Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕೊಣಾಜೆಯ ಮಂಗಳಗಂಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆ ‘ವೇವ್ಸ್ 2025ರಲ್ಲಿ ಸಂಗೀತ, ರಂಗಕಲೆ, ನೃತ್ಯ, ಹಾಗೂ ಸಾಹಿತ್ಯ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು, ಎಲ್ಲಾ ಐದು ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮೆರೆದು ಸತತ 24 ವರ್ಷ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಒಟ್ಟು ನಡೆದ 27 ಸ್ಪರ್ಧೆಗಳಲ್ಲಿ 16 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನದೊಂದಿಗೆ ಒಟ್ಟು 22 ಸ್ಥಾನಗಳಲ್ಲಿ ಪ್ರಶಸ್ತಿಯನ್ನು ಗಳಿಸಿ ಈ ಸಾಧನೆ ಮೆರೆದಿದೆ. ಪ್ರಥಮ ಸ್ಥಾನ:ಹಿಂದಿ ಭಾಷಣ-ವಿನಿಟ್ ವಾಝ್ (ಪ್ರಥಮ), ಇಂಗ್ಲೀಷ್ ಚರ್ಚೆ- ವೈಭವ್ ಯು ಹಾಗೂ ಸಾತ್ವಿಕ್ ಸುವರ್ಣ ( ಪ್ರಥಮ), ಹಿಂದಿ ಚರ್ಚೆ- ವೈಭವ್ ಯು ಹಾಗೂ ವಿನಿಟ್ ವಾಝ್ (ಪ್ರಥಮ), ಏಕಾಂಕ ನಾಟಕ (ಪ್ರಥಮ), ಕಿರು ಪ್ರಹಸನ (ಪ್ರಥಮ), ಕ್ಲೇ ಮಾಡೆಲಿಂಗ್- ಶ್ರೀಧರ್ (ಪ್ರಥಮ), ಶಾಸ್ತ್ರೀಯ ಸಂಗೀತ ವೈಯಕ್ತಿಕ- ಆಶ್ವೀಜಾ ಉಡುಪ(ಪ್ರಥಮ), ನಾನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ರಿ. ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ನಡೆಸಲಾದ ಜ್ಞಾನ ರಥ ಎನ್ನುವ ನೈತಿಕ ಮೌಲ್ಯಾಧಾರಿತ ಪುಸ್ತಕದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಖಾರ್ವಿಕೇರಿ ಗಂಗೊಳ್ಳಿಯ 7ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶೈಕ್ಷಣಿಕ ಕ್ಷೇತ್ರದಲ್ಲಿ ವಿವೇಕ ವಿದ್ಯಾಸಂಸ್ಥೆಯ ಹೆಮ್ಮೆ ವಿದ್ಯಾದೇಗುಲ ಇಲ್ಲಿನ ಶಿಕ್ಷಣ ಗುಣಮಟ್ಟ ಅದ್ಭುತವಾದದ್ದು ಎಂದು ಕನ್ನಡದ ಚಿತ್ರನಟಿ ಶೀತಲ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕೋಟ ವಿದ್ಯಾಸಂಘ, ಕೋಟ ವಿವೇಕ ವಿದ್ಯಾಸಂಸ್ಥೆಗಳು, ಕೋಟ ವಾರ್ಷಿಕೋತ್ಸವದ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣದಲ್ಲಿ ವಿವಿಧ ಸ್ತರಗಳ ಬಗ್ಗೆ ಚಿಂತಿಸುತ್ತೇವೆ ಆದರೆ ಮುಂದೆ ಹೋದಾಗ ನಮ್ಮಲ್ಲಿರುವ ಕೌಶಲ್ಯ ಕೆಲಸ ಮಾಡುತ್ತದೆ ಅದೇ ಮುಂದೆ ನಮ್ಮ ದಾರಿಯನ್ನು ಸುಲಲಿತಗೊಳಿಸುತ್ತದೆ, ಆಯ್ಕೆ ಮಾಡಿಕೊಂಡ ವಿದ್ಯಾಕ್ಷೇತ್ರ ಹೊರತುಪಡಿಸಿ ನಮ್ಮ ಜೀವನ ಆಯ್ಕೆ ಬೇರೆಯದ್ದೆ ಆಗಿರುತ್ತದೆ. ನಿಮ್ಮಲ್ಲಿರುವ ಸ್ಕೀಲ್ ಇದ್ದರೆ ನಿಮ್ಮನ್ನು ಬಹು ಎತ್ತರಕ್ಕೆ ಕೊಂಡ್ಯೋಯುತ್ತದೆ. ನಮ್ಮ ಆಯ್ಕೆ ನಮ್ಮ ಜೀವನದ ತಳಹದಿಯನ್ನು ಗಟ್ಟಿಗೊಳಿಸುವ ಹಾಗೇ ಮುನ್ನಡೆಯಬೇಕು. ನಿಮ್ಮಲ್ಲಿರು ಅಗಾಧವಾದ ಪ್ರತಿಭೆಗಳನ್ನು ಹೊರ ಚುಮ್ಮಿಸಲು ಪ್ರಯತ್ನಿಸಿ ಆಗ ನಿಮ್ಮ ಬದುಕಿನಲ್ಲಿ ಸಾರ್ಥಕ್ಯ ಕಾಣಲು ಸಾಧ್ಯ. ಜೀವನದಲ್ಲಿ ಸೋಲು ಗೆಲುವು ಇದದ್ದೆ ಸೋತ್ತಿದ್ದೇನೆ ಎಂಬ ಭ್ರಮೆಯಿಂದ ಹೊರಬನ್ನಿ. ಭವಿಷ್ಯದ ಭದ್ರ ಬುನಾದಿಗೆ ಪ್ರೇರಕ ಶಕ್ತಿಯಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ ನೆನಪು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ‘ಆವಿಷ್ಕಾರ ಅಂಗಳ – 2K25’ ಇದರಲ್ಲಿ ಭಾಗವಹಿಸಿದ ಕಿರಿಮಂಜೇಶ್ವರ ಜನತಾ ಇಂಗ್ಲಿಷ್ ಮೀಡಿಯಂ ಶಾಲೆ ವಿಜ್ಞಾನ ಮಾದರಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ತಾಲೂಕು ಮಟ್ಟದ ಪ್ರಶಸ್ತಿಯನ್ನು ತನ್ನ ತೆಕ್ಕೆಗೇರಿಸಿಕೊಂಡಿದೆ. ಯುವ ವಿಜ್ಞಾನಿಗಳಾದ ಮೊಹಮ್ಮದ್ ಅಶ್ರಫ್ ಒಂಬತ್ತನೇ ತರಗತಿ ಹಾಗೂ ಶ್ರೀಶಾಂತ್ ಒಂಬತ್ತನೇ ತರಗತಿ ಅವರು ತಯಾರಿಸಿದ ಸ್ಮಾರ್ಟ್ ಸಿಟಿ ಎಂಬ ಮಾದರಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕಿ ರಕ್ಷ ಅವರು ಮಾರ್ಗದರ್ಶನವನ್ನು ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದಂತಹ ಗಣೇಶ ಮೊಗವೀರ ಹಾಗೂ ಶಾಲಾ ಮುಖ್ಯ ಶಿಕ್ಷಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪೂರ್ಣಿಮಾ ಜೋಗಿ ಅವರು ಮಲೇಷ್ಯಾದ ಕ್ವಾಲಾಲಂಪುರದಲ್ಲಿ ಇತ್ತೀಚಿಗೆ ನಡೆದ ಮಿಸಸ್ ಕ್ಲಾಸಿಕ ಯುನಿವರ್ಸ್ ಪ್ರತಿಭಾ ಪ್ರದರ್ಶನ ಸ್ಪರ್ಧೆಯ ಅಂತಿಮ 10ರಲ್ಲಿ ಸ್ಥಾನ ಪಡೆಯುವ ಮೂಲಕ ʼಕ್ಲಾಸಿಕ್ ಗ್ಲೋಬ್ʼ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಿಸಸ್ ಇಂಡಿಯಾ ಕ್ಲೀನ್ ಆಫ್ ಸಬ್‌ಸ್ಟಾನ್ಸ್ ಸ್ಪರ್ಧೆಯ ಫೈನಲ್ ಪ್ರವೇಶಿಸಿದ್ದ ಅವರು ನವದೆಹಲಿಯಲ್ಲಿ ನಡೆದ ಸ್ಪರ್ಧೆಯಲ್ಲಿ ’ಮಿಸಸ್ ಹಾನೆಸ್ಟಿ’ ಎನಿಸಿಕೊಂಡಿದ್ದರು. ಕ್ವಾಲಾಲಂಪುರದಲ್ಲಿ ಅಂತಿಮ ಸುತ್ತಿನಲ್ಲಿ ವಿವಿಧ ದೇಶಗಳ 20 ಮಂದಿ ಸ್ಪರ್ಧಿಸಿದ್ದರು. ಅವರು ಕೋಟದ ಅಮೃತೇಶ್ವರಿ ದೇಗುಲದ ಪ್ರಧಾನ ಅರ್ಚಕ ಲಲಿತಾ ನಾರಾಯಣ ಜೋಗಿಯವರ ಪುತ್ರಿಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕ್ರೀಡೆಯಲ್ಲಿ ಭಾಗವಹಿಸಲು ನಿರಂತರವಾದ ಅಭ್ಯಾಸ, ತರಬೇತಿ ಅವಶಕ್ಯ. ಇತ್ತೀಚಿನ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಪಾಠದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತಾಗಬೇಕು. ಶಿಕ್ಷಕರನ್ನು ಹಾಗೂ ಹೆತ್ತವರನ್ನು ಗೌರವಿಸಿ ಪ್ರೀತಿಸಿದರೆ ಉತ್ತಮ ವಿದ್ಯಾರ್ಥಿಗಳಾಗಿ ಬೆಳೆದು ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿದೆ. ಕ್ರೀಡಾಕೂಟದಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಉತ್ತಮ ಕ್ರೀಡಾಪಟುವಾಗಿ ಗುರುತಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಕುಂದಾಪುರ ಶ್ರೀ ಸೀತಾರಾಮ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುರೇಂದ್ರ ಕೊಠಾರಿ ಹೇಳಿದರು. ಅವರು ಎಸ್.