Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರಾವಣ ಮಾಸ ಎಂಬುವುದು ಶ್ರದ್ಧಾ ಭಕ್ತಿ ಸಂಸ್ಕೃತಿಯ ಪ್ರತೀಕವಾಗಿದೆ. ಇದು ಸಾಲಿಗ್ರಾಮ ದೇಗುಲ ಜಾತ್ರಾ ಸಡಗಡವಾಗಿ ರೂಪುಗೊಂಡಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಬಂಟ್ವಾಳ ಪ್ರಕಾಶ್ ಕಾರಂತ್ ಹೇಳಿದರು. ಅವರು ಶನಿವಾರ ಒಂದು ತಿಂಗಳುಗಳ ಕಾಲ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಸಾನಿಧ್ಯದಲ್ಲಿ ಪ್ರತಿ ಶನಿವಾರ ಶ್ರಾವಣ ಮಾಸ ಸಾಂಸ್ಕೃತಿಕ ಸಡಗರಕ್ಕೆ ಚಾಲನೆ ನೀಡಿ ಪುಣ್ಯ ಕ್ಷೇತ್ರಗಳಲ್ಲಿ ಸಾಲಿಗ್ರಾಮ ದೇಗುಲ ತನ್ನದೆ ಆದ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿಕೊಂಡಿದೆ ಈ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ದೇಗುಲವನ್ನು ಸಂದರ್ಶಿಸುತ್ತಾರೆ ಇದಕ್ಕೆ ಶ್ರಾವಣ ಮಾಸ ತನ್ನದೆ ಆದ ವೈಶಿಷ್ಟತೆಯನ್ನು ಪಡೆದುಕೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ದೇಗುಲದ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಕಾರ್ಯದರ್ಶಿ ಪರಶುರಾಮ ಭಟ್ ,ಸದಸ್ಯರಾದ ಚಂದ್ರಶೇಖರ ನಾವಡ, ತಾರನಾಥ ಹೊಳ್ಳ, ಮೆನೇಜರ್ ಗಣೇಶ ಭಟ್ಟ ಉಪಸ್ಥಿತರಿದ್ದರು.ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಶ್ರೀದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್ ಸುರತ್ಕಲ್ ಯಕ್ಷಗಾನ ತಾಳಮದ್ದಲೆ ಮೀನಾಕ್ಷಿ ಕಲ್ಯಾಣ ಜರಗಿತು.ದೇಗುಲದಲ್ಲಿ ಸಾವಿರಾರು ಭಕ್ತರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ, ಅ.15: ದೇಶದಾದ್ಯಂತ ಇಂದು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು ಇದರ ಅಂಗವಾಗಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲೂ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಮಾಜಿ ಸೈನಿಕ ಸದಾಶಿವ ಪ್ರಭು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವನ ಮಾಡುತ್ತಿದ್ದೇವೆಂದರೆ ಅದಕ್ಕೆ ಸಾವಿರಾರು ಮಂದಿ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದಾಗಿ. ಇಂದಿನ ಪೀಳಿಗೆಯು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ದೇಶದ ಪ್ರಗತಿಗೆ ಕೊಡುಗೆಯನ್ನು ನೀಡಬೇಕು ಆಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಕ್ಕೆ ನ್ಯಾಯವನ್ನು ಒದಗಿಸಿದಂತಾಗುತ್ತದೆ. ಗಡಿ ಕಾಯುವ ಸೈನಿಕನಿಂದಾಗಿ ನಾವೆಲ್ಲರೂ ಈ ದೇಶದಲ್ಲಿ ಸುರಕ್ಷಿತವಾಗಿ ಜೀವನ ನಡೆಸಲು ಸಾಧ್ಯ. ಪ್ರಾಮಾಣಿಕ,ನಿಷ್ಠೆ, ಶಿಸ್ತು ಮತ್ತು ಶ್ರದ್ಧೆಯಿಂದ ದುಡಿದು ತಮ್ಮದೇ ಕ್ಷೇತ್ರದಲ್ಲಿ ಕೊಡುಗೆಗಳನ್ನು ನೀಡುವುದರ ಮೂಲಕ ಸ್ವಾತಂತ್ರ್ಯದ ಆಶೋತ್ತರಗಳನ್ನು ಈಡೇರಿಸಬೇಕು. ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು ಸಾಮಾಜಿಕ ಮಾಧ್ಯಮಗಳನ್ನು ಧನಾತ್ಮಕವಾಗಿ ಬಳಸಿಕೊಂಡಾಗ ಈ ದೇಶವು ಇನ್ನು ಹೆಚ್ಚಿನ ಪ್ರಗತಿಯನ್ನು ಸಾಧಿಸಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸ್ವಾತಂತ್ರ್ಯವೆಂದರೆ ನಮಗೆ ಇಷ್ಟ ಬಂದಂತೆ ಬದುಕುವ ಹಕ್ಕು ಮಾತ್ರವಲ್ಲ; ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ನಿವೃತ್ತ ಭಾರತೀಯ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಶನಿವಾರ ಕೆ.ವಿ. ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ನಡೆದ 80ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ, ಪಾಲಕರು, ಪೋಷಕರು ಹಾಗೂ ಊರಿನ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ‍್ಯ ಹೋರಾಟ, ಸ್ವಾತಂತ್ರ‍್ಯೋತ್ತರ ಭಾರತದ ಸಾಧನೆ, ರಾಷ್ಟ್ರೀಯ ಭದ್ರತೆ, ಪ್ರಜಾಪ್ರಭುತ್ವ, ಸಂವಿಧಾನ, ವೈವಿಧ್ಯತೆಯಲ್ಲಿ ಏಕತೆ ಹಾಗೂ ದೇಶದ ಭವಿಷ್ಯ ನಿರ್ಮಾಣದಲ್ಲಿ ಯುವಜನರ ಪಾತ್ರದ ಕುರಿತು ವಿವರವಾಗಿ ಮಾತನಾಡಿದರು. ತ್ಯಾಗದ ಫಲವೇ ಸ್ವಾತಂತ್ರ್ಯಭಾರತದ ಸ್ವಾತಂತ್ರ್ಯವು ಒಂದು ದಿನದಲ್ಲಿ ದೊರೆತದ್ದಲ್ಲ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಲ್ಲಿ ರಾಷ್ಟ್ರಪ್ರೇಮದ ಸಂದೇಶ ಸಾರಿದ ಸಾಲಿಗ್ರಾಮ ಕಯಾಕಿಂಗ್ ತಂಡ ರಾಷ್ಟ್ರಪ್ರೇಮವನ್ನು ಪ್ರತಿಯೊಬ್ಬರ ಹೃದಯದಲ್ಲಿ ಬಿತ್ತುವ ಉದ್ದೇಶದಿಂದ ಸರ್ಕಾರ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ, ಪ್ರತಿ ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸುವ ಸಂಕಲ್ಪದೊಂದಿಗೆ ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಾಲಿಗ್ರಾಮ ಕಯಾಕಿಂಗ್ ತಂಡ ಪ್ರತಿವರ್ಷದಂತೆ ಈ ಬಾರಿಯೂ ವಿಭಿನ್ನ ಹಾಗೂ ವಿಶಿಷ್ಟ ರೀತಿಯಲ್ಲಿ ರಾಷ್ಟ್ರಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ. ಸೀತಾ ನದಿಯಲ್ಲಿ ಕಯಾಕಿಂಗ್ ಮೂಲಕ ಪ್ರಕೃತಿಯ ಅದ್ಭುತ ಸೌಂದರ್ಯವನ್ನು ಜನರಿಗೆ ಪರಿಚಯಿಸುವುದರ ಜೊತೆಗೆ, ಪ್ರಕೃತಿ ಪ್ರೇಮದೊಂದಿಗೆ ದೇಶಪ್ರೇಮವನ್ನೂ ಬೆಳೆಸುವ ಸಂದೇಶವನ್ನು ಸಾರುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ, ಈ ಬಾರಿ ಮತ್ತೊಂದು ವಿನೂತನ ಪ್ರಯತ್ನಕ್ಕೆ ಸಾಕ್ಷಿಯಾಗಿದೆ. ಹಿಂದೆ ಸೀತಾ ನದಿಯ ಮಧ್ಯಭಾಗಕ್ಕೆ ಕಯಾಕಿಂಗ್ ಮೂಲಕ ತೆರಳಿ ಧ್ವಜಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ್ದ ತಂಡ, ಮತ್ತೊಮ್ಮೆ ನದಿಯ ಮಧ್ಯದಲ್ಲಿರುವ ಕಾಂಡ್ಲಾ ಮರಗಳ ನಡುವೆ ಸೇತುವೆ ನಿರ್ಮಿಸಿ ಅದರ ಮೇಲೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಅ.15: ತಾಲೂಕು ಆಡಳಿತ ವತಿಯಿಂದ ಗಾಂಧಿ ಮೈಧಾನದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗದ ಆಯುಕ್ತರಾದ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಕುಂದಾಪುರ ಶಾಸಕರಾದ ಕಿರಣ ಕುಮಾರ ಕೊಡ್ಗಿ, ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ತಾ, ವಿವಿಧ ಗಣ್ಯರು, ತಾಲೂಕು ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು, ಅ.15: ತಾಲೂಕು ಆಡಳಿತ ವತಿಯಿಂದ ಇಲ್ಲಿನ ಗಾಂಧಿ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ತಾಲೂಕಿನ ಕಾರ್ಯನಿರ್ವಾಹಕ ದಂಢಾಧಿಕಾರಿ ಹಾಗೂ ಮಾನ್ಯ ತಹಶೀಲ್ದಾರರಾದ ರವಿರಾಜ್‌ ದೀಕ್ಷತ್‌ ಧ್ವಜಾರೋಗಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುರಾಜ್‌ ಗಂಟಿಹೊಳೆ ಅವರು ವಹಿಸಿದ್ದರು. ಈ ವೇಳೆ ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮೋಹನ್‌ ಪೂಜಾರಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ರ್ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಸನ್ಮನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಯಾದ ನಾಗೇಶ್‌ ನಾಯಕ್‌ ಸ್ವಾಗತಿಸಿದರು. ಬೈಂದೂರು ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿಯಾಗಿರುವ ಅಜೇಯ ಭಂಡರ್ಕರ್‌ ಅವರು ಧನ್ಯವಾದ ಸಮರ್ಪಣೆ ಮಾಡಿದರು. ಬೈಂದೂರು ಸ.ಮಾ.ಹಿ.ಪ್ರಾ ಶಾಲೆಯ ಗಣಪತಿ ಹೋಬಳಿದಾರ್‌ ನಿರ್ವಹಣೆ ಮಾಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕ್ರಾಂತಿಕಾರಿ, ಅಹಿಂಸಾ ತತ್ವದ ಮೂಲಕ ಸ್ವಾತಂತ್ರ್ಯ- ಸಂಸದ ಕೋಟ: ಕ್ರಾಂತಿಕಾರಿಗಳ ಹಾಗೂ ಅಹಿಂಸಾ ತತ್ವದ ಮೂಲಕ ಈ ದೇಶಕ್ಕೆ ಸ್ವಾತಂತ್ರ್ಯ ದಕ್ಕಿದೆ. ಇದಕ್ಕೆ ಕಾರ್ನಾಡ ಸದಾಶಿವ ರಾವ್ ಅವರ ಆ ಕಾಲಘಟ್ಟದ ಹೋರಾಟ ದಿನಗಳನ್ನು ನೆನೆಪಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಸ್ತುತ ದೇಶ ಕಾಯುವ ಯೋಧರ ತ್ಯಾಗ ಬಲಿದಾನ ದೇಶವನ್ನು ಸುಭದ್ರತೆಗೊಳಿಸಿದೆ. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ 80 ನೇ ಹಸಿರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಗೈದು ಮಾತನಾಡಿದರು. ಹೋರಾಟಗಾರದ ಸ್ವಾತಂತ್ರ್ಯವನ್ನು ನಾವುಗಳು ಅರ್ಥಪೂರ್ಣಗೊಳಿಸಿ ಜಾತಿ ಮತ ಧರ್ಮ ಬೇಧದಿಂದ ಅಭಿವೃದ್ಧಿ ಪತದತ್ತ ಕೊಂಡ್ಯೋಯುವ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ನಿವೃತ್ತ ಯೋಧರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ರಾವ್ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟ ಜಾಮೀಯಾ ಮಸೀದಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕಟ್ಟೆಯ ವಿಶ್ವವಿನಾಯಕ ಸಿಬಿಎಸ್‌ಸಿ ಸ್ಕೂಲ್‌ನಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜು ಮೊಗವೀರ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ 80ನೇ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು. Genz ಮತ್ತು Gen Alpha ಇದರ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ಅಲ್ಲದೆ ಇಂದಿನ ಯುಗದಲ್ಲಿ ಯುವ ಪೀಳಿಗೆ ಕರ್ತವ್ಯದ ಬಗ್ಗೆ ಸವಿಸ್ತಾರವಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಆಡಳಿತ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ವಿವಿರಾಜ ಹೆಗ್ಡೆ ಶುಭ ಕೋರಿದರು. ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್ ಮಾತನಾಡಿ, ಸ್ವತಂತ್ರ ಭಾರತದಲ್ಲಿ ಸರ್ವ ಜನಾಂಗದವರು ಏಕತಾ ಮನೋಭಾವದಿಂದ ಹಾಗೂ ಮೌಲ್ಯಯುತ ಶಿಕ್ಷಣದಿಂದ ದೇಶ ಕಟ್ಟುವ ಕೆಲಸವಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವತಿಯಿಂದ ವಿದ್ಯಾರ್ಥಿಗಳಿಗೆ ಕೆಸರುಗದ್ದೆಯಲ್ಲಿ ಭತ್ತದ ನಾಟಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲು ಸಹಕರಿಸಿದ ಶ್ರೀಮತಿ ಲಲಿತಾ ರವರಿಗೆ ಸನ್ಮಾನಿಸಲಾಯಿತು ಶಾಲಾ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿದ್ಯಾ ಸಂಸ್ಥೆಯಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ  ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ MUTBI, ಮಣಿಪಾಲದ ಸಿ ಈ ಓ ಡಾ. ಸಂತೋಷ್ ರಾವ್ ಅವರು ವಿಕಸಿತ ಭಾರತ – 2047ರ ಪರಿಕಲ್ಪನೆಯನ್ನು ವಿವರಿಸಿದರು. ಭಾರತವು ಸ್ವಾತಂತ್ರ್ಯದ 100 ವರ್ಷಗಳನ್ನು ಪೂರೈಸುವ 2047ರ ವೇಳೆಗೆ ಆರ್ಥಿಕವಾಗಿ ಬಲಿಷ್ಠ, ತಾಂತ್ರಿಕವಾಗಿ ಮುಂದುವರಿದ, ಆತ್ಮನಿರ್ಭರ ಹಾಗೂ ಸಮಗ್ರವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು ಎಂಬುದು ವಿಕಸಿತ ಭಾರತದ ದೃಷ್ಟಿಕೋನವಾಗಿದೆ ಎಂದು ಅವರು ತಿಳಿಸಿದರು. ಈ ಗುರಿಯನ್ನು ಸಾಧಿಸುವಲ್ಲಿ ಯುವಜನತೆ ಪ್ರಮುಖ ಪಾತ್ರ ವಹಿಸಲಿದ್ದು, ಶಿಕ್ಷಣ, ಕೌಶಲ್ಯಾಭಿವೃದ್ಧಿ, ನಾವೀನ್ಯತೆ, ಉದ್ಯಮಶೀಲತೆ, ಸಂಶೋಧನೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಎಂಜೆ ವಿದ್ಯಾಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್ ಎನ್ ಭಟ್ ರವರು ಮಾತನಾಡಿ ಒಂದುವೇಳೆ ನಮ್ಮಲ್ಲಿ ವಿಷಯಾಧಾರಿತ ಬಿನ್ನಬಿಪ್ರಾಯವಿದ್ದರೂ ನಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಚ್ಲಾಡಿ ಮೂಡುಕೆರೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದಿಸಿದ ರೋಟರಿ ಕ್ಲಬ್ ಕೋಟ ಬ್ರಿಗೇಡ್, ಶಾಲಾ ಮಕ್ಕಳಿಗೆ ಯುನಿಫಾರ್ಮ್‌ಗಳನ್ನು ಕೊಡುಗೆಯಾಗಿ ವಿತರಿಸಲಾಯಿತು. ದಾನಿಗಳಾದ ದಯಾನಂದ ಆಚಾರ್ಯ ಹಾಗೂ ಸುರೇಶ್ ಆಚಾರ್ಯ ಅವರು ನೀಡಿದ ಯುನಿಫಾರ್ಮ್‌ಗಳನ್ನು ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ವಲಯ 2ರ ಅಸಿಸ್ಟೆಂಟ್ ಗವರ್ನರ್ ಸುಧಾಕರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡುವ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದು ಮಹತ್ವದ ಸೇವೆಯಾಗಿದ್ದು, ರೋಟರಿ ಕ್ಲಬ್ ಕೋಟ ಬ್ರಿಗೇಡ್ ಈ ನಿಟ್ಟಿನಲ್ಲಿ ಮಾಡುತ್ತಿರುವ ಸೇವಾ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರಲ್ಲದೆ ದಾನಿಗಳ ಸಹಕಾರದಿಂದ ಶಾಲಾ ಮಕ್ಕಳ ಅಗತ್ಯಗಳಿಗೆ ಸ್ಪಂದಿಸಿರುವುದು ಇತರರಿಗೂ ಮಾದರಿಯಾಗಿದ್ದು, ಇಂತಹ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯಲಿ…

Read More