Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೋಂದಾಶ್ರೀ ಸ್ವರ್ಣವಲ್ಲೀ ಮಠದವರು ನಡೆಸುವ ಶ್ರಿ ಭಗವದ್ಗೀತಾ ಅಭಿಯಾನದ ಅಂಗವಾಗಿ ಕುಂದಾಪುರದ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಭಗವದ್ಗೀತೆಯ ಶ್ಲೋಕ ಕಂಠಪಾಠ ಸ್ಪರ್ಧೆ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಈ ಸ್ಪರ್ಧೆಗಳಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಿಂದ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಪ್ರಾಂಜಲಿ ಭಟ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್., ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಈಕೆಯ ಸಾಧನೆಗೆ ಅಭಿನಂದಿಸಿ, ಹುರಿದುಂಬಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿ ’ರಾಷ್ಟ್ರೀಯ ದತ್ತು ಮಾಸಾಚರಣೆ’ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವುಗಳ ಆಶ್ರಯದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯೋಜನೆಯಲ್ಲಿ ’ಕಾನೂನು ಬದ್ಧ ದತ್ತು’ ಕುರಿತು ಜಾಗೃತಿ ಮತ್ತು ಕಿರು ನಾಟಕ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಜಾತ ವಾಸುದೇವ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ಧರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರತ್ನ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಅವರು ಕಾನೂನು ಬದ್ಧ ದತ್ತು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶಾರದಾ ವೈ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರದಂದು ಐಕ್ಯೂಎಸಿ ಮತ್ತು ರಾಜ್ಯಶಾಸ್ತ್ರ ವಿಭಾಗ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಭಂಡಾರ್‌ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜು ಇಲ್ಲಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಭಾರತ ಸಂವಿಧಾನವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನ ಪಡೆದಿದ್ದು, ಹಲವು ದಾಖಲೆಗಳಿಗೆ ಪಾತ್ರವಾಗಿದೆ. ಭಾರತದಂತಹ ನೂರಾರು ಜಾತಿ, ಹತ್ತಾರು ಧರ್ಮ, ವೈವಿಧ್ಯಮಯವಾದ ಸಂಸ್ಕೃತಿ ಆಚರಣೆಗಳಿಂದ ಕೂಡಿರುವ ದೇಶಕ್ಕೆ ಸಂವಿಧಾನ ರೂಪಿಸುವುದು ಸವಾಲಿನ ಕೆಲಸವಾಗಿದ್ದರೂ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಗಮನಾರ್ಹ ಸ್ಥಾನ ಪಡೆದಿದೆ. ಅದಕ್ಕೆ ಕಾರಣ ನಮ್ಮ ಸಶಕ್ತವಾದ ಸಂವಿಧಾನ ದೇಶದಲ್ಲಿ ಸರ್ಕಾರ ಆಡಳಿತ ವ್ಯವಸ್ಥೆ ಯಾವ ರೀತಿ ಇರಬೇಕು ಅದಕ್ಕಾಗಿ ಯಾವ ರೀತಿಯಾಗಿ ಕಾನೂನು, ನಿಯಮಗಳು ಇರಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಿತಿಯ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭ ನಡೆಯಿತು. ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯ ಕುಮಾರ್ ಶೆಟ್ಟಿ, ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಖಜಾಂಚಿ ಎನ್. ಅಶ್ವಿನ್ ನಾಯಕ್, ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಜಿ.ವಿಠಲ ಶೆಣೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ, ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೀಕ್ಷಿತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಸ್ಪರ್ಧೆಯ ಫಲಿತಾಂಶ:ಆರ್ಟಿಸ್ಟಿಕ್ ಪೇರ್: ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಪೃಥ್ವಿಚಾರ್ – ಪ್ರಥಮ ಸ್ಥಾನಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಸಂಜನಾ ಮತ್ತು ಕವನ – ದ್ವಿತೀಯ ಸ್ಥಾನರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಪೃಥ್ವಿಚಾರ್ ಮತ್ತು ಕುಮಾರ್ – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಕವನ ಮತ್ತು ಅನನ್ಯ – ಪ್ರಥಮ ಸ್ಥಾನಆರ್ಟಿಸ್ಟಿಕ್ ಸಿಂಗಲ್ : ಬಾಲಕರ ವಿಭಾಗದಲ್ಲಿ ಕುಮಾರ್ – ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ ಆಳ್ವಾಸ್‌ನ ಐವರು ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹಾಗೂ ಸಂಜಯ ಗಾಂಧಿ ಶಿಕ್ಷಣ ಸಂಸ್ಥೆ ಅಂಪಾರು ಇವರ ಸಹಯೋಗದಲ್ಲಿ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ನಡೆದ 2025 – 2026ನೇ ಸಾಲಿನ ಅಂಪಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸಂಜಯ್ ಗಾಂಧಿ ಇಂಗ್ಲಿಷ್ ಮೀಡಿಯಂ ಸ್ಕೂಲಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪ್ರಥಮ ಸ್ಥಾನ ಪಡೆದ 15 ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿರುತ್ತಾರೆ. 