Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಉಪ್ಪುಂದ ಪರಿಚಯ ಹೋಟೆಲ್‌ನ ಕೊಠಡಿಯಲ್ಲಿ ಇತ್ತೀಚಿಗೆ ಕಳವು ನಡೆದಿದೆ. ಬಿಜೂರು ನಿವಾಸಿ ಮಾಲತಿ ಎಂಬವರು ಹೋಟೆಲ್‌ನ ರೂಮ್‌ನಲ್ಲಿ ವಾಸ್ತವ್ಯ ಮಾಡಿ ಕೊಂಡಿದ್ದು, ಮೇ. 8ರಂದು ತಾಯಿ ಮನೆಗೆ ಬಿಜೂರಿಗೆ ಹೋಗಿದ್ದರು. ವಾಪಸ್ ಬಂದು ನೋಡುವಾಗ ಕೊಠಡಿಯ ಕಪಾಟಿನಲ್ಲಿರಿಸಿದ್ದ 10 ತೊಲೆ(100 ಗ್ರಾಂ) ಚಿನ್ನದ ಕರಿಮಣಿ ಸರ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಸಿಸಿಟಿವಿ ಪರಿಶೀಲಿಸಿದಾಗ ಹೋಟೆಲ್‌ನ 2ನೇ ಮಹಡಿಯ ಕೊಠಡಿಯಲ್ಲಿದ್ದ ವ್ಯಕ್ತಿಯೊಬ್ಬ ಮಧ್ಯಾಹ್ನ 2.20ರ ಹೊತ್ತಿಗೆ ಮಾಲತಿ ಅವರ ಕೊಠಡಿಯಲ್ಲಿ ಹೋಗಿ ಬಂದ ದೃಶ್ಯ ಸೆರೆಯಾಗಿದೆ. ಈ ಬಗ್ಗೆ ಬೈಂದೂರು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಜಿಎಸ್‌ಬಿ ಸಮಾಜದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಮೇ.20ರಿಂದ 26ರ ವರೆಗೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಪಂಚದಿನಾತ್ಮಕ ವಾಸ್ತವ್ಯವಿರಲಿದ್ದು, ದೇವಳದಲ್ಲಿ ನೂತನ ನಿರ್ಮಾಣದ ಶ್ರೀ ವಿದ್ಯಾಧಿರಾಜ ಸಭಾಗೃಹ ಹಾಗೂ ಇತರ ನೂತನ ಕೊಠಡಿಗಳನ್ನು ಶ್ರೀಗಳು ಉದ್ಘಾಟಿಸಲಿದ್ದಾರೆ ಎಂದು ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಯು. ರಾಜೇಶ ಪೈ ಹೇಳಿದರು. ಮೇ.20ರಂದು ಸಂಜೆ ದೇವಳದ ಪರ್ಯಾಯ ಅರ್ಚಕ ಯು. ಚಂದ್ರಶೇಖರ ಭಟ್ ಮತ್ತು ವೈದಿಕ ತಂಡದವರಿಂದ ರಾಕ್ಷೋಘ್ನಹೋಮ, ಶುದ್ದಿಹೋಮ, ನವಗ್ರಹಯುಕ್ತ ವಾಸ್ತುಹವನ ನಡೆಯಲಿದೆ. ಮೇ.21ರಂದು ಸಂಜೆ ಶ್ರೀ ಗುರುಗಳ ಆಗಮನ, ಪೂರ್ಣಕುಂಭ ಸ್ವಾಗತ, ವಿದ್ಯಾಧಿರಾಜ ಸಭಾಗೃಹ ಹಾಗೂ ಇತರ ನೂತನ ಕೊಠಡಿಗಳ ಉದ್ಘಾಟನೆ, ಪಾದಪೂಜೆ ನಂತರ ಶ್ರೀಗಳಿಂದ ಆಶೀರ್ವಚನ ನಡೆಯಲಿದೆ. ಮೇ.22ರಂದು ಬೆಳಿಗ್ಗೆ ಶ್ರೀ ದೇವರಿಗೆ ಹತಕಲಶಾಭಿಶೇಕ, ಮಹಾಪೂಜೆ, ಸಂಜೆ ಶ್ರೀ ರಾಮನಾಮ ಜಪ, ಭಜನೆ, ರಾತ್ರಿಪೂಜೆ. ನಂತರ ಶ್ರೀ ಹನುಮಗಿರಿ ಮೇಳದವರಿಂದ ಯಕ್ಷಗಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ’ರಜತ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ನಿರ್ಮಿಸಲಾಗಿರುವ ನೂತನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಮತ್ತು ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಗೌರವಿಸಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಗುಜ್ಜಾಡಿ ಗ್ರಾಪಂ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್. ಮೇಸ್ತ, ಬಳ್ಳಾರಿಯ ಉದ್ಯಮಿ ಪದ್ಮನಾಭ ಕೊತ್ವಾಲ್, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ಪತ್ರಕರ್ತ ಬಿ. ರಾಘವೇಂದ್ರ ಪೈ, ಶಾಲೆಯ ಹಳೆ ವಿದ್ಯಾರ್ಥಿಗಳಾದ ಡಾ. ಸುಬ್ಬುಲಕ್ಷ್ಮೀ ಎನ್. ಕಾರಂತ್, ವಿದ್ಯಾಲಕ್ಷ್ಮೀ ಶರತ್ ಕೊಠಾರಿ, ರಾಷ್ಟ್ರೀಯ ಈಜು ಪಟು ನಾಗರಾಜ ಖಾರ್ವಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ., ಶಾಲೆಯ ಮುಖ್ಯೋಪಾಧ್ಯಾಯ ಗಂಗಾಧರ ಬಂಟ್, ದಾನಿ ಅಬ್ದುಲ್ ಸಲಾಂ, ಸಂಘದ ಕಾರ್ಯದರ್ಶಿ ರಾಘವೇಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ವತಿಯಿಂದ ಸದಸ್ಯರ ಹುಟ್ಟುಹಬ್ಬಕ್ಕೆ  ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಈ ಹಿನ್ನಲ್ಲೆಯಲ್ಲಿ ಸಂಸ್ಥೆಯ ಸದಸ್ಯರಾದ ಪ್ರಶಾಂತ್ ಪಡುಕರೆ, ಗೌರವ ಸಲಹೆಗಾರ ಶಿವಮೂರ್ತಿ ಉಪಾಧ್ಯಾ ಇವರ ಹುಟ್ಟು ಹಬ್ಬದ ಅಂಗವಾಗಿ ಹೊಸಬದುಕು ಆಶ್ರಮಕ್ಕೆ 20 ಕೆ.ಜಿ.ಉಪ್ಪಿನಕಾಯಿಯನ್ನು ಕೊಡುಗೆಯಾಗಿ ನೀಡಿದರು. ಇದೇ ಸಂದರ್ಭದಲ್ಲಿ ಪಂಚವರ್ಣಭಜನಾ ಮಂಡಳಿ ಕೋಟ ಇವರಿಂದ ಭಜನಾ ಗುರು ಪ್ರಶಾಂತ್ ಪಡುಕರೆ ಇವರಿಗೆ ಗುರವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಶೋಭಾ ಗಣೇಶ್, ಹೊಸಬದುಕು ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ, ಪಂಚವರ್ಣಭಜನಾ ಮಂಡಳಿ ಕೋಟ ಸಂಚಾಲಕಿ ಗೀತಾ ಶಿವರಾಮ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್ ನಿರೂಪಿಸಿ, ಪಂಚವರ್ಣ ಮಹಿಳಾ ಮಂಡಲದ ನಿಕಟಪೂರ್ವ ಅಧ್ಯಕ್ಷೆ ಲಲಿತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23 ವರೆಗೆ) ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು ಮತ್ತು ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.   ಉಡುಪಿ: ಸರಕಾರ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತು ಅವರುಗಳಿಗೆ ಮಾಹಿತಿ ನೀಡುವುದರೊಂದಿಗೆ ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 535 ಕ್ಕೂ ಹೆಚ್ಚು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಕುಟುಂಬದವರಿದ್ದು, 2600 ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದಾರೆ. ಇವರುಗಳು ಈ ಹಿಂದೆ ಇತರೆ ಪ್ರದೇಶಗಳಿಂದ ಜಿಲ್ಲೆಗೆ ಬಂದವರಾಗಿದ್ದು ಜೋಗಿ, ಗೊಲ್ಲ, ದೊಂಬಿದಾಸ ಹಾಗೂ ದರ್ವೇಶ್ ಜಾತಿಗೆ ಸೇರಿದವರಾಗಿದ್ದಾರೆ. ಇವರುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯಗಳನ್ನು ಮಾಡಬೇಕಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಈ ಸಮುದಾಯದವರು ಶಿಕ್ಷಣವಂತರಾಗುತ್ತಿದ್ದಾರೆ. ಒಂದೆಡೆ ನೆಲೆಸಿ, ಕೃಷಿ ಚಟುವಟಿಕೆ, ಸ್ವಯಂ ಉದ್ಯೋಗ ಮತ್ತಿತರ ಕಾರ್ಯಗಳಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಂಗೀತ ಕ್ಷೇತ್ರದಲ್ಲಿ ಛಾಯಾ ತರಂಗಿಣಿ ಸಾಕಷ್ಟು ಶಿಷ್ಯ ವೃಂದ ಹೊಂದಿದ್ದು ತನ್ನದೆ ಆದ ಅಸ್ತಿತ್ವ ಹೊಂದಿ ಹಲವಾರು ಕಡೆಗಳಲ್ಲಿ ಶಿಷ್ಯ ವೃಂದವನ್ನು ಸೃಷ್ಟಿಸಿ ಕೊಂಡಿದ್ದಾರೆ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ನುಡಿದರು. ಇತ್ತೀಚಿಗೆ ಕಾರಂತ ಥೀಂ ಪಾರ್ಕನಲ್ಲಿ ಛಾಯಾ ತರಂಗಿಣಿ ಸಂಗೀತ ಶಾಲೆ ಕೋಟ ಹರ್ತಟ್ಟು ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಗೀತದ ಮೂಲಕ ಹೊರಜಗತ್ತಿಗೆ ನಮ್ಮನ್ನು ಪರಿಚಯಿಸುವುದರ ಜತೆಗೆ ಪ್ರಸಿದ್ಧಿ ಪಡೆಯಲು ಸಾಧ್ಯ ಈ ನಿಟ್ಟಿನಲ್ಲಿ ಇಲ್ಲಿನ ಸಂಗೀತ ಗುರುಗಳು ಹಾಗೂ ಆ ಸಂಸ್ಥೆ ಮತ್ತಷ್ಟು ಶಿಷ್ಯವೃಂದವನ್ನು ಪಸರಿಸಿಕೊಳ್ಳಲಿ ಎಂದು ಹಾರೈಸಿದರು. ಗುರುವಂದನಾ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಗುರವಂದನಾ ಗೌರವ ಸಲ್ಲಿಸಲಾಯಿತು. 2023-24ನೇ ಸಾಲಿನ ಕರ್ನಾಟ ಶಾಸ್ತ್ರೀಯ ಸಂಗೀತದ ಜೂನಿಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ತನ್ಮಯ್ ಬಿಜೂರು ಇವರನ್ನು ಗುರುತಿಸಲಾಯಿತು. ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ವಹಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪರಸ್ಪರ ಸಹಕಾರ ತತ್ವವನ್ನು ಕಾರ್ಯರೂಪಕ್ಕೆ ಇಳಿಸುವುದರ ಮೂಲಕ ಸಂಸ್ಥೆಗಳನ್ನು ಬಲಪಡಿಸಬೇಕು. ಆ ಮೂಲಕ ಸಮುದಾಯದ ಅಭಿವೃದ್ಧಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಚಕ್ರಮ್ಮ ದೇವಸ್ಥಾನ ಟ್ರಸ್ಟ್ ಕೋಡಿಯ ಅಧ್ಯಕ್ಷರಾದ ಕೋಡಿ ಗೋಪಾಲ ಪೂಜಾರಿ ಅಭಿಪ್ರಾಯಪಟ್ಟರು.   ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಇಲ್ಲಿನ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ನಡೆದ ಪುಸ್ತಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಗಂಗೊಳ್ಳಿಯ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿಗಳಾದ ರಘುನಾಥ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ  ಪ್ರವೀಣ್ ಪೂಜಾರಿ ಶುಭ ಹಾರೈಸಿದರು. ಉದ್ಯಮಿ ಶಶಿಕಾಂತ್ ಗಂಗೊಳ್ಳಿ,  ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಜಿ. ಎ. ಆರ್ ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೈನಿಕರಿಗೆ ನಮನಗಳನ್ನು ಸಲ್ಲಿಸಲಾಯಿತು. ಕಳೆದ ಬಾರಿಯ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ಬಿಲ್ಲವ ಸಮುದಾಯದ  ಅಪೇಕ್ಷಾ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಈಬಿಸ್‌ಸಿಒ ಇಂಜಿನಿಯರಿಂಗ್ ಸೂಟ್ ಎಎಂಎ ಮೈಕ್ರೋ ಕೋರ್ಸುಗಳು ಮತ್ತು ಐಇಇಇ ಮೇಲೆ ಕೇಂದ್ರೀಕರಿಸಿ ವಿಟಿಯು ಕನ್ಸೋರ್ಟಿಯಮ್ ತರಬೇತಿ ಕಾರ್ಯಗಾರ ನಡೆಯಿತು. 6ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರಿಗೆ ಸಂಶೋಧನಾ ಕೌಶಲ್ಯ ಮತ್ತು ವೃತ್ತಿಪರ ಅಭಿವೃದ್ಧಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿ ಸಲಾಯಿತು. ಈಬಿಸ್‌ಸಿಒ – ಐಇಇಇ ದಕ್ಷಿಣ ಭಾರತದ ತರಬೇತಿ ವ್ಯವಸ್ಥಾಪಕ ಎಂ. ಎಸ್ ಶ್ರೀನಿವಾಸ ನೇತೃತ್ವ ವಹಿಸಿದ್ದರು. ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಮ್ ಅವರು ವಹಿಸಿ, ಕಾರ್ಯಗಾರವನ್ನು ಉದ್ಘಾಟಿಸಿದರು. ಐಇಇಇ ನ ಸದಸ್ಯರಾಗಿರುವ ಅವರು ವಿ. ಟಿ. ಯು ಕನ್ಸೋರ್ಟಿಯಂ ವತಿಯಿಂದ ಲಭ್ಯವಿರುವ ಎಲ್ಲ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮಾರ್ಗದರ್ಶನ ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿಸೋಜಾ ಹಾಗೂ ಗ್ರಂಥಾಪಾಲರಾದ ಶ್ಯಾಮ್ ನಾಯ್ಕ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಶ್ರೀನಿಧಿ ರಾವ್ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಎಸ್. ಎಸ್. ಎಲ್. ಸಿ. ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಶೇಕಡಾ 95 ಕ್ಕಿಂತ ಅಧಿಕ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕಾಗಿ ಸಹಾಯಧನ ನೀಡಲಾಗುತ್ತದೆ. ಕುಂದಾಪುರ ತಾಲೂಕಿನ ವಿದ್ಯಾರ್ಥಿಗಳು ಕುಂದಾಪುರದ ವೆಸ್ಟ್ ಬ್ಲಾಕ್ ರಸ್ತೆಯ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿರುವ ’ಕುಂದಪ್ರಭ’ಕಛೇರಿಯಿಂದ ಅರ್ಜಿ ಮೇ 21 ರಿಂದ ಪಡೆದು ಅಂಕಪಟ್ಟಿಯೊಂದಿಗೆ, ಕಾಲೇಜು ಸೇರ್ಪಡೆಗೊಂಡ ದಾಖಲಾತಿ ಅಥವಾ ಶುಲ್ಕ ಪಾವತಿ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ 31-05-025. ಎಸ್. ಎಸ್. ಎಲ್. ಸಿ. ಹಾಗೂ ಪಿಯಸಿಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ, ದ್ವಿತೀಯ, ತೃತೀಯ ರ್ಯಾಂಕ್‌ ಪಡೆದ ವಿದ್ಯಾರ್ಥಿಗಳು ಪ್ರಾಂಶುಪಾಲರ ಪತ್ರದೊಂದಿಗೆ ದಾಖಲೆ ಒದಗಿಸಿದ್ದಲ್ಲಿ ಅವರನ್ನು ಗೌರವಿಸಲಾಗುತ್ತದೆ. ಮಂಗಳೂರು ವಿ. ವಿ. ಯಿಂದ ಪದವಿ ಪರೀಕ್ಷೆಯಲ್ಲಿ ರ್ಯಾಂಕ್‌ ಪಡೆದವರೂ ಮಾಹಿತಿ ನೀಡಬಹುದು ಎಂದು ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‌ನ ಕಾರ್ಯದರ್ಶಿ ಯು.…

Read More