ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮುದೂರು ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಮುದೂರು, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮಂದರ್ತಿ ಶಿರೂರು ಮುದ್ದು ಮನೆ ಇವರ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಠಾರದಲ್ಲಿ ಜರುಗಿತು. ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಜಯ ಶಾಸ್ತ್ರಿ ಮುದೂರು ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಎನ್ಸಿಡಿ ವೈದ್ಯಾಧಿಕಾರಿ ಡಾ. ನಿವೇದಿತಾ, ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯ ಸೂಲ್ಯ ಭೋವಿ ನಾಗದ್ದೆ, ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಪ್ರಭಾಕರ್ ಪೂಜಾರಿ, ಊರಿನ ಎಲ್ಲಾ ಶಿಬಿರ್ತಿಗಳು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಐಕ್ಯೂಎಸಿ ಘಟಕ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯು ಸೋಮವಾರ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಳಾವರ ವರದಾರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇದರ ಗ್ರಂಥಪಾಲಕರಾದ ರವಿಚಂದ್ರ ಹೆಚ್. ಎನ್. ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದು, ಅರ್ಥ ಮಾಡಿಕೊಳ್ಳುವುದರಿಂದ ಅವರ ಆಲೋಚನೆ ವಿಸ್ತರಿಸುವುದಲ್ಲದೇ ಜೀವನದ ಮೌಲ್ಯ ಮತ್ತು ಸಾರ್ಥಕತೆಯನ್ನು ತಿಳಿಸಿಕೊಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಗ್ರಂಥಾಲಯ ಸದ್ಭಳಕೆಯಿಂದ ಸ್ವಯಂ ವ್ಯಕ್ತಿತ್ವ ವಿಕಾಸ ಮತ್ತು ಶೈಕ್ಷಣಿಕ ಪ್ರಕ್ರಿಯೆಗಳ ಉತ್ತಮ ನಿರ್ವಹಣೆ ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ, ಐಕ್ಯೂಎಸಿ ಘಟಕ ಸಂಯೋಜಕರಾದ ಸಂದೀಪ ಕೆ., ಉಪಸ್ಥಿತರಿದ್ದರು. ಅಂತಿಮ ಬಿ.ಎ. ವಿದ್ಯಾರ್ಥಿ ಕೀರ್ತನ್ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಂಸ್ಕೃತಿಕ ಸ್ಪರ್ಧಾ ವೇದಿಕೆಗಳು ಮಕ್ಕಳ ಪ್ರತಿಭೆಯನ್ನು ಹೊರತರಲು ಸಹಾಯಕವಾಗುತ್ತವೆ. ಮಕ್ಕಳೊಳಗಿನ ಭಯವನ್ನು ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುತ್ತವೆ ಎಂದು ‘ಸು ಫ್ರಮ್ ಸೋʼ ಸಿನಿಮಾ ನಟ ಸನಿಲ್ ಗೌತಮ್ (ರವಿಯಣ್ಣ) ಹೇಳಿದರು. ಅವರು ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಶಾಲೆಯ ಅಂಗಳದಲ್ಲಿ ಕೃಷ್ಟಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಮುದ್ದುಕೃಷ್ಣ ಸ್ಪರ್ಧೆ ಉದ್ಘಾಟನೆ ನೆರವೇರಿಸಿದ ಮಾತನಾಡಿದರು. ಇಂತಹ ಸ್ಪರ್ಧೆಗಳೇ ನನಗೆ ಕಲಾವಿದನಾಗುವುದಕ್ಕೆ ಅಡಿಪಾಯವಾಗಿದ್ದು. ನಾನು ಮೊದಲು ಹಾಕಿದ್ದು ರಾಧೆಯ ವೇಷ. ನಂತರ ಕೃಷ್ಣ ವೇಷ ಹಾಕಿ ಮೂರು ಬಾರಿ ಬಹುಮಾನ ಗೆದ್ದಿದ್ದೇನೆ”ಎಂದು ಬಾಲ್ಯದಲ್ಲಿ ತಮಗಾದ ಪ್ರಭಾವವನ್ನು ಮೆಲುಕು ಹಾಕಿದರು. ಇಂತಹ ಕಾರ್ಯಕ್ರಮಗಳ ಮೂಲಕ ಸುಜ್ಞಾನ ಸಂಸ್ಥೆಯು ಮಕ್ಕಳ ಬೆನ್ನೆಲುಬಾಗಿ ನಿಂತಿದೆ. ಇದರಿಂದ ಮಕ್ಕಳ ವ್ಯಕ್ತಿತ್ವ ರೂಪುಗೊಳ್ಳಲು ಸಹಾಯವಾಗುತ್ತದೆ ಎಂದು ಅವರು ಮೆಚ್ಚುಗೆಯ ನುಡಿಗಳನ್ನಾಡಿದರು. ಸಂಸ್ಥೆಯ ಅಧ್ಯಕ್ಷರಾದ ರಮೇಶ್ ಶೆಟ್ಟಿ ಅವರು ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುತ್ತೇವೆ. ಯುವ ಪೀಳಿಗೆಗೆ ಭಾರತೀಯ ಸಂಸ್ಕೃತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಮಾತನಾಡಿ, ರ್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ ದೇಶದಾದ್ಯಂತ ಎಲ್ಲಾ ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ರ್ಯಾಗಿಂಗ್ ತಡೆಗಟ್ಟಲು ನಿಯಮಾವಳಿಗಳನ್ನು ಜಾರಿಗೊಳಿಸಲಾಗಿದೆ. ಕಾನೂನು ಉಲ್ಲಂಘನೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದರು. ಒನ್ ಪೆಗ್, ಒನ್ ದಮ್ನಿಂದ ಆರಂಭ ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್ನಿಂದ ಆರಂಭವಾಗುವ ಚಟ, ನಿಧಾನವಾಗಿ ಮಾದಕ ವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಒನ್ ಪೆಗ್, ಒನ್ ದಮ್ನಿಂದ ಆರಂಭವಾಗುವ ವ್ಯಸನಗಳು ಮುಂದೆ ದುಶ್ಚಟಗಳ ದಾಸರಾಗುವಂತೆ ಮಾಡುತ್ತವೆ. ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು ಎಂದರು. ಎಫ್ಐಆರ್ ಧಾಖಲಾದರೆ ಬದುಕೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಚಿಕ್ಕಬಳ್ಳಾಪುರದ ಶಾಂತಾ ವಿದ್ಯಾನಿಕೇತನ ಶಾಲೆಯಲ್ಲಿ ಪ್ರಾದೇಶಿಕ ಮಟ್ಟದ ಕಬಡ್ಡಿ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಸ್ಪರ್ಧೆಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, 14 ವರ್ಷ ವಯೋಮಿತಿಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳಾದ ವೇದಿತ್, ಅರುಣ, ಮಾಣಿಕ್ಯ ಮತ್ತು ದೀಕ್ಷಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷ ವಯೋಮಿತಿಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿನಿಯರಾದ ವಿಜಯಲಕ್ಷ್ಮೀ, ಭವ್ಯಶ್ರೀ, ತನಿಷ್ಕಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಹುರಿದುಂಬಿಸಿದರು.
