Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ಅಂಚೆ ಇಲಾಖೆಯಲ್ಲಿ ಕಳೆದ 44 ವರ್ಷಗಳಿಂದ ಡಾಕ್ ಸೇವಕ್ ಆಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಗಂಗೊಳ್ಳಿ ಅಂಚೆ ಕಚೇರಿಯ ಇಮ್ತಿಯಾಜ್ ಅಹಮ್ಮದ್ ಅವರನ್ನು ಸಮ್ಮಾನಿಸಿ ಬೀಳ್ಕೊಡಲಾಯಿತು. ಕುಂದಾಪುರ ಅಂಚೆ ಉಪವಿಭಾಗದ ಎಎಸ್ಪಿ ಮಹೇಶ್ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ತಬ್ರೇಜ್ ಅವರು ಇಮ್ತಿಯಾಜ್ ಅಹಮ್ಮದ್ ಸಮ್ಮಾನಿಸಿ ಬೀಳ್ಕೊಟ್ಟರು. ಗಂಗೊಳ್ಳಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ವೀಣಾ, ತ್ರಾಸಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಚೆನ್ನಯ್ಯ ಪೂಜಾರಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸೊಸೈಟಿ ಮುಖ್ಯ ಕಾರ್ಯನಿರ್ವಾಹಕ ಗಣೇಶ ನಾಯಕ್, ಅಂಜುಮಾನ್ ಉರ್ದು ಘೋಷಾ ಶಾಲೆಯ ಕಾರ್ಯದರ್ಶಿ ಉಮ್ಮರ್ ಬಾಷಾ ಸಾಹೇಬ್, ನಿವೃತ್ತ ಪೋಸ್ಟ್ ಮಾಸ್ಟರ್‌ಗಳಾದ ದೇವರಾಯ ಶೇರುಗಾರ್, ಉದಯ ಕುಮಾರ್ ಶೆಟ್ಟಿ, ಅಂಚೆ ಕಚೇರಿಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಅಂಚೆಪೇದೆ ಶ್ವೇತಾ ಸ್ವಾಗತಿಸಿದರು. ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಈ ಸಮಾಜದಲ್ಲಿ ಯಾವುದೇ ವಸ್ತು ಕಳೆದುಕೊಂಡಾಗ ವೇಗವಾಗಿ ಮರೆತು ಬಿಡುವ ಕಾಲದಲ್ಲಿ ಸಂತೋಷ್ ಮೇಷ್ಟ್ರ್ ಹೆಸರನ್ನು ಸದಾಕಾಲ ನೆನಪುಳಿಯುವಂತೆ ಮಾಡುವ ಪಂಚವರ್ಣ ಕಾರ್ಯವೈಕರಿಗೆ ಮೆಚ್ಚುಗೆ ಸೂಚಿಸುತ್ತೇನೆ ಎಂದು ಸಾಹಿತಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಬುಧವಾರ ಕೋಟದ ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾಬಳಗ ಪಡುಕರೆ, ಜೈ ಹಿಂದ್ ಕ್ರಿಕೆಟಸ್೯ ಪಡುಕರೆ ಇವರ ಸಹಯೋಗದೊಂದಿಗೆ ನೆನಪಿನಂಗಳದಿ ಸಂತೋಷ್ ಮೇಷ್ಟ್ರು ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅವರ ಸಾಹಿತ್ಯಿಕ ಬದುಕು ಸೇರಿದಂತೆ ಅವರ ವಿವಿಧ ಕ್ಷೇತ್ರಗಳ ಆಯಾಮಗಳ ಕಾರ್ಯವೈಕರಿಯನ್ನು ನೆನಪಿಸುವ ಅಥವಾ ಅದರ ಬಗ್ಗೆ ಅಧ್ಯಯನದ ಮೂಲಕ ಒಂದೆಡೆ ರೂಪುಗೊಳಿಸಿ ಅವರ ಹೆಸರಿನಲ್ಲಿ ಉದಯೋನ್ಮುಖ ಸಾಹಿತಿಗಳ ಗುರುತಿಸುವ ಯೋಚನೆಗೆ ಬಣ್ಣ ಬಡಿಯುವ ಕಾರ್ಯ ಮಾಡೋಣ ಎಂದರಲ್ಲದೆ ಸಾಹಿತ್ಯಿಕ ಕ್ಷೇತ್ರದ ದಿನಗಳಲ್ಲಿ ನನ್ನ ಅವರ ಒಡನಾಟವನ್ನು ಸಂಸ್ಮರಣೆಯಲ್ಲಿ ತಿಳಿಯ ಪಡಿಸಿದರು. ಸಭೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಈ ಜೀವಜಗತ್ತಿಗೆ ಚೈತನ್ಯ ತುಂಬುವ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯವು ಸಮುದಾಯದ ಸಂವೇದನೆಯನ್ನು ಅರ್ಥ ಮಾಡಿಕೊಂಡು ಸ್ಪಂದಿಸುತ್ತಾ ಬಂದಿದೆ ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಮತ್ತು ಡೀನ್ ಆಗಿರುವ ವಿಕ್ರಮ ವಿಸಾಜಿ  ಹೇಳಿದರು. ಅವರು ಗುರುವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಯ್ಕೆದಾರರ ಅನಿಸಿಕೆ ನೆಲೆಯಲ್ಲಿ ಮಾತನಾಡಿದರು. ಸಾಹಿತ್ಯವು ಸಾಮಾಜಿಕ ಮತ್ತು ಸಾಂಸ್ಕೃತಿಕ ಜನಜೀವನ, ಸ್ಥಿತಿ -ಗತಿ, ನಿಸರ್ಗ, ಜೀವನವನ್ನು ಕುರಿತು ಆಳವಾಗಿ ಸಂಯಮದಿಂದ ಗಮನಿಸುತ್ತದೆ. ಸಾಹಿತ್ಯವು ವ್ಯವಸ್ಥೆಯ ಆಂತರ್ಯವನ್ನು ಅರ್ಥ ಮಾಡಿಕೊಳ್ಳುತ್ತದೆ. ಅಂತಹ ಸೃಜನಾತ್ಮಕ ಅರ್ಥೈಸುವಿಕೆಯನ್ನು ಶ್ರೀಧರ ಬಳಗಾರ ಅವರ ‘ಮಾರ ಮಿಂದನು’ ಕಥಾ ಸಂಕಲನದ ಕಥಾವಸ್ತುವಿನಲ್ಲಿ ಕಾಣಬಹುದು. ಕಥಾಸಂಕಲನದಲ್ಲಿರುವ ಹಲವು ಕಥೆಗಳು ಈ ಸಾಮಾಜಿಕ ಬದುಕಿನ ಸ್ಥಿತ್ಯಂತರಗಳನ್ನು ಬಹಳ ಪ್ರಬುದ್ಧವಾಗಿ ಮನಸ್ಸಿಗೆ ತಟ್ಟುತ್ತದೆ. ಕಥೆಯ ಸೃಷ್ಟಿಯಲ್ಲಿ ಅಂತರಂಗವು ಸಮುದಾಯಕ್ಕೆ ಮತ್ತು ಅದರ ಬದಲಾವಣೆಗೆ ತೆರೆದುಕೊಳ್ಳುವ ಪರಿ ನಿಜಕ್ಕೂ ಬರಹಗಾರನ ಸಂವೇದನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾಳಾವರ ವರದರಾಜ ಎಂ. ಶೆಟ್ಟಿ ಪದವಿ ಕಾಲೇಜಿನಲ್ಲಿ ಐಕ್ಯೂಎಸಿ ಘಟಕ ಮತ್ತು ಮಾದಕ ದ್ರವ್ಯ ವಿರೋಧಿ ಘಟಕದ ಆಶ್ರಯದಲ್ಲಿ ಮಾದಕ ಪದಾರ್ಥಗಳ ಬಳಕೆಯಿಂದ ಆರೋಗ್ಯ ಮತ್ತು ಸಮಾಜದ ಮೇಲಾಗುವ ದುಷ್ಪರಿಣಾಮಗಳನ್ನು ತಿಳಿಸಿ ಜಾಗೃತಿಯನ್ನು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಕುಂದಾಪುರ ಆರಕ್ಷಕ ಠಾಣೆಯ ಎ.ಎಸ್.ಐ ಶಾಂತರಾಜ ಬಿ.ಕೆ. ಯವರು ಮಾದಕ ಪದಾರ್ಥಗಳ ಬಳಕೆಯಿಂದ ತಾನು ಕೆಡುವುದಲ್ಲದೆ ತನ್ನ ಕುಟುಂಬ ಮತ್ತು ಸಮಾಜದ ಮೇಲೆ ಅನೇಕ ಕೆಟ್ಟ ಪರಿಣಾಮಗಳಾಗಿ ಬದುಕು ದುರ್ಲಭವಾಗುತ್ತದೆ. ಅದರಿಂದ ದೂರವಿರುವುದಲ್ಲದೆ ನಮಗೆ ಮಾಹಿತಿ ನೀಡಿ ಸಹಕರಿಸಬೇಕೆಂದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ವಹಿಸಿದ್ಧರು. ಮಾದಕ ದ್ರವ್ಯ ವಿರೋಧಿ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ಸಹಾಯಕ ಪ್ರಾದ್ಯಾಪಕರಾದ ತಂಗಮ್ಮ ಎ.