ಮೂಡುಬಿದಿರೆ: ಒಂದಲ್ಲಾ ಒಂದು ಕಾರಣಗಳಿಗಾಗಿ ವಿಶಿಷ್ಯತೆಯನ್ನು ಕಾಯ್ದುಕೊಂಡು ಬಂದಿರುವ ಆಳ್ವಾಸ್ ನುಡಿಸಿರಿ ಕಲೆ-ಸಾಹಿತ್ಯ-ಸಂಸ್ಕೃತಿಗೆ ನೀಡಿದ ಕೊಡುಗೆ ಅಪಾರ. ಆಧುನಿಕತೆಗೆ ಸಿಕ್ಕಿ ಅದೆಷ್ಟೋ ಕಲೆಗಳು ನುಡಿಯಲ್ಲಿ ಸ್ಥಾನ ಪಡೆಯುವುದು ವಿಶೇಷ. 12ನೇ ಆಳ್ವಾಸ್ ನುಡಿಸಿರಿಯಲ್ಲಿ ನಾವು ಯಾವುದೇ ಮೂಲೆಗೆ ಹೋದರೂ ಸಹ ಅಲ್ಲಿ ಭಾವಗೀತೆ, ಜಾನಪದ ಗೀತೆ, ದಾಸರ ಕೀರ್ತನೆಗಳು ನಮ್ಮ ಕಿವಿಗೆ ಇಂಪನ್ನು ಬೀರುತ್ತಿವೆ. ಇದಕ್ಕೆ ಕಾರಣೀಭೂತರು ಆವರಣದ ವಿವಿದೆಡೆಗಳಲ್ಲಿ ಕಾಣಸಿಗುವ ಕೀರ್ತನ ಗಾಯಕರು. ಶಿವಕುಮಾರ ಬಿರಾಲಿಯವರ ನೇತೃತ್ವದಲ್ಲಿ ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಕೊಪ್ಪಳ, ಧಾರವಾಡ ಹೀಗೆ ನಾನಾ ಜಿಲ್ಲೆಗಳಿಂದ ಒಟ್ಟು ಎಂಟು ತಂಡಗಳು ಆಳ್ವಾಸ್ ನುಡಿಸಿರಿಯ ಆವರಣಕ್ಕೆ ಆಗಮಿಸಿವೆ. ಇವರು ಬೆಳಗ್ಗೆ ಎಚಿಟರಿಂದ ಸಂಜೆ ಐದು ಗಂಟೆಯವರೆಗೆ ತಮ್ಮ ಗಾಯನದ ಕಂಪನ್ನು ಪಸರಿಸುತ್ತಿದ್ದಾರೆ. – ಅಪಾರ ಉಜಿರೆ
Author: ನ್ಯೂಸ್ ಬ್ಯೂರೋ
ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ರತ್ನಾಕರ ವರ್ಣ ವೇದಿಯಕೆ ನಾಡೋಜ ಕಯ್ಯಾರ ಕಿಂಞಣ್ಣ ರೈ ಸಭಾಂಗಣದಲ್ಲಿ ಬೆಂಗಳೂರು ದಿವಾಕರ ಕಶ್ಯಪ್ ಮತ್ತು ಬಳಗದಿಂದ ನಡೆದ ಸಂಗೀತ ಸಾಧನಾ ಕಾರ್ಯಕ್ರಮ ಮುಂಜಾನೆಯ ಚಹಾ ಸವಿದು ಕುಳಿತವರಿಗೆ ಇಂಪು ನೀಡಿತು.
