Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸದಾ ಪ್ರಯೋಗಶೀಲತೆ, ಕ್ರೀಯಾಶೀಲತೆ ಹಾಗೂ ಸೃಜನಶೀಲತೆಯ ಸಾಧ್ಯತೆಗಳನ್ನು ರಂಗಭೂಮಿಯಲ್ಲಿ ಅಳವಡಿಸಿಕೊಳ್ಳುವುದರಿಂದ ರಂಗಕಲೆಗಳು ಜೀವಂತವಾಗಿರುತ್ತದೆ ಎಂದು ಕುಂದಾಪುರ ರಂಗ ಅಧ್ಯಯನ ಕೇಂದ್ರದ ಶಿಕ್ಷಕ ವಿನಾಯಕ ಎಸ್.ಎಂ ಹೇಳಿದರು. ಅವರು ಲಾವಣ್ಯ ರಿ. ಬೈಂದೂರು ಆಶ್ರಯದಲ್ಲಿ ೪೦ ಸಂಭ್ರಮದ ಅಂಗವಾಗಿ ಜರುಗುತ್ತಿರುವ ರಂಗ ಲಾವಣ್ಯ – ಕಲಾಮಹೋತ್ಸವ ಕಾರ್ಯಕ್ರಮದಲ್ಲಿ ಶುಭಶಂಸನೆಗೈದರು. ನಲವತ್ತು ವರ್ಷಗಳನ್ನು ಪೂರೈಸಿರುವ ಲಾವಣ್ಯ ಸಂಸ್ಥೆಯು ರಂಗಕಲೆಯೊಂದಿಗೆ ವೈಚಾರಿಕತೆಯನ್ನು ಜಾಗೃತಿಗೊಳಿಸುತ್ತಾ ಬಂದಿದೆ. ಇದು ಊರಿನ ಪ್ರತಿಯೋರ್ವರು ನಮ್ಮ ಸಂಸ್ಥೆಯು ಎನ್ನುವ ಮಟ್ಟಿಗೆ ಬೆಳೆದು ನಿಂತಿದೆ ಎಂದರು. ಲಾವಣ್ಯದ ಕಲಾವಿದರಾದ ಉದಯ ಕಿಣಿ, ವಿನಾಯಕ ಪ್ರಭು, ಸತ್ಯಪ್ರಸನ್ನ, ನಾಗರಾಜ ತಗ್ಗರ್ಸೆ ಹಾಗೂ ನಾಗಪ್ಪ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಲಾವಣ್ಯದ ರಿ. ಬೈಂದೂರು ವ್ಯವಸ್ಥಾಪಕ ಗಣೇಶ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಜಯಾನಂದ ಹೋಬಳಿದಾರ್, ಶಿಕ್ಷಕ ಗುರುರಾಜ್ ರಾವ್, ಲಾವಣ್ಯದ ಗೌರವಾಧ್ಯಕ್ಷ ಶ್ರೀನಿವಾಸ ಪ್ರಭು, ಉತ್ಸವ ಸಮಿತಿ ಅಧ್ಯಕ್ಷ ಸದಾಶಿವ ಡಿ. ಪಡುವರಿ, ಕಾರ್ಯದರ್ಶಿ ನಾರಾಯಣ ಕೆ., ಮೊದಲಾದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಮರ್ಥ ಭಾರತ ಬೈಂದೂರು ಆಶ್ರಯದಲ್ಲಿ ಜರುಗಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 154ನೇ ಜನ್ಮದಿನಾಚರಣೆ ‘ವಿವೇಕ ಪರ್ವ’ ಬೃಹತ್ ಸಾರ್ವಜನಿಕ ಸಮಾರಂಭ ಅದ್ಭುತ ಯಶಸ್ಸು ಕಂಡಿದೆ. ಬೈಂದೂರಿನಲ್ಲಿ ಮೊದಲ ಭಾರಿಗೆ ದೊಡ್ಡ ಸಂಖ್ಯೆಯಲ್ಲಿ ಸೇರಿದ ಜನ ವಿವೇಕಾಂನದರ ಚಿಂತನೆಗಳಿಗೆ ಕಿವಿಯಾದರು. ಬೈಂದೂರು ನಗರ ಕೆಸರಿಮಯ: ಕಾರ್ಯಕ್ರಮಕ್ಕಾಗಿ ಯಡ್ತರೆಯಿಂದ ಬೈಂದೂರು ಪೇಟೆಯ ಬಂಟಿಂಗ್ಸ್, ಬಾವುಟಗಳಿಂದ ಸಂಪೂರ್ವ ಕೆಸರಿಮಯವಾಗಿ ಮಾರ್ಪಟ್ಟಿತ್ತು. ಬೈಂದೂರಿನ ಗಾಂಧಿ ಮೈದಾನದಲ್ಲಿ ಬೃಹತ್ ವೇದಿಕೆಯನ್ನು ಸಿದ್ಧಗೊಳಿಸಿಲಾಗಿತ್ತು. ಎಲ್ಲೆಡೆಯೂ ಭಗವಧ್ವಜ ರಾರಾಜಿಸುತ್ತಿದ್ದವು. 