Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೈಸೂರು ಸುತ್ತೂರು ಮಠದ ಪ್ರತಿಷ್ಠಿತ ಜೆ.ಎಸ್.ಎಸ್. ಮಹಾವಿದ್ಯಾಪೀಠದ ಅಧಿಕಾರಿಗಳಾದ ರವೀಶ್ ಮತ್ತು ರೇಣುಕಾಸ್ವಾಮೀ, ಜೆ.ಎಸ್.ಎಸ್. ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಮಧು, ಭೋಧಕರಾದ ತಮ್ಮಯ್ಯ, ವಿನೋದ್ ಕುಮಾರ್, ಕೋ ಆರ್ಡಿನೇಟರ್ ಭರತ್ ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಗೆ ಶ್ರೀಗಳ ಸೂಚನೆ ಮೇರೆಗೆ ಭೇಟಿ ನೀಡಿದರು. ಇಲ್ಲಿರುವ ಐರಿಸ್ ಎ.ಐ. ರೋಬೋ ಶಿಕ್ಷಕಿಯ ಕಾರ್ಯಶೈಲಿಯ ಬಗ್ಗೆ ತಿಳಿದುಕೊಂಡು ಅದನ್ನು ಅವರ ಶಿಕ್ಷಣ ಸಂಸ್ಥೆಗಳಲ್ಲಿ ಅನುಷ್ಠಾನ ಮಾಡುವ ಕುರಿತು ಯೋಜನೆ ರೂಪಿಸಿದ್ದು ಶಾಲೆಯ ಸಂಪೂರ್ಣ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ದೇವಾಡಿಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈಂದೂರು ವಲಯದ ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಉದಯ ಕುಮಾರ ಶೆಟ್ಟಿ, ರಾಜ್ಯ ಸರಕಾರಿ ನೌಕರರ ಸಂಘದ ಕುಂದಾಪುರ ತಾಲೂಕು ನಿರ್ದೇಶಕ ಪ್ರತಾಪ್ ಕುಮಾರ್ ಶೆಟ್ಟಿ, ಶಾಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸರ್ವರ ಮೂಲಕ ಸಮಾಜದ ಏಳಿಗೆ ಒಗ್ಗಟ್ಟಾಗಿ ಶ್ರಮಿಸಿದರೆ ಅಭಿವೃದ್ಧಿ ಸಾಧ್ಯವಿದೆ. ಗಳಿಕೆಯ ಹಣ ಟ್ರಸ್ಟ್ ಮೂಲಕ ಸದ್ವಿನಿಯೋಗವಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದು ವಿಶ್ವ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾದ ಶಶಿಧರ್ ನಾಯಕ್ ಹೇಳಿದರು. ಅವರು ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ ಇದರ ಹದಿನಾಲ್ಕನೆಯ ವರ್ಷದ ಟ್ರಸ್ಟ್ ದಿನಾಚರಣೆಯನ್ನು ಭಾನುವಾರ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಆಡಳಿತ ಟ್ರಸ್ಟ್ ಗಳಾದ ಬಿ. ರಾಮಕೃಷ್ಣ ಶೇರುಗಾರ್ ವಹಿಸಿ ಮಾತನಾಡಿ, ಟ್ರಸ್ಟಿಗೆ ದೇಣಿಗೆ ನೀಡಿದ ಹಣ ಸರಿಯಾದ ರೀತಿಯಲ್ಲಿ ವಿನಿಯೋಗ ಆಗಬೇಕು ಎಂಬುದು ನಮ್ಮ ಕಾಳಜಿ. ಆ ಮೂಲಕ ಸಮಾಜದಲ್ಲಿ ಅಗತ್ಯವುಳ್ಳವರಿಗೆ ನೆರವು ನೀಡಲು ಸಾಧ್ಯವಿದೆ.  ಟ್ರಸ್ಟ್ ಮೂಲಕ ಆರಂಭವಾದಗಲಿಂದ ಹಲವಾರು ಮಂದಿಗೆ ನೆರವು ನೀಡಲಾಗಿದೆ ಎಂದರು. ಈ ಸಂದರ್ಭ ಸುವರ್ಣ ವಾಹಿನಿ 2025ರ ಸ್ಟೇಟ್ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್ ಪುರಸ್ಕೃತ ಡಾ. ಪ್ರಭಾಕರ ಹೆಚ್., ಮಾಹೆ ಮಣಿಪಾಲದ ಸಹ ಉಪಕುಲಪತಿ ಡಾ. ಕರುಣಾಕರ ಎ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ಸಂಸ್ಥಾಪನಾ ದಿನಾಚರಣೆ, ಚೇತನಾ ಶಾಲೆಯ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ, ಯಕ್ಷಗಾನ ತರಗತಿ ಉದ್ಘಾಟನಾ ಕಾರ್ಯಕ್ರಮವು ಜರಗಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಭರತ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ, ಯಕ್ಷಗಾನ ತರಗತಿ ಉದ್ಘಾಟನೆ, ಶಾಲಾ ಸರಕಾರ ಹಾಗೂ ವಿವಿಧ ಸಂಘಗಳನ್ನು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇದರ ಕಾರ್ಯದರ್ಶಿ ಮುರಳಿ ಕಡೆಕಾರ್ ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಿ ಈ ಪಂಚ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಿದರು. ಆಡಳಿತ ಮಂಡಳಿ, ಉಪಾಧ್ಯಕ್ಷ ಎ. ಜಗದೀಶ್ ಕಾರಂತ್ ಅವರು ಶಾಲಾ ಸಂಸ್ಥಾಪನ ದಿನದ ಕುರಿತು ಮಾತನಾಡಿದರು. ಫಾರ್ಚುನ್ ಕಾಲೇಜ್ ಚೇರ್ಮನ್ ತಾರಾನಾಥ ಶೆಟ್ಟಿ ವಿದ್ಯಾರ್ಥಿ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದರು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ. ರಾಜರಾಮ್ ಭಟ್ ಕೊಡಮಾಡಿದ ಐಡಿ ಕಾರ್ಡ್‌ಗಳನ್ನು ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗದೆ, ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಅವರ ಭವಿಷ್ಯಕ್ಕೆ ದಾರಿ ದೀಪವಾಗುವ ನಿಕಟಪೂರ್ವ ತರಬೇತಿಗಳನ್ನು ಆಯೋಜಿಸುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶ ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ‘ನಾಟಾʼ (NATA – National Aptitude Test in Architecture) ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಎಂಬುದು ಮುಗಿಯದ ಪಯಣ. ನಾವು ಎಷ್ಟೇ ಕಲಿತರೂ ಕಲಿಯುವುದು ಇನ್ನೂ ಇರುತ್ತದೆ. ಇಂದು ಡಿಸೈನ್, ವಾಸ್ತುಶಿಲ್ಪ ಮತ್ತು ಫ್ಯಾಷನ್ ರಂಗಗಳಲ್ಲಿ ಅಪಾರ ಅವಕಾಶಗಳಿವೆ. ವಿದ್ಯಾರ್ಥಿಗಳು ಇಂತಹ ತರಬೇತಿಗಳ ಮೂಲಕ ಸರ್ವತೋಮುಖವಾಗಿ ಸುಸಜ್ಜಿತರಾಗಬೇಕು. ಪಿಯುಸಿ ಹಂತದಲ್ಲೇ ಸಿಗುವ ಈ ರೀತಿಯ ವಿಶೇಷ ತರಬೇತಿಗಳು ನಿಮ್ಮ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ದಾರಿಯಾಗುತ್ತದೆ. ಕಾಲೇಜು ಒದಗಿಸುತ್ತಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಯುವ ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಶೈಕ್ಷಣಿಕ ಮಾನಸಿಕ ದೈಹಿಕ ಆರೋಗ್ಯವನ್ನು ಕಳೆದುಕೊಳ್ಳುತ್ತಿರುವ ಆಘಾತಕಾರಿ ಬೆಳವಣಿಗೆ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ “ಡ್ರಗ್ಸ್ ಬೇಡ ಬ್ರೋ” ಅಭಿಯಾನ ದಡಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಶಾಮುಕ್ತದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತೆ ಎಂ. ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ಬಿನ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಹಾಗೂ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸಾನಿಕ ಹಾಗೂ ನಿಸರ್ಗ ಪ್ರಾರ್ಥನೆಗೈದರು. ಕಾರ್ಯಕ್ರಮದ ಸಮನ್ವಯ ಅಧಿಕಾರಿ, ಉಪನ್ಯಾಸಕ ಪಿ. ಎ. ತೋಮಸ್ ಪ್ರಾಸ್ತಾವಿಕ ಮಾತುಗಳನ್ನಾನಾಡಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಈ ಬಾರಿ ಮಳೆ ಕೊರತೆಯ ಕಾರಣಕ್ಕೆ ಶೀಘ್ರವೇ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳು ಈಗಿನಿಂದಲೇ ಪರಿಸ್ಥಿತಿ ಎದುರಿಸಲು ಸಿದ್ದರಾಗಿರಬೇಕು. ಬೇಕಾದ ತಯಾರಿ ಮಾಡಿಕೊಳ್ಳಬೇಕು ಎಂದು ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರ ಇಲ್ಲಿನ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕುಂದಾಪುರ ವಿಧಾನಸಭ ಕ್ಷೇತ್ರ ವ್ಯಾಪ್ತಿಯ ಟಾಸ್ಕ್‌ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಕಳೆದ ಬಾರಿಯೂ ಅಂತಹ ನೀರಿನ ಸಮಸ್ಯೆ ಏನು ಇರಲಿಲ್ಲ. ಈ ಬಾರಿಯೂ ಕಾಣಿಸಲ್ಲ ಅನ್ನುವ ಭರವಸೆಯಿದೆ. ಬಹುತೇಕ ಎಲ್ಲ ಗ್ರಾಮ ಪಂಚಾಯಿತಿಗಳು ವಾರಾಹಿ ನೀರನ್ನೇ ಬೇಗ ಆಶ್ರಯಿಸಿದ್ದಾರೆ. ಆದಷ್ಟು ಬಾಕಿಯಿರುವ ಜೆಜೆಎಂ, ಅಮೃತ್ ಯೋಜನೆ ಕಾಮಗಾರಿ ಮುಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಕಾರ್ಯನಿರ್ವಹಿಸಿ, ನೀರಿನ ಕುರಿತಾದ ಬೇಡಿಕೆಗಳನ್ನು ಆದ್ಯತೆ ನೆಲೆಯಲ್ಲಿ ಬಗೆಹರಿಸಬೇಕು ಎಂದು ತಿಳಿಸಿದರು. ಆವರ್ಸೆಯಲ್ಲಿ 2 ಕಡೆ ಬೋರ್‌ವೆಲ್ ಬೇಡಿಕೆ, ಬೀಜಾಡಿ, ಗೋಪಾಡಿ, ತೆಕ್ಕಟ್ಟೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆ ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮೋಹನ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ವೇಳೆ ಪ್ರಗತಿ ಪರಿಶೀಲನೆ ಮಾಡಿದ ಅಧ್ಯಕ್ಷರು, ಅನ್ನ ಭಾಗ್ಯ ಯೋಜನೆಯಡಿ ಇದುವರೆಗೆ 22313 ಬಿಪಿಎಲ್ ಫಲಾನುಭವಿಗಳಿಗೆ 477720 ಕ್ವಿಂಟಾಲ್ ಅಕ್ಕಿ ಹಾಗೂ 3219 ಅಂತ್ಯೋದಯ ಫಲಾನುಭವಿಗಳಿಗೆ 85525 ಕ್ವಿಂಟಾಲ್ ಅಕ್ಕಿ ವಿತರಿಸಿರುವ ಕುರಿತು ಪ್ರಗತಿ ಪರಿಶೀಲನೆ ಮಾಡಿದರು ನಂತರ ಶಿರೂರು ಹಡವಿನಕೋಣೆಯಲ್ಲಿ ಹೊಸದಾಗಿ ಪಡಿತರ ವಿತರಣಾ ಕೇಂದ್ರ ಆರಂಭಿಸಲು, ಮುಂದಿನ ವಾರದೊಳಗೆ ಅನುಮತಿ ಸಿಗುವುದಾಗಿ ಸಭೆಯಲ್ಲಿ ಅಧ್ಯಕ್ಷರು ತಿಳಿಸಿದರು. ಗೃಹ ಲಕ್ಷ್ಮಿ ಯೋಜನೆಯಡಿ ಫೆಬ್ರವರಿ ಮಾಹೆಯವರೆಗೆ ಫಲಾನುಭವಿಗಳ ಖಾತೆಗೆ ಅನುದಾನ ಜಮೆ ಆಗಿದ್ದು, ಎಪ್ರಿಲ್ ಮಾಹೆಯ ಗೃಹಲಕ್ಷ್ಮಿ ಅನುದಾನ ಜುಲೈ ಮಾಹೆಯಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಆಗಿರುವುದಾಗಿ ಹಾಗೂ ಮಾರ್ಚ ಮೇ ಜೂನ್ ಮಾಹೆಯ ಹಣ ಪಾವತಿಗೆ ಬಾಕಿ ಇರುವುದಾಗಿ ಅಧಿಕಾರಿಗಳು ನೀಡಿದ ಪ್ರಗತಿ ವರದಿಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪಂಚಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಪ್ರಸ್ತುತ ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಪರಿಷ್ಕರಣೆಯೂ ಆಗಲಿದ್ದು ಅಧಿಕಾರಿಗಳು ಯಾವುದೇ ಫಲಾನುಭವಿ ತಪ್ಪಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು  ಕು೦ದಾಪುರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌. ಹರಿಪ್ರಸಾದ್‌ ಶೆಟ್ಟಿ ಹೇಳಿದರು. ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚು ಅನುಭವ ಇರುವ ಸಿಬ್ಬಂದಿಗಳನ್ನು ಈ ಪರಿಷ್ಕರಣೆ ಕಾರ್ಯದಲ್ಲಿ ನಿಯೋಜನೆ ಮಾಡುವ ಮೂಲಕ ಯಾರಿಗೂ ಸಮಸ್ಯೆಯಾಗದಂತೆ ಪರಿಷ್ಕರಣೆ ಪ್ರಕ್ರಿಯೆ ನಡೆಯಬೇಕು ಎಂದರು. ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ನಡೆಯುತ್ತಿದ್ದು, ಈ ಯೋಜನೆಯಡಿ ಒಟ್ಟು 73868 ನೊಂದಣಿಯಾಗಿದ್ದು, 48322 ಪೂರ್ಣ ಪರಿಷ್ಕರಣೆಯಾಗಿದ್ದು, 25546 ಅರ್ಜಿಗಳು ಬಾಕಿ ಇದೆ. ಬಾಕಿ ಇರುವ ಅರ್ಜಿಗಳ ಪೈಕಿ ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಇರುವ ಸಾಧ್ಯತೆಗಳಿರುತ್ತದೆ ಅಲ್ಲದೆ ಮೊಬೈಲ್‌ ಇಲ್ಲದಿರುವವರು ಇರುವ ಸಾಧ್ಯತೆ ಇರುತ್ತದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಕರಾವೇ ನಿರಂತರವಾಗಿ ಕಾರ್ಯೋನ್ಮುಖವಾಗಿದ್ದು ಈ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಈ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಕರಾವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಹೇಳಿದರು. ಅವರು ಶುಕ್ರವಾರ ಇಲ್ಲಿನ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ದೂಳಂಗಡಿ) ಇಲ್ಲಿಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಉಡುಪಿ ಜಿಲ್ಲೆ ಹಾಗೂ ಕರವೇ ಮಹಿಳಾ ಘಟಕದ ವತಿಯಿಂದ ಎಲ್ ಕೆಜಿ ಯುಕೆಜಿ ಮಕ್ಕಳಿಗೆ ಕುರ್ಚಿ, ಟೇಬಲ್, ಆಟಿಕೆ ಪರಿಕರ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಕಾರಿ ಶಾಲೆ ಎಂಬ ಕೀಳರಿಮೆ ಸಲ್ಲ ಬದಲಾಗಿ ಆಯಾ ಭಾಗಗಳ ಕನ್ನಡ ಮಾಧ್ಯಮ ಶಾಲೆಗಳ ಉಳಿಸುವ ಕಾರ್ಯವನ್ನು ದಾನಿಗಳು ಸಂಘಸಂಸ್ಥೆಗಳ ಮೂಲಕ ಆಗಲಿ ಎಂದರಲ್ಲದೆ ಕರ್ನಾಟಕ ರಕ್ಷಣಾ ವೇದಿಕೆ ಈ ಕಾರ್ಯದಲ್ಲಿ ನಿರತವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕರವೇ ರಾಜ್ಯ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರ ನೇತೃತ್ವ ಹಾಗೂ ರಾಜ್ಯ ಸಂಚಾಲಕರಾದ ಸಿ.ಎಮ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ಥಳೀಯ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ವಿಶ್ರಾಂತಿ ಪಡೆಯುತ್ತಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಸಾಸ್ತಾನದಲ್ಲಿ ಸಂಭವಿಸಿದೆ. ಕಾವಾಡಿ ಗ್ರಾಮದ ನಿವಾಸಿ ಕರುಣಾಕರ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಅವರು ಜುಲೈ 23ರಂದು ಬೆಳಿಗ್ಗೆ ಎಂದಿನಂತೆ ಹೋಟೆಲ್‌ನಲ್ಲಿ ತಿಂಡಿ ತಯಾರಿಸಿದ ಬಳಿಕ, ತನಗೆ ಸುಸ್ತಾಗುತ್ತಿದೆ ಎಂದು ಸಹೋದ್ಯೋಗಿ ಬಳಿ ತಿಳಿಸಿ ವಿಶ್ರಾಂತಿ ಕೊಠಡಿಗೆ ತೆರಳಿದ್ದರು. ಬಹಳ ಸಮಯವಾದರೂ ಅವರು ಹೊರಗೆ ಬಾರದಿದ್ದಾಗ ಸಹೋದ್ಯೀಗಿಗಳು ಕರೆಯಲು ತೆರಳಿದ್ದಾರೆ. ಈ ವೇಳೆ ಕರುಣಾಕರ ಅವರು ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ, ತಕ್ಷಣ ಅವರನ್ನು ಬ್ಯಹ್ಮಾವರ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More