ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಶೋಕ್ ತೆಕ್ಕಟ್ಟೆ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ದೊರಕಿದೆ. ಬೆಂಗಳೂರಿನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅಶೋಕ್ ತೆಕ್ಕಟ್ಟೆ ಅವರು ಕಳೆದ 24 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿ, ಸಾಂಸ್ಕತಿಕ ವಿಕಸನ, ಕಲಿಕೆಯಲ್ಲಿ ನಾವಿನ್ಯತೆಯ ಶೋಧ, ಹೊಸ ಹೊಸ ಪ್ರಯೋಗಗಳ ಅನುಷ್ಠಾನದ ಮೂಲಕ ಶಾಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಮೂಡಿಸುವಲ್ಲಿ ಶ್ರಮಿಸಿದ್ದಾರೆ. ಇಂಗ್ಲೀಷ್ ಭಾಷೆಯ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳು ಮಾತ್ರವಲ್ಲದೆ ಬೇರೆ ಬೇರೆ ಶಾಲಾ ಶಿಕ್ಷಕರಿಗೂ ತರಬೇತಿ ನೀಡುತ್ತಿದ್ದಾರೆ. ರಾಜ್ಯದಲ್ಲೇ ಮೊದಲ ಬಾರಿಗೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಲ್ಯಾಂಗ್ಜ್ ಲ್ಯಾಬ್ ಸ್ಥಾಪನೆ, ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆ, ಪ್ರತಿ ದಿನದ ಬೆಳಿಗ್ಗೆ ಸ್ಪೋಕನ್ ಇಂಗ್ಲಿಷ್ ತರಗತಿ, 2015 ರಿಂದ ಪ್ರತಿ ದಿನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಸದಸ್ಯತ್ವವನ್ನು ಮತ್ತಷ್ಟು ಬಲಪಡಿಸುವುದು, ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವುದು ಹಾಗೂ ಸಮಾಜದಲ್ಲಿ ರೋಟರಿಯ ಸೇವಾ ಕಾರ್ಯಗಳ ಕುರಿತು ಉತ್ತಮ ಸಾರ್ವಜನಿಕ ಅಭಿಪ್ರಾಯ ಮೂಡಿಸುವ ಉದ್ದೇಶದಿಂದ “ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್ ” ವಿಷಯದ ಕುರಿತು ಝೋನಲ್ ಸೆಮಿನಾರ್ ಬ್ರಹ್ಮಾವರ ಹೋಟೆಲ್ ಆಶ್ರಯದ ಆನಂದ್ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು P.D.G. ರಾಜಾರಾಮ್ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದ ಅವರು, ರೋಟರಿಯ ಬೆಳವಣಿಗೆಗೆ ಸದಸ್ಯತ್ವ ವಿಸ್ತರಣೆ ಹಾಗೂ ಉತ್ತಮ ಸಾರ್ವಜನಿಕ ಸಂಪರ್ಕ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬ ರೋಟೇರಿಯನ್ ಸಂಸ್ಥೆಯ ಸೇವಾ ಚಟುವಟಿಕೆಗಳನ್ನು ಸಮಾಜದ ಹೆಚ್ಚಿನ ಜನರಿಗೆ ತಲುಪಿಸುವ ಜವಾಬ್ದಾರಿ ಹೊಂದಿದ್ದಾರೆ ಎಂದು ಹೇಳಿದರು. ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಬನ್ನಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಸಂತ್ ಹೋಬ್ಳಿದಾರ್, DG 2027–28, ಅಲೆನ್ ಲೂವಿಸ್, DG 2028–29, ಅಸಿಸ್ಟೆಂಟ್ ಗವರ್ನರ್ ಸುಧಾಕರ್ ಶೆಟ್ಟಿ, ಝೋನಲ್ ಲರ್ನಿಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂದೇ ಮಾತರಂ ಗೀತೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟ ಪಡಿಸಿದೆ. ಈ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಂದಾಪುರ ಮಂಡಲ ಬಿಜೆಪಿ ಅವರು ವಂದೇ ಮಾತರಂ ವಿಚಾರದಲ್ಲಿ ಪಾದಯಾತ್ರೆ ಮಾಡುವುದಕ್ಕೆ ಕಾಂಗ್ರೆಸ್ ಪಕ್ಷದ ಯಾವುದೇ ವಿರೋಧವಿಲ್ಲಾ. ಆದರೆ ವಂದೇ ಮಾತರಂ ವಿಚಾರವನ್ನು ಇಟ್ಟುಕೊಂಡು ಅವರು ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳಾದ ನಾವು ಶಾಲಾ ದಿನಗಳಿಂದ ವಂದೇ ಮಾತರಂ ಗೀತೆಯನ್ನು ಹಾಡಿದವರು ಇಂದಿಗೂ ಹಾಡುತ್ತಿದ್ದೇವೆ ಮುಂದೆ ಹಾಡುತ್ತೇವೆ. ಆದರೆ ವಂದೇ ಮಾತರಂ ಗೀತೆಯ ಅಷ್ಟೂ ಚರಣವನ್ನು ಹಾಡಬೇಕು, ಅದನ್ನು ಹೀಗೆಯೇ ಹೇಳಬೇಕು ಎಂದು ಕಾಂಗ್ರೆಸ್ ನವರಿಗೆ ಭೋದನೆ ಮಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲಾ. ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರುಗಳಿಗೆ ಬಿಜೆಪಿಯ ಕಪಟ ರಾಷ್ಟ್ರ ಪ್ರೇಮದ ಪಾಠದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ವರ್ಷದ ಗುರು ಜಯಂತಿ ಉತ್ಸವವು ಗುರುವಾರ ಬಸ್ರೂರು ಕೋಟಿ ಚೆನ್ನಯ್ಯ ಪಂಜೂರ್ಲಿ ಗರಡಿಯಲ್ಲಿ ನಡೆಯಿತು. ಬಿಲ್ಲವ ಸಮಾಜ ಸೇವಾ ಸಂಘ ಬಸ್ರೂರು ವಲಯ ಇವರ ವತಿಯಿಂದ ನಡೆದ ಗುರು ಜಯಂತಿ ಉತ್ಸವ ಸಂಜೆ 06.30ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪೂಜಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮ ನಡೆಯಿತು. ಶ್ರೀ ಕಾಳಿಗರಡಿ ಭಜನಾ ತಂಡ ಕೋಳ್ಕೇರಿ ಬಸ್ರೂರು ಇವರ ಕುಣಿತ ಹಾಗೂ ಕುಳಿತು ಭಜನಾ ಕಾರ್ಯಕ್ರಮ ನಡೆಯಿತು. ತದ ನಂತರ ಪ್ರಸಾದ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಸ್ರೂರು ಬಿಲ್ಲವ ಸಂಘದ ಅಧ್ಯಕ್ಷರಾದ ಜಯಸೂರ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶ್ರೀನಾಥ್ ಜಿ. ಪೂಜಾರಿ, ದೈವಸ್ಥಾನದ ಅಧ್ಯಕ್ಷರು ಬಿ.ಟಿ. ಮಂಜುನಾಥ ಪೂಜಾರಿ, ಕೇಶವ ಪೂಜಾರಿ, ಶಿವರಾಮ ಪೂಜಾರಿ, ನರಸಿಂಹ ಪೂಜಾರಿ, ಅಶೋಕ್ ಕೆರೆಕಟ್ಟೆ ಮಹಿಳಾ ಘಟಕದ ಅಧ್ಯಕ್ಷರಾದ ಬೇಬಿ ಶ್ರೀಕಾಂತ್ ಇವರೊಂದಿಗೆ ಬಿಲ್ಲವ ಸಮಾಜದ ಅನೇಕ ಮುಖಂಡರು ಭಾಗವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಹಂಗಳೂರು ಎಂಬಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ರಾಜು ಕಶ್ಯಪ (42) ಎಂದು