ಎ. ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಎ. ಸ್ವಾಗತಿಸಿ, ಶೃತಿ ಆಚಾರ್ಯ ಎನ್. ಕೊನೆಯಲ್ಲಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿವಿಧ ಸಾರ್ವಜನಿಕ ಸಂಸ್ಥೆಗಳಲ್ಲಿ ದುಡಿಯುವ ಬಡ ಕಾರ್ಮಿಕರಿಗೆ ಸಿಗುವ ಇಎಸ್‌ಐ ಸೌಲಭ್ಯಕ್ಕೆ ವೇತನದ ಮಿತಿಯನ್ನು 35,000 ರೂ.ಗಳಿಗೆ ಹೆಚ್ಚಿಸುವಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಲೋಕಸಭೆಯಲ್ಲಿ ಆಗ್ರಹಿಸಿದರು. ನಿಯಮ 377ರಡಿ ಲೋಕಸಭೆಯಲ್ಲಿ ವಿಷಯ ಮಂಡಿಸಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಇಎಸ್‌ಐಗೆ ವೇತನ ಮಿತಿಯನ್ನು ಕನಿಷ್ಠ 35,000ರೂ.ಗೆ ಹೆಚ್ಚಿಸುವಂತೆ ಒತ್ತಾಯಿಸಿದರು. ಸಾರ್ವಜನಿಕ ಸಂಸ್ಥೆಗಳಲ್ಲಿ ದುಡಿಯುವ ಬಡ ಕಾರ್ಮಿಕರಿಗೆ ಇಎಸ್‌ಐ ಉತ್ತಮವಾದ ಆರೋಗ್ಯ ವಿಮೆಯಾಗಿದ್ದು, ಇಎಸ್‌ಐನಿಂದ ಅನೇಕ ಕುಟುಂಬಗಳು ಆರೋಗ್ಯ ಸೇವೆ ಪಡೆದು ನೆಮ್ಮದಿಯಿಂದಿವೆ. ಆದರೆ ಇಎಸ್‌ಐ ಯೋಜನೆಯ ಆದಾಯ ಮಿತಿ ಮಾಸಿಕ 21,000ಕ್ಕೆ ಸೀಮಿತವಾಗಿದೆ ಎಂದು ಹೇಳಿದರು. ಇತ್ತೀಚಿಗೆ ಸರಕಾರ ಮತ್ತು ಸರಕಾರೇತರ ಸಂಸ್ಥೆಗಳ ಕನಿಷ್ಠ ವೇತನ ಹೆಚ್ಚಾದ ಹಿನ್ನೆಲೆಯಲ್ಲಿ 21,000ಕ್ಕಿಂತ ಹೆಚ್ಚು ವೇತನ ಪಡೆಯುವ ಕಾರ್ಮಿಕರು ಇಎಸ್‌ಐಯಿಂದ ವಂಚಿತರಾಗುತ್ತಿದ್ದಾರೆ. ಈ ಆರೋಗ್ಯ ವಿಮೆ ಯೋಜನೆ ನೌಕರರು ಮತ್ತು ಉದ್ಯೋಗ ನೀಡುವ ಸಂಸ್ಥೆಗಳು ಒಟ್ಟಾಗಿ ಪ್ರೀಮಿಯಂ ಪಾವತಿಸುವ ಮೂಲಕ ಒದಗುವ ಯೋಜನೆಯಾದ್ದರಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ “ ವಸ್ತ್ರಭಾರತಿ 2026 – ಅಂತರ್ ತರಗತಿ ದೇಶಭಕ್ತಿ ಫ್ಯಾಷನ್ ಪೆರೇಡ್” ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ತಂಡ ಭಾವನೆ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ತರಗತಿಗಳ 23 ತಂಡಗಳು ಉತ್ಸಾಹದಿಂದ ಭಾಗವಹಿಸಿದವು. ವಿದ್ಯಾರ್ಥಿಗಳ ಉತ್ಸಾಹಭರಿತ ಪ್ರದರ್ಶನವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು, ಉಡುಪುಗಳ ಮೂಲಕ ಕೇವಲ ಫ್ಯಾಷನ್ ಪ್ರದರ್ಶನವನ್ನಷ್ಟೇ ಮಾಡದೆ, ಭಾರತದ ವೈವಿಧ್ಯತೆ, ಸಂಸ್ಕೃತಿ, ಪರಂಪರೆ ಮತ್ತು ದೇಶಭಕ್ತಿಯ ಸಂದೇಶವನ್ನು ಪರಿಣಾಮಕಾರಿಯಾಗಿ ಸಾರಿದರು. ಅಲ್ಲದೆ ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪುಗಳು, ಸ್ವಾತಂತ್ರ್ಯ ಹೋರಾಟಗಾರರ ಪ್ರತಿರೂಪಗಳು, ತ್ರಿವರ್ಣ ಧ್ವಜದ ಸ್ಫೂರ್ತಿಯ ವಿನ್ಯಾಸಗಳು ಹಾಗೂ ಪರಿಸರ ಸ್ನೇಹಿ ದೇಶಭಕ್ತಿ ಸಂದೇಶ ಸಾರುವ ಉಡುಪುಗಳ ಮೂಲಕ ತಮ್ಮ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಬಿ-ಜಿ ರಾಮ್ ಜಿ ಯೋಜನೆಯಲ್ಲಿ ಕೃಷಿ, ತೋಟಗಾರಿಕೆ, ಪಶು ಇಲಾಖೆ, ಅರಣ್ಯ ಇಲಾಖೆಗಳ ಕಾಮಗಾರಿಗಳು ಸೇರಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದ್ದು, ಇಲಾಖೆಗೆ ಲಾಗಿನ್ ಅಧಿಕಾರ ನೀಡಲಾಗಿಲ್ಲ. ಅದನ್ನು ಪಂಚಾಯತ್‌ ಮೂಲಕ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ. ಯೋಜನೆ ಆರಂಭಿಕ ಹಂತದಲ್ಲಿ ಇರುವುದರಿಂದ ಸ್ವಲ್ಪ ಗೊಂದಲ ಇದ್ದು, ನಿಧಾನವಾಗಿ ಸರಿಯಾಗುತ್ತದೆ. ಪಾವತಿ ಮಾಡುವ ವಿಧಾನವನ್ನು ಸರಳೀಕರಣಗೊಳಿಸದರೆ ಉತ್ತಮ ಎಂದು ಜಿಪಂ ಸಹಾಯಕ ನಿರ್ದೇಶಕ ವಿಜಯ ಶ್ಯಾಮ್ ಹೇಳಿದ್ದಾರೆ. ಅವರು ಕುಂದಾಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ನಮ್ಮ ಜಿಲ್ಲೆಗೆ ಲಾಭವಾಗುವ ಅನೇಕ ಕಾಮಗಾರಿಗಳು ಈ ಯೋಜನೆಯಲ್ಲಿ ಸೇರಿಕೊಂಡಿದೆ. ಶಾಲಾ ಕಟ್ಟಡ, ವಾಚನಾಲಯ, ಅಂಗನವಾಡಿ ಕಟ್ಟಡಗಳನ್ನು ಕೂಡ ನಿರ್ಮಿಸಬಹುದು. 60:40 ಅನುಪಾತವನ್ನು ಪಾಲಿಸುವುದು ಸ್ವಲ್ಪ ಕಷ್ಟವಾಗುತ್ತಿದೆ. ಕೆಲವು ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಇಟ್ಟಿದ್ದರೆ, ಕೆಲವು ಕಾಮಗಾರಿಗಳಿಗೆ ಕಡಿಮೆ ಮಾಡಲಾಗಿದೆ. ವೈಯಕ್ತಿಕ ಕಾಮಗಾರಿಗಳಿಗೆ ಎನ್‌ಎನ್‌ಎಂಎಸ್ ಆ್ಯಪ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಗೂಡ್ಸ್ ವಾಹನ ಢಿಕ್ಕಿಯಾಗಿ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಕೋಟೇಶ್ವರ ನಿವಾಸಿ ಮಧುಕರ್ ಶೇರಿಗಾರ್ ಗಾಯಗೊಂಡವರು. ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ಫಾರ್ಚೂನ್ ಕಾಲೇಜ್ ಆಫ್‌ ಪ್ಯಾರಾಮೆಡಿಕಲ್ ಸೈನ್ಸಸ್ ಇವರ ನೇತೃತ್ವದಲ್ಲಿ ಹಾಗೂ ಭಾರತೀಯ ರೆಡ್‌ ಕ್ರಾಸ್ ಸೊಸೈಟಿ ರಕ್ತದಾನ ಕೇಂದ್ರ, ಕುಂದಾಪುರ ಲಯನ್ಸ್ ಕ್ಲಬ್ ಬೃಹ್ಮಗಿರಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮೂಡಹಡು, ಪಾಂಡೇಶ್ವರ ಸಾಮ್ರಾಜ್ಜಿ ಆಟೋ ಚಾಲಕರ ಸಂಘ ಮಾಬುಕಳ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಕಾಲೇಜಿನ ಅಡಿಟೋರಿಯಂನಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಕ್ತ ಕೇಂದ್ರದ ಅಧ್ಯಕ್ಷ ಕುಂದಾಪುರ ಎಸ್. ಜಯಕರ ಶೆಟ್ಟಿ ಅವರು ಕಾರ್ಯ್ರಮವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನಕ್ಕಿಂತ ಶ್ರೇಷ್ಠದಾನ ಇನ್ನೊಂದಿಲ್ಲ. ಇನ್ನೊಬ್ಬರ ಜೀವ ಉಳಿಸುವ ಸಲುವಾಗಿ ತನ್ನ ರಕ್ತವನ್ನು ಸ್ವಯಂ ಪ್ರೇರಣೆಯಿಂದ ಯಾವುದೇ ಪ್ರತಿಫಲಪೇಕ್ಷೆ ಇಲ್ಲದೆ ಇದೊಂದು ಪವಿತ್ರ ದಾನವಾಗಿದೆ. ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ ಈ ಕಾರಣಕ್ಕೆ ರಕ್ತವನ್ನು ಪರ್ಯಾಯವಾದ ವಸ್ತು ಇನ್ನೊಂದು ಇಲ್ಲ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜ್ಞಾನ ಎಂಬುದು ಒಂದು ಶಕ್ತಿ, ಪುಸ್ತಕಗಳನ್ನು ಓದುವುದರಿಂದ ನಾವು ಜ್ಞಾನ ಸಂಪಾದನೆ ಮಾಡಬಹುದು. ಓದುವಿಕೆ ನಮ್ಮ ಭಾಷಾ ಕೌಶಲ್ಯ ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುತ್ತದೆ. ಎಲ್ಲರೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ಹೇಳಿದರು. ಅವರು ಬುಧವಾರ ಅಜ್ಜರಕಾಡು ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯ ನಿಮಿತ್ತ ನಡೆದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಪುಸ್ತಕಗಳು ಮತ್ತು ಲೇಖನಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ. ಮಹಾನ್ ಕ್ರಾಂತಿಕಾರಿಗಳ ಲೇಖನಗಳನ್ನು ಓದಿ ಪ್ರಭಾವಿತರಾಗಿ ಅದೆಷ್ಟೋ ಮಂದಿ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ್ದಾರೆ. ಪುಸ್ತಕಗಳು ಸಮಾಜ ಪರಿವರ್ತನೆಯಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಕೂಡ ಗ್ರಂಥಗಳನ್ನು ಬರೆಯಬೇಕು ಅವುಗಳನ್ನು ವಿದ್ಯಾರ್ಥಿಗಳು ಓದುವಂತಾಗಬೇಕು ಎಂದರು. ಪುಸ್ತಕಗಳು ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಪುಸ್ತಕಗಳನ್ನು ಓದುವಾಗ ನಾವು ಅದರ ಲೇಖಕನ ಜೊತೆ ಒಂದು ಸಂಬಂಧವನ್ನು ಬೆಳೆಸಿಕೊಳ್ಳುತ್ತೇವೆ. ನಮ್ಮ ಹೆತ್ತವರು…

Read More