Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 3ನೇ ಸ್ಥಾನ ಹಾಗೂ ಶಾಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಸಾತ್ವಿಕ್ ಎಸ್. ಭಟ್ ನನ್ನು ಶಾಲೆಯ 40ನೇ ಸಂಸ್ಥಾಪನಾ ದಿನದಂದು ಪೋಷಕರೊಂದಿಗೆ ಬೆಳ್ಳಿಯ ಲೋಟವನ್ನು ನೀಡಿ ಸನ್ಮಾನಿಸಲಾಯಿತು. ಈ ಸಮಾರಂಭವು ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣಕಾಮತ್ ಅವರ ಅಧ್ಯಕ್ಷತೆಯಲ್ಲಿ, ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈಯವರ ಉಪಸ್ಥಿತಿಯಲ್ಲಿ ನಡೆಯಿತು. ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್ ಹಾಗೂ ಸುಮಾ ಉಮೇಶ್ ಪುತ್ರನ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂಸ್ಥೆಯ ಖಂಜಾಂಚಿ ಲಕ್ಷೀನಾರಾಯಣ ಶೆಣೈ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ಗುರುವಾರ ನಡೆದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹರಡುವಿಕೆ ಹಾಗೂ ನಿಯಂತ್ರಣ ಕ್ರಮಗಳು ಕುರಿತು ನಡೆದ ಸಭೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ರಾಜ್ಯದ ಆರೋಗ್ಯ ಸಚಿವರಾದ ಯು. ಟಿ ಖಾದರ್ ಅವರಿಗೆ ತಾಲೂಕು ಆಸ್ಪತ್ರೆಯ ಅವಶ್ಯಕತೆ ಮನವರಿಕೆ ಮಾಡಿ ನೂರು ಹಾಸಿಗೆಗಳ ತಾಲೂಕು ಆಸ್ಪತ್ರೆ ಮಂಜೂರು ಮಾಡಲು ಮನವಿ ಮಾಡಿದರು. ತಾಲೂಕು ಆಸ್ಪತ್ರೆ ಉದ್ದೇಶಕ್ಕಾಗಿ ಈಗಾಗಲೇ ಜಾಗ ಕಾದಿರಿಸಿ ಈ ಹಿಂದಿನ ಆರೋಗ್ಯ ಸಚಿವರು ಇಲಾಖಾ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಆಗದ ಕ್ರಮಗಳು ಮತ್ತು ಬೈಂದೂರು ತಾಲೂಕಿನಲ್ಲಿ ಆಸ್ಪತ್ರೆಯ ಅಗತ್ಯತೆಯನ್ನು ಅವರು ಸಚಿವರಿಗೆ ಮನವರಿಕೆ ಮಾಡಿದ್ದರು. ಎಂಡೊಸಲ್ಫಾನ್ ಪುನರ್ವಸತಿ ಕೇಂದ್ರ ಮಂಜೂರು ಮಾಡಲು ಕೋರಿಕೆ:ಉಡುಪಿ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಮಂದಿ ಎಂಡೊಸಲ್ಫಾನ್ ಪೀಡಿತರಿದ್ದು ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಧಿತರು ಇರುವ ಕಾರಣ ಬೈಂದೂರು ತಾಲೂಕು ಸೇನಾಪುರ ಗ್ರಾಮದಲ್ಲಿ ಪುನರ್ವಸತಿ ಕೇಂದ್ರ ನಿರ್ಮಾಣ ಮಾಡಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ರೈತರಿಂದ ವೈಯಕ್ತಿಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರದ ಪ್ರತಿ, ನಿಗಧಿತ ಭಾಷಾ ಕಾಗದದಲ್ಲಿ ಹಬ್ ಪರಬಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಯೋಜನೆಯಡಿ ಅರ್ಜಿದಾರರು ಕಂಬೈನ್ಡ್ ಹಾರ್ವೆಸ್ಟರ್ ಹಾಗೂ ಬೇಲರ್‌ಗಳನ್ನು ಕಡ್ಡಾಯವಾಗಿ ಖರೀದಿಸಬೇಕಾಗಿದ್ದು, ಇವುಗಳೊಂದಿಗೆ ಹಾರ್ವೆಸ್ಟರ್ ಹಬ್‌ಗೆ ಅನುಮತಿಸಲಾದ ಇತರೆ ಉಪಕರಣಗಳನ್ನು ಸ್ಥಳೀಯ ಅವಶ್ಯಕತೆಗಳಿಗನುಗುಣವಾಗಿ ಖರೀದಿಸಬಹುದಾಗಿದೆ. ವೈಯಕ್ತಿಕ ಫಲಾನುಭವಿಗಳಿಗೆ ಶೇ. 