ಆದಿತ್ಯ ಪ್ರಸಾದ್ | ಕುಂದಾಪ್ರ ಡಾಟ್ ಕಾಂ ಲೇಖನ.ವರ್ಷವೂ ಆಗಸ್ಟ್ 19 ರಂದು ವಿಶ್ವ ಛಾಯಾಗ್ರಹಣ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ. ಇದು ಬರಿಯ ಛಾಯಾಗ್ರಾಹಕರ ಆಚರಣೆಯ ದಿನವಾಗಿರದೇ ಛಾಯಾಗ್ರಹಣ ಕಲೆಯ ಇತಿಹಾಸ, ತಾಂತ್ರಿಕವಾಗಿ ಹೇಗೆ ಬೆಳೆದು ಅಭಿವೃದ್ಧಿ ಆಯ್ತು ಮತ್ತು ಛಾಯಾಗ್ರಹಣವು ಸಮಾಜದ ಮೇಲೆ ಯಾವ ರೀತಿ ಪ್ರಭಾವವನ್ನು ಬೀರಿದೆ ಎನ್ನುವ ಬಗ್ಗೆಯೂ ಸ್ಮರಿಸುವ ಹಾಗೂ ಛಾಯಾಗ್ರಾಹಕನ ಸೃಜನಶೀಲತೆಯನ್ನು ಗೌರವಿಸುವ ವಿಶೇಷ ಸಂದರ್ಭವಾಗಿದೆ. ಛಾಯಾಗ್ರಹಣ ಕೇವಲ ಚಿತ್ರಗಳನ್ನು ಸೆರೆಹಿಡಿಯುವ ಒಂದು ತಂತ್ರವಲ್ಲ, ಬದಲಿಗೆ ಕಲೆ, ವಿಜ್ಞಾನ ಮತ್ತು ಸಂಸೃತಿಯನ್ನು ಬೆಸೆಯುವ ಒಂದು ಮಾಧ್ಯಮ. ಮಾನವಕುಲದ ದೃಶ್ಯ ಸ್ಮರಣೆಯ ದಾಖಲೆಯಾಗಿ, ಛಾಯಾಗ್ರಹಣ ತನ್ನ ಅಸ್ತಿತ್ವವನ್ನು ಕಂಡುಕೊಂಡ ದಿನದಿಂದಲೂ ನಿರಂತರವಾಗಿ ವಿಕಸನಗೊಳ್ಳುತ್ತಿದೆ. ಅದು ನಿನ್ನೆಯ ಕಥೆಗಳನ್ನು ಹೇಳುವ, ಭಾವನೆಗಳನ್ನು ವ್ಯಕ್ತಪಡಿಸುವ ಮತ್ತು ಇತಿಹಾಸವನ್ನು ದಾಖಲಿಸುವ ಒಂದು ಅದ್ಭುತ ಕಲೆ. ಮನುಷ್ಯನು ಬೆಳಕನ್ನು ಬಳಸಿ ಚಿತ್ರಗಳನ್ನು ರಚಿಸುವ ಕನಸು ಕಂಡ ದಿನದಿಂದ ಇಂದಿನ ಡಿಜಿಟಲ್ ಯುಗದವರೆಗೆ, ಛಾಯಾಗ್ರಹಣವು ನಿರಂತರವಾಗಿ ವಿಕಸನಗೊಂಡು ಬೆಳೆದು ಬಂದಿದೆ. ನಿನ್ನೆಯ ದಿನಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ರಿ. ಕರ್ನಾಟಕ – ಕೇರಳ ವತಿಯಿಂದ ಸೋಮವಾರ 18ನೇ ವರ್ಷದ ಕೊರಗರ ಭೂಮಿ ಹಬ್ಬ ಹೆಬ್ರಿ ಬಡಾಗುಡ್ಡೆ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಹೆಬ್ರಿ ಬಸ್ ನಿಲ್ದಾಣದಿಂದ ಬಡಾಗುಡ್ಡೆ ಸಮುದಾಯ ಭವನಕ್ಕೆ ಹೊರಟ ಕಾಲ್ನಡಿಗೆ ಜಾಥಕ್ಕೆ ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಾರನಾಥ ಬಂಗೇರರವರು ಡೋಲು ಬಾರಿಸುವುದರೊಂದಿಗೆ ಚಾಲನೆ ನೀಡಿ, ಭೂಮಿ ಹಬ್ಬಕ್ಕೆ ಶುಭವನ್ನು ಕೋರಿದರು. ಜಾಥದಲ್ಲಿ ಡೋಲು, ಚೆಂಡೆ, ಕೊಳಲು ವಾದನಕ್ಕೆ ಮಕ್ಕಳು, ಮಹಿಳೆಯರು, ಯುವಜನರು, ವಯಸ್ಕರು ಸಂಭ್ರಮದಿಂದ ಕುಣಿದಾಡಿದರು. ಸುರಿಯುವ ಮಳೆಯನ್ನು ಲೆಕ್ಕಿಸದೆ ʼಆದಿವಾಸಿ ಕೀ ಜೈʼ, ʼಬಿರ್ಸ ಮುಂಡರಿಗೆ ಜೈʼ, ʼಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟಕ್ಕೆ ಜೈʼ ಎಂದು ಘೋಷಣೆ ಕೂಗುತ್ತ ಹೊರಟರು. ಬಡಾಗುಡ್ಡೆ ಸಮುದಾಯ ಭವನದ ಮುಂಭಾಗದಲ್ಲಿ ಭೂಮಿ ಹಬ್ಬದ ಧ್ವಜಾರೋಹಣವನ್ನು ಸಮುದಾಯದ ಮುಖಂಡರಾದ ಬೊಗ್ರ ಕೊಕ್ಕರ್ಣೆರವರು ನೆರವೇರಿಸಿ ಭೂಮಿ ಹಬ್ಬದ ಮಹತ್ವ ಮತ್ತು ವಿಶೇಷತೆಯನ್ನು ಸಾರಿದರು. ನಂತರ ಕಾರ್ಯಕ್ರಮದಲ್ಲಿ ಭಾಗಿಯಾದ ಸಮುದಾಯ ಬಾಂಧವರೆಲ್ಲರಿಗೂ ಸಮುದಾಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಹಿಂದೂ ವಿರೋಧಿ ಶಕ್ತಿಗಳು ಅಪಪ್ರಚಾರ ಈ ಹಿಂದಿನಿಂದ ಮಾಡುತ್ತಾ ಬಂದಿದ್ದು ಈ ವಿಚಾರವಾಗಿ ಧರ್ಮಸ್ಥಳದ ಪರವಾಗಿ ನಿಂತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾದ ಬಿಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ತೇಜೋವಧೆ ಮಾಡುವ ಹಿಂದೂ ವಿರೋಧಿ ಶಕ್ತಿಗಳ ವಿರುದ್ಧ ಎಂದು ಬೈಂದೂರು ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಾ ಸಂಘದ ಕಾರ್ಯದಲ್ಲಿ ನಿರತರಾಗಿ, ದೇಶದ ಪರವಾದ ವಿಚಾರಧಾರೆಯ ಧ್ಯೇಯವಿಟ್ಟುಕೊಂಡು ಮನೆ ಮಠವನ್ನು, ಕುಟುಂಬವನ್ನು ತ್ಯಜಿಸಿ ದೇಶಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿರುವ ಬಿಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವವರಿಗೆ ಯಾವುದೇ ನೈತಿಕತೆ ಇಲ್ಲ, ಇದೆಲ್ಲವೂ ಧರ್ಮ ಕಾರ್ಯದಲ್ಲಿ ತೊಡಗಿಕೊಂಡವರ ತೇಜೋವಧೆ ಮಾಡಿ ಮಾನಸಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಎಂದು ಗುಡುಗಿದ್ದಾರೆ. ಬಾಲ್ಯದಿಂದಲೂ ದೇಶದ ಪರ ಚಿಂತನೆಗಳು, ಹಿಂದುತ್ವದ ವಿಚಾರಧಾರೆಗಳೊಂದಿಗೆ ಬೆಳೆದು ಇಂಜಿನಿಯರಿಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.18: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 19ರಂದು ಅಂಗನವಾಡಿ, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಿಯುಸಿ ಮತ್ತು ಐಟಿಐ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜ ಎಂದು ಬಂದಾಗ ನಾವೆಲ್ಲರೂ ಒಗ್ಗಟ್ಟಾಗಿ ಸಮಾಜದ ಹಿಂದೆ ಬೆನ್ನಲುಬಾಗಿ ನಿಲ್ಲಬೇಕಾಗಿದೆ. ಕೋಟೇಶ್ವರ ಘಟಕವು ಎಲ್ಲಾ ಘಟಕಗಳಿಗೂ ಮಾದರಿಯಾಗಿ ತನ್ನ ಕೆಲಸವನ್ನು ಮಾಡುತ್ತಿದೆ. ಬಡವರ ಕಲ್ಯಾಣದ ಜೊತೆಗೆ ಶೈಕ್ಷಣಿಕ ನೆರವು ಹಾಗೂ ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ಚಾಚಿದಾಗ ಮಾತ್ರ ಸಮಾಜ ಸೇವೆಗೊಂದು ಬೆಲೆ ಇರುತ್ತದೆ. ನಾವು ಮಾಡುವ ಇತಂಹ ಸಮಾಜ ಸೇವೆಯೇ ನಮಗೆ ದೊಡ್ಡ ಶ್ರೀರಕ್ಷೆಯಾಗಲಿದೆ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಹೇಳಿದರು. ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಇವರ ಆಶ್ರಯದಲ್ಲಿ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು 20ನೇ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭದ ಕಾರ್ಯಕ್ರಮದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಕೋಟೇಶ್ವರ ಘಟಕದ ಅಧ್ಯಕ್ಷ ನಾಗರಾಜ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್…
