ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಘರ್ಷ, ಮನಸ್ತಾಪ, ಕೋಪ, ದ್ವೇಷ ಇವೆಲ್ಲವನ್ನು ಬದುಕಿನಿಂದ ದೂರವಿಟ್ಟು ಪ್ರೀತಿ, ಸೌಹಾರ್ದ, ಸಹಾಯ, ಕಾರುಣ್ಯ ಮತ್ತು ಹಸನ್ಮುಖದಿಂದ ನಡೆಸುವ ಬದುಕು ಸಾರ್ಥಕ ಬದುಕೆಂದು ಕರೆಯಲ್ಪಡುತ್ತದೆ. ಬಾಳಿನಲ್ಲಿ ಕಷ್ಟ-ಕಾರ್ಪಣ್ಯ, ನೋವು-ನಲಿವು, ಆಸೆ-ನಿರಾಸೆ, ಸುಖಃ-ದುಃಖ ಮುಂತಾದ ಏಳು-ಬೀಳುಗಳ ನಡುವೆ ಆಹ್ಲಾದದಿಂದ, ನಾವೆಲ್ಲರೂ ಬದುಕಬೇಕು ಎಂಬೆಲ್ಲಾ ಮೌಲ್ಯಗಳನ್ನು ಸಾಹಿತ್ಯ ಲೋಖದ ಧ್ರುವ ತಾರೆ ಎಸ್.ಎಲ್ ಬೈರಪ್ಪರವರ ಎಲ್ಲಾ ಕೃತಿಗಳಲ್ಲೂ ಹಾಸುಹೊಕ್ಕಾಗಿತ್ತೆಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಹರೀಶ್ ಟಿ.ಜಿ. ಅಭಿಪ್ರಾಯಪಟ್ಟರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಐಕ್ಯೂಎಸಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಎಸ್.ಎಲ್. ಭೈರಪ್ಪನವರಿಗೆ ನುಡಿ-ನಮನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಈ ನುಡಿಗಳನ್ನಾಡಿದರು ಎಸ್.ಎಲ್. ಭೈರಪ್ಪನವರು ತಮ್ಮ ಆತ್ಮ ವೃತ್ತಾಂತ, ಸಾಹಿತ್ಯ, ಚಿಂತನೆ, ಗ್ರಾಮೀಣ ಸಂಸ್ಕೃತಿ ಮುಂತಾದ ಚಿಂತನಾಶೀಲ ಕೃತಿಗಳಿಂದ ಭಾರತೀಯ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24*7 ಸಹಾಯವಾಣಿ ಸಂಖ್ಯೆ:8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಊರೊಂದು ಸಾಂಸ್ಕೃತಿಕವಾಗಿ ಬೆಳೆಯಬೇಕಾದರೆ ಅಲ್ಲಿರುವ ಸಂಘ ಸಂಸ್ಥೆಗಳು ಹಾಗೂ ಅದರ ಕಾರ್ಯಚಟುವಟಿಕೆಗಳನ್ನು ನೋಡಬೇಕು. ಮಹಾಲಿಂಗೇಶ್ವರ ದೇವಸ್ಥಾನವು ಕೇವಲ ಧಾರ್ಮಿಕ ಶ್ರದ್ದಾ ಕೇಂದ್ರವಾಗಿರದೆ, ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರ ಬಿಂಧುವಾಗಿದ್ದು ಇಲ್ಲಿನ ಕಲಾರಂಗದ ಕಲಾವಿದರು ತಾವು ಬೆಳೆಯುವುದರ ಜೊತೆಗೆ ಕಳೆದ ಎಂಟತ್ತು ವರ್ಷಗಳಿಂದ ತಮ್ಮ ಸುತ್ತಮುತ್ತಲ ಪರಿಸರದ ಸುಮಾರು ಅರವತ್ತಕ್ಕೂ ಮಿಕ್ಕಿ ಮಕ್ಕಳಿಗೆ ಯಕ್ಷ ಶಿಕ್ಷಣ ವನ್ನು ನೀಡುತ್ತಾ ಆ ಮಕ್ಕಳಿಂದ ಪ್ರತಿ ವರ್ಷ ಪ್ರದರ್ಶನವನ್ನು ಏರ್ಪಡಿಸುತ್ತಾ ಬಂದಿರುವುದು ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸಿದ ಅಭೂತಪೂರ್ವ ಕೊಡುಗೆಯಾಗಿದ್ದು ಇದನ್ನು ಪದಗಳಲ್ಲಿ ಬಣ್ಣಿಸಲಾಗದೆಂದು ಖ್ಯಾತ ಹವ್ಯಾಸಿ ಯಕ್ಷಗಾನ ಕಲಾವಿದ, ಲೇಖಕ ಡಾ. ಪ್ರದೀಪ್ ವಿ. ಸಾಮಗ ಹೇಳಿದರು. ಅವರು ಇತ್ತೀಚೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಡ್ಡರ್ಸೆ ಇದರ ದೀಪೋತ್ಸವದ ಪ್ರಯುಕ್ತ ಕಲಾರಂಗದ ಬಾಲ ಕಲಾವಿದರಿಂದ ನಡೆದ ಎಂಟನೇ ವರ್ಷದ ಚಿಣ್ಣರ ಒಡ್ಡೋಲಗ ಯಕ್ಷಗಾನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಯಕ್ಷಗುರು ದಶಾವತಾರಿ ಪ್ರಸಾದ್ ಕುಮಾರ್ ಮೊಗೆಬೆಟ್ಟು ಅವರು ತಮ್ಮ ನಿರ್ದೇಶನದಲ್ಲಿ ಕಲಾರಂಗದ ಹಿರಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಐಕ್ಯೂಎಸಿ, ವಿದ್ಯಾರ್ಥಿ ವೇದಿಕೆ, ಯುವ ರೆಡ್ಕ್ರಾಸ್, ಎನ್.ಎಸ್.ಎಸ್., ರೆಂಜರ್ಸ್ ಮತ್ತು ರೋಜರ್ಸ್ ಘಟಕಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಭಾರತೀಯ ರೆಡ್ಕ್ರಾಸ್ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲಯನ್ ರಾಜೀವ್ ಕೋಟ್ಯಾನ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿವರಾಮ ಶೆಟ್ಟಿ, ಸದಾನಂದ ನಾವಡ, ನಾಗರಾಜ ವೈದ್ಯ ಎಂ., ನಾಗರಾಜ ಯು., ಉಪಸ್ಥಿತರಿದ್ದರು. ರೆಡ್ಕ್ರಾಸ್ ಘಟಕದ ಸಂಚಾಲಕರಾದ ಡಾ. ಚೇತನಾ ಎಂ. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ಸಂಯೋಜಿಸಿದರು. ರೇಜರ್ಸ್ ಸಂಚಾಲಕರಾದ ರೋಹಿಣಿ ಕಾರ್ಯಕ್ರಮವನ್ನು ನಿರೂಪಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೋಟಕ್ಕೆ ನೀರು ಬಿಡಲು ಹೋದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಬಡಾಕೆರೆಯಲ್ಲಿ ಇತ್ತೀಚಿಗೆ ಸಂಭವಿಸಿದೆ. ಬಡಾಕೆರೆ ಗ್ರಾಮದ ನಿವಾಸಿ ಜಯಶೀಲ ಶೆಟ್ಟಿ (69) ಅವರು ಮೃತಪಟ್ಟವರು. ಕೃಷಿರಾಗಿದ್ದ ಅವರು ಸೋಮವಾರ ಬೆಳಿಗ್ಗೆ ಮನೆಯಿಂದ ತೋಟಕ್ಕೆ ಬಿಡಲೆಂದು ಹೋಗಿದ್ದರು. ಮಧ್ಯಾಹ್ನವಾದರೂ ಮನೆಗೆ ಬಾರದೆ ಇದ್ದಾಗ ಮನೆಯವರು ಹುಡುಕುತ್ತಾ ತೋಟದ ಕಡೆಗೆ ಹೋಗುವಾಗ ಗುಲಾಬಿ ಶೆಡ್ತಿ ಅವರ ತೆಂಗಿನ ತೋಟದಲ್ಲಿರುವ ಕಾಯಿ ಹಾಕುವ ಉಗ್ರಾಣದ ಒಳಗೆ ಗೊಬ್ಬರದ ಚೀಲದ ಬಳಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಕೆಲವು ವರ್ಷಗಳಿಂದ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆ ಇರುವುದಾಗಿ ತಿಳಿದು ಬಂದಿದೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : ಯಾವುದೇ ಸರಕಾರಕ್ಕೂ ಅಥವಾ ಯಾವುದೇ ಸಂಸ್ಥೆಗಳಿಗೆ ನೂರಕ್ಕೆ ನೂರರಷ್ಟು ಉದ್ಯೋಗ ನೀಡಲು ಸಾಧ್ಯವಿಲ್ಲ. ಬಹಳಷ್ಟು ಮಂದಿಗೆ ಸ್ವಂತ ಉದ್ಯೋಗ ಮಾಡಲು ಅನುಭವದ ಕೊರತೆ ಇದೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಅವರು ಮಂಗಳವಾರ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪ್ರವರ್ತಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಸಂತೆ – ಬ್ಯುಸಿನೆಸ್ ಡೇ ಇದು ಆವಿಷ್ಕಾರವಲ್ಲ, ಗಂಗೊಳ್ಳಿಯ ಜನ್ಮದತ್ತ ಕಲೆಯ ಸಾಕ್ಷಾತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಈ ಪ್ರಾಯದಲ್ಲಿ ಸ್ವಂತ ಉದ್ಯೋಗ ಮಾಡುವ ಬಗ್ಗೆ ಮಾಹಿತಿ ಮತ್ತು ಅನುಭವ ದೊರೆತರೆ ಸ್ವಂತ ಉದ್ಯೋಗ ಮಾಡಲು ಸಹಕಾರಿಯಾಗುತ್ತದೆ. ಆರ್ಥಿಕ ಅಭಿವೃದ್ಧಿಗೆ ಊರಿಗೆ, ಸಮಾಜಕ್ಕೆ ದೇಣಿಗೆ, ಪರೋಪಕಾರಿ ಸೇವೆ ಮಾಡಲು ಸ್ವಉದ್ಯೋಗ ಸಹಾಯವಾಗುತ್ತದೆ. ಸರಕಾರಿ ಉದ್ಯೋಗ ಮತ್ತಿತರ ಉದ್ಯೋಗಳಿಗಾಗಿ ಅಲೆದಾಡುವ ಬದಲು ಸ್ವ ಉದ್ಯೋಗದತ್ತ ಗಮನ ಹರಿಸಬೇಕು. ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಜ್ಞಾನ ಹಾಗೂ ಅನುಭವ ನೀಡುವ ಉದ್ದೇಶದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಟ್ರೈ ಗ್ರಾಹಕರ ಹಕ್ಕುಗಳನ್ನು ಕಾಪಾಡುವ ಪ್ರಮುಖ ಸಂಸ್ಥೆಯಾಗಿದ್ದು, ಗ್ರಾಹಕರು ತಮ್ಮ ಹಕ್ಕುಗಳನ್ನು ತಿಳಿದುಕೊಂಡು ದೂರು ಸಲ್ಲಿಸಿದರೆ ಉತ್ತಮ ಸೇವೆಗಳನ್ನು ಪಡೆಯಲು ಸಾಧ್ಯವೆಂದು ಕರ್ನಾಟಕದ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ಮುಖ್ಯ ಪೋಷಕ ಹಾಗೂ ಸ್ಥಾಪಕ ಸೋಮಶೇಖರ್ ವಿ.