ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಮನುಷ್ಯ ಸತ್ವಗುಣದ ಸೃಷ್ಟಿ, ಹುಲಿ ಭೇಟೆಯಾಡುವುದನ್ನು ಬಿಟ್ಟು ತಪ್ಪಸ್ಸನ್ನು ಮಾಡಿದರೆ ಅದು ವಿಚಿತ್ರ ಎನಿಸುತ್ತದೆ. ಹಾಗೆಯೇ ಮನುಷ್ಯನು ಪ್ರಾಣಿಗಳಂತೆ ಬದುಕಬಾರದು, ಗಿಡಮರಗಳಂತೆ ನಿತ್ಯ ಜಾಢ್ಯದಿಂದ ನಿದ್ರೆಯಲ್ಲೂ ಕಳೆಯಬಾರದು. ಮನುಷ್ಯ ಅರಿವು – ಆನಂದ – ದಯೆ – ಕರುಣೆಗಳಿಂದ ಕೂಡಿದ ಬದುಕನ್ನು ಬಾಳಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಗುರುವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಆಹಾರದ ಚರಾಚರರೂಪಗಳ ಬಗ್ಗೆ ಪ್ರವಚನ ಅನುಗ್ರಹಿಸಿದ ಶ್ರೀಗಳು, ಆಹಾರ ಪ್ರಪಂಚವನ್ನು ಹತ್ತಾರು ಬಗೆಯಲ್ಲಿ ಎರಡು ಗುಂಪುಗಳಾಗಿ ವಿಂಗಡಿಸಬಹುದು. ಆಯುರ್ವೇದದ ಆಚಾರ್ಯರು ಆಹಾರವನ್ನು ಪ್ರಮುಖವಾಗಿ ಎರಡು ವಿಧವಾಗಿ ವಿಂಗಡಿಸಿ ಸ್ಥಾವರ ಹಾಗೂ ಜಂಗಮ ಎಂದು ಕರೆದಿದ್ದಾರೆ. ಸ್ಥಾವರ ವಿಭಾಗವನ್ನು ಸಸ್ಯಜನ್ಯ ಹಾಗೂ ಜಂಗಮ ವಿಭಾಗವನ್ನು ಪ್ರಾಣಿಜನ್ಯ ಎನ್ನಬಹುದಾಗಿದೆ. ಸ್ಥಾವರವನ್ನು ಮತ್ತೆ ನಾಲ್ಕು ಬಗೆಯಲ್ಲಿ ವಿಭಾಗಿಸಿದ್ದು, ಹೂವಿಲ್ಲದೇ ಹಣ್ಣು ಬಿಡುವ ವನಸ್ಪತಿಗಳು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾದ ನಿವೃತ್ತ ಕನ್ನಡ ಶಿಕ್ಷಕ ಕರುಣಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಅಷ್ಟಾಂಗ ಯೋಗದ ಬಗ್ಗೆ ವಿವರಿಸಿ, ಪ್ರಾತ್ಯಕ್ಷಿಕೆಯೊಂದಿಗೆ ಯೋಗದ ಮಹತ್ವ ಮತ್ತು ವಿವಿಧ ಆಸನಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕರಾದ ಚಂದ್ರಶೇಖರ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಘಟಕ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಸಂಚಾಲಕರಾದ ರಾಜೇಶ್ ಹೆಬ್ಬಾರ್ ಉಪನ್ಯಾಸಕರು, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹ ಕಾರ್ಯಕ್ರಮ ಅಧಿಕಾರಿ ಸುಕೇಶ್ ಚಂದ್ರಶೇಖರ್, ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಆಸ್ತಿಕ್ ಆರ್ ಗಾಣಿಗ ಮತ್ತು ಕಾರ್ಯದರ್ಶಿ ವೈಷ್ಣವಿ ಬಿಲ್ಲವ, ಬಾಯ್, ಭಾರತೀಯ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು, ಎನ್ಎಸ್ಎಸ್ ಸ್ವಯಂಸೇವಕರು, ರೇಂಜರ್ಸ್ ಮತ್ತು ಲವರ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ ಬೆಳೆಯಲ್ಲಿ ಕಂಡು ಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೊಟಗಾರಿಕೆ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲುತುತ್ತು ಮತ್ತು ಎಲೆಚುಕ್ಕೆ ರೋಗಕ್ಕೆ ಶಿಫಾರಸ್ಸು ಮಾಡಿರುವ ಸಸ್ಯಸಂರಕ್ಷಣಾ ಔಷಧಿ ಖರೀದಿಗೆ ಪ್ರತಿ ಹೆಕ್ಟೇರಿಗೆ ರೂ. 