಚ್. ಗಣೇಶ್ ಉಪಸ್ಥಿತರಿದ್ದರು.

Read More

ಬೈಂದೂರು: ನಮ್ಮ ಕಾಲೇಜಿನ 20 ಅತಿಥಿ ಉಪನ್ಯಾಸಕರು ವಿವಿಧ ಕಾರಣಗಳಿಂದ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಖಾಯಂ ಉಪನ್ಯಾಸಕರು ಇರುವುದು ಕೇವಲ ಮೂರು ಜನ ಮಾತ್ರ. ಅಂತಿಮ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಇದಕ್ಕೆ ತಯಾರಿ ನಡೆಸಬೇಕಾಗಿದೆ. ಆದರೆ ಯಾವ ಪಾಠವೂ ಸರಿಯಾಗಿ ಬೋಧಿಸಲಿಲ್ಲ. ಮಾಡಬೇಕಾಗಿರುವ ಪಾಠಗಳು ಬಹಳ ಬಾಕಿಯಿದೆ. ಪರಿಸ್ಥಿತಿ ಹೀಗಾದರೆ ನಮ್ಮ ಮುಂದಿನ ಭವಿಷ್ಯವೇನು? -ಇದು ಬೈಂದೂರು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಒಕ್ಕೊರಲಿನ ಕೂಗು. ಸುಮಾರು 900 ವಿದ್ಯಾರ್ಥಿಗಳಿರುವ ಬೈಂದೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಒಂದು ತಿಂಗಳಿಂದ 20 ಜನ ಅತಿಥಿ ಉಪನ್ಯಾಸಕರು ಪಾಠ ಮಾಡದೇ ತರಗತಿಗಳಿಗೆ ಗೈರಾಗುತ್ತಿರುವುದು ವಿದ್ಯಾರ್ಥಿಗಳನ್ನು ಕೆರಳಿಸಿದೆ. ಈ ಕುರಿತು ಗುರುವಾರ ಎಲ್ಲಾ ವಿದ್ಯಾರ್ಥಿಗಳು ಒಂದಾಗಿ ಇದ್ದಕಿದ್ದಂತೆ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಯಾರಿಗೂ ಮಾಹಿತಿ ಇರಲಿಲ್ಲ. ಮೆರವಣಿಗೆಯಲ್ಲಿ ಸಾಗಿಬಂದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ವಿಶೇಷ ತಹಶೀಲ್ದಾರರ ಕಚೇರಿಗೆ ತೆರಳಿ ಸಹಾಯಕ ತಹಶೀಲ್ದಾರ್ ಶಂಕರ್ ಶೆಟ್ಟಿಯವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮುಷ್ಕರ ಅಂತ್ಯಗೊಳಿಸಿದರು. ನಮಗೆ…

Read More

ಕುಂದಾಪುರ: ರಾಸಾಯಿನಿಕ ಮಿಶ್ರಿತ ಆಹಾರ ಪದಾರ್ಥಗಳ ಬಳಕೆಯಿಂದ ಮಾರಕ ರೋಗಗಳಿಗೆ ತುತ್ತಾಗುವ ಅಪಾಯವಿದೆ. ಇಂದು ಮಾರುಕಟ್ಟೆಯಲ್ಲಿ ಸಿಗುವ ತಂಪು ಪಾನೀಯಗಳಿಂದ ಹಿಡಿದು ಬಣ್ಣ ಬಣ್ಣದ ಚಾಕಲೇಟ್‌ನಲ್ಲಿಯೂ ರುಚಿಗಾಗಿ ರಾಸಾಯನಿಕವನ್ನು ಬಳಸುತ್ತಾರೆ ಅಂತಹ ಪದಾರ್ಥಗಳ ನಿರಂತರ ಸೇವನೆ ನಮ್ಮ ಆರೋಗ್ಯವನ್ನು ಹದಗೆಡಿಸುತ್ತದೆ ಆದುದರಿಂದ ಶುದ್ಧ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ರೂಢಿಸಿಕೊಳ್ಳಿ ಎಂದು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಹೇಳಿದರು. ಅವರು  ರೋಟರಿ ಕ್ಲಬ್ ಕುಂದಾಪುರ ಆಶ್ರಯದಲ್ಲಿ ಇಡೂರು ಕುಂಜ್ಞಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಶ್ವ ಕ್ಯಾನ್ಸ್‌ರ್ ದಿನದ ಅಂಗವಾಗಿ ಆರೋಗ್ಯ ಮಾಹಿತಿಯನ್ನು ನೀಡುತ್ತಾ ಮಾತನಾಡಿದರು. ರೋಟರಿ ಕ್ಲಬ್ ಕುಂದಾಪುರದ ನಿಯೋಜಿತ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಉದ್ಯಮಿ ರವೀಂದ್ರನಾಥ ಶೆಟ್ಟಿ, ಅದಿತಿ ಮೆಡಿಕಲ್‌ನ ಮಾಲಕ ಚಂದ್ರಶೇಖರ ಶೆಟ್ಟಿ, ಶಾಲಾ ಮುಖ್ಯೋಪಧ್ಯಾಯಿನಿ ಗೀತಾ ಬಿ., ರೋಟರಿ ಕಾರ್ಯದರ್ಶಿ ಸಂತೋಷ ಕೋಣಿ ಉಪಸ್ಥಿತರಿದ್ದರು. ಶಿಕ್ಷಕಿ ಆಶಾಕಿರಣ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Read More