Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ  ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲು ಇಚ್ಛಿಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050370006 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ 2024 – 25ನೇ ಶೈಕ್ಷಣಿಕ ಸಾಲಿನಲ್ಲಿ ತರಗತಿವಾರು ಆಯೋಜಿಸಿದ ವಿವಿಧ ಪಂದ್ಯಾಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕ್ರೀಡಾ ತಂಡವನ್ನು ಪ್ರತಿನಿಧಿಸಿದ ಸಾಧಕರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕ, ಪ್ರಾಕ್ತನ ವಿದ್ಯಾರ್ಥಿ ದೀಕ್ಷಿತ್ ಮೇಸ್ತ ಮಾತನಾಡಿ, ಒಬ್ಬ ಒಳ್ಳೆಯ ಕ್ರೀಡಾಪಟು ಶಿಸ್ತು ಮತ್ತು ಪರಿಶ್ರಮವನ್ನು ಮೈಗೂಡಿಸಿಕೊಳ್ಳಬೇಕು. ಸತತ ಪ್ರಯತ್ನದಿಂದ ಕ್ರೀಡೆಯಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದರು. ಇದೇ ಸಂದರ್ಭ ವಿವಿಧ ದೃಷ್ಟಾಂತಗಳ ಮೂಲಕ ಕೆಲವು ಕ್ರೀಡಾ ಸಾಧಕರ ಸಾಧನೆಯ ಹಾದಿಯನ್ನು ಪರಿಚಯಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ವಿ.ವಿ. ಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನ ಕ್ರೀಡಾ ಸಾಧಕರನ್ನು ಸನ್ಮಾನಿಸಿ, ಶುಭ ಹಾರೈಸಿದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುರಿಯನ್ನು ಈಡೇರಿಸಿಕೊಳ್ಳಲು ನಿರಂತರ ಪ್ರಯತ್ನ ಶೀಲರಾಗಿ, ನಿಮ್ಮ ಯಶಸ್ಸಿನ ಮೂಲಕ ಎಲ್ಲ ತೊಂದರೆಗಳು ಮಾಯವಾಗುತ್ತವೆ. ವಿದ್ಯಾರ್ಥಿಗಳೆಲ್ಲರಿಗೂ ಸಮಾನ ಪ್ರತಿಭೆ ಇಲ್ಲದಿರಬಹುದು ಆದರೆ ಸಮಾನ ಅವಕಾಶಗಳಿವೆ. ಕನಸು, ಪ್ರಯತ್ನ, ಸಾಧನೆ – ಇವು ಮೂರನ್ನು ನಿರ್ಲಕ್ಷಿಸದೆ ತಮ್ಮ ಏಳ್ಗೆಗೆ ತಾವೇ ಶಿಲ್ಪಿಗಳಾಗಬೇಕೆಂದು ಕರ್ನಾಟಕ ಬ್ಯಾಂಕ್ ವಿಭಾಗೀಯ ಕಚೇರಿ, ಉಡುಪಿ ಇಲ್ಲಿನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ವಾದಿರಾಜ ಕೆ. ಹೇಳಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ನಡೆದ 18ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ನಿಧಿಯಿಂದ ಗಣಕಶಾಸ್ತ್ರದ ಪ್ರಯೋಗಾಲಯಕ್ಕೆ ರೂಪಾಯಿ ನಾಲ್ಕು ಲಕ್ಷ ಹತ್ತು ಸಾವಿರ ಮೌಲ್ಯದ ಯುಪಿಎಸ್ ಹಸ್ತಾಂತರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲ ರಾಮರಾಯ ಆಚಾರ್ಯ ಈ ಕಾಲೇಜು ಅನೇಕ ದಾನಿಗಳಿಂದ ಮೂಲಭೂತ ಸೌಲಭ್ಯಗಳನ್ನು ಪಡೆದು ಅತ್ಯುತ್ತಮ ಕಾಲೇಜೆಂದು ಹೆಸರಾಗಲು ಸಹಕರಿಸಿದವರೆಲ್ಲರಿಗೆ ಕೃತಜ್ಞತೆ ಸಲ್ಲಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣೆ ಘಟಕದ ಸದಸ್ಯರು ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎರಡು ಶಾಲೆಗಳಲ್ಲಿ ಶಾಲಾ ಕೊಠಡಿ ಹಾಗೂ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳನ್ನು ಮತ್ತು ಶಾಲಾ ವಠಾರವನ್ನು ಶ್ರಮದಾನದ ಮೂಲಕ ಸ್ವಯಂಪ್ರೇರಿತರಾಗಿ ಸ್ವಚ್ಛಗೊಳಿಸಿದರು. ಶಾಲಾರಂಭಕ್ಕೂ ಮುನ್ನ ಶಾಲೆಯ ಕೊಠಡಿಗಳ ಸ್ವಚ್ಛತೆಯಲ್ಲಿ ಶಾಲೆಯ ಸಿಬ್ಬಂದಿಗಳು ಹಾಗೂ ಎಸ್‌ಡಿಎಂಸಿ ಸದಸ್ಯರೊಂದಿಗೆ ಕೈಜೋಡಿಸಿದ ಶೌರ್ಯ ವಿಪತ್ತು ನಿರ್ವಹಣೆ ಘಟಕದ ಸದಸ್ಯರು, ಶಾಲೆಯ ಪರಿಸರದಲ್ಲಿ ಬಾಗಿ ನಿಂತ ಮರದ ಕೊಂಬೆಗಳನ್ನು ಕಡಿದು ಪರಿಸರವನ್ನು ಸ್ವಚ್ಛಗೊಳಿಸಿದರು. ಶೌರ್ಯ ವಿಪತ್ತು ನಿರ್ವಹಣೆ ಘಟಕದ ಸದಸ್ಯರ ನಿಸ್ವಾರ್ಥ ಸೇವೆಯನ್ನು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮತ್ತು ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಯಶೊಧಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ “ಹೈ ರಿಸ್ಕ್ ಅಂಡ್ ಕ್ರಿಟಿಕಲ್ ಕೇರ್ ಒಬ್ಸೆಟ್ರಿಕ್ಸ್” ಕುರಿತು ಪ್ರಾದೇಶಿಕ ಸಮ್ಮೇಳನವನ್ನು ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ , ಫಾದರ್ ಮುಲ್ಲರ್ ಕಾಲೇಜಿನ ಪ್ರಾಧ್ಯಾಪಕಿಯಾದ ಡಾ. ರೀನಾ ವಿಲ್ಟಾ ಪ್ರಾಂಕ್, ಐಎಂಜೆ ಇನ್ಸ್ಟಿಟ್ಯೂಷನ್ಸ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗಡೆ, ಮತ್ತು ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ. ಎಸ್. ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ರಾಮಕೃಷ್ಣ ಹೆಗಡೆ ಅವರು ಸಮ್ಮೇಳನವನ್ನು ಆಯೋಜಿಸಿದ ಎಂಸಿಎನ್ ನ ಪ್ರಾಧ್ಯಾಪಕರಿಗೆ ಹಾಗೂ ಸಮ್ಮೇಳನಗಳನ್ನು ನಡೆಸಲು ಬಹಳ ಉತ್ತೇಜನ ನೀಡುತ್ತಿರುವ ಐಎಂಜೆ ಇನ್ಸ್ಟಿಟ್ಯೂಷನ್ಸ್ ಛೇರ್ಮನ್ ರಾದ ಸಿದ್ದಾರ್ಥ ಶೆಟ್ಟಿ ಅವರಿಗೆ ಅಭಿನಂದಿಸಿದರು. ಸಭಾ ಕಾರ್ಯಕ್ರಮದನಂತರ  ಆಹ್ವಾನಿತ ವಿಷಯ ತಜ್ಞ ರಿಂದ ವಿಚಾರ ಮಂಡನೆ ನಡೆಯಿತು. ಮೊದಲನೆಯವರಾಗಿ ಡಾ. ರೀನಾ ವಿಲ್ಮಾ ಪ್ರಾಂಕ್  ಅವರು “ಪ್ರಸೂತಿಯಲ್ಲಿ ಕೃತಕ ಬುದ್ಧಿಮತ್ತೆ” ಎನ್ನುವ ವಿಷಯವನ್ನು ಕುರಿತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭವಿಷ್ಯದ  ದೊಡ್ಡ ಕನಸಿನೊಂದಿಗೆ ಆಳ್ವಾಸ್ ಸಂಸ್ಥೆಗೆ ಸೇರಿದ್ದೀರಿ,  ನಿಮ್ಮ ಕನಸು ನನಸಾಗಿಸುವವರೆಗೆ ಆಳ್ವಾಸ್ ನಿಮ್ಮ ಜತೆ ಸಾಗಲಿದೆ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಸದಾಕಾತ್ ಹೇಳಿದರು. ಅವರು ಇಲ್ಲಿನ ವಿದ್ಯಾಗಿರಿಯ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಪಿಯು (ವಿಜ್ಞಾನ) ಪ್ರಥಮ ವರ್ಷದ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಟ್ಟಕಡೆಯ ವಿದ್ಯಾರ್ಥಿಗೂ ಸಮಾನ ಅವಕಾಶಗನ್ನು ಒದಗಿಸುವುದು ಆಳ್ವಾಸ್‌ನ ಗುರಿಯಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಕನಸುಗಳನ್ನು ನನಸಾಗಿಸಲು ಆಳ್ವಾಸ್ ಸದಾ ಜತೆಯಾಗಿ ನಿಲ್ಲಲಿದೆ. ಇದಕ್ಕಾಗಿ ಆಡಳಿತ ವರ್ಗ, ಶಿಕ್ಷಕರು, ಶಿಕ್ಷಕೇತರ ವೃಂದ, ಪೋ?ಕರು ಮತ್ತು ವಿದ್ಯಾರ್ಥಿಗಳು ಜತೆಗೂಡಿ ಕಾರ್ಯ ನಿರ್ವಹಿಸಬೇಕು ಎಂದರು. ಹತ್ತನೇ ತರಗತಿಯವರೆಗಿನ ಕಲಿಕೆ ವಾರ್ಷಿಕ ಪರೀಕ್ಷೆಯ ಮುಖ್ಯ ಉದ್ದೇಶವನ್ನು ಹೊಂದಿದೆ. ಆದರೆ ಪಿಯು ಶಿಕ್ಷಣ, ಭವಿಷ್ಯದ ವೃತ್ತಿ ಶಿಕ್ಷಣದ ನಿರ್ಧಾರದ ಹಂತ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಳ್ವಾಸ್ ಫಲಿತಾಂಶಗನ್ನು ವಿವರಿಸಿದ ಅವರು, ಯಾವುದೇ ಪರೀಕ್ಷೆಗಳು ಅಸಾಧ್ಯವಲ್ಲ ಪ್ರಯತ್ನಪಟ್ಟರೆ ಎಲ್ಲವು ಸುಲಭ. ಆಳ್ವಾಸ್ ಪದವಿಪೂರ್ವ ಇದಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟೊಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಅಂಧತ್ವ/ ಡೆಫ್ ಬ್ಲೈಂಡ್) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ 1,000 ರೂ. ಪ್ರೋತ್ಸಾಹಧನ ನೀಡಲು ಆದೇಶಿಲಾಗಿದ್ದು, ಸದರಿ ಯೋಜನೆಯ ಫಲಾನುಭವಿಗಳನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು. ಮೇಲ್ಕಂಡ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ಕಡ್ಡಾಯವಾಗಿ ವಿಶಿಷ್ಟ ಗುರುತಿನ ಚೀಟಿ ಹೊಂದಿರಬೇಕು ಹಾಗೂ ಅಂಗವಿಕಲತೆಯ ಪ್ರಮಾಣ ಶೇ. 75 ಮತ್ತು ಅದಕ್ಕಿಂತ ಹೆಚ್ಚಿರಬೇಕು. ವಯಸ್ಸಿನ ಹಾಗೂ ಆದಾಯ ಮಿತಿ ಇರುವುದಿಲ್ಲ. ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಆರೈಕೆದಾರರ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನವನ್ನು ಜಮೆ ಮಾಡಲಾಗುವುದು. ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಮಳೆಹಾನಿ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗೆ ಆನ್‌ಲೈನ್ ಮೂಲಕ ಸಭೆ ನಡೆಸಿ ಮಾತನಾಡಿದರು. ಈ ಬಾರಿ ಅವಧಿಗೆ ಮುನ್ನವೇ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ನಿರೀಕ್ಷೆಗಿಂತ ಹೆಚ್ಚಾಗಿದೆ. ಜನವರಿಯಿಂದ ಈವರೆಗೆ ವಾಡಿಕೆಯಂತೆ 177.4 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 801.7 ಮಿ.