ಕುಂದಾಪ್ರ ಡಾಟ್ ಕಾಂ ಲೇಖನ ಬೈಂದೂರು: ಸಾಕಷ್ಟು ಕುತೂಹಲ ಕೆರಳಿಸಿರುವ ಕಂಬದಕೋಣೆ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯದರ್ಶಿನಿ ದೇವಾಡಿಗ ಬೆಸ್ಕೂರು ಸ್ವರ್ಧೆಗಿಳಿದಿದ್ದಾರೆ. ಕಲಿತದ್ದು ಇಂಜಿನಿಯರಿಂಗ್, ವೃತ್ತಿಯಲ್ಲಿ ಉಪನ್ಯಾಸಕಿ, ಸಂಘಟನೆಯಲ್ಲಿ ಪರಿಣತಿ, ಸಮಾಜ ಸೇವೆಯಲ್ಲಿ ಆಸಕ್ತಿ. ಸಂಘ-ಸಂಸ್ಥೆ, ಸಹಕಾರಿಗಳಲ್ಲಿ ಸಕ್ರಿಯೆ. ಇದು ಪ್ರಿಯದರ್ಶಿನಿ ಅವರ ಶಾರ್ಟ್ ಪ್ರೊಪೈಲ್. ಸಾಮಾಜಿಕ ರಂಗದಲ್ಲಿ ತೊಡಗಿಸಿಕೊಂಡು ಜನಸೇವೆಗೈಯಬೇಕೆಂಬ ತುಡಿತ, (ಕುಂದಾಪ್ರ ಡಾಟ್ ಕಾಂ) ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ತಾಯಿ ಶಾರದಾ ಬಿಜೂರು ಅವರ ಪ್ರೇರಣೆ, ಬೆಸ್ಕೂರು ಕುಟುಂಬದ ಪ್ರೋತ್ಸಾಹ. ಇವೆಲ್ಲದರಿಂದ ಪ್ರಿಯದರ್ಶಿನಿ ಮೊದಲ ಭಾರಿಗೆ ರಾಜಕೀಯ ರಂಗಕ್ಕೆ ಧುಮುಕುತ್ತದ್ದಾರೆ. ಕುಂದಾಪ್ರ ಡಾಟ್ ಕಾಂ ಲೇಖನ ಸೌಪರ್ಣಿಕಾ ಮಹಿಳಾ ಸಹಕಾರಿಯ ನಿರ್ದೇಶಕಿಯಾಗಿ, ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ತ್ರಾಸಿ ಯುವತಿ ಮಂಡಲದ ಅಧ್ಯಕ್ಷೆಯಾಗಿದ್ದ ಪ್ರೀಯದರ್ಶಿನಿ ಅವರಿಗೆ ರಾಜಕೀಯದ ಹಿನ್ನೆಲೆಯೂ ಇದ್ದ ಕಾರಣ ಬಿಜೆಪಿ ಪಕ್ಷದಿಂದ ಸ್ವರ್ಧಿಸುವ ಅವಕಾಶ ದೊರೆತಿದೆ. ಸೂಕ್ತ ಸಮಯದಲ್ಲಿ ದೊರೆತ ಅವಕಾಶ, ಪಕ್ಷದಿಂದಲೂ ಸಹಕಾರ, ಕುಟುಂಬ ವರ್ಗದ ಪ್ರೋತ್ಸಾಹದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸುತ್ತಿರುವ ಪ್ರಿಯದರ್ಶಿನಿ…
