ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ಕಾಂಗ್ರೆಸ್ ಪಕ್ಷದ ಮುಖಂಡ, ಉಪ್ಪುಂದದ ಉದ್ಯಮಿ ಜಿ. ಗೋಕುಲ ಶೆಟ್ಟಿ ಉಪ್ಪುಂದ ಅವರ ಮನೆಗೆ ಆದಾಯ ಇಲಾಖೆಯ ಅಧಿಕಾರಿಗಳು ಶುಕ್ರವಾರ ಮುಂಜಾನೆ ದಾಳಿ ನಡೆಸಿದ್ದು, ಬರಿಗೈಯಲ್ಲಿ ವಾಪಾಸ್ಸಾಗಿದ್ದಾರೆ. ಗೋಕುಲ ಶೆಟ್ಟಿಯವರನ್ನು ಮನೆಯಲ್ಲಿರಿಸಿಕೊಂಡು ಅವರ ಆಪ್ತರನ್ನು ಕೂಡ ಮನೆಗೆ ಕರೆಸಿಕೊಂಡಿದ್ದಾರೆ. ಚುನಾವಣೆಯ ಸಮಯದಲ್ಲಿ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಮುಖಂಡನನ್ನು ಕೇಂದ್ರಿಕರಿಸಿಕೊಂಡು ನಡೆಯುತ್ತಿರುವ ಈ ದಾಳಿಯ ಬಗ್ಗೆ ಅನುಮಾನ ಮೂಡತೊಡಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಬಿಜೆಪಿ ಪ್ರೇರಿತ ದಾಳಿ: ಕೆ. ಗೋಪಾಲ ಪೂಜಾರಿ ದಾಳಿಯ ಬಗ್ಗೆ ಬೈಂದೂರು ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಪ್ರತಿಕ್ರಿಯಿಸಿ ಕೇಂದ್ರ ಸರಕಾರದ ಆದಾಯ ತೆರಿಗೆ ಅಧಿಕಾರಿಗಳನ್ನು ಬಳಸಿಕೊಂಡು ಕಾಂಗ್ರೆಸ್ ಮುಖಂಡರ ಮನೆಯ ಮೇಲೆ ದಾಳಿ ನಡೆಸುತ್ತಿದೆ. ಇದು ಅದರ ಮುಂದುವರಿದ ಭಾಗ. ಬಂದೂರು ಕ್ಷೇತ್ರದಲ್ಲಿ ಬಿಜೆಪಿಯವರಿಗೆ ಸೋಲುವುದು ಖಚಿತವಾಗಿದೆ. ಸೋಲಿನ ಭೀತಿಯಿಂದ ಹತಾಶರಾದ ಮುಖಂಡರು ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಕ್ಷೇತ್ರದ ಮತದಾರರು ಪ್ರಗತಿಗೆ ಮನ್ನಣೆ ನೀಡುತ್ತಾರೆಯೇ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರದ ರೊಜರಿ ಮಾತಾ ಇಗರ್ಜಿಯ ಆವರಣದೊಳಗೆ, ಲೂರ್ದ ಮಾತೆಯ ನೂತನ ಗ್ರೊಟ್ಟೊವನ್ನು (ಗುಹೆ) ಉದ್ಘಾಟನೆ ಮತ್ತು ಆಶಿರ್ವಚನ ಕಾರ್ಯಕ್ರಮ ಮೇರಿ ಮಾತೆಗೆ ಸಮರ್ಪಿಸಲ್ಪಟ್ಟ ಮೇ ತಿಂಗಳ ಮೊದಲನೇ ದಿನ ನಡೆಯಿತು. ಉಡುಪಿ ಧರ್ಮಕ್ಷೇತ್ರದ ಛಾನ್ಸಲರ್, ಉಡುಪಿ ವಲಯ ಹಾಗೂ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ. ವಾಲೇರಿಯನ್ ಮೆಂಡೊನ್ಸಾ, ದೀಪ ಬೆಳಗಿಸಿ ಗ್ರೋಟ್ಟೊವನ್ನು ಉದ್ಘಾಟಿಸಿದರು. ಈ ಮೊದಲು ಇದ್ದ ಗ್ರೋಟ್ಟೊವನ್ನು ಸ್ಥಳಾಂತರ ಮಾಡಿ ತಾತ್ಕಾಲಿಕವಾದ ಗ್ರೋಟ್ಟೊವನ್ನು ನಿರ್ಮಿಸಲಾಗಿತ್ತು, ಅದನ್ನು ಕೆಡವಿ ಅದೇ ಜಾಗದಲ್ಲಿ ನೂತನವಾದ ಸ್ಥಿರವಾದ ಗ್ರೋಟ್ಟೊವನ್ನು ನಿರ್ಮಿಸಲಾಗಿದೆ. ಚರ್ಚಿನ ಪ್ರಧಾನ ಧರ್ಮಗುರು ವಂ.