Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮಲಯಾಳಂ ಮನೋರಮ ಸಂಸ್ಥೆಯ ಪತ್ರಿಕಾ ವಿತರಕರ ಸಮಾವೇಶವನ್ನು ಕುಂದಾಪುರದ ಎಜೆಂಟರಾದ ಶಂಕರ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ ಮಲಯಾಳಂ ಮನೋರಮ ಪತ್ರಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

* ಅಶ್ವಥ್ ಆಚಾರ್ಯ ಯಡಬೆಟ್ಟು | ಕುಂದಾಪ್ರ ಡಾಟ್ ಕಾಂ. ಕುಂದಾಪ್ರ ಕನ್ನಡು ಅಂದೇಳ್ರೆ ಕೆಲವ್ರಿಗ್ ಬಾರಿ ಸಸಾರು. ಓದುಕ್ ಬರುಕೆ ಬರದೆ ಇಪ್ಪವ್ ಮಾತ್ರ ಈ ಭಾಷಿ ಮಾತಾಡುದ್ ಅಂದೇಳಿ ಎಣ್ಸಕಂಡ್, ನಮ್ಮ ಭಾಷಿನ ಬಾರಿ ತಾತ್ಸಾರ ಮಾಡಿ ಕಾಂಬುಕೆ ಶುರು ಮಾಡಿರ್. ಅದ್ರಲ್ಲೂ ಕನ್ನಡ ಚಿತ್ರರಂಗದಾಗೆ ಕುಂದಾಪ್ರ ಕನ್ನಡ ಬರೀ ತಮಾಷಿ ಮಾಡುಕೆ ಮಾತ್ರ. ಕುಂದಾಪ್ರ ಕನ್ನಡದಗೆ ಮಾತಾಡ್ರೆ ಜನ ನಗಾರ್ಡ್ತ್ ಅಂದೇಳಿ ಅದ್ಕೆ ಬಳ್ಸಕಂಬುಕೆ ಶುರು ಮಾಡಿರ್. ಇದನ್ನೆಲ್ಲಾ ಕಾಂಬತಿಕೆ ನಂಗೆ ಎಣ್ಸುದ್, ನಮ್ಮ ಭಾಷ್ಯಂಗೆ ಎಂತಾರೂ ಸಾಧ್ಯುಕ್ ಆತೀಲ್ಯಾ ಅಂದೇಳಿ. ಹೀಂಗೆ ನಮ್ ಭಾಷಿ ನಮ್ಮ ಜನ ನಮ್ಮ ನಾಟ್ಕ ಕಂಡ್ಕಂಡ್ ಖಷಿ ಪಡುವತಿಗೆ ಎಂಟ್ರಿ ಕೊಟ್ರ್ ಕಾಣಿ ರವಿ ಬಸ್ರೂರ್ ಅಂದೇಳಿ. ಕುಂದಾಪ್ರ ಕನ್ನಡದಾಗೆ ಫಸ್ಟ್ ಬಂತ್ ಕಾಣಿ ಒಂದ್ ಹಾಡ್ ” ಅಪ್ಪಯ್ಯ ಕಾಣಿ ಅಬ್ಬಿ ಮಾಡತ್ ಕಾಣಿ”. ಯಾರ್ ಬಾಯಗೇ ಕೇಂಡ್ರು ಅದೇ ಹಾಡ್, ಮಕ್ಕಳ್ ಮರಿ, ಹಳಿಯರ್, ಎಳಿಯರ್ ಎಲ್ಲರೂ ಪದ್ಯ ಕೇಂಡ್ ತಲೆ…

Read More

ಕುಂದಾಪ್ರ ಡಾಟ್ ಕಾಂ ವರದಿ ಶಂಕರನಾರಾಯಣ: ಮೆಸ್ಕಾಂ ಕಛೇರಿ ಆರಂಭಿಸಿ ನಾಲ್ಕು ತಿಂಗಳುಗಳೇ ಕಳೆದಿವೆ. ತಿಂಗಳಿಗೆ ಬರೊಬ್ಬರಿ ಇಪ್ಪತ್ತು ಸಾವಿರ ರೂ. ಬಾಡಿಗೆಯನ್ನು ನೀಡಲಾಗುತ್ತಿದೆ. ಆದರೆ ಅಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂಧಿಗಳೇ ನೇಮಕಗೊಳ್ಳದೇ ದಿನವಿಡಿ ಮುಚ್ಚಿಯೇ ಇರುವ ಪರಿಸ್ಥಿತಿ. ಇದು ಶಂಕರನಾರಾಯಣದ ಬಾಡಿಗೆ ಕಟ್ಟಡವೊಂದರಲ್ಲಿ ಆರಂಭಗೊಂಡ ಮೆಸ್ಕಾಂ ಇಲಾಖೆಯ ವಿದ್ಯುತ್ ಉಪವಿಭಾಗದ ಕೇಂದ್ರದ ದುಸ್ಥಿತಿ. ಶಂಕರನಾರಾಯಣ ತಾಲೂಕು ರಚನಾ ಹೋರಾಟ ಸಮಿತಿ ಸತತ ಹೋರಾಟದ ಫಲವಾಗಿ ಶಂಕರನಾರಾಯಣಕ್ಕೆ ವಿದ್ಯುತ್ ಉಪವಿಭಾಗ ಕೇಂದ್ರ ಬಂದಿತ್ತು. ಸುಮಾರು 27 ಗ್ರಾಮಗಳ ವ್ಯಾಪ್ತಿ ಹೊಂದಿರುವ ಮೆಸ್ಕಾಂ ಇಲಾಖೆ ವಿದ್ಯುತ್ ಉಪವಿಭಾಗ ನಾಲ್ಕು ತಿಂಗಳ ಹಿಂದೆ ಶಂಕರನಾರಾಯಣದಲ್ಲಿ ಲೋಕಾರ್ಪಣೆಗೊಂಡಿತ್ತು. ಆದರೆ ಈವರೆಗೂ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜನೆಯಾಗದೇ ಶಂಕರನಾರಾಯಣ ಪರಿಸರದ ಜನರಿಗೆ ಕಚೇರಿ ನೆರವಿಗೆ ಬಂದಿಲ್ಲ ಎನ್ನೋದು ದುರಂತ. ಶಂಕರನಾರಾಯಹಣ ಹೆ.ಬಿ.ಆರ್. ಕಾಂಪ್ಲೆಕ್ಸ್‌ನ ಬಾಡಿಗೆ ಕಟ್ಟಡದಲ್ಲಿ ಕಛೇರಿಯಿದ್ದು, ಕೇವಲ ವಿದ್ಯುತ್ ಬಿಲ್ಲು ತೆಗೆದುಕೊಳ್ಳಲು ಮಾತ್ರ ಒಬ್ಬ ಸಿಬ್ಬಂದಿ ಬೆಳಿಗ್ಗೆ ಹೊತ್ತು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಸಮಯದಲ್ಲಿ ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ಸಂಘ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಚಾರ್ಮಕ್ಕಿ ನಾರಾಯಣ ಶೆಟ್ಟಿ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರ ಶನಿವಾರ ನಾಗೂರಿನ ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಣ್ಣಿನ ಬಗ್ಗೆ ಜನರಲ್ಲಿ ಮಾಹಿತಿ ಕೊರತೆ ಇದೆ. ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಕೊಳ್ಳುವುದರ ಮೂಲಕ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಲಯನ್ಸ್ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿವಮೊಗ್ಗ ಜವಹರಲಾಲ್ ನೆಹರು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ. ವಿಭಾಗದ ಸಹಾಯಕ ಪ್ರಾಧ್ಯಾಪಕ, ಬೈಂದೂರಿನ ಸಂತೋಷ್ ಶ್ಯಾನುಭಾಗ್ ಮಂಡಿಸಿದ ‘ಮಾರ್ಕೇಟಿಂಗ್ ಆಫ್ ಹೆಲ್ತ್ ಇನ್ಸೂರೆನ್ಸ್ ಇನ್ ರೂರಲ್ ಎರಿಯಾಸ್, ಎ ಸ್ಟಡಿ ವಿತ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಎಂಡ್ ಉಡುಪಿ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ’ ಎಂಬ ಪ್ರೌಢ ಪ್ರಬಂಧಕ್ಕೆ ಬೆಳಗಾವಿಯ ಸರ್. ಎಂ. ವಿಶ್ವೇಶ್ವರಯ್ಯ ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ಪ್ರದಾನಿಸಿದೆ. ಈ ಸಂಶೋಧನೆಗೆ ಎಂ.ಬಿ.ಎ. ವಿಭಾಗದ ನಿರ್ದೇಶಕ ಡಾ. ಎಂ. ಜಿ. ಕೃಷ್ಣಮೂರ್ತಿ ಮಾರ್ಗದರ್ಶನ ನೀಡಿದ್ದರು. ಶಿರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಪದವಿಪೂರ್ವ ಕಾಲೇಜು, ಭಟ್ಕಳ ಅಂಜುಮಾನ್ ಕಾಲೇಜು ಹಾಗೂ ನಿಟ್ಟೆಯ ಎನ್‌ಎಂಎಐಟಿಯ ಹಳೆವಿದ್ಯಾರ್ಥಿಯಾಗಿರುವ ಇವರು ಬೈಂದೂರು ಶ್ಯಾನುಭಾಗ್ ಹೋಟೆಲ್‌ನ ದಿ. ಶ್ರೀನಿವಾಸ್ ಶ್ಯಾನುಭಾಗ್ ಹಾಗೂ ರತ್ನಾವತಿ ಎಸ್. ಶ್ಯಾನುಭಾಗ್ ಇವರ ಪುತ್ರರಾಗಿರುತ್ತಾರೆ. ಮೇ.5ರಂದು ನಡೆಯಲಿರುವ ವಿಶ್ವವಿದ್ಯಾನಿಲಯದ 15ನೇ ಘಟಿಕೋತ್ಸವದಲ್ಲಿ ಸಂತೋಷ್ ಶ್ಯಾನುಭಾಗ್ ಪದವಿ ಸ್ವೀಕರಿಸಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಲ್ಕನ್ ಕ್ಲಬ್ ಕಣ್ಣುಕೆರೆ ಹಾಗೂ ಮುಸ್ಲಿಂ ಭಾಂದವರು ಬೇಳೂರಿನ ಸ್ಪೂರ್ತಿ ಧಾಮಕ್ಕೆ ಕೊಡಮಾಡಿದ ಆಂಬ್ಯುಲೆಸ್‌ನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ಮಾರುತಿ ಒಮ್ನಿಯ ಕೀಲಿ ಕೈಯನ್ನು ಸ್ಪೂರ್ತಿಧಾಮದ ಸಂಚಾಲಕರಾದ ಡಾ.ಕೇಶವ ಕೋಟೇಶ್ವರ ಅವರಿಗೆ ಹಸ್ತಾಂತರಿಸಿದರು. ಬಿಜೆಪಿ ಕುಂದಾಪುರ ಕ್ಷೇತ್ರಾಕ್ಷಧ್ಯ ರಾಜೇಶ ಕಾವೇರಿ, ಉದ್ಯಮಿ ವಿ.ಕೆ.ಮೋಹನ್, ಬಿ.ಎಮ್.ಹಂಜಾ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಧಾರ್ಮಿಕತೆಯ ಭಾವನೆಗಳು ಹೆಚ್ಚುತ್ತಿರುವುದರಿಂದ ಧಾರ್ಮಿಕ ಕೇಂದ್ರಗಳು ಅಭಿವೃದ್ದಿ ಪಥದತ್ತ ಸಾಗುತ್ತಿದೆ. ನಮ್ಮಲ್ಲಿರುವ ದೈವೀಕ ಭಾವನೆಗಳನ್ನು ಉದ್ದೀಪನೆಗೊಳಿಸುವ ಮೂಲಕ ಶ್ರದ್ದಾ, ಭಕ್ತಿಯಿಂದ ಆರಾಧಿಸಿದರೆ ಭಗವಂತನ ಸಾಕ್ಷಾತ್ಕಾರ ಸಾಧ್ಯ ಎಂದು ವಿಹಿಂಪ ದಕ್ಷಿಣ ಕನ್ನಡ ಪ್ರಾಂತ ಮಠಮಂದಿರಗಳ ಸಂಪರ್ಕ ಪ್ರಮುಖ್ ಹೆಚ್. ಪ್ರೇಮಾನಂದ ಶೆಟ್ಟಿ ಹೇಳಿದರು. ಹೇರೂರು ಗ್ರಾಮದ ಪಡುಬೆಟ್ಟು ಯರುಕೋಣೆ ಶ್ರೀ ಮರ್ಲುಚಿಕ್ಕು ಮತ್ತು ಸಪರಿವಾರ ದೈವಸ್ಥಾನದ ನೂತನ ಗುಡಿಸಮರ್ಪಣೆ ಮತ್ತು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ನಡೆದ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಭಕ್ತಿಯಿಂದ ದೇವರ ಪ್ರೀತಿಗಳಿಸಲು ಸಾಧ್ಯವಿದೆ. ಭಕ್ತಿ, ಶ್ರದ್ಧೆ ಹಾಗೂ ಪ್ರಾಮಾಣಿಕತೆಗೆ ದೇವರು ಒಲಿಯುತ್ತಾನೆ. ನಮ್ಮಲ್ಲಿ ಕರುಣೆ, ಮಿತೃತ್ವ ಭಾವನೆ ಇರಬೇಕು. ಯಾರೊಬ್ಬರನ್ನು ದ್ವೇಷಿಸದೆ ಎಲ್ಲರನ್ನೂ ಪ್ರೀತಿಯಿಂದ ನಾವೆಲ್ಲರೂ ಒಂದೇ ಎಂಬ ಭಾವದಿಂದ ನೋಡಬೇಕು. ನಮ್ಮಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿಕೊಂಡು ಸಮಾಜದಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಬೆಳೆಯಬೇಕು ಎಂದ ಅವರು ಜಾತಿ, ಧರ್ಮದ ವಿಷಬೀಜ ಬಿತ್ತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಇಲ್ಲಿನ ಕೊರಗ ಕಾಲನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಆರೋಗ್ಯ ತಪಾಸಣೆ ಈಚೆಗೆ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಉದ್ಘಾಟಿಸಿ, ಆರೋಗ್ಯ ಮಾಹಿತಿ ನೀಡಿದರು. ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತಿಸಿ, ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್ಯ ವಂದಿಸಿದರು. ಕೊರಗ ಯುವ ಕಲಾವೇದಿಕೆಯ ಶೇಖರ ಮರವಂತೆ ನಿರೂಪಿಸಿದರು. ವೈದ್ಯಾಧಿಕಾರಿ ಮತ್ತು ಆರೋಗ್ಯ ಕೇಂದ್ರದ ಸಿಬಂದಿ, ಆಶಾ ಕಾರ್ಯಕರ್ತೆಯರು ತಪಾಸಣೆ ನಡೆಸಿ, ಅಗತ್ಯ ಇರುವವರಿಗೆ ಔಷಧಿ ವಿತರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಆರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದು ರಾಜ್ಯದ ೩೦ ಜಿಲ್ಲೆಗಳಿಗೂ ವಿಸ್ತರಿಸಿದೆ. ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು, ಆರ್ಥಿಕವಾಗಿ ಹಿಂದುಳಿದ, ಸಮಾಜದಲ್ಲಿ ಕಡೆಗಣಿಸಲ್ಪಟ್ಟ ಜನರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಟ್ಟು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಎ ಮತ್ತು ಬಿ ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯಿಂದ ಜನರು ಸಹಬಾಳ್ವೆ ನಡೆಸುವಂತಾಗಿದ್ದು, ಜನರಲ್ಲಿ ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದೆ. ಸಮಾಜದಲ್ಲಿ ಕಡೆಗಣಿಸಲ್ಪಟ್ಟವರಿಗೆ ಉಸಿರು ನೀಡಿ ಹಸಿರು ಜೀವನ ನಡೆಸಲು ಸಹಕಾರಿಯಾಗಿರುವ ಗ್ರಾಮಾಭಿವೃದ್ಧಿ ಯೋಜನೆಯು ಜನರ ಸರ್ವತೋಮುಖ ಅಭಿವೃದ್ಧಿಗೆ ನಾಂದಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆ ನೀಡಬೇಕೆಂಬ ಉದ್ದೇಶದಿಂದ ನಮ್ಮ ಹಿರಿಯರು ಸ್ವಾತಂತ್ರ್ಯವನ್ನು ತಂದುಕೊಟ್ಟರು. ಆದರೆ ನಾವು ಇಂದಿಗೂ ಸಂಘಗಳನ್ನು ಕಟ್ಟಿಕೊಂಡು ಕನಿಷ್ಠ ಕೂಲಿಗಾಗಿ ಬೇಡಿಕೆಯಿಡುವ ದುಸ್ಥಿತಿಯಲ್ಲಿದ್ದೇವೆ ಎಂದು ಸಿಐಟಿಯು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ ವಿಷಾದ ವ್ಯಕ್ತಪಡಿಸಿದರು. ಅವರು ಶಾಸ್ತ್ರೀ ವೃತ್ತದ ಬಳಿ ಸಿಐಟಿಯು ಕುಂದಾಪುರ ತಾಲೂಕು ಸಮಿತಿ ಮೇ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಇಂದು ಸರಕಾರ ಹಾಗೂ ಸ್ವಾತಂತ್ರ್ಯದ ವ್ಯಾಖ್ಯಾನ ಕೂಡ ಬದಲಾಗುತ್ತಿದೆ. ಭಾರತದಲ್ಲಿ ಗುತ್ತಿಗೆ ಪದ್ದತಿಯಡಿ ನಿಯಮಗಳನ್ನು ಗಾಳಿಗೆ ತೂರಿ ಕೆಲಸಗಾರರನ್ನು ಜಾಗತಿಕ ಒತ್ತೆಯಾಳಾಗಿಸುವ ಹುನ್ನಾರ ನಿರಂತರವಾಗಿ ಸಾಗಿದೆ. ಬೆಲೆಏರಿಕೆಯನ್ನು ಮಾಡುವ ಸರಕಾರಗಳು ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸುವ ಬಗ್ಗೆ ಒಮ್ಮೆಯೂ ಚಿಂತಿಸಿಲ್ಲ. ಪ್ರಜೆಗಳ ಕಷ್ಟ, ನಷ್ಟಗಳಿಗೆ ಸ್ಪಂದಿಸಬೇಕಾದ ಸರಕಾರಕ್ಕೆ ತಾಯಿ ಮನಸ್ಸು ದೂರವಾಗಿ ಕ್ರೌರ್ಯ ತುಂಬಿಕೊಂಡಿದೆ ಎಂದರು. ಸಿಐಟಿಯು ಕುಂದಾಪುರ ತಾಲೂಕು ಸಮಿತಿ ಅಧ್ಯಕ್ಷ ಎಚ್. ನರಸಿಂಹ…

Read More