Author: ನ್ಯೂಸ್ ಬ್ಯೂರೋ
ಮುಂಬಯಿ: ಜಾಗತಿಕ ಪ್ರೇಮಿಗಳ ದಿನಾಚರಣೆ ಬರೇ ಮಾನವರಿಗೆ ಮಾತ್ರ ಸೀಮಿತವಾಗಿಲ್ಲ. ಪಕ್ಷಿಗಳೂ ಇದನ್ನು ಪ್ರೇಮಿಗಳಾಗಿಯೇ ಸಂಭ್ರಮಿಸಿದ ಕ್ಷಣಗಳು ಅಚ್ಚರಿಯನ್ನುಂಟು ಮಾಡಿತು. ನಗರದ ಪತ್ರಕರ್ತ, ಪ್ರಾಣಿ-ಪಕ್ಷಿ ಪರಿಸರ ಪ್ರೇಮಿ ರೋನ್ಸ್ ಬಂಟ್ವಾಳ್ ತನ್ನ ಅಂಧೇರಿ ಪೂರ್ವದ ಚಕಾಲದಲ್ಲಿನ ಲವ್ವ್ಹೀವ್ ನಿವಾಸದ ಗ್ಯಾಲರಿಯಲ್ಲಿ ನಿರ್ಮಿಸಿರುವ ಹೂದೋಟದಲ್ಲಿ ಪಕ್ಷಿಪ್ರೇಮವನ್ನು ತನ್ನ ಕ್ಯಾಮೆರಾದಲ್ಲಿ ಸೆರೆಯಿಡಿದ ಕ್ಷಣಗಳು. ಎಂದಿನಂತೆ ಸುರ್ಯೋದಯದ ಸಮಯಕ್ಕೆ ಇಂದು ಮುಂಜಾನೆ ತಂಗಾಳಿಯ ಚಳಿಯಿಂದ ಹೊರ ಬಂದ ಗುಬ್ಬಚ್ಚಿ, ಗಿಳಿಗಳು ಪಕ್ಷಿಪ್ರಿಯ ಬಂಟ್ವಾಳ್ ಹತ್ತಾರು ಹೂಗಿಡಗಳಿಂದ ಸೃಷ್ಠಿಸಿದ ಪುಷ್ಪಉದ್ಯಾನದಲ್ಲಿ ಸ್ವತಂತ್ರವಾಗಿ ಹಾರಾಡುತ್ತಿರುವ ನೂರಾರು ಪಕ್ಷಿಗಳಿಗೆ ಆಸರೆಯನ್ನೀಡಿದ್ದಾರೆ. ಹತ್ತಾರು ಕಾಗೆಗಳು, ಗುಬ್ಬಚ್ಚಿ, ಗಿಳಿ, ಪಾರಿವಾಳ ಮತ್ತಿತರ ಪಕ್ಷಿಗಳೂ ಈ ಉಪವನದಲ್ಲಿ ಪಕ್ಷಿಧಾಮದಂತೆ ಆಸರೆ ಪಡೆಯುತ್ತಿವೆ. ಪಕ್ಷಿಗಳಿಗಾಗಿಗೇ ತಯಾರಿಸಲ್ಪಟ್ಟ ಆಹಾರ, ಕ್ಯಾಲ್ಸಿಯಂ, ನೀರು ಇನ್ನಿತರ ಆಹಾರವನ್ನು ಸೇವಿಸಿ ಪುಷ್ಪಗಿಡಗಳ ಮಧ್ಯೆ ಇರಿಸಿದ ನೀರಿನ ತೊಟ್ಟಿಗಳಲ್ಲಿ ಸ್ನಾನಗೈಯುತ್ತಾ ಕಾ… ಕಾ.. ಚಿಲಿಪಿಲಿ… ಎಂದು ಮುದ್ದಾಗಿ ಅಡ್ಡಾಡಿ ನರ್ತಿಸುವ ಕ್ಷಣಗಳು ಪರಿಸರ ಪ್ರಿಯರಿಗಂತೂ ಮುದನೀಡುವಂತಿದೆ.
ಬೈಂದೂರು: ಜಾತಿ, ಮತ, ಭೇಧ ಮರೆತು ಎಲ್ಲರೂ ಒಂದಾಗಿ ನಡೆಸಿದ ಲಕ್ಷಮೋದಕ ಗಣಪತಿ ಮಹಾಯಾಗದಿಂದ ದೇವರ ಲಕ್ಷ ಭಕ್ತರ ಕಡೆಗೆ ಬೀರಿದ್ದು, ನಮ್ಮೆಲ್ಲರ ಲಕ್ಷ ಲಕ್ಷ ದೋಷಗಳು, ಪಾಪಕರ್ಮಗಳು ನಿವಾರಣೆಯಾಗಿದೆ. ತ್ಯಾಗದಿಂದ ಯಾಗ ಸಂಪನ್ನವಾಗುತ್ತದೆ ಎಂದು ಕಟಪಾಡಿ ವೇಣುಗಿರಿ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಬೈಂದೂರು ಶ್ರೀ ಮಹಾಸತಿ ಅಮ್ಮನವರ ಸನ್ನಿಧಾನದಲ್ಲಿ ಐದು ದಿನಗಳ ಪರ್ಯಂತ ನಡೆಯುತ್ತಿರುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಹಾಗೂ ನಾಗಮಂಡಲೋತ್ಸವದ ಕೊನೆಯ ದಿನ ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಜೀವನದಲ್ಲಿ ಯಾವುದೇ ಘಟನೆಗಳಾಗಲಿ ಭಗವಂತನ ಪ್ರೇರಣೆಯಿಂದ ಸುಂದರವಾದ ಮುಕ್ತಾಯವನ್ನು ಕಾಣುತ್ತದೆ. ಸಂತರ ಆದರ್ಶ ಹಾಗೂ ಅವರ ಬದುಕು ಎಲ್ಲರಿಗೂ ಮಾದರಿಯಾಗಬೇಕು. ಅವರ ಮಾರ್ಗದರ್ಶನ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬದುಕಿನಲ್ಲಿ ಬರುವ ಏರಿಳಿತದ ಘಟನೆಗಳನ್ನು ಎದುರಿಸಲು ನಮ್ಮ ಮನಸ್ಸು ತಯಾರಾಗಿರಬೇಕು. ಜೀವನದಲ್ಲಿ ತೃಪ್ತಿಯಿಂದ ಬದುಕುವುದನ್ನು ರೂಢಿಸಿಕೊಂಡರೆ ಅದು ಸಾರ್ಥಕತೆ ಕಾಣುತ್ತದೆ ಎಂದರು. ಅಧ್ಯಕ್ಷತೆವಹಿಸಿದ ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಮಾತನಾಡಿ, ಹಿಂದೆ ಅನೇಕ…
ಬೈಂದೂರು: ಕಲಿಯುಗದಲ್ಲಿ ಗಣಪತಿಯ ಆರಾಧನೆ ಸರ್ವಶ್ರೇಷ್ಠವಾಗಿದೆ. ಅವನನ್ನು ಭಕ್ತಿ ಹಾಗೂ ಶುದ್ಧ ಮನಸ್ಸಿನಿಂದ ಆರಾಧಿಸಿದರೆ ಕಾರ್ಯಸಿದ್ಧಿಯಾಗುತ್ತದೆ. ದೇವರನ್ನು ನಂಬಿ, ಧಾರ್ಮಿಕ ನಂಬಿಕೆಯಿಲ್ಲದಿದ್ದರೆ ಭಗವಂತನ ಸಾಕ್ಷಾತ್ಕಾರ ಸಾಧ್ಯವಿಲ್ಲ ಎಂದು ಸಿರಸಿ ಸೋಂದಾ ಸ್ವರ್ಣವಲ್ಲಿ ಮಠದ ಪೀಠಾಧಿಪತಿ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಬೈಂದೂರು