ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ:ಭಾಷೆಯೊಂದು ಕೇವಲ ಸಂವಹನದ ಮಾಧ್ಯಮವಲ್ಲ. ಅದು ಸಮುದಾಯವೊಂದರ ಇತಿಹಾಸ, ಅನುಭವ, ಭಾವನೆ, ಸಂಸ್ಕೃತಿ ಹಾಗೂ ಅಸ್ಮಿತೆಯನ್ನು ಪ್ರತಿಬಿಂಬಿಸುತ್ತದೆ. ಯಾವುದೇ ಭಾಷೆ ಮತ್ತೊಂದು ಭಾಷೆಗಿಂತ ಶ್ರೇಷ್ಠವಲ್ಲ. ಎಲ್ಲಾ ಭಾಷೆಗಳಿಗೂ ತನ್ನದೇ ಆದ ಮಹತ್ವ ಹಾಗೂ ವೈಶಿಷ್ಟ್ಯವಿದೆ ಎಂದು ಆಳ್ವಾಸ್ ಪಿಸಿಯೋಥೆರಪಿ ಕಾಲೇಜಿನ ನರವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಲೋಯಂಗನ್ಬಿ ಚಾನು ನುಡಿದರು. ಆಳ್ವಾಸ್ ಕಾಲೇಜಿನ ಮಣಿಪುರಿ ವಿಭಾಗದವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಮಣಿಪುರಿ ಭಾಷಾ ದಿನವನ್ನು ಆಚರಿಸಲಾಯಿತು.ವಿದ್ಯಾರ್ಥಿಗಳು ವಿವಿಧ ಭಾಷೆಗಳನ್ನು ಕಲಿಯುವ ಮೂಲಕ ವಿಭಿನ್ನ ಸಮುದಾಯಗಳ ಸಂಸ್ಕೃತಿ ಮತ್ತು ಜೀವನಾನುಭವಗಳನ್ನು ಅರ್ಥಮಾಡಿಕೊಳ್ಳಬೇಕು. ಬಹುಭಾಷಾ ಜ್ಞಾನವು ಪರಸ್ಪರ ತಿಳುವಳಿಕೆಯನ್ನು ವಿಸ್ತರಿಸುವುದರೊಂದಿಗೆ ವಿವಿಧ ಸಮುದಾಯಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಸಹಕಾರಿಯಾಗುತ್ತದೆ. ವ್ಯಕ್ತಿಯ ಭಾಷೆ, ಸಂಸ್ಕೃತಿ, ಧರ್ಮ ಅಥವಾ ಮೂಲಸ್ಥಳದ ಆಧಾರದ ಮೇಲೆ ಭೇದಭಾವ ಮಾಡದೆ ಎಲ್ಲರನ್ನೂ ಗೌರವಿಸಬೇಕು. ದ್ವೇಷ ಮತ್ತು ಸಂಘರ್ಷಕ್ಕಿಂತ ಸಹಕಾರ ಹಾಗೂ ಸೌಹಾರ್ದತೆಗೆ ಆದ್ಯತೆ ನೀಡಬೇಕು ಎಂದರು. ಕರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಚರ್ಯ ಡಾ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ವಿದ್ಯಾರ್ಥಿಗಳು ರಾಷ್ಟ್ರದ ಉಜ್ವಲ ಭವಿಷ್ಯದ ಶಿಲ್ಪಿಗಳು ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಹೋಟೆಲ್ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆದ “ಕುಂದಗನ್ನಡದ ಮಾಳಿ-ಗುಡ್ಗ್ -ಮಿಂಚ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭವಿಷ್ಯದಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಶಿಷ್ಟವಾದ ಕುಂದಾಪುರ ಕನ್ನಡ ಭಾಷೆಯ ಕುರಿತು ಹಮ್ಮಿಕೊಂಡ ಈ ಕಾರ್ಯಕ್ರಮ ಮುನ್ನುಡಿಯಾಗಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು . ಎಸ್. ಶೆಣೈ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯೋಗಗುರು ಹವ್ಯಾಸಿ ರಂಗಭೂಮಿ ಕಲಾವಿದ ಆಟ್ಕೆರೆ ಆನಂದ ಪೈ ಮಾತನಾಡಿ, ಭಾಷೆಯನ್ನು ಸರ್ವರೂ ಸೇರಿ ಉಳಿಸಿ ಬೆಳೆಸಬೇಕು. ಮುಂದಿನ ಪೀಳಿಗೆಗೆ ಹಂಚಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕ್ಷೇತ್ರದಲ್ಲಿ ಯುವಜನರಿಗೆ, ಅದರಲ್ಲೂ ವಿಜ್ಞಾನ ಪದವೀಧರರಿಗೆ, ಉತ್ತಮ ಉದ್ಯೋಗಾವಕಾಶಗಳಿದ್ದು, ಸ್ಥಳೀಯ ಯುವಕರು ಈ ಕ್ಷೇತ್ರವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಮಂಗಳೂರು ವಲಯದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಹಾಗೂ ಮಂಗಳೂರು ವಲಯದ ಮುಖ್ಯ ಅಗ್ನಿಶಾಮಕ ಅಧಿಕಾರಿ (ಪ್ರಭಾರ) ಶಂಕರ್ ಎಂ. ಹೇಳಿದರು. ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಶನಿವಾರ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಅಗ್ನಿ ಸುರಕ್ಷತಾ ವ್ಯವಸ್ಥೆ ಹಾಗೂ ಅಗ್ನಿಶಾಮಕ ಇಲಾಖೆಯ ಕಾರ್ಯವೈಖರಿ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಗ್ನಿಶಾಮಕ ಇಲಾಖೆಯ ಇತಿಹಾಸ, ಇಲಾಖೆಯ ಶ್ರೇಣೀಕೃತ ವ್ಯವಸ್ಥೆ, ವಿವಿಧ ಹಂತಗಳಲ್ಲಿನ ಅಧಿಕಾರಿಗಳ ಜವಾಬ್ದಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು. ಅಗ್ನಿ ಅವಘಡಗಳನ್ನು ನಿಯಂತ್ರಿಸುವುದಷ್ಟೇ ಅಲ್ಲದೆ, ವಿವಿಧ ತುರ್ತು ಪರಿಸ್ಥಿತಿಗಳಲ್ಲಿ ಜನರ ಪ್ರಾಣ ಹಾಗೂ ಆಸ್ತಿಪಾಸ್ತಿಯನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಇಲಾಖೆಯ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಅಗ್ನಿಶಾಮಕ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಸಾಕಷ್ಟಿದ್ದರೂ ಸ್ಥಳೀಯ ಯುವಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಕುಂದಾಪುರ ತಾಲೂಕು ಪಶು ವೈದ್ಯಕೀಯ ಶಿಬಿರ ಕಚೇರಿಯಲ್ಲಿ ಪಶು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಪೂಜಿತಾ ಅವರಿಗೆ, ಕುಂದಾಪುರ ತಾಲೂಕು ಶಿಬಿರ ಕಚೇರಿ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕೃತಕ ಗರ್ಭಧಾರಣಾ ಕಾರ್ಯಕರ್ತರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ವತಿಯಿಂದ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಕುಂದಾಪುರ ತಾಲೂಕು ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ಕೊಮೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಎಸ್. ದಯಾನಂದ ರಾವ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಪಶುವೈದ್ಯೆ ಡಾ. ಶ್ರದ್ಧಾ, ಕಾರ್ಯದರ್ಶಿ ಯೋಗೇಶ್ ಬಳ್ಕೂರು ಹಾಗೂ ಕೋಶಾಧಿಕಾರಿ ರವಿರಾಜ್ ಬಸ್ರೂರು ಉಪಸ್ಥಿತರಿದ್ದರು. 2024ರಿಂದ ಕುಂದಾಪುರ ಪಶುವೈದ್ಯಕೀಯ ಶಿಬಿರ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಡಾ. ಪೂಜಿತಾ ಅವರು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕುಂದಾಪುರಕ್ಕೆ ಆಗಮಿಸಿದ ಅಲ್ಪಾವಧಿಯಲ್ಲಿಯೇ ಸ್ಥಳೀಯ ಕುಂದಾಪ್ರ ಭಾಷೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಂಧುತ್ವದ ಚಿಗುರೊಡೆಯಲು ಕಾರಣವಾದ ಬಹುಮುಖ್ಯವಾದ ಪವಿತ್ರವಾದ ಸಾಂಸ್ಕೃತಿಕ ಹಬ್ಬ ರಕ್ಷಾ ಬಂಧನ. ಪರಸ್ಪರ ಆಶ್ವಾಸನೆ, ವಿಶ್ವಾಸವನ್ನು ನೀಡುವ ಹಬ್ಬವೇ ರಕ್ಷಾಬಂಧನ. ರಕ್ಷಾ ಬಂಧನ ಕೇವಲ ಸಹೋದರ ಸಹೋದರಿಯರ ನಡುವೆ ಮಾತ್ರ ನಡೆಯುವ ಹಬ್ಬ ಅಲ್ಲ. ಜಾತಿ, ಮತ, ಧರ್ಮಗಳ ನಡುವೆ ಸ್ನೇಹಪೂರ್ವಕ ಸಂಕೇತವಾಗಿಯೂ ರಕ್ಷಾ ಬಂಧನ ಮಹತ್ವವನ್ನು ಪಡೆದುಕೊಂಡಿದೆ ಎಂದು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ದಿವ್ಯಶ್ರೀ ರಾಘವೇಂದ್ರ ಹೇಳಿದರು. ಅವರು ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇದರ ಸಹಯೋಗದೊಂದಿಗೆ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ವಿ.ಪೈ ಸಭಾಂಗಣದಲ್ಲಿ ಶನಿವಾರ ಜರಗಿದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು. ಎಲ್ಲರಲ್ಲಿಯೂ ಸಹೋದರತೆಯ ಬಂಧವನ್ನು ಬೆಸೆಯಲು, ಏಕತೆಯನ್ನು ಕಾಣಲು, ರಾಷ್ಟ್ರ ರಕ್ಷಣೆ ಮಾಡಲು ರಕ್ಷಾ ಬಂಧನವನ್ನು ಕಟ್ಟುತ್ತಾರೆ. ರಕ್ಷೆಯನ್ನು ಮನ:ಪೂರ್ವಕವಾಗಿ ಪ್ರೀತಿಯಿಂದ ಕಟ್ಟಿದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿಯ ನಿವಾಸಿ ಹರೀಶ್ ಪೂಜಾರಿ ಕಳೆದ 2019ರಲ್ಲಿ ತೆಂಗಿನ ಮರದಿಂದ ಬಿದ್ದು ಸೊಂಟದ ಕೆಳಭಾಗ ಸ್ವಾಧೀನ ಕಳೆದುಕೊಂಡು ಅಸಾಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಈತ 2019ರಲ್ಲಿ ಮರದಿಂದ ಬೀಳುವ ಮುನ್ನವೇ ಕೋಟ ಸಹಕಾರಿ ವ್ಯವಸಾಯಕ ಸಂಘದಲ್ಲಿ 25ಸಾವಿರ ತುರ್ತು ಸಾಲ ಪಡೆದು ಕಟ್ಟಲಾಗದೆ ಅಸಾಯಕರಾಗಿ ಹಲವರ ಮೊರೆಹೋಗಿದ್ದಾರೆ. ಆತನ ಸಾಲಕ್ಕೆ ಹೆಗಲು ಕೊಡುವವರು ಯಾರೂ ಇಲ್ಲದ ಹಿನ್ನಲೆಯಲ್ಲಿ ಕೋಟದ ಪಂಚವರ್ಣ ಸಂಘಟನೆ ಮಾಹಿತಿ ಲಭಿಸಿದ್ದು ಇಲ್ಲಿನ ವಂಡಾರು ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ಮುಖ್ಯಸ್ಥ ಸಂಪತ್ ಕುಮಾರ್ ಶೆಟ್ಟಿ ಬಳಿ ಈ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿ ಸಾಲ ಮರುಪಾವತಿಗಾಗಿ ಮೊರೆಇಟ್ಟರು. ಈ ದಿಸೆಯಲ್ಲಿ ಸಂಪತ್ ಕುಮಾರ್ ಶೆಟ್ಟಿ ಇವರ ನಿರ್ದೇಶನದ ಮೇರೆಗೆ ಶ್ರೀ ಕೃಷ್ಣ ಪ್ರಸಾದ್ ಫೌಂಡೇಶನ್ ಆತನ ಸಾಲಕ್ಕೆ ಮುಕ್ತಿಗಾಣಿಸಲು ಚಿಂತಿಸಿ ಗುರುವಾರ ತನ್ನ ಸಂಸ್ಥೆಯ ಪ್ರಮುಖರನ್ನು ಆತನ ಮನೆಗೆ ಕಳಹಿಸಿ ನೇರವಾಗಿ ಬ್ಯಾಂಕ್ ಪ್ರಭಂಧಕ ಅಜಿತ್ ಶೆಟ್ಟಿ ಅವರಿಗೆ 25…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಲ್ಲಾ ಭಾಷೆಯನ್ನು ಪ್ರೀತಿಸಿ, ಆ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು. ಅಂತಯೇ ಎಲ್ಲಾ ಭಾರತೀಯ ಭಾಷೆಗಳ ಮೂಲವಾದ ಸಂಸ್ಕೃತ ಓದಲು ಮತ್ತು ಬರೆಯಲು ಕಷ್ಟವೆನಿಸಿದರೂ ದಿನಕ್ಕೊಂದು ಪದವನ್ನು ಕಲಿತರೆ ಸಂಸ್ಕೃತ ಭಾಷೆ ಕಲಿಯುವುದು ಅಸಾಧ್ಯವಲ್ಲ ಎಂದು ಕೋಟದ ವಿವೇಕ ಪದವಿ-ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶ್ರೀ ಬಾಲಕೃಷ್ಣ ನಕ್ಷತ್ರಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಂಸ್ಕೃತ ವಿಭಾಗ ಆಯೋಜಿಸಿದ ಸಂಸ್ಕೃತ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ವಿಭಾಗದ ಮುಖ್ಯಸ್ಥೆ ಮೇಘಾ ಎಸ್. ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸ್ನೇಹ ಪ್ರಾರ್ಥಿಸಿ, ಸುಶ್ಮಿತಾ ಅತಿಥಿಗಳನ್ನು ಪರಿಚಯಿಸಿ, ಅಪೇಕ್ಷಾ ಸ್ವಾಗತಿಸಿ, ಶ್ರೇಯಾ ನಿರೂಪಿಸಿ, ಕೀರ್ತನಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ಯಾವುದೇ ಆಹಾರವನ್ನು ನೆನಪಿಸಿಕೊಂಡರೂ, ನೋಡಿದರೂ, ಸವಿದರೂ ಅದು ಆನಂದವನ್ನೇ ಉಂಟುಮಾಡುತ್ತದೆ. ದೇವರೇ ಆಹಾರದ ರೂಪದಲ್ಲಿ ಬಂದು ಜೀವಿಗಳಿಗೆ ಆನಂದವನ್ನು ಹಂಚುತಿದ್ದು, ಅನ್ನ ಪರಬ್ರಹ್ಮನ ಸ್ವರೂಪವೇ ಆಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ತಿನ್ನುವ ಎಲ್ಲಾ ಪದಾರ್ಥಗಳೂ ರೂಪ, ಗುಣ, ರುಚಿಯಲ್ಲಿ ವ್ಯತ್ಯಾಸವಿದ್ದರೂ, ಸಿಹಿ, ಹುಳಿ, ಖಾರ ಸಹಿತ ಷಡ್ರಸಗಳಿಂದ ಕೂಡಿದ ಎಲ್ಲಾ ಆಹಾರಗಳೂ ಆನಂದವನ್ನು ಕೊಡುತ್ತವೆ ಎಂಬುದು ಆಹಾರದ ಸಮಾನ ಸ್ವಭಾವವಾಗಿದೆ. ಆಹಾರದಿಂದ ಸರ್ವೇಂದ್ರಿಯಗಳ ಸಂತೋಷ ಸಾಧ್ಯವಿದ್ದು, ಅನ್ನದಂತೆ ಸರ್ವೇಂದ್ರಿಯಗಳಿಗೆ ಆನಂದವನ್ನು ನೀಡುವ ವಸ್ತು ವಿಶ್ವದಲ್ಲಿ ಇನ್ನೊಂದಿಲ್ಲ. ಇದು ದೇವರ ಲಕ್ಷಣವಾಗಿದ್ದು, ಈ ಕಾರಣದಿಂದಲೇ ಅನ್ನವನ್ನು ದೇವರೆಂದು ಗೌರವಿಸುವ ಪರಂಪರೆಯಿದೆ ಎಂದು ಅಭಿಪ್ರಾಯಪಟ್ಟರು. ಜೀವಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಾರ್ಷಿಕವಾಗಿ ಶ್ರೀ ಮಹಾಕಾಳಿ ದೇವಸ್ಥಾನದ ಕೊಂಕಣಿ ಖಾರ್ವಿ ಸಮಾಜದ ವತಿಯಿಂದ ಪ್ರಕೃತಿಕ ವಿಕೋಪಗಳಿಂದ ಯಾವುದೇ ಅಪಘಾತಗಳು ಜರಗದಂತೆ ವರ್ಷಾಂಪ್ರತಿ ಜರುಗುವ ಸಮುದ್ರ ಪೂಜೆ ಕೋಡಿಯ ಸಮುದ್ರ ತೀರದಲ್ಲಿ ವಿಜೃಂಭಣೆಯಿಂದ ನೆರವೇರಿತು. ದೇವಸ್ಥಾನದ ಅಧ್ಯಕ್ಷರಾದ ಪ್ರಕಾಶ್ ಆರ್. ಖಾರ್ವಿ ಅವರ ಅಧ್ಯಕ್ಷತೆಯಲ್ಲಿ ಮೊಕ್ತೇಸರರಾದ , ಪಾಂಡು ಸಾರಂಗ ಆನಂದ ನಾಯ್ಕ್ ಹಾಗೂ ದೇವಸ್ಥಾನದ ಮುಖ್ಯ ಅರ್ಚಕರಾದ ಶಿವರಾಮ್ ಭಟ್ ನೇತೃತ್ವದಲ್ಲಿ ಪೂಜೆಯ ವಿಧಿವಿಧಾನಗಳನ್ನು ಸಾಂಗವಾಗಿ ನೆರವೇರಿಸಿದರು. ಕಾರ್ಯಕ್ರಮದ ಉಸ್ತುವಾರಿಯನ್ನು ದೇವಸ್ಥಾನದ ಸಮಿತಿಯ ಸದಸ್ಯ ಸುನಿಲ್ ಖಾರ್ವಿ ತಲ್ಲೂರು ವಹಿಸಿದ್ದರು. ಉಪಾಧ್ಯಕ್ಷರಾದ ನಾರಾಯಣ ಖಾರ್ವಿ ಮದ್ದುಗುಡ್ಡೆ, ಕಾರ್ಯದರ್ಶಿ ನಾಮದೇವ ಖಾರ್ವಿ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಖಾರ್ವಿ ವಿದ್ಯಾರಂಗ ಮಿತ್ರ ಮಂಡಳಿಯ ಅಧ್ಯಕ್ಷರಾದ ಜಯಾನಂದ ಖಾರ್ವಿ , ನವರಾತ್ರಿ ಸಮಿತಿಯ ಮಂಜುಳಾ ಪಿ . ಖಾರ್ವಿ, ಮಹಾಕಾಳಿ ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷ್ಮಿ ಖಾರ್ವಿ ವಿದ್ಯಾನಿಧಿ ಅಧ್ಯಕ್ಷ ದಿನಕರ ಖಾರ್ವಿ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ (ಪದವಿಪೂರ್ವ) ಉಪನಿರ್ದೇಶಕರ ಕಚೇರಿ, ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಅಂಡರ್–19 ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಅತ್ಯುತ್ತಮ ಸಾಧನೆಗೈದು ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಆಳ್ವಾಸ್ ತಂಡವು ಸ್ಪರ್ಧೆಯಲ್ಲಿ 7 ಚಿನ್ನ ಹಾಗೂ 1 ಬೆಳ್ಳಿ ಸೇರಿದಂತೆ ಒಟ್ಟು 8 ಪದಕಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದೆ. ತಂಡದ ಆರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸ್ಪರ್ಧೆಯ ಫಲಿತಾಂಶ:ಆರ್ಟಿಸ್ಟಿಕ್ ಪೇರ್: ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಶ್ರೀವತ್ಸರಾಜ್- ಪ್ರಥಮ ಸ್ಥಾನಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ಜೆ ಎಂ ಮತ್ತು ಅನನ್ಯ ಎಸ್ ಜಿ – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಪೃಥ್ವಿಚಾರ್ ಎನ್ ಮತ್ತು ಶ್ರೀವತ್ಸರಾಜ್ – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ಜೆ ಎಂ ಮತ್ತು…