ಮೀ ಕ್ಕೂ ಮಳೆಯಾಗಿ, ಮೂರು ಪಟ್ಟು ಹೆಚ್ಚಾಗಿದೆ. ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಪ್ರವಾಹ, ಅತಿವೃಷ್ಠಿ ಸಮಸ್ಯೆಗಳನ್ನು ಎದುರಿಸಲು ಅಗತ್ಯವಾಗಿರುವ ಎಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಜಿ. ಎಸ್. ವಿ. ಅಸೋಸಿಯೇಶನ್ ವತಿಯಿಂದ ನಡೆಸಲ್ಪಡುತ್ತಿರುವ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಶಾಲೆ ಮತ್ತು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನ, ಉತ್ತಮ ಆರೋಗ್ಯ ಮತ್ತು ಸ್ಪೋಕನ್ ಇಂಗ್ಲೀಷ್‌ ಬಗ್ಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆಯಿತು. ಜಿ. ಎಸ್. ವಿ. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪಿ. ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಾಂಟೆಸರಿ ಮತ್ತು ಯೋಗ ತರಬೇತಿದಾರೆ ಬೆಂಗಳೂರಿನ ಜಯಶ್ರೀ ಮೃತ್ಯುಂಜಯ್ ಅವರು ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನ, ಉತ್ತಮ ಆರೋಗ್ಯ ಮತ್ತು ಸ್ಪೋಕನ್ ಇಂಗ್ಲೀಮ್‌ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು. ಸರಸ್ವತಿ ವಿದ್ಯಾ ಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್, ಜಿ. ಎಸ್. ವಿ. ಅಸೋಸಿಯೇಶನ್ ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಸದಸ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರದಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಪದವಿಯ ನಂತರ ಉದ್ಯೋಗದಲ್ಲಿ ಪ್ರವೇಶಿಸಬೇಕೆ ಅಥವಾ ಹೆಚ್ಚಿನ ಅಧ್ಯಯನ ಮಾಡಬೇಕೆಂಬ ಮಹತ್ವದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಎಮ್‌ಐಟಿಇ. ಮೂಡಬಿದ್ರಿಯ ಉದ್ಯೋಗ, ತರಬೇತಿ ಮತ್ತು ಕೈಗಾರಿಕಾ ಸಂಬAಧಗಳ ನಿರ್ದೇಶಕ ನರೇಂದ್ರ ಯು. ಪಿ. ಹಾಗೂ ಎಮ್‌ಐಟಿ, ಮೂಡ್ಲಕಟ್ಟೆ, ಕುಂದಾಪುರದ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ಮುಖ್ಯಸ್ಥೆಯಾದ ಹಾಗೂ ಸಹ ಪ್ರಾಧ್ಯಾಪಕೆಯಾಗಿರುವ ಡಾ. ಸುಚಿತ್ರಾ ದಿನೇಶ್ ಪೂಜಾರಿ ಅವರು ಭಾಗವಹಿಸಿದ್ದರು. ಅವರು ಉನ್ನತ ಅಧ್ಯಯನದ ಲಾಭಗಳನ್ನು, ಅದರ ಸದುಪಯೋಗಗಳು ಮತ್ತು ವೈಪರಿತ್ಯಗಳನ್ನು ವಿವರಿಸಿ, ವಿದ್ಯಾರ್ಥಿಗಳಿಗೆ ಸೂಕ್ತವಾದ ನಿರ್ಧಾರ ಕೈಗೊಳ್ಳುವಂತೆ ಪ್ರೇರೇಪಿಸಿದರು. ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದ ಈ ಘಟ್ಟದಲ್ಲಿ ಸಮಚಿತ್ತದಿಂದ ಮಹತ್ವದ…

Read More