Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಬಸವಣ್ಣನವರು ಜಾತ್ಯಾತೀತ ಸಮಾಜ ನಿರ್ಮಾಣ ಮಾಡಲು ಹೊರಟ ಮಹಾನ್ ದಾರ್ಶನಿಕ. ಸಾಮಾಜಿಕ ನ್ಯಾಯ, ವ್ಯಕ್ತಿ ಸ್ವಾತಂತ್ರ್ಯ, ಮಾನವ ಹಕ್ಕುಗಳು, ಸಮಾನತೆ ಮತ್ತು ವಿಶ್ವ ಬಂಧುತ್ವದ ವಿಚಾರಗಳನ್ನು ಬಹಳ ಗಂಭೀರವಾಗಿ ಪ್ರತಿಪಾದಿಸಿದ ಬಸವಣ್ಣನವರ ವಿಚಾರಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು. ಅವರು ಸೋಮವಾರ ಮೇಲ್‌ಗಂಗೊಳ್ಳಿಯ ಶ್ರೀ ಬಸವೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿದ ಶ್ರೀ ಬಸವೇಶ್ವರ ದೇವಸ್ಥಾನದ ಶ್ರೀ ಬಸವೇಶ್ವರ ಬಾಲಕರ ಭಜನಾ ತಂಡದ ದಶಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಜನರಲ್ಲಿ ಆರ್ಥಿಕ ಸಮಾನತೆ ಬಂದಾಗ ಸಾಮಾಜಿಕ ಪರಿವರ್ತನೆ ಬರುತ್ತದೆ. ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶ ಬಹಳಷ್ಟು ಪ್ರಗತಿ ಕಂಡಿದ್ದು, ಜನಸಂಖ್ಯಾ ಸ್ಪೋಟದ ಪರಿಣಾಮ ಅಭಿವೃದ್ಧಿ ಕುಂಠಿತಗೊಂಡಿದೆ. ಹೀಗಾಗಿ ಜನಸಾಮಾನ್ಯರು ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಜನಪ್ರತಿನಿಧಿಗಳು ಅಭಿವೃದ್ಧಿಗೆ ಸಹಕಾರ ನೀಡಬೇಕು. ಸಂಘ ಸಂಸ್ಥೆಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ ಎಂದರು. ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಈ ಪರಿಸರದಲ್ಲಿ ಅನಾಥರಾಗಿ ಅಲೆದಾಡುತ್ತಿದ್ದ ಐವರನ್ನು ಪಾಸ್ಟರ್ ಸುನಿಲ್ ಡಿಸೋಜ ನೇತೃತ್ವದ ಶಂಕರಪುರದ ವಿಶ್ವಾಸದ ಮನೆ ಕಾರ್ಯಕರ್ತರು ಬುಧವಾರ ನಡೆಸಿದ ಮಾನವೀಯ ಕಾರ್ಯಾಚರಣೆಯಲ್ಲಿ ವಿಶ್ವಾಸದ ಮನೆಗೆ ಸೇರಿಸಲಾಯಿತು. ಇಬ್ಬರು ವೃದ್ಧೆಯರು ಬೈಂದೂರು ಬಸ್‌ಸ್ಟ್ಯಾಂಡ್ ಬಳಿ, ೪೦-೪೫ ವಯೋಮಾನದ ಒಬ್ಬ ಗಂಡಸು ಬೈಪಾಸ್ ಹತ್ತಿರ, ಒಬ್ಬ ವೃದ್ಧ ಶಿರೂರು ಗ್ರೀನ್‌ವ್ಯಾಲಿ ಶಾಲೆಯ ಸನಿಹ, ಒಬ್ಬ ಯುವಕ ಶಿರೂರು ಪೇಟೆಯಲ್ಲಿ ಅಲೆದಾಡುತ್ತಿದ್ದರು. ಕಾರ್ಯಾಚರಣೆಯಲ್ಲಿ ವಿಶ್ವಾಸದ ಮನೆಯ ಮುಖ್ಯಸ್ಥ ಪಾಸ್ಟರ್ ಸುನಿಲ್ ಡಿಸೋಜ ಜತೆ ಎಲಿಜಬೆತ್ ಡಿಸೋಜ, ಪ್ರದೀಪ ಮಾಬೆನ್, ಸಿಬ್ಬಂದಿಗಳಾದ ನವೀನ್, ಆಲ್ವಿನ್, ಪ್ರೇಮಾ ಲೋಬೊ, ಪ್ರಫುಲ್ಲಾ ಲೋಬೊ ಇದ್ದರು. ಗಂಗೊಳ್ಳಿಯ ಸಾಮಾಜಿಕ ಕಾರ್ಯಕರ್ತ ’ಗಂಗೊಳ್ಳಿ 24×7’ ಸೇವೆಯ ಇಬ್ರಾಹಿಂ ಗಂಗೊಳ್ಳಿ ತಮ್ಮ ಅಂಬ್ಯುಲನ್ಸ್ ಸಹಿತ ಕೈಜೋಡಿಸಿದರು.

