ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಬಳಿ, ಸಾರ್ವಜನಿಕ ಸ್ಥಳದಲ್ಲಿ ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಅವರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿಯಾದ ಹಂಗಾರಕಟ್ಟೆ ಬಾಳ್ಕುದ್ರು ಗ್ರಾಮದ ಮನಿತ್ (26) ಎಂಬ ಯುವಕನನ್ನು ಬಂಧಿಸಿದ್ದಾರೆ. ಆರೋಪಿಯ ವಶದಿಂದ ಕ್ರಿಕೆಟ್ ಬೆಟ್ಟಿಂಗ್ಗೆ ಬಳಸಲಾಗುತ್ತಿದ್ದ ಐಫೋನ್ ಮೊಬೈಲ್ ಹಾಗೂ ನಗದು ರೂ.800ನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತನಿಖೆಯಲ್ಲಿ, ಆರೋಪಿಯು ಇತರರೊಂದಿಗೆ ಓಮನ್ ಹಾಗೂ ಜಿಂಬಾಂಬ್ವೆ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ, PARKKER777 ಎಂಬ ಆನ್ಲೈನ್ ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದನು ಎಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರು, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ದೇವಾಡಿಗರು, ಓರ್ವ ಸಜ್ಜನ ರಾಜಕಾರಣಿ, ಸಾಮಾಜಿಕ ನ್ಯಾಯಕ್ಕಾಗಿ ದುಡಿದವರು. ರಾಜಕೀಯ ಜೀವನದಲ್ಲಿ ಪ್ರಾಮಾಣಿಕವಾಗಿ, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾದವರು. ಓರ್ವ ಶಾಸಕನಾಗುವ ಎಲ್ಲಾ ಗುಣಗಳನ್ನು ಹೊಂದಿದವರು. ಅವರ ಅಗಲುವಿಕೆ ಸಮಾಜಕ್ಕೆ ಆದ ನಷ್ಟ ಎಂದು ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಹಿರಿಯ ಕಾಂಗ್ರೆಸ್ಸಿಗ ಕೆದರು ಸದಾನಂದ ಶೆಟ್ಟಿ ಹೇಳಿದರು. ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಜು ದೇವಾಡಿಗ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಮೊಳಹಳ್ಳಿ ದಿನೇಶ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಮನ ಸಾಮಾಜಿಕ ಕಾರ್ಯಕರ್ತ ಗುಲ್ವಾಡಿ ಪ್ರಭಾಕರ ಶೆಟ್ಟಿ ಶ್ರದ್ಧಾಂಜಲಿಯ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದಿನೋಡ್ ಕ್ರಾಸ್, ಮಹಿಳಾ ಬ್ಲಾಕ್ ಅಧ್ಯಕ್ಷ ದೇವಕಿ ಪಣ್ಣನ್ನು, ಅನಗಳ್ಳಿ ಪಂಚಾಯತ್ ಅಧ್ಯಕ್ಷೆತೆ ಸವಿತಾ, ಕೆಡಿಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯು ಹಳೆಯ ವಿದ್ಯಾರ್ಥಿ ಘಟಕವನ್ನು ಉದ್ಘಾಟಿಸಿದರು. ಇದು ಹಳೆಯ ವಿದ್ಯಾರ್ಥಿಗಳೊಂದಿಗೆ ಸಂಬಂಧವನ್ನು ಬಲಪಡಿಸುವ ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ. ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್.