ಅನಿಲ್ ಡಿಸೋಜಾ, ಸಹಾಯ ಧರ್ಮಗುರು ವಂ.ಜೆರಾಲ್ಡ್ ಸಂದೀಪ್ ಡಿಮೆಲ್ಲೊ, ಪ್ರಾಂಶುಪಾಲ ಧರ್ಮಗುರು ವಂ.ಪ್ರವೀಣ್ ಅಮ್ರತ್ ಮಾರ್ಟಿಸ್ ಮತ್ತು ಧರ್ಮಗುರು ವಂ.ಪ್ಯಾಟ್ರಿಕ್ ಪಾಯ್ಸ್ ಸಹ ಭಾಗಿತ್ವದಲ್ಲಿ ಪವಿತ್ರ ಬಲಿದಾನ ನಡೆಯಿತು. ನೂತನ ಗ್ರೋಟ್ಟೊ ಮುಂದೆ ಭಕ್ತರೊಡಗೂಡಿ, ಮೇರಿ ಮಾತೆ ಕಳಿಸಿಕೊಟ್ಟ ಜಪಸರ ಪ್ರಾರ್ಥನೆಯನ್ನು ನಡೆಸಲಾಯಿತು. ಪಾಲನ ಮಂಡಳಿ ಉಪಾಧ್ಯಕ್ಷ ಜೇಕಬ್ ಡಿಸೋಜಾ, ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಬ್ರಹ್ಮಕಲಶ ಹಾಗೂ ರಥೋತ್ಸವ ಕಾರ್ಯಕ್ರಮದ ಮೊದಲ ದಿನವಾದ ಬುಧವಾರ ಪೂರ್ವಾಹ್ನ ಫಲನ್ಯಾಸ,ಸಾಮೂಹಿಕ ದೇವತಾ ಪ್ರಾರ್ಥನೆ ,ಪುಣ್ಯಾಹ ನಾಂದಿ,ಋತ್ವಗ್ವರ್ಣಿ,ಮಧುಪರ್ಕ,ಗಣಹೋಮ ನವಗ್ರಹ ಹೋಮ ಚತುರ್ವೇದ ಪಾರಾಯಣ ಹಾಗೂ ಸಂಜೆ ಆಂಜನೇಯ ದೇವರಲ್ಲಿ ಪುಣ್ಯಾಹ ಸ್ಥಾನಶುದ್ಧಿ ಪ್ರಸಾದ ಶುದ್ಧಿ ರಾಕ್ಷೋಘ್ನ ಹೋಮ ವಾಸ್ತುಹೋಮ ಇನ್ನಿತರ ಹೋಮಾಧಿ ಕಾರ್ಯಕ್ರಮಗಳು ತಂತ್ರಿಗಳಾದ ವೇಧಮೂರ್ತಿ ಕೃಷ್ಣ ಸೋಮಯಾಜಿ ನೇತ್ರತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೆರಿತು.ಸಂಜೆ ನಡೆದ ಕೂಟಮಹಾಜಗತ್ತು ಮಹಿಳಾ ವೇದಿಕೆ ಸಾಲಿಗ್ರಾಮ ಇವರಿಂದ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ದೇವಳದ ಅಧ್ಯಕ್ಷ ಕೆ.ಅನಂತಪದ್ಮನಾಭ ಐತಾಳ್ ದೀಪ ಬೆಳಗಿಸಿ ಚಾಲನೆ ನೀಡಿದರು.ದೇವಳದ ಉಪಾಧ್ಯಕ್ಷ ಬಿ.ರಘುನಾಥ ಸೋಮಯಾಜಿ ,ಕಾರ್ಯದರ್ಶಿ ಜಿ.ಮಂಜುನಾಥ ಮಯ್ಯ,ಕೋಶಾಧಿಕಾರಿ ಪ್ರಸನ್ನ ತುಂಗ,ಸದಸ್ಯರಾದ ವೈ ಸದಾರಾಮ ಹೇರ್ಳೆ ,ವೇ.ಮೂ,ಜಿ.ಚಂದ್ರಶೇಖರ ಉಪಾಧ್ಯ,ಎಂ.ಕೆ ಅಶೋಕ ಕುಮಾರ್ ಹೊಳ್ಳ,ಬಿಜೂರು ಬಲರಾಮ ಮಯ್ಯ,ಪಿ.