ವಿ.ಎಸ್. ಅಸೋಸಿಯೇಶನ್ ಗಂಗೊಳ್ಳಿ ಪ್ರವರ್ತಿತ ಎಸ್.ವಿ. ಪದವಿಪೂರ್ವ ಕಾಲೇಜು, ಎಸ್.ವಿ. ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಗಳ ವಾರ್ಷಿಕ ಕ್ರೀಡಾಕೂಟವನ್ನು ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ವಿದ್ಯಾಸಂಸ್ಥೆಗಳ ಸಂಚಾಲಕ ಎನ್.ಸದಾಶಿವ ನಾಯಕ್ ಶುಭ ಹಾರೈಸಿದರು. ಎಸ್.ವಿ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಾರ್ಥನಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕುಡೂರು ಮನೆಯವರ ಯಜಮಾನಿಕೆಯ ಎಲ್ಲೂರು ಕಂಬಳ ಗುರುವಾರ ಸಂಜೆ ವೈಭವದಿಂದ ನಡೆಯಿತು. ಜಿಲ್ಲೆಯ ಹಿರಿಯ ಧಾರ್ಮಿಕ ಮುಖಂಡರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ನಡೆದ ಕಂಬಳ ಮಹೋತ್ಸವಕ್ಕೆ ಕುಡೂರು ಮನೆಯ ಯಜಮಾನರಾದ ರಾಮ್‌ಕಿಶನ್ ಹೆಗ್ಡೆ ಅವರು ಕೋಣದ ಮಾಲಿಕರಿಗೆ ತಾಂಬೂಲ ಗೌರವ ನೀಡುವ ಮೂಲಕ ಚಾಲನೆ ನೀಡಿದರು. ಶಾಸಕ ಗುರುರಾಜ್ ಗಂಟಿಹೊಳೆ, ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ರಾಮ್‌ರತನ್ ಹೆಗ್ಡೆ, ಅನುಪಮಾ ಎಸ್ ಶೆಟ್ಟಿ, ಪ್ರೀತಮ್ ಎಸ್ ರೈ, ಶ್ರೀಶಾ ರೈ, ವೈಷ್ಣಮಿ ಆರ್ ಹೆಗ್ಡೆ, ಸರ್ಜಿತ್ ಶೆಟ್ಟಿ ಕುಡೂರು, ಮೋಹನ್‌ದಾಸ್ ಶೆಟ್ಟಿ ಕುಡೂರು, ಎಂ.ಆರ್.ಶೆಟ್ಟಿ, ಎಂ.ರಘುರಾಮ್ ಶೆಟ್ಟಿ ಇದ್ದರು. ಉಡುಪಿ ಹಾಗೂ ಕಾರವಾರ ಜಿಲ್ಲೆಯ 48 ಜೊತೆ ಕೋಣಗಳು, ಕಂಬಳ ಗದ್ದೆಯಲ್ಲಿ ಓಟ ನಡೆಸಿದ್ದವು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಮಂಗಳೂರು ವಿಶ್ವವಿದ್ಯಾಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ರಾಜೇಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ಅಂತರ್ ಕಾಲೇಜು ಸಂಗೀತ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ ಇತ್ತೀಚೆಗೆ ಭಾರತೀಯ ಸಂಗೀತ ಕಲೆಯ ಕುರಿತು ಆಸಕ್ತಿ ಹೆಚ್ಚುತ್ತಿದೆ. ಸಂಗೀತಕ್ಕೆ ಜಾತಿ ಮತ ಪಂಥ ಮತ್ತು ಧರ್ಮ ಇವುಗಳ ಬೇಧವಿಲ್ಲ. ಸಂಗೀತ ಎಲ್ಲರೂ ಆಸಕ್ತಿ ಬೆಳೆಸಿಕೊಳ್ಳಬಹುದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಮೂಲಿನ ಸರಸ್ವತಿ ಸಂಗೀತ ಶಾಲೆಯ ನಿರ್ದೇಶಕರಾದ ಶಾರದಾ ಹೊಳ್ಳ ಮಾತನಾಡಿ, ಸಂಗೀತವು  ಚಿಂತೆ ಮರೆಸುವ ಕಲೆ. ಮನಸಿಗೆ ಸಂತೋಷ, ಸಮಾಧಾನ ಮತ್ತು ನೆಮ್ಮದಿಯನ್ನು ಕೊಡುತ್ತದೆ. ಈ ಹಿಂದೆ ಸಂಗೀತ ಕಲಿಯುವುದು ಕಷ್ಟ ಆಗಿತ್ತು. ಪ್ರಸ್ತುತ ಸಂಗೀತ ಮತ್ತು ಇತರ ಕಲೆಗಳನ್ನು ಕಲಿಯಲು ಸಾಕಷ್ಟು ಅವಕಾಶಗಳಿವೆ. ಉತ್ತಮ ಏಕಾಗ್ರತೆ ಪಡೆಯಲು ಯಾವುದೇ ಒಂದು ಕಲೆಯ ಕುರಿತು ಆಸಕ್ತಿ ಬೆಳೆಸಿಕೊಳ್ಳಿ ಎಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಭಂಡಾರ್ಕಾರ್ಸ್ ಪದವಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನಲ್ಲಿ ಮಕ್ಕಳಿಗೆ ಏರ್ಪಡಿಸಿದ ಸಾಂಸ್ಕ್ರತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂಭಾಶಿ ಬ್ಯಾಂಕ್ ಬರೋಡ ಮುಖ್ಯ ಪ್ರಬಂಧಕರಾದ ಬೇಳೂರು ಕರುಣಾಕರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಬಹುಮಾನ ವಿತರಣೆಯನ್ನು ಮಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶಾಲೆಯ ಉತೃಷ್ಠ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಗ್ರಾಮೀಣ ಪ್ರದೇಶದಲ್ಲಿ ಇರುವ ಇಂತಹ ಶಾಲೆಗಳಲ್ಲಿ ರಾಷ್ಟ್ರ, ಅಂತ ರಾಷ್ಟ್ರೀಯ ಮಟ್ಟದ ಪ್ರತಿಭೆಗಳು ಹುಟ್ಟಿಕೊಳ್ಳುತ್ತವೆ. ಇಂತಹ ಮಕ್ಕಳನ್ನು ಪ್ರೋತ್ಸಾಹಿಸಿ ಮುಂದಿನ ಸಾಧನೆಗೆ ಶಾಲೆ ಹಾಗೂ ಪೋಷಕರು ಸಹಕಾರಿಯಾಗಬೇಕೆಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಬಹುಮಾನ ಎನ್ನುವುದು ಮುಂದಿನ ಸಾಧನೆಗೆ ದಾರಿಯಾಗಬೇಕು ಹಾಗೂ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಚಿತ್ರ ಕಲಾ ಸ್ಪರ್ಧೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ಯುವ ಬಂಟರ ಸಂಘ, ಲಯನ್ ಕ್ಲಬ್ ಕುಂದಾಪುರ ಕೋಸ್ಟಲ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಡಾ. ಬಿ.ಬಿ ಹೆಗ್ಡೆ  ಪ್ರಥಮ ದರ್ಜೆ ಕಾಲೇಜು ಕುಂದಾಪುರ ಜಂಟಿಯಾಗಿ ಬೃಹತ್ ರಕ್ತದಾನ ಶಿಬಿರವು ಇಲ್ಲಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಿತು. ಶಿಬಿರವನ್ನು ಉತ್ತಮ್ ಹೋಮಿಯೋ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ. ಉತ್ತಮ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ವಹಿಸಿದ್ದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ ಶಾನಾಡಿ, ಗಿಳಿಯಾರು ಕುಶಲ್ ಹೆಗ್ಡೆ ಮೆಮೊರಿಯಲ್ ಟ್ರಸ್ಟಿನ ಉದಯ್ ಕುಮಾರ್ ಹೆಗ್ಡೆ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಶ್ರ ಬಿ. ಅರುಣ್ ಕುಮಾರ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತ್ರ ಸಂಘದ ಮಾಜಿ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ…

Read More