ಗುರುತಿಸಲಾಗಿದೆ. ಅವರು ಕೆಲಸ ಮಾಡಿ ಕಟ್ಟಡದ 1ನೇ ಮಹಡಿಯಲ್ಲಿ ಉಳಿದುಕೊಂಡಿದ್ದು, ಸೆ.1ರಂದು ರಾತ್ರಿ ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೆ.3ರಂದು ರಾತ್ರಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ ಎನ್ನುವುದರ ಬಗ್ಗೆ ನಮ್ಮಲ್ಲಿ ಮೂಲಭೂತ ಮಾಹಿತಿಗಳು ಇರಬೇಕು ಮತ್ತು ಆ ಮೂಲಕ ಪರಿಸರವನ್ನು ರಕ್ಷಿಸುವಲ್ಲಿ ನಾವುಗಳು ಒಂದಾಗಿ ಕೈಜೋಡಿಸಬೇಕು ಎಂದು ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್ ಉಡುಪಿಯ ಸೂಪರ್ವೈಸರ್ ಸರೋಜಾ ಎಸ್. ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಇ – ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್ನ ಸೂರಜ್ ಕೆ. ಮತ್ತು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್.ಕೆ. ಉಪಸ್ಥಿತರಿದ್ದರು. ಎಸ್.ವಿ ಕಾಮರ್ಸ್ ಕ್ಲಬ್ ಸಂಯೋಜಕರಾದ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿನಿ ಸ್ನೇಹಾ ಖಾರ್ವಿ ಸ್ವಾಗತಿಸಿ, ತನ್ವಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಸಂಬಂದಪಟ್ಟ ಗ್ರಾಮ / ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸಿವಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಾಸ್ತ್ರೀ ಸರ್ಕಲ್, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿದ್ದ ಅಧರ್ಮ, ಅನೀತಿ ಹಾಗೂ ಅತ್ಯಂತ ಕೆಟ್ಟ ವ್ಯವಸ್ಥೆ ಉಂಟಾದಾಗ ಮಹಾನ್ ಚೇತನರು ಜನಿಸುತ್ತಾರೆ ಎನ್ನುವುದಕ್ಕೆ ಶ್ರೇಷ್ಠ ನಿದರ್ಶನ ಶ್ರೀ ಕೃಷ್ಣ. ಇವರು ವಿಷ್ಣುವಿನ ಎಂಟನೇ ಅವತಾರವಾಗಿ ಜನಿಸುವುದರೊಂದಿಗೆ ಸಾವಿರಾರು ವರ್ಷಗಳ ಹಿಂದೆ ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಶುಕ್ರವಾರ ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀ ಕೃಷ್ಣ ದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಉಡುಪಿ ಶ್ರೀಕೃಷ್ಣನ ನಾಡು. ಇಲ್ಲಿನ ಜನತೆಯ ಬಹುದೊಡ್ಡ ಹಬ್ಬ ಶ್ರೀ ಕೃಷ್ಣ ಜನ್ಮಾಷ್ಠಮಿ. ಇಂತಹ ಕೃಷ್ಣನಗರಿ ಉಡುಪಿಯಲ್ಲಿ ಇಂದು ಅತ್ಯಂತ ಸಂಭ್ರಮದಿಂದ ಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸಲಾಗುತ್ತಿದ್ದು, ವೇಷಧಾರಿಗಳು ವಿವಿಧ ಬಗೆಯ ವೇಷ ತೊಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅನಿವಾಸಿ ಕನ್ನಡಗರಿಗೆ ಪ್ರತ್ಯೇಕ ಸಚಿವಾಲಯದ ಭರವಸೆ ರಾಜ್ಯ ಸರಕಾರ ವಿಧಾನಸಭೆಯಲ್ಲಿ ಮಂಡಿಸಿದೆ ಅದರಂತೆ ಮುಂದಿನ ಕಾರ್ಯತಂತ್ರದ ಕುರಿತು ಮುಂದಿನದಿನಗಳಲ್ಲಿ ರಾಜ್ಯ ಸರಕಾರದೊಂದಿಗೆ ಚರ್ಚಿಸುತ್ತೇನೆ ಎಂದು ಅನಿವಾಸಿ ಭಾರತೀಯ ಸಮಿತಿ ಕರ್ನಾಟ ಹಾಗೂ ವಿಧಾನಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಹೇಳಿದರು. ಅವರು ಶುಕ್ರವಾರ ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯ ಸರಕಾರ ಸುಭದ್ರವಾಗಿ ಜನಸ್ನೇಹಿ ಆಡಳಿತವನ್ನು ನೀಡುತ್ತಿದೆ ಎಂದರಲ್ಲದೆ ಉಡುಪಿ ಜಿಲ್ಲೆ ಕೊಲ್ಲೂರು ಸೇರಿದಂತೆ ವಿವಿಧ ದೇಗುಲವನ್ನು ಸಂದರ್ಶಿಸಿದ್ದೇನೆ ಅದೇ ಇಲ್ಲಿನ ಕಾಂಗ್ರೆಸ್ ಮುಖಂಡರೊಡನೆ ಅಮೃತೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದೇನೆ ದೇಗುಲದಲ್ಲಿ ಮುಂದಿನ ದಿನಗಳಲ್ಲಿ ವಿಶೇಷ ಸೇವೆಯನ್ನು ನೀಡಲಿದ್ದೇನೆ ಎಂದರು. ದೇಗುಲ ಅಭಿವೃದ್ಧಿ ಸರಕಾರದೊಂದಿಗೆ ಚರ್ಚೆ:ಇಲ್ಲಿನ ಅಮೃತೇಶ್ವರೀ ದೇಗುಲದ ಅಭಿವೃದ್ಧಿಯ ಕುರಿತಂತೆ ಧಾರ್ಮಿಕ ದತ್ತಿ ಇಲಾಖಾ ಸಚಿವರಾದ ರಾಮಲಿಂಗ ರೆಡ್ಡಿಯವರೊಂದಿಗೆ ಚರ್ಚಿಸಿ ಇಲ್ಲಿನ ಸಭಾಭವನ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗೆ ಸರಕಾರ ಕೈಜೋಡಿಸಲಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಸಹಕಾರ ವ್ಯವಸ್ಥೆಯಲ್ಲಿ ಮಾದರಿ ಸಂಸ್ಥೆಯಾಗಿ ರೂಪುಗೊಂಡು ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವುದು ಸಂತಸದ ಸಂಗತಿಯಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಹೇಳಿದರು. ಅವರು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇದರ ಸುವರ್ಣ ಸಂಭ್ರಮಕ್ಕೆ ಚಾಲನೆ ಹಾಗೂ ಸಂಸ್ಥಾಪಕರ ದಿನಾಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ರಂಗದಲ್ಲಿ ಪ್ರಕಾಶ್ಚಂದ್ರ ಶೆಟ್ಟಿ ಅವರು ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಮರೆತು ಗುರುತಿಸುವ ವ್ಯಕ್ತಿತ್ವದವರಾಗಿದ್ದಾರೆ. ಖಂಬದಕೋಣೆ ಸಹಕಾರಿಯ ಬಲವರ್ಧನೆಯಲ್ಲಿ ಅವರ ಕೊಡುಗೆ ದೊಡ್ಡದಿದೆ ಎಂದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಷ್ಟದಲ್ಲಿದ್ದ ಸಂಸ್ಥೆಯನ್ನು ಸದಸ್ಯರು, ಸಿಬ್ಬಂದಿಗಳ ನಿರಂತರ ಸಹಕಾರ ಮೂಲಕ ಲಾಭದಾಯಕ ಸಂಸ್ಥೆಯನ್ನಾಗಿ ಮಾಡಲಾಗಿದೆ. ಸಹಕಾರ ವ್ಯವಸ್ಥೆಯಲ್ಲಿ ಸಂಸ್ಥೆಯನ್ನು ಗಟ್ಟಿಗೊಳಿಸುವಲ್ಲಿ ನಿರಂತರವಾಗಿ ಶ್ರಮಿಸಲಾಗಿದೆ. ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆ ರೈತ ಸಿರಿ ಅಗ್ರಿ ಮಾಲ್ ಯೋಜನೆಯನ್ನು ಇನ್ನು…
