ಕುಂದಾಪುರ: ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಆಯೋಜಿಸಿ, ಸೇವೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ರೋಟರಿ ಕ್ಲಬ್ ಕುಂದಾಪುರದ ಕಾರ್ಯ ವೈಖರಿ ಪ್ರಶಂಸನೀಯ. ಸೇವಾಗುಣ ಮನುಷ್ಯನ ವ್ಯಕ್ತಿತ್ವವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುವ ಜೊತೆಗೆ ಜಗತ್ತಿನ ಒಳಿತಿಗೆ ಕೊಡುಗೆಗಳನ್ನು ನೀಡಿದಂತಾಗುತ್ತದೆ. ಆದುದರಿಂದ ರೋಟರಿ ಫೌಂಡೇಶನ್ನಿಂದ ಸಿಗುವಂತಹ ಸೌಲಭ್ಯಗಳನ್ನು ಬಳಸಿಕೊಂಡು ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡುವಂತಾಗಲಿ ಎಂದು ರೋಟರಿ 3180 ಇದರ ರೋಟರಿ ಜಿಲ್ಲಾ ಗವರ್ನರ್ ಭರತೇಶ್ ಅಧಿರಾಜ್ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭ ಕೋಟೇಶ್ವರದ ಸಹನಾ ಕನ್ವೆನ್ಶನ್ ಸೆಂಟರ್ನಲ್ಲಿ ಆಯೋಜಿಸಿದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದರು. ರೋಟರಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್ ಕ್ಲಬ್ನ ಮುಖವಾಣಿ ಅಕಾರ್ಡ್ನ್ನು ಬಿಡುಗಡೆಗೊಳಿಸಿ ಮಾತನಾಡಿ ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯನ್ನಿಟ್ಟುಕೊಂಡು ಸಮಾಜಕ್ಕೆ ಅನನ್ಯ ಸೇವೆ ನೀಡುವ ನಿಟ್ಟಿನಲ್ಲಿ ರೋಟರಿ ಕುಂದಾಪುರ ಮಹತ್ತರ ಪಾತ್ರ ನಿರ್ವಹಿಸಿದೆ ಎಂದು ಅಧ್ಯಕ್ಷರನ್ನು ಅಭಿನಂದಿಸಿದರು. 2018-19ನೇ ಸಾಲಿನ 3182 ಇದರ ರೋಟರಿ ಜಿಲ್ಲಾ ಗವರ್ನರ್ ಆಗಿ ಆಯ್ಕೆಯಾದ ಅಭಿನಂದನ…
Author: ನ್ಯೂಸ್ ಬ್ಯೂರೋ
ಕುಂದಾಪುರ: ಎಲ್ಲಾ ರೋಗಗಳಿಗೆ ಮೂಲ ಕಾರಣವಾಗಿರುವ ವಾತ, ಪಿತ್ತ,ಕಫ ನಿಯಂತ್ರಿಸಿಕೊಳ್ಳಬೇಕು. ಶರೀರ ಮತ್ತು ಆರೋಗ್ಯ ಸಮತೋಲನೆಗೆ ಪ್ರಕೃತಿದತ್ತ ಆಹಾರ ಸೇವಿಸುತ್ತಾ ಒಳ್ಳೆಯ ವಿಚಾರ ಮತ್ತು ಭಾವನೆಗಳನ್ನು ಮೈಗೂಡಿಸಿಕೊಂಡಾಗ ಆರೋಗ್ಯವೇ ಭಾಗ್ಯ ಎನಿಸಿಕೊಳ್ಳಲು ಸಾದ್ಯ. ಪ್ರಕೃತಿಯ ಆಸೆ ಆಮಿಷಗಳಿಗೆ ಬಲಿಯಾಗದೆ ಆಂತರಿಕ ಸೌಂದರ್ಯ ವೃದ್ಧಿಸುವ ಬುಧ್ಧಿ ಮತ್ತು ಮನಸ್ಸನ್ನು ಚೇತನಗೊಳಿಸಿದಾಗ ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯುಕ್ತ ಜೀವನ ನಮ್ಮದಾಗುತ್ತದೆ ಎಂದು ಆರೋಗ್ಯ ಸಲಹೆಗಾರ ಮೆಲ್ವೀನ್ ಕ್ರಾಸ್ತಾ ಹೇಳಿದರು. ಅವರು ಹೆಮ್ಮಾಡಿ ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿ ವೇದಿಕೆ ಆಶ್ರಯದಲ್ಲಿ ನಡೆದ ಯೋಗ ಕ್ಷೇಮ ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಾ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಬ್ರಾಹ್ಮೀ ಮಹೂರ್ತದಲ್ಲಿ ಎದ್ದು ಯೋಗ ,ಪ್ರಾಣಾಯಾಮ, ದ್ಯಾನ ಮತ್ತು ದೈನಂದಿನ ಕಾರ್ಯದಲ್ಲಿ ಸಕ್ರೀಯರಾದಾಗ ದಿನವಿಡೀ ಉಲ್ಲಾಸ ನಮ್ಮದಾಗಿ ಸಕರಾತ್ಮಕ ಚಿಂತನೆಯೊಂದಿಗೆ ದೇಹ ಮತ್ತು ಮನಸ್ಸಿನ ಕೊಳೆಯನ್ನು ಹೋಗಲಾಡಿಸಿ ಜ್ಞಾನ ಬುದ್ಧಿ ಪ್ರಚೋದನೆಯಾಗುತ್ತದೆ ಎಂದರು. ಉಪನ್ಯಾಸಕ ಮಂಜುನಾಥ.ಕೆ.ಎಸ್ ಸ್ವಾಗತಿಸಿದರು. ಮಂಜುನಾಥ…
ಗಂಗೊಳ್ಳಿ: ಮನುಷ್ಯನ ಆರೋಗ್ಯ ಉತ್ತಮವಾಗಿದ್ದರೆ ಜೀವನದಲ್ಲಿ ಸಾಧನೆ ಮಾಡಲು, ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ. ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದರ ಮೂಲಕ ಆರೋಗ್ಯ ಸಂರಕ್ಷಣೆಗೆ ಜನರು ಮುಂದಾಗಬೇಕು. ಇಂದಿನ ಯಾಂತ್ರಿಕ ಯುಗದಲ್ಲಿ ಜನರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎಚ್.ಗಣೇಶ ಕಾಮತ್ ಹೇಳಿದರು. ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ ತಜ್ಞ ವೈದ್ಯರುಗಳ ನೇತೃತ್ವದಲ್ಲಿ ಗಂಗೊಳ್ಳಿಯ ಬಸ್ ನಿಲ್ದಾಣದ ಬಳಿಯಿರುವ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಬೃಹತ್ ಉಚಿತ ಹೃದೋಗ ತಪಾಸಣಾ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಪ್ರದೀಪ ಡಿ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸರಕಾರದ ಸುವರ್ಣ ಆರೋಗ್ಯ ಟ್ರಸ್ಟ್ನ ಜಿಲ್ಲಾ ವ್ಯವಸ್ಥಾಪಕ ಸಚ್ಚಿದಾನಂದ ಅವರು ಸರಕಾರದಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಪ್ರಸಿದ್ಧ ಹೃದಯರೋಗ ತಜ್ಞ ಡಾ.ನವೀನಚಂದ್ರ ಆರೋಗ್ಯದ ಬಗ್ಗೆ…
ಮನುಷ್ಯ ಜ್ಯೋತಿಯ ಕುಡಿಯಾಗಬೇಕು. ಕಿಡಿಯಾಗಬಾರದು: ಕೋ. ಶಿವಾನಂದ ಕಾರಂತ ಬೈಂದೂರು: ಕಲೆ, ನೃತ್ಯ, ಸಾಹಿತ್ಯ ಮನುಷ್ಯ ಮನುಷ್ಯನನ್ನು ಪರಸ್ಪರ ಪ್ರೀತಿಸುವುದಕ್ಕಾಗಿ ಇರುವ ಮಾಧ್ಯಮ. ಅದು ಮನೋರಂಜನೆಯನ್ನು ನೀಡುವುದಷ್ಟೇ ಅಲ್ಲದೇ ಮಾನವರ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ, ಸಾಮರಸ್ಯವನ್ನು