ಶ್ರೀ ಮಹಾಸತಿ ಅಮ್ಮನವರ ಸನ್ನಿಧಾನದಲ್ಲಿ ಐದು ದಿನಗಳ ಪರ್ಯಂತ ನಡೆಯುತ್ತಿರುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗಕ್ಕೆ ಮಧ್ಯಾಹ್ನ ಪೂರ್ಣಾಹುತಿ ನೀಡಿದ ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಗಣಪತಿ ದೇವರ ಆಕಾರಕ್ಕೂ ಆಧ್ಯಾತ್ಮಿಕವಾದ ಅರ್ಥವಿದೆ. ಆತನ ದೇಹದ ಅವಯವಗಳು ಒಂದೊಂದು ಸಂದೇಶಗಳನ್ನು ನೀಡುತ್ತದೆ. ವಿಶೇಷ ಯಜ್ಞದಲ್ಲಿ ಅಗ್ನಿಯಲ್ಲಿ ವಿಧಿವತ್ತಾಗಿ, ಶಾಸ್ತ್ರೋಕ್ತವಾಗಿ ನೀಡಿದ ಆಹುತಿ ಸೂರ್ಯನ ಮೂಲಕ ದೇವತೆಗಳಿಗೆ ತಲುಪಿ ಅವರು ಪ್ರಸನ್ನರಾಗಿ ಕಾಲಕಾಲಕ್ಕೆ ಮಳೆ-ಬೆಳೆ ಹಾಗೂ ಅನ್ನ ಸಮೃದ್ದಿಯಾಗುತ್ತದೆ. ವಿಶ್ವವೇ ವಿಘ್ನೇಶ್ವರನನ್ನು ಪೂಜಿಸುತ್ತದೆ. ವಿದೇಶದಲ್ಲಿಯೂ ಕೂಡಾ ಗಣಪತಿಯ ದೇವಾಲಯಗಳ ಪ್ರಾಚೀನ ಕುರುಹು ಪತ್ತೆಯಾಗಿದೆ. ದೇವರು ಧರ್ಮದ ಚಿಂತನೆ ಪ್ರತಿಯೊಬ್ಬರಲ್ಲೂ ಮೂಡಬೇಕು. ಭಕ್ತಿಮಾರ್ಗದ ಮೂಲಕ ಪರಮಾತ್ಮನನ್ನು ಅತೀ ಸುಲಭವಾಗಿ…
ಬೈಂದೂರು: ಪರಿಶುದ್ಧವಾದ ನಮ್ಮ ಭರತಭೂಮಿಯಲ್ಲಿ ದೇವರು-ದೈವ ಹಾಗೂ ಸನ್ನಿಧಿಯನ್ನು ಗುರುತಿಸುತ್ತೇವೆ. ಧೃಡವಾದ ಭಕ್ತಿ ಮತ್ತು ಶ್ರದ್ದೆಯಿಂದ ಜಾತಿ, ಮತ ಭೇಧವಿಲ್ಲದೇ ಸರ್ವರ ಸಹಕಾರ, ಒಗ್ಗಟ್ಟಿನಿಂದ ನಾವು ಏನನ್ನಾದರೂ ಸಾಧಿಸಬಹುದು. ಧರ್ಮದಿಂದ ಮಾನವನಿಗೆ ಸಹಬಾಳ್ವೆ, ನೆಮ್ಮದಿ ಹಾಗೂ ಸಂತೋಷ ದೊರೆಯುತ್ತದೆ ಎಂದು ಧಾರ್ಮಿಕ ಉಪನ್ಯಾಸಕ ಆನಗಳ್ಳಿ ಗಜಪುರದ ಚೆನ್ನಕೇಶವ ಗಾಯತ್ರಿ ಭಟ್ಟ ಹೇಳಿದರು. ಬೈಂದೂರು ಶ್ರೀ ಮಹಾಸತಿ ಅಮ್ಮನವರ ಸನ್ನಿಧಾನದಲ್ಲಿ ಐದು ದಿನಗಳ ಪರ್ಯಂತ ನಡೆಯುತ್ತಿರುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಹಾಗೂ ನಾಗಮಂಡಲೋತ್ಸವದ ನಾಲ್ಕನೇ ದಿನ ಧಾರ್ಮಿಕ ಉಪನ್ಯಾಸ ನೀಡಿದರು. ದೇವಾಲಯಗಳು ಸಗುಣೋಪಾಸನೆ ಮಾಡುವ ಪವಿತ್ರಸ್ಥಳ. ಇಲ್ಲಿನ ಅರ್ಚಕರು ವೇದ ಮಂತ್ರಗಳಿಂದ ನಿಯಮಾನುಸಾರ ಸಾತ್ವಿಕ ಕಾರ್ಯಗಳನ್ನು ನಡೆಸಬೇಕು. ಉತ್ಸವಾದಿ ಅನ್ನದಾನದಿಂದ ಕ್ಷೇತ್ರದ ಅಭಿವೃದ್ಧಿ ಕಾಣಬಹುದು. ಅಲ್ಲದೇ ಭಕ್ತರ ಪಾಲುದಾರಿಕೆಯೂ ಮುಖ್ಯವಾಗಿರುತ್ತದೆ. ದೇವಾಲಯಗಳಲ್ಲಿ ನಡೆಯುವ ಕರ್ಮಕ್ಕೆ ವಿಶೇಷ ಫಲ ದೊರಕುವುದಲ್ಲದೇ ಅಚಲವಾದ ನಂಬಿಕೆಯಿಂದ ಪ್ರಾರ್ಥಿಸಿದಲ್ಲಿ ದೇವರ ಪರಿಪೂರ್ಣ ಅನುಗ್ರಹವಾಗುತ್ತದೆ ಎಂದರು. ಧಾರ್ಮಿಕ ಕ್ಷೇತ್ರಗಳಲ್ಲಿರುವುದು ಕೇವಲ ಎರಡು ಪಕ್ಷಗಳು. ಒಂದು ಕೃಷ್ಣಪಕ್ಷ ಅಂದರೆ ಕರ್ಮ,…
ಕುಂದಾಪುರ: ಕೊಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಪ್ರತಿಷ್ಟಾ ವರ್ಧಂತಿ ವಿಜೃಂಬಣೆಯಿಂದ ನಡೆಯಿತು. ಬೆಳಿಗ್ಗೆ ದೇವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಶತಕಲಶಾಭಿಷೇಕ, ಪವಮಾನ ಕಲಶಾಭಿಷೇಕಗಳೊಂದಿಗೆ ವಿಶೇಷ ಪೂಜೆ ಜರಗಿತು.ಮಧ್ಯಾಹ್ನ ಮಹಾಸಂತರ್ಪಣೆ ನಡೆಯಿತು. ಈ ಸಮಯದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀಧರ ಕಾಮತ್, ಮೊಕ್ತೇಸರರಾದ ಶಾಂತಾರಾಮ ಪೈ, ವಿಠ್ಠಲದಾಸ ಭಟ್, ರತ್ನಾಕರ ಕಾಮತ್, ಗೋವಿಂದ್ರಾಯ ಸಂಜೀವ ಕಾಮತ್, ಪದ್ಮನಾಭ ಕಾಮತ್, ಶ್ರೀ ರಾಮ ಸೇವಾ ಸಂಘದ ಅಧ್ಯಕ್ಷ ಶಂಕರ ಕಾಮತ್ ಉಪಸ್ಥಿತರಿದ್ದರು. ಸಂಜೆ ಹಗಲೋತ್ಸವ,ರಾತ್ರಿ ಭಜನೆಯೊಂದಿಗೆ ಬೆಳ್ಳಿಯ ಪುಷ್ಪ ರಥ ಸಹಿತ ಉತ್ಸವ ಕೋಟೇಶ್ವರ ಪೇಟೆಯಲ್ಲಿ ಸಾಗಿತು.ನಂತರ ವಿಶೇಷ ವಸಂತ ಪೂಜೆ ಮತ್ತು ಪ್ರಸಾದ ವಿತರಿಸಲಾಯಿತು. ಈ ಎಲ್ಲಾ ಕಾರ್ಯಕ್ರಮದಲ್ಲಿ ಊರ ಸಮಾಜ ಭಾಂಧವರು ಪಾಲ್ಗೊಂಡು ಶ್ರೀ ದೇವರ ಅನುಗ್ರಹಕ್ಕ ಪಾತ್ರರಾದರು
ದಿವ್ಯಾಧರ ಶೆಟ್ಟಿ ಕೆರಾಡಿ. | ಕುಂದಾಪ್ರ ಡಾಟ್ ಕಾಂ | ನಿನ್ನ ಪ್ರೇಮದ ಪರಿಯ ನಾನರಿಯೇ ಕನಕಾಂಗಿ ನಿನ್ನೊಳಿದೆ ನನ್ನ ಮನಸ್ಸು ಎನ್ನುವ ಹುಡುಗ ಮತ್ತು ಹಂಬಲಿಸೊ ನಿನ್ನ ಕಂಗಳಲಿ ಬೇರೇನೂ ಕಾಣದು ಹುಡುಗ ನನ್ನ ದೊರೆಯು ನೀನೆ ಆಸರೆಯು ನೀನೆ ಎನ್ನುವ ಹುಡುಗಿಯ ಎದೆ ಬಗೆದು ನೋಡಿದರೂ ಕಾಣುವುದು ನಿರ್ಮಲವಾದ ಹಚ್ಚ ಹಸಿರಿನ ಸ್ವಚ್ಛ ಪ್ರೀತಿ ಮಾತ್ರ ಇದು ಈ ಜಗದ ನೀತಿ ಪ್ರೀತಿಯ ರೀತಿ. ಹೌದು ‘ಪ್ರೀತಿ’ ಎಂಬ ಎರಡಕ್ಷರ ಪದಗಳಲ್ಲಿ ಹಿಡಿದಿಡಲಾಗದ ಭಾವ ನೌಕೆ.. ಪ್ರಪಂಚದ ಯಾವಜೀವಿಯನ್ನು ಬಿಡದೆ ಕಾಡುವ ಮಾಯಾಜಿಂಕೆ. ಅಲ್ಲೆಲ್ಲೋ ಬಸ್ ಸ್ಟಾಂಡ್ ನಲ್ಲಿ ಕಿರುನಕ್ಕ ಹುಡುಗಿ ನಿದ್ದೆಗಣ್ಣಿನಲ್ಲೂ ಕಾಡಿದಂತೆ, ನೆರೆಮನೆಯಲ್ಲಿ ಮಲ್ಲಿಗೆಯೊಂದು ಅರಳಿದಂತೆ, ಕ್ಯಾಂಪಸ್ ನಲ್ಲಿ ಕಾಲ್ಗೆಜ್ಜೆ ಹೆಜ್ಜೆಗಳ ಹಿಂಬಾಲಿಸಿದಂತೆ, ಪ್ರೀತಿಯ ಹುಡುಕಾಟ ಅದಕ್ಕಾಗಿ ಕಾದಾಟ ಅಂದು ಇಂದು ಮುಂದು ನಿತ್ಯ ನಿರಂತರ.. ಪ್ರೀತಿಯ ಹುಟ್ಟು ಸಾವು ಎರಡು ಜಗತ್ತಿನ ಪರಮ ಅದ್ಭುತವೆ.. ಹುಟ್ಟಿನ ನಲಿವು ಸಾವಿನ ವೇದನೆ ಅನುಭವಿಸಿದವರಷ್ಟೆ ಹೇಳಬಲ್ಲರು.. ಪ್ರೀತಿಯ ಆರಂಭವೆ…
ಕುಂದಾಪುರ: ಚಿಕ್ಕನ್ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಗುರುಪರಾಶಕ್ತಿ ಮಠ, ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳ ಅನುಗ್ರಹದೊಂದಿಗೆ ವೇ. ಮೂ. ಕೆ. ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಫೆ.೧೧ರಿಂದ ಆರಂಭಗೊಂಡಿದ್ದು ಫೆ. ೧೬ರವರೆಗೆ ನಡೆಯಲಿದೆ. ಫೆ.16ರಂದು ಬೆಳಿಗ್ಗೆ 7ಕ್ಕೆ ಬ್ರಹ್ಮಕಲಶಾಭಿಷೇಕ, ಚತಚಂಡಿಕಾಯಾಗ ಪೂರ್ಣಾಹುತಿ, ತಾಯಿಗೆ ರಜತ ಪ್ರಭಾವಳಿ ಸಮರ್ಪಣೆ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6ಕ್ಕೆ ಕುಂದಾಪುರ ಮದ್ದುಗುಡ್ಡೆಯ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿಯವರಿಂದ ಭಜನೆ, ರಾತ್ರಿ ೯ರಿಂದ ಕಟೀಲು ಶ್ರೀ ದುರ್ಗಾರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ ಎಂದು ಉತ್ಸವ ಸಮಿತಿ ಪ್ರಕಟನೆ ತಿಳಿಸಿದೆ.
