Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಯಲಿದೆ ಎಂದ ಅವರು, ಪೊಲೀಸ್, ನಕ್ಸಲ್ ನಿಗ್ರಹಪಡೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರಿ. ವತಿಯಿಂದ ಆಯೋಜನೆಗೊಂಡಿರುವ 15ನೇ ಆವೃತ್ತಿಯ `ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೊಗ ಮೇಳಕ್ಕೆ ವಿದ್ಯಾಗಿರಿ ಆವರಣ ಸಂಪೂರ್ಣ ಸಿದ್ಧಗೊಂಡಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ನೇಮಕಾತಿದಾರರಿಗೆ ವ್ಯವಸ್ಥಿತ ಸೌಲಭ್ಯಗಳನ್ನು ಒದಗಿಸಲಾಗಿದೆ. ಈವರೆಗೆ 305 ಕಂಪೆನಿಗಳು ನೋಂದಾಯಿಸಿಕೊಂಡು ವಿವಿಧ ಹುದ್ದೆಗಳಿಗೆ 2 ದಿನಗಳೂ ನೇಮಕಾತಿ ನಡೆಸಲಿವೆ. ಈಗಾಗಲೇ 11,509 ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಈಗಾಗಲೇ ನೋಂದಾಯಿಸಿಕೊಂಡಿದ್ದು, ಇಂದು ಸ್ಥಳದಲ್ಲೇ ನೇರವಾಗಿ ನೋಂದಾಯಿಸಿಕೊಳ್ಳಲು ಅವಕಾಶವಿದೆ. ಎಐ ಆಧಾರಿತ ವಿಶೇಷ ಚಾಟ್‌ಬೋಟ್:ಈ ಬಾರಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಎಐ ಆಧಾರಿತ ವಿಶೇಷ ಚಾಟ್ ಬೋಟ್ ತಂತ್ರಜ್ಞಾನ ತಯಾರಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ಗಳನ್ನು ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್‌ ಮಾಡಿದಾಗ ತಮ್ಮ ವಿದ್ಯಾರ್ಹತೆಗೆ ಹೊಂದುವ ಹುದ್ದೆ ಹಾಗೂ ಕಂಪೆನಿಗಳ ವಿವರವನ್ನು ಪಡೆಯಬಹುದಾಗಿದೆ. ಇದರೊಂದಿಗೆ ಕಂಪೆನಿಗಳ ವಿವರಗಳಿರುವ ಅಭ್ಯರ್ಥಿ ಸಹಾಯಕ ಕೈಪಿಡಿ, ಅಗತ್ಯವಿರುವವರಿಗೆ ವಸತಿ ವ್ಯವಸ್ಥೆ, ಐಟಿಐ, ಡಿಪ್ಲೊಮೊ ಕಾಲೇಜುಗಳಿಗೆ ವಾಹನ ಸೌಲಭ್ಯ ಹಾಗೂ ಅಭ್ಯರ್ಥಿ ಸಹಾಯ ಕೇಂದ್ರಗಳು ಇರಲಿವೆ. ಒರಿಯಂಟೇಶನ್ ಕಾರ್ಯಕ್ರಮ:ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ತೊಡ್ಕಟ್ಟಿನಲ್ಲಿರುವ ಹೊಸಬದುಕು ಆಶ್ರಮದ ಸಾಮಾಜಿಕ ಕಳಕಳಿಗೆ ಬೆಂಗಳೂರಿನ ಚಿತ್ರಸಂತೆ ಎನ್ನುವ ಸಂಸ್ಥೆ  ಎಕ್ಸ್ಲೆನ್ಸ್ ಸೋಶಿಯಲ್ ಸರ್ವಿಸ್ ಎನ್ನುವ ಅವಾರ್ಡ್ ಅನ್ನು ನೀಡಿ ಗೌರವಿಸಿದೆ. ಕಳೆದ ಸಾಕಷ್ಟು ವರ್ಷಗಳಿಂದ ಅನಾಥರ ಬಾಳಿನ ಆಶಾಕಿರಣವಾಗಿ ಕಾರ್ಯನಿರ್ವಹಿಸುತ್ತಿದೆ. ಚಲನಚಿತ್ರ ನಿರ್ದೇಶಕರಾದ ಸಾಯಿ ಪ್ರಕಾಶ್ ಈ ಅವಾರ್ಡ್‌ನ್ನು ಹೊಸ ಬದುಕು ಆಶ್ರಮದ ಮುಖ್ಯಸ್ಥ ಹ.