Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಪಂಚ ಭೂತಗಳ ಮೇಲೆ ನಾವೂ ನಿಯಂತ್ರಣವನ್ನು ಸಾಧಿಸಬಹುದು. ಪ್ರಕೃತಿ ನಮಗೆ ಕೊಟ್ಟದ್ದನ್ನು ಕಾಲ ಹಾಗೂ ದೇಶಕ್ಕೆ ತಕ್ಕಂತೆ ಮತ್ತು ಶಾಸ್ತ್ರ ನಿಯಮದಂತೆ ಆಹಾರವನ್ನು ಸೇವಿಸಿದರೆ ಹಾಗೂ ನಿಯಮ ಬದ್ಧವಾದ ಉಪವಾಸದಿಂದ ಸಾಮಾನ್ಯನೂ ಕೂಡ ಅಗ್ನಿಜಯವನ್ನು ಸಾಧಿಸಬಹುದು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಮಹಾನ್ ವ್ಯಕ್ತಿಗಳ ಜೀವನದಲ್ಲಿಯೂ ಕಷ್ಟಗಳು ಬರುತ್ತವೆ ಎಂದ ಶ್ರೀಗಳು, ನಳ – ದಮಯಂತಿಯ ಚರಿತ್ರೆಯ ಮೂಲಕ ನಳನಿಗೆ ಅಗ್ನಿಯ ಮೇಲಿದ್ದ ಪ್ರಭಾವ ಹಾಗೂ ಬಲವನ್ನು ವಿವರಿಸಿ, ನಳನು ಸಂಕಷ್ಟಗಳ ಸರಮಾಲೆಯ ಮಧ್ಯದಲ್ಲಿದ್ದಾಗ ಆತನ ಮಹತ್ವ ಮತ್ತು ಸಾಮರ್ಥ್ಯ ಜಗತ್ತಿನ ಮುಂದೆ ಪ್ರಕಟವಾಯಿತು. ಪಂಚಭೂತಗಳ ಮೇಲೆ ನಳನು ಸಾಧಿಸಿಕೊಂಡಿದ್ದ ನಿಯಂತ್ರಣದಿಂದ ಇದು ಸಾಧ್ಯವಾಯಿತು ಎಂದು ಅಭಿಪ್ರಾಯಪಟ್ಟರು. ತೇಗು ಬಂದ ನಂತರ ಊಟವನ್ನು ನಿಲ್ಲಿಸಬೇಕು ಎನ್ನಲಾಗಿದೆ. ಆದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯ ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ ಉದ್ಘಾಟನಾ ಸಮಾರಂಭ ಹಾಗೂ ಐಸಿಎಐ ಉಡುಪಿ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ CAFY & Super Mega Career Counselling ಕಾರ್ಯಕ್ರಮ ಕಾಲೇಜಿನ ಟಿ. ಮೋಹನ್‌ದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನ ಸಭಾಂಗಣದಲ್ಲಿ ನಡೆಯಿತು. ವೃತ್ತಿ ಮಾರ್ಗದರ್ಶಕರಾಗಿ ಉಡುಪಿ ಶಾಖೆಯ ICAIಯ ಮಾಜಿ ಅಧ್ಯಕ್ಷರಾದ CA. ಲೋಕೇಶ್ ಶೆಟ್ಟಿ ಅವರು ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ್ನು ಉದ್ಘಾಟಿಸಿ, ಚಾರ್ಟರ್ಡ್ ಅಕೌಂಟೆನ್ಸಿ (CA) ವೃತ್ತಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ, ವೃತ್ತಿ ಸಂಬಂಧಿತ ಮಾಹಿತಿಯನ್ನು ಪಡೆದುಕೊಂಡರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ವೃತ್ತಿಜೀವನದ ಬಗ್ಗೆ ಉತ್ತಮ ಗುರಿ ಹೊಂದಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಡಿಕೆ ಮರದ ತಲೆ ಕತ್ತರಿಸುವ ವೇಳೆ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಉಳ್ತೂರು ಗ್ರಾಮದ ಹಲ್ತೂರಿನಲ್ಲಿ ಸಂಭವಿಸಿದೆ ಮೃತರನ್ನು ಉಳ್ತೂರು ಗ್ರಾಮದ ಭುಜಂಗ ಶೆಟ್ಟಿ(56) ಎಂದು ಗುರುತಿಸಲಾಗಿದೆ. ಅವರು ಆ.8ರಂದು ಮನೆಯ ಜಾಗದಲ್ಲಿಯ ಅಡಿಕೆ ಮರ ಮರದ ತಲೆಯನ್ನು ಕತ್ತರಿಸುವಾಗ ಆಕಸ್ಮಿಕವಾಗಿ ಸುಮಾರು 20 ಅಡಿ ಎತ್ತರದಿಂದ ನೆಲಕ್ಕೆ ಬಿದ್ದಿದ್ದರು. ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ತೀವ್ರ ಗಾಯಗಳಾಗಿದ್ದವು. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ.20ರಂದು ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಗೊಂಡಬಳಿಕ ಹಲ್ತೂರಿನ ಮನೆಗೆ ಕರೆತರಲಾಗಿತ್ತು. ಆದರೆ ಸಂಜೆ ಮನೆಯಲ್ಲಿ ಮೃತಪಟ್ಟದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರಿಗೆ ಇಲ್ಲಿನ ಹೋಟೆಲಿನಲ್ಲಿ ಶುಕ್ರವಾರ ಬೆಳಗ್ಗೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಕೊಲೆ‌ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಡಾ. ಮಹೇಂದ್ರ ‌ಕುಮಾರ್ ಶೆಟ್ಟಿಯನ್ನು ತಕ್ಷಣದಿಂದ ಸರಕಾರಿ ಸೇವೆಯಿಂದ‌ ಅಮಾನತುಗೊಳಿಸಿ ರಾಜ್ಯ ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಹಾಗೂ ಶಿಸ್ತು ‌ಪ್ರಾಧಿಕಾರಿ ಗುರುದತ್ ಹೆಗಡೆ ಆದೇಶಿಸಿದ್ದಾರೆ. ಅವರು ಹಿಂದೆ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದು, ಪ್ರಸ್ತುತ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನ್ಯಪರ ಸೇವೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಆ.4 ರಿಂದ ಸೆ.30ರವರೆಗೆ ಒಟ್ಟು 58 ದಿನಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ರಜೆಯಲ್ಲಿದ್ದು, ಈ ಅವಧಿಯಲ್ಲಿ ಆ.21ರಂದು ಕುಂದಾಪುರದ ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಅವರು ಹೊಟೇಲ್‌ನಲ್ಲಿ ಇದ್ದ ಸಂದರ್ಭ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮಾಹಿತಿ ನೀಡಿದ್ದರು. ವೈದ್ಯರು ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ  ಬಾಳ್ಕುದ್ರು ಹಂಗಾರಕಟ್ಟೆ ಇದರ ಆಶ್ರಯದಲ್ಲಿ ವರಮಹಾಲಕ್ಷ್ಮಿ ಪೂಜೆ  ಕಾರ್ಯಕ್ರಮವು ಶುಕ್ರವಾರದಂದು ಸಂಘದ ಆವರಣದಲ್ಲಿ ವಿಜೃಂಭಣೆಯಿಂದ ಜರಗಿತು. ವೇ.ಮೂ ಬಿರ್ತಿ ವೆಂಕಟರಮಣಸೂರ್ಯ ಇವರು ಧಾರ್ಮಿಕ ವಿಧಿವಿಧಾನಗಳನ್ನು ಹಾಗೂ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮವನ್ನು ನೆರವೆರಿಸಿದರು. ಅಪರಾಹ್ನ ಮಹಾ ಅನ್ನಸಂತರ್ಪಣೆ ಪ್ರಸಾದ ವಿತರಣೆ ಕಾರ್ಯಕ್ರಮ ಜರಗಿತು. ಸಂಘದ ಅಧ್ಯಕ್ಷ ವಿಜಯ ಕುಮಾರ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲ ವಾಸುದೇವ ಕೋಟ್ಯಾನ್, ಪ್ರಮುಖರಾದ ರೇಖಾ ಪಿ. ಸುವರ್ಣ, ಕಲಾವತಿ ಆನಂದ್, ಜ್ಯೋತಿ ರವೀಂದ್ರ ಸುವರ್ಣ, ಪ್ರೇಮ ಸತೀಶ್ ಪೂಜಾರಿ, ಸಂಘದ ಪ್ರಮುಖರಾದ ನಾರಾಯಣ ಪೂಜಾರಿ, ಶಂಕರ್ ಪೂಜಾರಿ, ಉಮೇಶ್ ಪೂಜಾರಿ, ಆನಂದ್ ಪೂಜಾರಿ ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಪ್ರಸಿದ್ಧ ದೇಗುಲ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮಗಳು ಜರಗಿದವು.ದೇಗುಲದಲ್ಲಿ ನಡೆದ ಧಾರ್ಮಿಕ ಕಾರ್ಯವನ್ನು ವೇ.ಮೂ ಮಧುಸೂದನ್ ಬಾಯರಿ ನೆರವೇರಿಸಿದರು. ಶ್ರೀದೇವಿಗೆ ವಿಶೇಷ ಅಲಂಕಾರ, ಸಹಸ್ರ ಕುಂಕುಮಾರ್ಚನೆ, ಪೂಜಾ ಕಾರ್ಯಕ್ರಮಗಳು, ಪ್ರಸಾದ ವಿತರಣೆ, ಅಪರಾಹ್ನ 3ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದದಲ್ಲಿ ಭಾಗಿಯಾದರು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸದಸ್ಯರಾದ ರತನ್ ಐತಾಳ್, ಚಂದ್ರಶೇಖರ್ ಆಚಾರ್, ಎಂ.