ಕುಂದಾಪುರ: ಕರ್ನಾಟಕ ಜಾನಪದ ಪರಿಷತ್ನ ರಾಜ್ಯ ಮಟ್ಟದ ಘಟಕದಿಂದ ಕುಂದಾಪುರದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅಪೂರ್ವ ಪ್ರಾಚ್ಯ ವಸ್ತುಗಳ ಖ್ಯಾತ ಸಂಗ್ರಾಹಕ ಕಲಾವಿದ, ಚುಟುಕು ಸಾಹಿತಿ ಹಾಗೂ ಕರ್ನಾಟಕ ಸಾಹಿತ್ಯ ಪರಿಷತ್ ಕುಂದಾಪುರದ ಅಧ್ಯಕ್ಷ ಜಿ.ಬಿ.ಕಲೈಕಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷ ಚಂದ್ರಶೇಖರ್ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ.ವಿ. ಯ ಎಸ್.ವಿ.ಪಿ. ಅಧ್ಯಯನ ಸಂಸ್ಥೆಯ ಪ್ರೊ.ಕೆ.ಅಭಯ್ ಕುಮಾರ್, ಮಾಜಿ ಶಾಸಕ ಎ.ಜಿ.ಕೊಡ್ಗಿ, ಕರ್ನಾಟಕ ಬ್ಯಾಂಕಿನ ನಿರ್ದೇಶಕ ಡಾ. ಎಚ್.ರಾಮಮೋಹನ್, ಹಲ್ನಾಡು ವಿಜಯಾನಂದ ಶೆಟ್ಟಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ, ಕುಂದಾಪುರ ಘಟಕದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಉಡುಪಿ ಜಿಲ್ಲಾ ಪ್ರೌಢ ಶಾಲಾ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ದಾಮೋದರ ಶಾಸ್ತ್ರಿ, ಕಾರ್ಯದರ್ಶಿ ಹಲ್ನಾಡ ಪ್ರತಾಪಚಂದ್ರ ಶೆಟ್ಟಿ, ಡಾ.ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
ಬೈಂದೂರು: ಬೈಂದೂರು-ಗಂಗನಾಡು ರಸ್ತೆ ಎಲ್.ಸಿ. ೭೩ ರೈಲ್ವೆಗೇಟ್ ಬಳಿ ಮೇಲ್ಸೆತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ ನೇತೃತ್ವದಲ್ಲಿ ಸಾರ್ವಜನಿಕರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು. ತಾಲೂಕು ಕೇಂದ್ರದ ಹೊಸ್ತಿಲಲ್ಲಿರುವ ಬೈಂದೂರು ಅಭಿವೃದ್ಧಿಯತ್ತ ಹೆಜ್ಜೆ ಹಾಕುತ್ತಿದ್ದು, ಇಲ್ಲಿಗೆ ಸೂರ್ಕುಂದ, ಕಲ್ಮಕ್ಕಿ, ಗಂಗನಾಡು, ಮೊದಲಾದ ಭಾಗದ ಜನರು ತೆರಳಬೇಕಾದರೆ ರೈಲು ಮಾರ್ಗವನ್ನು ಹಾದುಹೋಗಬೇಕಾಗಿದೆ. ಆದರೆ ಇಲ್ಲಿ ರೈಲುಗೇಟ್ ಅಳವಡಿಸಿದ್ದು, ಪ್ರತಿದಿನ ಹತ್ತಾರು ರೈಲುಗಳು ಈ ಮಾರ್ಗವಾಗಿ ಸಂಚರಿಸತ್ತಿರುತ್ತವೆ. ಆದರೆ ಇಲ್ಲಿ ಓಡಾಡುವ ಜನರಿಗೆ ಹಾಗೂ ವಾಹನಗಳ ಸಂಚಾರಕ್ಕೆ ರೈಲ್ವೆಗೇಟ್ ಅಡ್ಡಿಯಾಗಿದೆ. ಶೀಘ್ರವಾಗಿ ಮೇಲ್ಸೇತುವೆ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಾರೆ. ಅಲ್ಲದೇ ಈಗ ಕೊಂಕಣ ರೈಲ್ವೆ ನಿಗಮವು ಈ ರೈಲ್ವೆ ಮಾರ್ಗದಲ್ಲಿ ದ್ವಿಪಥ(ಎರಡು ಹಳಿಗಳನ್ನು) ನಿರ್ಮಿಸುವ ಯೋಜನೆಗೆ ಚಾಲನೆ ನೀಡಿದ್ದು, ಮುಂದಿನ ದಿನದಲ್ಲಿ ಈ ಮಾರ್ಗವಾಗಿ ರೈಲುಗಳ ಓಡಾಟ ಹೆಚ್ಚಾಗಲಿದೆ. ಇದರಿಂದಾಗಿ ವಿದ್ಯಾರ್ಥಿಗಳು, ನೌಕರಸ್ಥರು, ರೋಗಿಗಳು, ಕೂಲಿ ಕಾರ್ಮಿಕರ ಓಡಾಟ ದುಸ್ತರವಾಗುತ್ತದೆ.…
