ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆಯ ನದಿ-ಕಡಲು ನಡುವಿನ, ಹೆದ್ದಾರಿ ಅಂಚಿನ ಮಾರಸ್ವಾಮಿಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಪನ್ನಗೊಂಡಿತು. ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಅಭಿಷೇಕ, ಪೂಜೆ, ಅರ್ಪಣೆ ಸಲ್ಲಿಸಿದರು. ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಒಂದೆಡೆ ಸಮುದ್ರ, ಇನ್ನೊಂದೆಡೆ ನದಿ, ನಡುವೆ ಹಾದು ಹೋಗುವ ಹೆದ್ದಾರಿ ಕಾರಣದಿಂದ ತೀರ ಕಿರಿದಾದ ಭೂಪ್ರದೇಶದ ಇಲ್ಲಿ ಅಮಾವಾಸ್ಯೆಯ ಪರ್ವದಲ್ಲಿ ಪಾಲ್ಗೊಳ್ಳಲು ಬರುವ ಸಹಸ್ರಾರು ಭಕ್ತರ ಸುರಕ್ಷತೆಗಾಗಿ ಮತ್ತು ಹೆದ್ದಾರಿಯಲ್ಲಿ ಎಡೆಬಿಡದೆ ಸಂಚರಿಸುವ ವಾಹನಗಳ ಜತೆಗೆ ಜಾತ್ರೆಗೆ ಬರುವ ಅಸಂಖ್ಯ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಜನದಟ್ಟಣೆಯ ನಿಯಂತ್ರಣ, ಸಮುದ್ರ ಮತ್ತು ನದಿಸ್ನಾನ ಮಾಡುವವರ ಬಗೆಗೆ ವಹಿಸಬೇಕಾದ ಎಚ್ಚರದ ಕುರಿತು ಗಂಗೊಳ್ಳಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು, ಕುಂದಾಪುರ ಸಂಚಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಪನ್ನಗೊಂಡಿತು. ಪ್ರತಿ ವರ್ಷ ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿ ಜಾತ್ರೆ ನಡೆಯುತ್ತದೆ. ನವ ದಂಪತಿಗಳು ಸಮುದ್ರ ಸ್ನಾನ ಮಾಡಿ ದೇವರ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎನ್ನುವ ಪ್ರತೀತಿ ಇದೆ. ಹೀಗಾಗಿ ಬೇರೆ ಬೇರೆ ಊರುಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಾರೆ. ಬೆಳಿಗ್ಗೆ ದೇವಳದಲ್ಲಿ ರುದ್ರಾಭಿಷೇಕ ಮಹಾಮಂಗಳಾರತಿ ಮುಂತಾದ ಪೂಜಾ ವಿಧಿ ವಿಧಾನಗಳು ನಡೆಯಿತು. ಸೋಮೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿನ ನಾಗತೀರ್ಥಕ್ಕೆ ವಿಶೇಷವಾದ ಪ್ರಾಮುಖ್ಯತೆಯಿದೆ. ಅಮಾವಾಸ್ಯೆಯಂದು ಇಲ್ಲಿನ ನಾಗತೀರ್ಥದಲ್ಲಿ ಕಾಶಿಯಿಂದ ತೀರ್ಥ ಬರುತ್ತದೆ ಎನ್ನುವ ನಂಬಿಕೆಯಿದೆ. ಕರ್ಕಾಟಕ ಅಮಾವಾಸ್ಯೆಯ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಇದನ್ನೂ ಓದಿ ► ಮರವಂತೆ: ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ, ಸಹಸ್ರಾರು ಮಂದಿ ಭಾಗಿ – https://kundapraa.com/?p=100768 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜನ ಜಾಗೃತಿಗಾಗಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಸಾರ್ವಜನಿಕರಿಗಾಗಿ ಮಾಹಿತಿ ಕರಪತ್ರ ಬಿಡುಗಡೆ ಸಮಾರಂಭದಲ್ಲಿ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಅವರು ಜಂತು ಹುಳುಗಳಿಂದ 18 ವರ್ಷಗಳ ಒಳಗಿನ ಮಕ್ಕಳಿಗೆ ಆಗುವ ಆರೋಗ್ಯ ತೊಂದರೆಗಳ ಬಗ್ಗೆ ಮಾಹಿತಿ ನೀಡಿದರು. ರೋಟರಿ ಅಧ್ಯಕ್ಷ ಕುಸುಮಾ ಮನೋಜ್, ಜ್ಯೋತಿ ಉದಯ್ ಕುಮಾರ್, ಕಾರ್ಯದರ್ಶಿ ರಾಜಾರಾಮ ಐತಾಳ, ನೈನಾ ಜೆ. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ನಿಟ್ಟೂರು ರಾ.ಹೆ 66ರ ಆಭರಣ ಮೋಟಾರ್ಸ್ ಪ್ರೈವೇಟ್ ಲಿ.ನಲ್ಲಿ ಆಗಸ್ಟ್ 14ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತೀರ್ಣರಾದ ಆಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಾಂಚಜನ್ಯ ಸಂಘ ಪಾರಂಪಳ್ಳಿ – ಹಂದಟ್ಟು ಇವರ ನೇತೃತ್ವದಲ್ಲಿ ಚಿತ್ರಪಾಡಿ ಶಾಲಾ ವಠಾರ ಹಾಗೂ ಅಂಬಾಗಿಲ ಕೆರೆ ರಸ್ತೆ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಮರಕಾಲ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ, ಚಿತ್ರಪಾಡಿ ಶಾಲಾ ಮುಖ್ಯೋಪಾಧ್ಯಾಯಿನಿ ಶಾಲಿನಿ ಎಸ್ಡಿಎಂಸಿ ಅಧ್ಯಕ್ಷ ಶಂಕರ ದೇವಾಡಿಗ, ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಸಹಶಿಕ್ಷಕರಾದ ಪ್ರಶಾಂತ, ಜ್ಯೋತಿ, ಶಾಲಾ ಶಿಕ್ಷಕ ಹಾಗೂ ಶಿಕ್ಷಕಿ ವೃಂದದವರು ಉಪಸ್ಥಿತರಿದ್ದರು. ಡಾ. ಗಣೇಶ ಬೆಳಕು ಮನೆ ಹಾಗೂ ಅರುಣ ಐತಾಳ್ ಸಹಕಾರ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಲ ನ್ಯಾಯ ಕಾಯ್ದೆಯನ್ವಯ ನೋಂದಣಿಯಾಗಿರುವ ಸಂಸ್ಥೆ/ವಸತಿ ನಿಲಯಗಳನ್ನು ಹೊರತುಪಡಿಸಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ, ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ, ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯ, ವಸತಿ ಶಾಲೆ, ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಂದ ಪಡೆದು ಸೆಪ್ಟೆಂಬರ್ 4 ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂ: 