ಶಿವ ಪೂಜಾರಿ, ಸುಧಾ. ಎ.ಪೂಜಾರಿ, ಸುಭಾಷ್ ಶೆಟ್ಟಿ,ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಭಾಗಿಯಾದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ. ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ. ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಬಸವಂತಪ್ಪ ಅವರಿಗೆ ಎರಡು ಪ್ರಮುಖ ಮನವಿ ಪತ್ರಗಳನ್ನು ಸಲ್ಲಿಸಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಇತ್ತೀಚೆಗೆ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಮೂವರು ಯುವಕರ ಕುಟುಂಬಗಳಿಗೆ ತುರ್ತು ಪರಿಹಾರ ಒದಗಿಸುವಂತೆ ಕೋರಿದ್ದಾರೆ. 1) ಮೀನುಗಾರಿಕಾ ಸಂಕಷ್ಟ ಪರಿಹಾರ ನಿಧಿಯಡಿ ಗರಿಷ್ಠ ಪರಿಹಾರಕ್ಕೆ ಒತ್ತಾಯಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಗ್ರಾಮದಲ್ಲಿ ದಿನಾಂಕ 14-10-2025 ರಂದು ಸಂಭವಿಸಿದ ದುರಂತದ ಕುರಿತು ಸಚಿವರ ಗಮನ ಸೆಳೆದ ಸಂಸದರು, ನೊಂದ ಕುಟುಂಬಗಳಿಗೆ ಸಾಂತ್ವನ ನೀಡಲು ವಿಶೇಷ ನೆರವು ಕೋರಿದ್ದಾರೆ: * ಅರಬ್ಬಿ ಸಮುದ್ರದಲ್ಲಿ ಮೀನಿಗೆ ಗಾಳ ಹಾಕುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಕಿರಿಮಂಜೇಶ್ವರ ಗ್ರಾಮದ ಆಶೀಶ್ ದೇವಾಡಿಗ (15 ವರ್ಷ), ಸೂರಜ್ ಪೂಜಾರಿ (16 ವರ್ಷ) ಹಾಗೂ ಸಂಕೇತ್ ದೇವಾಡಿಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಾಗೂ ತಪ್ಪಿತಸ್ಥರ  ಮತ್ತು ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್ ರವರು ರಾಜ್ಯದಲ್ಲಿ 2024-25 ನೇ ಸಾಲಿನಿಂದ 2026-27 ನೇ ಸಾಲಿನ ಜುಲೈವರೆಗೆ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು ತಪ್ಪಿತಸ್ಥರ ವಿರುದ್ಧ ಎಂಎಂ (ಡಿ&ಆರ್ )ಕಾಯ್ದೆ 1957 ಮತ್ತು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994ರ ನಿಯಮಗಳಂತೆ ಮೊಕದ್ದಮೆಗಳನ್ನು ದಾಖಲಿಸಿ ದಂಡವನ್ನು ವಿಧಿಸಿ ಸಂಗ್ರಹಿಸಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನದಿ ಪಾತ್ರದಲ್ಲಿನ ಮರಳು,ಕೆಂಪು ಕಲ್ಲು,ಕಟ್ಟಡ ಕಲ್ಲು ಇತ್ಯಾದಿ ಉಪಖನಿಜಗಳನ್ನು ಅನಧಿಕೃತವಾಗಿ ಗಣಿಗಾರಿಕೆ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಪ್ರಾಯೋಜಕತ್ವದಲ್ಲಿ ಇಂಟರ‍್ಯಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಇಂಟರ‍್ಯಾಕ್ಟ್ ಕ್ಲಬ್‌ನ ಝೋನಲ್ ಚೇರ್ಮನ್ ನಾಗರಾಜ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು. ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ್ ದೇವಾಡಿಗ, ಗಂಗೊಳ್ಳಿ ರೋಟರಿ ಕ್ಲಬ್‌ನ ಇಂಟರ‍್ಯಾಕ್ಟ್ ಚೇರ್ಮನ್ ರತ್ನಾ, ಇಂಟರ‍್ಯಾಕ್ಟ್ ಕೋ -ಆರ್ಡಿನೇಟರ್, ಶಿಕ್ಷಕಿ ಉಷಾ ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ಧರು.

Read More