ಕುಂದಾಪುರ: ಇಲ್ಲಿನ ಶಂಕರ ಕುಂದರ್ ಗುರುಸ್ವಾಮಿಯ 36ನೇ ವರ್ಷದ ಶಬರಿಮಲೈ ಯಾತ್ರೆಯ ಸಂದರ್ಭದಲ್ಲಿ ಅವರನ್ನು ಸ್ವಾಮಿ ದರ್ಶನ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 47ನೇ ಬಾರಿ ಯಾತ್ರೆಯನ್ನು ಕೈಗೊಂಡ ಎಲ್ಐಸಿ ರಘುಚಂದ್ರ ಗುರುಸ್ವಾಮಿ ವಡೇರ ಹೋಬಳಿ ಹಾಗೂ ಕಲಾವಿದ ಸತೀಶ ಪೂಜಾರಿ ಇವರನ್ನು ಸನ್ಮಾನಿಸಲಾಯಿತು. ಶಂಕರ ಗುರುಸ್ವಾಮಿಯವರ 36ನೇ ವರ್ಷದ ಶಬರಿ ಮಲೈಯಾತ್ರೆಯ ಸಂದರ್ಭದಲ್ಲಿ ಸ್ವಾಮಿ ದರ್ಶನದಲ್ಲಿ ಕಲಾವಿದ ಸತೀಶ ಪೂಜಾರಿ ರಚಿಸಿದ ವಿಶೇಷ ಕಲಾಕೃತಿ ಸಾರ್ವಜನಿಕರ ಮನಸ್ಸನ್ನು ಸೊರೆಗೊಂಡಿತು.
Author: ನ್ಯೂಸ್ ಬ್ಯೂರೋ
ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜಿನ ಬಕುಳ ಸಾಹಿತ್ಯ ವೇದಿಕೆಗಳ ಆಶ್ರಯದಲ್ಲಿ ಸಮುದಾಯ ರೆಪರ್ಟರಿಯ ‘ಕಾವ್ಯರಂಗ’ ಪ್ರಯೋಗ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರದರ್ಶಿಸಲಾಯಿತು. ಶಾಸನ ಪದ್ಯಗಳಿಂದ ಹಿಡಿದು ಇತ್ತೀಚಿನವರೆಗಿನ ಕನ್ನಡದ ಕಾವ್ಯವನ್ನು ರಂಗದಲ್ಲಿ ಅಭಿವ್ಯಕ್ತಿಗೊಳಿಸುವ ಈ ರಂಗಪ್ರಯೋಗದಲ್ಲಿ ಕಪ್ಪೆ ಆರಭಟ್ಟನ ಶಾಸನ, ಕವಿರಾಜಮಾರ್ಗ, ಪಂಪನಿಂದ ಮುಂದುವರಿದು ವೈದೇಹಿ, ಪ್ರತಿಭಾ ನಂದಕುಮಾರರವರೆಗಿನ ಮೂವತ್ತೊಂದು ಕಾವ್ಯದ ಹೊಳುಹುಗಳು ಮತ್ತು ಕಥನಗಳು ಈ ಪ್ರಯೋಗದಲ್ಲಿ ವಿದ್ಯಾರ್ಥಿಗಳ ಎದುರಾದವು. ಇವುಗಳಲ್ಲಿ ಕೆಲವನ್ನು ಕಲಾವಿದರು ಹಾಡಿದರು, ಕೆಲವನ್ನು ಅಭಿನಯಿಸಿದರು, ಇನ್ನು ಕೆಲವನ್ನು ವಾಚಿಸಿದರು. ಯಕ್ಷಗಾನದ ಮುಖವಾಡಗಳು ಮತ್ತು ಚೆಂಡೆ ಮದ್ದಲೆಗಳ ಹಿನ್ನೆಲೆಯಲ್ಲಿ ಬರುವ ಕುವೆಂಪುರವರ ರಾಮಾಯಣ ದರ್ಶನಂ ರಂಗಕ್ಕೆ ಅನನ್ಯವಾದ ಗತ್ತನ್ನು ಒದಗಿಸಿದರೆ, ದುಡಿಯ ಸದ್ದಿನೊಂದಿಗೆ ಎದುರಾಗುವ ಕಾರಂತರ ಚೋಮ ವಿದ್ಯಾರ್ಥಿಗಳ ಕಣ್ಣಾಲಿಗಳನ್ನು ತೇವಗೊಳಿಸಿದ. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಮುಂದೆ ಪ್ರದರ್ಶಿತವಾದ ಈ ರಂಗಪ್ರಯೋಗ ಕಾವ್ಯದ ಅಂತಃಸತ್ವಕ್ಕೆ ಧಕ್ಕೆಯಾಗದ ಹಾಗೆ ಸಮೃದ್ಧ ಓದಿನ ಅನುಭವವನ್ನು ರಂಗದ ಮೂಲಕ ಒದಗಿಸಿತು. ಕಾವ್ಯರಂಗ ಪ್ರದರ್ಶನವನ್ನು ಕುಂದಾಪುರದ ಸ.ಪ.ಪೂ ಕಾಲೇಜಿನ…