ಬೈಂದೂರು: ಇಲ್ಲಿನ ಪ್ರಸಿದ್ದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಗುರುವಾರ ಸಡಗರ ಸಂಭ್ರಮದಿಂದ ಜರುಗಿತು. ದೇವಳದ ಕಾರ್ಯನಿರ್ವಹಣಾಕಾರಿ ಟಿ. ಜಿ. ಸುಧಾಕರ್ ಅವರ ಉಸ್ತುವಾರಿ ಹಾಗೂ ಗೋಕರ್ಣದ ತಂತ್ರಿ ಹಿರೇಗಂಗೆ ಗಣಪತಿ ಭಟ್ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಮಧ್ಯಾಹ್ನ ದೇವಳದ ಸಭಾಭವನದಲ್ಲಿ ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಬಳಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ವಿಶೇಷ ಆಸಕ್ತಿಯಿಂದ ಹೆಚ್ಚಿನ ಮಹಿಳೆಯರು ಏಲಂನಲ್ಲಿ ಭಾಗವಹಿಸಿ ಪ್ರಸಾದ ರೂಪದಲ್ಲಿ ಸೀರೆಗಳನ್ನು ಖರೀದಿಸಿದರು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು. ಈ ಸಾಲಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ನ.೨೧ರಂದು ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ದೇವಳದ ಮನವಿ…
ಮೂಡಬಿದಿರೆ: ಪುತ್ತಿಗೆ ಸಭಾಂಗಣದಲ್ಲಿ ನುಡಿಸಿರಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ಅತಿಥಿಗಳನ್ನು ಕರೆದೊಯ್ಯಲು ಆಯೋಜಿಸಲಾಗಿದ್ದ ಭವ್ಯ ಮೆರವಣಿಗೆಯ ನುಡಿಸಿರಿಯ ಸೊಬಗನ್ನು ಇನ್ನಷ್ಟು ಹೆಚ್ಚಿಸಿತ್ತು. ಸುಮಾರು 50ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಿದ್ದವು. ಗರ್ನಲ್, ಪೋಲಿಸ್ ಬ್ಯಾಂಡ್, ನಂದಿ ಧ್ವಜ, ಪಕ್ಕಿನಿಶಾನೆ, 40 ತಟ್ಟಿರಾಯ, ಶಂಖ, 25 ಕೊಂಬು, 15 ಚೆಂಡೆ, ಆಟಿಕಳೆಂಜ, ರಮೇಶ್ ಕಲ್ಲಡ್ಕ ಅವರ ಕೀಲು ಕುದುರೆ, ಕರಗ, ಕೊಡೆಗಳು, ಪೂತನಿ, ಯಕ್ಷಗಾನ (ಬಡಗು, ತೆಂಕು), ಮಂಗಳೂರು ಡೋಲು, ಗೊರವರ ಕುಣಿತ, ಸೋಮನ ಕುಣಿತ, ಕಂಗೀಲು, ಪೂಜಾಕುಣಿತ (ದೇವರಾಜ್ ಮಂಡ್ಯ), ವೀರಭದ್ರನ ಕುಣಿತ, ಚಿತ್ರದುರ್ಗ ಬ್ಯಾಂಡ್ ಸೆಟ್, ಕೊಡಗಿನ ಉಮ್ಮತಾಟ್, ದುಡಿಕುಣಿತ, ಬೆಂಡರ ಕುಣಿತ, ತ್ರಿವರ್ಣ ಧ್ವಜ, ಕೇರಳದ ದೇವರ ವೇಷ, ಕುಂದಾಪುರ ಡೋಲು, ಭಜನಾ ತಂಡ, ಭಜನೆಗಾರರು, ಶ್ರೀಲಂಕಾ ಕಲಾವಿದರು, ಲಂಬಾಣಿ, ಬೀದಿ ಜಾದೂಗಾರರು+ಸುಡುಗಾಡು ಸಿದ್ಧರು, ಬಿಜಾಪುರ, ಬಾಗಲಕೋಟೆಯ ಉಡುಪುಗಳು, ಮೈಸೂರಿನ ಪೇಟ, ಕೋಟು, ಕಚ್ಚಾ, ಗುಮ್ಟೆ ಕುಣಿತ, ಹಗಲು ವೇಷ, ಸ್ಕೌಟ್ ಗೈಡ್ಸ್, ನಗಾರಿ(ಮಂಜು…
ಮೂಡುಬಿದಿರೆ: ಸಮಾಜದ ಇತರರಿಗೆ ತೊಂದರೆಯಾಗದಂತೆ ಬದುಕುವುದು ನಿಜವಾದ ವ್ಯಕ್ತಿ ಸ್ವಾತಂತ್ರ್ಯವೆನಿಸಕೊಳ್ಳುತ್ತದೆ. ನಮ್ಮ ಮಾತುನಂತೆ ನಡೆವಳಿಕೆ ಕಂಡುಬರುತ್ತಿದ್ದರೆ ಇದು ಸಾಧ್ಯವಾಗುತ್ತದೆ. ಅಭಿವ್ಯಕ್ತಿಯ ಸ್ವಾತಂತ್ರ್ಯವು ವ್ಯಕ್ತಿಸ್ವಾತಂತ್ರ್ಯದ ಹಾಗೆ ಪ್ರತಿಯೊಬ್ಬರಿಗೂ ದತ್ತವಾದ್ದು, ನಿಜ. ಆದರೆ ಇವಕ್ಕೆ ಗಡಿರೇಖೆಗಳು, ಗೊತ್ತುಪಾಡುಗಳು ಇರುವುದಿಲ್ಲವೇ ಎಂದು ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರೀ ಪ್ರಶ್ನೆಸಿದರು ಅವರು ಮೂಡುಬಿದಿರೆ ವಿದ್ಯಾಗಿರಿಯಲ್ಲಿ ನಡೆಯುವ ನಾಲ್ಕು ದಿನಗಳ ಕನ್ನಡ ನಾಡು ನುಡಿಯ ಸಾಂಸ್ಕೃತಿಕ ಸಮ್ಮೇಳನ ಆಳ್ವಾಸ್ ನುಡಿಸಿರಿ 2015ಕ್ಕೆ ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಚಾಲನೆ ದೊರೆತ ಬಳಿಕ ನಡೆದ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷತೆ ವಹಿಸಿ ಮಾತನಾಡಿದರು. ಬುದ್ಧಿಜೀವಿಗಳ, ವಿಚಾರವಾದಿಗಳ, ಸಾಹಿತಿಗಳ ಮೇಲಣ ಹಲ್ಲೆಗಳು ಅತ್ಯಂತ ದುಃಖಕರ; ಖಂಡನಾರ್ಹ, ಶಿಕ್ಷಾರ್ಹ. ಅನ್ಯಾಯವಾಗಿ ಈಚೆಗೆ ನಮ್ಮ ನಡುವಿನ ಕ್ರಿಯಾಶಾಲಿ ಸಂಶೋಧಕಮಿತ್ರ ಎಂ.ಎಂ. ಕಲಬುರ್ಗಿಯವರನ್ನು ನಾವು ಕಳೆದುಕೊಂಡೆವು. ಸಮಾಜ ಸಾಹಿತಿಗಳ ಹಿತ ಕಾಯಬೇಕು; ಸಾಹಿತಿಗಳು ಸಮಾಜದ ಹಿತ ಕಾಯಬೇಕು. ಎರಡು ಕಡೆಗೂ ತಾಳ್ಮೆ ಸಂಯಮ ಸಮಾಧಾನಗಳು ಅವಶ್ಯವಾಗಿರಬೇಕು. ಸರ್ಕಾರದ ನಾಯಕತ್ವವೂ ಸಾಮಾಜಿಕನಾಯಕತ್ವವೂ ಒಗ್ಗೂಡಿ ಶ್ರಮಿಸಬೇಕು…