Read More

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಇನ್ನೆಂದೂ ಅ ಮನೆಯಂಗಳದಲ್ಲಿ ಮಕ್ಕಳ ಕಲರವ ಕೇಳಿಸಲಾರದು. ಆ ಮಕ್ಕಳೇ ಕಟ್ಟಿದ ಜೋಕಾಲಿ ಜೀಕಲಾರದು, ಅಲ್ಲಲ್ಲಿ ಅನಾಥವಾಗಿ ಬಿದ್ದಿರುವ ಆಟಿಕೆಗಳು ಸದ್ದು ಮಾಡಲಾರವು. ಸದಾ ಕಾಲ ಮಕ್ಕಳನ್ನು ಕರೆಯುತ್ತಿದ್ದ ತಂದೆಯ ಸ್ವರವೂ ಕೇಳಲಾರದು. ಹಕ್ಕಿಗಳು ಚಿಲಿಪಿಲಿ ಗುಟ್ಟಲಾರವು, ಅಬ್ಬಾ ವಿಧಿಯೇ ನೀನಿಷ್ಟು ಕಠೋರಿಯೇ? ಹಾಗಂತ ಅಲ್ಲಿ ನೆರೆದ ಪ್ರತಿಯೋರ್ವರ ಗಂಟಲಿನಲ್ಲಿ ಸದ್ದಿಲ್ಲದೆ ನಿಟ್ಟುಸಿರೊಂದು ಹೊರಹೊಮ್ಮಿತ್ತು. ಕಣ್ಣಂಚಿನಲ್ಲಿ ಇನ್ನಿಲ್ಲದ ದು:ಖವೊಂದು ಮಡುಗಟ್ಟಿ ನಿಂತಿತ್ತು. ಅಯ್ಯೋ.. ದೇವರೇ ನನ್ನನ್ಯಾಕೆ ಉಳಿಸಿಹೋದೆ ಅದೆಂಥಾ ಪಾಪಕ್ಕೆ ನನಗೇ ಈ ಶಿಕ್ಷೆ ನನ್ನನ್ನೂ ಸಹಾ ಕರೆದು ಕೊ. ಅಂತಾ ಆ ಹೆತ್ತೊಡಲು ಮರುಗುತ್ತಿದ್ದರೇ, ಓಹ್ ಬದುಕೇ ನಿನ್ಯಾಕೆ ಆ ಕುಟುಂಬದ ಪಾಲಿಗೆ ಇಷ್ಟೊಂದು ನಿಷ್ಕರುಣಿಯಾಗಿ ಹೋದೆ. ಎನ್ನುವ ಪ್ರಶ್ನೆ ಅಲ್ಲಿ ಮತ್ತೇ ಮತ್ತೇ ಮಗ್ಗಲು ಬದಲಿಸುತ್ತಿತ್ತು. ಆ ಮನೆಯ ಸಮೀಪದ ತೋಟದ ಕೆರೆಯೊಂದರ ದಂಡೆಯ ಮೇಲೆ ಇಬ್ಬರು ಪುಟ್ಟ ಗಂಡು ಮಕ್ಕಳ ಸಹಿತ ತಂದೆಯೋರ್ವನ ಶವಗಳು ಉದ್ದಕ್ಕೂ ಮೈಚೆಲ್ಲಿದ್ದುದು ಈ ಎಲ್ಲಾ ಸನ್ನಿವೇಶಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಸಿಲ ಬೇಗೆಯಿಂದ ಧಗದಗಿಸುತ್ತಿದ್ದ ಕುಂದಾಪುರ ತಾಲೂಕಿನ ಹಲವೆಡೆ ಇಂದು ಸಂಜೆಯ ವೇಳೆಗೆ ಮಳೆಯ ಸಿಂಚನವಾಗಿದೆ. ಕುಂದಾಪುರ ನಗರ ಹಾಗೂ ತಾಲೂಕಿನ ಸಿದ್ಧಾಪುರ, ನೇರಳಕಟ್ಟೆ, ಕೋಟೇಶ್ವರ, ಕೊಲ್ಲೂರು ಭಾಗಗಳಲ್ಲಿ ಲಘ ಮಳೆಯಾಗಿದೆ. ಇನ್ನು ಬೈಂದೂರು, ಉಪ್ಪುಂದ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿದ್ದರೂ ಈವರೆಗೂ ಮಳೆಯಾಗಿಲ್ಲ.  