ರಾ ವಿನಯಚಂದ್ರ ಸಾಸ್ತಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ನಟರು, ನಟಿಯರು ನಿರ್ದೇಶಕರು, ನಿರ್ಮಾಪಕರುಗಳು ಈ ಕಾರ್ಯಕ್ರಮ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯತ್ ಕಾರಂತ ಥೀಮ್ ಪಾರ್ಕ್‌ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಗುರುವಾರ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಕಾರಂತ ಥೀಂ ಪಾಕ್೯ ಅಭಿವೃದ್ಧಿ ಕುರಿತಂತೆ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿ ಬಳಿ ಚರ್ಚಿಸಿದರಲ್ಲದೆ ಒಂದು ಗ್ರಾಮಪಂಚಾಯತ್ ಸಾಹಿತಿಯೊಬ್ಬರ ಹೆಸರಿನಲ್ಲಿ ಥೀಂ ಪಾರ್ಕ ರಚಿಸಿ ಅದನ್ನು ನಿರ್ವಹಿಸುವ ಕಾರ್ಯವೈಕರಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಕಾರಂತ ಥೀಂ ಪಾಕ್೯ ವಿಕ್ಷೀಸಿ ಕಲ್ಮಾಡಿ ಅಂಗನವಾಡಿ ಮಕ್ಕಳೊಂದಿಗೆ ಕೆಲ ಹೊತು ಕಳೆದರು. ಈ ವೇಳೆ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಕಂದಾಯ ನಿರೀಕ್ಷಕರಾದ ಮಂಜುನಾಥ ಬಿಲ್ಲವ, ಗ್ರಾಮಾಡಳಿತಧಿಕಾರಿ ಚೆಲುವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಪೂರ್ಣಿಮಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಗತ್ತಿನಲ್ಲಿ ನಮ್ಮ ದೇಶ ಶಕ್ತಿ ಶಾಲಿಯಾಗಿ ಬೆಳೆಯುತ್ತಿದೆ. ನಮ್ಮ ದೇಶ ಉತ್ತಮವಾಗಿದ್ದರೆ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸಲಿದೆ. ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರಗಳನ್ನು ಉತ್ತೇಜಿಸಿ, ಮಕ್ಕಳಿಗೆ ಇದಕ್ಕೆ ಪೂರಕವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಶಿಶು ಮಂದಿರಗಳು ಸ್ಥಾಪಿತವಾಗಿದೆ. ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾ ಭವನದಲ್ಲಿ ಗುರುವಾರ ಪಾಲಕರ ಮಿಲನ ಕಾರ್ಯಕ್ರಮ ಪಾಲಕರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು. ಕುಟುಂಬ, ಸಮಾಜ, ಗ್ರಾಮ, ರಾಜ್ಯ ಹಾಗೂ ದೇಶದಲ್ಲಿ ನಮ್ಮ ಧರ್ಮ, ಸಂಸ್ಕಾರ, ಸಂಸ್ಕೃತಿಗಳು ಗಟ್ಟಿಯಾಗಿ ಬೇರೂರಿ ಬೆಳೆದು ನಿಲ್ಲಲು ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಇದಕ್ಕೆ ಪೂರಕವಾದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು. ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥರಾದ ಚಂದ್ರಿಕಾ ಧನ್ಯ, ಕಲ್ಪನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಗಮ್ಮತ್ತ್”ಕಾರ್ಯಕ್ರಮವನ್ನು ಅಗಸ್ಟ್ 03ರ ಭಾನುವಾರ ಬೆಳಿಗ್ಗೆ ಗಂಟೆ 09ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಹೇಳಿದರು. ಅವರು ಬೈಂದೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸಮಾನ ಮನಸ್ಕರ ತಂಡ ಒಂದುಗೂಡಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ಕಳೆದೊಂದು ವರ್ಷದಿಂದ ಅದ್ದೂರಿ ಕಾರ್ಯಕ್ರಮ ಆಯೋಜಿಸುತ್ತಾ ಬರಲಾಗುತ್ತಿದ್ದು, ಜನರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದ್ದು, ವಿಜೇತರಿಗೆ ನಗದು ಬಹುಮಾನ, ಪದಕ, ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತಿದೆ ಎಂದರು. ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು:ಪುರುಷರಿಗೆ ಹಗ್ಗಜಗ್ಗಾಟ, ವಾಲಿಬಾಲ್‌, ಕಬಡ್ಡಿ, ಕೆಸರ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರಾ. ಹೆ 66ರ ಹೇರಿಕುದ್ರುವಿನ ಮೇಲ್ಪತುವೆಯ ತಿರುವಿನಲ್ಲಿ ಕಾರೊಂದು ಉರುಳಿ ಬಿದ್ದ ಘಟನೆ ಬುಧವಾರ ಬೆಳಗ್ಗಿನ ಜಾವ ಸಂಭವಿಸಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಗೊಳ್ಳಿಯಿಂದ ಮಲ್ಪೆ ಕಡೆಗೆ ಗಂಗೊಳ್ಳಿಯ ನಿವಾಸಿ ಮೊಹಮ್ಮದ್ ಸಾದ್ (31) ಎಂಬುವರು ಚಲಾಯಿಸುತ್ತಿದ್ದ ಕಾರು ಹೇರಿಕುದ್ರುವಿನ ಅಂಡರ್‌ಪಾಸ್ ಬಳಿಯ ಬೊಬ್ಬರ್ಯ ದೈವಸ್ಥಾನದ ಎದುರಿನ ಅಪಾಯಕಾರಿ ತಿರುವನ್ನು ಅರಿಯದ ಕಾರಣ, ಕಾರು ನಿಯಂತ್ರಣ ತಪ್ಪಿ, ಕೆಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಪಲ್ಟಿಯಾಗುತ್ತ ಸರ್ವಿಸ್ ರಸ್ತೆಯೂ ದಾಟಿ ಮರವೊಂದಕ್ಕೆ ತಾಗಿ ನಿಂತಿದೆ. ಇಲ್ಲದಿದ್ದರೆ ಸಮೀಪದಲ್ಲಿಯೇ ಇದ್ದ ವಾರಾಹಿ ನದಿಗೆ ಪಲ್ಟಿಯಾಗಿ ಬೀಳುವ ಅಪಾಯವೂ ಇತ್ತು. ಅದೃಷ್ಟವಶಾತ್ ಕಾರು ಚಾಲಕ ಮೊಹಮ್ಮದ್ ಸಾದ್ ಅವರು ಸಣ್ಣ ಪುಟ್ಟ ಗಾಯಗೊಂಡು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಕಾರು ಸಂಪೂರ್ಣ ಜಖಂಗೊಂಡಿದೆ. ಕುಂದಾಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿ ಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ (ಪ್ರಾಥಮಿಕ ವಿಭಾಗ)ಯಲ್ಲಿ ಪಾಲಕ-ಶಿಕ್ಷಕರ ಭೇಟಿ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕುರಿತು ಪಾಲಕರ ಜವಾಬ್ದಾರಿಯನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ಡಾ. ವೈಶಾಲಿ ಮತ್ತು ಅವರ ವೈದ್ಯಕೀಯ ತಂಡದ ಸದಸ್ಯರು ಪಾಲಕರಿಗೆ ಮಕ್ಕಳ ಆರೋಗ್ಯ ಸಂಬಂಧಿತ ಅಮೂಲ್ಯ ಮಾಹಿತಿಯನ್ನು ನೀಡಿದರು. ಅಶ್ವಿನಿ ಪೈ ಅವರು ಮಕ್ಕಳಿಗೆ ನೀಡಬೇಕಾದ ಸಮತೋಲಿತ ಆಹಾರ ಹಾಗೂ ಅಸಾಂಕ್ರಾಮಿಕ ಕಾಯಿಲೆಗಳು ಬಾರದಂತೆ ಹೇಗೆ ತಡೆಗಟ್ಟಬಹುದೆಂಬುದನ್ನು ವಿವರಿಸಿದರು. ಅರುಣ್ ಕುಮಾರ್ ಎಸ್. ಅವರು ಮಕ್ಕಳಲ್ಲಿ ಹೆಚ್ಚುತ್ತಿರುವ ಮಧುಮೇಹ ಹಾಗೂ ಅತಿಯಾದ ತೂಕದ ಸಮಸ್ಯೆಗಳ ಕುರಿತು ಹೇಳುತ್ತಾ, ದಿನನಿತ್ಯ ವ್ಯಾಯಾಮದ ಅವಶ್ಯಕತೆ ಮತ್ತು ಅದರ ಪ್ರಯೋಜನಗಳನ್ನು ತಿಳಿಸಿದರು. ಋತುಜಾ ಎಸ್. ರಾವ್ ಅವರು ಮದ್ಯಪಾನ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಮಕ್ಕಳ ಮೇಲೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಉದ್ಯಮಿ ರಾಜೇಂದ್ರ ಕೋಡಿ ಅವರು ಪುಸ್ತಕ ಹಾಗೂ ಸಮವಸ್ತ್ರವನ್ನು ಬೈಂದೂರಿನ ಸುಬ್ರಹ್ಮಣ್ಯ ಬಿಜೂರು ಅವರ ಮುಖಾಂತರ ಈ ಕೊಡುಗೆಯನ್ನು ಶಾಲಾ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದ್ದಾರೆ. ತದನಂತರ ಮಾತನಾಡಿ, ವಿದ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಮುಖ್ಯ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮುಂದೆ ಬರಬೇಕು ಹಾಗೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸಕಲ ಸೌಲಭ್ಯಗಳನ್ನು ನೀಡುವುದರೊಂದಿಗೆ ಸರ್ಕಾರಿ ಶಾಲೆಯಲ್ಲಿ ಕಲಿಯಲು ಉತ್ತೇಜಿಸಬೇಕು ಎನ್ನುವ ನಿಟ್ಟಿನಲ್ಲಿ ಶಾಲೆಗಳಿಗೆ ಈ ರೀತಿಯ ಕೊಡುಗೆಗಳನ್ನು ನೀಡುತ್ತ ಬಂದಿದ್ದಾರೆ ಎಂದರು. ಉದ್ಯಮಿ ರಾಜೇಂದ್ರ ಕೋಡಿ ಅವರು ಬೆಂಗಳೂರಿನಲ್ಲಿದ್ದುಕೊಂಡು ಸಮಾಜಕ್ಕೆ ಹಾಗೂ ತನ್ನ ಊರಿಗೆ ಏನಾದರೂ ಕೊಡುಗೆಯನ್ನು ಕೊಡಬೇಕು ಎನ್ನುವ ಉದ್ದೇಶದಿಂದ ಹಲವಾರು ಈ ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ಕೊಂಡಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿ ಅಕ್ಷಯ್ ತಗ್ಗರ್ಸೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿ, ಮುಖ್ಯ ಶಿಕ್ಷಕಿ ಮಾಲತಿ ಹಾಗೂ ರಾಘವೇಂದ್ರ ಉಪಸ್ಥಿತರಿದ್ದರು .ಶಿಕ್ಷಕಿ ಸಾರಿಕ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇದರ ಡಾ. ಹೆಚ್ ಶಾಂತರಾಮ್ ಕಂಪ್ಯೂಟರ್ ಸೈನ್ಸ್ ಬ್ಲಾಕ್ ನಲ್ಲಿ ಹೊಸದಾಗಿ ನಿರ್ಮಿಸಲಾದ ಡೇಟಾ ಸೈನ್ಸ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್  ಪ್ರಯೋಗಲಾಯವನ್ನು ಕಾಲೇಜಿನ  ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತರಾಮ್ ಪ್ರಭುಗಳು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಮ್. ಗೊಂಡ, ಗಣಕಯಂತ್ರ ವಿಭಾಗ ಮುಖ್ಯಸ್ಥರಾದ ಗಣೇಶ್ ಕೆ., ವಿಭಾಗದ ಎಲ್ಲಾ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Read More