ಸುಬ್ರಹ್ಮಣ್ಯ ಹೇರ್ಳೆ ಮತ್ತಿತತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹಿಂದೆ ಕುಂಭ ನೆಂಬ ರಕ್ಕಸನಿದ್ದರೆ.. ಕಲಿಯುಗದಲ್ಲಿ ಸಹಸ್ರಾರು ಕುಂಭಾಸುರರು ಇದ್ದಾರೆ. ಭೀಮ ಕುಂಭ ನೆಂಬ ರಕ್ಕಸನ ವಧಿಸಿದರೆ, ಇಂದು ತಾಯಿ ಕಲಿಯುಗದ ಕುಂಭಾಸುರರ ಮರ್ಧಿಸಲು ಪವಿತ್ರ ಭೀಮ ಕ್ಷೇತ್ರ ಕುಂಭಾಶಿಯಲ್ಲಿ ದೇವಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ಮಂದಿರದಲ್ಲಿ ಪ್ರತಿಷ್ಠಾಪಿತಳಾಗಿದ್ದಾಳೆ. ಪ್ರಜೆಗಳಿಗೆ ಮಾರಕ ಕುಂಭನನ್ನು ಕತ್ತಿಯಿಂದ ವಧಿಸಿದ್ದಕ್ಕಾಗಿ ಕುಂಭ ರಕ್ಕಸ, ಅಶಿ ಎಂದರೆ ಕತ್ತಿ. ಭೀಮ ಕುಂಭನ ವಧಿಸಿದ ಹಿನ್ನೆಲೆಯೇ ಕುಂಭಾಸಿ ಹೆಸರು. ..ಹೀಗೆ ಮಹಾಭಾರತದ ಭೀಮ ಹಾಗೂ ಕುಲಿಯುಗದ ಕುಂಭನಂತಾ ರಕ್ಕಸಿರಿಗೆ ತಳಕು ಹಾಕಿದವರು ಉಡುಪಿ ಅದಮಾರು ಮಠ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ. ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಸಮರ್ಪಣೆ ನಿಮಿತ್ತ ಗಂಗೊಳ್ಳಿ ಹೊಸ್ಮನೆ ದಿ.ಶ್ರೀಮತಿ ಗೌರಮ್ಮ ಮತ್ತು ದಿ.ಮಂಜುನಾಥ ಶೇರೆಗಾರ್ ವೇದಿಕೆಯಲ್ಲಿ ಬುಧವಾರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ, ಮಾತನಾಡುತ್ತಿದ್ದರು. ಪ್ರಸಕ್ತ ನಾಯಕರೆನಿಸಿ ಕೊಂಡವರು ತನಗಾಗಿ ಯಜ್ಞಯಾಗಾಧಿಗಳ ಮಾಡುತ್ತಾ, ಸಮಾಜಕ್ಕೆ ಎನ್ನುವಾಗ ಮೂಢನಂಬಿಕೆ ಎನ್ನುವ ಕುಂಭುನಂತ ರಕ್ಕಸರ ವಧಿಸಲು ಭೀನಮನಂತವರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: 2017-18 ನೇ ಸಾಲಿನ ರಾಷ್ಟ್ರ ಮಟ್ಟದ ಜೆಇಇ ಮೈನ್ ಪ್ರವೇಶ ಪರೀಕ್ಷೆಯಲ್ಲಿ ಕೋಟೇಶ್ವರದ ಗುರುಕುಲ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು ತೇರ್ಗಡೆಯಾಗಿ, ಜೆಇಇ ಆಡ್ವಾನ್ಸ್ ಬರೆಯಲು ಅರ್ಹತೆ ಗಳಿಸಿ ಸಂಸ್ಥೆಗೆ ಹೆಮ್ಮೆಯನ್ನು ತಂದಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಮತ್ತು ಬೋಧಕ ವೃಂದದವರು ಅಭಿನಂದಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳ ಬಿಸಿಯೂಟಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಿಂದ ಹಣ ಸಂದಾಯವಾಗುತ್ತಿರುವುದನ್ನು ತಡೆಹಿಡಿಯಲು ಕೊಲ್ಲೂರಿನ ಮಾಜಿ ಧರ್ಮದರ್ಶಿ ಬಿ.