ಕುಂದಾಪ್ರ ಡಾಟ್ ಕಾಂ ಸುದ್ದಿ. ದಿನದಿಂದ ದಿನಕ್ಕೆ ಸೂರ್ಯನ ಶಾಖ ಹೆಚ್ಚುತ್ತಿದ್ದು ಮಳೆಯಿಲ್ಲದೇ ಜನರು ಕಂಗೆಟ್ಟಿದ್ದರು. ಹಲವೆಡೆ ನೀರಿನ ಒರತೆಗಳು ಬತ್ತಿಹೋಗಿ ನೀರಿಗಾಗಿ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಇಂದಿನ ತುಂತುರು ಮಳೆ ಕೊಂಚ ಭೂಮಿಯನ್ನು ತಂಪುಗೊಳಿಸುವುದೇ ಹೊರತು ನೀರಿನ ಒರತೆಯನ್ನು ಹೆಚ್ಚಿಸದು. ಹಾಗಾಗಿ ಒಂದು ದೊಡ್ಡ ಮಳೆಯೇ ಬರಲಿ ಎಂದು ಜನ ಕಾಯುತ್ತಿದ್ದಾರೆ. ಇದರ ನಡುವೆ ವರ್ಷದಲ್ಲಿ ಮೊದಲು ಬಿದ್ದ ಹನಿಮಳೆಯನ್ನು ಜನ ಸ್ವಾಗತಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಟವಾಡಲೆಂದು ಕೆರೆಯ ಸಮೀಪ ತೆರಳಿದ್ದ ಇಬ್ಬರು ಮಕ್ಕಳು ಹಾಗೂ ಅವರನ್ನು ರಕ್ಷಿಸಲೆಂದು ತೆರಳಿದ ತಂದೆಯೂ ಸೇರಿದಂತೆ ಮೂವರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಸಿದ್ಧಾಪುರ ಸಮೀಪದ ಉಳ್ಳೂರು-74ರಲ್ಲಿ ವರದಿಯಾಗಿದೆ. ಐರ್‌ಬೈಲು ನಿವಾಸಿ ರಾಘವೇಂದ್ರ ಕಿಣಿ (38) ಹಾಗೂ ಅವರ ಮಕ್ಕಳಾದ ಪ್ರಕಾಶ್ (13), ಯೋಗೀಶ್ (12) ಮೃತ ದುರ್ದೈವಿಗಳು. ಕುಂದಾಪ್ರ ಡಾಟ್ ಕಾಂ. ಘಟನೆಯ ವಿವರ ರಾಘವೇಂದ್ರ ಕಿಣಿ  ಅವರ ಇಬ್ಬರು ಮಕ್ಕಳು ತಮ್ಮ ಮನೆಯ ಸಮೀಪದಲ್ಲಿರುವ ತೋಟಕ್ಕೆ ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದರು. ಆಟವಾಡುತ್ತಾ ಕೆರೆ ಸಮೀಪ ಬಂದಾಗ ಪ್ರಕಾಶನ ಕಾಲು ಜಾರಿ ಕೆರೆಗೆ ಬಿದ್ದಿದ್ದ. ಆತನ್ನು ರಕ್ಷಿಸಲು ಯೋಗೀಶ್ ಕೂಡ  ಕೆರೆಗೆ ಇಳಿದನಾದರೂ ಇಬ್ಬರೂ  ಕೆರೆಯಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಆತನ ಸ್ನೇಹಿತರು ಕೂಗಿಕೊಳ್ಳಲಾರಂಭಿದ್ದ. ಕೂಗಾಟ ಕೇಳಿದ ರಾಘವೇಂದ್ರ ಕಿಣಿ ಮನೆಯಿಂದ ಓಡಿಬಂದು ನೋಡಿದ್ದಾರೆ. ಆಳವಿದ್ದ ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಅವರೂ ಕೆರೆಗೆ ಇಳಿದಿದ್ದಾರೆ. ಆದರೆ ಆಳವಿದ್ದ ಕೆರೆಯಲ್ಲಿ ಅವರೂ ಸ್ಥಿಮಿತ ಕಳೆದುಕೊಂಡು  ಮೂವರೂ ನೀರಿನಲ್ಲಿ ಮುಳುಗಿ…

Read More

ಕುಂದಾಪ್ರ ಡಾಟ್ ಕಾಂ ವರದಿ | ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಬದುಕು ರೂಪಿಸುವ ಮಹತ್ತರ ಘಟ್ಟ. ಈ ಹಂತದಲ್ಲಿ ಸರಿಯಾದ ಮಾರ್ಗದರ್ಶನ ಹಾಗೂ ಶಿಕ್ಷಣ ದೊರೆತರೆ ಪ್ರತಿಯೊಬ್ಬರ ಜೀವನವೂ ಉಜ್ವಲವಾಗುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕ ವಾತಾವರಣ ನಿರ್ಮಿಸಬೇಕೆಂಬ ಉದ್ದೇಶದೊಂದಿಗೆ 2003ರಲ್ಲಿ ಸ್ಥಾಪನೆಗೊಂಡ ಕುಂದಾಪುರ ಆರ್.ಎನ್. ಶೆಟ್ಟಿ. ಪಿಯು ಕಾಲೇಜು ಇಂದು ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳ ಪೈಕಿ ಅಗ್ರಗಣ್ಯ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಉಡುಪಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ವಿದ್ಯಾರ್ಜನೆಗಾಗಿ ಬರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಪಿಯು ಶಿಕ್ಷಣವನ್ನು ಕಾಲೇಜಿನಲ್ಲಿ ನೀಡುತ್ತಾ ಬರಲಾಗಿದೆ. ಈ ಸಂಸ್ಥೆಯಲ್ಲಿ ವಿದ್ಯಾರ್ಜನೆಗೈದು ತೆರಳಿರುವ ಅದೆಷ್ಟೊ ವಿದ್ಯಾರ್ಥಿಗಳು ಇಂದು ಸಮಾಜದಲ್ಲಿ ಉತ್ತಮ ಹುದ್ದೆಗಳನ್ನಲಂಕರಿಸಿ, ಉದ್ಯಮವನ್ನು ನಡೆಸುತ್ತಾ ಮಾದರಿಯಾಗಿ ಜೀವನವನ್ನು ರೂಪಿಸಿಕೊಂಡಿದ್ದಾರೆ. ಸಂಸ್ಥೆಯ ನುರಿತ ಹಾಗೂ ಅನುಭವಿ ಉಪನ್ಯಾಸಕ ವೃಂದವು ತಮ್ಮ ಅನುಭವವನ್ನು ವಿದ್ಯಾರ್ಥಿಗಳಿಗೆ ಧಾರೆಯೆರೆದು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕಾಲೇಜಿನಲ್ಲಿ ದಾಖಲೆಯ ಫಲಿತಾಂಶ ಆರ್‌ಎನ್‌ಎಸ್ ಪಿಯು ಕಾಲೇಜು ಆರಂಭದಿಂದ ಇಂದಿನವರೆಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹಳ್ಳಿಹೊಳೆ ಸಮೀಪದ ಕಮಲಶಿಲೆ ಗ್ರಾಮದ ಭಟ್ಕಳಮಕ್ಕಿಯಲ್ಲಿ ರಸ್ತೆಯ ವಿಚಾರವಾಗಿ ಕುಟುಂಬಿಕರ ನಡುವೆ ನಡೆದ ತಕರಾರಿಗೆ ಸ್ವಂತ ತಮ್ಮನೇ ತನ್ನ ಮಕ್ಕಳೊಂದಿಗೆ ಅಣ್ಣನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಆಣ್ಣನಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ. ನಾರಾಯಣ ನಾಯ್ಕ (೬೦) ತಮ್ಮ ಹಾಗೂ ತಮ್ಮನ ಮಕ್ಕಳಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿದವರು. ನಾರಾಯಣ ನಾಯ್ಕ ಅವರ ಕೊಲೆಗೆ ಕಾರಣರು ಎನ್ನಲಾದ ಆರೋಪಿಗಳಾದ ನಾಗರಾಜ ನಾಯ್ಕ ಮತ್ತು ಅವರ ಮಕ್ಕಳಾದ ಲಕ್ಷಿ$ಱ್ಪಕಾಂತ ಹಾಗೂ ಚಂದ್ರಕಾಂತ ರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ನೆರೆಕೆರೆಯಲ್ಲಿ ವಾಸವಿದ್ದ ಸಹೋದರರಾದ ನಾರಾಯಣ ನಾಯ್ಕ ಹಾಗೂ ನಾಗರಾಜ್ ನಾಯ್ಕ ನಡುವೆ ದಾರಿ ವಿಚಾರದಲ್ಲಿ ಮನಸ್ತಾಪವಿತ್ತು. ಮೇ.೫ರಂದು ನಾರಾಯಣ ಅವರು ತೋಟಕ್ಕೆ ನೀರು ಹಾಯಿ ಸುವಾಗ ಕ್ಷುಲ್ಲಕ ಕಾರಣಕ್ಕೆ ಅವರ ಸೋದರ ನಾಗರಾಜ ನಾಯ್ಕ ಹಾಗೂ ಅವರ ಮಕ್ಕಳು ಜಗಳಕ್ಕಿಳಿದರು. ಈ ಹಿಂದಿನ ಸಿಟ್ಟನ್ನು ಆ ವೇಳೆ ನಾಗರಾಜ ನಾಯ್ಕ ಪ್ರದರ್ಶಿಸಿದಾಗ ಜಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಶಿರೂರಿನಲ್ಲಿರುವ ಪೋಲಿಸ್ ಚೆಕ್‌ಪೋಷ್ಟ್ ಪಕ್ಕದ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು ೬೦ ವರ್ಷ ಪ್ರಾಯವಾಗಿರಬಹುದೆಂದು ಅಂದಾಜಿಸಲಾಗಿದ್ದು, ಕಂದು ಬಣ್ಣದ ಶರ್ಟ್ ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಕುತ್ತಿಗೆಯಲ್ಲಿ ತಾಯತ ಕಟ್ಟಿದ ಕಪ್ಪು ಬಣ್ಣದ ನೂಲು ಇದೆ. ಬಿಸಿಲಿನ ತಾಪಕ್ಕೆ, ಯಾವುದಾದರು ಕಾಯಿಲೆಯಿಂದ ಅಥವಾ ಹೃದಯಾಘಾತದಿಂದ ದಾರಿ ಮಧ್ಯದಲ್ಲಿ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಶಿರೂರು ಗ್ರಾಪಂ ಸದಸ್ಯ ರಘುರಾಮ ಪೂಜಾರಿ ಈ ಬಗ್ಗೆ ಬೈಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಮೃತವ್ಯಕ್ತಿಯ ಗುರುತು ಇದ್ದವರು ಬೈಂದೂರು ಠಾಣೆಗೆ(೦೮೨೫೪-೨೫೧೦೩೩) ತಿಳಿಸುವಂತೆ ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ತಿಳಿಸಿದ್ದಾರೆ,

