ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬೈಂದೂರಿನ ಹೊಸ ಬಸ್ ನಿಲ್ದಾಣದ ಜಂಕ್ಷನ್ ಬಳಿ ಸಂಭವಿಸಿದೆ. ಕಳವಾಡಿ ನಿವಾಸಿ ಸುಧಾಕರ ಶೆಟ್ಟಿ (78) ಮೃತಪಟ್ಟ ವ್ಯಕ್ತಿ . ಅವರು ಒತ್ತಿನೆಣೆ ಕಡೆಯಿಂದ ಬೈಂದೂರು ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ, ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ತಕ್ಷಣವೇ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ. ನಮ್ಮ ಹತ್ತಿರದಲ್ಲಿ ಇರುವ ಇಂತಹ ಯುವ ಲೇಖಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸಮಾಜ ಮಾಡಬೇಕಿದೆ ಎಂದು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಎಸ್.ವಿ ಕಾಮರ್ಸ್ ಕ್ಲಬ್ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ಆಶ್ರಯದಲ್ಲಿ ನಡೆದ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ಏಳನೆಯ ಪುಸ್ತಕ ‘ರೂಮಿನೊಳಗಿಂದ’ ಕಥಾ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಲೇಖಕ ರಾಘವೇಂದ್ರ ಬಿಲ್ಲವ ಪುಸ್ತಕವನ್ನು ಪರಿಚಯಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಘವೇಂದ್ರ ದೇವಾಡಿಗ ಶುಭ ಹಾರೈಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್.ಕೆ ಮತ್ತು ವಿದ್ಯಾರ್ಥಿ ಪ್ರತಿನಿಧಿ ಭಾವನಾ ಉಪಸ್ಥಿತರಿದ್ದರು. ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಸಾನಿಕ ಮತ್ತು ಐಶು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನವು ಆಗಸ್ಟ್ 19 ರಂದು ಬೆಳಗ್ಗೆ 10.15 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ, 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ನಿವೃತ್ತ ಸರ್ಕಾರಿ / ಖಾಸಗಿ ನೌಕರರು, ಸ್ವ-ಸಹಾಯ ಸಂಘದ ಸದಸ್ಯರು, ನಿರುದ್ಯೋಗಿಗಳು, ಸ್ವಯಂ ಉದ್ಯೋಗ ನಿರತರು, ಅರೆಕಾಲಿಕ ಉದ್ಯೋಗಿಗಳು, ಮಾಜಿ ವಿಮಾ ಪ್ರತಿನಿಧಿಗಳು/ ಸಲಹೆಗಾರರು, ಮಾಜಿ ಸೈನಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ನಿವೃತ್ತ ಶಿಕ್ಷಕರು, ಪಿ.ಓ.ಎಸ್.ಬಿ ಏಜೆಂಟರು ಮೊದಲಾದವರಿಗೆ ಅವಕಾಶವಿದ್ದು, ಉತ್ತಮ ಸಂವಹನ ಕೌಶಲ್ಯ ಹಾಗೂ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ಕಟ್ಟೆ ( ಪ್ರೌಢ ಸ್ಕೂಲ್ ) ಇಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇದರ ಮತ್ತು ಶಿವ ಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಇದರ ಜಂಟಿ ಆಶ್ರಯದಲ್ಲಿ “ಮಾನವ ಕಳ್ಳ ಸಾಗಣೆ ಜಾಗ್ರತಿ ಶಿಬಿರ “ಕಾರ್ಯಕ್ರಮವು ಶುಕ್ರವಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷರಾದ ಕಾಲೇಜಿನ ಉಪ ಪ್ರಿನ್ಸಿಪಾಲರಾದ ಹಾಗೂ ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಇದರ ಅಧ್ಯಕ್ಷರಾದ ಎಂ. ಕರುಣಾಕರ ಶೆಟ್ಟಿ ವಹಿಸಿದರು. ಕಾರ್ಯಕ್ರಮ ಉದ್ಘಾಟನೆಯನ್ನು ಎಸ್ಡಿಎಮ್ಸಿ ಉಪಾಧ್ಯಕ್ಷರಾದ ಗೌತಮ್ ಶೆಟ್ಟಿ ಉದ್ಘಾಟಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಘವೇಂದ್ರ ಎಸ್. ವಕೀಲರು ಹಾಗೂ ಕಾನೂನು ನೆರವು