Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಜೂ.30ರಿಂದ ಜು.29 ತನಕ ನಡೆಯಲಿದ್ದು ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಓ) ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಶನ್ ಫಾರ್ಮ್ ನ್ನು ನೀಡುತ್ತಿದ್ದಾರೆ. ಎಲ್ಲಾ ಮತದಾರರರು ಜು.29ರೊಳಗೆ ಆ ಫಾರ್ಮ್ ತುಂಬಿಸಿ ವಾಪಾಸು ನೀಡಬೇಕಾಗಿದೆ. ಆ ಫಾರ್ಮ್ ನಲ್ಲಿ 2002ರ ಮತದಾರರ ಪಟ್ಟಿಯಲ್ಲಿನ ಅವರ ವಿವರಗಳನ್ನು, 2002ರಲ್ಲಿ ಅವರ ಹೆಸರು ಇಲ್ಲದಿದ್ದರೆ ಅವರ ತಂದೆ, ತಾಯಿ, ಅಜ್ಜ, ಅಜ್ಜಿ ಯಾರೊಬ್ಬರ ವಿವರವನ್ನಾದರೂ ತುಂಬಿಸಬೇಕಾಗಿದೆ. ಇದು ತುಂಬಿಸಲು ಎಲ್ಲಾ ಮತದಾರರಿಗೆ ಕಷ್ಟವಾಗುತ್ತಿದ್ದು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರರಿಗೆ ಕಷ್ಟವಾಗಬಾರದೆಂದು ಜು.3 ರಿಂದ ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮತದಾರರ ಸಹಾಯ ಕೇಂದ್ರ (ಎಸ್.ಐ.ಆರ್ ಹೆಲ್ಫ್ ಡೆಸ್ಕ್) ತೆರೆಯಲಾಗಿದೆ. ಇದು ರಜಾ ದಿನಗಳೂ ಸೇರಿದಂತೆ ವಾರದ ಏಳೂ ದಿನವೂ ಬೆಳಿಗ್ಗೆ 9.30 ರಿಂದ ಸಂಜೆ 6.30ರ ತನಕ ಕಾರ್ಯನಿರ್ವಹಿಸಲಿದ್ದು ಅರ್ಜಿ ತುಂಬಿಸಲು ಕಷ್ಟವಾಗುವ ಎಲ್ಲಾ ಮತದಾರರು ಎಸ್.ಐ.ಆರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ಇತ್ತೀಚೆಗೆ ನೆಡೆದ ’ಕೆಂಚನೂರು ಯಕ್ಷೋತ್ಸವʼದಲ್ಲಿ ಸಂಗ್ರಹವಾದ ಉಳಿಕೆ ಮೊತ್ತದಿಂದ ಕೆಂಚನೂರು ಗ್ರಾಮದಲ್ಲಿ ಆರ್ಥಿಕವಾಗಿ ಅರ್ಹ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಯಿತು. ಫಲಾನುಭವಿಗಳಾದ ಸೂರಜ್ ಆಚಾರ್ಯ, ದೀಪಿಕಾ, ಗೋಪಾಲ್ ಮೊಗವೀರ ಕೆಂಚನೂರು, ರಾಜು ಗಾಣಿಗ ಹೆಮ್ಮಾಡಿ ಅವರಿಗೆ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕೆಂಚನೂರು ಯಕ್ಷೋತ್ಸವದ ರೂವಾರಿ ರವಿ ಗಾಣಿಗ ಮಲ್ಲಾರಿ, ಕೆಂಚನೂರು ಆರ್ಥಿಕ ನೆರವು ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀ ರಾಮೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಎಚ್. ಸುಧೀರ್ ಶೆಟ್ಟಿ ಕೆಂಚನೂರು, ಸುಬ್ಬಣ್ಣ ಶೆಟ್ಟಿ ಕೆಂಚನೂರು, ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೀವ್ ಶೆಟ್ಟಿ ಕೆಂಚನೂರು, ಜೈನುದ್ದೀನ್ ಶೆಟ್ರಕಟ್ಟೆ, ಗುಂಡು ಶೆಟ್ಟಿ ಕೆಂಚನೂರು ಉಪಸ್ಥಿತರಿದ್ದರು. ಸಮಾಜಮುಖಿ ಕಾರ್ಯಕ್ಕೆ ಸಹಕರಿಸಿದ ದಾನಿಗಳಾದ ರವಿ ಗಾಣಿಗ ಮಲ್ಲಾರಿ – ಕೆಂಚನೂರು ಅವರನ್ನು ಇದೇ ವೇಳೆ ಅಭಿನಂದಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ  ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದ  ಉಪಪ್ರಾಂಶುಪಾಲರಾದ ಕೃಷ್ಣಮೂರ್ತಿ ಪಿ.ಕೆ.  ಮಾತನಾಡಿ, “ಪುರಾಣ ಪುರುಷರು ನಡೆದಾಡಿದ ಈ ನೆಲದಲ್ಲಿ ಉಸಿರಾಡಿದ ಈ ಪರಿಸರದಲ್ಲಿ ವಿದ್ಯಾರ್ಥಿಗಳು ಘನ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಾಧಕರಾಗಿ ಬೆಳೆಯಬೇಕು” ಎಂದು ನುಡಿದರು. ಕಾಲೇಜಿನ ಹಿರಿಯ ವಿಶ್ವಸ್ಥರಾದ ದೇವದಾಸ ಕಾಮತ್ ಸಭೆಯನ್ನುದ್ದೇಶಿಸಿ ಕಣ್ಣಿಗೆ ಕಾಣುವ ದೇವರು ತಾಯಿ ತಂದೆ, ಸತತ ಪರಿಶ್ರಮ, ಪ್ರಯತ್ನದಿಂದ ವಿದ್ಯಾರ್ಥಿ ಗಳು ಸಾಧಕರಾಗಿ ಬೆಳೆಯಿರಿ ಎಂದು ಹಿತನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಾ ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಿಎ ಪರೀಕ್ಷೆಯ ಮೊದಲ ಅವಧಿಯಲ್ಲಿ ಪಾಸಾದ ಹೆಮ್ಮೆಯ ಹಳೆ ವಿದ್ಯಾರ್ಥಿ ಕೆ. ಕಿರಣ್ ಕಾಮತ್ ಅವರಿಗೆ ಕಾಲೇಜಿನ ಆಡಳಿತ ಮಂಡಳಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮೇ.2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾಣಿಜ್ಯ ವಿಭಾಗದ 39 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಪರೀಕ್ಷೆಗೆ ಹಾಜರಾದ ಜಶ್ ಕಾವೇರಿಯಪ್ಪ ಎ.ಎಂ. (297) ಪ್ರತೀಕ್ ಜೈನ್ ಹಾಗೂ ಸುಧೀಕ್ಷಾ ಎಸ್. ಶೆಟ್ಟಿ ತಲಾ 290 ಅಂಕ, ಪ್ರದ್ಯುಮ್ನ ಭೈರಡ್ಡಿ (289) ರಾಹುಲ್ (288), ಬಸವೇಶ್ವರ (287), ವೈಷ್ಣವಿ ರಾವ್ (286), ದಿಶಾ (279), ಮೋಹಿತ್ ಸಂದೇಶ್ ದೇಸಾಯಿ (276) ಶ್ರೇಯಾಂಕ್ ಆರ್. ಶೆಟ್ಟಿ (262) ಬೃಂದಾ ಆರ್.ಟಿ. (252), ಸ್ಪೂರ್ತಿ ವೀರೇಶ್ ಪಟ್ಟಣಶೆಟ್ಟಿ (251), ಗಾನಶ್ರೀ ಟಿ. (244), ಸಂಶ್ರಿತ್ (240), ಆದರ್ಶ್ ಬಾಲಚಂದ್ರ (239), ಎಸ್.