0820-2574978 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿದ್ದ ಅಗರಬತ್ತಿ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ, ಮಾತನಾಡಿದರು. “ವಿಕಸಿತ ಭಾರತದ ಸಂಕಲ್ಪವನ್ನು ನಾವು ಯಶಸ್ವಿಗೊಳಿಸಬೇಕಾದರೆ ಮಹಿಳೆಯರು ಇಂತಹ ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದು, ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಂಡು ಸ್ವಾವಲಂಬಿಗಳಾಗಿ ಉದ್ಯಮಗಳನ್ನು ಪ್ರಾರಂಭಿಸಬೇಕು. ಇದರಿಂದ ಕುಟುಂಬ ಹಾಗೂ ಸಮಾಜದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ”ಎಂದು ಅವರು ಹೇಳಿದರು. ಕೇವಲ ತರಬೇತಿ ಪಡೆಯುವುದರಿಂದ ಮಾತ್ರ ಉದ್ದೇಶ ಈಡೇರುವುದಿಲ್ಲ. ತರಬೇತಿಯ ಮೂಲಕ ಪಡೆದ ಜ್ಞಾನ ಮತ್ತು ಕೌಶಲ್ಯವನ್ನು ಉದ್ಯಮದಲ್ಲಿ ಅಳವಡಿಸಿಕೊಂಡು, ಸ್ವಂತ ಉದ್ಯಮವನ್ನು ಪ್ರಾರಂಭಿಸಿ ಅದನ್ನು ನಿರಂತರವಾಗಿ ಅಭಿವೃದ್ಧಿಪಡಿಸುವುದು ಮುಖ್ಯವಾಗಿದೆ. ಆಗ ಮಾತ್ರ ಇಂತಹ ತರಬೇತಿಗಳು ಯಶಸ್ವಿಯಾಗುತ್ತವೆ ಎಂದು ಅವರು ತಿಳಿಸಿದರು. “ಒಬ್ಬ ಪುರುಷ ಶಿಕ್ಷಣ ಪಡೆದರೆ ಅದು ವೈಯಕ್ತಿಕ…
ಜ್ಯೋತಿ ವಿಘ್ನೇಶ್ | ಕುಂದಾಪ್ರ ಡಾಟ್ ಕಾಂ.ಕುಂದಾಪುರ ಅಂದಾಗ್ಲಿಕೆ ತಲೆಗ್ ಫಸ್ಟ್ ಬಪ್ಪುದ್ ಕುಂದಾಪ್ರ ಬಾಷಿ ಅದೇ ಹೋಯ್ಕ್ ಬರ್ಕ್!ಬಾಷಿ ಕೇಳುಕ್ ಚಂದ… ಪಾತೆರ್ರೆ ಚೂರು ಬಂಗ! ಆದ್ರೆ ಕೇಳ್ತಾ ಇದ್ದ್ರೆ ಮನಸ್ಸಿಗೇ ಒಂದ್ ತರದ ಗಮ್ಮತ್ ಕಾಣಿ! ಆರು ಕಲಿಲಕ್ ಮಾರೆ ಅಡ್ಡಿಲ್ಲ! ಈಗ ಕಾಣಿ ನಾನ್ ಹುಟ್ಟಿ ಬೆಳದ್ದ್ ನನ್ನ ತವರು ಮನೆ ಕಾರ್ಕಳ ತಾಲೂಕಿನ ಪಳ್ಳಿ ಸಮೀಪದ ನಿಂಜೂರು ಎಂಬ ಒಂದು ಸಣ್ಣ ಗ್ರಾಮ. ನನ್ನ ಅಬ್ಬಿ ಭಾಷಿ ತುಳು, ಅದೇ ಮೊನ್ನೆ ಮೂರು ತಿಂಗಳ ಹಿಂದೆ ಮದಿ ಆಯ್ ನಾನ್ ಬಂದ ನನ್ನ ಗಂಡನ ಮನೆ ಅದೇ ಚಂದದೂರು ಕುಂದಾಪ್ರಕ್ಕೆ. ಅದೇ ನಮ್ ಫೇಮಸ್ ಮರವಂತೆ ಇತ್ತಲೆ… ಡ್ರೋನ್ ವೀಡಿಯೋಸ್, ರೀಲ್ಸ್ ಎಲ್ಲ ಕಾಣ್ತಿದ್ದೆ. “ವಾವ್… ಎತ್ ಶೋಕ್!” ಅಂತೇ ಹೇಳ್ತಿದ್ದಲ್ ನಾನ್. ಈಗ ಕಾಣಿ, ನಮ್ ಮನೆಗ್ ಜಾಸ್ತಿ ದೂರ ಆತಿಲ್ಲ ಮರವಂತೆ. ಮತ್ತೆ ಸುಕ್ಕಿನುಂಡೆ… ಮೊದ್ಲೆ ಅದರ ಹೆಸ್ರೇ ಗೊತ್ತಿಲ್ಲ ಇದಿತ್! “ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವೀಲ್ಚೇರ್ ವಿತರಣೆ ಕಾರ್ಯಕ್ರಮ ಕೋಟೇಶ್ವರದ ಮಾರ್ಕೊಡಿನಲ್ಲಿ ನಡೆಯಿತು. ರೋಟರಿ ವಲಯ 2ರ ಸಹಾಯಕ ಗವರ್ನರ್ ಸುಧಾಕರ್ ಶೆಟ್ಟಿ ಅವರು ಮಾರ್ಕೊಡಿನ ನಿವಾಸಿ ಭಾಸ್ಕರ ವೀಲ್ಚೇರ್ ಹಸ್ತಾಂತರಿಸಿ ಮಾತನಾಡಿ, ಅಗತ್ಯವಿರುವವರಿಗೆ ನೆರವು ನೀಡುವ ಮೂಲಕ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸಮಾಜಮುಖಿ ಸೇವೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ದೈಹಿಕ ಸವಾಲುಗಳನ್ನು ಎದುರಿಸುತ್ತಿರುವವರಿಗೆ ವೀಲ್ಚೇರ್ಗಳಂತಹ ಅಗತ್ಯ ಸಾಧನಗಳನ್ನು ಒದಗಿಸುವುದು ಅವರ ಜೀವನದಲ್ಲಿ ಸ್ವಾವಲಂಬನೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಸಮಾಜದ ಅಗತ್ಯವಿರುವ ವರ್ಗಗಳಿಗೆ ನಿರಂತರವಾಗಿ ನೆರವು ನೀಡುವ ಮೂಲಕ ಮಾನವೀಯ ಸೇವೆಯನ್ನು ಮುಂದುವರಿಸುವುದು ರೋಟರಿ ಕ್ಲಬ್ ಕೋಟ ಬ್ರಿಗೇಡ್ನ ಪ್ರಮುಖ ಉದ್ದೇಶವಾಗಿದೆ ಎಂದು ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ತಿಳಿಸಿದರು. ಕಾರ್ಯಕ್ರಮದಲ್ಲಿ ವಲಯ ೨ರ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಹಾಗೂ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸದಸ್ಯರಾದ ಡಾ. ಗಣೇಶ್ ಯು., ಸುರೇಶ್ ಆಚಾರ್ಯ, ವಿಷ್ಣುಮೂರ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಪಡುಕರೆಯಲ್ಲಿ 6ರಿಂದ 7ಕಿಲೋ ಮೀಟರ್ ತನಕ ಕೃಷಿ ಭೂಮಿ ಮಧ್ಯ ಉಪ್ಪು ನೀರಿನ ಹೊಳೆ ಹರಿಯುತ್ತಿದ್ದು ಇಲ್ಲಿ ಎಲ್ಲೆಂದರಲ್ಲಿ ಕಾಂಡ್ಲ ಗಿಡದ ಸಮಸ್ಯೆಯಿಂದ ನೀರು ಸರಾಗ ಹರಿಯದೇ ಕೃತಕ ನೆರೆ ಸೃಷ್ಠಿಯಾಗುತ್ತಿದೆ . ಈ ಹಿನ್ನಲ್ಲೆಯಲ್ಲಿ ಈ ಭಾಗದ ನೂರಾರು ರೈತರಿಗೆ ಕೃಷಿಗೆ ಸಂಕಷ್ಟವನ್ನು ತಂದೊಡ್ಡುತ್ತಿದ್ದು ಸರಕಾರ ಕಾಂಡ್ಲ ಗಿಡವನ್ನು ಸರಿಯಾಗಿ ನಿರ್ವಹಣೆ ಮತ್ತು ಹೊಸದಾಗಿ ಕಾಂಡ್ಲಾ ಪ್ಲಾಂಟೇಶನ್ ಮಾಡದೇ ಹೊಳೆ ಹೂಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಸಮುದ್ರಕ್ಕೆ ಹರಿಯುವಂತೆ ಅನುಕೂಲಕರ ವಾತಾವರಣ ನಿರ್ಮಿಸಿ ರೈತರಿಗೆ ನೆರವಾಗುವಂತೆ ಇಲ್ಲಿನ ರೈತಧ್ವನಿ ಸಂಘ ಕೋಟ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ವೇಳೆ ರೈತಧ್ವನಿ ಸಂಘ ಕೋಟ ಅಧ್ಯಕ್ಷ ಜಯರಾಮ ಶೆಟ್ಟಿ, ಪ್ರಮುಖರಾದ ಟಿ. ಮಂಜುನಾಥ ಗಿಳಿಯಾರು, ಭಾಸ್ಕರ ಶೆಟ್ಟಿ ಮಣೂರು, ಜಿ. ತಿಮ್ಮ ಕಾಂಚನ್ ಹರ್ತಟ್ಟು ಇತರರು ಇದ್ದರು.