ಎಂ ಸುಕುಮಾರ ಶೆಟ್ಟಿ ಅವರು ತಿಳಿಸಿದ್ದರಿಂದ ಸರಕಾರದ ಗಮನಕ್ಕೆ ತಂದು ತಡೆಹಿಡಿಯಲಾಗಿತ್ತು ಎಂದು ಸಚಿವ ರಮಾನಾಥ ರೈ ಅವರು ನೀಡಿರುವ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ. ಅವರು ತಮ್ಮ ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಚುನಾವಣಾ ಗಿಮಿಕ್ ಮಾಡಿದ್ದಾರೆಂದು ಬೈಂದೂರು ಬಿಜೆಪಿ ಅಭ್ಯರ್ಥಿ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಅವರು ಹೆಮ್ಮಾಡಿಯ ಬಿಜೆಪಿ ಕಛೇರಿಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ರಮಾನಾಥ ರೈ ಅವರು ಉದ್ದೇಶಪೂರ್ವಕವಾಗಿ ಈ ಹೇಳಿಕೆ ನೀಡಿದ್ದಾರೆ. ಆದರೆ ಈ ವಿಚಾರದಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕೊಲ್ಲೂರು ದೇವಳದ ಟ್ರಸ್ಟಿಯಾದ ಬಳಿಕ ವಿದ್ಯಾರ್ಥಿಗಳಿಗಾಗಿ ದೇವಳದ ಶಾಲೆ ಆರಂಭಿಸಿದ್ದೇನೆ. ಸರಕಾರದಿಂದ ಬಿಸಿಯೂಟ ನೀಡುವ ಮೊದಲೇ ಕೊಲ್ಲೂರು ದೇವಳದಿಂದ ಸ್ಥಳೀಯ ಎಲ್ಲಾ ಶಾಲೆಗಳಿಗೂ ಬಿಸಿಯೂಟ ನೀಡುವ ವ್ಯವಸ್ಥೆ ಮಾಡಿದ್ದೇನೆ. ದೂರದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ರೋಜರಿ ಮಾತಾ ಇಗರ್ಜಿಯಲ್ಲಿ ಕಥೊಲಿಕ್ ಸಭಾ ಘಟಕ ದಿನಾಚರಣೆ ಪ್ರಯುಕ್ತ ಖಾದ್ಯ ತಿಂಡಿಗಳ ಹಬ್ಬ (ಫುಡ್ ಫೆಸ್ತ್) ಸಹಾಯಕ ಧರ್ಮಗುರು ವಂ.ಜೆರಾಲ್ಡ್ ಸಂದೀಪ್ ಡಿಮೆಲ್ಲೊ ನೇತೃತ್ವದಲ್ಲಿ ಪವಿತ್ರ ಬಲಿದಾನ ಅರ್ಪಿಸಿದರು. ಪ್ರಧಾನ ಧರ್ಮಗುರು ವಂ.ಅನಿಲ್ ಡಿಸೋಜಾ ಶುಭಾಷಯ ಕೋರಿದರು. ನಂತರ ಫುಡ್ ಪೆಸ್ಟ್ನಲ್ಲಿ ಕಥೊಲಿಕ್ ಸಭಾ ಸದಸ್ಯರೆ ಸಿದ್ದ ಪದಿಸಿದ ವಿವಿಧ ರೀತಿಯ ಮಾಂಸಹಾರಿ ಖಾದ್ಯಗಳು, ಜೊತೆಗೆಇಡ್ಲಿ, ಶಾವಿಗೆ ಖಾದ್ಯ ತಿಂಡಿಗಳ ಪ್ರದರ್ಶನಕ್ಕೆ ಇಡಲಾಯಿತು. ಕಥೊಲಿಕ್ ಸಭಾ ಅಧ್ಯಕ್ಷೆ ಶೈಲಾ ಡಿಆಲ್ಮೇಡಾ, ಕಾರ್ಯದರ್ಶಿ ಜೂಲಿಯೆಟ್ ಪಾಯ್ಸ್, ನಿಕಟ ಪೂರ್ವ ಅಧ್ಯಕ್ಷ ಜೇಕಬ್ ಡಿಸೋಜಾ, ನಿಯೋಜಿತ ಅಧ್ಯಕ್ಷ ವಾಲ್ಟರ್ ಡಿಸೋಜಾ, ಉಪಾಧ್ಯಕ್ಷ ಬರ್ನಾಡ್ ಜೆ. ಡಿಕೋಸ್ತಾ, ಸಹ ಕಾರ್ಯದರ್ಶಿ ನಿರ್ಮಲಾ ಡಿಸೋಜಾ, ಸಹಾಯಕ ಖಚಾಂಚಿ ವಿಲ್ಸನ್ ಡಿಆಲ್ಮೇಡಾ, ಆಮ್ಚೊ ಸಂದೇಶ್ ಪ್ರತಿನಿಧಿ ವಿನ್ಸೆಂಟ್ ಡಿಸೋಜಾ, ರಾಜಕೀಯ ಸಂಚಾಲಕ ಜೋನ್ಸನ್ ಡಿಆಲ್ಮೇಡಾ, ಸರ್ಕಾರಿ ಸವಲತ್ತು ಸಂಚಾಲಕ ವಿನೋದ್ ಕ್ರಾಸ್ಟೊ, ಲೆಕ್ಕ ಪರಿಸೋಧಕ ವಿಲ್ಸನ್ ಒಲಿವೇರಾ, ಕಾರ್ಯಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶುಭದಾ ಆಂಗ್ಲ ಮಾಧ್ಯಮ ಶಾಲೆಯ ನೂತನ ಮುಖ್ಯೋಪಾಧ್ಯಾಯರಾಗಿ ರವಿದಾಸ ಶೆಟ್ಟಿ ಅಧಿಕಾರ ಸ್ವೀಕರಿಸಿದರು. ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ. ಎನ್.ಕೆ.ಬಿಲ್ಲವ ರವರು ನೂತನ ಮುಖ್ಯೋಪಾಧ್ಯಾಯರನ್ನು ಸ್ವಾಗತಿಸಿಕೊಂಡು ಮಾತನಾಡಿ ಸಂಸ್ಥೆಯನ್ನು ಸರ್ವಾಂಗೀಣ ಪ್ರಗತಿಯತ್ತ ಕೊಂಡೊಯ್ಯಲು ಮುಖ್ಯೋಪಾಧ್ಯಾಯರು ಸಮರ್ಥರಿದ್ದಾರೆ ಎಂದರು. ಸಂಸ್ಥೆಯ ನಿರ್ದೇಶಕರಾದ ಕೆ.ಪುಂಡಲೀಕ ನಾಯಕ್ , ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಉದಯ ಪೂಜಾರಿ, ರಾಜೀವ ಶೆಟ್ಟಿ, ಸತೀಶ ಪೂಜಾರಿ ಹಾಗೂ ಸಂಚಾಲಕರಾದ ಶಂಕರ ಪೂಜಾರಿ ಉಪಸ್ಥಿತರಿದ್ದರು. ಸಂಯೋಜಕಿ ಗೀತಾದೇವಿ ಅಡಿಗ ಅವರು ಸ್ವಾಗತಿಸಿ ವಂದನಾರ್ಪಣೆ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಆಸ್ಟ್ರೇಲಿಯಾದ ಗೋಲ್ಡ್ಕೋಸ್ಟ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ನ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ವಿಶೇಷ ಗೌರವ ಲಭಿಸಿದೆ. ಮನ್ ಕೀ ಬಾತ್ನಲ್ಲಿ ಉಲ್ಲೇಖಿಸಿದ ಬಳಿಕ ಭೇಟಿಯಾದ ಗುರುರಾಜ್ಗೆ ಮೋದಿ ವಿಶೇಷ ಅಭಿನಂದನೆ ಸಲ್ಲಿಸಿದ್ದು, ಈ ಕುರಿತು ಫೋಟೋ ಸಮೇತ ಟ್ವೀಟ್ ಕೂಡ ಮಾಡಿದ್ದಾರೆ. ಮಂಗಳವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲೂ ಗುರುರಾಜ್ ಸಾಧನೆಯನ್ನು ಕೊಂಡಾಡಿದ್ದಾರೆ. ದೆಹಲಿಯಲ್ಲಿ ಅಭಿನಂದನೆ: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ಗೆದ್ದ ಗುರುರಾಜ್ ಸಹಿತ ಭಾರತೀಯ ಕ್ರೀಡಾಪಟುಗಳಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಭಿನಂದನೆ ಸಲ್ಲಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನೂ ಭೇಟಿಯಾಗಿದ್ದು, ಈ ಸಂದರ್ಭ ದೇಶದ ಗೌರವ ಹೆಚ್ಚಿಸಿದ ಕ್ರೀಡಾಪಟುಗಳನ್ನು ಅವರು ಮನತುಂಬಿ ಅಭಿನಂದಿಸಿದ್ದಾರೆ. ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಈ ಸಂದರ್ಭ ಉಪಸ್ಥಿತರಿದ್ದರು. ಬಳಿಕ ಗುರುರಾಜ್ಗೆ ಹಸ್ತಲಾಘವ ಮಾಡುವ ಪೋಟೋವನ್ನು ಮೋದಿ ಟ್ವೀಟ್ ಮಾಡಿಯೂ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಭಾರತೀಯ ಜನತಾ ಪಕ್ಷ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ದೇಶದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ ಬಂದಾಗ ದೇಶದ ಸ್ಥಿತಿ ಹೇಗಿತ್ತು, ಆ ಬಳಿಕ ಆಗಿರುವ ಬದಲಾವಣೆ ಏನು ಮತ್ತು ಎಷ್ಟು ಎನ್ನುವುದರ ಅರಿವಿಲ್ಲದ ಹೊಸ ತಲೆಮಾರಿನ ಜನ ಅದನ್ನು ನಂಬುತ್ತಿದ್ದಾರೆ. ಜನರಿಗೆ ಸತ್ಯ ತಿಳಿಸಿ, ಬಿಜೆಪಿ ಅಪಪ್ರಚಾರ ಬಯಲುಗೊಳಿಸುವ ಹೊಣೆಯನ್ನು ಕಾಂಗ್ರೆಸ್ ಕಾರ್ಯಕರ್ತರು ನಿರ್ವಹಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ರಾಜ್ಯ ಮತ್ತು ದೇಶದಲ್ಲಿ ಮರುಸ್ಥಾಪಿಸುವ ಕೆಲಸ ಮಾಡಬೇಕು ಎಂದು ಬೈಂದೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಮರವಂತೆಯಲ್ಲಿ ನಡೆದ ಪಕ್ಷ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ದೊರೆತಾಗ ದೇಶ ಆಹಾರ, ವಸತಿ, ರಕ್ಷಣೆ, ಸಂಪರ್ಕವೇ ಆದಿಯಾದ ಎಲ್ಲ ಕ್ಷೇತ್ರಗಳಲ್ಲೂ ಕೊರತೆ ಎದುರಿಸುತ್ತಿತ್ತು. ದೀರ್ಘಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸೂಕ್ತ ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುವ ಮೂಲಕ ಜಗತ್ತಿನ ಮುಂಚೂಣಿಯ ರಾಷ್ಟ್ರಗಳ…