ಜಿ. ಪ್ರತ್ಯೂಷ್ (239), ಶಾರೇಲ್ ಲವಿಟಾ ರೋಡ್ರಿಗ್ಸ್ (236), ಮೊಹಮ್ಮದ್ ಫಹೀಮ್ (232), ವಿಕ್ಯಾತ್ (232), ಸಿಂಚನಾ ಶ್ಯಾಮಸುಂದರ್ ಡಂಬಳ (231), ನಿಹಾರಿಕಾ ಜೆ. ಶೆಟ್ಟಿ (231), ಟಿ. ಸೃಷ್ಟಿ (230), ಶ್ರಾವ್ಯ (230), ಮೋಹಿತ್ ಗೌಡ ಆರ್.ಎಸ್. (229), ಯಶಸ್ವಿನಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಮಹಾಶಕ್ತಿ ಕೇಂದ್ರದ ವ್ಯಾಪ್ತಿಗೆ ಬರುವ ವಡ್ಡರ್ಸೆ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬುಧವಾರ ಬನ್ನಾಡಿಯ ಸುಬ್ಬಣ್ಣ ಹೆಗ್ಡೆ ಸಭಾಭವನದಲ್ಲಿ ಯಶಸ್ವಿಯಾಗಿ ನೆರವೇರಿತು.  ಕುಂದಾಪುರ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಉಪಸ್ಥಿತರಿದ್ದ ಈ ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೂತ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಶಕ್ತಿ ಕೇಂದ್ರದ ಮಹತ್ವ ಮತ್ತು ಮುಂದಿನ ಗುರಿ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಮಾತನಾಡಿ ಪಕ್ಷ ಸಂಘಟನೆಯ ಸೂಕ್ಷ್ಮ ರಚನೆಯ ಕುರಿತು ಸ್ಪಷ್ಟ ನಿರ್ದೇಶನ ನೀಡಿದರು. “ಶಕ್ತಿ ಕೇಂದ್ರ ಎಂದರೆ ಪಕ್ಷದ ನಿಜವಾದ ಶಕ್ತಿ. ಬೂತ್ ಮಟ್ಟದ ಕೊನೆಯ ಕಾರ್ಯಕರ್ತನವರೆಗೂ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಯೋಜನೆಗಳು ತಲುಪಬೇಕು. ಅದಕ್ಕಾಗಿ ನಮ್ಮ ಗುರಿ ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿಕೊಂಡು ಕೇರಳಕ್ಕೆ ಕೊಂಡೊಯ್ದು ಅಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾರಂಬಳ್ಳಿ ಗ್ರಾಮ ಸಾಲಿಕೇರಿಯ ವಿಖ್ಯಾತ್ ಆಚಾರ್ಯ (19) ಆಗೂ ಮಟಪಾಡಿ ಗ್ರಾಮದ ನಿವಾಸಿ ಸುಚಿತ್ ನಾಯಕ್ (20) ಎಂದು ಗುರುತಿಸಲಾಗಿದೆ. ಇವರಿಬ್ಬರು ಜೂನ್ 1ರಂದು ಮುಂಜಾನೆ 8:30ರ ಸುಮಾರಿಗೆ ಬ್ರಹ್ಮಾವರ ಬಸ್ ನಿಲ್ದಾಣದ ಬಳಿಯಿಂದ ಅಪ್ರಾಪ್ತ ಬಾಲಕನನ್ನು ಬಲವಂತವಾಗಿ ಅಪಹರಿಸಿಕೊಂಡು ಕೇರಳದ ತಲಪಾಡಿ ಕುಂಜತ್ತೂರು ಪದವು ಎಂಬಲ್ಲಿಗೆ ಕರೆದೊಯ್ದಿದ್ದರು. ಅಲ್ಲಿ ಆರೋಪಿಗಳು ಬಾಲಕನನ್ನು ಬಲಾತ್ಕಾರವಾಗಿ ವುಡ್ ಕಂಪೆನಿಗೆ ಕೆಲಸಕ್ಕೆ ಸೇರಿಸಿದ್ದರು. ಬಾಲಕ ತನಗೆ ಮನೆಗೆ ಹೋಗಬೇಕೆಂದು ಹಠ ಹಿಡಿದಾಗ, ಜೂ.9ರಂದು ಸುಚಿತ್ ತಾವಿದ್ದ ರೂಮಿನಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ್ದು, ವಿಖ್ಯಾತ್ ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿ ನಿಂದಿಸಿದ್ದ. ಈ ಕೃತ್ಯವನ್ನು ಇನ್ನೊಬ್ಬ ಮೊಬೈಲ್‌ನಲ್ಲಿ ವಿಡಿಯೋ ಮಾಡಿರುವುದಾಗಿ ಬಾಲಕನ ತಂದೆ ಬ್ರಹ್ಮಾವರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ & ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್) ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್- ಎಸ್.ಎಸ್.ಪಿ ತಂತ್ರಾಂಶವಾದ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ಮೆಸ್ಕಾಂ ಸಂಸ್ಥೆಯ ಸಹಯೋಗದೊಂದಿಗೆ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಾಗಾರವನ್ನು ಗುರುವಾರ ನಡೆಸಲಾಯಿತು. ಮೆಸ್ಕಾಂ ತಲ್ಲೂರಿನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುರೇಶ್ ಬಾಬು ಅವರು ಮಳೆಗಾಲದ ಆರಂಭದಲ್ಲಿ ವಿದ್ಯುತ್ ಅವಘಡಗಳ ಸಂಭವ ಬಹಳವಾಗಿರುವುದರಿಂದ ಮಕ್ಕಳಲ್ಲಿ ಸುರಕ್ಷತೆಯ ಜ್ಞಾನ ಅತ್ಯಗತ್ಯ. ಎನ್ನುತ್ತಾ ಅಸುರಕ್ಷಿತವಾದ ವಿದ್ಯುತ್ ಸಂಪರ್ಕದಿಂದ ಪ್ರಾಣಾಪಾಯದ ಸನ್ನಿವೇಶಗಳ ಮಾಹಿತಿಯನ್ನು ವೀಡಿಯೋ ತುಣುಕುಗಳ ಜೊತೆಗೆ ನೀಡಿದರು. ಮೆಸ್ಕಾಂ ತಲ್ಲೂರಿನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರೀಶ ಕುಮಾರ್ ಮಕ್ಕಳನ್ನು ಕುರಿತು ವಿದ್ಯುತ್ ಉತ್ಪತ್ತಿ, ಅದನ್ನು ಮನೆ ಮನೆಗೂ ತಲುಪಿಸುವ ವಿಚಾರಗಳ ಬಗ್ಗೆ ಮಾಹಿತಿ ನೀಡುವ ವೀಡಿಯೋ ತುಣುಕು ಮತ್ತು ಛಾಯಾಚಿತ್ರಗಳ, ಪ್ರತಿಕೃತಿಗಳ ಮೂಲಕ ತಿಳಿಸುತ್ತಾ ಮಕ್ಕಳೇ, ವಿದ್ಯುತ್ ತಂತಿಗಳ ಕೆಳಗೆ ಗಾಳಿಪಟಗಳ ಜೊತೆ ಆಡಬೇಡಿ. ತುಂಡಾಗಿ ಬಿದ್ದ ಲೈನ್ ಅನ್ನು ಯಾವತ್ತೂ ಮುಟ್ಟಬೇಡಿರಿ. 1912 ಸಂಖ್ಯೆಗೆ ನಿಮ್ಮ ವಿದ್ಯುತ್ ಸಮಸ್ಯೆಗಳನ್ನು ಹೇಳಿಕೊಳ್ಳಿರಿ. ತಕ್ಷಣವೇ ಮೆಸ್ಕಾಂ ಸಂಸ್ಥೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಪಡುಕರೆ ಗೀತಾನಂದ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿರುವ ’ಸೃಷ್ಟಿ 2026’ ಹಸಿರು ಅಭಿಯಾನಕ್ಕೆ ವಡ್ಡರ್ಸೆಯ ನಾರಾಯಣ ಗುರು ವಸತಿ ಶಾಲೆ ಆವರಣದಲ್ಲಿ ನುಗ್ಗೆ, ದೀವಿಗೆ ಹಲಸು ಮತ್ತು ವಿವಿಧ ಹಣ್ಣಿನ ಗಿಡಗಳು ಹಾಗೂ ಶಾಲಾ ಮೈದಾನದ ಸುತ್ತ ನೆರಳನ್ನು ನೀಡುವ ದೊಡ್ಡದಾಗಿ ಬೆಳೆದು ಹೆಮ್ಮರವಾಗುವ ವಿವಿಧ ಜಾತಿಯ ಗಿಡಗಳನ್ನು ನಿಟ್ಟು  ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯ ಅತಿಥಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಅವರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಗಿಡಗಳನ್ನು ನೆಡುವುದರ ಜೊತೆಗೆ ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನೂ ಎಲ್ಲರೂ ವಹಿಸಬೇಕು ಮತ್ತು ನಮ್ಮ ಸ್ವಯಂಸೇವಕರು ಆ ಕೆಲಸವನ್ನು ಸಹ ವಾರಾಂತ್ಯದಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಎನ್ನಲು ನಮಗೆ ಹೆಮ್ಮೆ ಎಂದು ಹೇಳಿದರು. ಅತಿಥಿಗಳಾದ ಜನತಾ ಸಂಸ್ಥೆಯ ಶ್ರೀನಿವಾಸ್ ಕುಂದರ್ ಹಾಗೂ ಮಿಥುನ್ ಕುಮಾರ್ ಮಾತನಾಡಿ, ಪರಿಸರ ಉಳಿವಿಗಾಗಿ ಸಮಾಜದ ಸಹಭಾಗಿತ್ವ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬದುಕನ್ನು ರೂಪಿಸಿಕೊಳ್ಳಲು ಪುಸ್ತಕಗಳು ಮಾರ್ಗದರ್ಶಕ, ವಿದ್ಯಾರ್ಥಿಗಳು ಪುಸ್ತಕವನ್ನು ಓದುವ ಹವ್ಯಾಸವನ್ನು ರೂಪಿಸಿಕೊಳ್ಳಬೇಕು. ಎಲ್ಲ ವಿಚಾರಗಳ ಕುರಿತು ಜ್ಞಾನ ಹೊಂದಿರುವುದು ಅತೀ ಅವಶ್ಯಕ. ಕಾರಂತರು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೇ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸಿ, ಸಮಾಜಕ್ಕೆ ಅಪಾರವಾದ ಕೊಡುಗೆ ನೀಡುವುದರೊಂದಿಗೆ ಬದುಕಿನ ಮೌಲ್ಯಗಳನ್ನು ತಿಳಿಸಿ ಸಾರ್ಥಕವಾದ ಬದುಕನ್ನು ನಡೆಸಿದವರು ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಂದಾಪುರ ಇಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಮಕ್ಕಳಿಗಾಗಿ ಕಾರಂತರು-೫ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಡಾ. ಕಾರಂತರ ಪರಿಚಯ ಚಿತ್ರಕಲೆಯ ಮೂಲಕ ಕಾರಂತರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಉಪಪ್ರಾಂಶುಪಾಲೆ ಶುಭ ಕೆ.ಎನ್., ಕಾರಂತರು ಕನ್ನಡ ಸಾಹಿತ್ಯ ಕಲೆ ಸಂಸ್ಕೃತಿ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ…

Read More