ಕುಂದಾಪುರ: ವಿಶ್ವವನ್ನು ಪೋಲಿಯೋ ಮುಕ್ತವಾಗಿಸಬೇಕೆಂದು ರೋಟರಿ ಕಳೆದ ಮೂವತ್ತು ವರ್ಷಗಳಿಂದ ಪಣತೊಟ್ಟಿದೆ. ಭಾರತವೂ ಸೇರಿದಂತೆ ಎಲ್ಲಾ ದೇಶಗಳಲ್ಲಿ ಪೋಲಿಯೋ ನಿರ್ಮೂಲನಾ ಕಾರ್ಯಕ್ರಮ ಸಂಪೂರ್ಣವಾಗಿ ಯಶ ಕಂಡಿದ್ದೆ ಆದರೆ ಪಾಕಿಸ್ಥಾನ ಹಾಗೂ ಅಪ್ಘಾನಿಸ್ಥಾನವನ್ನು ಪೋಲಿಯೋ ಮುಕ್ತವಾಗಿಸಲು ಸಾಧ್ಯವಾಗಿಲ್ಲ. ಭಯೋತ್ಪಾದರ ಬೆದರಿಕೆ ಹಾಗೂ ಪೋಲಿಯೋ ಲಸಿಕೆಯ ಕುರಿತ ಅಪಪ್ರಚಾರ ಈ ಕಾರ್ಯಕ್ಕೆ ಅಡ್ಡಿ ಪಡಿಸುತ್ತಿದೆ ಎಂದು ರೋಟರಿ ಜಿಲ್ಲೆ 3180 ಗವರ್ನರ್ ಡಾ.ಭರತೇಶ್ ಆದಿರಾಜ್ ಆತಂಕ ವ್ಯಕ್ತಪಡಿಸಿದರು. ಕುಂದಾಪುರ ರೋಟರಿ ನರ್ಸರಿ ಸ್ಕೂಲ್ ಹಾಲ್ನಲ್ಲಿ ಪತ್ರಕರ್ತರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿ, ಪೋಲಿಯೋ ನಿರ್ಮೂಲನೆ ರೋಟರಿ ಸಂಸ್ಥೆಯ ಮುಖ್ಯ ಗುರಿ. ಭಯೋತ್ಪಾದಕರ ಅಪಪ್ರಚಾರ ಮತ್ತು ಬೆದರಿಕೆ ನಡುವೆಯೋ ಪೊಲಿಯೋ ನಿರ್ಮೂಲನೆಯತ್ತ ರೋಟರಿ ದಿಟ್ಟ ಹೆಜ್ಜೆಯನ್ನಿಟ್ಟಿದೆ. ವಿಶ್ವ ಪೋಲಿಯೋ ಮುಕ್ತವಾಗುವವರೆಗೂ ಪೋಲಿಯೋ ನಿರ್ಮೂಲನೆ ಕಾರ್ಯಕ್ರಮ ಮುಂದುವರಿಯಲಿದೆ ಎಂದು ಹೇಳಿದರು. ವಿಶ್ವ ಭ್ರಾತತ್ವ ಹಾಗೂ ಶಾಂತಿ ಎಂಬ ಧ್ಯೇಯವಾಕ್ಯದೊಂದಿಗೆ ರೋಟರಿ ಮುನ್ನಡೆಯುತ್ತಿದ್ದು ಶಾಂತಿ ದೂತರ ಮೂಲಕ ಪ್ರಪಂಚದಾದ್ಯಂತ ಶಾಂತಿ ಸೌಹಾರ್ದತೆಯನ್ನು ಕಾಯುವ ಕೆಲಸ ಮಾಡಲಾಗುತ್ತಿದೆ. ರೋಟರಿಯ ಶಾಂತಿದೂತ…
ಸುನಿಲ್ ಹೆಚ್. ಜಿ. ಬೈಂದೂರು. ಕುಂದಾಪುರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳ ಪಕ್ಷಾಂತರವೂ ಚುರುಕುಗೊಳ್ಳುತ್ತಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಟಿಕೇಟಿಗಾಗಿ ಈಗಾಗಲೇ ಆಕಾಂಕ್ಷಿಗಳ ತೆರೆಮರೆಯ ಕಸರತ್ತು ನಡೆಯುತ್ತಿದ್ದರೇ, ಯಾರಿಗೆ ಟಿಕೆಟ್ ನೀಡಬಹುದು ಎಂಬ ಲೆಕ್ಕಾಚಾರದಲ್ಲಿ ಪಕ್ಷದ ನಾಯಕರುಗಳು ಮುಳುಗಿದ್ದಾರೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದೇ ಇರುವುದರಿಂದ ಟಿಕೇಟ್ ನೀಡುವುದು ಕೂಡ ಪಕ್ಷಗಳಿಗೆ ಸವಾಲಾಗಿದೆ ಪರಿಣಮಿಸಿದೆ. ಈ ನಡುವೆ ಪಕ್ಷ, ನಾಯಕರುಗಳೊಂದಿಗೆ ಅಸಮಧಾನಗೊಂಡ ಅಭ್ಯರ್ಥಿಗಳ ಪಕ್ಷಾಂತರ, ಪಕ್ಷೇತರವಾಗಿ ಸ್ವರ್ಥಿಸುವುದಕ್ಕೆ ಅಖಾಡ ಸಿದ್ಧಗೊಳ್ಳುತ್ತಿದೆ. [quote font_size=”15″ bgcolor=”#ffffff” bcolor=”#9eba9c” arrow=”yes” align=”right”]* ಬಿಜೆಪಿ ಪಕ್ಷದಲ್ಲಿ ಇಷ್ಟು ವರ್ಷಗಳ ಕಾಲ ಸಕ್ರೀಯವಾಗಿ ತೊಡಗಿಸಿಕೊಂಡು ತನ್ನಿಂದಾದ ಕೆಲಸವನ್ನು ಮಾಡಿದ್ದೇನೆ. ಆದರೆ ಅಲ್ಲಿನ ಕೆಲವು ನಾಯಕರುಗಳ ಗುಂಪುಗಾರಿಕೆ, ಕೆಲಸ ಮಾಡುವವರಿಗೂ ಅವಕಾಶ ನೀಡದಿರುವುದು ನನಗೆ ಬೇಸರ ತರಿಸಿತ್ತು. ಹಾಗಾಗಿ ರಾಜಿನಾಮೆ ನೀಡಿದ್ದೇನೆ. ಮುಂದಿನ ನಡೆ ಸದ್ಯದಲ್ಲಿಯೇ ತಿಳಿಯಲಿದೆ – ಗೌರಿ ದೇವಾಡಿಗ[/quote] ಬಿಜೆಪಿ ಪಕ್ಷದ ಚುನಾಯಿತ ಪ್ರತಿನಿಧಿ, ಉಡುಪಿ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಮನೆ ನಿವೇಶನ, ಕೃಷಿ, ತೋಟಗಾರಿಕೆ, ಆರೋಗ್ಯ, ಸಮಾಜ ಕಲ್ಯಾಣ, ಲೋಕೋಪಯೋಗಿ ಹಾಗೂ ಇತರ ಇಲಾಖೆಗಳ ಪ್ರಗತಿಯ ಬಗ್ಗೆ ಅವಲೋಕಿಸಿದ ಬಳಿಕ ಮಾತನಾಡಿ ಲಭ್ಯವಿರುವ ಸಂಪನ್ಮೂಲಗಳನ್ನು ಸದ್ಭಳಕೆ ಮಾಡಿಕೊಂಡು ಜನರಿಗೆ ಹೆಚ್ಚಿನ ಸೌಲಭ್ಯ ನೀಡುವತ್ತ ಗಮನ ಹರಿಸಬೇಕಿದೆ. ಅಧಿಕಾರಿಗಳು ಈ ಬಗ್ಗೆ ಮತ್ತಷ್ಟು ನಿಗಾವಹಿಸಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು. ತೋಟಗಾರಿಕಾ ಇಲಾಖೆಯನ್ನು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು, ರೈತರಿಗೆ ಅನುಕೂಲ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರೇ, ಕೃಷಿ ಇಲಾಖೆ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ನೀಡಲಾದ ಪರಿಹಾರ, ಭೂ ಸಮೃದ್ಧಿ ಯೋಜನೆ, ಸೇವಾ ಕೇಂದ್ರ ಮುಂತಾದವುಗಳ ಬಗ್ಗೆ ವಿವರಿಸಿದರು. ಅಕ್ಷರ ದಾಸೋಹದಲ್ಲಿ ಅಕ್ಕಿ ಹಾಗೂ ಗೋಧಿಯಲ್ಲಿ ಹುಳುಗಳಿರುವ ಬಗ್ಗೆ ಅಳಲು ತೋಡಿಕೊಂಡು ಅಧಿಕಾರಿ ಪ್ರತಿ ಮೂರು ತಿಂಗಳ…