ಬಿತ್ತುವ ಕೆಲಸ ಮಾಡುತ್ತದೆ ಎಂದು ನಿವೃತ್ತ ಉಪನ್ಯಾಸಕ ಕೋ. ಶಿವಾನಂದ ಕಾರಂತ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಇದರ 16ನೇ ವರ್ಷದ ಸಂಭ್ರಮ ’ಸುರಭಿ ಜೈಸಿರಿ’ ಉದ್ಘಾಟಿಸಿ ಮಾತನಾಡಿ ದೇಶದಲ್ಲಿ ಇಂದು ಎಲ್ಲೆಂದರಲ್ಲಿ ಮುಗ್ದರ ಮಾರಣಹೋಮ, ಕೌರ್ಯಗಳು ಎಗ್ಗಿಲ್ಲದೇ ನಡೆಯುತ್ತಿದೆ. ಇದು ವೈವಿಧ್ಯಮಯ ಸಂಸ್ಕೃತಿಯ ಭಾರತದ ಏಕತೆಗೆ ಅಡ್ಡಿಯಾಗುತ್ತಿದೆ. ಮನುಷ್ಯರು ಪರಸ್ಪರ ಪ್ರಜ್ವಲಿಸುವ ಜ್ಯೋತಿಯ ಕುಡಿಗಳಾಗಬೇಕೇ ಹೊರತು ಕಿಡಿಯಾಗಬಾರದು ಎಂದರು. ಸಿನಿಯರ್ ಸಿಟಿಜನ್ ಅಸೋಸಿಯೇಶನ್ ಅಧ್ಯಕ್ಷ ವಸಂತ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸೇನೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಚನ್ನಕೇಶವ ಉಪಾಧ್ಯಾಯ, ಸುರಭಿಯ ನಿರ್ದೇಶಕ ಕೃಷ್ಣಮೂರ್ತಿ ಉಡುಪ ಉಪಸ್ಥಿತರಿದ್ದರು. ಯುವ ಚಿತ್ರಕಲಾವಿದ ಗಿರೀಶ್ ಗಾಣಿಗ ತಗ್ಗರ್ಸೆ ಅವರನ್ನು ಸನ್ಮಾನಿಸಲಾಯಿತು. sಸಂಗೀತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಮದೂರು ಸಮೀಪದ ಬೆಳ್ಕಲ್ ಗೋವಿಂದ ತೀರ್ಥಕ್ಷೇತ್ರದಲ್ಲಿ ಎಳ್ಳುಅಮಾವಾಸ್ಯೆಯ ಪ್ರಯುಕ್ತ ಸಾವಿರಾರು ಭಕ್ತರಿಂದ ಪವಿತ್ರ ತೀರ್ಥಸ್ನಾನ ನಡೆಯಿತು. ವಿಶೇಷವಾಗಿ ಕೇಮಾರು ಸಾಂದೀಪನೀ ಸಾಧನಾಶ್ರಮದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ತೀರ್ಥ ಸ್ನಾನದಲ್ಲಿ ಭಕ್ತರೊಂದಿಗೆ ಭಾಗವಹಿಸಿ ಭಾಗವಹಿಸಿದ್ದರು. ವರ್ಷಕ್ಕೊಮ್ಮೆ ಸಾವಿರಾರು ಭಕ್ತರು ಕಠಿಣ ಹಾದಿಯನ್ನು ಕ್ರಮಿಸಿ ಎತ್ತರದಿಂದ ಬೀಳುವ ನೀರಿಗೆ ತಲೆಯೊಡ್ಡಿ ಗೋವಿಂದನ ನಾಮಸ್ಮರಣೆಗೈಯುತ್ತಾ ಸ್ನಾನ ಮುಗಿಸಿ ಬಳಿಕ ಗುಡ್ಡದ ಕೆಳಗಿರುವ ಗಣಪತಿ ಗೋವಿಂದ ದೇವರಿಗೆ ನಮಸ್ಕರಿಸಿ ಪ್ರಸಾದ ಸ್ವೀಕರಿಸುತ್ತಾರೆ. ಸುಮಾರು ಎರಡೂವರೆ ಸಾವಿರ ಫೀಟ್ ಎತ್ತರದಿಂದ ಹರಿದು ಬರುವ ನೀರು ಗೋವಿಂದ ತೀರ್ಥವಾಗಿ ಧರೆಗಿಳಿಯುವಲ್ಲಿ ನೆರೆದ ಸಹಸ್ರಾರು ಭಕ್ತರು ತೀರ್ಥಸ್ನಾನ ಮಾಡತ್ತಾರೆ. ಕೊಡಚಾದ್ರಿಯ ತಪ್ಪಲಿನಲ್ಲಿರುವ ಗೋವಿಂದ ತೀರ್ಥಕ್ಕೆ ನಡೆದೇ ಸಾಗಬೇಕಾದುದರಿಂದ ಎಳ್ಳಾಮವಾಸ್ಯೆ ದಿನ ಕಾಡು ದಾರಿಯಲ್ಲಿ ಗುಡ್ಡ ಹತ್ತಿ ಸಾಗುವವರಿಗೆ ಮಜ್ಜಿಗೆ ವ್ಯವಸ್ಥೆ, ಮಧ್ಯಾಹ್ನ ಅನ್ನಸಂತರ್ಪಣೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಕ್ಷೇತ್ರದ ಅಭಿವೃದ್ಧಿಗಾಗಿ ಕೇಮಾರು ಸಾಂದೀಪನೀ ಸಾಧನಾಶ್ರಮದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿಯವರು ಸ್ಥಳಿಯರ…