ಮೂಡುಬಿದಿರೆ: ಸಾಹಿತ್ಯ-ಸಂಗೀತ ಇತರ ಲಲಿತ ಕಲೆಗಳು ಮನುಷ್ಯನ ವ್ಯಕ್ತಿತ್ವವನ್ನು ಪರಿಷ್ಕರಿಸಿ, ಅತನಲ್ಲಿನ ದುಷ್ಟಶಕ್ತಿಗಳನ್ನು ನಾಶಗೊಳಿಸಿ ಮನಸ್ಸನ್ನು ಪರಿಶುದ್ಧಗೊಳಿಸಿ ಅವನನ್ನು ದೈವತ್ವದೆಡೆಗೆ ಕರೆದೊಯ್ಯುವ ಸಾಧನಗಳಾಗಿವೆ. ಎಲ್ಲೆಡೆ ತಾಂಡವವಾಡುತ್ತಿರುವ ಅಶಾಂತಿ, ಅಸಹನೆ, ಅಸಹಿಷ್ಣುತೆ ಇತ್ಯಾದಿ ಅನಿಷ್ಟಗಳನ್ನು ಸಮರ್ಥವಾಗಿ ಎದುರಿಸಿ ಹಿಮ್ಮೆಟ್ಟಿಸಲು ಅವಶ್ಯವಿರುವ ಮಾನಸಿಕ ಸ್ಥೈರ್ಯ ಪಡೆಯಲು ಇವೇ ಪೂರಕವಾದುದು. ಈ ನಿಟ್ಟಿನಲ್ಲಿಯೂ ನುಡಿಸಿರಿಯಂತಹ ಕಾರ್ಯಕ್ರಮಗಳು ಮುಖ್ಯವೆನಿಸುತ್ತದೆ ಎಂದು ಸಾಹಿತಿ ಡಾ. ವೀಣಾ ಶಾಂತೇಶ್ವರ ಹೇಳಿದರು. ಅವರು ಮೂಡುಬಿದಿರೆ ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಕನ್ನಡ ನಾಡು ನುಡಿಯ ಸಾಂಸ್ಕೃತಿಕ ಸಮ್ಮೇಳನ ಆಳ್ವಾಸ್ ನುಡಿಸಿರಿ ೨೦೧೫ ಉದ್ಘಾಟಿಸಿ ಮಾತನಾಡಿದರು. ಹೊಸದಕ್ಕಾಗಿ ಹುಡಕಾಟ ಮನುಷ್ಯನ ಮೂಲಭೂತ ಸ್ವಭಾವ. ಸಾಹಿತ್ಯದಲ್ಲಷ್ಟೇ ಅಲ್ಲದೇ ವಿಜ್ಞಾನ-ಕೃಷಿ-ಕೈಗಾರಿಕೆ-ಶಿಕ್ಷಣ ಎಲ್ಲಾ ಕ್ಷೇತ್ರಗಳಲ್ಲಿಯೂ ಎಲ್ಲಾ ಕಾಲಗಳಲ್ಲಿಯೂ ಕ್ರಿಯಾಶೀಲ ಮನಸ್ಸುಗಳು ಹೊಸತನಕ್ಕಾಗಿ, ಭಿನ್ನತೆಗಾಗಿ, ಅನನ್ಯತೆಗಾಗಿ, ಅಸ್ಮಿತೆಗಾಗಿ, ಹುಡುಕಾಟ ನಡೆಸಿಯೇ ಇರುತ್ತವೆ. ಸಾಹಿತ್ಯದೊಳಗಂತೂ ‘ಹಳೆಯಸಾಹಿತ್ಯ’, ‘ಆಧುನಿಕ ಸಾಹಿತ್ಯ’ ಅಂತನ್ನುವುದು ವಿಶ್ಲೇಷಣೆಯ ಅನುಕೂಲಕ್ಕಾಗಿ ನಾವು ಕೊಟ್ಟಿರುವ ಕಾಲಸೂಚಕ ವಿಶೇಷಣಗಳಷ್ಟೇ. ಪ್ರತಿಯೊಂದು ಕಾಲಘಟ್ಟದ ಶ್ರೇಷ್ಠ ಸಾಹಿತ್ಯವೂ ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಧನುರ್ ಲಗ್ನ ಸುಮೂಹರ್ತದಲ್ಲಿ ಬೆಳಗ್ಗೆ 10.45ರಿಂದ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿ ಪ್ರಸನ್ನ ಕುಮಾರ ಐತಾಳ್ ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಸಂಜೆ 5.15ಗಂಟೆಗೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಳ್ಳುತ್ತದೆ. ಅಲೆವೂರು ಶ್ರೀ ವಿಷ್ಟುಪೂರ್ತಿ ಸೇವಾ ಬಳಗದವರ ಚಂಡೆ ವಾದನ, ಹಾಗೂ ಕೆರಳ ಚಂಡೆ ವಾದನ, ಉಡುಪಿಯ ಮಂಜುಷಾ ಮಹಿಳಾ ಚಂಡೆ ಬಳಗ ರಥೋತ್ಸವದ ಮೆರಗು ಹೆಚ್ಚಿಸಿದ್ದವು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ದಾವಣಗರೆಯ ಕೆ.