ಕುಂದಾಪುರ: ಕಾಂಗ್ರೆಸ್ ಸರಕಾರ ನೀಡಿದ ಬಹುಪಾಲು ಭರವಸೆಗಳನ್ನು ಪೂರೈಸಿದ ಸಂತೋಷವಿದೆ. ಇನ್ನಷ್ಟು ಜನಪರ ಕಾರ್ಯಗಳನ್ನು ಮಾಡಲು ಸರಕಾರ ಸಿದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ವಿನಯ್ ಕುಮಾರ್ ಸೊರಕೆ ಹೇಳಿದರು. ಕುಂದಾಪುರ ಕುಂದಾಪುರದ ಆರ್ಎನ್ ಶೆಟ್ಟಿ ಸಭಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಆಶ್ರಯ ಮನೆಗಳಿಗೆ ಬಡ್ಡಿ ಸಮೇತ ಸಾಲು ಕಟ್ಟಲು ಭಾಕಿ ಇರುವವರ ಸಾಲಮನ್ನಾ ಮಾಡಲಾಗಿದ್ದು. ಪ್ರಮಾಣ ಪತ್ರವನ್ನು ಕೂಡ ಹಲವು ಮನೆಗಳಿಗೆ ನೀಡಲಾಗಿದೆ. ಸ್ತ್ರೀ ಶಕ್ತಿ ಸಂಘಗಳಿಗೆ ೫೦೦೦ ಸುತ್ತು ನಿಧಿಯನ್ನು ನೀಡಲಾಗುತ್ತಿದ್ದು. ಈ ಸುತ್ತು ನಿಧಿಯನ್ನು ಐದುಸಾವಿರದಿಂದ ಇಪ್ಪತೈದುಸಾವಿರಕ್ಕೆ ಏರಿಸಲಾಗಿದೆ. ಎಂದರು. ನಂತರ ಜನರಿಂದ ಅಧಿಕಾರಿಗಳಿಗೆ ಪ್ರಶ್ನೆಗಳನ್ನು ಕೇಳಲಾಯಿತು. ಹೊಸ ಪಂಚಾಯತ್ಗಳಿಗೆ ದಾನ ಬಿಡುಗಡೆಯಾಗುತ್ತದೆ ಎಂದರು. ರೇಷನ್ಕಾರ್ಡ್ ವಿತರಣೆ ಮಾಡಿ ಕೆಲವು ದಿನಗಳ ಬಳಿಕ ಅದನ್ನು ರದ್ದುಗೊಳಿಸಲಾಗುತ್ತದೆ. ಇದರಿಂದ ಬಡ ಜನರಿಗೆ ತೊಂದರೆಯಾಗುತ್ತಿದೆ. ಎಂಬ ಪ್ರಶ್ನೆಗೆ ಉತ್ತರಿಸಿದ ಸೊರಕೆ ಈ ಹಿಂದಿನ ಸರ್ಕಾರವಿದ್ದಾಗ ಶೆ. 30ರಷ್ಟು ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲಾಗಿತ್ತು. ನಾವು…
ಬೈಂದೂರು: ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು, ಅವುಗಳಿಗೆ ಹಂತ ಹಂತವಾಗಿ ಜಾರಿಗೆ ತರಲಗುತ್ತಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಖಂಬದಕೋಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಸಭಾಭವನಕ್ಕೆ ಸರಕಾರದಿಂದ ಘೋಷಣೆಯಾಗಿರುವ ರೂ. ಒಂದು ಕೋಟಿ ಮೊತ್ತದಲ್ಲಿ ಎರಡನೇ ಕಂತಿನ ರೂ. 50 ಲಕ್ಷದ ಚೆಕ್ ಹಸ್ತಾಂತರಿಸಿ ಮಾತನಾಡಿದರು. ಮೊದಲ ಕಂತು ರೂ. 25 ಲಕ್ಷ ಈಗಾಗಲೆ ನೀಡಿದ್ದು, ಕೊನೆಯ ಹಂತದ ರೂ. 25 ಲಕ್ಷಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು. ಸಂಘದ ಅಧ್ಯಕ್ಷರು ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಇನ್ನೂ ಹೆಚ್ಚಿನ ಅನುದಾನದ ಬೇಡಿಕೆಯಿಟ್ಟಿದ್ದು, ಮುಖ್ಯಮಂತ್ರಿಯೋದಿಗೆ ಸಮಾಲೋಚಿಸಿ ಈ ಕುರಿತು ನಿರ್ಧರಿಸಲಾಗುವುದು ಎಂದರು. ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘದ ಅಧ್ಯಕ್ಷ ನವೀನಚಂದ್ರ ಉಪ್ಪುಂದ ಅಧ್ಯಕ್ಷತೆವಹಿಸಿದ್ದರು. ಈ ಭಾಗದಲ್ಲಿ ಉಪ್ಪುನೀರಿನ ಸಮಸ್ಯೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಇಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಿ, ತಡೆಗೋಡೆ ನಿರ್ಮಿಸಬೇಕು ಮತ್ತು ಈ ಭವನಕ್ಕೆ ರೂ. ೬ ಕೋಟಿ ವೆಚ್ಚ ಅಂದಾಜಿಸಲಾಗಿದ್ದು, ಹಣದ…
ಕುಂದಾಪುರ: ಸತತ ಮೂವತ್ತು ವರ್ಷಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯನಾಗಿ ಜನಪ್ರಿಯರಾಗಿದ್ದ ಗಂಗೊಳ್ಳಿಯ ಬೀಚ್ ರಸ್ತೆ ನಿವಾಸಿ ಎಡ್ವರ್ಡ್ ಕಾರ್ಡಿನ್(63) ಎಂಬವರು ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಚರ್ಚ್ ರಸ್ತೆಯ ಮಲ್ಯರಬೆಟ್ಟು ಸ್ಮಶಾನ ಬಳಿ ಮೀನು ಸಾಗಾಟದ ಇನ್ಸುಲೇಟರ್ ಲಾರಿಯೊಂದು ಗುದ್ದಿ ಸಾವಪ್ಪಿದ್ದಾರೆ. ಸಂಜೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳ ಸಹಿತ ಓರ್ವ ಹೆಣ್ಣು ಮಗಳನ್ನು ಕಾರ್ಡಿನ್ ಅಗಲಿದ್ದಾರೆ. ಬಂದರು ರಸ್ತೆಯಲ್ಲಿ ಇಸ್ತ್ರಿ ಅಂಗಡಿ ಹೊಂದಿದ್ದ ಕಾರ್ಡಿನ್ ಗಂಗೊಳ್ಳಿ ಇಗರ್ಜಿಯ ಚಟುವಟಿಕೆಗಳಲ್ಲಿ ತನ್ನ ಇಳಿ ವಯಸ್ಸಲ್ಲೂ ಸಕ್ರಿಯರಾಗಿದ್ದರು. ಎರಡು ಬಾರಿ ಗಂಗೊಳ್ಳಿ ಚರ್ಚ್ ಪ್ಯಾರಿಶ್ ಕೌನ್ಸಿಲ್ ಸದಸ್ಯರಾಗಿ ಸೇವೆಸಲ್ಲಿಸಿದ್ದು, ಜನಪ್ರಿಯರಾಗಿದ್ದರು. ದಾಖಲೆ ಎಂಬಂತೆ ಸತತವಾಗಿ ಆರು ಬಾರಿ ಗ್ರಾ.ಪಂ. ಸದಸ್ಯನಾಗಿ ಆಯ್ಕೆ ಯಾಗುತ್ತಿದ್ದ ಇವರು ಪರಿಸರದಲ್ಲಿ ಎಲ್ಲರಿಗೂ ಬೇಕಾದವರಾಗಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದ್ದು, ವಿದೇಶದಲ್ಲಿರುವ ಮಕ್ಕಳು ಆಗಮಿಸಿದ ನಂತರ ಅಂತ್ಯ ಕ್ರಿಯೆ ಜರಗಲಿದೆ.. ಲಾರಿ ಚಾಲಕ ಸತೀಶ್ ವಿರುದ್ಧ ಗಂಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಣ ಹಾಗೂ ಚಿನ್ನಕ್ಕಾಗಿ ಪಕ್ಕದ ಮನೆಯ ಸಂಬಂಧಿಗಳನ್ನೇ ಇರಿದು ಕೊಲೆಗೆ ಯತ್ನಿಸಿದ ಅಮಾನುಷ ಕೃತ್ಯವೊಂದು ಇಂದು ಮುಂಜಾನೆ ವೇಳೆಗೆ ತಾಲೂಕಿನ ಕೋರ್ಗಿ ಗ್ರಾಮದ ಹೊಸ್ಮಠ ಎಂಬಲ್ಲಿ ನಡೆದಿದೆ. ಕೋರ್ಗಿ ಗ್ರಾಮದ ಹೊಸ್ಮಠ ಮಕ್ಕಿಮನೆ ನಿವಾಸಿಗಳಾದ ಕೃಷ್ಣಪ್ಪ ಶೆಟ್ಟಿ (75), ಕೊರಗಮ್ಮ ಶೆಡ್ತಿ(85), ಚಂದ್ರಮ್ಮ ಶೆಡ್ತಿ(38) ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿದ ರಂಜಿತ್ ಶೆಟ್ಟಿ (25)ಯನ್ನು ಬಂಧಿಸಲಾಗಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಘಟನೆಯ ವಿವರ: ಬೆಳಗಿನ ಜಾವ 3:30ರ ಸುಮಾರಿಗೆ ಪಕ್ಕದ ಚಿಕ್ಕಮ್ಮನ ಮನೆಯ ಬಳಿ ಬಂದ ರಂಜಿತ್ ಶೆಟ್ಟಿ ಹೊಟ್ಟೆ ನೋವಿನ ನೆಪವೊಡ್ಡಿ ಬಾಗಿಲು ತೆರೆಯುವಂತೆ ಬೇಡಿಕೊಂಡಿದ್ದಾರೆ. ಮೊದಲಿ ಅನುಮಾನಗೊಂಡ ಮನೆಯವರು ಆತ ಅಂಗಲಾಚುತ್ತಿರುವುದನ್ನು ಕಂಡು ಬಾಗಿಲು ತೆರೆಯುತ್ತಾರೆ. ಮನೆಯೊಳಕ್ಕೆ ಬಂದ ರಂಜಿತ್ ಶೆಟ್ಟಿ ಮನೆಯಲ್ಲಿದ್ದ ಚಂದ್ರಮ್ಮ ಶೆಡ್ತಿ, ಕೊರಗಮ್ಮ ಶೆಡ್ತಿ ಹಾಗೂ ಕೃಷ್ಣಪ್ಪ ಶೆಟ್ಟಿ ಅವರ ಮೇಲೆ ಏಕಾಏಕಿ ಕತ್ತಿಯಿಂದ ಹಲ್ಲಿಗೆ ಮುಂದಾಗಿದ್ದಾನೆ. ಹಠಾತ ಬೆಳವಣಿಗೆಯಿಂದ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಮನಸೋ…
ಕುಂದಾಪುರ: ಜಿಎಸ್ಬಿ ಸಭಾ ಕಲ್ಯಾಣಪುರ ಇವರ ಆಶ್ರಯದಲ್ಲಿ ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ಜರಗಿದ ಜಿಎಸ್ಬಿ ಸಮಾಜಬಾಂಧವರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಆಹ್ವಾನಿತ ತಂಡಗಳ ಹೊನಲು ಬೆಳಕಿನ 40 ಗಜಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಹರಿಓಂ ಕ್ರಿಕೆಟ್ ತಂಡವು ಕಲ್ಯಾಣಪುರದ ಕೆಎಫ್ಸಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. 2015ನೇ ಸಾಲಿನಲ್ಲಿ ನಡೆದ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಕೂಡ ಗಂಗೊಳ್ಳಿಯ ಹರಿಓಂ ಕ್ರಿಕೆಟ್ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತ್ತು.