ಕೆ. ತಿಳಿಸಿದರು. ಅವರು ಆಳ್ವಾಸ್ ಸಂಸ್ಥೆಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕದ ಗ್ರಾಹಕ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟ ಹಾಗೂ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಹಕರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ದೂರಸಂಪರ್ಕ ಸೇವೆಗಳ ಕುರಿತ ಅನೇಕ ಮಾಹಿತಿಗಳನ್ನು ನೀಡಿದ ಅವರು, ನೆಟ್ವರ್ಕ್ ತೊಂದರೆಗಳು, ನಿಧಾನಗತಿಯ ಇಂಟರ್ನೆಟ್, ಹೆಚ್ಚುವರಿ ಶುಲ್ಕ ವಿಧಿಸುವುದು, ಅನುಮತಿ ಇಲ್ಲದೆ ಸಿಮ್ ಸಕ್ರಿಯಗೊಳ್ಳುವುದು, ಕೆವೈಸಿ (ಏಙಅ) ಸಮಸ್ಯೆಗಳು, ಮೊಬೈಲ್ ನಂಬರ್ ಪೋರ್ಟಿಂಗ್ ವಿಳಂಬವಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಗ್ರಾಹಕರಿಗೆ ಟ್ರೈ ನೀಡಿರುವ ಮುಖ್ಯ ಹಕ್ಕುಗಳಾದ ಗುಣಮಟ್ಟದ ಸೇವೆ ಪಡೆಯುವ ಹಕ್ಕು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ರಹ್ಮಾವರ ಕ್ಯೂಟ್ ಬ್ಯೂಟಿ ಪಾರ್ಲರ್ ಮಾಲಕರು ಹಾಗೂ ಬ್ರಹ್ಮಾವರ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಸುಜಾತಾ ಅಡ್ಡೆಂತಾಯ, ಅವರು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರ ತುಂಬಾ ಆಸಕ್ತಿದಾಯಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಮಹಿಳೆಯರಿಗೆ ಬಹಳ ಮುಖ್ಯವಾಗಿ ಬಾಹ್ಯ ಸೌಂದರ್ಯದ ಜೊತೆಗೆ ಆಂತರಿಕ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಹಾಗಾಗಿ ಬಹಳ ಬೇಡಿಕೆ ಹಾಗೂ ಆಸಕ್ತಿದಾಯಕ ಉದ್ಯಮ ಇದಾಗಿದೆ. ಅವರು 37 ವರ್ಷಗಳ ಅನುಭವವನ್ನು ಪಡೆದುಕೊಂಡಿರುವುದು, ಅವರ ಉದ್ಯಮದ ಮೇಲಿನ ಆಸಕ್ತಿ ಹಾಗೂ ಶ್ರದ್ಧೆಯನ್ನು ತೋರಿಸುತ್ತದೆ. ಬ್ರಹ್ಮಾವರದಲ್ಲಿ ಪ್ರಥಮ ಬಾರಿಗೆ ಬ್ಯೂಟಿ ಪಾರ್ಲರ್ ಪ್ರಾರಂಭಿಸಿರುವುದು, ಹೆಮ್ಮೆಯ ವಿಷಯವಾಗಿದೆ ಎಂದು ಅವರ ಪ್ರಾರಂಭದ ದಿನಗಳನ್ನು ಮೆಲುಕು ಹಾಕಿದರು. ಹಾಗೆಯೇ ದಿನದಿಂದ ದಿನಕ್ಕೆ ಉದ್ಯಮದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನ ಪ್ರತಿಭಾ ಪರಂಪರೆಗೆ ಮತ್ತೊಂದು ಸುವರ್ಣ ಕಿರೀಟ ಸೇರ್ಪಡೆಗೊಂಡಿದೆ. ಸಂಸ್ಥೆಯ ಹೆಮ್ಮೆಯ ಬಾಲ ಪ್ರತಿಭೆಗಳಾದ ಪನ್ನಗ ಕೆ. ಆರೂರ್ ಹಾಗೂ ಸ್ಮಿತಾ ಬಿ. ಕೆ. ಅವರಿಗೆ “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬ ಮಾತಿನಂತೆ 