6000 ವಿವೇಕ ಕಂಕಣ – 1500 ವಿವೇಕನಂದ ಭಾವಚಿತ್ರವಿರುವ ಟಿಶರ್ಟ್ ವಿಕ್ರಯ: ಸ್ವಾಮಿ ವಿವೇಕಾನಂದರ ಜನ್ಮದಿನದಿಂದ ಸಮರ್ಥ ಭಾರತ ಬೈಂದೂರು ಉತ್ತಮನಾಗು ಉಪಕಾರಿಯಾಗು ಎಂಬ ಸಂದೇಶವಿರುವ 6000 ವಿವೇಕ ಬ್ಯಾಂಡ್ ಹಾಗೂ 1500 ಟಿಶರ್ಟ್‌ಗಳನ್ನು ಮಾರಟ ಮಾಡಿದೆ. ರಾಜ್ಯದಲ್ಲಿಯೇ ಮೊದಲೆಂಬಂತೆ 6000 ಮಂದಿ ವಿವೇಕ ಕಂಕಣ ತೊಟ್ಟಿದ್ದರು. ವಿವೇಕ ಬ್ಯಾಂಡ್ ಹಾಗೂ ಟಿಶರ್ಟ್ ಮಾರಾಟದಿಂದ ಬರುವ ಲಾಭವನ್ನು ಸಮರ್ಥ ಭಾರತ ಸಂಸ್ಥೆಯು ವಿವಿಧ ಸೇವಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 1400ವರ್ಷದ ಇತಿಹಾಸ ಇರುವ ಸೇನಾಪುರ ಶ್ರೀ ಮಹಾವಿಷ್ಣು ದೇವಸ್ಥಾನ ನವೀಕೃತ ಶಿಲಾಮಯ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮ ಕಲಶೋತ್ಸವ ಫೆ.5 ರಿಂದ 8ರ ತನಕ ಸೇನಾಪುರದಲ್ಲಿ ಜರುಗಲಿದೆ. ದೇವಸ್ಥಾನ ಜೀಣೋದ್ಧಾರ ಸಮಿತಿ ಅಧ್ಯಕ್ಷ ಬಿ.ಅರಣು ಕುಮಾರ್ ಶೆಟ್ಟಿ, ದೇವಸ್ಥಾನ ಅರ್ಚಕ ವೆಂಕಟೇಶ ಮಂಜರ ನೇತೃತ್ವದಲ್ಲಿ ಕೋಟ ಲಕ್ಷ್ಮೀನಾರಾಯಣ ಸೋಮಯಾಜಿ ಆಚಾರ್ಯತ್ವದಲ್ಲಿ ಪ್ರತಿಷ್ಠಾ ಮಹೋತ್ಸವ, ಬ್ರಹ್ಮ ಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ‍್ಯಕ್ರಮ ನಡೆಯಲಿದೆ. ಫೆ.5 ರಂದು ಮಧ್ಯಾಹ್ನ 12:35ಕ್ಕೆ ಶ್ರೀ ವಿಷ್ಣುಮೂರ್ತಿ ದೇವರ ಪ್ರತಿಷ್ಠೆ, ಬೆಳಗ್ಗೆ ೯.೩೦ ರಿಂದ ಶ್ರೀ ದೇವರ ರಜತ ಕವಚ, ಹೊರೆಕಾಣಿಕೆ ಶೋಭಾಯಾತ್ರೆ ಚಂಡೆ ವಾದ್ಯಘೋಷ ಜೊತೆ ನಾಡಾ ಗುಡ್ಡೆಯಂಗಡಿ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಿಂದ ಹೊರಡಿಲಿದೆ. ಹೊರೆ ಕಾಣಿಕೆ ಫೆ.೪, ಮತ್ತು ೫ರಂದು ಸ್ವೀಕರಿಸಲಾಗುತ್ತದೆ. ಶ್ರೀ ಹರಿ ವೇದಿಕೆಯಲ್ಲಿ ಸಂಜೆ ೭ಕ್ಕೆ ನಾಡಾಗುಡ್ಡೆಯಂಗಡಿ ಬೆಸ್ಟ್‌ಗೈಸ್ ತಂಡದಿಂದ ನೃತ್ಯ ವೈಭವ ಜರುಗಲಿದೆ. ಫೆ.6, ದೇವತಾ ಪ್ರಾರ್ಥನೆ, ಪ್ರಾಯಶ್ಚಿತ ಹೋಮ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತಮ ಸಾಧನೆಗೈದ, ಪ್ರತಿಭಾವಂತ ಜನರ ಒಡನಾಟ ಜೀವನದಲ್ಲಿ ಮುನ್ನಡೆಗೆ ಬಹಳ ಪ್ರೇರಣೆ ನೀಡುತ್ತದೆ ಎನ್ನುವುದಕ್ಕೆ ನಾನೇ ಸಾಕ್ಷಿ. ಉತ್ತಮ ವಾಗ್ಮಿ, ಚಿಂತಕ, ಪತ್ರಕರ್ತ, ಬ್ಯಾಂಕರ್, ಮಾರ್ಗದರ್ಶಕರಾಗಿದ್ದ, ಕೋಣಿ ಮಹಾಬಲೇಶ್ವರ ಕಾರಂತರು ನೀಡಿದ ತರಬೇತಿ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರೊಂದಿಗೆ ಸೇವೆ ಸಲ್ಲಿಸುವ ಸಾಮರ್ಥ್ಯ, ಆತ್ಮವಿಶ್ವಾಸ ಒದಗಿಸಿತು. ಕೋ.ಮ.ಕಾರಂತ ಹೆಸರಲ್ಲಿ ಇಂದು “ಕುಂದಪ್ರಭದಿಂದ ಪ್ರಶಸ್ತಿ ಪಡೆಯುತ್ತಿರುವ ಡಾ.ಹೆಚ್.ಶಾಂತಾರಾಮರು ಮಣಿಪಾಲ, ಉಡುಪಿ, ಕುಂದಾಪುರ ಸೇರಿದಂತೆ ಬಹಳ ಕಡೆ ಶೈಕ್ಷಣಿಕ, ಸಾಮಾಜಿಕ , ಹಾಗೂ ಕಲಾಕ್ಷೇತ್ರಗಳಲ್ಲಿ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರ ವಹಿಸಿ ೮೯ರ ಹರೆಯದಲ್ಲೂ ಕ್ರಿಯಾಶೀಲರಾಗಿರುವವರು. ಇವರ ಒಡನಾಟದಿಂದ ಸಾವಿರಾರು ಮಂದಿ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಅಪೂರ್ವ ಸಮಾರಂಭದಿಂದ ವಿದ್ಯಾರ್ಥಿಗಳು ಸ್ಫೂರ್ತಿ ಪ್ರೇರಣೆ ಪಡೆಯಬೇಕು ಎಂದು ಭಾರತ ಸರಕಾರದ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆಯ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ಜಯಪ್ರಕಾಶರಾವ್ ಹೇಳಿದರು. ಕುಂದಪ್ರಭ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಭಂಡಾರ್‌ಕಾರ‍್ಸ್ ಕಾಲೇಜಿನ ವಠಾರದಲ್ಲಿ ನಡೆದ ಕೋ.ಮ.ಕಾರಂತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ನಮ್ಮ ದೇಶವು ಬಲಿಷ್ಠ ದೇಶವಾಗಿ ರೂಪುಗೊಳ್ಳಬೇಕಾದರೆ ಯುವ ಜನರ ಪ್ರಯತ್ನ ಅತ್ಯಗತ್ಯ. ಸಂಘ ಸಂಸ್ಥೆಗಳ ಮೂಲಕ ಯುವಕರು ಸಮಾಜಮುಖಿ ಚಟುವಟಿಕೆಗಳನ್ನು ನಡೆಸುವುದರ ಮೂಲಕ ದೇಶದ ಅಭಿವೃದ್ಧಿಗೆ ಮುಂದಾಗಬೇಕು. ಸ್ವಹಿತಕ್ಕಾಗಿ ದುಡಿಯದೇ ಸಮಾಜದ ದೇಶದ ಒಳಿತಿಗಾಗಿ ಎಲ್ಲರೂ ಒಂದಾಗಿ ದುಡಿಯಬೇಕು. ಯುವಜನರ ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಬೇಕು. ಕಳೆದ ೨೩ವರ್ಷಗಳಿಂದ ಶೈಕ್ಷಣಿಕ, ಸಾಮಾಜಿಕ ಸಮಾಜಮುಖಿ ಕಾರ್ಯಕ್ರಮ ನಡೆಸುತ್ತಿರುವ ಗಂಗೊಳ್ಳಿಯ ಪಂಚಗಂಗಾವಳಿ ಬಳಗ ಎಲ್ಲರಿಗೂ ಮಾದರಿಯಾಗಿದೆ ಎಂದು ಬೈಂದೂರಿನ ಮಾನವ ಹಕ್ಕು ಜನಜಾಗೃತಿ ಸಮಿತಿ ಅಧ್ಯಕ್ಷ ನವೀನಚಂದ್ರ ಉಪ್ಪುಂದ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಪಂಜುರ್ಲಿ ದೇವಸ್ಥಾನದ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಪಂಚಗಂಗಾವಳಿ ಬಳಗದ ೨೩ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ ಹಾಗೂ ಶ್ರೀ ಪಂಜುರ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಿ.ಪುರುಷೋತ್ತಮ ಆರ್ಕಾಟಿ ಶುಭಾಶಂಸನೆಗೈದರು. ಹಕ್ಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಜಿತ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಕೇಂದ್ರಭಾಗದಲ್ಲಿರುವ ದಿನಸಿ ಅಂಗಡಿ ನಾಯಕ್ ಸ್ಟೋರ‍್ಸ್‌ಗೆ  ರಾತ್ರಿ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ. ಅಕಸ್ಮಿಕವಾಗಿ ಬೆಂಗಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅವಘಡದಿಂದಾಗಿ ಲಕ್ಷಾಂತರ ಮೌಲ್ಯದ ರೂಪಾಯಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬಡಾಕೆರೆ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಬಳಿ ಸೋಮವಾರ ಸಂಭವಿಸಿದ ಸ್ಪೋಟ, ನಾಗರಿಕರನ್ನು ಕೆಲಕಾಲ ಆಂತಕಕ್ಕೀಡುಮಾಡಿತು. ಸ್ಪೋಟದ ಶಬ್ದ ಕೇಳಿ ಬಾಂಬ್ ಸ್ಪೋಟ ಸಂಭವಿಸಿರಬಹುದು, ಬಡಾಕೆರೆಯ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಬಳಿ ಬಾಂಬ್ ಇಡಲಾಗಿದೆ ಎಂಬ ಮಾತುಗಳು ಕೇಳಿಬಂದವು. ಪೊಲೀಸರಿಗೂ ಮಾಹಿತಿ ತಲುಪಿ ಸ್ಥಳಕ್ಕೆ ಬಂದು ಪರಿಶೀಲಿಸಿದ ಬಳಿಕ ನಿಜಾಂಶ ಅರಿವಿಗೆ ಬಂದಿದೆ. ಕಿಡಿಗೇಡಿಗಳು ಐಸ್‌ಕ್ರೀಮ್ ಬಾಲ್‌ನಲ್ಲಿ ಪಟಾಕಿಯ ಮದ್ದುತುಂಬಿಸಿ ಬಟ್ಟೆ ಸುತ್ತಿ ಕಸದ ರಾಶಿ ಬಳಿ ಇಟ್ಟಿದ್ದರು. ಬೆಳಿಗ್ಗೆ ಮಹಿಳೆಯೋರ್ವರು ಕಸದ ರಾಶಿಯನ್ನು ಒಟ್ಟುಮಾಡಿ ಬೆಂಕಿ ಹಚ್ಚಿದಾಗ ಅದರ ಮಧ್ಯೆ ಇದ್ದ ಸಿಡಿಮದ್ದು