3000(ಕೇಂದ್ರದ ಪಾಲು ರೂ.1500 ಹಾಗೂ ರಾಜ್ಯದ ಪಾಲು ರೂ.1500) ಹಾಗೂ ಗರಿಷ್ಠ 2 ಹೆಕ್ಟೇರ್ಗಳಿಗೆ ರೂ.6000 ಗಳ ಸಹಾಯಧನ ಸವಲತ್ತು ವಿತರಿಸಲು ಅವಕಾಶವಿದ್ದು, ಆಸಕ್ತ ರೈತರು ತಾವು ಖರೀದಿಸಿರುವ ಅಧಿಕೃತ ಬಿಲ್ಲಿನೊಂದಿಗೆ ಆರ್.ಟಿ.ಸಿ., ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ಬುಕ್ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖಾ ಮಾರ್ಗಸೂಚಿಯ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ ಕಚೇರಿಯನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಬೈಂದೂರಿನ ಸೈಂಟ್ ಥಾಮಸ್ ಶಾಲೆಯಲ್ಲಿ ‘ಮುದ್ದು ಕೃಷ್ಣ–ಮುದ್ದು ರಾಧೆ’ವೇಷಭೂಷಣ ಸ್ಪರ್ಧೆಯನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮವು ಮಕ್ಕಳ ಸೃಜನಶೀಲತೆ, ಪ್ರತಿಭೆ ಹಾಗೂ ಭಾರತೀಯ ಸಂಸ್ಕೃತಿಯ ಸೊಬಗನ್ನು ಅನಾವರಣಗೊಳಿಸಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದಯವಾಣಿ ಪತ್ರಿಕೆಯ ವರದಿಗಾರರು, ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ಘಟಕದ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್ ಬೈಂದೂರಿನ ಅಧ್ಯಕ್ಷರಾದ ಅರುಣ್ ಕುಮಾರ್ ಉಪಸ್ಥಿತರಿದ್ದರು. ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನರ್ಸರಿಯಿಂದ ಪ್ರೀ-ಪ್ರೈಮರಿ, 1ನೇ ಮತ್ತು 2ನೇ ತರಗತಿ ಹಾಗೂ 3ನೇಯಿಂದ 5ನೇ ತರಗತಿಯವರೆಗೆ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಕೃಷ್ಣ ಮತ್ತು ರಾಧೆಯ ವೇಷದಲ್ಲಿ ಕಂಗೊಳಿಸಿದರು. ಮುದ್ದಾದ ಕೃಷ್ಣನ ವೇಷದಲ್ಲಿ ಕೊಳಲು ಹಿಡಿದು ಬಂದ ಪುಟಾಣಿ ಮಕ್ಕಳು ಹಾಗೂ ರಾಧೆಯ ವೇಷದಲ್ಲಿ ಮಿಂಚಿದ ಬಾಲಕಿಯರು ಎಲ್ಲರ ಗಮನ ಸೆಳೆದರು. ಮಕ್ಕಳ ಅಭಿನಯ, ವೇಷಭೂಷಣ ಮತ್ತು ಆತ್ಮವಿಶ್ವಾಸಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು. “ಮಕ್ಕಳ ಪ್ರತಿಭೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರೈತರು ಕೃಷಿ ಸೇರಿದಂತೆ ಹೈನುಗಾರಿಕೆ ಚಟುವಟಿಕೆ ಕೈಗೊಳ್ಳಲು ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಅರ್ಹರಿಗೆ ಸಮರ್ಪಕವಾಗಿ ಒದಗಿಸಿ, ಅವರು ಆರ್ಥಿಕವಾಗಿ ಸ್ವಾವಲಂಭಿಗಳಾಗಲು ಪ್ರೋತ್ಸಾಹಿಸುವ ಕಾರ್ಯವನ್ನು ಬ್ಯಾಂಕುಗಳು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದ್ದಾರೆ. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರದ ವಿವಿಧ ಯೋಜನೆಗಳಡಿ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ನೆರವು ಕೋರಿ ಬ್ಯಾಂಕುಗಳಿಗೆ ಬರುವ ರೈತರು, ಸಾರ್ವಜನಿಕರು ಹಾಗೂ ಮಹಿಳಾ ಫಲಾನುಭವಿಗಳೊಂದಿಗೆ ಸೌಹಾರ್ದತವಾಗಿ ನಡೆದು ಕೊಳ್ಳುವುದರೊಂದಿಗೆ ಅವರುಗಳು ನೆರವು ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದರು. ಸೈಬರ್ ವಂಚನೆ ಬಗ್ಗೆ ಅರಿವು:ಹಣಕಾಸಿನ ವಂಚನೆಯನ್ನು ತಡೆಗಟ್ಟಲು ವಹಿವಾಟು ಉದ್ದೇಶಗಳಿಗಾಗಿ 1600 ಫೋನ್ ಸಂಖ್ಯೆ ಸರಣಿಯನ್ನು ಮಾತ್ರ ಬಳಸುವಂತೆ ಬ್ಯಾಂಕುಗಳಿಗೆ ಆರ್ಬಿಐ ನಿರ್ದೇಶನ ನೀಡಿದೆ. ಎಲ್ಲಾ ಬ್ಯಾಂಕುಗಳು ವಹಿವಾಟು-ಸಂಬಂಧಿತ ಕರೆಗಳಿಗೆ 1600ರಿಂದ ಪ್ರಾರಂಭವಾಗುವ ಫೋನ್ ಸಂಖ್ಯೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾಗಿರುವ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಆಗಿರುವ ಸಾಹಿತಿ ಬರಹಗಾರ ವಾಗ್ಮಿ ಬಹುರೂಪಿ ನರೇಂದ್ರ ಕುಮಾರ್ ಕೋಟ ಅವರಿಗೆ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ ಗುರುಭ್ಯೋ ನಮಃ, ಪುರಸ್ಕಾರ 2026 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವನ್ನು ಇದೆ ಸೆಪ್ಟೆಂಬರ್ 06ರಂದು ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳದಲ್ಲಿ ವಿತರಿಸಲಾಗುವುದೆಂದು ಪರಿಷತ್ತಿನ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರಣಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವೇದ, ಉಪನಿಷತ್ತು, ದರ್ಶನ, ಸಾಹಿತ್ಯ ಹಾಗೂ ಭಾರತೀಯ ಜ್ಞಾನ ಪರಂಪರೆಯ ಅಪಾರ ಸಂಪತ್ತನ್ನು ತನ್ನೊಳಗೆ ಅಡಕಗೊಳಿಸಿರುವ ಸಂಸ್ಕೃತವು ಕೇವಲ ಒಂದು ಪ್ರಾಚೀನ ಭಾಷೆಯಲ್ಲ, ಜಗತ್ತಿಗೆ ಜ್ಞಾನ ಮತ್ತು ಚಿಂತನೆಯ ಬೆಳಕು ನೀಡಿದ ಸಮೃದ್ಧ ಭಾಷೆಯಾಗಿದೆ ಎಂದು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಜಯಶಂಕರ್ ಕಂಗಣ್ಣಾರು ನುಡಿದರು. ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ವತಿಯಿಂದ ಬುಧವಾರ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ‘ಸಂಸ್ಕೃತದ ವಿಶ್ವ ವೈಭವ’ ಕುರಿತು ಮಾತನಾಡಿದ ಅವರು, ಸಂಸ್ಕೃತದ ಮಹತ್ವವನ್ನು ಭಾರತೀಯ ಜ್ಞಾನ ಪರಂಪರೆಯ ಹಿನ್ನೆಲೆಯಲ್ಲಿ ವಿವರಿಸಿದರು. ಸಂಸ್ಕೃತವು ವೇದಗಳ ಮೂಲಕ ಭಾರತೀಯ ಸಾಂಸ್ಕೃತಿಕ ಜಗತ್ತಿಗೆ ಶಾಂತಿ, ಸಹಬಾಳ್ವೆ ಮತ್ತು ಲೋಕಕಲ್ಯಾಣದ ಸಂದೇಶವನ್ನು ನೀಡಿದೆ. ‘ಸರ್ವೇ ಜನಾಃ ಸುಖಿನೋ ಭವಂತು’ ಎಂಬ ಆಶಯವು ಸಮಸ್ತ ಮಾನವಕುಲದ ಒಳಿತನ್ನು ಬಯಸುವ ಭಾರತೀಯ ಚಿಂತನೆಯ ಪ್ರತೀಕವಾಗಿದೆ. ಸಂಸ್ಕೃತ ಸಾಹಿತ್ಯ ಮತ್ತು ಜ್ಞಾನ ಪರಂಪರೆಯಲ್ಲಿ ವ್ಯಕ್ತಿಯ ಒಳಿತಿನೊಂದಿಗೆ ಜಗತ್ತಿನ ಕಲ್ಯಾಣಕ್ಕೂ ಮಹತ್ವ ನೀಡಲಾಗಿದೆ. ಸಂಸ್ಕೃತದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಬೌದ್ದ ಸಮುದಾಯದ ಬಾಲಕ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ State Hostel Portal https://shp.karnataka.gov.in ತಂತ್ರಾಂಶದ ಮೂಲಕ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿರುತ್ತದೆ. ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೆ.75 ಅಲ್ಪಸಂಖ್ಯಾತರು ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಿರಿಸಲಾಗಿದೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ.ಗಳ ಒಳಗಿದ್ದು ಅರ್ಜಿ ನಮೂನೆಯ ಜೊತೆಗೆ ಜಾತಿ/ಆದಾಯ ಪ್ರಮಾಣ ಪತ್ರ, 2025-26ನೇ ಸಾಲಿನ ವಾರ್ಷಿಕ ಪರೀಕ್ಷೆ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ಕಾಲೇಜಿಗೆ ಇರುವ ದೂರದ ಬಗ್ಗೆ ಪ್ರಮಾಣ ಪತ್ರ ಹಾಗೂ ಫೋಟೋಗಳೊಂದಿಗೆ ಅರ್ಜಿಯನ್ನು , ಸೆಪ್ಟೆಂಬರ್ 30…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಬೆಂಗಳೂರಿನ ಹೆಬ್ಬಾಳದ ಹೋಟೆಲ್ ಅಮೃತ್ ಸಾಗರ್ನಲ್ಲಿ ನೂತನವಾಗಿ ಪ್ರಾರಂಭಗೊಂಡ ಬಿಲ್ಲವ ಯುವ ಬ್ರಿಗೇಡ್ನ ಎರಡನೇ ಪೂರ್ವಭಾವಿ ಸಭೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಹಮ್ಮಿಕೊಂಡಿತು. ಶ್ರೀ ನಾರಾಯಣ ಗುರು ಭಾವ ಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವುದರೊಂದಿಗೆ ನಾರಾಯಣಗುರುಗಳು ಜಗತ್ತಿಗೆ ನೀಡಿದ ಸಂದೇಶವನ್ನು ವೇದಿಕೆಯಲ್ಲಿದ್ದ ಗಣ್ಯರು ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಕರಾವಳಿಯ ಬಡಗಿನ ಯಕ್ಷ ಹಾಸ್ಯ ಕಲಾವಿದ ಚೌಕುಳಮಕ್ಕಿ ಬಸವ ಪೂಜಾರಿ ಅವರನ್ನು ಗೌರವ ಧನ ನೀಡಿ ಸನ್ಮಾನಿಸಲಾಯಿತು. ಸಂಘಟನೆಯ ಮುಖ್ಯಸ್ಥರಾದ ಪ್ರದೀಪ್ ಪೂಜಾರಿ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ, ಉದ್ದೇಶದ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡುವುದರೊಂದಿಗೆ ಎಲ್ಲರ ಒಗ್ಗಟ್ಟಿನೊಂದಿಗೆ ಸಮುದಾಯ ಬಲಪಡಿಸೋಣ, ಒಂದಾಗಿ ಕಟ್ಟ ಕಡೆಯ ಬಿಲ್ಲವರು ಮುನ್ನೆಲೆಗೆ ಬರುವಂತೆ ಮಾಡುವುದು ನಮ್ಮ ಹೋರಾಟ ಎಂಬುದಾಗಿ ಘೋಷಿಸಿದರು. ಕಾರ್ಯಕ್ರಮದಲ್ಲಿ ಅಥಿತಿಗಳು, ಸಂಸ್ಥೆಯ ಸದಸ್ಯರು ಭಾಗಿಯಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳಾವರ ನಿವಾಸಿ ಸುಧಾಕರ ಶೆಟ್ಟಿ (40) ಎಂಬ ವ್ಯಕ್ತಿಯು ಶಿವಮೊಗ್ಗದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಆಗಾಗ ಮನೆಗೆ ಬಂದು ಹೋಗುತ್ತಿರುತ್ತಾರೆ. ಮೇ. 07ರಂದು ಬೆಳಗ್ಗೆ 10.30 ರ ಸುಮಾರಿಗೆ ಶಿವಮೊಗ್ಗದಿಂದ ಮನೆಗೆ ಬಂದಿದ್ದು, ಅದೇ ದಿನ ಸಂಜೆ ಶಿವಮೊಗ್ಗಕ್ಕೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರೂ ಕೆಲಸಕ್ಕೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಕಛೇರಿ…