2025ರ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಲಭಿಸಿರುವುದು ಸಂಸ್ಥೆಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಬಹುಮುಖ ಪ್ರತಿಭೆಯಾದ ಪನ್ನಗ ಕೆ. ಆರೂರ್ ಅವರು ಕೇವಲ ನಾಲ್ಕನೇ ವಯಸ್ಸಿನಲ್ಲಿಯೇ ಕಲಾರಾಧನೆಗೆ ತೊಡಗಿಕೊಂಡು, ಐದನೇ ವಯಸ್ಸಿನಲ್ಲಿ ಯಕ್ಷಸಿರಿ ಮಕ್ಕಳ ಬಾಲ ಮೇಳದಲ್ಲಿ ವೇಷಧಾರಿಯಾಗಿ ತನ್ನ ಕಲಾ ಪಯಣವನ್ನು ಆರಂಭಿಸಿದ್ದಾರೆ. ಯಕ್ಷಗಾನದಿಂದ ವಾದ್ಯಗಾನದವರೆಗೆ ಅವರ ಪ್ರಯಾಣ ನಿರಂತರವಾಗಿದ್ದು, ಕೊಳಲು, ಚಂಡೆ, ಮದ್ದಲೆ, ಕಂಜಿರ ಸೇರಿದಂತೆ ಅನೇಕ ವಾದ್ಯಗಳಲ್ಲಿ ಆಸಕ್ತಿ ತಳೆದು, ವಿವಿಧ ವೇದಿಕೆಗಳಲ್ಲಿ ತನ್ನ ಅಪೂರ್ವ ವಾದ್ಯ ಕೌಶಲ್ಯವನ್ನು ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. ಇನ್ನೊರ್ವ ಪ್ರತಿಭಾನ್ವಿತೆ ಸ್ಮಿತಾ ಬಿ. ಕೆ. ಬಾಲ್ಯದಲ್ಲಿಯೇ ಕಲಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಗಳು, ರೈತರು ಮತ್ತು ಗ್ರಾಮೀಣ ಬಡ ಜನರಿಗೆ ಅಗತ್ಯ ಮೂಲ ಸೌಕರ್ಯ ಹಾಗೂ ಬಾಕಿ ಉಳಿದಿರುವ ಹಕ್ಕು ಪತ್ರಗಳು, ಮಂಜೂರಾತಿ ಪತ್ರಗಳನ್ನು ಒದಗಿಸಲು ಇರುವ ಅಡೆ ತಡೆ ನಿವಾರಿಸುವ ಸಂಬಂಧ ಚರ್ಚಿಸಿದರು. ಕ್ಷೇತ್ರದ ಸಮಸ್ಯೆಗಳ ಕುರಿತು ಸೆಪ್ಟೆಂಬರ್ ತಿಂಗಳಿನಲ್ಲಿ ಜನಪ್ರತಿನಿಧಿಗಳ ನಿಯೋಗದೊಂದಿಗೆ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿದ ಶಾಸಕರು ಕುಂದಾಪುರ ತಾಲೂಕಿನ ಉಳ್ಳೂರು-74 ಗ್ರಾಮದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆಯ ಬಗ್ಗೆ ಗಮನ ಸೆಳೆದಿದ್ದರು. ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದರೂ ಹಕ್ಕು ಪತ್ರ ಸಿಗದೇ ಇರುವುದು, ಅಕ್ರಮ ಸಕ್ರಮ ಅರ್ಜಿಗಳು ಇದರಿಂದ ತನಿಖೆಗೆ ಬಾಕಿಯಾಗಿರುವ ಕಾರಣ ಜನ ಸಾಮಾನ್ಯರು ಅನುಭವಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಬಾಕಿ ಉಳಿದಿದ್ದ ಅಡೆ ತಡೆಗಳನ್ನು ನಿವಾರಿಸಿ ಅಂತಿಮ ಆದೇಶ ಹೊರಡಿಸಿದಕ್ಕಾಗಿ ಜಿಲ್ಲಾಧಿಕಾರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಇದಕ್ಕಾಗಿ…