50ರ ಸಹಾಯಧನದಲ್ಲಿ ಗರಿಷ್ಟ ರೂ. 40 ಲಕ್ಷ ಸಹಾಯಧನವನ್ನು ಪ್ರತಿ ಹಾರ್ವೆಸ್ಟರ್ ಹಬ್ ರಚನೆಗೆ ಉಪಕರಣವಾರು ನಿಗದಿಪಡಿಸಿದ ಗರಿಷ್ಟ ಸಹಾಯಧನದ ಮಿತಿಗೆ ಒಳಪಟ್ಟು Credit Linked Back Ended Subsidy…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖಾ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಸ್ಪರ್ಧಿಗಳಿಂದ ಪಡೆಯಲಾಗುತ್ತಿದ್ದು, ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್‌ನಡಿ RSK Login ಅಥವಾ Citizen Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ ಯನ್ನು ಬಳಸಿಕೊಂಡು ಆನ್‌ಲೈನ್ ಮೂಲಕ ಆಗಸ್ಟ್ 31 ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕಳೆದ 5 ವರ್ಷದ ಅವದಿsಯಲ್ಲಿ ಕೃಷಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ರಾಜಧಾನಿಯಲ್ಲಿ ನ್ಯಾಯಕ್ಕಾಗಿ ನ್ಯಾಯಯುತ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವ ಜನತೆಯನ್ನು ಅತ್ಯಂತ ಅಮಾನುಷವಾಗಿ ನಡೆಸಿಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಎನ್.ಡಿ.ಎ. ಸರ್ಕಾರದ ನಡೆ ಯುವಜನ ವಿರೋಧಿ ಹಾಗೂ ಸರ್ವಾಧಿಕಾರಿ ನಡೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಬಿಜೆಪಿ ನಾಯಕರು ಬಾಯಿ ತೆಗೆದರೆ ತಾವು ಯುವ ಜನತೆಯ, ವಿದ್ಯಾರ್ಥಿಗಳ ಪರ ಎನ್ನುವುದು, ಇನ್ನೊಂದು ಕಡೆ ದೇಶದ ಪ್ರಧಾನಿ ಭೇಟಿ ಪಡಾವೋ, ಭೇಟಿ ಭಚಾವೋ ಎನ್ನುವುದು ಆದರೆ ಇಂದು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ, ವಿದ್ಯಾರ್ಥಿಗಳ ಆತ್ಮಹತ್ಯೆಗಳ ವಿರುದ್ಧ ಯುವ ಜನತೆ ಹಾಗೂ ವಿದ್ಯಾರ್ಥಿಗಳು ನ್ಯಾಯಕೋರಿ ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದರೆ, ಕನಿಷ್ಠ ಅವರ ಬೇಡಿಕೆಯಾದ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆ ಕೇಳಿ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸಬೇಕಾದ ಪ್ರಧಾನಿ ನರೇಂದ್ರ ಮೋದಿಯವರು ವಿದೇಶಿ ಪ್ರವಾಸದಲ್ಲಿ ತಲ್ಲಿನರಾಗಿರುವುದು ದೇಶದ ಸಾರ್ವಕಾಲಿಕ ದುರಂತ. ದೇಶದ ಯುವ ಜನತೆ ಬಿಜೆಪಿಯವರು ವಿದ್ಯಾರ್ಥಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC) ನಲ್ಲಿ 2026-27ನೇ ಸಾಲಿನ ನೂತನ ವಿದ್ಯಾರ್ಥಿಗಳಿಗಾಗಿ ‘ದೀಕ್ಷಾರಂಭ 2026-27’ ವಿದ್ಯಾರ್ಥಿ ಪರಿಚಯ ಕಾರ್ಯಕ್ರಮವನ್ನು ಉತ್ಸಾಹದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದೊಂದಿಗೆ ಶೈಕ್ಷಣಿಕ ವರ್ಷಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಂಸ್ಥೆಯ ಶೈಕ್ಷಣಿಕ ಸಂಸ್ಕೃತಿ, ಮೌಲ್ಯಗಳು ಮತ್ತು ದೂರದೃಷ್ಟಿಯ ಬಗ್ಗೆ ಅರಿವು ಮೂಡಿಸಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಐಎಂಜೆಐಎಸ್‌ಸಿ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅವರು, ಉನ್ನತ ಶಿಕ್ಷಣದ ಪ್ರಯಾಣದ ಮೊದಲ ಹೆಜ್ಜೆ ಎಂದೇ ದೀಕ್ಷಾರಂಭ ಎಂದು ಬಣ್ಣಿಸಿದರು. ರಾಷ್ಟ್ರೀಯ ಚೆಸ್ ದಿನದಿಂದ ಸ್ಫೂರ್ತಿ ಪಡೆದು ಮಾತನಾಡಿದ ಅವರು, “ಜೀವನವು ಚೆಸ್ ಆಟದಂತಿದೆ. ಪ್ರತಿ ನಡೆಯಲ್ಲೂ ಯೋಜನೆ, ತಾಳ್ಮೆ, ತಂತ್ರ ಮತ್ತು ದೂರದೃಷ್ಟಿ ಬೇಕು. ವಿದ್ಯಾರ್ಥಿಗಳು ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ, ಶಿಸ್ತು ಮತ್ತು ಕಲಿಕೆಯ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲದ ಡಾ. ಟಿ.ಎಂ.ಎ. ಪೈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪತ್ರಿಕೋದ್ಯಮದಲ್ಲಿ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ-ಯುವತಿಯರು ಎಲೆಕ್ಟ್ರಾನಿಕ್ಸ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ 5 ಲಕ್ಷ ರೂ.ಗಳ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ, ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಜುಲೈ 31ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎಸ್.ಸಿ ಮತ್ತು ಬಿ.ಸಿ.ಎ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ಸೋಮವಾರ ನಡೆಯಿತು. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿ, ಕುಂದಾಪುರ ನೆಲೆ ಮತ್ತು ಸಂಸ್ಕೃತಿ ಭಾರತ ದೇಶದಲ್ಲಿಯೇ ವಿಶಿಷ್ಟ ಎನಿಸಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ದೇಶಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳು ಹೋಟೆಲ್, ಸಿನೆಮಾ, ಬ್ಯಾಂಕಿಂಗ್, ತಂತ್ರಜ್ಞಾನ, ವೈದ್ಯಕೀಯ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಸಾಧನೆ ಇಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ. ಅವರಂತೆ ಕನಸುಗಳನ್ನು ಕಂಡು ಅದರೆಡೆಗೆ ಸತತ ಪ್ರಯತ್ನಪಟ್ಟು ಒಳ್ಳೆಯ ಯಶಸ್ಸು ಪಡೆಯಬೇಕು . ಸಮಾಜದ ಒಳ್ಳೆಯ ನಾಗರಿಕರಾಗಿ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ರುಡ್‌ಸೆಟ್ ಆಸರೆ ಸಂಘಟನೆ, ಮೊಗವೀರ ಯುವ ಸಂಘಟನೆ, ಉಡುಪಿ ಜಿಲ್ಲೆ ಉಪ್ಪೂರು ಘಟಕ ಮತ್ತು ವಿವಿಧ ಸಂಘ-ಸಂಸ್ಥೆಗಳ ಅಡಿಯಲ್ಲಿ ಕೆ.