ಕೊಲ್ಲೂರು: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕ ಪದ್ಮಭೂಷಣ ಡಾ. ಕೆ.ಜೆ.ಜೇಸುದಾಸ್ ತಮ್ಮ 76ನೇ ಹುಟ್ಟುಹಬ್ಬದ ಪ್ರಯುಕ್ತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ, ಚಂಡಿಕಾ ಹೋಮ ನೆರವೇರಿಸಿದರು. ಪತ್ನಿ ಪ್ರಭಾ ದಾಸ್ ಅವರೊಂದಿಗೆ ಭಾನುವಾರ ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಅವರು ಕ್ಷೇತ್ರದ ಹಿರಿಯ ಅರ್ಚಕರಾದ ಎನ್.ಗೋವಿಂದ ಅಡಿಗ ಹಾಗೂ ತಂತ್ರಿ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿಗಳನ್ನು ನೆರವೇರಿಸಿ, ಬಳಿಕ ಶ್ರೀದೇವಿಯ ದರ್ಶನ ಪಡೆದರು. ತಮ್ಮ ನೆಚ್ಚಿನ ಗಾಯಕ ಜೇಸುದಾಸ್ ಅವರ ಹುಟ್ಟು ಹಬ್ಬದ ಆಚರಣೆಗಾಗಿ ಕೇರಳ ಹಾಗೂ ವಿವಿಧೆಡೆಗಳಿಂದ ಸಾವಿರಾರು ಅಭಿಮಾನಿಗಳು ಕೊಲ್ಲೂರಿಗೆ ಬಂದಿದ್ದರು. 1967 ನೇ ಇಸವಿಯಿಂದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿಯ ಭಕ್ತರಾಗಿರುವ ಅವರು 1972 ರಿಂದ ಪ್ರತಿ ವರ್ಷದ ಜನವರಿ 10 ರಂದು ದೇವಳಕ್ಕೆ ಭೇಟಿ ನೀಡಿ, ಚಂಡಿಕಾಹೋಮ ನೆರವೇರಿಸಿದ ಬಳಿಕ ಸಂಗೀತ ಕಛೇರಿ ನೀಡುವ ಪರಿಪಾಠವಿಟ್ಟುಕೊಂಡಿದ್ದಾರೆ. ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಂತಾಯ ಡಾ.ಜೇಸುದಾಸ್ ಹಾಗೂ ಪ್ರಭಾ ಜೇಸುದಾಸ್ ಅವರನ್ನು…
ಬೈಂದೂರು: ಇಲ್ಲಿಗೆ ಸಮೀಪದ ಹೇರೂರು ವ್ಯಾಪ್ತಿಯ ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಾತ್ರೆ ಎಳ್ಳಮಾವಾಸ್ಯೆಯಂದು ನಡೆಯಿತು. ಸೌಪರ್ಣಿಕಾ ನದಿ ತೀರದ ಪ್ರಸಿದ್ಧ ಕ್ಷೇತ್ರಕ್ಕೆ ವಿವಿಧೆಡೆಗಳಿಂದ ನಂಬಿರು ಸುಮಾರು 5 ಸಾವಿರಕ್ಕೂ ಮಿಕ್ಕಿದ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಹರಕೆಯ ತುಲಾಭಾರ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು. ಬಳಿಕ ಅನ್ನಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.
