Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಏಳು ಜನರ ತಂಡ ಸೋಡಾ ಬಾಟಲಿ ಹಾಗೂ ಹೆಲ್ಮೆಟ್‌ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಕುಂಭಾಶಿಯ ಕೊರವಡಿ ಎಂಬಲ್ಲಿ ನಡೆದಿದೆ. ತೆಕ್ಕಟ್ಟೆ ಗ್ರಾಮದ ರಂಜಿತ್ ಹಲ್ಲೆಗೊಳಗಾದವರು. ಸದ್ಯ ಇವರು ಗಂಭೀರ ಸ್ಥಿತಿಯಲ್ಲಿ ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇ.17ರಂದು ರಾತ್ರಿ 10 ಗಂಟೆಯ ಸುಮಾರಿಗೆ ರಂಜಿತ್ ಅವರು ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಜೋರಾಗಿ ಮಳೆ ಬರುತ್ತಿದ್ದ ವೇಳೆ ಕುಂಭಾಶಿಯ ಕೊರವಡಿ ಬಳಿಯ ಅಂಗಡಿಯೊಂದರ ಎದುರು ತಮ್ಮ ಬೈಕ್ ನಿಲ್ಲಿಸಿ ಆಶ್ರಯ ಪಡೆದಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿಗಳಾದ ವಿಕಾಸ್ ಪೂಜಾರಿ, ಶರತ್ ಪೂಜಾರಿ, ಮಹೇಂದ್ರ ಪೂಜಾರಿ, ಸುಕೇಶ್ ಪೂಜಾರಿ, ಅಭಿಲಾಷ್ ಪೂಜಾರಿ, ಮಂಜುನಾಥ ಮತ್ತು ಸಂದೇಶ್ ಇವರು ಒಟ್ಟು ಸೇರಿ, ರಂಜಿತ್‌ನನ್ನು ಕೊಲ್ಲುವ ಉದ್ದೇಶದಿಂದ ಸೋಡಾ ಬಾಟಲಿ ಹಾಗೂ ಹೆಲ್ಮೇಟ್ನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ರಂಜಿತ್ ಅವರಿಗೆ ಗಂಭೀರ ಸ್ವರೂಪದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಕೋಟ ಬೊಬ್ಬರ್ಯನಕಟ್ಟೆ ಸಮೀಪ ಸಂಭವಿಸಿದೆ. ಕೋಟಿ ಗಿಳಿಯಾರು ನಿವಾಸಿ, ಲಾರಿ ಲೋಡರ್ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ದೇವಾಡಿಗ (60) ಮೃತಪಟ್ಟ ದುರ್ದೈವಿ. ಉಡುಪಿ ಕಡೆಯಿಂದ ಕುಂದಾಪುರದತ್ತ ಸಂಚರಿಸುತ್ತಿದ್ದ ಕಾರು, ರಸ್ತೆ ದಾಟಲು, ನಿಂತಿದ್ದ ಕೃಷ್ಣ ದೇವಾಡಿಗ ಅವರಿಗೆ ಢಿಕ್ಕಿ ಹೊಡೆಯಿತು. ‘ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಅವರನ್ನು ‘ಜೀವನ್ ಮಿತ್ರ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನೆಯ ಮಾಹಿತಿ ತಿಳಿದು ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನ ಎಂಬುವುದು ಮಹತ್ತರವಾದ ಘಟ್ಟ. ಈ ಆರಂಭಿಕ ಶೈಕ್ಷಣಿಕ ದಿನಗಳನ್ನು ನೈಜವಾಗಿ ಸದ್ಭಳಕೆ ಮಾಡಿಕೊಳ್ಳಿ ಎಂದು ಕೋಟದ ಶೈಕ್ಷಣಿಕ ಪ್ರೋತ್ಸಾಹಕ, ಉದ್ಯಮಿ ಆನಂದ್ ಸಿ. ಕುಂದರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ-ಪಡುಕರೆ ಇದರ 2025-26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ  ಸಮಾರಂಭದಲ್ಲಿ ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಕೊಡಮಾಡಿದ ವಿದ್ಯಾನಿಧಿಯನ್ನು ಹಸ್ತಾಂತರಿಸಿ ಮಾತನಾಡಿದರು.  