9 ದ್ವಿತೀಯ ಬಹುಮಾನ ಹಾಗೂ 10 ತೃತೀಯ ಬಹುಮಾನಗಳೊಂದಿಗೆ ಒಟ್ಟಾರೆ 34 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಅಂಪಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಸೂಕ್ತ ಪ್ರತಿಭೆಗಳನ್ನು ವ್ಯಕ್ತಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ವಿದ್ಯಾರ್ಥಿಗಳಿಗೆ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ , ಶಾಲಾ ಆಡಳಿತಾಧಿಕಾರಿ, ಮುಖ್ಯೋಪಾಧ್ಯಾಯಿನಿ, ಬೋಧಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2025-2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಬುಧವಾರ ಆಯೋಜಿಸಲಾಯಿತು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಸುಜಾತಾ ಸದಾರಾಮ ಅವರು ಧ್ವಜಾರೋಹಣದ ಮೂಲಕ ಕಾರ್ಯಕ್ರಮವನ್ನು ಚಾಲನೆಗೊಳಿಸುವುದರ ಜೊತೆಗೆ ಕ್ರೀಡೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಪ್ರಾಥಮಿಕ ವಿಭಾಗದ ಮಕ್ಕಳು ಉತ್ಸಾಹದಿ೦ದ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಈ ವಾರ್ಷಿಕ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕರಾದ ಕೃಷ್ಣ ಹುಲ್ಲಾಲ್ ಹಾಗೂ ಲತಾ ಗೌಡ ಅವರು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸುವಲ್ಲಿ ಮಾರ್ಗದರ್ಶನ ನೀಡಿದರು. ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿಯಾದ ಜೆ. ರೂಪಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಐರೋಡಿ ಗ್ರಾಮ ಪಂಚಾಯತ್ ವತಿಯಿಂದ ವಿಕಲಚೇತನರ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಸಕ್ಕು ಅವರ ಅಧ್ಯಕ್ಷತೆಯಲ್ಲಿ ಜರಗಿತು. ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಧುಸೂದನ್‌ರಾವ್ ಅವರು ವಿಕಲಚೇತನರಿಗೆ ಸರ್ಕಾರದ ವಿವಿಧ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ನಿಂದ ಸಿಗುವ ಸೇವಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್, ಪಿಡಿಓ ಪ್ರಶಾಂತ, ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸಂಘದವರು ಹಾಗೂ ಸಿಬ್ಬಂದಿಯವರು ವಿ.ಆರ್.ಡಬ್ಲೂ ವಿಕಲಚೇತನರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಇದೇ ವೇಳೆ ವಿಕಲಚೇತನರಿಗೆ ಗ್ರಾಮ ಪಂಚಾಯತ್‌ನಿಂದ ಸಹಾಯಧನ ವಿತರಿಸಲಾಯಿತು. ಗ್ರಾಮ ಪಂಚಾಯತ್ ಕಾರ್ಯದರ್ಶಿ ವಿಜಯಾ ಸ್ವಾಗತಿಸಿ, ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದ.ಉಡುಪಿ: ಸರಕಾರದ ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಹಾಗೂ ವಿಚಾರಧಾರೆಗಳು ಜನಸಾಮಾನ್ಯರಿಗೆ ತಲುಪಿದಾಗ ಮಾತ್ರ ಆ ಯೋಜನೆಗಳು ಫಲಪ್ರದವಾಗುತ್ತವೆ. ಗ್ಯಾರಂಟಿ ಯೋಜನೆಗಳು ಸರಕಾರದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತಂತೆ ಕಲಾಜಾಥಾ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂವಿಧಾನದ ಆಶಯದಂತೆ ದೇಶದ ಜನಸಾಮಾನ್ಯರಿಗೆ ಸಮಾನತೆಯನ್ನು ಕಲ್ಪಿಸುವ ದೃಷ್ಠಿಯಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ, ಜಾರಿಗೆ ತರಲಾಗಿದೆ. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡಿದೆ ಎಂದ ಅವರು, ಜಿಲ್ಲೆಯ ಅರ್ಹ ಪ್ರತಿಯೊಬ್ಬರಿಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಶ್ರೀ ಸೊಂದ ಸ್ವರ್ಣವಲ್ಲಿ ಮಹಾಸಂಸ್ಥಾನ ಮತ್ತು ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ  ಶಿರಸಿ ಮಠ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಭಗವದ್ಗೀತಾ ಅಭಿಯಾನ ಸ್ಪರ್ಧೆಯ ಅಂಗವಾಗಿ ನಡೆದ ‘ಭಗವದ್ಗೀತೆ ಮನ ಸ್ವಾಸ್ತ್ಯದ ಕೈಪಿಡಿ’ ಎಂಬ ವಿಷಯದ ಕುರಿತು ನಡೆದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ಪ್ರಥಮ ಸ್ಥಾನ ಗಳಿಸಿ ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರ ಯಶಸ್ಸಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ತಂಡ ಹೃತ್ಪೂರ್ವಕ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇನ್ನೂ ದೊಡ್ಡ ಮಟ್ಟದ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.

Read More