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹಳ್ಳಿಹೊಳೆ ಸಮೀಪದ ಕಮಲಶಿಲೆ ಗ್ರಾಮದ ಭಟ್ಕಳಮಕ್ಕಿಯಲ್ಲಿ ರಸ್ತೆಯ ವಿಚಾರವಾಗಿ ಕುಟುಂಬಿಕರ ನಡುವೆ ನಡೆದ ತಕರಾರಿಗೆ ಸ್ವಂತ ತಮ್ಮನೇ ತನ್ನ ಮಕ್ಕಳೊಂದಿಗೆ ಅಣ್ಣನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಆಣ್ಣನಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ. ನಾರಾಯಣ ನಾಯ್ಕ (೬೦) ತಮ್ಮ ಹಾಗೂ ತಮ್ಮನ ಮಕ್ಕಳಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿದವರು. ನಾರಾಯಣ ನಾಯ್ಕ ಅವರ ಕೊಲೆಗೆ ಕಾರಣರು ಎನ್ನಲಾದ ಆರೋಪಿಗಳಾದ ನಾಗರಾಜ ನಾಯ್ಕ ಮತ್ತು ಅವರ ಮಕ್ಕಳಾದ ಲಕ್ಷಿ$ಱ್ಪಕಾಂತ ಹಾಗೂ ಚಂದ್ರಕಾಂತ ರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ನೆರೆಕೆರೆಯಲ್ಲಿ ವಾಸವಿದ್ದ ಸಹೋದರರಾದ ನಾರಾಯಣ ನಾಯ್ಕ ಹಾಗೂ ನಾಗರಾಜ್ ನಾಯ್ಕ ನಡುವೆ ದಾರಿ ವಿಚಾರದಲ್ಲಿ ಮನಸ್ತಾಪವಿತ್ತು. ಮೇ.೫ರಂದು ನಾರಾಯಣ ಅವರು ತೋಟಕ್ಕೆ ನೀರು ಹಾಯಿ ಸುವಾಗ ಕ್ಷುಲ್ಲಕ ಕಾರಣಕ್ಕೆ ಅವರ ಸೋದರ ನಾಗರಾಜ ನಾಯ್ಕ ಹಾಗೂ ಅವರ ಮಕ್ಕಳು ಜಗಳಕ್ಕಿಳಿದರು. ಈ ಹಿಂದಿನ ಸಿಟ್ಟನ್ನು ಆ ವೇಳೆ ನಾಗರಾಜ ನಾಯ್ಕ ಪ್ರದರ್ಶಿಸಿದಾಗ ಜಗಳ…

Read More

ಕುಂದಾಪ್ರ ಡಾಟ್ ಕಾಂ | ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದ ಮನ್ಮಹಾ  ರಥೋತ್ಸವದ ವಿಶೇಷ ಚಿತ್ರಗಳು. | ಸುನಿಲ್ ಹೆಚ್. ಜಿ. ಬೈಂದೂರು. ► ಬೈಂದೂರು ಹಬ್ಬ – ಶ್ರೀ ಸೇನೇಶ್ವರ ಮನ್ಮಹಾ ರಥೋತ್ಸವದ ಸಂಭ್ರಮ – http://kundapraa.com/?p=13955 .

Read More