ಕುಂದಾಪುರ: ರಾಜ, ಮಹಾರಾಜರಿಲ್ಲದ ಈ ದಿನಗಳಲ್ಲಿ ಪ್ರಜೆಗಳೇ ರಾಜರು ಎನ್ನುವ ಪರಿಕಲ್ಪನೆಯಲ್ಲಿ ನಡೆಯುತ್ತಿರುವ ಉಡುಪಿಯ ಅಷ್ಟಮಠಗಳ ಪರ್ಯಾಯ ಮಹೋತ್ಸವದ ಯಶಸ್ಸಿಗಾಗಿ, ನಾಡಿನ ಎಲ್ಲ ಕಡೆಯಿಂದ ಭಕ್ತರು ನೀಡುತ್ತಿರುವ ಸ್ಪಂದನಗಳು ಈ ಉತ್ಸವವನ್ನು ರಾಜಸೂಯ ಯಾಗದಂತೆ ಬಿಂಬಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿಗೆ ಸಮೀಪದ ಕುಂಭಾಸಿಯ ಶ್ರೀ ಆನೆಗುಡ್ಡೆ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರ ತಾಲ್ಲೂಕಿನ ಅಭಿಮಾನಿಗಳು ನೀಡಿದ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು. ಭೂತ ಕನ್ನಡಿಯಲ್ಲಿ ಎಲ್ಲವೂ ದೊಡ್ಡದಾಗಿ ಕಾಣಿಸುತ್ತದೆ. ಅದರಂತೆ ಭಕ್ತರು ಪ್ರೀತಿ ಕನ್ನಡಿಯಲ್ಲಿ ನನ್ನನ್ನು ಹಾಗೂ ನಾನು ಮಾಡಿದ ಕಾರ್ಯವನ್ನು ನೋಡುವುದರಿಂದಾಗಿ ಅದೂ ದೊಡ್ಡದಾಗಿ ಕಾಣಿಸುತ್ತಿದೆ. ಯತಿ ಶ್ರೇಷ್ಠರಾಗಿದ್ದ ಮಧ್ವಾಚಾರ್ಯರು ಜಗತ್ತು ಹಾಗೂ ದೇವರು ಎನ್ನುವ ಎರಡು ಸತ್ಯವನ್ನು ತಿಳಿಸಿದ್ದರು. ದೇವರಲ್ಲಿ ಭಕ್ತಿ ಹಾಗೂ ಜಗತ್ತಿನಲ್ಲಿ ಕರ್ತವ್ಯ ಎನ್ನುವ ತಾತ್ವರ್ಯಗಳು ಇದಾಗಿದ್ದವು. ಕೇವಲ ಭಕ್ತಿ, ಧ್ಯಾನ ಹಾಗೂ ಪೂಜೆಗಳಿಂದ ಮಾತ್ರ ದೇವರನ್ನು ಸಂತೃಪ್ತಗೊಳಿಸಲು ಸಾಧ್ಯವಾಗುವುದಿಲ್ಲ, ಭಕ್ತಿಯ ಜತೆ ಸಮಾಜಮುಖಿ ಸೇವಾ ಕಾರ್ಯಗಳು ಇದ್ದಾಗ ಇನ್ನಷ್ಟು ಹೆಚ್ಚಿನ ಪೂಜಾ ಫಲವನ್ನು ಪಡೆಯಲು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬೋಟಿನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವ ಊಟ ಮುಗಿಸಿ ಕೈತೊಳೆಯುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಘಟನೆ ತಾಲೂಕಿನ ಗಂಗೊಳ್ಳಿ ಬಂದರು ಪ್ರದೇಶದಲ್ಲಿ ವರದಿಯಾಗಿದೆ. ನಾಗೂರಿನ ರಾಜು ಮೊಗವೀರ(50) ಮೃತ ದುರ್ದೈವಿ. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿನ ಲಂಗರು ಪ್ರದೇಶದಲ್ಲಿ ನಿಂತಿದ್ದ ಬೋಟಿನಲ್ಲಿ ರಾತ್ರಿ ಊಟ ಮುಗಿಸಿದ ರಾಜು ಮೊಗವೀರ ಕೈ ತೊಳೆದುಕೊಳ್ಳುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದರು. ಇದನ್ನು ಗಮನಿಸಿದ ಬೋಟಿನ ಸಿಬ್ಬಂಧಿಗಳು ಸಂಬಂಧಪಟ್ಟವರಿಗೆ ಕೂಡಲೇ ವಿಷಯ ಮುಟ್ಟಿಸಿದರಾದರೂ ರಾತ್ರಿ ವೇಳೆಯಾದ್ದರಿಂದ ಎಲ್ಲಿ ಬಿದ್ದದ್ದರೂ ಎಂದು ಪತ್ತೆಹಚ್ಚಲಾಗಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಶದ ಸಿಬ್ಭಂಧಿಗಳು ಸ್ಥಳೀಯರೊಂದಿಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ. ಆದರೆ ಈವರೆಗೆ ಮೃತರ ಶವ ಪತ್ತೆಯಾಗಿಲ್ಲ. ಗಂಗೊಳ್ಳಿ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಆ ಕಾಲದ ಹಾಡುಗಳ ಖದರೇ ಬೇರೆ. ಈ ಕಾಲದ ಸಂಗೀತ ಮತ್ತೆ ಮತ್ತೆ ಕೇಳಿದರೆ ಬೋರೇ. ಹೀಗೆ ರಾಗ ಎಳೆತ ಕೂರಬೇಡಿ! ಆ ಕಾಲ ಹಾಡುಗಳನ್ನು ಈ ಕಾಲದಲ್ಲಿ ಕೇಳುವ ಅವಕಾಶ ಕುಂದಾಪುರದ ಕಲಾಕ್ಷೇತ್ರ ಮಾಡಿಕೊಟ್ಟಿದೆ. ಕುಂದಾಪುರದ ಬೋರ್ಡ್ ಹೈಸ್ಕೂಲ್ ವಠಾರದಲ್ಲಿ ಜನವರಿ 10ರ ಭಾನುವಾರ ಸಂಜೆ 5:30ರಿಂದ ‘ಇನಿದನಿ’ ಸಂಗೀತ ಸಂಜೆ ನಡೆಯಲಿದೆ. ಇಂದಿಗೂ ಕಾಡುವ ಹಳೆಯ ಹಾಡುಗಳು ಪ್ರಸಿದ್ಧ ಸಂಗೀತಗಾರರ ಕಂಠದಿಂದ ಮೂಡಿಬರಲಿದೆ. ಇನಿದನಿ ಸಂಗೀತಪ್ರಿಯರಿಗೆ ಒಂದಿಷ್ಟು ಹೊತ್ತು ಮನೋರಂಜನೆ ನೀಡುವುದರಲ್ಲಿ ಎರಡು ಮಾತಿಲ್ಲ.