ಎನ್.ಭಟ್ ಅವರು, ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಅಧ್ಯಾಪಕ ವೃಂದ ಮತ್ತು ಹಳೆಯ ವಿದ್ಯಾರ್ಥಿ ಪ್ರತಿನಿಧಿಗಳ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಹಳೆಯ ವಿದ್ಯಾರ್ಥಿ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿ ಘಟಕದ ಲೋಗೋವನ್ನೂ ಅನಾವರಣಗೊಳಿಸಲಾಯಿತು. ಶಿಲ್ಪಾಶ್ರೀ ಹಾಗೂ ಸ್ವರ್ಣ ರಾಣಿ ಯು. ಪಿ. ಅವರು ಹಳೆಯ ವಿದ್ಯಾರ್ಥಿ ಘಟಕದ ಸಂಯೋಜಕರಾಗಿ ಅಧಿಕೃತವಾಗಿ ಹೊಣೆಗಾರಿಕೆಯನ್ನು ವಹಿಸಿಕೊಂಡರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಹಳೆಯ ವಿದ್ಯಾರ್ಥಿ ಘಟಕದ ಉದ್ದೇಶಗಳು ಮತ್ತು ಮಹತ್ವವನ್ನು ವಿವರಿಸಿ, ಹಂಚಿಕೊಂಡ ಯಶಸ್ಸು, ಹಳೆಯ ವಿದ್ಯಾರ್ಥಿಗಳ ಸಾಧನೆಗಳು, ಭಾವನಾತ್ಮಕ ಹಾಗೂ ಸಂಸ್ಥಾತ್ಮಕ ಬೆಂಬಲದ ಮೂಲಕ ಸಂಬಂಧಗಳನ್ನು ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಮ್ಮ ಪೂರ್ವಜರು ಕಲಿಸಿಕೊಟ್ಟ ಸಂಸ್ಕಾರ ಭರಿಯ ಶಿಕ್ಷಣವನ್ನು ನಾವುಗಳು ಮರೆತಿದ್ದೇವೆ ಆದರೆ ಅದರಿಂದ ಇಂದು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಎಂಬ ಮನಸ್ಥಿತಿಯಲ್ಲಿರುವಾಗ ಸೇವಾಸಂಗಮ ಶಿಶು ಮಂದಿರ ಶಿಕ್ಷಣ ಕೇಂದ್ರ ಸಂಸ್ಕಾರಭರಿತ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದು ಮುಂಬೈ ಓಎನ್ಜಿಸಿ ನಿವೃತ್ತ ಅಧಿಕಾರಿ ಬನ್ನಾಡಿ ನಾರಾಯಣ ಆಚಾರ್ ಹೇಳಿದರು. ಅವರು ಅಮೃತೇಶ್ವರೀ ದೇಗುಲದ ಸಭಾಂಗಣದಲ್ಲಿ ಕೋಟದ ಸೇವಾಸಂಗಮ ಶಿಶು ಮಂದಿರ ಇದರ 39ನೇ ವರ್ಷದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಪೋಷಕರು ಮಕ್ಕಳಿಗೆ ನೈಜ ಕಲಿಕಾ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಅಲ್ಲದೆ ಶಿಶುಮಂದಿರದಲ್ಲಿ ನೀಡುವ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ನೀಡಲಿದೆ ಎಂದರು. ಈ ಸಂದರ್ಭದಲ್ಲಿ ಹಿಂದೆ ಶಿಶುಮಂದಿರದಲ್ಲಿ ಕಲಿತ ಬಾಲಗೋಕುಲದ ಸಾಧಕ ವಿದ್ಯಾರ್ಧಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಸೇವಾಸಂಗಮ ಶಿಶು ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಣೈ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕುಂದಾಪುರ ಸೇವಾಸಂಗಮ ಶಿಶುಮಂದಿರದ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಸುಬ್ರಹ್ಮಣ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಹ್ಮಾವರದ ಸಾಲಿಕೇರಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅಗತ್ಯತೆಗಳನ್ನು ಮನಗಂಡು, ಸಂಪತ್ ಕುಮಾರ್ ಶೆಟ್ಟಿ ಇವರ ಮಾಲಿಕತ್ವದ ಶ್ರೀ ಕ್ರಷ್ಣ ಪ್ರಸಾದ್ ಕ್ಯಾಶ್ಯೂ ಸಂಸ್ಥೆಯ ವತಿಯಿಂದ ನೂತನ ತಂಗುದಾಣವನ್ನು ನಿರ್ಮಿಸಿ ಶನಿವಾರ ಲೋಕಾರ್ಪಣೆಗೊಳಿಸಲಾಯಿತು. ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಮಾಲೀಕರಾದ ಸಂಪತ್ ಕುಮಾರ್ ಶೆಟ್ಟಿ, ನಮ್ಮ ಉದ್ಯಮ ಕ್ಷೇತ್ರದಲ್ಲಿ 15 ವರ್ಷಗಳಲ್ಲಿ ಸಾಧಿಸಿದ್ದನ್ನು, ಸಾಲಿಕೇರಿಯ ದೈವಾ ದೇವರ ಅನುಗ್ರಹದಿಂದ ಕೇವಲ ಒಂದು ವರ್ಷದ ಅವಧಿಯಲ್ಲಿ ಸಾಧಿಸಲು ಸಾಧ್ಯವಾಯಿತು. ಈ ಊರು ನಮಗೆ ಬಹಳಷ್ಟು ಕೊಟ್ಟಿದ್ದು, ಆದ್ದರಿಂದ ಊರಿನ ಅಭಿವೃದ್ಧಿ ವಿಚಾರದಲ್ಲಿ ಸದಾ ಜನರೊಂದಿಗೆ ನಿಂತು ಕೆಲಸ ಮಾಡುವ ಬದ್ಧತೆ ನಮ್ಮದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಮಾತನಾಡಿ, ಕೃಷ್ಣ ಪ್ರಸಾದ್ ಕ್ಯಾಶ್ಯೂ ಸಂಸ್ಥೆಯು ಸಾವಿರಾರು ಬಡ ವರ್ಗದ ಜನರಿಗೆ ಉದ್ಯೋಗ ಕಲ್ಪಿಸುವ ಮೂಲಕ ಅವರ ಜೀವನೋಪಾಯಕ್ಕೆ ಭದ್ರತೆ ಒದಗಿಸುತ್ತಿದೆ. ಬಡವರ ಹೊಟ್ಟೆ ತುಂಬಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿರುವ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೆಂಗಳೂರಿನ ಡಾ. ಆರ್. ಅರುಣಾಲಂ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಲು ಸಂಕ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಹೊಸಂಗಡಿ ಗ್ರಾಮದ ಅಯ್ಯಪ್ಪನಜಡ್ಡು ಕಕ್ಕನಪಾಲು, ಮಚ್ಚಟ್ಟು ಗ್ರಾಮದ ಮಡಿವಾಳ ಕಟ್ಟು, ಆಜ್ರಿ ಗ್ರಾಮದ ತಗ್ಗುಂಜೆ, ಕೆರಾಡಿ ಗ್ರಾಮದ ಕುಳ್ಳಂಬಳ್ಳಿ ಹೊಸಳ್ಳಿಕೊಡ್ಲು ಮತ್ತು ವಂಡ್ಸೆ ಗ್ರಾಮದ ಅಬ್ಬಿ ಬಳಿ ಕಾಲುಸಂಕ ನಿರ್ಮಾಣಕ್ಕೆ ಶಾಸಕ ಗಂಟಿಹೊಳೆ ಹಾಗೂ ಡಾ. ಆರ್. ಅರುಣಾಚಲಂ ಚಾರಿಟೇಬಲ್ ಟ್ರಸ್ಟ್ ಇದರ ಪ್ರವರ್ತಕರಾದ ಕ್ಯಾ. ರಮೇಶ್ ಅರುಣಾಚಲಂ ಅವರೊಂದಿಗೆ ಭೂಮಿ ಪೂಜೆ ನೆರವೇರಿಸಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಅರುಣಾಚಲಂ ಟ್ರಸ್ಟ್ ಬೈಂದೂರಿಗರ ಕನಸುಗಳನ್ನು ನನಸು ಮಾಡುತ್ತಿದೆ. ನಮ್ಮ ಬದ್ಧತೆ, ನಮ್ಮ ಇಚ್ಛಾಶಕ್ತಿ ಮತ್ತು ದಾನಿಗಳ ಸಹಕಾರದಿಂದ ಬೈಂದೂರಿನಂತಹ ಗ್ರಾಮೀಣ ಭಾಗದಲ್ಲಿ ಕಾಲು ಸಂಕ ನಿರ್ಮಿಸಿ ಸುಲಭ ಸಂಚಾರಕ್ಕೆ ವ್ಯವಸ್ಥೆ ಮಾಡುತ್ತಿದ್ದೇವೆ. ಗ್ರಾಮಸ್ಥರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಧರ್ಮದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ನಿರ್ಮಾತೃಗಳಾದ ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ಸಂಸ್ಮರಣೆಯ ಅಂಗವಾಗಿ ಸಂಸ್ಥಾಪಕರ ದಿನಾಚರಣೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಆರಾಧನೆ ಎಂಬ ಶೀರ್ಷಿಕೆಯಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ಬದುಕು ಮತ್ತು ಸಾಧನೆಯ ವಿವಿಧ ಮಜಲುಗಳನ್ನು ಸಂಸ್ಮರಿಸಲಾಯಿತು. ಮುಂಜಾನೆಯ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲ್ಪಟ್ಟವು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಬೆಂಗಳೂರಿನ ಖ್ಯಾತ ಸಾಹಿತಿಗಳಾದ ಡಾ. ಗಜಾನನ ಶರ್ಮರು ಮಾತನಾಡಿ, ಅಕ್ಕಿಯಿಂದ ಅನ್ನವನ್ನು ಮೊದಲಾರು ಕಂಡವರು ಎಂಬಂತೆ ಮಾನವನ ಸಾಧನೆಯ ಪ್ರತಿಹೆಜ್ಜೆಯನ್ನು ಬೋಧಿಸಿದವರ್ಯಾರು ಎಂದು ತಿಳಿಯುವ ಗೊಡವೆಗೆ ಜನ ಹೋಗುವುದಿಲ್ಲ. ಆದರೂ ಪೂರ್ವಜರ ಸ್ಮರಣೆ ಮತ್ತು ಇತಿಹಾಸ ಅರಿಯದವನು ಮುಂದಿನ ಹೆಜ್ಜೆಯನ್ನಿಡಲಸಾಧ್ಯ. ಆದ್ದರಿಂದ ಸಂಸ್ಮರಣೆ ಅತ್ಯಗತ್ಯ. ಸಮಾಜದ ಸರ್ವರೂ ವಿದ್ಯೆಯನ್ನು ಅರಿತು ಬಾಳಬೇಕೆಂದು ಶ್ರಮಿಸಿದವರು. ವೇದಮೂರ್ತಿ ರಾಮಚಂದ್ರ ಭಟ್ಟರು, ಎಲ್. ಟಿ. ತಿಮ್ಮಪ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರಿನ ಮೆಟ್ರೋ ಪ್ರಯಾಣ ಬೆಲೆ ಏರಿಕೆಯ ವಿರುದ್ಧ ಧ್ವನಿ ಎತ್ತಿದ ನಮ್ಮ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ. ಕಾಂಗ್ರೆಸ್ ಆಡಳಿತದಲ್ಲಿ ಜನರ ಪರ ಧ್ವನಿ ಎತ್ತಿದರೆ ಜೈಲು ಗ್ಯಾರಂಟಿ. ಎಂದು ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್. ಬೇಲೆಮನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಗ್ಯಾರಂಟಿ ಯೋಜನೆಗಳಿಂದ ದಿವಾಳಿ ಆಗಿರುವ ಸಿದ್ದರಾಮಯ್ಯ ಸರ್ಕಾರ ಅಬಕಾರಿ ಇಲಾಖೆಯ ನಂತರ ಮೆಟ್ರೋವನ್ನು ಟಾರ್ಗೆಟ್ ಮಾಡಿಕೊಂಡಿದೆ. ಅವೈಜ್ಞಾನಿಕವಾಗಿ ಮೆಟ್ರೋ ದರ ಏರಿಸಿ ಜನಸಾಮಾನ್ಯರಿಗೆ ಬರೆ ಹಾಕುತ್ತಿದೆ. ಬಂಧನ ಮಾಡುವ ಮೂಲಕ ನೀವು ನಮ್ಮ ದನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ನಾವು ಜನಪರ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಜನಪರ ಹೋರಾಟ ಕೈಗೊಂಡಿರುವ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ನಮ್ಮ ಬೆಂಬಲವಿದೆ ಎಂದು ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ಗಜೇಂದ್ರ ಎಸ್. ಬೇಲೆಮನೆ ತಿಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಫೆಬ್ರವರಿ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತಿದ್ದು, 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ ಇದರ ನಿವಾರಣೆಗಾಗಿ ಉಡುಪಿ ತಾಲೂಕಿನಲ್ಲಿ 1,35,244, ಕುಂದಾಪುರ ತಾಲೂಕಿನಲ್ಲಿ 87,320 ಹಾಗೂ ಕಾರ್ಕಳ ತಾಲೂಕಿನಲ್ಲಿ 49,913 ಸೇರಿದಂತೆ ಒಟ್ಟು 2,72,477 ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು. ಈ ಮಾತ್ರೆಯನ್ನು ಮಧ್ಯಾಹ್ನ ಊಟದ ನಂತರ ಶಾಲೆಗಳಲ್ಲಿ ಶಾಲಾ ಶಿಕ್ಷಕರ ಮತ್ತು ಅಂಗನವಾಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯವರ ಉಪಸ್ಥಿತಿಯಲ್ಲಿ ನೀಡಲಾಗುವುದು. ಶಿಕ್ಷಕರು, ಬಿಸಿಯೂಟ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯವರಿಗೆ ಕೂಡಾ ಮಾತ್ರೆಯನ್ನು ನೀಡಲಾಗುತ್ತದೆ. ಹೊಟ್ಟೆ ಹುಳಗಳ ತೊಂದರೆಯಿಂದ ರಕ್ತಹೀನತೆ, ಪೌಷ್ಠಿಕ ಆಹಾರದ ಕೊರತೆ ಉಂಟಾಗುತ್ತಿದ್ದು, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ತೊಂದರೆ ಕಾಣಿಸಿಕೊಳ್ಳಬಹುದು. ಅಲ್ಬೆಂಡಾಝೋಲ್ ಮಾತ್ರೆ ನೀಡುವುದರಿಂದ ಹೊಟ್ಟೆ ಹುಳಗಳ ನಾಶವಾಗುತ್ತವೆ. ಈ ಕಾರ್ಯಕ್ರಮದಲ್ಲಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಅಂಗನವಾಡಿ, ರೆಸಿಡೆನ್ಶಿಯಲ್ ಸ್ಕೂಲ್, ಐ.ಟಿ.ಐ, ಟೆಕ್ನಿಕಲ್ ಇನ್ಸಿಟ್ಯೂಟ್, ನರ್ಸಿಂಗ್ ಕಾಲೇಜು, ಡಿಗ್ರೀ ಕಾಲೇಜು ವಿದ್ಯಾರ್ಥಿಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಲಿಸುತ್ತಿದ್ದ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ಎನ್.ಹೆಚ್-66ರ ಕುಂದಾಪುರ ಕನ್ನುಕೆರೆ ನವಶಕ್ತಿ ಕಲ್ಯಾಣ ಮಂಟಪದ ಎದುರು ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರು ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಒಟ್ಟು 12 ಮಂದಿ ವಿದ್ಯಾರ್ಥಿಗಳು ಜ.31ರಂದು ಎರಡು ಕಾರುಗಳಲ್ಲಿ ದೇಶ ಸುತ್ತುವ ಪ್ರವಾಸಕ್ಕೆ ಹೊರಟಿದ್ದರು. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನದ ವೇಳೆಗೆ ತೆಕ್ಕಟ್ಟೆ ಸಮೀಪದ ಕನ್ನುಕೆರೆ ಪ್ರದೇಶದಲ್ಲಿ ಕಾರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಕಾರು ಪಲ್ಟಿ ಹೊಡೆದು ಬಿದ್ದಿದೆ. ಅಪಘಾತದ ಪರಿಣಾಮ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ಕೂಡಲೇ…