ಎಂ.ಸಿ ರಕ್ತನಿಧಿ, ಮಣಿಪಾಲ ಅವರ ಸಾರಥ್ಯದಲ್ಲಿ ಸೋಮವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸಂಸ್ಥೆಯ ಆವರಣದಲ್ಲಿ ನಡೆಸಲಾಯಿತು.  ಮಣಿಪಾಲ ಕೆನರಾ ಬ್ಯಾಂಕ್ ವೃತ್ತ ಮಹಾಪ್ರಭಂದಕರಾದ ಗಂಗಾಧರ ಎಚ್.ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನದ ಮಹತ್ವವನ್ನು ಮತ್ತು ರಕ್ತದಾನದಿಂದ ನಾವು ಸಮಾಜಕ್ಕೆ ಒಂದು ಕೊಡುಗೆ ನೀಡಿದ ಹಾಗೆ ಎಂದು ತಿಳಿಸಿದರು. ಹಾಗೂ ತಾವುಗಳು ಕೂಡ ಸುಮಾರು 53 ಬಾರಿ ರಕ್ತದಾನ ಮಾಡಿದ್ದಾರೆ ಎಂದು ಹೆಮ್ಮೆಯಿಂದ ತಿಳಿಸಿದರು. ಮತ್ತು ಪ್ರತಿಯೊಬ್ಬರು ಕೂಡ ರಕ್ತದಾನ ಮಾಡಿ ಎಂದು ಶುಭ ಹಾರೈಸಿದರು. ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ್ದ ಉಡುಪಿ ಮೊಗವೀರ ಯುವ ಸಂಘಟನೆ, ಕೊರವಡಿ ಜಿಲ್ಲಾಧ್ಯಕ್ಷ ರವೀಶ್ ಎಸ್. ಮಾತನಾಡಿ, ರುಡ್‌ಸೆಟ್ ಸಂಸ್ಥೆಯ ಆವರಣದಲ್ಲಿ ನಮ್ಮೆಲ್ಲ ಸಂಘಟನೆಗಳು ಕೈ ಜೋಡಿಸಿ ಈ ಒಂದು ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಸಂಸ್ಥೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರ ಶಿಕ್ಷಕರ ಮತ್ತು ಆಡಳಿತ ಮಂಡಳಿಯ ಸಮಾಲೋಚನ ಸಭೆಯು ಇತ್ತೀಚಿಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ನಿರ್ವಹಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಅಧ್ಯಕ್ಷರಾದ ಎಲ್.ಟಿ ತಿಮ್ಮಪ್ಪನವರು ಮಾತನಾಡಿ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನವು ಪೋಷಕರ ಬೇಡಿಕೆಯಂತೆ ನೂತನವಾಗಿ ಸದ್ಯೋಜಾತ ವಸತಿ ನಿಲಯವನ್ನು ನಿರ್ಮಿಸಿದ್ದು, ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿಕೊಡುವ ಪ್ರಯತ್ನದಲ್ಲಿದ್ದೇವೆ. ಪೋಷಕರ ಮತ್ತು ವಿದ್ಯಾರ್ಥಿಗಳ ಸಹಕಾರಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇವೆ. ಶಾಲೆಯ ಊಟೋಪಚಾರವು ಇಲ್ಲಿನ ವಾತಾವರಣಕ್ಕೆ ಹೊಂದಿಕೆಯಾಗುವಂತಿದ್ದು, ಅತಿಖಾರ, ಉಪ್ಪು, ಸಿಹಿಗಳಿಂದ ಮುಕ್ತವಾಗಿದ್ದು, ಆರೋಗ್ಯದಾಯಕವಾಗಿದೆ. ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಯಾವ ಶಿಸ್ತನ್ನು ರೂಢಿಸಿಕೊಂಡಿರುವರೋ ಅದನ್ನು ಮನೆಯಲ್ಲೂ ಮುಂದುವರಿಸಲು ಪಾಲಕರು ಪ್ರೇರೇಪಿಸಬೇಕು. ಮಕ್ಕಳ ಪ್ರೀತಿಯನ್ನು ಉಳಿಸಿ, ಬೆಳೆಸಿಕೊಳ್ಳಿ  ಎಂದು ಹಿತವಚನಗಳನ್ನಾಡುತ್ತಾ, ಶಾಲೆಯ ವಾರ್ಷಿಕಪತ್ರಿಕೆ ಜ್ಯೋತಿಷ್ಮತಿಯನ್ನು ಬಿಡುಗಡೆಗೊಳಿಸಿದರು. ಸಭೆಯಲ್ಲಿ ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶರಣ ಕುಮಾರ ಪೋಷಕರ ಅಹವಾಲುಗಳಿಗೆ ಸ್ಪಂದಿಸಿ, ಅವರಿಗೆ ಉತ್ತರಗಳನ್ನು…

Read More