Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC), ಮೂಡ್ಲಕಟ್ಟೆ ಇಲ್ಲಿ ‘ದೀಕ್ಷಾರಂಭ 2026-27’ ವಿದ್ಯಾರ್ಥಿ ಪರಿಚಯ ಕಾರ್ಯಕ್ರಮದ ಅಂಗವಾಗಿ ಮೊದಲ ವರ್ಷದ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ “ಮಕ್ಕಳ ಶೈಕ್ಷಣಿಕ ಪ್ರಯಾಣದಲ್ಲಿ ಪೋಷಕರ ಪಾತ್ರ” ಎಂಬ ವಿಶೇಷ ಅಧಿವೇಶನ ಕಾರ್ಯಕ್ರಮ ನಡೆಯಿತು.ಐಎಂಜೆ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಸಲಹೆಗಾರ್ತಿ ಸಪ್ನಾ ಗಣೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೈಯಕ್ತಿಕ ಬೆಳವಣಿಗೆಯಲ್ಲಿ ಪೋಷಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವುದೇ ಈ ಅಧಿವೇಶನದ ಮುಖ್ಯ ಉದ್ದೇಶವಾಗಿತ್ತು. ತದನಂತರ ಮಾತನಾಡಿದ ಅವರು, ಮಕ್ಕಳ ಶೈಕ್ಷಣಿಕ ಯಶಸ್ಸು ಮತ್ತು ಮಾನಸಿಕ ಆರೋಗ್ಯವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ನಿರ್ಣಾಯಕವಾಗಿದೆ ಎಂದು ಹೇಳಿದರು. “ಪೋಷಕರು ಮಕ್ಕಳೊಂದಿಗೆ ಮುಕ್ತವಾಗಿ ಸಂವಾದ ನಡೆಸಬೇಕು. ಅವರ ಮೇಲೆ ನಂಬಿಕೆ ಇಡಬೇಕು ಮತ್ತು ಸರಿಯಾದ ಮಾರ್ಗದರ್ಶನ ನೀಡಬೇಕು. ಅದೇ ಸಮಯದಲ್ಲಿ ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯಲು ಅಗತ್ಯ ಸ್ವಾತಂತ್ರ್ಯವನ್ನೂ ನೀಡಬೇಕು” ಎಂದು ಅವರು ಸಲಹೆ ನೀಡಿದರು.ವಿದ್ಯಾರ್ಥಿಗಳಲ್ಲಿ ಕಂಡುಬರುವ ಒತ್ತಡದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಉಪ್ಪುಂದದ ಪ್ರಧಾನ ಕಛೇರಿಗೆ ರಾಜ್ಯ ಹಾಗೂ ಹೊರ ರಾಜ್ಯಗಳ ನಬಾರ್ಡ್‌ನ ಅಧಿಕಾರಿಗಳ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ, ಸದಸ್ಯರಿಗೆ ನೀಡುತ್ತಿರುವ ಸೇವೆ ಹಾಗೂ ಸವಲತ್ತುಗಳ ಬಗ್ಗೆ, ಸದಸ್ಯರ ಠೇವಣಿ ಸದಸ್ಯರಿಗೆ ನೀಡಿದ ಸಾಲಗಳ ಬಗ್ಗೆ, ಸಂಘದ ಅಭಿವೃದ್ಧಿ ಹಾಗೂ ಸಂಘವು ಈಗಾಗಲೇ ಕೈಗೊಂಡಿರುವ ರೈತಸಿರಿ ಅಗ್ರಿಮಾಲ್ ಕಟ್ಟಡದ ಕಾಮಗಾರಿ ಇತ್ಯಾದಿಗಳ ಸವಿಸ್ತಾರವನ್ನ ಸಂಘದ ಉಪಾಧ್ಯಕ್ಷರಾದ ಮಂಜು ದೇವಾಡಿಗ ಅವರು ವಿವರಿಸಿದರು. ಕೇರಳ ನಬಾರ್ಡ್ ಅಧಿಕಾರಿ ಜ್ಲಾನು ಸೌಂದರಿ ಅವರನ್ನು ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಕರ್ನಾಟಕದ ಬೆಂಗಳೂರು, ದಕ್ಷಿಣ ಕನ್ನಡ, ತೆಲಂಗಾಣ, ಆಂದ್ರಪ್ರದೇಶ, ತಮಿಳುನಾಡು, ಕೇರಳ ರಾಜ್ಯದ ನಬಾರ್ಡ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಸೇರಿ ಒಟ್ಟು 40 ಜನ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಬಾರ್ಡ್ ಅಧಿಕಾರಿಗಳಾದ ಶಕ್ತಿ ಪಿ. ಮೊಹೋಪತ್ರ, ಅಧಿಕಾರಿ ಶಿವರಾಜ್ , ಸಂಘದ ವಸೂಲಾತಿ ಅಧಿಕಾರಿ ಚಂದಯ್ಯ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ರೈತ ಸಂಘ ನಡೆಸುತ್ತಿರುವ ಪ್ರತಿಭಟನೆ ಮುನ್ನೂರು ದಿನ ಪೂರೈಸಿದೆ.