Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಂಜೀವ ಪೂಜಾರಿ ಎಂಬ ಕಲಾ ಶಕ್ತಿ ಗ್ರಾಮೀಣ ಭಾಗದಲ್ಲಿ ಕಲಾಸಕ್ತಿಯ ಕೇಂದ್ರವಾಗಿಸಿ ಯುವ ಸಮೂಹಕ್ಕೆ ದಾರಿದೀಪವಾಗಿದೆ ಎಂದು ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಸೋಮವಾರ ಕೋಟದ ಕದ್ರಿಕಟ್ಟು ಊರ ಹತ್ತು ಸಮಸ್ತರಿಂದ ವರ್ಷಂಪ್ರತಿ ನಡೆಸಲ್ಪಡುವ 35ನೇ ವರ್ಷದ ಶ್ರೀ ಕ್ಷೇತ್ರ ಅಮೃತೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಯಕ್ಷಗಾನ, ಸತ್ಯನಾರಾಯಣ ಪೂಜಾ ಕಾರ್ಯಕ್ರಮ, ರಂಗಕರ್ಮಿ ಕಲಾವಿದ ಕದ್ರಿಕಟ್ಟು ಸಂಜೀವ ಪೂಜಾರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಜೀವ ಕದ್ರಿಕಟ್ಟು ಅಪ್ರತಿಮಾ ಕಲಾವಿದನಾಗಿ ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ ಎಂದರು. ಈ ವೇಳೆ ಅಮೃತೇಶ್ವರೀ ಮೇಳದ ಸ್ತ್ರೀ ವೇಷಧಾರಿ ಮಾಧವ ಜೋಗಿ ನಾಗೂರು ಅವರಿಗೆ ಕದ್ರಿಕಟ್ಟು ಸಂಜೀವ ಪೂಜಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕಲಾವಿದ ಕೋಟ ಸುರೇಶ್ ಬಂಗೇರ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದದಲ್ಲಿ ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಮ್ಮ ದೇಶ ಸಾಂಸ್ಕೃತಿಕವಾಗಿ ಗಟ್ಟಿ ನೆಲೆಯಾಗಿ ಕಲಾವಿದರ ಸೃಷ್ಠಿಯ ತಾಣವಾಗಿದೆ ಎಂದು ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ  ಎಚ್. ಸುಜಯೀಂದ್ರ ಹಂದೆ ಹೇಳಿದರು. ಕೋಟತಟ್ಟು ಪಡುಕರೆ ಅರಮ ದೇಗುಲದ ಸಮೀಪ ಟೀಮ್ ಭವಾಬ್ಧಿ ಪಡುಕರೆ ಇವರ ಐದನೇ ವರ್ಷದ ವರ್ಷೋತ್ಸವ ಕಡಲೂರ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿ ಮಾತನಾಡಿದರು. ದೇಶದ ಯಾವುದೇ ವ್ಯವಸ್ಥೆಯನ್ನು ಹಾಳುಗೆಡವ ಬಹುದು ಆದರೆ ಇಲ್ಲಿನ ಸಂಸ್ಕ್ರತಿ ನಾಶಮಾಡಲು ಯಾರಿಂದಲೂ ಸಾಧ್ಯವಿಲ ಇದು ಶ್ರೀಮಂತ ಪರಂಪರೆಯ ದೇಶವಾಗಿದೆ,ಕರಾವಳಿ  ಸಂಘ ಸಂಸ್ಥೆಗಳ ತವರೂರಾಗಿ ಸಾಕಷ್ಟು ಸಮಾಜಮುಖಿ ಕಾರ್ಯಗಳಿಗೆ ವೇದಿಕೆ ಕಲ್ಪಿಸಿದೆ, ಕಲಾವಿದರಿಗೆ ಗರ್ವವಿರಬಾರದು ಗರ್ವ ಇದ್ದವರು ಕಲಾವಿದರಾಗಿ ಉಳಿಯಲು ಸಾಧ್ಯವಿಲ್ಲಾ ಎಂದರು. ಈ ವೇಳೆ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅವರು ಭಾಗವತ, ಭಜಕ ಪ್ರಶಾಂತ್ ಪಡುಕರೆ ಅವರಿಗೆ ಕಡಲೂರ ಸನ್ಮಾನ ನೀಡಿ ಗೌರವಿಸಿದರು. ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ವಾಟರ್ ಫಿಲ್ಟರ್ ನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಸಭೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಡೂರಿನ ಶ್ರೀವಾಣಿ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಶ್ರೀ ಕಾಳವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಾತಕೋತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ರಾಷ್ಟ್ರೀಯ ಸೇವಾ ಯೋಜನೆ ಇದರ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಕಾವಿ ಕಲೆಯ ಕುರಿತು ಪರಿಚಯ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಕಲಾವಿದರಾದ ಜನಾರ್ದನ ಹಾವಂಜೆ ಅವರು ಈ ಕಲೆಯ ವಿಶಿಷ್ಟತೆ, ಇತಿಹಾಸ ಮತ್ತು ಸಮಕಾಲೀನ ಸಂದರ್ಭದಲ್ಲಿ ಅದರ ಸಂರಕ್ಷಣೆಯ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಪಾರಂಪರಿಕವಾದ ಈ ಕಲೆಯ ಕುರಿತು ಅಧ್ಯಯನ ಮತ್ತು ಸಂಶೋಧನೆ ನಡೆಸಿರುವ ಜನಾರ್ದನ ಹಾವಂಜೆ ಅವರು ಚಿತ್ರಕಲೆಯ ವಿವಿಧ ಪ್ರಕಾರಗಳಲ್ಲಿ ಕಾವಿ ಕಲೆಯ ವೈಶಿಷ್ಟ್ಯ ಮತ್ತು ವಿಭಿನ್ನತೆಯ ಕುರಿತು ಮಾತನಾಡಿದರು. ಕಲೆಯ ಕುರಿತಾದ ಆಸಕ್ತಿಗಳನ್ನು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಸೌಂದರ್ಯ ಪ್ರಜ್ಞೆ, ನಾಗರಿಕ ಪ್ರಜ್ಞೆಯನ್ನು ಮೂಡಿಸುವಲ್ಲಿ ಸಹಕಾರಿ ಆಗಬಲ್ಲದು ಎಂದರು. ಲಲಿತ ಕಲೆಗಳ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಸಾಧ್ಯತೆಯ ಕುರಿತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಪ್ರತಿಷ್ಠಿತ ಇನ್ ಸ್ಪಾಯರ್ ಅವಾರ್ಡ್‌ಗೆ ಉಡುಪಿ ಜಿಲ್ಲೆಯ ಐದು ತಾಲೂಕುಗಳಲ್ಲಿ 196 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅದರಲ್ಲಿ 53 ವಿದ್ಯಾರ್ಥಿಗಳು ಕುಂದಾಪುರ ವಲಯದಿಂದ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಇನ್ ಸ್ಪಾಯರ್ ಅವಾರ್ಡ್‌ಗೆ ಮದರ್ ತೆರೇಸಾ ಶಾಲೆಯ ಹೈಸ್ಕೂಲ್ ವಿಭಾಗದ 9ನೇ ತರಗತಿಯ ಮೋಕ್ಷಿತ್ ವಿ. ಶೆಟ್ಟಿ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ಕಿಶನ್ ಶೆಟ್ಟಿ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಗಳಿಗೆ ಮದರ್ ತೆರೇಸಾ ಶಾಲೆಯ ವಿಜ್ಞಾನ ಶಿಕ್ಷಕಿಯರಾದ ಮೆಲಿಶಾ ಹಾಗೂ ಗ್ರೇಸಿಯವರು ಮಾರ್ಗದರ್ಶನ ನೀಡಿರುತ್ತಾರೆ. ಈ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತಮಂಡಳಿ, ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿಗಳು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಪ್ರಸ್ತುತ ರಾಜ್ಯದಲ್ಲಿ ಎಪಿಎಲ್ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿ ಅನುಮೋದನೆಗೆ ಬಾಕಿ ಇರುವ ಹಾಗೂ  ಪ್ರಸ್ತುತ ಪಡಿತರ ಚೀಟಿ ಅರ್ಜಿ ಹಾಕಿದ ನಂತರ ಸಕಾಲದಲ್ಲಿ ಪಡಿತರ ಚೀಟಿ ದೊರಕದೇ ಇರುವ ಕಾರಣ ಅರ್ಜಿದಾರರು ವಿವಿಧ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಕೇಳಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್ ಮುನಿಯಪ್ಪ ರವರು ಉತ್ತರಿಸಿ ರಾಜ್ಯದಲ್ಲಿ ದಿನಾಂಕ :22-02-2026 ರ ಅಂತ್ಯಕ್ಕೆ ಎಪಿಎಲ್ ಪಡಿತರ ಚೀಟಿ ಕೋರಿ 1,38,778 ಅರ್ಜಿಗಳು ಬಾಕಿ ಇರುವುದಾಗಿದೆ. ಹಾಗೂ ಸರ್ಕಾರದ ಆದೇಶ ಸಂಖ್ಯೆ ಆನಾಸ 211 ಡಿಆರ್ ಎ 2021 ದಿನಾಂಕ : 29-09-2023 ರಲ್ಲಿ ಎಪಿಎಲ್ ಪಡಿತರ ಚೀಟಿಗಳನ್ನು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಅನುಮೋದನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಒಬ್ಬಂಟಿಯಾಗಿ ವಾಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಜೂರು ಗ್ರಾಮದ ಸಾಲಿಮಕ್ಕಿಯಲ್ಲಿ ಸಂಭವಿಸಿದೆ. ಉಪ್ಪುಂದ ನಿವಾಸಿ ಕೃಷ್ಣ ಗಾಣಿಗ (67) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಸಂಶಯಿಸಲಾಗಿದೆ. ಅವರ ಪತ್ನಿ, ಮಕ್ಕಳು ಉಡುಪಿಯಲ್ಲಿ ನೆಲೆಸಿದ್ದರು. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೈಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಹಳಿಗೆ ಬಿದ್ದ ಜಾರ್ಖಂಡ್ ಮೂಲದ ಹುಡುಗ ಸಾವನ್ನಪ್ಪಿದ ಘಟನೆ ಕುಂದಬಾರಂದಾಡಿ ಗ್ರಾಮದ ತೊರೊಳ್ಳಿ ಎಂಬಲ್ಲಿ ಇತ್ತೀಚಿಗೆ ಸಂಭವಿಸಿದೆ. ಜಾರ್ಖಂಡ್ ಮೂಲದ ರಂಗ ಬಾಜ್ ಅನ್ಸಾರಿ (16) ಸಾವನ್ನಪ್ಪಿರುವುದಾಗಿ ಆ ವ್ಯಕ್ತಿಯ ಕಿಸೆಯಲ್ಲಿದ್ದ ದಾಖಲೆಗಳಿಂದ ತಿಳಿದು ಬಂದಿದೆ. ಈತ ಜಾರ್ಖಂಡ್ ನಿಂದ ಮಂಗಳೂರಿಗೆ ಹೋಗುವ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಕುಂದಬಾರಂದಾಡಿ ಗ್ರಾಮದ ಚಕ್ರ ಸೇತುವೆಯ ಮೇಲೆ ಹಾದು ಹೋಗಿರುವ ತೊರೊಳ್ಳಿ ಎಂಬಲ್ಲಿರುವ ರೈಲು ಹಳಿಯಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯ ಮಧ್ಯದ ಅವಧಿಯಲ್ಲಿ ರೈಲು ಸಂಚರಿಸುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆAಟ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಹಾಗೂ ಇಂಟರ್‌ಮೀಡಿಯಟ್ ಗ್ರೂಪ್ I ರ ಜನವರಿ 2026ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಬಾಲಕೃಷ್ಣ ಭಟ್, ಇಂಚರ, ವಿಕಾಸ್, ಶಶಾಂಕ ಆರ್. ಭಟ್, ಸಂಜನಾ, ಬಿಂದುಶ್ರೀ, ಆಕಾಶ್ ಎಮ್.ಎಮ್., ಸಿ.ಎ. ಫೌಂಡೇಶನ್‌ನಲ್ಲಿ ಹಾಗೂ ಪ್ರಜ್ವಲ್ ಎಸ್. ನಾಯಕ್ ಸಿ.ಎ. ಇಂಟರ್‌ಮೀಡಿಯಟ್ ಗ್ರೂಪ್ I ರಲ್ಲಿ ಉತ್ತೀರ್ಣವಾಗುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌  ಕಾಂ ಸುದ್ದಿ.ಕುಂದಾಪುರ: ಕೇಂದ್ರ ಬಜೆಟ್ 2026-27ರ ರೈಲ್ವೆ ಅನುದಾನ ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಹಾಗೂ ಮಲೆನಾಡು ಭಾಗದ ದಶಕಗಳ ರೈಲ್ವೆ ಕನಸುಗಳನ್ನು ನನಸಾಗಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಮತ್ತೊಮ್ಮೆ ಕ್ಷೇತ್ರದ ಅಭಿವೃದ್ಧಿಗಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ‘ವಿಳಂಬ ಗತಿಯಿಂದ, ಅತಿ ವೇಗದ ವಿತರಣೆಯ’ ಯುಗಕ್ಕೆ ಕಾಲಿಟ್ಟಿದೆ ಎಂದು ಶ್ಲಾಘಿಸಿದ ಸಂಸದರು, ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಬಾರಿ ದಾಖಲೆಯ 7,748 ಕೋಟಿ ರೂ. ಅನುದಾನ ನೀಡಿದ್ದಕ್ಕಾಗಿ ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಹಿಂದಿನ ಯುಪಿಎ ಸರ್ಕಾರಕ್ಕೆ ಹೋಲಿಸಿದರೆ ಕರ್ನಾಟಕಕ್ಕೆ ಸಿಗುತ್ತಿರುವ ರೈಲ್ವೆ ಅನುದಾನದಲ್ಲಿ ಒಂಬತ್ತು ಪಟ್ಟು ಹೆಚ್ಚಳವಾಗಿದೆ ಎಂದು ಅವರು ಅಂಕಿ-ಅಂಶಗಳ ಸಮೇತ ವಿವರಿಸಿದರು. ಪ್ರಮುಖವಾಗಿ, ಶಿವಮೊಗ್ಗ-ತೀರ್ಥಹಳ್ಳಿ-ಶೃಂಗೇರಿ-ಮಂಗಳೂರು ಮಾರ್ಗದ ಶೀಘ್ರ ಅನುಷ್ಠಾನ ಹಾಗೂ ಬೈಂದೂರಿಗೆ ಸಂಬಂಧಪಟ್ಟಂತೆ ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಬದ್ಧತೆಯ ಭಾಗವಾಗಿ, ಸಂಸದರು…

Read More