ಅಭಿರಕ್ಷಕರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಅವರು ಬಹಳ ಸರಳವಾಗಿ ವಿದ್ಯಾರ್ಥಿಗಳಿಗೆ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಆಮಿಶ ತೋರಿಸಿ ಕದ್ದೋವೈದು ವೇಶ್ಯವಾಟಿಕೆ, ಬಾಲಕಾರ್ಮಿಕ ಪದ್ಧತಿಗೆ ದೂಡುವಾ ಸ0ಭವ ವಿದ್ದು ಜಾಗ್ರತಿ ವಹಿಸುವಂತೆ ಸಲಹೆ, ವಿದ್ಯಾರ್ಥಿಗಳ ಹಕ್ಕುಗಳು ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲಾ – ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳಲ್ಲಿ ಊರಿನ ಜೀವಂತಿಕೆ ಅಡಗಿದೆ. ಇಂತಹ ಚಟುವಟಿಕೆಗಳ ಮೂಲಕ ಊರು ಭಾಷೆಯ ಚಲನಶೀಲತೆ ಹೆಚ್ಚಿಸುವ ಕಾರ್ಯ ಶ್ಲಾಘನಾರ್ಹ ಎಂದು ಸಾಹಿತಿ, ವಾಗ್ಮಿ ಓಂ ಗಣೇಶ್ ಉಪ್ಪುಂದ ಹೇಳಿದರು. ಅವರು ಉಪ್ಪುಂದದ ತಮ್ಮ ನಿವಾಸದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೈಂದೂರು ಆಯೋಜನೆಯಲ್ಲಿ ಹಮ್ಮಿಕೊಂಡ ಮೂರನೇ ವರ್ಷದ “ಗಮ್ಮತ್ತ್” ಕಾರ್ಯಕ್ರಮದ ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿದರು. ಕಳೆದೆರಡು ವರ್ಷಗಳಿಂದ ಗಮ್ಮತ್ತ್ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಈ ಭಾರಿಯೂ ಇನ್ನಷ್ಟು ಯಶಸ್ಸು ಕಾಣುವಂತಾಗಲಿ ಎಂದು ಹಾರೈಸಿದರು. ಬೈಂದೂರಿನ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಪ್ರಾಸ್ತಾವಿಕ ಮಾತನಾಡಿ, ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗಮ್ಮತ್ತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಗಸ್ಟ್ 23ರ ಭಾನುವಾರ ಬೆಳಿಗ್ಗೆಯಿಂದ ಸಂಜೆಯ ತನಕ ಯಡ್ತರೆ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಹಾಲ್ನಲ್ಲಿ ದಿನವಿಡಿ ಕಾರ್ಯಕ್ರಮಗಳು ಜರುಗಲಿದೆ. ಈ ಭಾರಿ ಇನ್ನಷ್ಟು ಕ್ರೀಡೆ, ಸಾಹಿತ್ತಿಕ ಕಾರ್ಯಕ್ರಮಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.24: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳು, ಪಿಯು ಕಾಲೇಜು, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಜುಲೈ 25ರ ಶನಿವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜು, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರ ಅವರು ಆದೇಶಿಸಿದ್ದಾರೆ. ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ, ವಿದ್ಯಾರ್ಥಿಗಳಿಗೆ ರಜೆ ಘೋಷಿಸಿಲ್ಲ ಆದರೆ ಹಾಜರಾತಿ ಕಡ್ಡಾಯವಲ್ಲ. ಸೂಕ್ತ ಮನ್ನೆಚ್ಚರಿಕೆ ವಹಿಸುವಂತೆ ಅವರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವ್ಯಾಪ್ತಿಯಲ್ಲಿ ಬರುವ ಬನ್ನಾಡಿ, ವಡ್ಡರ್ಸೆ ಸೇರಿದಂತೆ ಕೋಟ ಹದಿನಾಲ್ಕು ಗ್ರಾಮಗಳಲ್ಲಿ ವಾಸವಾಗಿರುವ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಗತ್ಯ ಇರುವ ಸಮಾಜ ಬಾಂಧವರು ಅಜಿ೯ಗಳನ್ನು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಇದರ ಕಛೇರಿಯಲ್ಲಿ ಪಡೆದು, ಭತಿ೯ ಮಾಡಿ, ಇದೇ ಆಗಸ್ಟ್ ತಿಂಗಳ 31 ರ ಒಳಗೆ ಶ್ರೀ ದೇವಳದ ಕಛೇರಿಯಲ್ಲಿ ಹಿಂದಿರುಗಿಸುವಂತೆ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9880390905 ಇದನ್ನು ಸಂಪರ್ಕಿಸಲು ಕೋರಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಅಚ್ಲಾಡಿ ಸಮೀಪದ ಮೂಡುಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ಗಳನ್ನು ವಿತರಿಸುವ ಕಾರ್ಯಕ್ರಮ ಗುರುವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ನಡೆಯಿತು. ರೋಟರಿ ಕ್ಲಬ್ನ ಸದಸ್ಯ ಭಾಸ್ಕರ್ ಪೂಜಾರಿ ಅವರ ಪ್ರಾಯೋಜಕತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಹಾಯಕ ಗವರ್ನರ್ ಹಾಗೂ ಕ್ಲಬ್ನ ಜಿಎಸ್ಆರ್ ಚಂದ್ರಶೇಖರ್ ಮೆಂಡನ್, ಮಾತನಾಡಿ, “ಶಿಕ್ಷಣವೇ ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಸಾಧನವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ. ರೋಟರಿ ಸಂಸ್ಥೆ ಶಿಕ್ಷಣ, ಆರೋಗ್ಯ ಹಾಗೂ ಸಮಾಜಮುಖಿ ಸೇವಾ ಕಾರ್ಯಗಳಿಗೆ ಸದಾ ಆದ್ಯತೆ ನೀಡುತ್ತಿದ್ದು, ಇಂತಹ ಸೇವಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಲು ನೆರವಾಗುತ್ತವೆ. ಸಮಾಜದ ಸಹಕಾರದಿಂದ ಇನ್ನಷ್ಟು ಸೇವಾ ಕಾರ್ಯಗಳನ್ನು ಮುಂದುವರಿಸಲಾಗುವುದು” ಎಂದು ಹೇಳಿದರು. ರೋಟರಿ ಕ್ಲಬ್ ಕೋಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಚಾತುರ್ಮಾಸ್ಯದ ಪೂರ್ವಭಾವಿ ಸಂಚಾರದ ಅಂಗವಾಗಿ ಎಡನೀರು ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಆಗಮಿಸಿ ಶ್ರೀ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅವರು ಶ್ರೀಪಾದಂಗಳವರನ್ನು ಪೂರ್ಣಕುಂಭ ಹಾಗೂ ವಾದ್ಯಗೋಷ್ಠಿಯೊಂದಿಗೆ ಭವ್ಯವಾಗಿ ಸ್ವಾಗತಿಸಿ ಫಲಕಾಣಿಕೆಯನ್ನು ಸಮರ್ಪಿಸಿದರು. ಪರ್ಯಾಯ ಅರ್ಚಕರಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ ಶ್ರೀಪಾದಂಗಳವರಿಗೆ ದೇವರ ವಿಶೇಷ ಪ್ರಸಾದವನ್ನು ಅರ್ಪಿಸಿ, ಮುಂಬರುವ ಚಾತುರ್ಮಾಸ್ಯ ವ್ರತವು ಯಶಸ್ವಿಯಾಗಿ ನೆರವೇರಲೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವೃಂದ, ಪರ್ಯಾಯ ಅರ್ಚಕರು, ದೇವಸ್ಥಾನದ ಸಿಬ್ಬಂದಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀಪಾದಂಗಳವರಿಂದ ಫಲಮಂತ್ರಾಕ್ಷತೆಯನ್ನು ಪಡೆದು ಆಶೀರ್ವಾದ ಪಡೆದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಆರ್ಕಿಟೆಕ್ಚರ್ ವಿಭಾಗದಲ್ಲಿ ಉನ್ನತ ರ್ಯಾಂಕ್ ಗಳನ್ನು ಗಳಿಸಿದ್ದಾರೆ. ಕ್ರಿಯೇಟಿವ್ ನ ವಿದ್ಯಾರ್ಥಿಗಳಾದ ಭೂಮಿಕಾ ವೈ ರಾಜ್ಯಕ್ಕೆ 38ನೇ ಸ್ಥಾನ ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಉಳಿದಂತೆ ಕ್ರಮವಾಗಿ ವಿದ್ಯಾರ್ಥಿಗಳಾದ, ಪ್ರಣವ್ ಕುಲಕರ್ಣಿ 79, ಸಮೃದ್ ಪಿ .ಶೆಟ್ಟಿ 91, ಪ್ರಾರ್ಥನಾ ಎಂ. 99, ಅದಿತಿ ನಂದೀಶ್ 107, ಕುಶಾಲ್ ಎಲ್ 115, ಹೆಚ್. ಎಸ್.ಆದ್ಯ 163, ಅಜಯ್ ಕೆ. ಎನ್.181, ಜ್ಯೋತಿ ಎಸ್.211 ಸ್ಥಾನವನ್ನು ಪಡೆದುಕೊಂಡಿದ್ದಾರೆ. ಪ್ರಸ್ತುತ ಬಹುಬೇಡಿಕೆಯನ್ನು ಹೊಂದಿರುವ ರಾಷ್ಟ್ರದ ಅತ್ಯುನ್ನತ ಸಂಸ್ಥೆಯಾದ ಆರ್ಕಿಟೆಕ್ಚರ್ ಸಂಸ್ಥೆಗಳಿಗೆ ಸೇರಲು ನಡೆಯುವ ರಾಷ್ಟ್ರ ಮಟ್ಟದ NATA (ನ್ಯಾಶನಲ್ ಎಲಿಜಿಬಿಲಿಟಿ ಟೆಸ್ಟ್ ಫಾರ್ ಆರ್ಕಿಟೆಕ್ಚರ್) ಪ್ರವೇಶ ಪರೀಕ್ಷೆಗೆ ಕ್ರಿಯೇಟಿವ್ ವಿದ್ಯಾ ಸಂಸ್ಥೆಯು ಅತ್ಯುತ್ತಮ ತರಬೇತಿ ನೀಡುತ್ತಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ…