ತುಂಬಿದ ಬಾಲ್‌ಗೆ ಬೆಂಕಿ ತಗುಲು ಸ್ಪೋಟಗೊಂಡು ದೊಡ್ಡ ಸದ್ದು ಮಾಡಿತ್ತು. ಇದು ಬಾಂಬ್ ಇರಬಹುದು ಎಂಬ ಗಾಳಿಸುದ್ದಿ ಹರಡಿ ಪರಿಸರದ ಜನರನ್ನು ಆತಂಕಕ್ಕೀಡು ಮಾಡಿತ್ತು. ಪೊಲೀಸರು ಬಂದು ಪರಿಶೀಲಿಸಿ ನಿಜಾಂಶ ಬಯಲಿಗೆಳೆದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ರೀತಿಯ ಕಲಾಪ್ರಕಾರಗಳು ಸಮಾಜಕ್ಕೆ ಬಹುಮುಖ್ಯದುದು. ಮನುಷ್ಯ, ಸಮುದಾಯ, ಭಾಷೆ ಮುಂತಾದವುಗಳ ನಡುವಿನ ಅರ್ಥೈಸುವಿಕೆಗೆ ನಾಟಕ ಪ್ರಮುಖ ಮಾಧ್ಯಮವಾಗಿದೆ. ನಾಟಕ ಕೇವಲ ನಟನೆ ಮಾತ್ರವೇ ಆಗಿ ಉಳಿಯದೇ ನಟನೊಬ್ಬ ತನ್ನನ್ನು ತಾನು ಅರಿತುಕೊಳ್ಳುವ, ಸಮಾಜವನ್ನು; ಸುತ್ತಲಿನ ಭೌದ್ದಿಕ ಸ್ಥಿತಿಯನ್ನು ಅರಿಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರದೀಪ್ ಶೆಟ್ಟಿ ಕೆಂಚನೂರು ಹೇಳಿದರು. ಅವರು ಲಾವಣ್ಯ ರಿ. ಬೈಂದೂರು ಆಶ್ರಯದಲ್ಲಿ 40ಸಂಭ್ರಮದ ಅಂಗವಾಗಿ ಆಯೋಜಿಸಿದ ರಂಗಲಾವಣ್ಯ 2017 ಕಲಾಮಹೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಶುಭಶಂಸನೆಗೈದರು. ಎಪ್ಪತ್ತರ ದಶಕದ ನಂತರದ ರಾಜಕೀಯ ವ್ಯವಸ್ಥೆಗಳು ಸಮಾಜದ ಜನರ ಮಾನಸಿಕ, ಭೌದಿಕ ಹಾಗೂ ಸೃಜನಶೀಲತೆಯನ್ನು ನಾಶಮಾಡಿವೆ. ರಂಗಭೂಮಿಯಲ್ಲಿನ ವ್ಯಕ್ತಿಗಳು ಸಾಮಾಜಿಕ ಹಾಗೂ ರಾಜಕೀಯ ವ್ಯವಸ್ಥೆಯನ್ನು ವಿರೋಧ ಪಕ್ಷದ ರೀತಿಯಲ್ಲಿ ನೋಡುವ ದೃಷ್ಠಿಕೋನವಿದ್ದರೆ ಸಮಾಜ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿದೆ ಎಂದ ಅವರು, ಕ್ರೀಯಾಶೀಲ ಚಟುವಟಿಕೆಗಳು ಇಲ್ಲದೇ ಹೋದರೆ ಸಮಾಜ ಬೇಗನೆ ಬಿದ್ದು ಹೋಗುತ್ತದೆ. ಸಮುದಾಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಐವತ್ತಕ್ಕೂ ಹೆಚ್ಚು ಯಕ್ಷಗಾನದ ವೃತ್ತಿ ಮೇಳಗಳು, ಹತ್ತು ಹಲವು ಸಂಘ-ಸಂಸ್ಥೆಗಳು ದಿನಂಪ್ರತಿ ನೂರಾರು ಯಕ್ಷಗಾನ ಪ್ರದರ್ಶನಗಳು, ಸಾವಿರಾರು ಪ್ರೇಕ್ಷಕರು ನಿತ್ಯ ಸಾಂಸ್ಕೃತಿಕ ಸಮಾರಾಧನೆ ನಡೆಯುವ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆ ನಿಜಾರ್ಥದಲ್ಲಿ ಸಾಂಸ್ಕೃತಿಕ ರಾಜಧಾನಿಯಾಗಿದೆ. ಯಕ್ಷಗಾನದ ಮೂಲ ಸ್ವರೂಪ ಬದಲಾಗುತ್ತಿರುವ ಈ ಹೊತ್ತಿನಲ್ಲಿ ಯಕ್ಷಾಂತರಂಗವನ್ನು ಪರಿಚಯಿಸಿ ಕೊಡುವ ಈ ಪ್ರಾತ್ಯಕ್ಷಿಕೆ ಹೊಸ ಪ್ರೇಕ್ಷಕರನ್ನು ಸೆಳೆಯುವಲ್ಲಿ ಪ್ರಧಾನ ಪಾತ್ರವಹಿಸುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಯಕ್ಷದೇಗುಲ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಅವರು ಎಡಬೆಟ್ಟಿನ ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಕಾರದಿಂದ ೫ ದಿನ ಯಕ್ಷಗಾನ ಪ್ರಾತ್ಯಕ್ಷಿಕೆಯನ್ನು ಯಕ್ಷಗಾನ ದಿವಟಿಕೆಗೆ ದೀಪ ಹಚ್ಚುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಗಾಯನ, ವಾದನ, ನರ್ತನ, ಮಾತು ಮತ್ತು ಆಕರ್ಷಕ ವೇಷ ಭೂಷಣಗಳೆಂಬ ಪಂಚಾಗದ ಮೇಲೆ ನಿಂತಿರುವ ಭವ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ತಾಲೂಕು ಹೋರಾಟ ಸಮಿತಿಯು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. ಫೆಬ್ರವರಿ ೮ ೨೦೧೩ ರಂದು ಬಜೆಟ್‌ನಲ್ಲಿ ಘೋಷಣೆಯಾದ ಎಲ್ಲಾ ೪೩ ತಾಲೂಕುಗಳನ್ನ ಒಂದೇ ಹಂತದಲ್ಲಿ ಅನುಮೋದಿಸಬೇಕೆಂದು ಈ ಸಂಧರ್ಭದಲ್ಲಿ ಒತ್ತಾಯಿಸಲಾಯಿತು. ಕಂದಾಯ ಸಚಿವರ ಹೇಳಿಕೆ ಆದ್ಯತೆ ಮೇಲೆ ಕೇವಲ ೩೩ ತಾಲೂಕುಗಳನ್ನ ರಚಿಸುವ ವಿಚಾರವನ್ನ ಕೈಬಿಟ್ಟು ಯಾವುದೇ ಕಾರಣಕ್ಕೂ ಘೋಷಣೆಯಾದ ೪೩ ತಾಲೂಕುಗಳನ್ನು ತುಂಡರಿಸುವ ವಿಚಾರಕ್ಕೆ ರಾಜ್ಯ ಸಮಿತಿ ವಿರೋಧ ವ್ಯಕ್ತಪಡಿಸಿತು. ಈ ಸಂಧರ್ಭದಲ್ಲಿ ಕಂದಾಯ ಸಚಿವರು ಅನುದಾನದ ಸಮಸ್ಯೆ ಮತ್ತು ಬೇರೆಲ್ಲಾ ವಿಚಾರಗಳನ್ನ ವಿಮರ್ಶೆ ಮಾಡಿ ಸರಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ಅಭಿಪ್ರಾಯವನ್ನು ರಾಜ್ಯ ಸಮಿತಿಗೆ ನೀಡಿದರು. ಮನವಿಯಲ್ಲಿ ರಾಜ್ಯ ಸಮಿತಿಯೂ ಸರಕಾರದ ಹೊಸ ತಾಲೂಕುಗಳಿಗೆ ಕನಿಷ್ಟ ಅನುದಾನವನ್ನ ನೀಡಿದರೂ ಕೂಡಾ ಯಾವುದೇ ತಾಲೂಕು ಕೂಡಾ ವಿರೋಧ ವ್ಯಕ್ತ ಪಡಿಸುವುದಿಲ್ಲ ಎನ್ನುವ ಭರವಸೆಯನ್ನು ನೀಡಿತು. ಈ ಸಂಧರ್ಭದಲ್ಲಿ ಸಚಿವರು ಎಲ್ಲಾ ವಿಚಾರಗಳನ್ನ ಪರಿಶೀಲಿಸುತ್ತೇವೆ ಎನ್ನುವ ಭರವಸೆ…

Read More