ಇದುವರಗೆ ನ್ಯಾಯ ದೊರೆಯದ ಹಿನ್ನಲೆಯಲ್ಲಿ ರೈತರು ಅಣಕು ಶವಯಾತ್ರೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೈಂದೂರು ಪಟ್ಟಣ ಪಂಚಾಯತ್ ಎದುರು ಅಣಕು ಶವ ಇಟ್ಟು ಮೆರವಣಿಗೆ ಮೂಲಕ ತಾಲೂಕು ಆಡಳಿತ ಕಛೇರಿ ತರಲಾಯಿತು. ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಡಿ ಮಾತನಾಡಿ ಕಳೆದ ಮುನ್ನೂರು ದಿನಗಳಿಂದ ರೈತರು ಬದುಕುಗಾಗಿ ಊರಿನ ಕಾಳಜಿಗಾಗಿ ಕೆಲಸಕಾರ್ಯ ಬಿಟ್ಟು ಧರಣಿ ನಡೆಸುತ್ತಿದ್ದಾರೆ. ಸರಕಾರದ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸಚಿವರು ಮನಸ್ಸು ಮಾಡಿದರೆ ಶೀಘ್ರ ನ್ಯಾಯ ನೀಡಬಹುದು ಆದರೆ ಬೈಂದೂರಿನಲ್ಲಿ ಜನಪ್ರತಿನಿಧಿಗಳು ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದ್ದಾರೆ. ರೈತರ ಹೋರಾಟ ನ್ಯಾಯಯುತವಾಗಿದೆ ಅ.3ರಿಂದ ಸಾವಿರಾರು ರೈತರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈ ಗೊಳ್ಳುತ್ತೇವೆ ಎಂದರು ಈ ಸಂಧರ್ಭದಲ್ಲಿ ಯುವ ರೈತರ ಘಟಕದ ಅಧ್ಯಕ್ಷರಾಗಿ ಆಕಾಶ ಪೂಜಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಾಜ್ಯ ಕಾಂಗ್ರೆಸ್ ಸರಕಾರ ಹಿಂದುಳಿದ ವರ್ಗಗಳ ಬಗ್ಗೆ ಬೊಗಳಿಕೆ  ಭರವಸೆ ನೀಡಿದ್ದು ಬಿಟ್ಟರೆ ನಾರಾಯಣ ಗುರು ನಿಗಮಕ್ಕೆ ಅನುದಾನ ನೀಡುತ್ತಿಲ್ಲ. ಹಾಗಾಗಿ ಹಿಂದುಳಿದ ವರ್ಗಗಳ ಸಮುದಾಯದ ಅದರಲ್ಲೂ ಕರಾವಳಿ ಮತ್ತು ಮಲೆನಾಡಿನಲ್ಲಿ ಅಪಾರ ಸಂಖ್ಯೆಯಲ್ಲಿರುವ ಬಿಲ್ಲವರು, ಈಡಿಗರು, ನಾಮಧಾರಿಗಳು, ಕಾಂಗ್ರೆಸ್ ಪಕ್ಷದ ಭರವಸೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ ಹೇಳಿದರು. ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆ ಪತ್ರದಲ್ಲಿ ನಾರಾಯಣ ಗುರು ನಿಗಮಕ್ಕೆ ವಾರ್ಷಿಕ 500 ಕೋಟಿ ಕೊಡುವುದಾಗಿ ಘೋಷಿಸಿತ್ತು. ಅಲ್ಲದೇ, ಪ್ರತಿವರ್ಷ ಬಜೆಟ್ ನಲ್ಲಿ 500 ಕೋಟಿಯಂತೆ 5 ವರ್ಷದಲ್ಲಿ 2500 ಸಾವಿರ ಕೋಟಿ ನೀಡುವುದಾಗಿ ಪ್ರಕಟಿಸಿತ್ತು. ಆದರೆ, ಇಲ್ಲಿಯವರೆಗೆ ಭರವಸೆ ನೀಡಿದಂತೆ ಹಣ ನೀಡದೆ ಇರುವುದರಿಂದ ನಾರಾಯಣಗುರು ನಿಗಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೊಸದಾಗಿ ಅಧಿಕಾರ ಸ್ವೀಕರಿಸಿದ ಡಿಕೆಶಿಯವರು ಬಗ್ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದೈತರ ಸಾಹಿತ್ಯ ಕೃತಿ ಪ್ರಶಸ್ತಿ 2025-26’ ಕ್ಕೆ ಕುಂದಾಪುರದ ಡಾ. ರಂಜಿತ್ ಕುಮಾರ್ ಶೆಟ್ಟಿ ಅವರ “ನೆನಪಿನಾಳದಿಂದ”_ ಕೃತಿ ಆಯ್ಕೆಯಾಗಿದೆ. ಕಳೆದ 6 ವರ್ಷಗಳಿಂದ ಮಂಗಳೂರು, ಬೆಂಗಳೂರು, ಧಾರವಾಡ, ಶಿವಮೊಗ್ಗ, ಬೆಳಗಾವಿ ಮತ್ತು ಬಳ್ಳಾರಿಯಲ್ಲಿ ಯಶಸ್ವಿಯಾಗಿ ನಡೆದಿರುವ ಕನ್ನಡ ವೈದ್ಯ ಬರಹಗಾರರ ಸಮ್ಮೇಳನದ 7ನೇ ಆವೃತ್ತಿಯು ಆಗಸ್ಟ್ 22 ಮತ್ತು 23, 2026 ರಂದು ದೊಡ್ಡಬಳ್ಳಾಪುರದ ನವೋದಯ ಶಾಲೆ ಸಭಾಂಗಣದಲ್ಲಿ ನಡೆಯಲಿದೆ. ಸಮ್ಮೇಳನದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಿದ್ಧ ಹೃದ್ರೋಗ ತಜ್ಞರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಳ್ಳಾಡಿ-ಹರ್ಕಾಡಿ ಗ್ರಾಮದ ಕೋಳ್ಳೇರೆ ರಸ್ತೆಯ ಬಳಿ ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದಾಗಿ 407 ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಸ್ಥಳೀಯ ನಿವಾಸಿ ನಾರಾಯಣ ಶೆಟ್ಟಿ ಮೃತಪಟ್ಟ ದುರ್ದೈವಿ. ಮಂಗಳವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ರಸ್ತೆ ಬದಿಯ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಸೈಬ್ರಕಟ್ಟೆ ಮಾರ್ಗವಾಗಿ ಹಾಲಾಡಿ ಕಡೆಗೆ ಸಾಗುತ್ತಿದ್ದ 407 ವಾಹನದ ಚಾಲಕ ತೀರಾ ಎಡಬದಿಗೆ ಚಲಾಯಿಸಿ ಅವರಿಗೆ ಢಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ನಾರಾಯಣ ಶೆಟ್ಟಿಯವರ ತಲೆ ಹಾಗೂ ಎದೆಗೆ ತೀವ್ರ ಸ್ವರೂಪದ ಗಾಯವಾಗಿದ್ದು ತಕ್ಷಣವೇ ಅವರನ್ನು ಬ್ರಹ್ಮಾವರದ ಪ್ರಣವ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿಗೆ ಮೃತಪಟ್ಟಿರುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಮೃತರ ಅಳಿಯ ಗಣೇಶ್ ಶೆಟ್ಟಿ ಅವರು ನೀಡಿದ ದೂರಿನನ್ವಯ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಇಂದು ಬಾರಕೂರಿನ ಸಂತೆಗುಡ್ಡೆ ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾರಕೂರು ಇತಿಹಾಸ ಪ್ರಸಿದ್ಧವಾದ ಪವಿತ್ರ ಕ್ಷೇತ್ರ. ವಿಜಯನಗರದ ರಾಜರು ಸೇರಿದಂತೆ ಹಲವಾರು ರಾಜರು ಬಾರಕೂರನ್ನು ಆಳಿದರೂ ಸಹ, ರಾಜರೂ ಬದಲಾದರೂ, ಅಧಿಕಾರ ಬದಲಾದರೂ ಸಹ ಬಾರಕೂರಿನ ಸಂಸ್ಕೃತಿ ಮತ್ತು ಮೌಲ್ಯವನ್ನು ಶಾಶ್ವತವಾಗಿ ನೆಲೆನಿಲ್ಲುವಂತೆ ಮಾಡಿರುವುದು ದೊಡ್ಡ ಕೊಡುಗೆ. ಎಷ್ಟೇ ರಾಜರುಗಳು ಇಲ್ಲಿ ಆಡಳಿತ ನಡೆಸಿದರೂ ಸಹ ಇಂದಿಗೂ ಇಲ್ಲಿನ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬರಲಾಗಿದೆ ಎಂದರು. ಇಲ್ಲಿ ಪವಿತ್ರವಾದ ಹಲವಾರು ದೇವಸ್ಥಾನಗಳು, ಮಸೀದಿ, ಚರ್ಚ್ಗಳು ಇದ್ದು, ಎಲ್ಲಾ ಸಮುದಾಯದವರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ಭಾರತ ದೇಶದ ಸಂಸ್ಕೃತಿಯ ಪ್ರತಿಬಿಂಬ ಇಲ್ಲಿ ನೆಲೆಸಿರುವುದನ್ನು ನಾವು ಕಾಲಿಟ್ಟಾಗಲೇ ಕಾಣಬಹುದಾಗಿದೆ. ಬಾರಕೂರು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರದೇಶ. ಭಾರತದ ನಾಗರಿಕತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಿಂದಿನ ಕಾಲದ ಕಲೆ ಮತ್ತು ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಲುಪಿಸುವುದು ತರಬೇತಿ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣ ಎಂದರೆ ಓದು ಮಾತ್ರವಲ್ಲ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಮತ್ತು ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿಯೂ ಸಹ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಸೋಮವಾರ ಕುಂದಾಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ನೃತ್ಯ ರೂಪಕ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕಂಸಾಳೆ ಜಾನಪದ ನೃತ್ಯ ಕಲಾತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ನಗರ ಯೋಜನಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಿಕಾ ಮಾಧ್ಯಮಗಳು ಜನಮುಖಿಯಾಗಿ ಪರಿಣಾಮಕಾರಿಯಾದ ಪಾತ್ರ ವಹಿಸುತ್ತವೆ. ಪತ್ರಿಕೆಗಳು ನೀಡುವ ಎಚ್ಚರಿಕೆ, ಜಾಗೃತಿ ಹೆಚ್ಚು ಪರಿಣಾಮ ಬೀರುತ್ತದೆ. ಕುಂದಾಪುರದ ಪತ್ರಕರ್ತರು ಧನಾತ್ಮಕವಾದ ಸುದ್ಧಿ ನೀಡುವಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಿದ್ದು, ಇದು ಎಲ್ಲರಿಗೂ ಮಾದರಿ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಹೇಳಿದರು. ಅವರು ಮಂಗಳವಾರ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಹಾಲ್‌ನಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆಯನ್ನು ಗ್ರಾಮೋಪೋನ್ ನ ಧ್ವನಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿ, ಮಾತನಾಡಿದರು. ಇತ್ತೀಚೆಗೆ ಹಂದಿಗಳ ಸರಣಿ ಸಾವಿನ ಬಗ್ಗೆ ಪತ್ರಿಕೆಗಳು ತೋರಿಸಿದ ಕಾಳಜಿಯನ್ನು ಶ್ಲಾಘಿಸಿದ ಅವರು, ಪತ್ರಿಕಾ ವಿತರಕರ ಸಂಖ್ಯೆ ಕಡಿಮೆಯಾಗುತ್ತಿದೆ.  ಹಾಗಾಗಿ ಪತ್ರಿಕೆಗಳ ಓದುಗರ ಸಂಖ್ಯೆಯೂ ಕಡಿಮೆಯಾಗಬಹುದು. ಪತ್ರಿಕಾ ವಿತರಕರಿಗೆ ಉತ್ತೇಜನ, ಜೀವನ ಭದ್ರತೆ ನೀಡುವ ಕಾರ್ಯಗಳು ಆಗಬೇಕಾಗಿದೆ ಎಂದರು. ಹಿರಿಯ ಪತ್ರಕರ್ತ, ವಿಜಯ ಕರ್ನಾಟಕ ಮಂಗಳೂರು ವಿಭಾಗದ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ವಿಶೇಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ನುಡಿ ನಮನ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಳೆದ 16 ವರ್ಷಗಳಿಂದ ಕಾಲೇಜಿನಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ ಡಾ. ದೀಪಾ ಹಾಗೂ ದ್ವಿತೀಯ ಬಿಸಿಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುದೀಪ್ ಶೆಟ್ಟಿ ಅವರು ಅಕಾಲಿಕವಾಗಿ ಮರಣ ಹೊಂದಿದ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಸಂಸ್ಥೆಗೆ ಡಾ. ದೀಪಾ ಅವರು ಸಲ್ಲಿಸಿದ ಸೇವೆ ಸ್ಮರಣೀಯ. ನಂದಾದೀಪದAತೆ ಎಲ್ಲರೊಂದಿಗೆ ಬೆರೆತು ಬದುಕಿದ ಅವರ ಬದುಕಿನ ನಡೆ ಉಲ್ಲೇಖನೀಯ. ಮೃತ ವಿದ್ಯಾರ್ಥಿ ಸುದೀಪ್ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಸಾಂಸ್ಕೃತಿಕ ಮತ್ತು ಇನ್ನಿತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡವರು. ಇಬ್ಬರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದರು. ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ನುಡಿ ನಮನ…

Read More