ವಿ. ಆನಂದರಾವ್ ಮತ್ತು ಮಕ್ಕಳಿಂದ ಉಚಿತ ಪಾನಕ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ಆಂಜನೇಯ ದೇವಸ್ಥಾನದ ಬಳಿ ಬೈಂದೂರು ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಬರುತ್ತಿದ್ದ ಸೈಕಲ್ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ, ಸೈಕಲ್ ಸವಾರ ನಾಗೂರು ನಿವಾಸಿ ಸುರೇಶ್ ಎಂಬುವವರ ಮಗ ನಾಗೇಶ್(16) ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಸಹಸವಾರ ಅಕ್ಷಯ(16) ಗಾಯಗೊಂಡ ಘಟನೆ ಸಂಜೆ ವರದಿಯಾಗಿದೆ. ಘಟನೆಯ ವಿವರ: ಕಿರಿಮಂಜೇಶ್ವರ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾಗಿರುವ ನಾಗೇಶ್ ಹಾಗೂ ಅಕ್ಷಯ್ ತರಗತಿ ಅವಧಿಯ ಬಳಿಕ ಗ್ರೂಫ್ ಸ್ಟಡಿ ಮುಗಿಸಿಕೊಂಡು ರಾ.ಹೆ.66ರಲ್ಲಿ ನಾಗೂರು ಆಂಜನೇಯ ದೇವಸ್ಥಾನದ ಸಮೀಪದ ತಮ್ಮ ಮನೆಗೆ ತೆರಳುತ್ತಿದ್ದರು. ಇದೇ ವೇಳೆ ಮಂಗಳೂರಿನಿಂದ ಶಿವಮೊಗ್ಗ ಹೊರಟ್ಟಿದ್ದ ಸ್ವಿಫ್ಟ್ ಕಾರು ಒಂದೇ ಸಾರಿ ಬಲಕ್ಕೆ ಚಲಾಯಿಸಿದ್ದರಿಂದ ಎದುರಿಗಿದ್ದ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ನಾಗೇಶ್ ಸ್ಥಳದಲ್ಲಿಯೇ ಮೃತಪಟ್ಟರೇ, ಹಿಂದೆ ಕುಳಿತಿದ್ದ ಅಕ್ಷಯ್ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.(ಕುಂದಾಪ್ರ ಡಾಟ್ ಕಾಂ ಸುದ್ದಿ) ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಬಳಿಕ ನಿಲ್ಲಿಸದೇ ಮುಂದೆ…
ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯದ ಹತ್ತನೇ ವರ್ಷದ ಸಂಭ್ರಮದ ಪ್ರಯುಕ್ತ ಕೋಟೇಶ್ವರದ ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್ನಲ್ಲಿ ದಶಾರ್ಪಣಂ ಎಂಬ ವಿನೂತನ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ನೀರಿನಲ್ಲಿ ಹಣತೆಯನ್ನು ತೇಲಿಸಿ ಕಾರ್ಯಕ್ರಮದ ಉಧ್ಘಾಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ ನಮ್ಮ ಪೂರ್ವಜರು ಕಲೆಯನ್ನು ನಮ್ಮ ಸಂಪ್ರದಾಯ ಹಾಗೂ ಶಿಕ್ಷಣದೊಂದಿಗೆ ಸೇರಿಸಿ ಶಾಸ್ತ್ರೀಯ ಮತ್ತು ಜಾನಪದ ಚೌಕಟ್ಟನ್ನು ನಮಗೆ ಒದಗಿಸಿ ಕೊಟ್ಟಿದ್ದಾರೆ. ಪ್ರದೇಶಗಳಿಗನುಗುಣವಾಗಿ, ಜನ ಸಮುದಾಯಗಳಿಗನುಗುಣವಾಗಿ ನಮ್ಮಲ್ಲಿ ಹಲವು ಸಂಸ್ಕೃತಿ ಹಾಗೂ ಕಲೆಗೆ ಬಹಳಷ್ಟು ಒತ್ತು ನೀಡಲಾಗುತ್ತಿದೆ. ನಮ್ಮೆಲ್ಲಾ ಶಿಕ್ಷಣಗಳ ಹಂತದಲ್ಲಿ ನಮ್ಮ ಕಲೆಯನ್ನು ಮುಂದೆಯೂ ಜೋಡಿಸಿಕೊಂಡು ಹೋಗಬೇಕಾದ ಅಗತ್ಯವಿದೆ. ನಮ್ಮ ಬದುಕಿನ ಕಾಲಘಟ್ಟದಲ್ಲಿ ಭರತನಾಟ್ಯಕ್ಕೆ ನೂರು ವರ್ಷಗಳ ಇತಿಹಾಸದಲ್ಲಿ ಆರಂಭದಿಂದ ಇವತ್ತಿನ ವರೆಗೆ ಹಂತ ಹಂತವಾಗಿ ಬೆಳೆಯುತ್ತಾ ಹೋಗಿದೆ ಎನ್ನುವುದನ್ನು ಗಮನಿಸಿದ್ದೇವೆ. ಅಂದು ಕಲೆ ಹೇಗಿತ್ತು, ಇಂದು ಹೇಗಿದೆ ಎನ್ನುವುದನ್ನು ನಾವು ಅವಲೋಕಿಸಿದರೆ ಕಲೆಗೆ ಬಹಳಷ್ಟು ಗೌರವ ದೊರಕುತ್ತಿದೆ ಎನ್ನುವುದು ಗಮನಾರ್ಹ.…
ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಕುಂದಪ್ರಭ ಕುಂದಾಪುರ, ಸಾಹಿತ್ಯ ವೇದಿಕೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಯು.ಶೇಷಗರಿ ಶೆಣೈ ಸ್ಮರಣಾರ್ಥ ಆಯೋಜಿಸಿದ್ದ ಸವಿ-ನುಡಿ ಹಬ್ಬ 2015ಕಾರ್ಯಕ್ರಮದಲ್ಲಿ ಸಾಹಿತಿ ಜಯಂತ ಕಾಯ್ಕಿಣಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉದ್ಯಮಿಗಳಾದ ದತ್ತಾನಂದ ಗಂಗೊಳ್ಳಿ, ಪ್ರಶಾಂತ ಕುಂದರ್ ಕೋಟ, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಕುಂದಪ್ರಭ ಸಂಪದಕ ಯು.ಎಸ್.ಶೆಣೈ, ಕಾಲೇಜಿನ ಪ್ರಾಂಶುಪಾಲ ಆರ್.ಎನ್.ರೇವಣ್ಕರ್, ಎಸ್.ವಿ.ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಕವಿತಾ ಎಂ.ಸಿ., ಪ್ರೌಢಶಾಲೆಯ ಉಪಪ್ರಾಂಶುಪಾಲ ವಾಮನದಾಸ ಭಟ್, ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದರು.