ಗ್ರಾಮೀಣ ಪರಿಸರದ ಮಕ್ಕಳ ವಿದ್ಯಾರ್ಜನೆಯಿಂದ ವಂಚಿತಗೊಳ್ಳಬಾರದೆಂದು ಈ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ.ಗೀತಾನಂದ ಫೌಂಡೇಶನ್ ನಿರಂತರವಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ ಸರಕಾರಿ ವ್ಯವಸ್ಥೆಯನ್ನು ಪ್ರತಿಯೊರ್ವರು ಸದ್ಭಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ವತಿಯಿಂದ ವಿಧ್ಯಾನಿಧಿಯನ್ನು ಹಸ್ತಾಂತರಿಸಲಾಯಿತು.ಅಲ್ಲದೆ ಉಪನ್ಯಾಸಕಿ ಡಾ. ಸುನಿತಾ ವಿ.ಸುಬ್ರಹ್ಮಣ್ಯ ಅವರು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವೇದಿಕೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ ಸಂಘಟನೆಗಳಲ್ಲೊಂದಾದ ಕರ್ನಾಟಕ ಸಂಘ ಕತಾರ್‌ನ 2026–2028ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ಐಸಿಸಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭೆಯಲ್ಲಿ ಉಪಸ್ಥಿತರಿದ್ದ ಅಪಾರ ಸಂಖ್ಯೆಯ ಸದಸ್ಯರು ಅವರ ನಾಯಕತ್ವದ ಮೇಲೆ ಅಪಾರ ವಿಶ್ವಾಸ ಮತ್ತು ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ಮೂಲದ ಕುಂದಾಪುರ ತಾಲ್ಲೂಕಿನ ಬೈಂದೂರಿನವರಾದ ಸುಬ್ರಮಣ್ಯ ಹೆಬ್ಬಾಗಿಲು ಅವರು ಭಾರತೀಯ ಸಮುದಾಯದಲ್ಲಿ ಸಾಮಾಜಿಕ ಮತ್ತು ಸಮುದಾಯ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಅವರು ಹಲವು ವರ್ಷಗಳಿಂದ ಮಾನವೀಯ, ಸಾಂಸ್ಕೃತಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಸಮುದಾಯದ ಗೌರವಾನ್ವಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸುಬ್ರಮಣ್ಯ ಹೆಬ್ಬಾಗಿಲು ಅವರು ಈ ಹಿಂದೆ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಉಪಾಧ್ಯಕ್ಷರಾಗಿ, ಭಾರತೀಯ ಕ್ರೀಡಾ ಕೇಂದ್ರದ (ISC) ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ಭಾರತೀಯ ಸಮುದಾಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆರ್ಥಿಕ ವರ್ಷ 2013-14 ರಿಂದ 2018-19ನೇ ಸಾಲಿನಲ್ಲಿ ಅರಿವು, ಶ್ರಮಶಕ್ತಿ, ಸ್ವಾವಲಂಬನಾ, ಎನ್.ಎಂ.ಎಫ್.ಡಿ.ಸಿ ನೇರ ಸಾಲ, ಮೈಕ್ರೋ ಕಿರುಸಾಲ, ಪಶುಸಂಗೋಪನಾ ಯೋಜನೆ ಮುಂತಾದ ವಿವಿಧ ಯೋಜನೆಗಳಡಿ ನೀಡಲಾಗಿರುವ ಸಾಲದ ಮೊತ್ತವನ್ನು ಪೂರ್ಣವಾಗಿ ಅಸಲು ಪಾವತಿಸುವ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಒಂದಾವರ್ತಿ ತೀರುವಳಿ ಯೋಜನೆ(ಒ.ಟಿ.ಎಸ್) ಮೂಲಕ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ.  ಈ ಯೋಜನೆಯಡಿ ಫಲಾನುಭವಿಯು ಸಾಲದ ಖಾತೆಯಲ್ಲಿ ಬಾಕಿ ಉಳಿದಿರುವ ಮೊತ್ತದ ಶೇ.25 ರಷ್ಟು ಮೊತ್ತವನ್ನು ಪಾವತಿಸಿ, ಯೋಜನೆಯಡಿ ನೋಂದಾಯಿಸಿಕೊಂಡು 2026 ರ ಮೇ 1 ರಿಂದ ಜುಲೈ 31 ರವರೆಗೆ ಬಾಕಿ ಉಳಿದ ಪೂರ್ಣ ಮೊತ್ತವನ್ನು ಪಾವತಿಸಿ ಸರ್ಕಾರದ ಒಟಿಎಸ್ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ನಿಗದಿತ ಸಮಯದಲ್ಲಿ ಸಾಲವನ್ನು ಪಾವತಿಸದಿದ್ದಲ್ಲಿ ನಿಗಮದ ನಿಯಮಾವಳಿಯಂತೆ ಮರುಪಾವತಿಸಿದ ಮೊತ್ತವನ್ನು ಸಾಲದ ಖಾತೆಗೆ ಸರಿಹೊಂದಿಸಲಾಗುವುದು. ಒ.ಟಿ.ಎಸ್ ಬಡ್ಡಿಯನ್ನು ಮನ್ನಾ ಯೋಜನೆ ಅಪೇಕ್ಷಿಸುವ ಫಲಾನುಭವಿಗಳು ನಿಗಮದ ವೆಬ್ಸೈಟ್ https://kmdconline.karnataka.gov.in/Portal/ots-repayment ಮೂಲಕ ಅಥವಾ ನಿಗಮದ ಕಚೇರಿಯಾದ ಮೌಲಾನಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಜೂ.17 ಕೊನೆಯ ದಿನ, ಜೂ.19 ರಂದು ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಜೂ. 25 ರ ವರೆಗೆ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೇ.26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಪ್ರಾರಂಭವಾಗಲಿರುವ ಹಿನ್ನೆಲೆ, ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನ ಚರಂಡಿ, ತೋಡುಗಳನ್ನು ಸ್ವಚ್ಛಗೊಳಿಸಿ, ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮಗಳನ್ನು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಕೈಗೊಳ್ಳುವಂತೆ ನೋಡಿಕೊಳ್ಳಬೇಕು ಇದರಿಂದ ರೋಗ ರುಜಿನಗಳು ಹರಡದಂತೆ ತಡೆಯಲು ಸಾಧ್ಯ ಎಂದ ಅವರು, ಅತಿವೃಷ್ಠಿ ಸಂಭವಿಸಿದಾಗ ತುರ್ತು ವಿಪತ್ತು ನಿರ್ವಹಣೆಗಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಕ್‌ಗೆ ಮಿನಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಖಮಂಟಪದ ರಾ.ಹೆ. 66ರಲ್ಲಿ ಸಂಭವಿಸಿದೆ. ಕುಂದಾಪುರದಿಂದ ಬೈಂದೂರು ಕಡೆಗೆ ಮಿನಿ ಬಸ್ ಡ್ರೈವರ್ ದಿನೇಶ ಮರಾಠಿ ತನ್ನ ಬಸ್ ಅನ್ನು, ಉಪ್ಪುಂದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸರ್ವಿಸ್ ರಸ್ತೆಯಿಂದ ರಾ. ಹೆ. 66ರ ರಸ್ತೆಗೆ ಬರಲು ನಿಂತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆಸಿದ ಪರಿಣಾಮ ಸವಾರ ಬಚ್ಚ ಬಿಲ್ಲವ ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾರ್ಮಿಕರ ದಿನಾಚರಣೆಯ ಅಂಗವಾಗಿ ಜೆಸಿಐ ಬೈಂದೂರು ಸಿಟಿ ವತಿಯಿಂದ ಯಡ್ತರೆಯ ಸಜ್ಜನ ಕೆಲಸಗಾರ  ರಾಘವೇಂದ್ರ ದೇವಾಡಿಗ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಯಡ್ತರೆಯ ರಾಹುತನಕಟ್ಟೆಯಲ್ಲಿ ವೆಲ್ಡಿಂಗ್ ವರ್ಕ್ ನಡೆಸುತ್ತಿರುವ ರಾಘವೇಂದ್ರ ಅವರು, ಕೇವಲ ಒಬ್ಬ ಕೆಲಸಗಾರನಾಗಿ ಉಳಿಯದೆ ತಮ್ಮಲ್ಲಿ ಕೆಲಸ ಕಲಿಯುವ ಅನೇಕ ಯುವಕರಿಗೆ ಸ್ವಂತ ಉದ್ಯಮ ಆರಂಭಿಸಲು ಪ್ರೋತ್ಸಾಹ ನೀಡುವ ಮೂಲಕ ಮಾರ್ಗದರ್ಶಕರಾಗಿದ್ದಾರೆ. ಸಮಾಜದ ಬಡವರ್ಗದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಅವರು, ಬೈಂದೂರು ಭಾಗದಲ್ಲಿ ಅಪ್ಪಟ ಸಜ್ಜನಿಕೆ ಮತ್ತು ಪ್ರಾಮಾಣಿಕ ಕೆಲಸದ ಮೂಲಕ ಸಾರ್ವಜನಿಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಅವರ ಈ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಜೆಸಿಐ ಸಂಸ್ಥೆಯು ಈ ಗೌರವ ಅರ್ಪಿಸಿದೆ. ಯಡ್ತರೆಯ ಯಶಸ್ವಿ ವೆಲ್ಡಿಂಗ್ ವೃತ್ತಿಪರರಾದ ರಾಘವೇಂದ್ರ ದೇವಾಡಿಗ ಅವರನ್ನು ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಜೆಸಿಐ ಬೈಂದೂರು ಸಿಟಿ ವತಿಯಿಂದ ಸನ್ಮಾನಿಸಲಾಯಿತು. ಸ್ವಂತ ಶ್ರಮದಿಂದ ಉದ್ಯಮ ಬೆಳೆಸುವುದರ ಜೊತೆಗೆ, ಇತರರಿಗೂ ಉದ್ಯೋಗದ ಹಾದಿ ತೋರಿಸುತ್ತಿರುವ ಅವರು, ಬಡವರ ಸಹಾಯಕ್ಕೆ ಸದಾ ಸಿದ್ಧರಿರುವ ಹೃದಯವಂತರು. ಬೈಂದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಬೈಂದೂರು ಸಿಟಿ ವತಿಯಿಂದ ಪ್ರತಿ ತಿಂಗಳು ಹಮ್ಮಿಕೊಳ್ಳಲಾಗುವ “ಸೆಲ್ಯೂಟ್ದ ಸೈಲೆಂಟ್ ಸ್ಟಾರ್” ಕಾರ್ಯಕ್ರಮದ ಅಡಿಯಲ್ಲಿ ಎಪ್ರಿಲ್ ತಿಂಗಳು ಪ್ರಸಿದ್ಧ ಕಲಾವಿದರಾದ ತ್ರಿವಿಕ್ರಮ್ ರಾವ್ ಉಪ್ಪಂದ ಅವರನ್ನು ಗುರುತಿಸಿ ಗೌರವಿಸಲಾಯಿತು. ಕಲಾವಿದರ ಪರಿಚಯ ಮತ್ತು ಸಾಧನೆ:ತ್ರಿವಿಕ್ರಮ್ ರಾವ್ ಅವರು ಕಲಾ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದವರಾಗಿದ್ದು, ಅವರ ಪ್ರಮುಖ ಸಾಧನೆಗಳು.  ರಂಗಭೂಮಿ ಸೇವೆ:ನೂರಾರು ನಾಟಕಗಳಿಗೆ ಅದ್ಭುತವಾಗಿ ಮೇಕಪ್ (ಬಣ್ಣಗಾರಿಕೆ) ಮತ್ತು ವಸ್ತ್ರ ವಿನ್ಯಾಸಕಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಮಣ್ಣಿನ ಕಲೆ:ಮಣ್ಣಿನ ಕಲಾಕೃತಿಗಳನ್ನು ಅತ್ಯಂತ ಸುಂದರವಾಗಿ ನಿರ್ಮಿಸುವ ಕಲೆ ಅವರಿಗೆ ಸಿದ್ಧಿಸಿದೆ. ಮೂರ್ತಿ ಶಿಲ್ಪ:ಗಣೇಶ ಮತ್ತು ಶಾರದಾ ಮೂರ್ತಿಗಳನ್ನು ನಿರ್ಮಿಸುವಲ್ಲಿ ಅಪ್ರತಿಮ ಕಲಾ ನೈಪುಣ್ಯತೆಯನ್ನು ಹೊಂದಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ಜೆಸಿಐ ಸಿಟಿಅಧ್ಯಕ್ಷ ಚೈತ್ರ ಸತೀಶ್, ನಿಕಟಪೂರ್ವ ಅಧ್ಯಕ್ಷ ರಾಜು ಮೊಗವೀರ, ಕಾರ್ಯದರ್ಶಿ ಪ್ರೇಮ ವಿ. ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೇಟರ್ ಸೂರ್ಯಕಾಂತಿ, ಜೆಸಿ ರಾಘವೇಂದ್ರ ಹೊಳ್ಳ, ಜೆಸಿ ಸುರೇಂದ್ರ ಶೇಟ್, ಜೆಸಿ ಅವಿನಾಶ್ ಉಪಸ್ಥಿತರಿದ್ದರು. ತೆರೆಯ ಮರೆಯಲ್ಲಿದ್ದುಕೊಂಡು ಕಲಾ…

Read More